ದಾವಣಗೆರೆ ಜಿಲ್ಲಾ ಕಾಂಗ್ರೆಸ್‍ನಿಂದ ಕಾರ್ಗಿಲ್ ವಿಜಯ ದಿವಸ್ – ಕೇಂದ್ರ ಸರ್ಕಾರ ಸೈನಿಕರನ್ನು ಗೌರವದಿಂದ ಕಾಣಲಿ: ದಿನೇಶ್ ಕೆ.ಶೆಟ್ಟಿ

ಸುದ್ದಿ360, ದಾವಣಗೆರೆ ಜು.26: ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಪಕ್ಷದ ವತಿಯಿಂದ ಕಾರ್ಗಿಲ್ ವಿಜಯ ದಿವಸ್‍ನ್ನು ದಾವಣಗೆರೆ ನಗರದ ಹರಳೆಣ್ಣೆ ಕೊಟ್ರಬಸಪ್ಪ (ರಾಂ ಅಂಡ್ ಕೋ) ವೃತ್ತದಲ್ಲಿ ಮಂಗಳವಾರ ಆಚರಿಸಲಾಯಿತು. ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಹುತಾತ್ಮ ಯೋಧರಿಗೆ ಗೌರವ ಸಲ್ಲಿಸಲಾಯಿತು. ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ ಮಾತನಾಡಿ ಇಡೀ ದೇಶ ಇಂದು ಕಾರ್ಗಿಲ್ ವಿಜಯ ದಿವಸವನ್ನು ಆಚರಿಸುತ್ತಿದೆ. ದೇಶಕ್ಕಾಗಿ ಹುತಾತ್ಮರಾದ ಎಲ್ಲ ಭಾರತೀಯ ಸೈನಿಕರಿಗೂ … Read more

‘ದಿವ್ಯಪಥ ಲೋಕಹಿತ’ ಶ್ರಾವಣಮಾಸ ಪ್ರವಚನ

ಸುದ್ದಿ360, ದಾವಣಗೆರೆ ಜು.26: ಬಸವಕೇಂದ್ರ, ಶ್ರೀ ಮುರುಘರಾಜೇಂದ್ರ ವಿರಕ್ತಮಠ ಹಾಗೂ ಶಿವಯೋಗಾಶ್ರಮ ವತಿಯಿಂದ ಇದೇ ಜುಲೈ 29 ರ  ಶುಕ್ರವಾರದಿಂದ ಆಗಸ್ಟ್ 28 ರವರೆಗೆ ಅಥಣಿ ಶಿವಯೋಗಿಗಳ ಜೀವನ ದರ್ಶನ ಕುರಿತಾದ ಡಾ. ಮುರುಘಾ ಶರಣರು ರಚಿಸಿರುವ ‘ದಿವ್ಯಪಥ ಲೋಕಹಿತ’ 112 ನೇ ವರ್ಷದ ಶ್ರಾವಣ ಮಾಸ ಪ್ರವಚನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ವಿರಕ್ತಮಠ ಧರ್ಮದರ್ಶಿ ಸಮಿತಿ ಸದಸ್ಯ ಕುಂಟೋಜಿ ಚೆನ್ನಪ್ಪ ತಿಳಿಸಿದರು. ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,  ಶ್ರಾವಣ ಮಾಸದ ತಿಂಗಳಪೂರ್ತಿ ಪ್ರತಿ ದಿನ … Read more

ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರೆಯ ಕೊಲೆ – ಮೃತದೇಹ ಮೆರವಣಿಗೆ

ಸುದ್ದಿ360 ದಕ್ಷಿಣ ಕನ್ನಡ, ಜು.27: ಸುಳ್ಯ ತಾಲ್ಲೂಕಿನ ಬೆಳ್ಳಾರೆಯಲ್ಲಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಎಂಬುವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಮಂಗಳವಾರ ರಾತ್ರಿ 9 ಗಂಟೆಗೆ ಈ ಘಟನೆ ನಡೆದಿದ್ದು,  ತಲವಾರಿನೊಂದಿಗೆ  ಬೈಕ್ ನಲ್ಲಿ ಬಂದ ತಂಡ ಪ್ರವೀಣ್ ತಲೆಗೆ ತಲವಾರ್ ಬೀಸಿದೆ. ಗಂಭೀರ ಗಾಯಗೊಂಡ ಅವರನ್ನು ಆಸ್ಪತ್ರೆಗೆ ಸಾಗಿಸುವ ಸಂದರ್ಭದಲ್ಲಿ ಮೃತಪಟ್ಟಿದ್ದಾರೆ. ಬೆಳ್ಳಾರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಕ್ಷಯ ಕೋಳಿ ಅಂಗಡಿ ನಡೆಸುತ್ತಿದ್ದ ಪ್ರವೀಣ್, ಬಜರಂಗದಳ ಸೇರಿದಂತೆ ಸಂಘಪರಿವಾರದ ಹಿಂದೂ ಸಂಘಟನೆಯಲ್ಲಿ ಸಕ್ರಿಯರಾಗಿದ್ದರು. ಮೃತದೇಹ … Read more

ರಾಹುಲ್ ಬಂಧನಕ್ಕೆ ಯುವ ಕಾಂಗ್ರೆಸ್ ಖಂಡನೆ

ಸುದ್ದಿ360 ದಾವಣಗೆರೆ, ಜು.26: ದೆಹಲಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ಪೊಲೀಸರು ಬಂಧಿಸಿರುವ ಕ್ರಮದ ವಿರುದ್ಧ ನಗರದ ಜಯದೇವ ವೃತ್ತದಲ್ಲಿ ಮಂಗಳವಾರ ಸಂಜೆ ಯುವ ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ಮಾತನಾಡಿದ ಯುವ ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ಎಚ್.ಜೆ. ಮೈನುದ್ದೀನ್, ಬೆಲೆ ಏರಿಕೆ, ಇಡಿ ದುರ್ಬಳಕೆ ಖಂಡಿಸಿ ಸಂಸತ್ ಭವನದ ಎದುರು ಮೌನ ಪ್ರತಿಭಟನೆ ನಡೆಸುತ್ತಿದ್ದ ರಾಹುಲ್ ಗಾಂಧಿಯವರನ್ನು ದೆಹಲಿ ಪೊಲೀಸರು ಬಂಧಿಸುವ ಮೂಲಕ ಹೋರಾಟ ಹತ್ತಿಕ್ಕುವ ಪ್ರಯತ್ನ ಮಾಡಿದ್ದಾರೆ. ಇಂದು … Read more

ಕಾರ್ಗಿಲ್ ವಿಜಯ ದಿವಸ್ ರಾಯಲ್ ಎನ್ಫೀಲ್ಡ್ ನಲ್ಲಿ ಸಾಗಿದ ತಿರಂಗ ರ್ಯಾಲಿ – ಯೋಧರಿಗೆ ಗೌರವ ನಮನ

ಸುದ್ದಿ360 ದಾವಣಗೆರೆ, ಜು.26: ಕಾರ್ಗಿಲ್ ವಿಜಯ ದಿವಸ್ ಸಂಭ್ರಮ ನಗರದೆಲ್ಲೆಡೆ ಕಳೆಗಟ್ಟಿತ್ತು. ಸಂಭ್ರಮಾಚರಣೆ ಹಾಗೂ ವಿಜಯೋತ್ಸವಕ್ಕೆ ಕಾರಣರಾದ ಯೋಧರಿಗೆ ಗೌರವ ನಮನ ಅರ್ಪಿಸುವ ನಿಟ್ಟಿನಲ್ಲಿ ಪ್ರೇರಣಾ ಸಂಸ್ಥೆಯಿಂದ ಮಂಗಳವಾರ ಬೈಕ್ ರ್ಯಾಲಿ ಜರುಗಿತು. ನಗರದ ಹೈಸ್ಜೂಲ್ ಮೈದಾನದಲ್ಲಿ ಹೊರಡಲು ಸಿದ್ಧವಾಗಿದ್ದ ಬೈಕ್ ರ್ಯಾಲಿಗೆ  ಮಹಾನಗರ ಪಾಲಿಕೆ ಮೇಯರ್ ಜಯಮ್ಮ ಗೋಪಿನಾಯ್ಕ ಹಾಗೂ   ಮಾಜಿ ಮೇಯರ್ ಎಸ್.ಟಿ. ವೀರೇಶ್ ತ್ರಿವರ್ಣ ಧ್ವಜ ತೋರಿಸುವ ಮೂಲಕ ಚಾಲನೆ ನೀಡಿದರು. ಮಾಜಿ ಮೇಯರ್ ಎಸ್ ಟಿ. ವೀರೇಶ್ ಮಾತನಾಡಿ, ಕಳೆದ 24 … Read more

ಪಬ್ ನಲ್ಲಿ‌ ವಿದ್ಯಾರ್ಥಿಗಳ ಪಾರ್ಟಿ: ಬಜರಂಗದಳ ಕಾರ್ಯಕರ್ತರಿಂದ ತಡೆ –ತಹಬದಿಗೆ ತಂದ ಪೊಲೀಸರು

ಸುದ್ದಿ360 ಮಂಗಳೂರು, ಜು.25: ನಗರದ ಬಲ್ಮಠದ ಪಬ್ ವೊಂದರಲ್ಲಿ‌‌ ಕಾಲೇಜು ವಿದ್ಯಾರ್ಥಿಗಳು ಪಾನಮತ್ತರಾಗಿ ಅಸಭ್ಯವಾಗಿ ವರ್ತಿಸುತ್ತಿದ್ದರೆಂಬ ಕಾರಣದಿಂದ ಬಜರಂಗದಳ ಕಾರ್ಯಕರ್ತರು ಧಾಳಿ ನಡೆಸಿ ತಡೆಯೊಡ್ಡಿದ ಘಟನೆ ಸೋಮವಾರ ರಾತ್ರಿ ನಡೆದಿದೆ. ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಎಲ್ಲರನ್ನೂ ಚದುರಿಸಿದ್ದಾರೆ. ನಗರದ ಬಲ್ಮಠದ ರಿ-ಸೈಕಲ್ ದಿ ಲಾಂಜ್ ಪಬ್ ನಲ್ಲಿ ನಗರದ ಖಾಸಗಿ ಕಾಲೇಜು ವಿದ್ಯಾರ್ಥಿಗಳು ಬೀಳ್ಕೊಡುಗೆ ಕಾರ್ಯಕ್ರಮದ ಅಂಗವಾಗಿ ಪಾರ್ಟಿ ಆಯೋಜಿಸಿದ್ದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಪಾನಮತ್ತರಾಗಿ ಅಸಭ್ಯವಾಗಿ ವರ್ತಿಸುತ್ತಿದ್ದಾರೆಂಬ ಆರೋಪ ಹಿನ್ನಲೆಯಲ್ಲಿ ಬಜರಂಗದಳ ಕಾರ್ಯಕರ್ತರು … Read more

ರಂಗಭೂಮಿ ಡಿಪ್ಲೊಮಾಗೆ ಅರ್ಜಿ ಆಹ್ವಾನ

ಸುದ್ದಿ360 ದಾವಣಗೆರೆ ಜು.25: ಮೈಸೂರಿನ ನಟನ ರಂಗಶಾಲೆಯು ಒಂದು ವರ್ಷದ ಅಭಿನಯ ಮತ್ತು ರಂಗ ತರಬೇತಿ ‘ರಂಗಭೂಮಿ ಡಿಪ್ಲೊಮಾ’ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಿದೆ. ಆ.7ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 1 ಗಂಟೆವರೆಗೆ ಮೈಸೂರಿನ ರಾಮಕೃಷ್ಣ ನಗರದ ಕೆ ಬ್ಲಾಕ್‌ನಲ್ಲಿರುವ ನಟನ ರಂಗಶಾಲೆಯಲ್ಲಿ ಪ್ರವೇಶ ಪ್ರಕ್ರಿಯೆ ಮತ್ತು ಸಂದರ್ಶನ ನಡೆಯಲಿದೆ. ಹಿರಿಯ ರಂಗ ಹಾಗೂ ಚಿತ್ರ ಕಲಾವಿದ ಮಂಡ್ಯ ರಮೇಶ್ ನೇತೃತ್ವದ ನಟನ ರಂಗಶಾಲೆ, ಮೈಸೂರು ವಿಶ್ವವಿದ್ಯಾಲಯದಿಂದ ಮಾನ್ಯತೆ ಪಡೆದ ಸಂಸ್ಥೆಯಾಗಿದೆ. ಡಿಪ್ಲೊಮಾ ಪ್ರವೇಶಕ್ಕೆ 16ರಿಂದ 30 ವರ್ಷದೊಳಗಿನ … Read more

ಇ-ಕೆವೈಸಿಗೆ 31 ಕಡೆಯ ದಿನ

ಸುದ್ದಿ360 ದಾವಣಗೆರೆ ಜು.25: ಕೇಂದ್ರ ಸರಕಾರದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ನೀಡುವ ಧನ ಸಹಾಯ ಪಡೆಯಲು ಇ-ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸಲು ಜು.31 ಕಡೆಯ ದಿನವಾಗಿದೆ. ಜಿಲ್ಲೆಯ 1.51 ಲಕ್ಷ ರೈತರು ಯೋಜನೆ ಅಡಿ ಆರ್ಥಿಕ ನೆರವು ಪಡೆಯುತ್ತಿದ್ದು, ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಮಾಡಲಾಗುತ್ತಿದೆ. ಯೋಜನೆಯ ಫಲ ನೈಜ ಫಲಾನುಭವಿಗಳ ತಲುಪುತ್ತಿದೆ ಎಂಬುದನ್ನು ಖಾತ್ರಿ ಪಡಿಸಿಕೊಳ್ಳಲು ಇ-ಕೆವೈಸಿ ಮಾಡುವುದು ಕಡ್ಡಾಯವಾಗಿದೆ. ಫಲಾನುಭವಿಗಳು http://pmkisan.gov.in ವೆಬ್ ಪೋರ್ಟಲ್‌ಗೆ ಭೇಟಿ ನೀಡಿ ಫಾರ್ಮರ್ ಕಾರ್ನರ್‌ನಲ್ಲಿ … Read more

ಇತಿಹಾಸದಿಂದ ದೇಶದ ಉಳಿವು: ಶಾಸಕ ಎಸ್.ಎ. ರವೀಂದ್ರನಾಥ್ ಅಭಿಮತ

ಸುದ್ದಿ360, ದಾವಣಗೆರೆ ಜು.25: ನಮ್ಮ ದೇಶದ ಸಂಸ್ಕೃತಿ, ಸಂಸ್ಕಾರ ಇತಿಹಾಸದಲ್ಲಿ ಅಡಕವಾಗಿದೆ. ಹೀಗಾಗಿ ದೇಶದ ಇತಿಹಾಸವನ್ನು ತಿಳಿದುಕೊಳ್ಳುವುದು ಅತಿ ಮುಖ್ಯವಾಗಿದ್ದು, ದೇಶದ ಭದ್ರ ಬುನಾದಿ ಇತಿಹಾದಲ್ಲಿ ಅಡಕವಾಗಿದೆ ಎಂದು ಶಾಸಕ ಎಸ್.ಎ. ರವೀಂದ್ರನಾಥ್ ಅಭಿಪ್ರಾಯಪಟ್ಟರು. ಇಲ್ಲಿನ ವಿದ್ಯಾನಗರ ಮುಖ್ಯ ರಸ್ತೆಯ ಕುವೆಂಪು ಕನ್ನಡ ಭವನದಲ್ಲಿ ಸೋಮವಾರ ಬಸವನಕೋಟೆ ಗೌಡ್ರ ವಂಶಸ್ಥರು ಮತ್ತು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಜಂಟಿಯಾಗಿ ಆಯೋಜಿಸಿದ್ದ ಲೇಖಕ ಬಿ.ಎಸ್. ಸಿದ್ದೇಶ್ ಅವರ ಶ್ರೀ ಬೊಮ್ಮಲಿಂಗೇಶ್ವರ ಭಕ್ತರ ಹಿನ್ನೆಲೆ ಕುರಿತ ಸಂಶೋಧನಾ ಕೃತಿ ಲೋಕಾರ್ಪಣೆ … Read more

‘ಶೌಚಾಲಯ ಸೌಲಭ್ಯವಿಲ್ಲದೆ ಉದ್ಘಾಟನೆಗೊಂಡಿರುವ ಸ್ಮಾರ್ಟ್ ಸಿಟಿ ಬಸ್ ಸ್ಟ್ಯಾಂಡ್ – ನಾಚಿಕೆ ಯಾರಿಗೆ ಆಗಬೇಕು?’ ಕೆ.ಎಲ್.ಹರೀಶ್ ಬಸಾಪುರ

ಶೌಚಾಲಯವಿದ್ದರೂ ಬಳಕೆಗೆ ಲಭ್ಯವಿಲ್ಲ ಹಳೆ ದಾವಣಗೆರೆಯಲ್ಲಿ ತಿಂಗಳ ಹಿಂದೆಯೇ ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ ಬಸ್ ಸ್ಟ್ಯಾಂಡ್ ನಿರ್ಮಾಣಗೊಂಡು, ಸಾರ್ವಜನಿಕ  ಉಪಯೋಗಕ್ಕೆ ನೀಡಲಾಗಿದೆ. ಇದಾಗಿ ತಿಂಗಳು ಕಳೆಯುತ್ತಾ ಬಂದರು ಶೌಚಾಲಯ ಮಾತ್ರ ಬೀಗ ತೆರೆದಿಲ್ಲ. ಸ್ಮಾರ್ಟ್ ಸಿಟಿ ಕಾಮಗಾರಿಗಳು ಎಂದರೆ ಕಳಪೆ ಕಾಮಗಾರಿಗಳು ಹಾಗೂ ಮೂಲಭೂತ ಸೌಕರ್ಯ ಒದಗಿಸದೆ ಕಾಮಗಾರಿ ಪೂರ್ಣಗೊಳ್ಳದೆ ಉದ್ಘಾಟನೆಗೊಂಡ ಯೋಜನೆಗಳು ಎಂಬ ಸಾರ್ವಜನಿಕ ಆಕ್ರೋಶಕ್ಕೆ ಒಳಗಾಗಿರುವ ಯೋಜನೆಗಳಲ್ಲಿ ಯೋಜನಯೇ ಹಳೆ ದಾವಣಗೆರೆಯಲ್ಲಿ ನಿರ್ಮಾಣಗೊಂಡಿರುವ ನೂತನ ಬಸ್ ಸ್ಟ್ಯಾಂಡ್ ಕೂಡ ಸೇರಿದೆ ಎಂದು ಕೆ.ಎಲ್ … Read more

error: Content is protected !!