ಹರ್ ಘರ್ ತಿರಂಗ: ರಾಜ್ಯದಲ್ಲಿ 1 ಕೋಟಿ ಮನೆಗಳಲ್ಲಿ ತ್ರಿವರ್ಣ ಧ್ವಜ ಹಾರಿಸುವ ಗುರಿ

ಸುದ್ದಿ360 ಬೆಂಗಳೂರು, ಆ.08: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಹಮ್ಮಿಕೊಳ್ಳಲಾಗಿರುವ ಮನೆ ಮನೆಯಲ್ಲಿ ರಾಷ್ಟ್ರ ಧ್ವಜ ಹಾರಿಸುವ ‘ಹರ್ ಘರ್ ತಿರಂಗ’ ಅಭಿಯಾನವನ್ನು ಯಶಸ್ವಿಗೊಳಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ಅವರು ಇಂದು ಈ ಅಭಿಯಾನದ ಸಿದ್ಧತೆಯನ್ನು ಪರಿಶೀಲಿಸಿ ಮಾತನಾಡಿದರು.  ಈ ಕಾರ್ಯಕ್ರಮವನ್ನು ಕೇವಲ ಕಾಟಾಚಾರಕ್ಕೆ ಮಾಡದೆ, ದೇಶದ ಮೇಲಿನ ಅಭಿಮಾನ ಪ್ರೀತಿಯಿಂದ ಆಯೋಜಿಸಬೇಕು. ಇದನ್ನು ಅರ್ಥಪೂರ್ಣವಾಗಿ ಆಚರಿಸಬೇಕೆಂಬ ತುಡಿತದೊಂದಿಗೆ ಕಾರ್ಯನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು. ರಾಜ್ಯದಲ್ಲಿ ಸುಮಾರು 1 ಕೋಟಿಗೂ ಹೆಚ್ಚು … Read more

ದಾವಣಗೆರೆ: ಶ್ರೀ ಅರಕೇರಮ್ಮ ದೇವಿ ದೇವಸ್ಥಾನ ಕಳಸಾರೋಹಣ

ಸುದ್ದಿ360 ದಾವಣಗೆರೆ, ಆ.08: ನಗರದ  ಕುರುಬರ ಪೇಟೆಯಲ್ಲಿರುವ ಶ್ರೀ ಅರಕೇರಮ್ಮ ದೇವಿ ದೇವಸ್ಥಾನದಲ್ಲಿ ಆ.12 ರಂದು ಶ್ರೀ ಅರಕೇರಮ್ಮದೇವಿ ದೇವಸ್ಥಾನ ಕಳಸಾರೋಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಆ. 11 ರ ಗುರುವಾರ, ರಾತ್ರಿ 7-00 ರಿಂದ ಪ್ರಾಯಶ್ಚಿತ ಹೋಮ, ಗಣಹೋಮ, ವಾಸ್ತುಶಾಂತಿ, ನವಗ್ರಹ ಪೂಜೆಗಳನ್ನು ನೆರವೇರಿಸಲಾಗುವುದು. ಆ. 12 ರ ಶುಕ್ರವಾರ, ಬೆಳಗ್ಗೆ 11-30 ರಿಂದ 12-30 ರವರೆಗೆ ಸಲ್ಲುವ ಅಂಜನ್ ಲಗ್ನದ ಶುಭ ಮುಹೂರ್ತದಲ್ಲಿ ಕಳಸಾರೋಣ ನೆರವೇರಿಸಲಾಗುವುದು. ಈ ಕಾರ್ಯಕ್ರಮದ ಸಾನಿಧ್ಯವನ್ನು ಹದಡಿ ಚಂದ್ರಗಿರಿ … Read more

ದಾವಣಗೆರೆ: ಇಸ್ಫೀಟ್ ಜೂಜಾಟದ ಮೇಲೆ ಪೊಲೀಸ್ ದಾಳಿ 14 ಜನರ ಬಂಧನ

ಸುದ್ದಿ360 ದಾವಣಗೆರೆ, ಆ.08: ಜಿಲ್ಲೆಯ ಮಾಯಕೊಂಡ ಪೊಲೀಸ್ ಠಾಣೆ ವ್ಯಾಪ್ತಿಯ ಬಾಡ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಿಂಭಾಗದ ಸಾರ್ವಜನಿಕ ಸ್ಥಳದಲ್ಲಿ ಭಾನುವಾರ (ಆ.7) ಕಾನೂನು ಬಾಹಿರವಾಗಿ ಇಸ್ಪೀಟ್ ಜೂಜಾಟ ಆಡುತ್ತಿದ್ದವರ ಮೇಲೆ ದಾವಣಗೆರೆ ಗ್ರಾಮಾಂತರ ಉಪ ವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕರಾದ ಕನಿಕಾ ಸಿಕ್ರಿವಾಲ್ ರವರ ನೇತೃತ್ವದ  ಪೊಲೀಸ್ ತಂಡ ದಾಳಿನಡೆಸಿದೆ. ಕಾನೂನು ಬಾಹಿರವಾಗಿ ಜೂಜಾಟದಲ್ಲಿ ತೊಡಗಿದ್ದ 14 ಜನರನ್ನು ಬಂಧಿಸಿದ್ದು, ಆರೋಪಿತರಿಂದ ಜೂಜಾಟದಲ್ಲಿ ತೊಡಗಿಸಿದ್ದ ಒಟ್ಟು  39,960 ರೂ.ಗಳನ್ನು ವಶಪಡಿಸಿಕೊಳ್ಳಲಾಗಿರುತ್ತದೆ. ಈ ಸಂಬಂಧ … Read more

ಜಿಎಂಐಟಿ: ದಿಶಾ ಸಮಾರೋಪ – ಅಂತಿಮ ಎಂಬಿಎ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ

ಸುದ್ದಿ360 ದಾವಣಗೆರೆ, ಆ.07:  ಜಿಎಂಐಟಿ ಎಂಬಿಎ ವಿಭಾಗದ ಫೋರಮ್ ದಿಶಾ ಸಮಾರೋಪ ಸಮಾರಂಭ ಮತ್ತು ಅಂತಿಮ ವರ್ಷದ ಎಂಬಿಎ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ಶನಿವಾರ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ವಿವಿಧ ಸಾಂಸ್ಕೃತಿಕ ಉಡುಗೆ-ತೊಡುಗೆಗಳೊಂದಿಗೆ ಉತ್ಸಾಹದಿಂದ ಪಾಲ್ಗೊಂಡು ಯಶಸ್ವಿಗೊಳಿಸಿದರು. ಸಮಾರಂಭದಲ್ಲಿ ವಿಭಾಗದ ನಿರ್ದೇಶಕರಾದ ಡಾ ಬಕ್ಕಪ್ಪ ಮಾತನಾಡಿ, ನಿರ್ವಹಣಾ ಕೌಶಲ್ಯ ಜೀವನದಲ್ಲಿ ಅತಿ ಮುಖ್ಯ ಹಾಗೂ ಅದನ್ನು ಅಳವಡಿಸಿಕೊಂಡು ಮುಂದಿನ ಭವಿಷ್ಯವನ್ನು ರೂಪಿಸಿಕೊಳ್ಳುವಲ್ಲಿ ಯಶಸ್ವಿಯಾಗಬೇಕೆಂದು ಕರೆಕೊಟ್ಟರು. ವಿಭಾಗದ ಮುಖ್ಯಸ್ಥರಾದ ಡಾ ಮಂಜುನಾಥ್ ಬಿ ಆರ್ ಮಾತನಾಡಿ, ಕಲ್ಲು … Read more

ಅರ್ಹರ ಮುಡಿ ಏರಿದ ಎಚ್‌ ಡಿ ದೇವೇಗೌಡ ಪ್ರಶಸ್ತಿ: ಮಾಜಿ ಸಚಿವ ಬಂಡೆಪ್ಪ ಕಾಶಂಪುರ್

ಸುದ್ದಿ360 ದಾವಣಗೆರೆ, ಆ.07:  ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಹೆಸರಿನಲ್ಲಿ ಅರ್ಹ ಸಾಧಕರಿಗೆ ಪ್ರಶಸ್ತಿ ನೀಡುತ್ತಿರುವುದು ಸಂತಸದ ವಿಷಯ ಎಂದು ಮಾಜಿ ಸಚಿವ ಬಂಡೆಪ್ಪ ಕಾಶಂಪುರ್ ಹೇಳಿದರು. ದಾವಣಗೆರೆಯ ಕುವೆಂಪು ಕನ್ನಡ ಭವನದಲ್ಲಿ ಇಂದು ಶ್ರೀ ಎಚ್.ಡಿ. ದೇವೇಗೌಡ ಪ್ರತಿಷ್ಠಾನದಿಂದ ಹಮ್ಮಿಕೊಂಡಿದ್ದ ‘ಎಚ್.ಡಿ. ದೇವೇಗೌಡ ಪ್ರಶಸ್ತಿ ಪ್ರದಾನ’ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಪ್ರಸ್ತುತ ಪ್ರಶಸ್ತಿಗೆ ಆಯ್ಕೆಯಾಗಿರುವ ಜನಪದ ಕ್ಷೇತ್ರದ ಶ್ರೇಷ್ಠ ಸಾಧಕ ಸಿದ್ಧನಮಠದ ಯುಗಧರ್ಮ ರಾಮಣ್ಣ, ಕೋವಿಡ್ ಸಂದರ್ಭದಲ್ಲಿ ಜನ ಮೆಚ್ಚುವಂತೆ ಸೇವೆ ಸಲ್ಲಿಸಿದ ದಾವಣಗೆರೆ ಜಿಲ್ಲಾ … Read more

ನೈಜ ಘಟನೆಯಾಧಾರಿತ ‘ತಾಜ್ ಮಹಲ್-2’ ಚಿತ್ರ ಸೆ.2ರಂದು ತೆರೆಗೆ

ಸುದ್ದಿ360 ದಾವಣಗೆರೆ, ಆ.07: ನೈಜ ಘಟನೆ ಆಧಾರಿತ ತಾಜ್ ಮಹಲ್-2 ಕನ್ನಡ ಚಲನಚಿತ್ರ ಸೆ.2ರಂದು ರಾಜ್ಯದ ಇನ್ನೂರಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ತೆರೆ ಕಾಣಲಿದೆ ಎಂದು ಚಿತ್ರದ ನಟ, ನಿರ್ದೇಶಕ ದೇವರಾಜ್ ಕುಮಾರ್ ತಿಳಿಸಿದರು. ನಗರದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ತಾಜ್ ಮಹಲ್ 2  ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದ ನೈಜ ಘಟನೆ ಆಧರಿಸಿದ ಕಥೆ ಹೊಂದಿರುವ ಚಿತ್ರವಾಗಿದೆ. ಚಿತ್ರದಲ್ಲಿ ನಾನೇ ನಾಯಕ ನಾಗಿ ಅಭಿನಯಿಸಬೇಕು ಎಂದು ನಿರ್ಧರಿಸಿ ಪ್ರಥಮ ಬಾರಿ ನಾಯಕನಾಗಿ ಅಭಿನಯ ಮಾಡಿರುವೆ. … Read more

ಆ.9ಕ್ಕೆ ಸವಿತಾ ಸಮಾಜದಿಂದ ಪ್ರತಿಭಾ ಪುರಸ್ಕಾರ

ಸುದ್ದಿ360 ದಾವಣಗೆರೆ, ಆ.07: ನಗರದ ಸವಿತಾ ಕ್ಷೇಮಾಭಿವೃದ್ಧಿ ಸಂಘದಿಂದ ಸವಿತಾ ಸಮಾಜದ ಎಸ್ಸೆಸ್ಸೆಲ್ಸಿ, ಪಿಯುಸಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಆ.9ರಂದು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಸಲಾಗಿದೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಸಂಘದ ಉಪಾಧ್ಯಕ್ಷ ಪಿ.ಬಿ.ವೆಂಕಟಾಚಲಪತಿ ಮಾತನಾಡಿ, ಅಂದು ಬೆಳಿಗ್ಗೆ 10.30ಕ್ಕೆ ನಗರದ ರೋಟರಿ ಸಭಾಂಗಣದಲ್ಲಿ 9ನೇ ವರ್ಷದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಲಿದ್ದು, ಸಂಘದ ಅಧ್ಯಕ್ಷ ಪಿ.ಜಿ.ನಾಗರಾಜ್ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಕರ್ನಾಟಕ ನಾಟಕ ಅಕಾಡೆಮಿ ಅಧ್ಯಕ್ಷ ಭೀಮಸೇನ, ಆಕಾಶವಾಣಿ ಕಲಾವಿದ ಎನ್.ಕೆ.ಶ್ರೀನಿವಾಸ್, ಎಸ್.ಪ್ರಕಾಶ್, … Read more

ಎರಡು ಹೆಚ್ಚುವರಿ ಎಸ್.ಡಿ.ಆರ್.ಎಫ್. ತಂಡ ರಚನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ

ಸುದ್ದಿ360 ಬೆಂಗಳೂರು, ಆ. 06: ರಾಜ್ಯದಲ್ಲಿ ಪ್ರಕೃತಿ ವಿಕೋಪ ಸಂದರ್ಭದಲ್ಲಿ ರಕ್ಷಣಾ ಕಾರ್ಯಾಚರಣೆ ವ್ಯವಸ್ಥೆಯನ್ನು ಬಲಪಡಿಸಲು ಇನ್ನೂ ಎರಡು ಎಸ್ ಡಿ ಆರ್ ಎಫ್ ತಂಡಗಳನ್ನು ರಚಿಸಲು ಕೂಡಲೇ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ಅವರು ಇಂದು ಪ್ರವಾಹ ಪೀಡಿತ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಸಚಿವರು ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿದರು. ಈ ಸಂದರ್ಭದಲ್ಲಿ ವಿವಿಧ ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ, ಭೂಕುಸಿತ, ಬೆಳೆಹಾನಿ ಮೊದಲಾದ ವಿಷಯಗಳ ಕುರಿತು ಮಾಹಿತಿ ಪಡೆದ … Read more

ಕೇಂದ್ರ ನೀತಿ ಆಯೋಗ ಮಾದರಿಯಲ್ಲಿ ಕರ್ನಾಟಕ ರಾಜ್ಯ ಪರಿವರ್ತನಾ  ಸಂಸ್ಥೆ ರಚನೆಗೆ ಆದೇಶ

ಸುದ್ದಿ360 ಬೆಂಗಳೂರು, ಆ. 06:  ಕೇಂದ್ರ ನೀತಿ ಆಯೋಗದ ಮಾದರಿಯಂತೆ ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗವನ್ನು  ಕರ್ನಾಟಕ ರಾಜ್ಯ ಪರಿವರ್ತನಾ  ಸಂಸ್ಥೆ ಎಂದು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ರಚಿಸಿ ರಾಜ್ಯ ಸರ್ಕಾರ ಇಂದು ಆದೇಶ ಹೊರಡಿಸಿದೆ. ನವ ಭಾರತಕ್ಕಾಗಿ ನವ ಕರ್ನಾಟಕವನ್ನು ನಿರ್ಮಿಸುವ ಉದ್ದೇಶದಿಂದ ರಚಿಸಲಾಗಿರುವ ಸಂಸ್ಥೆಗೆ  ಸರ್ಕಾರದ ಯೋಜನೆ ಹಾಗೂ ಸಂಬಂಧಿಸಿದ ವಿಷಯಗಳಲ್ಲಿ  ಪರಿಣಿತರಾದವರನ್ನು  ಸರ್ಕಾರದಿಂದ ಉಪಾಧ್ಯಕ್ಷರನ್ನಾಗಿ  ನಾಮನಿರ್ದೇಶನ ಮಾಡಲಾಗುವುದು. ಸಂಸ್ಥೆಯನ್ನು ಪರಿಣಾಮಕಾರಿಯಾಗಿ ನಡೆಸಲು ಹಾಗೂ ಗುರಿಗಳನ್ನು ಸಾಧಿಸಲು ವಾರ್ಷಿಕ 150 ಕೋಟಿ ರೂ.ಗಳನ್ನು  … Read more

ದುರಾಡಳಿತದಿಂದ ಬೇಸತ್ತ ಜನ ಅಮೃತಮಹೋತ್ಸವಕ್ಕೆ ಕಿತ್ತೆದ್ದು ಬಂದರು

ಸಿದ್ಧರಾಮಯ್ಯ ಮೇಲೆ ಅಭಿಮಾನ ಜಾಸ್ತಿ : ಎಸ್‌ಎಸ್ ಎಂ ಸುದ್ದಿ360 ದಾವಣಗೆರೆ ಆ.06: ಯಾವುದೇ  ಹಗರಣ, ಕಪ್ಪುಚುಕ್ಕೆ ಇಲ್ಲದೆ, ನುಡಿದಂತೆ ನಡೆದ, ಸ್ವಚ್ಛ  ಹಾಗೂ ಜನಪರ ಆಡಳಿತ ನೀಡಿದ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಸಹಜವಾಗಿ ಅಭಿಮಾನಿಗಳು ಜಾಸ್ತಿ ಇರುವುದು ಒಂದೆಡೆಯಾದರೆ, ರಾಜ್ಯ ಹಾಗೂ ಕೇಂದ್ರದ ಬಿಜೆಪಿ ಸರಕಾದ ದುರಾಡಳಿತದಿಂದ ಬೇಸತ್ತ ಜನರು ಕಿತ್ತೆದ್ದು ಬಂದು ಸಮಾವೇಶದಲ್ಲಿ ಪಾಲ್ಗೊಂಡರು ಎಂದು ಸಮಾವೇಶದ ಸಂಘಟಕರಲ್ಲಿ ಓರ್ವರಾದ ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಹೇಳಿದ್ದಾರೆ. ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, … Read more

error: Content is protected !!