ಕೇಂದ್ರ ಸರ್ಕಾರದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ದಾವಣಗೆರೆ; ಏ.18 : ಕೇಂದ್ರ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗವು ವಿವಿಧ ಇಲಾಖೆಯಲ್ಲಿ ಖಾಲಿ ಇರುವ ಸಹಾಯಕ ಸೆಕ್ಷನ್ ಆಫೀಸರ್, ಸಹಾಯಕ ಲೆಕ್ಕ ಪರಿಶೋಧನಾ ಆಧಿಕಾರಿ, ಸಹಾಯಕ ಲೆಕ್ಕಪತ್ರ ಅಧಿಕಾರಿ, ಇನ್ಸ್ಪೆಕ್ಟರ್, ಎಇಒ, ಸಬ್- ಇನ್ಸ್ಪೆಕ್ಟರ್, ಕಿರಿಯ ಅಂಕಿ ಅಂಶ ಅಧಿಕಾರಿ, ಎನ್‌ಹೆಚ್‌ಆರ್‌ಸಿ ಸಂಶೋಧನಾ ಸಹಾಯಕ, ಹಿರಿಯ ಸೆಕ್ರೆಟರಿಯೇಟ್ ಸಹಾಯಕ, ಅಪ್ಪರ್ ಡಿವಿಜನ್ ಕ್ಲರ್ಕ್, ಅಂಚೆ ಸಹಾಯಕ, ವಿಂಗಡಣೆ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಅಥವಾ ತತ್ಸಮಾನ … Read more

ಟೊಯೋಟಾ ಆಟೋ ಪಾರ್ಟ್ಸ್ ಕಂಪನಿಗೆ ಜಿಎಂಐಟಿಯ 10 ವಿದ್ಯಾರ್ಥಿಗಳು ಆಯ್ಕೆ

ಸುದ್ದಿ360, ದಾವಣಗೆರೆ, ಏ.18: ಬೆಂಗಳೂರಿನ ಟೊಯೋಟಾ ಇಂಡಿಯಾ ಆಟೋ ಪಾರ್ಟ್ಸ್ ಪ್ರೈವೇಟ್ ಲಿಮಿಟೆಡ್ ನಡೆಸಿದ ಸಂದರ್ಶನ ಪ್ರಕ್ರಿಯೆಯಲ್ಲಿ ದಾವಣಗೆರೆ ಜಿಎಂಐಟಿ ಕಾಲೇಜಿನ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಅಂತಿಮ ವರ್ಷದ 10 ವಿದ್ಯಾರ್ಥಿಗಳು ಗ್ರಾಜುಯೇಟ್ ಇಂಜಿನಿಯರ್ ಟ್ರೈನಿ ಹುದ್ದೆಗೆ ಆಯ್ಕೆಯಾಗಿದ್ದಾರೆ ಎಂದು ಕಾಲೇಜಿನ ತರಬೇತಿ ಮತ್ತು ಉದ್ಯೋಗ ವಿಭಾಗದ ಮುಖ್ಯಸ್ಥರಾದ ತೇಜಸ್ವಿ ಕಟ್ಟಿಮನಿ ಟಿ ಆರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದೇ ಏ. 17ರಂದು ನಡೆದ ಸಂದರ್ಶನ ಪ್ರಕ್ರಿಯೆಯಲ್ಲಿ ಹಲವು ವಿದ್ಯಾರ್ಥಿಗಳು ಭಾಗವಹಿಸಿ ವಿವಿಧ ಸಂದರ್ಶನ ಸುತ್ತುಗಳಲ್ಲಿ ತಮ್ಮ … Read more

ಕೆಲವೇ ಕ್ಷಣಗಳಲ್ಲಿ ಜಗದೀಶ್ ಶೆಟ್ಟರ್ ನಿವಾಸಕ್ಕೆ ಮೂವರು ನಾಯಕರ ಭೇಟಿ . . .

ರಾಜಕಾರಣದಲ್ಲಿ ತಾಳ್ಮೆ ಬೇಕು – ವೈಯ್ಟ್ ಅಂಡ್ ಸಿ ಎಂದ ಜಗದೀಶ್‍ ಶೆಟ್ಟರ್ ಸುದ್ದಿ360 ಹುಬ್ಬಳ್ಳಿ ಏ.15: ಮುಖ್ಯಮಂತ್ರಿ ಬೊಮ್ಮಾಯಿ ಸೇರಿದಂತೆ ಕರ್ನಾಟಕ ಚುನಾವಣೆ ಉಸ್ತುವಾರಿ ಧರ್ಮೇಂದ್ರ ಪ್ರಧಾನ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ರಾತ್ರಿ 8.30ಕ್ಕೆ ತಮ್ಮ ನಿವಾಸಕ್ಕೆ ಭೇಟಿ ನೀಡಲಿದ್ದಾರೆ ತದನಂತರ ನಿರ್ಧಾರವನ್ನು ಪ್ರಕಟಿಸುವುದಾಗಿ ಮಾಜಿ ಮುಖ್ಯಮಂತ್ರಿ ಜಗದೀಶ್‍ ಶೆಟ್ಟರ್  ಹೇಳಿದ್ದಾರೆ. ಈ ಕುರಿತು ಇಂದು ಸಂಜೆ ಮಾಧ್ಯಮದವರೊಂದಿಗೆ ಮಾತನಾಡಿ, ವರಿಷ್ಠರಿಂದ ಸೂಕ್ತ ಸ್ಪಂದನೆ ಬರುವ ನಿರೀಕ್ಷೆಯಲ್ಲಿ ನಾನಿದ್ದೇನೆ ಎಂದು ತಿಳಿಸಿರುವ ಅವರು, ಪಕ್ಷದಿಂದ … Read more

ಕಾಂಗ್ರೆಸ್ 3ನೇ ಪಟ್ಟಿ ರಿಲೀಸ್: ಪಟ್ಟಿಯಲ್ಲಿ ಯಾರ್ಯಾರಿದ್ದಾರೆ. . .? ಸಿದ್ಧರಾಮಯ್ಯ ಕೋಲಾರದಿಂದ ಹಿಂದೆ ಸರುದ್ರಾ?

ಶಿವಮೊಗ್ಗ ನಗರಕ್ಕೆ ಎಚ್.ಸಿ. ಯೋಗೇಶ್ ಹೊನ್ನಾಳಿಯಿಂದ ಡಿ.ಜಿ. ಶಾಂತನಗೌಡ ಶಿಕಾರಿಪುರಕ್ಕೆ ಜಿ.ಬಿ. ಮಾಲತೇಶ್ ಜಗಳೂರಿನಿಂದ ಬಿ.ದೇವೇಂದ್ರಪ್ಪ ಸುದ್ದಿ360: ಕಾಂಗ್ರೆಸ್ನಿಂದ 3ನೇ ಪಟ್ಟಿ ರಿಲೀಸ್‍ ಆಗಿದ್ದು43 ಕ್ಷೇತ್ರದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೊಳಿಸಲಾಗಿದೆ. ಇದರಲ್ಲಿ ಮುಖ್ಯವಾಗಿ ಕೋಲಾರದಿಂದ ಸಿದ್ಧರಾಮಯ್ಯ ಕಣಕಿಳಿಯಲಿದ್ದಾರೆ ಎಂಬ ಮಾತುಗಳಿಗೆ ಈ ಪಟ್ಟಿ ಇತಿಶ್ರೀ ಹಾಡಿದ್ದು, ಕೋಲಾರದಿಂದ ಕೊತ್ತುರ್ ಜಿ. ಮಂಜುನಾಥ್ ಅವರಿಗೆ ಟಿಕೆಟ್ ಲಭಿಸಿದೆ. ಇನ್ನು ಪಕ್ಷಕ್ಕೆ ಸೇರುವಾಗಿನ ಒಪ್ಪಂದದಂತೆ ಲಕ್ಷ್ಮಣ ಸವದಿಗೆ ಅಥಣಿಯಿಂದ ಟಿಕೆಟ್ ಘೋಷಣೆಯಾಗಿದೆ. ಶಿವಮೊಗ್ಗದಲ್ಲಿ ಆಯನೂರು ಮಂಜುನಾಥ್ ಕಾಂಗ್ರೆಸ್ ಸೇರುವ ಮೂಲಕ … Read more

ನನಗೆ ಕ್ಷೇತ್ರವಿಲ್ಲ  ಎಂದ ಈಶ್ವರಪ್ಪಗೆ ಟಿಕೆಟ್ಟೇ ಸಿಕ್ಕಿಲ್ಲ: ಸಿದ್ಧರಾಮಯ್ಯ ವ್ಯಂಗ್ಯ

ಸುದ್ದಿ360 ಕಾರವಾರ : ಚುನಾವಣೆಯಲ್ಲಿ ಸ್ಪರ್ಧಿಸಲು ನನಗೆ ಕ್ಷೇತ್ರವಿಲ್ಲ  ಎಂದು ಹೇಳಿದ್ದ ಕೆ.ಎಸ್. ಈಶ್ವರಪ್ಪಗೆ ಈ ಬಾರಿ ಚುನಾವಣೆಯಲ್ಲಿ  ಸ್ಪರ್ಧಿಸಲು ಬಿಜೆಪಿಯವರು ಟಿಕೆಟ್ ನೀಡುವುದು ಇರಲಿ ಅವರನ್ನು ಚುನಾವಣಾ ರಾಜಕೀಯದಿಂದಲೇ ದೂರ ಇಟ್ಟಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ. ಹಳಿಯಾಳದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಬಿಜೆಪಿಯವರು  ಪಕ್ಷವನ್ನು ಕಟ್ಟಿದ ಹಿರಿಯ ನಾಯಕರನ್ನು ನಡೆಸಿಕೊಳ್ಳುತ್ತಿರುವ ರೀತಿ ಸರಿಯಾಗಿಲ್ಲ. ಜಗದೀಶ್ ಶೆಟ್ಟರ್ ಉತ್ತಮ ನಾಯಕ ಅವರು ಕಾಂಗ್ರೆಸ್ ಸೇರುವ ಬಗ್ಗೆ ಚರ್ಚೆಯಾಗಿಲ್ಲ. ಹಾಗೇನಾದರೂ ಒಂದು ವೇಳೆ ಅವರು ಸೇರಬಯಸಿದರೆ ಕಾಂಗ್ರೆಸ್ ಸ್ವಾಗತಿಸುತ್ತದೆ … Read more

ಕಾರದ ಪುಡಿ ಎರಚಿ ದರೋಡೆ ಮಾಡಿದ್ದ ಆರೋಪಿತರ ಬಂಧನ 24 ಲಕ್ಷದ ಮಾಲು ವಶ

ಸುದ್ದಿ360 ದಾವಣಗೆರೆ, ಏ.14:  ಆಟೋ ಗ್ಲಾಸ್ ಹೊಡೆದು ಕಣ್ಣಿಗೆ ಕಾರದ ಪುಡಿ ಎರಚಿ 20 ಲಕ್ಷ ನಗದು ಹಣ ಇದ್ದ ಬ್ಯಾಗನ್ನು ದೋಚಿಕೊಂಡು ಹೋಗಿದ್ದ ಆರೋಪಿತರನ್ನು ದಾವಣಗೆರೆ ಪೊಲೀಸರು ಬಂಧಿಸಿದ್ದು, ಆರೋಪಿತರಿಂದ ನಗದು ಸೇರಿದಂತೆ 24 ಲಕ್ಷದ ಮಾಲನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣ ಕುರಿತಂತೆ ಮಾ.14ರಂದು ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಭದ್ರಾವತಿಯ ದೇವರಾಜ್ ರವರು ಅಡಿಕೆ ಖೇಣಿ ಪಡೆದುಕೊಂಡಿದ್ದ ರೈತರಿಗೆ ಹಣವನ್ನು ಕೊಡಲು 20 ಲಕ್ಷ ನಗದು ಹಣವನ್ನು ತನ್ನ ಸ್ನೇಹಿತನಿಂದ ಪಡೆದುಕೊಂಡು ಎನ್.ಹೆಚ್-48 ಸರ್ವೀಸ್ … Read more

ಮಾಯಕೊಂಡ ಬಿಜೆಪಿ ಟಿಕೆಟ್ ಆಕಾಂಕ್ಷಿತರ ಒಗ್ಗಟ್ಟಿನ ಬಂಡಾಯ

ಆರ್. ಎಲ್. ಶಿವಪ್ರಕಾಶ್‍ ಬಂಡಾಯ ಅಭ್ಯರ್ಥಿ ಸುದ್ದಿ360 ದಾವಣಗೆರೆ, ಏ.14 : ಬಿಜೆಪಿಯಲ್ಲಿನ ಬಂಡಾಯದ ಬಿಸಿ ಮಾಯಕೊಂಡ ಕ್ಷೇತ್ರದಲ್ಲೂ ಕಾಣಿಸಿಕೊಂಡಿದ್ದು, ಬಸವರಾಜ್ ನಾಯ್ಕ್ ಅವರಿಗೆ ಬಿಜೆಪಿ ಟಿಕೆಟ್ ಘೋಷಿಸುತ್ತಿದ್ದಂತೆ ಆಕಾಂಕ್ಷಿಗಳ ಅಸಮಾಧಾನ ಸ್ಫೋಟಗೊಂಡಿದೆ. ಮಾಯಕೊಂಡ ಮೀಸಲು ಕ್ಷೇತ್ರದ ಮೂಲ ಬಿಜೆಪಿಯ 11 ಜನ ಟಿಕೆಟ್ ಆಕಾಂಕ್ಷಿತರು ಒಟ್ಟಾಗಿ ಆರ್. ಎಲ್. ಶಿವಪ್ರಕಾಶ್‍ರನ್ನು ಕಣಕ್ಕಿಳಿಸಿ ಗೆಲ್ಲಿಸಲು ಪಣ ತೊಟ್ಟಿದ್ದಾರೆ. ಈ ಕುರಿತು ಇಂದು ಪತ್ರಿಕಾಗೋಷ್ಠಿಯಲ್ಲಿ  ಮಾತನಾಡಿದ ರಾಜ್ಯ ಬಿಜೆಪಿ ಮಾಜಿ ಕಾರ್ಯದರ್ಶಿ ಹೆಚ್.ಕೆ. ಬಸವರಾಜ್, ಹಾಲಿ ಶಾಸಕರು ಮತ್ತು … Read more

ನನ್ನ ಹೆಣ ಕೂಡ ಬಿಜೆಪಿ ಕಚೇರಿ ಮುಂದೆ ಹೋಗೋದಿಲ್ಲ : ಲಕ್ಷ್ಮಣ ಸವದಿ

ಕಮಲ ತೊರೆದು ‘ಕೈ’ ಸಿದ್ಧಾಂತಕ್ಕೆ ಯಸ್ ಎಂದ ಸವದಿ ಸುದ್ದಿ360 ಬೆಂಗಳೂರು ಏ.14: ಬಿಜೆಪಿಯಲ್ಲಿ ನನಗೆ ಅವಮಾನವಾಗಿದೆ ಎಂದು ಕೆಂಡದುಂಡೆಯಾಗಿರುವ ಸವದಿ ಇಂದು ಬಿಜೆಪಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ‘ಕೈ’ ಪಡೆಯನ್ನು ಸೇರಿದ್ದಾರೆ. ಸವದಿ ಬೆಂಗಳೂರಿಗೆ ಬರುತ್ತಿದ್ದಂತೆ ಡಿಕೆಶಿಯೊಂದಿಗೆ ಎರಡು ಗಂಟೆಗಳ ಕಾಲ ಸುಧೀರ್ಘ ಚರ್ಚೆ ನಡೆದಿದ್ದು, ಈ ವೇಳೆ ಮಾಜಿ ಸಿ.ಎಂ. ಸಿದ್ಧರಾಮಯ್ಯ, ರಣದೀಪ್ ಸುರ್ಜಿವಾಲ ಉಪಸ್ಥಿತರಿದ್ದರು. ಬಿಜೆಪಿಯಿಂದ ಟಿಕೆಟ್ ದಕ್ಕದಿದ್ದರಿಂದ ಕಾಂಗ್ರೆಸ್  ಕಡೆ ಮುಖ ಮಾಡಿರುವ ಲಕ್ಷ್ಮಣ ಸವದಿ, ರಾಜ್ಯ ಕಾಂಗ್ರೆಸ್ ನಾಯಕರ … Read more

ಮಾಸಾಶನ ಪಡೆಯುತ್ತಿರುವ ಕಲಾವಿದರು  ಜೀವಂತ ಪ್ರಮಾಣ ಪತ್ರ ಸಲ್ಲಿಸಲು ಸೂಚನೆ

ದಾವಣಗೆರೆ; ಏ.13: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಮಾಶಾಸನ ಪಡೆಯುತ್ತಿರುವ ಸಾಹಿತಿ ಮತ್ತು ಕಲಾವಿದರು ಜೀವಿತಾವಧಿ ಪ್ರಮಾಣ ಪತ್ರವನ್ನು ಏಪ್ರಿಲ್ 25 ರೊಳಗಾಗಿ ಸಲ್ಲಿಸಬೇಕು. ಆಧಾರ್ ಕಾರ್ಡ್, ಪಿಂಚಣಿ ಪುಸ್ತಕದ ಪ್ರತಿ, ಇತ್ತೀಚಿನ ಭಾವಚಿತ್ರ ಮತ್ತು ಬ್ಯಾಂಕ್ ಪಾಸ್ ಬುಕ್‍ನೊಂದಿಗೆ ಜೀವಿತಾವಧಿ ಪ್ರಮಾಣ ಪತ್ರವನ್ನು ಸಂಬಂಧಪಟ್ಟ ಬ್ಯಾಂಕ್ ಮ್ಯಾನೇಜರ್ ಸಹಿ ಪಡೆದು ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ.27 ರಲ್ಲಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಚೇರಿಗೆ ಖುದ್ದಾಗಿ ಅಥವಾ ಅಂಚೆ ಮೂಲಕ ಸಲ್ಲಿಸಲು ಮತ್ತು ಹೆಚ್ಚಿನ … Read more

ರಾಜಕಾರಣದಲ್ಲಿ ಪಕ್ಷಾಂತರ ಸಾಮಾನ್ಯ – ಭಿನ್ನಮತ ಶಮನವಾಗಲಿದೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

shimoga-riots-were-the-result-of-the-governments-appeasement-policy-basavaraj-bommai

ಮಂಗಳೂರು, ಏಪ್ರಿಲ್ 13: ರಾಜಕಾರಣದಲ್ಲಿ ಪಕ್ಷ ಬದಲಿಸೋದು ಸಾಮಾನ್ಯ ಆಗ್ತಾ ಇರುತ್ತೆ. ಅಸಮಾಧಾನಗೊಂಡವರ ಮನವೊಲಿಕೆ ಮಾಡುತ್ತೇವೆ.  ಪಕ್ಷದಲ್ಲಿ ಎದ್ದಿರುವ ಅಸಮಾಧಾನ ಸರಿಪಡಿಸಲಾಗುತ್ತಿದೆ.  ಕಾರ್ಯಕರ್ತರು ಗಟ್ಟಿ ಇದ್ದಾರೆ, ಇದರಿಂದ ಯಾವುದೇ ಹಾನಿಯಾಗುವುದಿಲ್ಲ  ಬಹುತೇಕ ಕಡೆ ಪಕ್ಷದ ಭಿನ್ನಮತ ಶಮನ ಆಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಶ್ವಾಸ ವ್ಯಕ್ತಪಡಿಸಿದರು. ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿ, ಅಸಮಾಧಾನಗೊಂಡ ನಾಯಕರ ಜೊತೆ ಪಕ್ಷದ ಹಿರಿಯರು ಮಾತನಾಡುತ್ತಿರುವುದಾಗಿ ತಿಳಿಸಿದರು. ಬಿಜೆಪಿ ಎರಡನೇ ಪಟ್ಟಿ ಬಿಡುಗಡೆಯಾಗಿದೆ.  ಇನ್ನೂ 12 ಕ್ಷೇತ್ರ ಉಳಿದಿದೆ.  ಕೆಲವೆಡೆ … Read more

error: Content is protected !!