ಆ.4: ರಾಜ್ಯಕ್ಕೆ ಅಮಿತ್ ಷಾ ಭೇಟಿ – ಕಾರ್ಯಕರ್ತರ ಮನವೊಲಿಕೆಗೆ ಮುಂದಾದ ಹೈಕಮಾಂಡ್

ಸುದ್ದಿ360 ಬೆಂಗಳೂರು ಆ.2: ಕೇಂದ್ರ ಗೃಹ ಸಚಿವ ಅಮಿತ್ ಶಾ ದಿಡೀರ್ ಎಂಬಂತೆ ಎರಡು ದಿನಗಳ ರಾಜ್ಯ ಪ್ರವಾಸ ಕೈಗೊಂಡಿದ್ದು, ಗುರುವಾರ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಮಂಗಳೂರಿಗೆ ತೆರಳಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರ್ ಕುಟುಂಬದವರನ್ನು ಭೇಟಿಯಾಗಿ ಸಾಂತ್ವನ ಹೇಳುವ ಸಾಧ್ಯತೆಯಿದೆ. ದಕ್ಷಿಣ ಕನ್ನಡದಲ್ಲಿ ಇತ್ತೀಚೆಗೆ ನಡೆದ ಹತ್ಯೆಗಳಿಂದ ಬಿಜೆಪಿ ಮತ್ತು ಸಂಘ ಪರಿವಾರದ ಕಾರ್ಯಕರ್ತರು ಆಕ್ರೋಶಗೊಂಡಿರುವ ಬೆನ್ನಲ್ಲೇ ಅಮಿತ್ ಷಾ ಅವರ ರಾಜ್ಯ ಪ್ರವಾಸ ಮಹತ್ವ ಪಡೆದುಕೊಂಡಿದೆ. ಸ್ವಪಕ್ಷೀಯರ ವಿರುದ್ಧವೇ ಕಾರ್ಯಕರ್ತರು ತಿರುಗಿಬಿದ್ದಿರುವುದರಿಂದ … Read more

ಮಳೆ ಪೀಡಿತ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಂದ ವಿಡಿಯೋ ಕಾನ್ಪರೆನ್ಸ್ ಮೂಲಕ ಸಿಎಂ ಗೆ ಮಾಹಿತಿ

ಸುದ್ದಿ360 ಬೆಂಗಳೂರು, ಆ.2: ರಾಜ್ಯದ  ಹಲವೆಡೆ ಹಾಗೂ ಕರಾವಳಿ ಭಾಗದಲ್ಲಿ ಪುನ: ಹೆಚ್ಚು ಮಳೆಯಾಗುತ್ತಿದೆ.  ಮಳೆ ಅನಾಹುತದಿಂದ ಸಾವು ನೋವುಗಳಾಗಿದ್ದು, ಹೆಚ್ಚು ಮಳೆಯಾಗಿರುವ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ಪರಿಹಾರ ಹಾಗೂ ರಕ್ಷಣಾ ಕಾರ್ಯಗಳಿಗೆ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಅವರ ಅಧ್ಯಕ್ಷತೆಯಲ್ಲಿ ಇಂದು ಮಳೆ ಪೀಡಿತ 11 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜತೆ ವಿಡಿಯೋ ಕಾನ್ಫರೆನ್ಸ್ ಮೂಲಕ‌ ಸಭೆ ನಡೆಯಿತು. ಸಭೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಹಣಕಾಸು ಇಲಾಖೆ ಎಸಿಎಸ್ ಐಎಸ್ಎನ್ ಪ್ರಸಾದ, … Read more

ಕೈ ಬಲಗೊಳಿಸಲು ಇದು ವಿಶೇಷ ಅವಕಾಶ – ಯಾರು ಏನೇ ಹೇಳಲಿ, ಡಿಕೆಶಿ ಬರೋದು ಗ್ಯಾರಂಟಿ

ಸುದ್ದಿ360 ದಾವಣಗೆರೆ, ಆ.2: ನಗರದಲ್ಲಿ ಆಯೋಜನೆಗೊಂಡಿರುವ ಕಾರ್ಯಕ್ರಮ ಸಿದ್ದರಾಮಯ್ಯ ಅವರಿಗಾಗಿ ಮಾಡುತ್ತಿರುವ ಕಾರ್ಯಕ್ರಮವಲ್ಲ. ಕಾಂಗ್ರೆಸ್ ಪಕ್ಷದಿಂದ ಈ ಹಿಂದೆ ಹಲವು ಬೃಹತ್ ಸಮಾವೇಶಗಳು ನಡೆದಿವೆ. ಇದು ಪಕ್ಷದ ಸಂಘಟನೆಗೆ ಸಾಂದರ್ಭಿಕವಾಗಿ ಒದಗಿಬಂದಿರುವ ಒಂದು ವಿಶೇಷ ಅವಕಾಶ ಎಂದು ಎಚ್.ಎಂ. ರೇವಣ್ಣ ಹೇಳಿದರು. ಅವರು ನಗರದಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಸಮಾರಂಭದ ಸಿದ್ಧತೆ ಕುರಿತು ಮಾಹಿತಿ ನೀಡಿ, ಒಬ್ಬ ಸಮಾಜಮುಖಿ ಜನಪ್ರತಿನಿಧಿಯಾಗಿ ಸಿದ್ದರಾಮಯ್ಯ 40 ವರ್ಷಗಳಿಗೂ ಅಧಿಕ ಕಾಲ ರಾಜಕೀಯ ಜೀವನದಲ್ಲಿದ್ದಾರೆ. ಅವರ 75ನೇ ಜನ್ಮ ದಿನದ ಅಂಗವಾಗಿ … Read more

ಅಮೃತ ಮಹೋತ್ಸವಕ್ಕೆ ಕ್ಷಣಗಣನೆ – ಸಕಲ ಸಿದ್ಧತೆಗಳೊಂದಿಗೆ ಎಸ್‌ಎಸ್ ಅರಮನೆ ಆವರಣ

ಮಹೋತ್ಸವದ ಸಿದ್ಧತೆ ಕುರಿತು ಸುದ್ದಿಗೋಷ್ಠಿಯಲ್ಲಿ ಎಚ್.ಎಂ. ರೇವಣ್ಣ ಮಾಹಿತಿ ಸುದ್ದಿ360 ದಾವಣಗೆರೆ, ಆ.02: ನಾಳೆ (ಆ.3) ನಡೆಯುವ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಅಮೃತ ಮಹೋತ್ಸವ ನಿಮಿತ್ತ ನಗರ ಹೊರವಲಯದ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿನ ಶಾಮನೂರು ಶಿವಶಂಕರಪ್ಪ ಪ್ಯಾಲೆಸ್ ಆವರಣದಲ್ಲಿ ಸಕಲ ಸಿದ್ಧತೆಗಳೊಂದಿಗೆ ವೇದಿಕೆ ಸಜ್ಜಾಗಿದೆ ಎಂದು ಮಹೋತ್ಸವದ ವಾಹನ ಸಮಿತಿ ಅಧ್ಯಕ್ಷ ಎಚ್.ಎಂ. ರೇವಣ್ಣ ತಿಳಿಸಿದರು. ನಗರದಲ್ಲಿ ಇಂದು ವರದಿಗಾರರ ಕೂಟದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಸಮಾರಂಭದ ಸಿದ್ಧತೆ ಕುರಿತು ಮಾಹಿತಿ ನೀಡಿ, ಅಮೃತ ಮಹೋತ್ಸವಕ್ಕೆ … Read more

ಮನುಷ್ಯರಲ್ಲಿ ದೇವರನ್ನು ಕಾಣುವ ಮೂಲಕ ಹಬ್ಬಗಳನ್ನು ವೈಚಾರಿಕವಾಗಿ ಆಚರಿಸಲು ಬಸವಪ್ರಭುಶ್ರೀ ಕರೆ

ಸುದ್ದಿ360 ದಾವಣಗೆರೆ, ಆ.02: ದೇವರು, ಹಬ್ಬ ಹಾಗೂ ಮೂಡನಂಬಿಕೆಗಳ ಹೆಸರಿನಲ್ಲಿ ಪೌಷ್ಠಿಕವಾದ ಹಾಲನ್ನು ವ್ಯರ್ಥ ಮಾಡದೆ, ಅವಶ್ಯಕತೆ ಇರುವ ಮಕ್ಕಳ, ರೋಗಿಗಳ, ಹಿರಿಯರ ಸೇವನೆಗೆ ನೀಡುವ ಮೂಲಕ ಮನುಷ್ಯರಲ್ಲಿ ದೇವರನ್ನು ಕಾಣಬೇಕು. ಮನುಷ್ಯರೇ ನಿಜವಾದ ದೇವರು ಎಂದು ವಿರಕ್ತಮಠದ ಬಸವಪ್ರಭುಶ್ರೀ ಹೇಳಿದರು. ಶ್ರೀಗಳು ನಗರದ ದೊಡ್ಡಪೇಟೆಯಲ್ಲಿರುವ ವಿರಕ್ತಮಠದಲ್ಲಿ ಮಕ್ಕಳಿಗೆ ಹಾಲುಣಿಸುವುದರ ಮೂಲಕ ಹಾಲು ಕುಡಿಸುವ ಹಬ್ಬ, ಬಸವ ಪಂಚಮಿ ಆಚರಣೆಗೆ ಚಾಲನೆ ನೀಡಿ, ಆಶೀರ್ವಚನ ನೀಡಿದರು. ಪಂಚಮಿ ಹಬ್ಬ ಎಂದರೆ ಎಲ್ಲರೂ ನನ್ನ ಪಾಲು ಅಜ್ಜನ ಪಾಲು … Read more

ಹಾಲು ಕುಡಿಸುವ ಹಬ್ಬ

ಸುದ್ದಿ360, ದಾವಣಗೆರೆ ಆ. 01: ಬಸವಕೇಂದ್ರ, ಶ್ರೀ ಮುರುಘರಾಜೇಂದ್ರ ವಿರಕ್ತಮಠ, ಬಸವಪ್ರಭು ಸ್ವಾಮೀಜಿಯವರ ನೇತೃತ್ವದಲ್ಲಿ ಹಾಲು ಕುಡಿಸುವ ಹಬ್ಬವು ಮಂಗಳವಾರ (ಆಗಸ್ಟ್ 2) ದಂದು ಬೆಳಿಗ್ಗೆ 11 ಗಂಟೆಗೆ ದಾವಣಗೆರೆಯ ವಿರಕ್ತಮಠದಲ್ಲಿ ಜರುಗಲಿದೆ. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಯಶವಂತರಾವ್ ಜಾದವ್ ಭಾಗವಹಿಸಲಿದ್ದು, ಶ್ರೀ ಮಠದ ಸದಸ್ಯರ ಉಪಸ್ಥಿತಿಯಲ್ಲಿ ನೆರವೇರಲಿದೆ ಎಂದು ಪ್ರಕಟಣೆ ತಿಳಿಸಿದೆ.

ಓಬಿಸಿ ಪಟ್ಟಿಯಲ್ಲಿ ಸೇರಿಸುವಂತೆ ವೀರಶೈವ ಲಿಂಗಾಯತ ಸಮುದಾಯದಿಂದ ಪ್ರತಿಭಟನೆ – ಮನವಿ

ಸುದ್ದಿ360, ದಾವಣಗೆರೆ ಆ. 01: ವೀರಶೈವ ಲಿಂಗಾಯತ ಸಮುದಾಯದ ಎಲ್ಲಾ ಪಂಗಡಗಳನ್ನು ಕೇಂದ್ರ ಸರ್ಕಾರದ ಇತರೆ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಸೇರಿಸಬೇಕು ಎಂದು ಒತ್ತಾಯಿಸಿ ದಾವಣಗೆರೆಯಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ನಗರದ ಮಹಾತ್ಮಗಾಂಧಿ ವೃತ್ತದಲ್ಲಿ ಜಮಾಯಿಸಿದ ವೀರಶೈವ ಲಿಂಗಾಯುತ ಸಮುದಾಯದವರು, ಅವರಗೊಳ್ಳ ಪುರ ವರ್ಗ ಮಠದ ಶ್ರೀ ಓಂಕಾರ ಶಿವಾಚಾರ್ಯ ಸ್ವಾಮೀಜಿ, ತಾವರಗೆರೆ ಸಿದ್ಧಲಿಂಗ ಶಿವಾಚಾರ್ಯ ಶ್ರೀ, ಚನ್ನಗರಿ ಕೇದಾರ ಶಿವ ಶಾಂತವೀರ ಶ್ರೀ ಇವರುಗಳನ್ನೊಳಗೊಂಡ ಪ್ರತಿಭಟನಾಕಾರರು ಉಪವಿಭಾಗಾಧಿಕಾರಿಗಳ ಮೆರವಣಿಗೆ ಮೂಲಕ ಕಚೇರಿ ತಲುಪಿದರು. ಉಪವಿಭಾಗಾಧಿಕಾರಿಗಳ ಮೂಲಕ … Read more

ಭೋವಿ ಕುಲಕಸುಬಿಗೆ ವಿಶೇಷ ಅವಕಾಶ ಹಾಗೂ ರಿಯಾಯ್ತಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360, ದಾವಣಗೆರೆ ಆ. 01: ತಳವರ್ಗದ ಸಮುದಾಯಗಳಿಗೆ ಶ್ರೀಮಂತಿಕೆ ಬರುವಂತೆ ನೋಡಿಕೊಳ್ಳುವ ಮೂಲಕ ಸಮತೋಲನದ ಸಮೃದ್ಧಿಯ ರಾಜ್ಯದ ನಿರ್ಮಾಣ ಸಾಧ್ಯ. ತಳಸಮುದಾಯದ ಅಭಿವೃದ್ಧಿಗಾಗಿ ವಿಶೇಷ ಕಾರ್ಯಕ್ರಮಗಳನ್ನು ಸರ್ಕಾರ ಹಮ್ಮಿಕೊಂಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಶಿವಯೋಗಿ ಶ್ರೀ ಸಿದ್ಧರಾಮೇಶ್ವರ ರಥ ವಜ್ರ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ಗುರುಪೀಠವು ಸಮಾಜವನ್ನು ಒಗ್ಗೂಡಿಸಿ ಏಳಿಗೆಯ ಪಥದಲ್ಲಿ ಮುನ್ನಡೆಸುತ್ತಿದೆ. ಎಲ್ಲ ಜನಾಂಗಗಳ ಅಭಿವೃದ್ಧಿಯಾದಾಗ ಮಾತ್ರ ನಾಡು ಅಭಿವೃದ್ಧಿಯಾಗುತ್ತದೆ. ಕೆಳಸ್ತರದ ಹಾಗೂ ಶಿಕ್ಷಣ, ಆರೋಗ್ಯ ಹಾಗೂ ಆರ್ಥಿಕವಾಗಿ … Read more

ಮಂಕಿಪಾಕ್ಸ್ : ನಾಳೆ ಮಹತ್ವದ ಸಭೆ

ಸುದ್ದಿ360 ದಾವಣಗೆರೆ, ಆ. 01: ಮಂಕಿಪಾಕ್ಸ್ ಸಾಂಕ್ರಾಮಿಕವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಈ ಕುರಿತು ನಾಳೆ ಸಭೆ ನಡೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ದಾವಣಗೆರೆಗೆ ಶಿವಯೋಗಿ ಶ್ರೀ ಸಿದ್ದರಾಮೇಶ್ವರ ರಥ ವಜ್ರ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಂದಂತಹ ಸಂದರ್ಭ ಜಿಎಂಐಟಿ ಹಲಿಪ್ಯಾಡ್ ನಲ್ಲಿ  ಅವರು ಮಾಧ್ಯಮದವರೊಂದಿಗೆ ಮಾತನಾಡಿದರು. ವಿಶೇಷವಾಗಿ ಪ್ರಯಾಣಿಕರ ತಪಸಾಣೆ ಮತ್ತು ಬೇರೆ ಬೇರೆ ಕ್ರಮಗಳ ಬಗ್ಗೆ ನಾಳೆ ಮಹತ್ವದ ಸಭೆಯನ್ನು ಆರೋಗ್ಯ ಸಚಿವರನ್ನೊಳಗೊಂಡ ಉನ್ನತ ಮಟ್ಟದ ಸಭೆಯಲ್ಲಿ ಚರ್ಚಿಸಲಾಗುವುದು. ಈ ವೇಳೆ … Read more

ನಮ್ಮದು ರಾಷ್ಟ್ರೀಯ ಪಕ್ಷ – ರಾಷ್ಟ್ರೀಯತೆಯೇ ನಮ್ಮ ನಿಲುವು: ಸಿಎಂ ಬೊಮ್ಮಾಯಿ

ಸುದ್ದಿ360 ದಾವಣಗೆರೆ, ಆ. 01: ನಮ್ಮದು ರಾಷ್ಟ್ರೀಯ ಪಕ್ಷ. ರಾಷ್ಟ್ರೀಯತೆಯೇ ನಮ್ಮ ನಿಲುವು. ಯಾರಿಗೂ ಬೇಧ-ಭಾವ ಮಾಡುವ ಪ್ರಶ್ನೆಯಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ  ಬೊಮ್ಮಾಯಿ ತಿಳಿಸಿದರು. ಇಂದು ದಾವಣಗೆರೆಗೆ ಶಿವಯೋಗಿ ಶ್ರೀ ಸಿದ್ದರಾಮೇಶ್ವರ ರಥ ವಜ್ರ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಂದಂತಹ ಸಂದರ್ಭ ಜಿಎಂಐಟಿ ಹಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಯಾರಿಗೂ ಬೇಧಭಾವ ಮಾಡುವ ಮಾತೇ ಇಲ್ಲ. ಅಂತಹ ವಿಚಾರಗಳು ಹಿಂದಿನ ಸರ್ಕಾರಗಳು ಅವರ ಕಾಲದಲ್ಲಿ ಏನೇನು ಮಾಡಿದ್ದಾರೆ ಅದರ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ಅವರು ಸುದ್ದಿಗಾರರ … Read more

error: Content is protected !!