ಶಿವಮೊಗ್ಗ: ಮಕ್ಕಳ ದಸರಾ ಪ್ರಯುಕ್ತ ರಾಜ್ಯಮಟ್ಟದ ಕರಾಟೆ ಪಂದ್ಯಾವಳಿ

ಸುದ್ದಿ360 ಶಿವಮೊಗ್ಗ(Shivamogga) ಅ.11: ಶಿವಮೊಗ್ಗ ಮಹಾನಗರ ಪಾಲಿಕೆ ಸಂಯುಕ್ತ ಆಶ್ರಯದಲ್ಲಿ ಶಿವಮೊಗ್ಗ ಜಿಲ್ಲಾ ಕರಾಟೆ ಅಸೋಸಿಯೇಷನ್ ವತಿಯಿಂದ ಇದೇ ಅ.16 ರಂದು ಮಕ್ಕಳ ದಸರಾ ಪ್ರಯುಕ್ತ ನಗರದ  ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ 17 ವರ್ಷ ದೊಳಗಿನ ವಯಸ್ಸಿನ ಮಕ್ಕಳಿಗೆ ರಾಜ್ಯಮಟ್ಟದ ಕರಾಟೆ ಪಂದ್ಯಾವಳಿ (State Level Karate Tournament for Childrens) ಆಯೋಜಿಸುತ್ತಿರುವುದಾಗಿ ಶಿವಮೊಗ್ಗ ಜಿಲ್ಲಾ ಕರಾಟೆ ಅಸೋಸಿಯೇಷನ್ ನ ಮುಖೀಬ್ ಅಹಮದ್ ತಿಳಿಸಿದ್ದಾರೆ. ಪಂದ್ಯಾವಳಿಯಲ್ಲಿ ಕುಮಿತಿ ವಿಭಾಗಗಳು ಇದ್ದು ಶಿವಮೊಗ್ಗ ನಗರದ ಮಕ್ಕಳಿಗೆ ಮೊದಲ ಆದ್ಯತೆಯಾಗಿದ್ದು … Read more

‘ಗೆದ್ದು ಬಾ ಓ ಇಂಡಿಯಾ-2023’ ಗೀತೆ ಲೋಕಾರ್ಪಣೆ

indian-cricket-anthem-geddu-ba-o-india-2023-launch

ಸುದ್ದಿ360 ದಾವಣಗೆರೆ (Davangere), ಅ.10: ದಾವಣಗೆರೆಯ ಬ್ಲಾಕ್ ಕ್ಯಾಟ್ಸ್ ಕ್ರಿಯೇಟಿವ್ ಲ್ಯಾಬ್ (Black Cats Creative Lab) ನಿಂದ ‘ವರ್ಲ್ಡ್ ಕಪ್ ಕ್ರಿಕೆಟ್ ಯ್ಯಾಂಥಮ್ 2023’ ‘ಗೆದ್ದು ಬಾ ಓ ಇಂಡಿಯಾ’ (geddu ba o india) ಕ್ರಿಕೆಟ್ ಗೀತೆ ರೂಪಿಸಲಾಗಿದ್ದು, ಅ.11ರಂದು ಮಧ್ಯಾಹ್ನ 12.30ಕ್ಕೆ ಲೋಕಾರ್ಪಣೆ ಮಾಡಲಾಗುವುದು ಎಂದು ಬ್ಲಾಕ್‍ ಕ್ಯಾಟ್ಸ್ ತಂಡದ ಎಂ.ಎಸ್. ಚೇತನ ತಿಳಿಸಿದರು. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಭಾರತೀಯ ಕ್ರಿಕೆಟ್‍ ತಂಡವನ್ನುಮತ್ತು ಪ್ರೇಕ್ಷಕರನ್ನು  ಹುರಿದುಂಬಿಸುವ ನಿಟ್ಟಿನಲ್ಲಿ ‘ಭಾರತೀಯ ಕ್ರಿಕೆಟ್‍ ಗೀತೆ2023’ ‘ಗೆದ್ದು … Read more

‘ರಾಜ್ಯ ಸರ್ಕಾರಕ್ಕೆ ಕೇಂದ್ರದ ಸ್ಟ್ರೋಕ್’ – ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೀಗೆ ಹೇಳಿದ್ದೇಕೆ..?

centers-stroke-to-state-government-basavaraja-bommai-hubli

ಸುದ್ದಿ360 ಹುಬ್ಬಳ್ಳಿ(hubli) ಅ.10: ಎಲ್ಲದಕ್ಕೂ ಕೇಂದ್ರ ಸರ್ಕಾರದ ಕಡೆ ಬೆರಳು ತೋರಿಸುವ ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರದ ಸ್ಟ್ರೋಕ್‍ ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಟಿ ಬೀಸಿದ್ದಾರೆ. ಹುಬ್ಬಳ್ಳಿಯಲ್ಲಿ ಇಂದು  ಮಾಧ್ಯಮಗಳಿಗೆ ಮಾತನಾಡಿದ ಅವರು, ಬರ ಪರಿಹಾರಕ್ಕೆ ರಾಜ್ಯ ಸರ್ಕಾರ ಕೇಂದ್ರದ ಕಡೆ ಬೆರಳು ತೋರಿಸುತ್ತಿರುವ ಕುರಿತು ಈ ರೀತಿ ಪ್ರತಿಕ್ರಿಯಿಸಿದ್ದಾರೆ. ರಾಜ್ಯಕ್ಕೆ ಕೇಂದ್ರ ಸರ್ಕಾರದ ಸ್ಟ್ರೋಕ್ ಆಗಿದೆ. ಬರ ಆದರೂ ಕಾವೇರಿ ಆದರೂ ಎಲ್ಲದಕ್ಕೂ ಕೇಂದ್ರ. ಕಡೆಗೆ ಬೆರಳು ತೋರಿಸುತ್ತಾರೆ. ಈಗ ವಿದ್ಯುತ್ … Read more

ಚದುರಂಗ: ಜಿಲ್ಲಾ ಮಟ್ಟದಿಂದ ರಾಜ್ಯಮಟ್ಟಕ್ಕೆ ಆಯ್ಕೆ

ಸುದ್ದಿ360 ದಾವಣಗೆರೆ (davangere), ಅ.09: ನಗರದ ಗುರುಭವನದಲ್ಲಿ ಇಂದು  ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ಚದುರಂಗ (chess) ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟದಿಂದ ರಾಜ್ಯಮಟ್ಟಕ್ಕೆ ಸ್ಪರ್ಧಿಗಳ ಆಯ್ಕೆ ನಡೆಯಿತು. ಸ್ಪರ್ಧೆಯಲ್ಲಿ 14/17 ವರ್ಷದ ಒಳಗಿನ ಬಾಲಕ ಮತ್ತು ಬಾಲಕಿಯರ ಎರಡು ವಿಭಾಗದಲ್ಲಿ ಆಯ್ಕೆ ನಡೆಸಲಾಯಿತು. 14 ವರ್ಷದ ಒಳಗಿನ ಬಾಲಕರ ವಿಭಾಗದಲ್ಲಿ ಹೊನ್ನಳ್ಳಿಯ ಆಕಾಶ್ ಕೆಪಿ ಪ್ರಥಮ ಸ್ಥಾನ, ಜನಾರ್ಧನ್ ದ್ವಿತೀಯ ಸ್ಥಾನ,  ದಾವಣಗೆರೆಯ ಶರತ್ ಎಂ ಎನ್ ತೃತೀಯ ಸ್ಥಾನ, ಹರಿಹರದ ಚಂದನ್ ಎಸ್ ಜಾದವ್ … Read more

ಭೀಕರ ಅಪಘಾತ: ಬಾಲಕ ಸೇರಿ 7 ಮಂದಿ ದುರ್ಮರಣ

ಸುದ್ದಿ360, ಹೊಸಪೇಟೆ (hospet) ಅ.09: ಎರಡು ಮೈನಿಂಗ್ ಟಿಪ್ಪರ್ ಲಾರಿಗಳು ಮತ್ತು ಕ್ರ್ಯೂಸರ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ (accident) 7 ಜನರ ದುರ್ಮಣ ಹೊಂದಿದ್ದಾರೆ. ಹೊಸಪೇಟೆ ನಗರದ ಹೊರವಲಯದ ಟನಲ್ ಬಳಿ ಈ ಅಪಘಾತ ಸಂಭವಿಸಿದ್ದು, ಟಿಪ್ಪರ್ ಡಿಕ್ಕಿ ಹೊಡೆದ ರಭಸಕ್ಕೆ ಕ್ರೂಸರ್‍ನಲ್ಲಿದ್ದ 7 ಜನರು ಮೃತಪಟ್ಟಿದ್ದು, ವಾಹನದಲ್ಲಿ ಸಿಲುಕಿರುವ ಶವಗಳನ್ನು ಹೊರ ತೆಗೆಯಲು ಪೊಲೀಸರ ಹರಸಾಹಸಪಟ್ಟಿದ್ದಾರೆ. ಕ್ರೂಸರ್‍ನಲ್ಲಿದ್ದವರು ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಕೂಲಹಳ್ಳಿ ಗೋಣಿಬಸವೇಶ್ವರ ದೇವಸ್ಥಾನಕ್ಕೆ ಹೋಗಿ ವಾಪಸ್ ಬರುವಾಗ ದುರ್ಘಟನೆ ನಡೆದಿದೆ‌. ಕ್ರ್ಯೂಸರ್ … Read more

ಕರಾಟೆ ಸ್ಪರ್ಧೆಯಲ್ಲಿ ಪೃಥ್ವಿ ಆರ್ ಪ್ರಥಮ

prithvi-r-stands-first-in-karate-competition-davangere

ಸುದ್ದಿ360 ದಾವಣಗೆರೆ, ಅ.06: ಗೋಲ್ಡನ್ ಕರಾಟೆ ಸ್ಪೋರ್ಟ್ಸ್ ಅಸೋಸಿಯೇಷನ್ ದಾರವಾಡ ಇವರ ಆಶ್ರಯದಲ್ಲಿ ಗದಗ ನಗರದಲ್ಲಿ ನಡೆದ ವಿಭಾಗ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ (ಕಟಾ ಮತ್ತು ಕುಮಿತೆ ವಿಭಾಗ) ದಾವಣಗೆರೆ ಹಳೇಪೇಟೆಯ ಉನ್ನತಿಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಏಳನೆಯ ತರಗತಿಯ ವಿದ್ಯಾರ್ಥಿ ಪೃಥ್ವಿ, ಆರ್, ಪ್ರಥಮ ಬಹುಮಾನ ಪಡೆದು ಶತಮಾನದ ಶಾಲೆಗೆ ಕೀರ್ತಿ ತಂದಿದ್ದಾರೆ. ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ವಿಜಯಶಾಲಿಯಾಗಿರುವ  ವಿದ್ಯಾರ್ಥಿ ಪೃಥ್ವಿ, ಆರ್,ಗೆ ಶಾಲೆಯ ಮುಖ್ಯೋಪಾಧ್ಯಾಯರಾದ ಲೋಕಣ್ಣ ಮಾಗೋಡ್, ಇಂಗ್ಲಿಷ್ ಶಿಕ್ಷಕಿ … Read more

ಅಂದರ್ ಬಾಹರ್ ಇಸ್ಪೀಟ್ ಜೂಜಾಟ-ಪೊಲೀಸರ ದಾಳಿ – 2.10 ಲಕ್ಷ ನಗದು ವಶ

ander-bahar-ispeet-gambling-police-raid-cash-seized-davangere

ಸುದ್ದಿ360 ದಾವಣಗೆರೆ (davangere) ಅ.06: ಅಂದರ್ ಬಾಹರ್ ಇಸ್ಪೀಟ್  ಜೂಜಾಟದಲ್ಲಿ ತೊಡಗಿದ್ದ 13 ಜನರನ್ನು ಹಿಡಿದು ಇವರುಗಳಿಂದ  ಜೂಜಾಟದಲ್ಲಿ ತೊಡಗಿಸಿದ್ದ ಒಟ್ಟು 2,10,000/- ರೂ ನಗದು ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ದಾವಣಗೆರೆ ಸಿ.ಇ.ಎನ್ ಅಪರಾಧ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅ.5ರ ಗುರುವಾರದಂದು ದಾವಣಗೆರೆ ಜಿಲ್ಲೆ ಚನ್ನಗಿರಿ ಮಂಗೆನಹಳ್ಳಿ ಗ್ರಾಮದಿಂದ ಮೆದಿಕೆರೆ ಗ್ರಾಮದ ಕಡೆಗೆ ಹೋಗುವ ರಸ್ತೆ ಪಕ್ಕದ ಚಾನಲ್ ಏರಿಯಾ ಮೇಲಿನ ಸಾರ್ವಜನಿಕರ ಸ್ಥಳದಲ್ಲಿ ಅಕ್ರಮವಾಗಿ ಅಂದರ್ ಬಾಹರ್ ಇಸ್ಪೀಟ್ ಜೂಜಾಟ ನಡೆಯುತ್ತಿರುವ … Read more

ಮಹಿಳೆಯರು ಕಾನೂನು ಅರಿತು ಶ‍್ರೀರಕ್ಷೆ ಹೊಂದಿರಿ: ನ್ಯಾ. ರಾಜೇಶ್ವರಿ ಎನ್‍.ಹೆಗಡೆ

ಸುದ್ದಿ360 ದಾವಣಗೆರೆ ಅ.05: ಮಹಿಳೆಯರ ಸುರಕ್ಷತೆಗಾಗಿ ಸಾಕಷ್ಟು ಕಾಯ್ದೆ, ಕಾನೂನುಗಳು ಜಾರಿಯಲ್ಲಿವೆ. ಇವುಗಳ ಅರಿವು ಮಹಿಳೆಯರಿಗೆ ಶ್ರೀರಕ್ಷೆಯಿದ್ದಂತೆ. ಪ್ರತಿಯೊಬ್ಬರೂ ಇವುಗಳನ್ನು ಅರಿತುಕೊಳ್ಳಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರಾಜೇಶ್ವರಿ ಎನ್. ಹೆಗಡೆ ಹೇಳಿದರು. ನಗರದ ಕುವೆಂಪು ಕನ್ನಡ ಭವನದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಇಂದು ಗುರುವಾರ ಹಮ್ಮಿಕೊಂಡಿದ್ದ ಮಹಿಳೆಯರಿಗೆ ಕಾನೂನು ಅರಿವು ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ದಶಕಗಳ ಹಿಂದಿನ ಸಮಾಜದಲ್ಲಿ ಪ್ರತಿ ಹಂತದಲ್ಲೂ ಮಹಿಳೆಯರ ಮೇಲೆ ಶೋಷಣೆ, … Read more

ಅ.7ಕ್ಕೆ ಬಿಐಇಟಿ ಕಾಲೇಜಿನಲ್ಲಿ ವಿಶ್ವ ಅಂತರಿಕ್ಷ ಸಪ್ತಾಹ: ಇಸ್ರೊ ಬಾಹ್ಯಾಕಾಶ ಉಪಕರಣಗಳ ವಸ್ತುಪ್ರದರ್ಶನ

world-space-week-at-davangere-biet-college-exhibition-of-space-equipment-by-isro

ಸುದ್ದಿ360 ದಾವಣಗೆರೆ, ಅ.05: ನಗರದ ಬಾಪೂಜಿ ಇಂಜಿನಿಯರಿಗ್ ಮತ್ತು ತಾಂತ್ರಿಕ ಮಹಾವಿದ್ಯಾಲಯ ಹಾಗೂ ಇಸ್ರೋ (ISRO) ದ ಅಂಗಸಂಸ್ಥೆಯಾದ ಯು.ಆರ್. ರಾವ್ ಸೆಟಲೈಟ್ ಸೆಂಟರ್ (U R RAO SATELLITE CENTRE) ಸಹಭಾಗಿತ್ವದಲ್ಲಿ ಅ.7 ರಂದು ಬೆಳಗ್ಗೆ 9.15 ಕ್ಕೆ ನಗರದ ಬಿಐಇಟಿ ಕಾಲೇಜಿ (BIET COLLEGE) ನ ಎಸ್ ಎಸ್ ಮಲ್ಲಿಕಾರ್ಜುನ ಕಲ್ಚರಲ್ ಸೆಂಟರ್ ನಲ್ಲಿ ವಿಶ್ವ ಅಂತರಿಕ್ಷ ಸಪ್ತಾಹ ಹಮ್ಮಿಕೊಳ್ಳಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ.ಹೆಚ್.ಬಿ ಅರವಿಂದ್ ತಿಳಿಸಿದರು.ಅ.7ಕ್ಕೆ ಬಿಐಇಟಿ ಕಾಲೇಜಿನಲ್ಲಿ ವಿಶ್ವ ಅಂತರಿಕ್ಷ … Read more

ಅ.10 ರಿಂದ ಬೆಂಗಳೂರು ಫ್ರೀಡಂ ಪಾರ್ಕ್ ನಲ್ಲಿ ಬಿಸಿ ಊಟ ತಯಾರಕರ ಅನಿರ್ದಿಷ್ಟಾವಧಿ ಧರಣಿ

indefinite-sit-in-by-hot-meal-makers-at-bengaluru-freedom-park

ಸುದ್ದಿ360 ದಾವಣಗೆರೆ (davangere) ಅ 5: ಬಿಸಿಯೂಟ ತಯಾರಕರು ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಅಕ್ಟೋಬರ್ 10 ರಿಂದ ಬೆಂಗಳೂರು (Bengaluru) ಫ್ರೀಡಂ ಪಾರ್ಕ್ (freedom park) ನಲ್ಲಿ ಅನಿರ್ಧಿಷ್ಟಾವಧಿ ಧರಣಿ ನಡೆಸಲಿದ್ದಾರೆ ಎಂದು ಬಿಸಿಯೂಟ ತಯಾರಕರ ಫೆಡರೇಷನ್ ರಾಜ್ಯ ಸಮಿತಿ ಪ್ರಧಾನ ಕಾರ್ಯದರ್ಶಿ ಕಾಮ್ರೆಡ್ ಆವರಗೆರೆ ಚಂದ್ರು ತಿಳಿಸಿದ್ದಾರೆ. ಎಐಟಿಯುಸಿ ಸಂಯೋಜಿತ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫಡರೇಷನ್ ರಾಜ್ಯ ಸಮಿತಿ ನೇತೃತ್ವದಲ್ಲಿ ನಡೆಯುವ ಈ ಧರಣಿಯಲ್ಲಿ , ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ … Read more

error: Content is protected !!