ಏ.8ಕ್ಕೆ ಬಿಜೆಪಿ ಅಂತಿಮ ಪಟ್ಟಿ : ಬೊಮ್ಮಾಯಿ

shimoga-riots-were-the-result-of-the-governments-appeasement-policy-basavaraj-bommai

ಬೆಂಗಳೂರು, ಏ. 03: ಪಕ್ಷದ ಮೊದಲ ಪಟ್ಟಿಯ ಬಗ್ಗೆ ಕ್ಷೇತ್ರದಲ್ಲಿ ಎಲ್ಲರ ಅಭಿಪ್ರಾಯ ಸಂಗ್ರಹಿಸಲಾಗಿದೆ.  ಜಿಲ್ಲಾವಾರು ಕೋರ್ ಕಮಿಟಿ ಸದಸ್ಯರ ಅಭಿಪ್ರಾಯ ಸಂಗ್ರಹಿಸಲಾಗಿದ್ದು ನಾಳೆ ಮತ್ತು ನಾಡಿದ್ದು ರಾಜ್ಯಮಟ್ಟದ ಕೋರ್ ಕಮಿಟಿ ಸಭೆ ನಡೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಇಂದು ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ವೇಳೆಯಲ್ಲಿ ಮಾತನಾಡಿದ ಅವರು, ರಾಜ್ಯಮಟ್ಟದ ಕೋರ್ ಕಮಿಟಿ ಸಭೆಯ ನಂತರ ಕೇಂದ್ರ ಸಂಸದೀಯ ಮಂಡಳಿ ಸಭೆ ನಡೆಯಲಿದೆ.  ಬಹುತೇಕವಾಗಿ ಏಪ್ರಿಲ್  8 ರಂದು ಸಂಸದೀಯ ಮಂಡಳಿಯಲ್ಲಿ ಪಟ್ಟಿ ಅಂತಿಮಗೊಳ್ಳಲಿದೆ … Read more

ದಾವಣಗೆರೆ: ಅಭಿವೃದ್ಧಿ – ಮತದಾನ ಕುರಿತು ಡಾ. ಪ್ರಭಾ ಮಲ್ಲಿಕಾರ್ಜುನ್ ಹೇಳಿದ್ದೇನು?

ದಾವಣಗೆರೆ, ಏ. 1: ಅಭಿವೃದ್ಧಿಯ ವಿಷಯ ಬಂದಾಗ ನೆನಪಾಗುವ ಮಲ್ಲಿಕಾರ್ಜುನ್, ಮತದಾನದ ಸಂದರ್ಭದಲ್ಲಿ ನೆನಪಾಗದಿರುವುದು ಬೇಸರದ ಸಂಗತಿ ಎಂದು ಎಸ್ ಎಸ್. ಮಲ್ಲಿಕಾರ್ಜುನ್ ಅವರ ಪತ್ನಿ  ಡಾ. ಪ್ರಭಾ ಮಲ್ಲಿಕಾರ್ಜುನ್ ಬೇಸರ ವ್ಯಕ್ತಪಡಿಸಿದ್ದಾರೆ. ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಸೇಂಟ್ ಜಾನ್ಸ್  ಶಾಲಾ ಆವರಣದಲ್ಲಿ 34ನೇ ವಾರ್ಡ್ ವ್ಯಾಪ್ತಿಯ ಪಕ್ಷದ ಕಾರ್ಯಕರ್ತರ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಡಾ. ಪ್ರಭಾ ಮಲ್ಲಿಕಾರ್ಜುನ ರವರು ಅಭಿವೃದ್ಧಿಯ ವಿಷಯ ಬಂದಾಗ ನೆನಪಾಗುವ ಮಲ್ಲಿಕಾರ್ಜುನ್, ಮತದಾನದ ಸಂದರ್ಭದಲ್ಲಿ ನೆನಪಾಗದಿರುವುದು ಮಾತ್ರ ಬೇಸರವಾಗುತ್ತದೆ … Read more

ಹುತಾತ್ಮರ ಆದರ್ಶಗಳನ್ನು ಎಲ್ಲರೂ ಸೇರಿ ಮುನ್ನಡೆಸೋಣ – ಹುತಾತ್ಮರ ದಿನಾಚರಣೆಯಲ್ಲಿ ಆವರಗೆರೆ ಚಂದ್ರು

ದಾವಣಗೆರೆ, ಏ.1: ಹುತಾತ್ಮರ ಆದರ್ಶಗಳನ್ನು  ಮುನ್ನಡೆಸಲು ಎಲ್ಲರೂ ಸೇರಿ ಪಣತೊಡೋಣ ಎಂದು ಸಿಪಿಐ ಜಿಲ್ಲಾ ಕಾರ್ಯದರ್ಶಿ ಕಾಂ. ಆವರಗೆರೆ ಚಂದ್ರು ಹೇಳಿದರು. ಸಿ ಪಿ ಐ ಮತ್ತು ಎ ಐ ಟಿ ಯು ಸಿ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ  ನಗರಕ್ಕೆ ಸಮೀಪದ ಆವರಗೆರೆಯಲ್ಲಿ ಇಂದು ನಡೆದ ಹುತಾತ್ಮ ಕಾಂ ಶೇಖರಪ್ಪ, ಕಾಂ ಸುರೇಶ್ ರವರ 53 ನೇ ವರ್ಷದ ಹುತಾತ್ಮರ ದಿನಾಚರಣೆ ಮತ್ತು ಮಾಜಿ ಶಾಸಕರಾದ ಕಾಂ. ಪಂಪಾಪತಿ ಯವರ 21 ನೇ ವರ್ಷದ ಸ್ಮರಣೆ ಕಾರ್ಯಕ್ರಮದಲ್ಲಿ … Read more

ದಾವಣಗೆರೆ: ಬರ್ಬರ ಹತ್ಯೆ ಪ್ರಕರಣ ಬೇಧಿಸಿದ ಪೊಲೀಸರು – ಪತ್ನಿ ಪ್ರಿಯಕರ ಅಂದರ್

ದಾವಣಗೆರೆ ಮಾ:28: ವ್ಯಕ್ತಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆಯಾಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೃತನ ಪತ್ನಿ ಮತ್ತು ಪ್ರಿಯಕರನನ್ನು ಪೊಲೀಸರು ಬಂಧಿಸಿದ್ದಾರೆ. ದಾವಣಗೆರೆಯ ವಿದ್ಯಾನಗರ ಠಾಣಾ ವ್ಯಾಪ್ತಿಯಲ್ಲಿ ಮಾ23ರಂದು ದಾಖಲಾಗಿದ್ದ ಈ ಪ್ರಕರಣವನ್ನು ಬೇಧಿಸಲು ದಾವಣಗೆರೆ ನಗರ ಉಪ ವಿಭಾಗದ ಡಿವೈಎಸ್‌ಪಿ  ಮಲ್ಲೇಶ್ ದೊಡ್ಡಮನಿ ಹಾಗೂ ಡಿ.ಸಿ.ಆರ್.ಬಿ ಡಿವೈಎಸ್‌ಪಿ  ಸೈಯದ್ ರೋಷನ್ ಜಮೀರ್ ಎಸ್ ಇವರ ಮಾರ್ಗದರ್ಶನದಲ್ಲಿ   ಪ್ರಭಾವತಿ ಸಿ ಶೇತಸನದಿ  ಪೊಲೀಸ್ ಇನ್ಸ್ಪೆಕ್ಟರ್ ವಿದ್ಯಾನಗರ ಪೊಲೀಸ್ ಠಾಣೆ, ನೇತೃತ್ವದಲ್ಲಿ ಡಿ.ಸಿ.ಆರ್.ಬಿ ವಿಭಾಗದ ಸಿಬ್ಬಂದಿ ಹಾಗೂ … Read more

ಶಿಕಾರಿಪುರ: ಯಡಿಯೂರಪ್ಪ ಮನೆ ಮೇಲೆ ಕಲ್ಲು ತೂರಾಟ – ಗೃಹ ಸಚಿವರ ಮೊದಲ ಪ್ರತಿಕ್ರಿಯೆ

ಶಿಕಾರಿಪುರ ಮಾ.28: ನಿನ್ನೆ ನಡೆದ ಪ್ರತಿಭಟನೆ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನಿವಾಸದ ಮೇಲೆ ನಡೆದ ಕಲ್ಲುತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಗೃಹ ಸಚಿವ ಆರಗ ಜ್ಞಾನೇಂದ್ರ ಶಿಕಾರಿಪುರಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕನ ನಡೆಸಿ ಮಾಹಿತಿ ಕಲೆಹಾಕಿದರು.ಸಂಸದ ಬಿ.ವೈ. ರಾಘವೇಂದ್ರ ಮತ್ತು ಎಸ್ಪಿ ಮಿಥುನ್ಕುಮಾರ್ ಅವರೊಂದಿಗೆ ಸಮಾಲೋಚನೆ ನಡೆಸಿದ ಅವರು, ತಪ್ಪು ಮಾಡಿದ ಯಾರನ್ನೂ ಬಿಡುವುದಿಲ್ಲ ಎಂದು ಎಚ್ಚರಿಕೆ ಸಂದೇಶ ರವಾನಿಸಿದರು. ತಪ್ಪು ತಿಳುವಳಿಕೆ – ಪ್ರಚೋದನೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವರು, … Read more

“ಬೇಡರ ಕಿವಿಯಲ್ಲಿ ಕಮಲ” – ಭರವಸೆ ಈಡೇರಿಸಿಲ್ಲ – ನಾಯಕ ಸಮುದಾಯದ ಪ್ರತಿಭಟನೆ

ದಾವಣಗೆರೆ: ನಾಯಕ‌ ಸಮುದಾಯಕ್ಲೆ ಕೊಟ್ಟಿದ್ದ ಭರವಸೆ ಈಡೇರಿಸಿಲ್ಲ ಎಂದು ಆರೋಪಿಸಿ ಬೇಡರ ಕಿವಿಉಲ್ಲಿ ಕಮಲ ಎಂಬ ಘೋಷಣೆಯೊಂದಿಗೆ ನಾಯಕ‌ ಸಮುದಾಯ‌ ದಾವಣಗೆರೆ ಯಲ್ಲಿ ವಿನೂತನ ಪ್ರತಿಭಟನೆ ನಡೆಸಿತು.  ಈ ಹಿಂದೆ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವರಾದ ಅಮೀತ್ ಷಾ ರವರು ಚಿತ್ರದುರ್ಗದಲ್ಲಿ ಮದಕರಿ ನಾಯಕರ 100 ಕೋಟಿ ವೆಚ್ಚದ ಥೀಮ್ ಪಾರ್ಕ್ ಮಾಡುವುದಾಗಿ ಘೋಷಿಸಿದ್ದು, ಇದುವರೆಗೂ ಸರ್ಕಾರ ಈ  ವಿಚಾರವಾಗಿ ಕಾರ್ಯಪ್ರವೃತ್ತರಾಗಿಲ್ಲ. ಹಾಗೂ ನಮ್ಮ ಸಮುದಾಯದ ನಾಯಕ ಬಿ.ಶ್ರೀರಾಮುಲುರವರನ್ನು ಕೇವಲ ಚುನಾವಣೆಗಳಲ್ಲಿ ಹಾಗೂ ಮಾಜಿ … Read more

ಜಿಎಂಐಟಿಯ 400 ವಿದ್ಯಾರ್ಥಿಗಳಿಗೆ ವಿವಿಧ ಪ್ರತಿಷ್ಠಿತ ಕಂಪನಿಗಳಲ್ಲಿ ಉದ್ಯೋಗಾವಕಾಶ

ಆರ್ಥಿಕ ಹಿಂಜರಿತದ ಸಮಯದಲ್ಲೂ ಈ ಸಾಧನೆ – ಇನ್ನೂ ಹಲವು ಕಂಪನಿಗಳು ಸರದಿಯಲ್ಲಿ ದಾವಣಗೆರೆ: ಹಲವು ಪ್ರತಿಷ್ಠಿತ ಕಂಪನಿಗಳು ಆರ್ಥಿಕ ಹಿಂಜರಿತವನ್ನು ಎದುರಿಸುತ್ತಿರುವ ಈ ಹೊತ್ತಿನಲ್ಲಿಯೂ ಜಿಎಮ್ ತಾಂತ್ರಿಕ ಮಹಾವಿದ್ಯಾಲಯವು ವಿದ್ಯಾರ್ಥಿಗಳಿಗೆ ಉದ್ಯೋಗ ಅವಕಾಶಗಳನ್ನು ನೀಡುತ್ತಿದ್ದು, ಪ್ರಸಕ್ತ  ವರ್ಷದ 2023 ರ ಸಾಲಿನ 400 ಜಾಬ್ ಆಫರ್ಸ್ ನೀಡುವಲ್ಲಿ ಯಶಸ್ವಿಯಾಗಿದೆ ಎಂದು ತರಬೇತಿ ಮತ್ತು ಉದ್ಯೋಗ ವಿಭಾಗದ ಮುಖ್ಯಸ್ಥರಾದ ಶ್ರೀ ತೇಜಸ್ವಿ ಕಟ್ಟಿಮನಿ ಟಿ ಆರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  ಸುಮಾರು 100 ಕ್ಕೂ ಹೆಚ್ಚು ಐಟಿ … Read more

ಕಾಂಗ್ರೆಸ್ 70 ವರ್ಷ ಕಡುಬು ತಿನ್ನುತ್ತಿದ್ದರಾ..? : ಮಾಜಿ ಸಿಎಂ ಯಡಿಯೂರಪ್ಪ  ಕಿಡಿ

ದಾವಣಗೆರೆ: ಚುನಾವಣೆಯ ಮುಂದೆ ಭರವಸೆ ನೀಡಿ‌ ಮರೆತುಹೋಗುವ ಕಾಂಗ್ರೆಸ್‌  ಈಗ ಜನರಿಗೆ ಗ್ಯಾರಂಟಿ ಕಾರ್ಡ್ ವಿತರಿಸುತ್ತಿದೆ. ಈ‌ಮೊದಲು  7೦ ವರ್ಷ ಅಧಿಕಾರದಲ್ಲಿದ್ದಾಗ ಕಡುಬು ತಿನ್ನುತ್ತಿದ್ದರಾ..? ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು. ವಿಜಯ ಸಂಕಲ್ಪ ಯಾತ್ರೆ ಸಮಾರೋಪ ಸಮಾರಂಭದಲ್ಲಿ ಮಾತನಾಡಿ, ಕಾಂಗ್ರೆಸ್ ಅವಧಿಯಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ಆಗಿಲ್ಲ. ಹಣ, ಹೆಂಡದ ಬಲದಿಂದ ಚುನಾವಣೆ ಗೆಲ್ಲೋದಕ್ಕೆ ಆಗಲ್ಲ. ರಾಜ್ಯದಲ್ಲಿ ಬಿಜೆಪಿ ಪರ ಜನರ ಅಲೆ ಇದೆ. ಸ್ಪಷ್ಟ ಬಹುಮತದೊಂದಿಗೆ ಬಿಜೆಪಿ ಅಧಿಕಾರಕ್ಕೆ ಬರಲಿದೆ. … Read more

ಕರ್ನಾಟಕದಲ್ಲಿ ಬೃಹತ್ ಜವಳಿ ಪಾರ್ಕ್ ಸ್ಥಾಪನೆ

ಜಾಗತಿಕ ಮಟ್ಟದಲ್ಲಿ ಭಾರತದ ಗೌರವ ಹೆಚ್ಚಲು ನಿಮ್ಮ ಒಂದು ಮತ ಕಾರಣ : ಪ್ರಧಾನಿ ಮೋದಿ ದಾವಣಗೆರೆ: ವಿಶ್ವ ಭೂಪಟದಲ್ಲಿ ಹಿಂದೂಸ್ಥಾನದ ಬಗ್ಗೆ ಜೈ ಕಾರ ಕೇಳಿಬರುತ್ತಿದೆ. ಜಾಗತಿಕ ಮಟ್ಟದಲ್ಲಿ ನಮ್ಮ ಗೌರವ ಹೆಚ್ಚಿದೆ. ಇದಕ್ಕೆ ಮೋದಿ ಕಾರಣವಲ್ಲ, ನಿಮ್ಮ ಒಂದು ಮತ ಇದನ್ನು ಸಾಧ್ಯವಾಗಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಲಿದರು.. ದಾವಣಗೆರೆಯ ಜಿಎಂಐಟಿ ಪಕ್ಕದಲ್ಲಿ ಆಯೋಜಿಸಿದ್ದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ಸಮಾರೋಪ ಸಮಾರಂಭದ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಅವರು,  ಕರ್ನಾಟಕದ ಉಜ್ವಲ ಭವಿಷ್ಯ … Read more

ಶ್ರವಣಬೆಳಗೊಳದ ಶ್ರೀ ಚಾರುಕೀರ್ತಿ‌‌ ಜೈನಭಟ್ಟಾರಕ ಸ್ವಾಮೀಜಿ ವಿಧಿವಶ – ಸರ್ಕಾರಿ ಗೌರವಗಳೊಂದಿಗೆ ಶ್ರೀಗಳ ಅಂತ್ಯಕ್ರಿಯೆ : ಸಿಎಂ ಬೊಮ್ಮಾಯಿ

ಸುದ್ದಿ360 ಹಾಸನ ಮಾ. 23: ಜೈನ‌ಕಾಶಿ ಶ್ರವಣಬೆಳಗೊಳದ ಶ್ರೀ ಚಾರುಕೀರ್ತಿ‌‌ ಜೈನಭಟ್ಟಾರಕ ಸ್ವಾಮೀಜಿ ಅವರು ಇಂದು (ಮಾ.23) ವಿಧಿವಶರಾಗಿದ್ದಾರೆ. ಕಳೆದ ಮುರ್ನಾಲ್ಕು ತಿಂಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀಗಳನ್ನು ಶ್ರವಣಬೆಳಗೊಳ ಮಠದಲ್ಲೇ ವೈದ್ಯರು ಚಿಕಿತ್ಸೆ ನೀಡುತ್ತಿದ್ದರು.ಹೆಚ್ಚಿನ ಚಿಕಿತ್ಸೆಗಾಗಿ ಆದಿಚುಂಚನಗಿರಿ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿತ್ತು. ಸ್ವಸ್ತಿ ಶ್ರೀ ಚಾರುಕೀರ್ತಿ ಬಿರುದಾಂಕಿತ ಜೈನಭಟ್ಟಾರಕ ಸ್ವಾಮೀಜಿಗಳು ದೇಶಾದ್ಯಂತ ಅಪಾರ ಭಕ್ತವರ್ಗವನ್ನು ಹೊಂದಿದ್ದಾರೆ. ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ: ಸಿಎಂ ಬೊಮ್ಮಾಯಿ ಶ್ರೀಕ್ಷೇತ್ರ ಶ್ರವಣಬೆಳಗೊಳದ ಪರಮ ಪೂಜ್ಯ ಜಗದ್ಗುರು ಕರ್ಮಯೋಗಿ ಸ್ವಸ್ತಿಶ್ರೀ  ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ … Read more

error: Content is protected !!