ಕೇಂದ್ರ ನೀತಿ ಆಯೋಗ ಮಾದರಿಯಲ್ಲಿ ಕರ್ನಾಟಕ ರಾಜ್ಯ ಪರಿವರ್ತನಾ  ಸಂಸ್ಥೆ ರಚನೆಗೆ ಆದೇಶ

ಸುದ್ದಿ360 ಬೆಂಗಳೂರು, ಆ. 06:  ಕೇಂದ್ರ ನೀತಿ ಆಯೋಗದ ಮಾದರಿಯಂತೆ ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗವನ್ನು  ಕರ್ನಾಟಕ ರಾಜ್ಯ ಪರಿವರ್ತನಾ  ಸಂಸ್ಥೆ ಎಂದು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ರಚಿಸಿ ರಾಜ್ಯ ಸರ್ಕಾರ ಇಂದು ಆದೇಶ ಹೊರಡಿಸಿದೆ. ನವ ಭಾರತಕ್ಕಾಗಿ ನವ ಕರ್ನಾಟಕವನ್ನು ನಿರ್ಮಿಸುವ ಉದ್ದೇಶದಿಂದ ರಚಿಸಲಾಗಿರುವ ಸಂಸ್ಥೆಗೆ  ಸರ್ಕಾರದ ಯೋಜನೆ ಹಾಗೂ ಸಂಬಂಧಿಸಿದ ವಿಷಯಗಳಲ್ಲಿ  ಪರಿಣಿತರಾದವರನ್ನು  ಸರ್ಕಾರದಿಂದ ಉಪಾಧ್ಯಕ್ಷರನ್ನಾಗಿ  ನಾಮನಿರ್ದೇಶನ ಮಾಡಲಾಗುವುದು. ಸಂಸ್ಥೆಯನ್ನು ಪರಿಣಾಮಕಾರಿಯಾಗಿ ನಡೆಸಲು ಹಾಗೂ ಗುರಿಗಳನ್ನು ಸಾಧಿಸಲು ವಾರ್ಷಿಕ 150 ಕೋಟಿ ರೂ.ಗಳನ್ನು  … Read more

ದುರಾಡಳಿತದಿಂದ ಬೇಸತ್ತ ಜನ ಅಮೃತಮಹೋತ್ಸವಕ್ಕೆ ಕಿತ್ತೆದ್ದು ಬಂದರು

ಸಿದ್ಧರಾಮಯ್ಯ ಮೇಲೆ ಅಭಿಮಾನ ಜಾಸ್ತಿ : ಎಸ್‌ಎಸ್ ಎಂ ಸುದ್ದಿ360 ದಾವಣಗೆರೆ ಆ.06: ಯಾವುದೇ  ಹಗರಣ, ಕಪ್ಪುಚುಕ್ಕೆ ಇಲ್ಲದೆ, ನುಡಿದಂತೆ ನಡೆದ, ಸ್ವಚ್ಛ  ಹಾಗೂ ಜನಪರ ಆಡಳಿತ ನೀಡಿದ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಸಹಜವಾಗಿ ಅಭಿಮಾನಿಗಳು ಜಾಸ್ತಿ ಇರುವುದು ಒಂದೆಡೆಯಾದರೆ, ರಾಜ್ಯ ಹಾಗೂ ಕೇಂದ್ರದ ಬಿಜೆಪಿ ಸರಕಾದ ದುರಾಡಳಿತದಿಂದ ಬೇಸತ್ತ ಜನರು ಕಿತ್ತೆದ್ದು ಬಂದು ಸಮಾವೇಶದಲ್ಲಿ ಪಾಲ್ಗೊಂಡರು ಎಂದು ಸಮಾವೇಶದ ಸಂಘಟಕರಲ್ಲಿ ಓರ್ವರಾದ ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಹೇಳಿದ್ದಾರೆ. ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, … Read more

ಸಮಾಜದ ತಲ್ಲಣಗಳಿಗೆ ಕಲೆಯ ಪ್ರತಿಸ್ಪಂದನೆ ಇರಲಿ

ಕಲಾ ವಿದ್ಯಾರ್ಥಿಗಳಿಗೆ ಲಲಿತಕಲಾ ಅಕಾಡೆಮಿ ಅಧ್ಯಕ್ಷ ಡಿ. ಮಹೇಂದ್ರ ಕಿವಿಮಾತು ಸುದ್ದಿ360, ದಾವಣಗೆರೆ ಆ.06: ಕಲಾವಿದನಾದವನು ಸಾಮಾಜಿಕ ಬದ್ಧತೆಯನ್ನು ಹೊಂದಿರಬೇಕು. ಸಮಾಜದಲ್ಲಿ ಘಟಿಸುವ ತಲ್ಲಣಗಳಿಗೆ ಚಿತ್ರಕಲಾವಿದನಾದವನು ರಸ್ತೆಗಿಳಿಯುವುದಕ್ಕಿಂತ ತನ್ನ ಕಲೆಯ ಮೂಲಕ ಪ್ರತಿಸ್ಪಂದನೆಯನ್ನು ತೋರಬೇಕು ಎಂಬುದಾಗಿ ಲಲಿತಕಲಾ ಅಕಾಡೆಮಿ ಅಧ್ಯಕ್ಷರಾದ ಡಿ. ಮಹೇಂದ್ರ ಕಲಾ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ನಗರದ ಪ್ರೌಢಶಾಲಾ ಮೈದಾನದಲ್ಲಿರುವ ಜಿಲ್ಲಾ ಶಿಕ್ಷಣ ತರಬೇತಿ ಕೇಂದ್ರದ (ಡಯಟ್) ಸಭಾಂಗಣದಲ್ಲಿ ಕರ್ನಾಟಕ ಲಲಿತಕಲಾ ಅಕಾಡೆಮಿ ವತಿಯಿಂದ ಸಂಸ್ಕಾರ ಭಾರತಿ ದಾವಣಗೆರೆ ಜಿಲ್ಲಾ ಶಾಖೆ ಸಹಯೋಗದಲ್ಲಿ ಎರಡು … Read more

ದಾವಣಗೆರೆ: ಅತಿವೃಷ್ಠಿ ಅವಘಡಗಳಿಗೆ ಶೀಘ್ರ ಕಾರ್ಯೋನ್ಮುಖರಾಗುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ಸುದ್ದಿ360, ದಾವಣಗೆರೆ ಆ.06: ರಾಜ್ಯದಾದ್ಯಂತ ಸುರಿಯುತ್ತಿರುವ ಭಾರಿ ಪ್ರಮಾಣದ ಮಳೆಯಿಂದಾಗಿ ವಿದ್ಯುತ್ ತಂತಿ ಕಂಬಗಳು ಮುರಿದು ಬಿದ್ದಿರುವ ಪ್ರಕರಣಗಳು ವರದಿಯಾಗುತ್ತಿದ್ದು, ಕೂಡಲೆ ಅವುಗಳನ್ನು ತೆರವುಗೊಳಿಸಿ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು. ಶನಿವಾರ ನಡೆದ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆಗಿನ ವಿಡಿಯೋ ಕಾನ್ಫರೆನ್ಸ್‍ನಲ್ಲಿ ಮಾತನಾಡಿದ ಅವರು, ವಿದ್ಯುತ್ ಕಂಬಗಳಿಂದಾಗಿ ಅತೀ ಹೆಚ್ಚಿನ ಅನಾಹುತಗಳು ಸಂಭವಿಸುತ್ತಿದ್ದು ಇವುಗಳ ತೆರವಿಗೆ ಯಾರು ಸರಿಯಾಗಿ ಸ್ಪಂದಿಸುತ್ತಿಲ್ಲ, ಹಾಗಾಗಿ ಆದ್ಯತೆಯ ಮೇರೆಗೆ ಕಂಬಗಳನ್ನು ಸ್ಥಳಾಂತರಿಸುವುದು ಅಥವಾ ಹೊಸ ವಿದ್ಯುತ್ ಕಂಬಗಳನ್ನು … Read more

ದಾವಣಗೆರೆ: ಜನಸಾಮಾನ್ಯರ ಸಮಸ್ಯೆ ಚರ್ಚಿಸದ ‘ಸಾಮಾನ್ಯ’ ಸಭೆ

ಸುದ್ದಿ360 ದಾವಣಗೆರೆ ಆ.6: ಜನಸಾಮಾನ್ಯರ ಸಮಸ್ಯೆ ಚರ್ಚಿಸಲು ಮಹಾನಗರ ಪಾಲಿಕೆಯಲ್ಲಿ ಸಾಮಾನ್ಯ ಸಭೆಯೇ ನಡೆಯುತ್ತಿಲ್ಲ. ಬರಿಯ ಹಾರಿಕೆ ಉತ್ತರ ನೀಡಿ ಸಾಮಾನ್ಯ ಸಭೆ ಮುಂದೂಡಲಾಗುತ್ತಿದೆ ಎಂಬ ವಿಪಕ್ಷ ನಾಯಕರ ಆರೋಪದ ಬೆನ್ನಲ್ಲೇ ಇಂದು ಸಾಮಾನ್ಯ ಸಭೆ ನಡೆದಿದೆ. ಆರೂವರೆ ತಿಂಗಳ ಬಳಿಕ ನಡೆದ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಜನಸಾಮಾನ್ಯರ ಯಾವುದೇ ಗಂಭೀರ ಸಮಸ್ಯೆಗಳು ಚರ್ಚೆಗೆ ಬರದೆ ಮೊದಲಾರ್ಧ ಕೇವಲ ವಾದ ವಿವಾದದಲ್ಲೇ ಅಂತ್ಯ ಕಂಡಿತು. ಸಭೆ  ಆರಂಭವಾಗುತ್ತಿದ್ದಂತೆ ನಡಾವಳಿಯ ಮೊದಲ ವಿಷಯ ‘ಹಿಂದಿನ ಸಭೆಯ ನಡಾವಳಿಗಳನ್ನು … Read more

ದಾವಣಗೆರೆ: ಸಂತಪೌಲರ ವಿದ್ಯಾಸಂಸ್ಥೆ ಅಮೃತ ಮಹೋತ್ಸವ – ಪರಿಸರ ಜಾಗೃತಿ ಜಾಥಾ

ಕಲಾತಂಡಗಳೊಂದಿಗೆ ‘ಪರಿಸರದಡೆಗೆ ನಮ್ಮ ನಡಿಗೆ’ ಜಾಗೃತಿ ಜಾಥಾ ಸುದ್ದಿ360 ದಾವಣಗೆರೆ, ಆ.06: ನಗರದಲ್ಲಿ 1946ರಲ್ಲಿ ಆರಂಭವಾದ ಸಂತಪೌಲರ ವಿದ್ಯಾಸಂಸ್ಥೆ ಇದೀಗ ಅಮೃತ ಮಹೋತ್ಸವ ಆಚರಿಸಿಕೊಳ್ಳುತ್ತಿದ್ದು, ಈ ಹಿನ್ನೆಲೆಯಲ್ಲಿ ಇಂದು ಪರಿಸರದಡೆಗೆ ನಮ್ಮ ನಡಿಗೆ ಹೆಸರಿನಲ್ಲಿ ಶಾಲೆಯ ಹಳೇ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರಾದ ದಿನೇಶ್ ಕೆ.ಶೆಟ್ಟಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಜಾಗೃತಿ ಜಾಥಾ ನಡೆಸಿದರು. ಹಳೆಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ದಿನೇಶ್ ಕೆ ಶೆಟ್ಟಿ ಯವರು ಪಾರಿವಾಳ ಹಾರಿಬಿಡುವ ಮುಖಾಂತರ ಜಾಥಾವನ್ನು ಉದ್ಘಾಟಿಸಿದರು. ಹಿರಿಯ ಲೆಕ್ಕಾಧಿಕಾರಿಗಳು ಉದ್ಯಮಿಗಳಾದ ಅಥಣಿ ವೀರಣ್ಣನವರು … Read more

ಬಸವರಾಜ ಬೊಮ್ಮಾಯಿಯವರಿಗೆ ಕೋವಿಡ್ ದೃಢ –ದೆಹಲಿ ಪ್ರವಾಸ ರದ್ದು

shimoga-riots-were-the-result-of-the-governments-appeasement-policy-basavaraj-bommai

ಸುದ್ದಿ360 ಬೆಂಗಳೂರು, ಆ.06: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಕೋವಿಡ್-19 ಸೋಂಕಿಗೆ ಒಳಗಾಗಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಮುಖ್ಯಮಂತ್ರಿಗಳು, ಕೋವಿಡ್-19 ಸೋಂಕು ದೃಢಪಟ್ಟಿರುವುದಾಗಿ ತಿಳಿಸಿದ್ದು, ಆರೋಗ್ಯವಾಗಿ ಇದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳುವಂತೆ ತಿಳಿಸಿದ್ದಾರೆ. ಹಾಗೂ ಅವರ ದೆಹಲಿಯ ಪ್ರವಾಸ ರದ್ದಾಗಿರುರುವುದಾಗಿ ತಿಳಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ಸದ್ಯ ಆರ್ ಟಿ ನಗರದ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ನಿಕಟ ಪೂರ್ವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು, ಸಚಿವರಾದ ಡಾ. ಅಶ್ವತ್ ನಾರಾಯಣ್ , ಹಾಲಪ್ಪ … Read more

ಬೈಕಿಗೆ ಗುದ್ದಿ ಮನೆಗೆ ನುಗ್ಗಿದ ರಿಟ್ಜ್ ಕಾರು –ಬೈಕ್ ಸವಾರನಿಗೆ ಗಂಭೀರ ಗಾಯ

ಸುದ್ದಿ360 ಚಿಕ್ಕಮಗಳೂರು, ಆ.5 : ಜಿಲ್ಲೆಯ ಕೊಪ್ಪ ತಾಲೂಕಿನ  ಶಾಂತಿಪುರ ಬಳಿಯ ರಾಜ್ಯ ಹೆದ್ದಾರಿ 27ರಲ್ಲಿ ರಿಟ್ಜ್ ಕಾರೊಂದು ಬೈಕ್ ಗೆ ಗುದ್ದಿರುವುದಲ್ಲದೆ ಮುಂದುವರೆದು ಮನೆಗೆ ನುಗ್ಗಿದ ಪರಿಣಾಮ ಮನೆಯ ಮುಂಭಾಗದ ಗೋಡೆ ಕುಸಿದಿದೆ. ಬೈಕ್ ಸವಾರ ಗಂಭೀರ ಗಾಯಗೊಂಡಿದ್ದಾನೆ. ಪಲ್ಸರ್ ಬೈಕ್ ಸವಾರನಿಗೆ ಕಾರು ಗುದ್ದಿದ ಪರಿಣಾಮ ಗಂಭೀರ ಗಾಯದೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದಾನೆ. ಕಾರು ನುಗ್ಗಿದ  ರಭಸಕ್ಕೆ ಮನೆಯ ಮುಂಭಾಗದ ಗೋಡೆ ಕುಸಿದಿದ್ದು, ಮನಯಲ್ಲಿದ್ದವರು ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಇಲ್ಲಿನ ಜಯಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ … Read more

ದಾವಣಗೆರೆಯಲ್ಲಿ ಹರ್-ಘರ್-ತಿರಂಗಾ ಅಭಿಯಾನಕ್ಕೆ ಚಾಲನೆ

ಸುದ್ದಿ360 ದಾವಣಗೆರೆ ಆ.05: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಸರ್ಕಾರಿ ನೌಕರರ ಸಂಘ ಇವರ ವತಿಯಿಂದ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಣೆಯ ಅಂಗವಾಗಿ ‘ಹರ್-ಘರ್-ತಿರಂಗಾ’ ಮನೆ ಮನೆಯಲ್ಲೂ ರಾಷ್ಟ್ರೀಯ ತ್ರಿವರ್ಣ ಧ್ವಜ ಅಭಿಯಾನಕ್ಕೆ ಜಿಲ್ಲಾಡಳಿತ ಭವನದ ಆವರಣದಲ್ಲಿ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ, ಜಿ.ಪಂ ಸಿಇಒ ಡಾ.ಎ.ಚನ್ನಪ್ಪ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಜಿಲ್ಲೆಯ ಸಾರ್ವಜನಿಕರು ತಮ್ಮ ತಮ್ಮ ಮನೆಯ ಅಂಗಳದಲ್ಲಿ ರಾಷ್ಟ್ರಧ್ವಜವನ್ನು ಆಗಸ್ಟ್ … Read more

ದಾವಣಗೆರೆ ಜಿಲ್ಲಾ ಕಾಂಗ್ರೆಸ್ ವತಿಯಿಂದ ರಾಷ್ಟ್ರಧ್ವಜ ವಿತರಣೆ

ಸುದ್ದಿ360 ದಾವಣಗೆರೆ, ಆ.05: 75 ನೇ ಸ್ವಾತಂತ್ರ್ಯೋತ್ಸದ ಅಮೃತ ಮಹೋತ್ಸವದ ಅಂಗವಾಗಿ ಇಂದು ನಗರದಲ್ಲಿ ದಾವಣಗೆರೆ ಜಿಲ್ಲಾ ಕಾಂಗ್ರೆಸ್ ವತಿಯಿಂದ ರಾಷ್ಟ್ರಧ್ವಜವನ್ನು ವಿತರಣೆ ಮಾಡಲಾಯಿತು. ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ದಿನೇಶ್ ಕೆ ಶೆಟ್ಟಿ, ಕೆ ಜಿ ಶಿವಕುಮಾರ್, ಅಯೂಬ್ ಪೈಲ್ವಾನ್, ಮಹಾನಗರ ಪಾಲಿಕೆ ಮಾಜಿ ವಿಪಕ್ಷನಾಯಕ ಎ ನಾಗರಾಜ್  ಅವರ ನೇತೃತ್ವದಲ್ಲಿ ನಗರದೆಲ್ಲೆಡೆ ಇಂದು ಸಾರ್ವಜನಿಕರಿಗೆ ರಾಷ್ಟ್ರಧ್ವಜ ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಎಸ್ ಮಲ್ಲಿಕಾರ್ಜುನ್ ಯೂತ್ ಕಾಂಗ್ರೆಸ್ ನ ಸಾಗರ್ ಎಲ್ ಎಂ ಎಚ್,  ಸತೀಶ್ … Read more

error: Content is protected !!