ಶಾಲೆಗೆ ಹೊರಟ ವಿದ್ಯಾರ್ಥಿ ಹೃದಯಾಘಾತದಿಂದ ಸಾವು

ಸುದ್ದಿ360, ಶಿವಮೊಗ್ಗ ಜ.11:  ಎಂದಿನಂತೆ ಶಾಲೆಗೆ ತೆರಳಲು ಸಿದ್ಧನಾಗುತ್ತಿದ್ದ10ನೆಯ ತರಗತಿ ವಿದ್ಯಾರ್ಥಿ ಹೃದಯಾಘಾತದಿಂದಾಗಿ ಸಾವು ಕಂಡಿದ್ದು ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ. ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಎಣ್ಣೆಕೊಪ್ಪ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಜಯಂತ್ ಎಂಬ ಬಾಲಕನೇ ಮೃತ ದುರ್ದೈವಿ. ಇಂದು ಮುಂಜಾನೆ ಶಾಲೆಗೆ ಹೋಗಲು ತಯಾರಾಗುತ್ತಿದ್ದ ವೇಳೆ ಬಾಲಕನಿಗೆ ಎದೆನೋವು ಕಾಣಿಸಿಕೊಂಡಿದೆ. ತಕ್ಷಣ ಆತನನ್ನು ಎಣ್ಣೆಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿತ್ತು. ಆದರೆ ಅಷ್ಟೊತ್ತಿಗಾಗಲೇ ವಿದ್ಯಾರ್ಥಿ ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಆಟ – ಪಾಠಗಳಲ್ಲಿ … Read more

ಬೇಡಿಕೆ ಈಡೇರಿಕೆಗೆ ನಿವೇಶನ ಮತ್ತು ವಸತಿ ರಹಿತರ ಹೋರಾಟ ಸಮಿತಿ ಪ್ರತಿಭಟನೆ-ಮನವಿ

ಸುದ್ದಿ360 ದಾವಣಗೆರೆ ಜ.11: ಹಲವಾರು ವರ್ಷಗಳಿಂದ ನಮ್ಮ ಬೇಡಿಕೆಗಳು ಬೇಡಿಕೆಗಳಾಗೆ ಉಳಿದಿವೆ, ನಮ್ಮ ಬೇಡಿಕೆಗಳ ಕುರಿತಾಗಿ ಚರ್ಚಿಸಲು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಆಯುಕ್ತರ ನೇತೃತ್ವದಲ್ಲಿ ತಕ್ಷಣ ಜಂಟಿ ಸಭೆ ಕರೆದು ಕ್ರಮ ಕೈಗೊಳ್ಳಬೇಕು ಎಂಬುದಾಗಿ ನಿವೇಶನ ಮತ್ತು ವಸತಿ ರಹಿತರ ಹೋರಾಟ ಸಮಿತಿ ಆಗ್ರಹಿಸಿದೆ, ಮೂಲಭೂತ ಸೌಕರ್ಯಗಳೊಂದಿಗೆ ವಸತಿ/ನಿವೇಶನ ರಹಿತರಿಗೆ ವಸತಿ/ನಿವೇಶನ ಕಲ್ಪಿಸಲು ಸಿಪಿಐ(ಎಂ) ಪಕ್ಷದ ನೇತೃತ್ವದಲ್ಲಿ ನಿಟುವಳ್ಳಿ ದುರ್ಗಾಂಬಿಕಾ ದೇವಸ್ಥಾನದಿಂದ ಮೆರವಣಿಗೆ ಹೊರಟ ಪ್ರತಿಭಟನಾಕಾರರು ಮಹಾನಗರ ಪಾಲಿಕೆ ಆವರಣ ತಲುಪಿ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಸಲ್ಲಿಸಿದರು. … Read more

ದಾವಣಗೆರೆಯಲ್ಲಿ ಸಂಚಾರಿ ನಿಯಮ ಅರಿವು ಮೂಡಿಸುವ ಚಂದದ ಕಲಿಕೆಯ ‘ಟ್ರಾಫಿಕ್ ಅವೇರ್ನೆಸ್ ಪಾರ್ಕ್’ – ನೀವೂ ಒಮ್ಮೆ ಭೇಟಿ ನೀಡಿ…

ಸುದ್ದಿ360 ದಾವಣಗೆರೆ ಜ.11: ರಸ್ತೆ ಮೇಲಿನ ಅಪಘಾತಗಳನ್ನು ತಪ್ಪಿಸುವ ನಿಟ್ಟಿನಲ್ಲಿ ಸಂಚಾರಿ ನಿಯಮಗಳನ್ನು ಪಾಲಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ರಸ್ತೆಬದಿಯಲ್ಲಿನ ಸಂಚಾರಿ ನಿಯಮಗಳ ಸೂಚನಾ ಫಲಕಗಳ ಬಗ್ಗೆ ವಿದ್ಯಾರ್ಥಿದಿಸೆಯಿಂದಲೇ ಅರಿವು ಮೂಡಿಸಿದಲ್ಲಿ ಹೆಚ್ಚು ಪರಿಣಾಮಕಾರಿಯಾಗಲಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಸಿ.ಬಿ. ರಿಷ್ಯಂತ್ ಅಭಿಪ್ರಾಯಪಟ್ಟರು. ನಗರದ ನಿಜಲಿಂಗಪ್ಪ ಬಡಾವಣೆಯ  ಶ್ರೀಮತಿ ಗಂಗೂಬಾಯಿ ಹಾನಗಲ್ಲ ಉದ್ಯಾನವನ (ಗಸೆಗಸೆ ಪಾರ್ಕ್)  ದಲ್ಲಿ ನಿರ್ಮಿಸಲಾಗಿದ್ದ ‘‘ಸಂಚಾರ ಜಾಗೃತಿ ಉದ್ಯಾನವನ’ ಉದ್ಘಾಟಿಸಿ ಅವರು ಮಾತನಾಡಿದರು. ಮಹಾನಗರಪಾಲಿಕೆ ಹಾಗೂ ಸ್ಮಾರ್ಟ್ ಸಿಟಿ ಸಹಯೋಗದೊಂದಿಗೆ 24ಕ್ಕೂ ಹೆಚ್ಚು ಸೂಚನಾ … Read more

ಮೆಟ್ರೋ ಕಾಮಗಾರಿ ದುರಂತ: ಅಧಿಕಾರಿ, ಗುತ್ತಿಗೆದಾರರ ಮೇಲೆ ಕ್ರಮ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360 ಬೆಂಗಳೂರು ಜ.10: ಮೆಟ್ರೊ ಕಾಮಗಾರಿ ದುರಂತಕ್ಕೆ ಕಾರಣರಾದ  ಹಿರಿಯ ಅಧಿಕಾರಿಗಳು, ಮುಖ್ಯಸ್ಥರ ಮೇಲೆ ಕ್ರಮಕೈಗೊಳ್ಳಲು ಸೂಚಿಸಿದ್ದು,  ಗುತ್ತಿಗೆದಾರ ಮೇಲೆ ಪ್ರಕರಣ ದಾಖಲಿಸುವುದರ ಜೊತೆಗೆ ಉನ್ನತ ಮಟ್ಟದ ತನಿಖೆ ಮಾಡುವಂತೆಯೂ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಮಂಗಳವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,  ಪ್ರಶ್ನೆ ಇರುವುದು ಇಷ್ಟು ಅಸುರಕ್ಷಿತವಾಗಿ ಹೇಗೆ  ಕೆಲಸ ಮಾಡಿದರು ಎನ್ನುವುದನ್ನು ಪತ್ತೆ ಹಚ್ಚಿ, ಮುಂದೆ ಹೀಗಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ತನಿಖೆ ಹಾಗೂ ತಾಂತ್ರಿಕ ಲೋಪದ ಏನು ಎಂಬುದರ ಬಗ್ಗೆ ಕ್ರಮ … Read more

ಜ.13: ಮುಖ್ಯಮಂತ್ರಿಯವರ ಶಿಗ್ಗಾವಿಯ ಮನೆ ಮುಂದೆ ಸತ್ಯಾಗ್ರಹ – ಬಸವಜಯ ಮೃತ್ಯುಂಜಯ ಸ್ವಾಮೀಜಿ

ಸುದ್ದಿ360 ಬೆಳಗಾವಿ, ಜ.10: ಬೀಸುವ ದೊಣ್ಣಯಿಂದ ತಪ್ಪಿಸಿಕೊಳ್ಳುವ ಯತ್ನ ಮಾಡುತ್ತಿರುವ ಸರಕಾರ  ಮೀಸಲಾತಿ ಹುಸಿ ಭರವಸೆ ಕೊಡುವ ಮೂಲಕ  ಹೋರಾಟದ ದಾರಿ ತಪ್ಪಿಸುತ್ತಿದೆ. ಸರಕಾರಕ್ಕೆ ಬಿಸಿ ಮುಟ್ಟಿಸಲು ಜ.13 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ  ಶಿಗ್ಗಾವಿಯಲ್ಲಿನ ಮನೆ ಮುಂದೆ ಸತ್ಯಾಗ್ರಹ ನಡೆಸಲು ನಿರ್ಧರಿಸಲಾಗಿದೆ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು. ಇಂದು ಮಂಗಳವಾರ ನಗರದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಅವರು, ಪಂಚಮಸಾಲಿ ಮೀಸಲಾತಿ ಹೋರಾಟಕ್ಕೆ ಮಣಿದ ಸರಕಾರ … Read more

ಗೌರವಯುತ ಜೀವನ ನಡೆಸಲು ಬಿಡಿ – ಪಿಂಚಣಿದಾರರ ಆಗ್ರಹ

ಸುದ್ದಿ 360 ದಾವಣಗೆರೆ, ಜ.10:  ನಿವೃತ್ತ ಸರಕಾರಿ ನೌಕರರು ಗೌರವಯುತ ಜೀವನ ನಡೆಸಲು ಅನುಕೂಲವಾಗುವಂತೆ ಪಿಂಚಣಿ ನೀಡಬೇಕು ಎಂಬ ಸುಪ್ರೀಂ ಕೋರ್ಟ್ ಆದೇಶವಿದ್ದರೂ ಸಹ ಕೇಂದ್ರ ಸರಕಾರ, ಭವಿಷ್ಯ ನಿಧಿ ಇಲಾಖೆ ತಮಗೆ ಬೇಕಾದಂತೆ ಸುತ್ತೋಲೆ ಹೊರಡಿಸಿ ಪಿಂಚಣಿದಾರರಿಗೆ ತೊಂದರೆ ನೀಡುತ್ತಿವೆ ಎಂದು ಆರೋಪಿಸಿ ಇಂದು ಮಂಗಳವಾರ ಪಿಂಚಣಿದಾರರು ಪ್ರತಿಭಟನೆ ನಡೆಸಿದರು. ನಗರದ ಕೆ.ಬಿ. ಬಡಾವಣೆಯ ಭವಿಷ್ಯ ನಿಧಿ ಕಚೇರಿ ಎದುರು ರಾಷ್ಟ್ರೀಯ ಸಂಘರ್ಷ ಸಮಿತಿ ನೇತೃತ್ವದಲ್ಲಿ ಪ್ರತಿಭಟಿಸಿದ ಪಿಂಚಣಿದಾರರು, ಸಾರಿಗೆ, ದೂರ ಸಂಪರ್ಕ ಸೇರಿ ಸರಕಾರದ … Read more

ನ್ಯಾ.ಸದಾಶಿವ ವರದಿ ಯಥಾವತ್ ಜಾರಿ ಒತ್ತಾಯಿಸಿ ದಸಂಸ ದಾವಣಗೆರೆ ಜಿಲ್ಲಾ ಸಮಿತಿ ಪ್ರತಿಭಟನೆ

ಸುದ್ದಿ 360 ದಾವಣಗೆರೆ, ಜ.10:  ನ್ಯಾ.ಎ.ಜೆ. ಸದಾಶಿವ ಆಯೋಗದ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಘಟಕದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಕೆಲಕಾಲ ಧರಣಿ ನಡೆಸಿದ ಪ್ರತಿಭಟನಾಕಾರರು, ಬಳಿಕ ಜಯದೇವ ವೃತ್ತ,  ಗಾಂಧಿ ವೃತ್ತ, ಪಿಬಿ ರಸ್ತೆ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿವರೆಗೆ  ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಿದರು. ದಲಿತರ ಮೂಗಿಗೆ ತುಪ್ಪ ಹಚ್ಚುವ ಕೆಲಸ ಈ ವೇಳೆ ಮಾತನಾಡಿದ … Read more

ದಾವಣಗೆರೆ ಡಿಆರ್‌ಆರ್ ಕಾಲೇಜು ವಿದ್ಯಾರ್ಥಿಗಳಿಂದ ‘ವಿ ವಾಂಟ್ ಜಸ್ಟೀಸ್’ ಫಲಕ ಹಿಡಿದು ಪ್ರತಿಭಟನೆ

ಸುದ್ದಿ 360 ದಾವಣಗೆರೆ, ಜ.10: ಇಲ್ಲಿನ ಡಿಆರ್ ಆರ್ ಕಾಲೇಜು ಆವರಣದಲ್ಲಿ ವಿದ್ಯಾರ್ಥಿಗಳು ನಮಗೆ ಅನ್ಯಾಯವಾಗಿದೆ, ನಮಗೆ ನ್ಯಾಯ ಬೇಕು ಎಂಬ ಫಲಕಗಳೊಂದಿಗೆ ಇಂದು ಪ್ರತಿಭಟನೆ ನಡೆಸಿದರು. ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಡಿಆರ್ ಆರ್ ಪಾಲಿಟೆಕ್ನಿಕ್ ಕಾಲೇಜು ಆವರಣಗಳು ಪರಸ್ಪರ ಹೊಂದಿಕೊಂಡಿದ್ದು, ಡಿಆರ್‌ಆರ್ ಪಾಲಿಟೆಕ್ನಿಕ್‌ಗೆ ಸೇರಿದ ಜಾಗದಲ್ಲಿ ಪ್ರಥಮ ದರ್ಜೆ ಕಾಲೇಜಿನ ಕಟ್ಟಡ ನಿರ್ಮಿಸಲು ಏಕಪಕ್ಷೀಯ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಆರೋಪಿಸಿ ಡಿಆರ್‌ಆರ್ ಕಾಲೇಜು ವಿದ್ಯಾರ್ಥಿಗಳು ಪ್ರತಿಭಟಿಸಿದರು. ರಾಜ್ಯ ಸರಕಾರ ಕಾಲೇಜು ಮತ್ತು … Read more

ಪೋಷಕರನ್ನು ಬಾಲ್ಯದ ದಿನಕ್ಕೆ ಕರೆದೊಯ್ದ ದಾವಣಗೆರೆ ಪಿಬಿವಿ ವಿದ್ಯಾಲಯ

ಸುದ್ದಿ 360 ದಾವಣಗೆರೆ, ಜ.10: ದಿನಾ ಬೆಳಗೆದ್ದು ಮಕ್ಕಳ ಶಾಲೆಯ ಬ್ಯಾಗ್, ಲಂಚ್ ಬ್ಯಾಗ್, ನೀರು ಬಾಟಲ್, ಕರ್ಚಿಪ್, ಮಾಸ್ಕ್ ಹೀಗೆ ಮಕ್ಕಳನ್ನು ಶಾಲೆಗೆ ಸಜ್ಜುಗೊಳಿಸಿ ಶಾಲಾ ಆವರಣಕ್ಕೆ ತಲುಪಿಸಿ ಉಸ್ಸಪ್ಪ ಇವತ್ತಿನ ಅರ್ಧ ಕೆಲಸ ಮುಗೀತು ಎಂದು ನಿಟ್ಟುಸಿರು ಬಿಡುತ್ತಾ ಮನೆ ಕಡೆಗೆ ತೆರಳುತ್ತಿದ್ದ ಪೋಷಕರ ಈ ದಿನ ಕೊಂಚ ವಿಶೇಷವಾಗಿಯೇ ಇತ್ತು. ನಗರದ ದೇವರಾಜ ಅರಸು ಬಡಾವಣೆಯ ಬಿ ಬ್ಲಾಕ್ ನಲ್ಲಿರುವ ದೈವಜ್ಞ ವಿದ್ಯಾಸಂಸ್ಥೆ ಪಿಬಿವಿ ವಿದ್ಯಾಲಯದಲ್ಲಿ ಸೋಮವಾರ ಶಾಲಾ ವಿದ್ಯಾರ್ಥಿಗಳ ಪೋಷಕರಿಗಾಗಿ ಹಲವು … Read more

ಜ.12 ರಂದು ಪ್ರಧಾನಿ ಮೋದಿ ಹುಬ್ಬಳ್ಳಿಗೆ ಆಗಮನ

ಸುದ್ದಿ360 ಬೆಂಗಳೂರು, ಜ.3: ಪ್ರಧಾನಿ ನರೇಂದ್ರ ಮೋದಿಯವರು ಜನವರಿ 12 ರ ಮಧ್ಯಾಹ್ನದಂದು ಹುಬ್ಬಳ್ಳಿಗೆ ಆಗಮಿಸುತ್ತಿದ್ದು, ರಾಷ್ಟ್ರೀಯ ಯುವಜನೋತ್ಸವದಲ್ಲಿ ಭಾಗವಹಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, ಏಳು ದಿನಗಳ ಕಾಲ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ದೇಶದ 28 ರಾಜ್ಯಗಳಿಂದ ಹಾಗೂ 8 ಕೇಂದ್ರೀಯ ಪ್ರಾಂತ್ಯದಿಂದ ಯುವಜನರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಪ್ರಧಾನಿ ಮೋದಿಯವರು ಈ ಕಾರ್ಯಕ್ರಮವನ್ನು ಭಾಗವಹಿಸಿ  ಹಿಂದಿರುಗಲಿದ್ದಾರೆ ಎಂದು ತಿಳಿಸಿದರು. ಜ.19 ರಂದು ಪ್ರಧಾನಿ ಮೋದಿಯವರು ನಾರಾಯಣಪುರ … Read more

error: Content is protected !!