ಉಕ್ರೇನ್ ಮೇಲಿನ ರಷ್ಯಾ ಯುದ್ಧ ನಿಲ್ಲಿಸಲು ಎಐಯುಟಿಯುಸಿ ಆಗ್ರಹ – ‘ಯುದ್ಧ ಬೇಡ ಶಾಂತಿ ಬೇಕು’

ಸುದ್ದಿ360 ದಾವಣಗೆರೆ, ಸೆ.01: ಬಂಡವಾಳಶಾಹಿ-ಸಾಮ್ರಾಜ್ಯಶಾಹಿ ಶಕ್ತಿಗಳು ಅತಿ ಹೆಚ್ಚು ಲಾಭಗಳಿಸಲು ಈ ಯುದ್ಧಗಳನ್ನು ಹುಟ್ಟುಹಾಕತ್ತಿದ್ದು, ರಷ್ಯಾ ಉಕ್ರೇನ್ ಮೇಲೆ ನಡೆಸುತ್ತಿರುವ ಯುದ್ಧ ನಿಲ್ಲಿಸಬೇಕು ಎಂದು ಒತ್ತಾಯಿಸಿ ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್ (ಎಐಯುಟಿಯುಸಿ) ಕಾರ್ಯಕರ್ತರು ಇಂದು ನಗರದ ಮಹಾತ್ಮಾಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ವಿಶ್ವ ಕಾರ್ಮಿಕ ಸಂಘಟನೆಗಳ ಒಕ್ಕೂಟ ವರ್ಲ್ಡ್ ಫೆಡರೇಷನ್ ಆಫ್ ಟ್ರೇಡ್ ಯುನಿಯನ್ (WFTU )  ಸೆಪ್ಟೆಂಬರ್ 1 ರಂದು ‘ಶಾಂತಿಗಾಗಿ ಅಂತರಾಷ್ಟ್ರೀಯ ಕ್ರಿಯಾ ದಿನ’ ಎಂದು ಆಚರಿಸಲು ಕರೆನೀಡಿದ್ದು, ಈ … Read more

ಸೆ.5,6 ಶ್ರೀ ರೇಣುಕ ಶಿವಾಚಾರ್ಯ ಮಹಾಸ್ವಾಮಿಗಳವರ 75ನೇ ಜನ್ಮವರ್ಧಂತಿ ಅಮೃತ ಮಹೋತ್ಸವ

ಸುದ್ದಿ360 ದಾವಣಗೆರೆ, ಸೆ.01: ಚನ್ನಗಿರಿ ತಾಲೂಕಿನ ಪುರಾತನ ಮಠ ಹಾಗೂ ಕೆಳದಿ ಅರಸರ ಕಾಲದಲ್ಲಿ ನಿರ್ಮಾಣವಾದ ತಾವರಕರೆ ಶ್ರೀಶಿಲಾಮಠದಲ್ಲಿ ಸೆ.5ಹಾಗೂ 6ರಂದು ಪರಮಪೂಜ್ಯ ಶ್ರೀ ರೇಣುಕ ಶಿವಾಚಾರ್ಯ ಮಹಾಸ್ವಾಮಿಗಳವರ 75ನೇ ಜನ್ಮವರ್ಧಂತಿ ಅಮೃತ ಮಹೋತ್ಸವ ಹಮ್ಮಿಕೊಳ್ಳಲಾಗಿದೆ ಎಂದು ಮಠದ ಕಿರಿಯ ಪೂಜ್ಯರಾದ ಶ್ರೀ ಅಭಿನವ ಸಿದ್ದಲಿಂಗ ಶಿವಾಚಾರ್ಯ ಸ್ವಾಮಿಜಿ ಮಾಹಿತಿ ನೀಡಿದರು. ಈ ಕುರಿತು ಇಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಶ್ರೀಗಳು ಸೆ. 5ರಂದು ಸಂಜೆ 5ಕ್ಕೆ ಬಾಳೇಹೊನ್ನೂರು ರಂಭಾಪುರಿಪೀಠದ ಶ್ರೀ ರಂಭಾಪುರಿ ವೀರಸಿಂಹಾಸನಾಧೀಶ್ವರ ಸ್ವಾಮೀಜಿ ಹಾಗೂ … Read more

ದಾವಣಗೆರೆಯಲ್ಲಿ ಸೆ.5ರಿಂದ ನಾಲ್ಕು ದಿನಗಳ ಧರ್ಮಸಮ್ಮೇಳನ – ಸಂಗೀತಯುಕ್ತ ಇಷ್ಟಲಿಂಗ ಪೂಜೆ

ಸುದ್ದಿ360 ದಾವಣಗೆರೆ, ಸೆ.01: ಶ್ರೀಶೈಲ ಜಗದ್ಗುರು ಲಿಂಗೈಕ್ಯ ವಾಗೀಶ ಪಂಡಿತಾರಾಧ್ಯ ಶಿವಾಚಾರ್ಯ ಭಗವತ್ಪಾದರ 36ನೇ ವಾರ್ಷಿಕ ಪುಣ್ಯಾರಾಧನೆ, ಶ್ರೀಶೈಲ ಜಗದ್ಗುರು ಲಿಂಗೈಕ್ಯ ಉಮಾಪತಿ ಪಂಡಿತಾರಾಧ್ಯ ಶಿವಾಚಾರ್ಯ ಭಗವತ್ಪಾದರ 11ನೇ ವರ್ಷದ ಸ್ಮರಣೋತ್ಸವ, ಶ್ರೀಶೈಲ ಜಗದ್ಗುರು ಡಾ. ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಭಗವತ್ಪಾದರ ದ್ವಾದಶ ಪೀಠಾರೋಹಣ ಮಹೋತ್ಸವ, ಜನಜಾಗೃತಿ ಧರ್ಮ ಸಮ್ಮೇಳನ ಕಾರ್ಯಕ್ರಮಗಳು ಸೆ.5, 6, 7 ಮತ್ತು 8ರಂದು ನಗರದಲ್ಲಿ ಆಯೋಜಿಸಲಾಗಿದೆ. ಈ ಕುರಿತು ಅವರಗೊಳ್ಳ ಪುರವರ್ಗ ಮಠದ ಓಂಕಾರ ಶಿವಾಚಾರ್ಯ ಸ್ವಾಮೀಜಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ … Read more

ವದಂತಿಗಳಿಗೆ ಕಿವಿಗೊಡಬೇಡಿ – ಪಲಾಯನವಾದವೇ ಇಲ್ಲ- ನೆಲದ ಕಾನೂನು ಗೌರವಿಸುತ್ತೇವೆ: ಮುರುಘಾಶ್ರೀ

ಸುದ್ದಿ360 ಚಿತ್ರದುರ್ಗ, ಆ.29: ನಾವು ಪಲಾಯನ ಮಾಡುವ ಪ್ರಶ್ನೆಯೇ ಇಲ್ಲ. ನೆಲದ ಕಾನೂನಿಗೆ ಗೌರವಿಸಿ ಸಹಕಾರ ನೀಡುವುದಾಗಿ ಮುರುಘಾ ಶ್ರೀಗಳು ಹೇಳಿದ್ದಾರೆ. ಶ್ರೀಗಳು ಬಂಧನಕ್ಕೆ ಒಳಗಾಗಿದ್ದಾರೆ ಎಂಬ ವದಂತಿಗಳ ಬೆನ್ನೆಲ್ಲೇ ಶ್ರೀಗಳು ಇಂದು ಮಧ್ಯಾಹ್ನ 1 ಗಂಟೆ ವೇಳೆಗೆ ಮಠಕ್ಕೆ ಹಿಂದಿರುಗಿದ್ದಾರೆ. ಅವರು ಹಾವೇರಿಯಿಂದ ಬಿಗಿ ಪೊಲೀಸ್ ಭದ್ರೆತೆಯಲ್ಲಿ ಮಠಕ್ಕೆ ಹಿಂತಿರುಗಿದ ನಂತರ ಮಾತನಾಡಿ, ಭಕ್ತರು ಯಾವುದೇ ರೀತಿಯ ಗಾಳಿ ಸುದ್ದಿಗೆ ಕಿವಿಗೊಡದೇ ಧೈರ್ಯ ಹಾಗೂ ಶಾಂತ ರೀತಿಯಿಂದ  ಇರುವಂತೆ ಮನವಿ ಮಾಡಿದ್ದಾರೆ. ನಮ್ಮ ವಿರುದ್ಧ ಪಿತೂರಿ … Read more

ಆಕ್ಟಿವಾ ಗಾಡಿಯ ಸೀಟಿನ ಡಿಕ್ಕಿಯಲ್ಲಿದ್ದ 8 ಲಕ್ಷ ಕಳವು – ಪೊಲೀಸ್ ಠಾಣೆಯ ಎದುರೇ ಕದ್ದ ಖದೀಮರು

ಸುದ್ದಿ360 ಮಳವಳ್ಳಿ (ಮಂಡ್ಯ) ಆ.27: ಇಲ್ಲಿನ ಡಾ.ಬಿ.ಆರ್.ಅಂಬೇಡ್ಕರ್(ಕೊಳ್ಳೇಗಾಲ) ರಸ್ತೆಯ ಉಪನೋಂದಣಾಧಿಕಾರಿ ಕಚೇರಿ ಬಳಿ ನಿಲ್ಲಿಸಿದ್ದ ಬೈಕ್ ಸೀಟಿನ ಡಿಕ್ಕಿಯಲ್ಲಿ ಇಟ್ಟಿದ್ದ 8 ಲಕ್ಷ ರೂ.ಗಳನ್ನು ದುಷ್ಕರ್ಮಿಗಳು ದೋಚಿ ಪರಾರಿಯಾಗಿದ್ದಾರೆ. ಮಳವಳ್ಳಿ ತಾಲ್ಲೂಕಿನ ಬಾಚನಹಳ್ಳಿ ಗ್ರಾಮದ ನರಸಿಂಹಸ್ವಾಮಿ ಹಣ ಕಳೆದುಕೊಂಡವರಾಗಿದ್ದಾರೆ. ಗುರುವಾರ ಜಮೀನೊಂದರ ನೋಂದಣಿ ಸಂಬಂಧ 8 ರೂ.ಲಕ್ಷವನ್ನು ತಮ್ಮ ಹೋಂಡಾ ಆಕ್ಟಿವಾ ಬೈಕ್ ನ ಸೀಟಿನ ಡಿಕ್ಕಿಯಲ್ಲಿ ಇಟ್ಟಿಕೊಂಡು ಬಂದಿದ್ದರು. ಪಟ್ಟಣದ ಉಪನೋಂದಣಾಧಿಕಾರಿಗಳ ಕಚೇರಿ ಮುಂದೆ ಬೈಕ್ ನಿಲ್ಲಿಸಿ ಕಚೇರಿ ಒಳಗೆ ಹೋಗಿ ವಾಪಾಸ್ ಬಂದು ಹಣ … Read more

ವಿದ್ಯಾರ್ಥಿ ಆತ್ಮಹತ್ಯೆ ಸುತ್ತ ಅನುಮಾನದ ಹುತ್ತ – ತನಿಖೆಗೆ ಆಗ್ರಹಿಸಿ ಎಸ್ ಎಫ್ ಐ, ದಸಂಸ ಪ್ರತಿಭಟನೆ

ಸುದ್ದಿ360 ದಾವಣಗೆರೆ ಆ. 27: ಜಿಲ್ಲೆಯ ಜಗಳೂರು ತಾಲೂಕಿನ ಮೇದನಕೆರೆ ಮುರಾರ್ಜಿ ವಸತಿ ಶಾಲೆಯ 6ನೇ ತರಗತಿ ವಿದ್ಯಾರ್ಥಿ ಸುನೀಲ್ ವಸತಿ ನಿಲಯದ ಶೌಚಾಲಯದಲ್ಲಿ ನೇಣು ಬಿಗಿದುಕೊಂಡು ಸಾವನಪ್ಪಿರುವ ಘಟನೆ ಹಲವು ಅನುಮಾನಗಳಿಗೆ ಎಡೆ ಮಾಡಿದೆ, ಈ ಘಟನೆಯ ಕುರಿತು ಸೂಕ್ತ ತನಿಖೆಯಾಗಬೇಕು ಎಂದು ಆಗ್ರಹಿಸಿ ಶುಕ್ರವಾರ ಜಗಳೂರಿನಲ್ಲಿ ಪ್ರತಿಭಟನೆ ನಡೆದಿದೆ. ಭಾರತೀಯ ವಿದ್ಯಾರ್ಥಿ ಫೆಡರೇಷನ್ (ಎಸ್ ಎಫ್ ಐ) ಹಾಗೂ ದಲಿತ ಸಂಘಟನೆ ಸಮಿತಿ  ಪ್ರತಿಭಟನೆ ನಡೆಸಿದ್ದು, ವಿದ್ಯಾರ್ಥಿಯ ಸಾವಿನ ಪ್ರಕರಣವನ್ನು ಜಿಲ್ಲಾಡಳಿತ ಸೂಕ್ತ ತನಿಖೆಗೆ … Read more

ಆಡಳಿತ ಪಕ್ಷ ಮತ್ತು ಪ್ರತಿಪಕ್ಷದ ವಿರುದ್ಧ ಎಸ್ ಡಿ ಪಿ ಐ ಆರೋಪ

ಸುದ್ದಿ360 ದಾವಣಗೆರೆ, ಆ.27: ನಾ ಖಾವೂಂಗಾ ನಾ ಖಾನೇ ದೂಂಗಾ ಎನ್ನುವ ಪ್ರಧಾನ ಮಂತ್ರಿ ಮೋದಿಯವರು, ಕರ್ನಾಟಕದಲ್ಲಿನ ಕಮೀಷನ್ ದಂಧೆಗೆ ಪರೋಕ್ಷವಾಗಿ ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ಎಸ್ ಡಿ ಪಿಐ ರಾಜ್ಯ ಅಧ್ಯಕ್ಷ ಅಬ್ದುಲ್ ಮಜೀದ್ ಆರೋಪಿಸಿದ್ದಾರೆ. ನಗರದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಗುತ್ತಿಗೆದಾರರು ಪ್ರಧಾನಿಯವರಲ್ಲಿ ತಮ್ಮ ಅಳಲನ್ನು ತೋಡಿಕೊಂಡರೂ ಸ್ಪಂದಿಸದ ಪ್ರಧಾನಿಯವರ ಕುಮ್ಮಕ್ಕು 40 ಪರ್ಸೆಂಟ್ ಗಿಂತಲೂ ಹೆಚ್ಚುತ್ತಿರುವ ಕಮೀಷನ್ ವ್ಯವಹಾರಕ್ಕೆ ಕುಮ್ಮಕ್ಕು ಇರುವುದಾಗಿ ಆರೋಪಿಸುವ ಸ್ಥಿತಿ ಬಂದೊದಗಿದೆ ಎಂದು ಅವರು ಹೇಳಿದರು. ಸರ್ಕಾರಿ ಉದ್ಯೋಗಗಳಲ್ಲಿನ … Read more

ಸಮಗ್ರ ಕ್ಯಾನ್ಸರ್ ಚಿಕಿತ್ಸೆ ಈಗ ದಾವಣಗೆರೆಯಲ್ಲಿಯೇ ಲಭ್ಯ

ಸುದ್ದಿ360 ದಾವಣಗೆರೆ, ಆ.27: ವಿಶ್ವದಲ್ಲೇ ಅತ್ಯುತ್ತಮವಾಗಿರುವ ರೆಡಿಯೋಥೆರಪಿ ಚಿಕಿತ್ಸೆ ಈಗ ಮಧ್ಯ ಕರ್ನಾಟಕದಲ್ಲಿ ಲಭ್ಯವಿರುವುದಾಗಿ  ದಾವಣಗೆರೆಯ ವಿಶ್ವಾರಾಧ್ಯ ಕ್ಯಾನ್ಸರ್ ಆಸ್ಪತ್ರೆಯ ಕನ್ಸಲ್ಟಂಟ್ ಹೆಡ್ ಡಾ. ಜಗದೀಶ ತುಬಚಿ ಹೇಳಿದರು. ನಗರ ಹೊರವಲಯದ ಬಾಡಾ ಕ್ರಾಸ್ ಬಳಿ ಇರುವ ವಿಶ್ವಾರಾಧ್ಯ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ನೂತನ ಯಂತ್ರ ಹಾಗೂ ಅತ್ಯಾಧುನಿಕ ಚಿಕಿತ್ಸಾ ಸೌಲಭ್ಯಗಳ ಕುರಿತು ಮಾಹಿತಿ ನೀಡಿದ ಅವರು, ಈ ಮೊದಲು ಕ್ಯಾನ್ಸರ್ ರೆಡಿಯೋಥೆರಪಿ ಚಿಕಿತ್ಸೆ ಪಡೆಯಲು ರಾಜ್ಯದ ಜನ ಬೆಂಗಳೂರು, ಚೆನ್ನೈ, ಹೈದರಾಬಾದ್‌ಗೆ ಹೋಗಬೇಕಿತ್ತು. … Read more

ಮುರುಘಾ ಶ್ರೀಗಳ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ: ಫೋಕ್ಸೊ ಕೇಸ್ ದಾಖಲು – ಷಡ್ಯಂತ್ರ?

ಸುದ್ದಿ360 ಚಿತ್ರದುರ್ಗ, ಆ.27: ಚಿತ್ರದುರ್ಗದ ಪ್ರತಿಷ್ಠಿತ ಮುರುಘಾ ಮಠದ ಪೀಠಾಧಿಪತಿ ಶ್ರೀ ಮುರುಘಾ ಶರಣರು ಸೇರಿದಂತೆ ಐದು ಜನರ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ರಾಜ್ಯದಲ್ಲಿ ಸಂಚಲನ ಮೂಡಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಫೋಕ್ಸೋ ಕಾಯಿದೆ ಅಡಿಯಲ್ಲಿ ದೂರು ದಾಖಲಾಗಿದ್ದು, ಮೈಸೂರು ಒಡನಾಡಿ ಸಂಸ್ಥೆ ಮಾಡಿದ್ದ ಆರೋಪದ ಹಿನ್ನೆಲೆಯಲ್ಲಿ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯು ಮೈಸೂರಿನ ನಜರಾಬಾದ್ ಠಾಣೆಯಲ್ಲಿ ದೂರು ದಾಖಲಿಸಿದೆ. ಮಠವೇ ನಡೆಸುತ್ತಿರುವ ಪ್ರೌಢಶಾಲೆಯ ಹಾಸ್ಟೆಲ್‌ನಲ್ಲಿರುವ ವಿದ್ಯಾರ್ಥಿನಿಯರ ಮೇಲೆ ಸ್ವಾಮೀಜಿ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂಬ ಆರೋಪವಿದ್ದು, … Read more

ಚಲಿಸುತ್ತಿದ್ದ ಬೈಕ್ ಸವಾರನ ಮೇಲೆ ಮಾರಕಾಸ್ತ್ರ ಬೀಸಿ ಕೊಲೆ

ಸುದ್ದಿ360 ಬೆಳಗಾವಿ, ಆ.26: ಬೈಕ್ ಮೇಲೆ ಹೋಗುತ್ತಿದ್ದವನ ಕತ್ತು ಕತ್ತರಿಸಿ ಕೊಲೆ ಮಾಡಿರುವ ಭೀಕರ ಘಟನೆ ಶುಕ್ರವಾರ ವರದಿಯಾಗಿದೆ. ಸವದತ್ತಿ ತಾಲ್ಲೂಕಿನ ಮುನ್ನವಳ್ಳಿ ಗ್ರಾಮದ ಗದಗಯ್ಯ ಹಿರೇಮಠ (40) ಕೊಲೆಯಾದ ವ್ಯಕ್ತಿಯಾಗಿದ್ದಾನೆ. ಗದಗಯ್ಯ ತಮ್ಮ ಬೈಕ್ ಮೇಲೆ ಹಲಗಾ ಮಾರ್ಗವಾಗಿ ಹೊರಟಿದ್ದ ವೇಳೆ ಹಿಂಬದಿಯಿಂದ ಬೈಕ್ ಮೇಲೆ ಬಂದ  ಆರೋಪಿಗಳು ಈ ದುಶ್ಕೃತ್ಯ ಎಸಗಿದ್ದಾರೆ. ಬೈಕ್ ಚಲನೆಯಲ್ಲಿದ್ದಾಗಲೇ ಗದಗಯ್ಯನ ಕುತ್ತಿಗೆಯ ಭಾಗಕ್ಕೆ ಮಾರಕಾಸ್ತ್ರ ಬೀಸಿದ್ದು, ಕುತ್ತಿಗೆಯ ಬಹುಪಾಲು ತುಂಡರಿಸಿದೆ. ಇದರಿಂದ ಬೈಕ್ ಸಮೇತ ಬಿದ್ದ ಗದಗಯ್ಯ ಸ್ಥಳದಲ್ಲೇ … Read more

error: Content is protected !!