ಮಳೆಯನ್ನು ಲೆಕ್ಕಿಸದೆ ಸಾಗಿದ ಡ್ರಗ್ಸ್ ವಿರುದ್ಧದ ಬೃಹತ್ ಕಾಲ್ನಡಿಗೆ ಜಾಥಾ

ಸುದ್ದಿ360 ದಾವಣಗೆರೆ, ಜು.16: ದೊಡ್ಡ ಸಾಮಾಜಿಕ ಪಿಡುಗಾಗಿ ಬೆಳೆಯುತ್ತ ಯುವಜನರನ್ನು ಬಲಿ ತೆಗೆದುಕೊಳ್ಳುತ್ತಿರುವ ಡ್ರಗ್ಸ್ ವಿರುದ್ಧ ಬೃಹತ್ ಕಾಲ್ನಡಿಗೆ ಜಾಥಾ ಬೆಣ್ಣೆನಗರಿಯಲ್ಲಿ ಶನಿವಾರ ಜರುಗಿತು. ವಿಜಯ ಕರ್ನಾಟಕ ದಿನಪತ್ರಿಕೆ ಜಿಲ್ಲಾ ಪೊಲೀಸ್ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ಮಾದಕ ವಸ್ತುಗಳ ವಿರುದ್ಧದ ಬೃಹತ್ ಕಾಲ್ನಡಿಗೆ ಜಾಥಾಕ್ಕೆ ನಗರದ  ಗುಂಡಿ ಚೌಲ್ಟ್ರಿ ವೃತ್ತದಲ್ಲಿ ಡಿಸಿ ಶಿವಾನಂದ ಕಾಪಾಶಿ ‘ಮಾದಕ ವಸ್ತುಗಳ ವಿರುದ್ಧದ ಹೋರಾಟಕ್ಕೆ ಪೊಲೀಸರಿಗೆ ಸಹಕಾರ ನೀಡಿ’ ಎಂಬ ಘೋಷವಾಕ್ಯದ ಪ್ಲೇ ಕಾರ್ಡ್‌ನ್ನು ವಿದ್ಯಾರ್ಥಿಗಳಿಗೆ ನೀಡುವ ಮೂಲಕ ಕಾಲ್ನಡಿಗೆ ಜಾಥಾಗೆ … Read more

ಅಹಾರ ಧಾನ್ಯಗಳ ಮೇಲಿನ ಜಿಎಸ್ಟಿ ಹಿಂತೆಗೆಯುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ

ಸುದ್ದಿ360,ದಾವಣಗೆರೆ ಜು.15: ಜಿಲ್ಲಾ ಅಕ್ಕಿಗಿರಣಿ ಮಾಲೀಕರ ಸಂಘ, ಆಹಾರ ಧಾನ್ಯಗಳ ವರ್ತಕ ಸಂಘ ಹಾಗೂ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕೋದ್ಯಮ ಸಂಸ್ಥೆಗಳ ಸಹಯೋಗದೊಂದಿಗೆ ದಾವಣಗೆರೆಯಲ್ಲಿ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಅಹಾರ ಧಾನ್ಯಗಳ ಮೇಲೆ ವಿಧಿಸಿರುವ ಶೇ. 5 ಜಿಎಸ್ ಟಿ ಹಿಂದಕ್ಕೆ ಪಡೆಯುವಂತೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಅಕ್ಕಿಗಿರಣಿದಾರರ ಸಂಘದ ಕಾರ್ಯದರ್ಶಿ ಕೋಗುಂಡಿ ಬಕ್ಕೇಶಪ್ಪಮಾತನಾಡಿ, ಜಿಎಸ್ ಟಿ ಮಂಡಳಿ ಅಹಾರ ಧಾನ್ಯಗಳ ಮೇಲೆ ವಿಧಿಸಿರುವ ಶೇ. 5ರಷ್ಟು ಜಿಎಸ್ ಟಿ ವಿಧಿಸುತ್ತಿದೆ. ಈ ಬಗ್ಗೆ … Read more

ಜು.17ಕ್ಕೆ ಅಭಿನಂದನಾ ಸಮಾರಂಭ

ಸುದ್ದಿ360, ದಾವಣಗೆರೆ, ಜು.16: ನಗರದ ನೂತನ ಕಾಲೇಜು ರಸ್ತೆಯ ಸವಿತಾ ಹೋಟೆಲ್ ಬಳಿ ಇರುವ ನಿರ್ವರ್ಣ ಆರ್ಟ್ ಗ್ಯಾಲರಿಯಲ್ಲಿ ಜು.17ರ ಬೆಳಗ್ಗೆ 10.30ಕ್ಕೆ ಮುಸ್ಲಿಂ ಸಾಹಿತ್ಯ ಪ್ರಶಸ್ತಿ ಪುರಸ್ಕೃತ ಸಾಹಿತಿ ಫೈಜ್ನಟ್ರಾಜ್‌ರ ಸಾಹಿತ್ಯ ಕೃತಿಗಳ ಅವಲೋಕನ ಮತ್ತು ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಪ್ರಗತಿಪರ ಸಾಹಿತ್ಯ ಪರಿಷತ್ತು ಮತ್ತು ಕಾವ್ಯ ಮಂಡಳ ವತಿಯಿಂದ ನಡೆಯುವ ಕಾರ್ಯಕ್ರಮಕ್ಕೆ ಡಾ. ಆನಂದ್ ಋಗ್ವೇದಿ ಚಾಲನೆ ನೀಡುವರು. ಬಾ.ಮ. ಬಸವರಾಜಯ್ಯ ಅಧ್ಯಕ್ಷತೆ ವಹಿಸಲಿದ್ದು, ಕಥೆಗಳ ಕುರಿತು ಡಾ.ಜಿ. ಕಾವ್ಯಶ್ರೀ, ಕಾವ್ಯ ಕುರಿತು ಮಲ್ಲಿಕಾರ್ಜುನ … Read more

ಸನ್ಮಾನ ಎನ್ನುವುದು ಶಿಕ್ಷಕರಿಗೆ  ದೊಡ್ಡ ಬಹುಮಾನ: ಮುಖ್ಯಶಿಕ್ಷಕ ದೇವೇಂದ್ರಪ್ಪ ಅಭಿಮತ

ಸುದ್ದಿ360, ದಾವಣಗೆರೆ, ಜು.16: ಶಿಕ್ಷಕನಾದವನಿಗೆ ಸಮಾಜ ಅವನ ಸೇವೆಯನ್ನು ಗುರುತಿಸಿ ಸನ್ಮಾನಿಸಿದರೆ ಅದರಷ್ಟು ಹೆಮ್ಮೆ ತರುವ ವಿಚಾರ ಇನ್ನೊಂದಿಲ್ಲ. ಸನ್ಮಾನ ಎಂಬುದು ಶಿಕ್ಷಕರ ಪಾಲಿಗೆ ದೊಡ್ಡ ಬಹುಮಾನದಂತೆ ಎಂದು ಶಾಮನೂರು ಸರ್ಕಾರಿ ಸಂಯುಕ್ತ ಪ್ರೌಢಶಾಲೆ ಮುಖ್ಯಶಿಕ್ಷಕ ದೇವೇಂದ್ರಪ್ಪ ಹೇಳಿದರು. ದಾವಣಗೆರೆ ಜಿಲ್ಲಾ ಸಂಸ್ಕಾರ ಭಾರತಿ ವತಿಯಿಂದ ಗುರುಪೂರ್ಣಿಮೆ ಅಂಗವಾಗಿ ಹಮ್ಮಿಕೊಂಡಿದ್ದ ಗುರುವಂದನಾ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ಶಿಕ್ಷಕರನ್ನು ಗೌರವಿಸಿದರೆ, ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಪ್ರೋತ್ಸಾಹದಾಯಕವಾಗುತ್ತದೆ. ತನ್ನನ್ನು ಪ್ರೀತಿಸುವ ವ್ಯಕ್ತಿಗಳಿದ್ದಾರೆ ಎಂದರೆ ಶಿಕ್ಷಕರಿಗೆ ನವಚೈತನ್ಯ ಮೂಡುತ್ತದೆ. … Read more

ಗೊಲ್ಲರಹಳ್ಳಿಯಲ್ಲಿ ಸಂಭ್ರಮದ ಅಜ್ಜಿ ಹಬ್ಬ

ಸುದ್ದಿ360, ದಾವಣಗೆರೆ, ಜು.16: ಜಿಲ್ಲೆಯಮಾಯಕೊಂಡ ವಿಧಾನಸಭಾ ಕ್ಷೇತ್ರದ ಅಣಜಿ ಬಳಿಯ ಗೊಲ್ಲರಹಳ್ಳಿ ಗ್ರಾಮದಲ್ಲಿ ಸಂಭ್ರಮದಿಂದ ಅಜ್ಜಿ ಹಬ್ಬವನ್ನು ಆಚರಿಸಲಾಯಿತು. ಎಂದಿನಂತೆ ಆಷಾಢ ಮಾಸದ ಕೊನೆಯ ಶುಕ್ರವಾರದಂದು ಈ ಹಬ್ಬ ಆಚರಿಸಲಾಯಿತು. ಅಜ್ಜಿಹಬ್ಬ ಬಂತೆಂದರೆ, ರೈತರ ಮೊಗದಲ್ಲಿ ಒಂದು ರೀತಿಯ ಮಂದಹಾಸ. ಈ ಹಬ್ಬ ಬರುವುದರೊಳಗೆ ರೈತರು ತಮ್ಮ ಬಿತ್ತನೆ ಕಾರ್ಯಗಳನ್ನು ಮುಗಿಸಿ, ಬೆಳೆಗಳು ಸಮೃದ್ಧವಾಗಿ ಬರಲೆಂದು ದೇವಿಯನ್ನು ಆರಾಧಿಸುತ್ತಾರೆ. ಮನೆಗಳಲ್ಲಿನ ದನ-ಕರುಗಳು ಚೆನ್ನಾಗಿರಲಿ, ರೈತರ ಆರೋಗ್ಯ ವೃದ್ಧಿಯಾಗಿ ಗ್ರಾಮದಲ್ಲಿ ಶಾಂತಿ ನೆಮ್ಮದಿ ನೆಲೆಸಲೆಂದು ಹಾಗೂ ಸಣ್ಣ ಮಕ್ಕಳ … Read more

ಭ್ರಷ್ಟ ರಾಜಕಾರಣ ಕೊನೆಗಾಣಿಸಲು ಜನಚೈತನ್ಯ ಯಾತ್ರೆ : ಕೆ ಆರ್ ಎಸ್ ರಾಜ್ಯಾಧ್ಯಕ್ಷ ರವಿ ಕೃಷ್ಣಾರೆಡ್ಡಿ

ಸುದ್ದಿ360, ದಾವಣಗೆರೆ, ಜು.16: ಕೆಆರ್ ಎಸ್ ಪಕ್ಷದಿಂದ ಎರಡನೇ ಹಂತದ ಜನ ಚೈತನ್ಯ ಯಾತ್ರೆ ಜು.15 ರಂದು ಚಿತ್ರದುರ್ಗ ಜಿಲ್ಲೆಯಿಂದ ಆರಂಭವಾಗಿದ್ದು, ಜುಲೈ ಅಂತ್ಯದವರೆಗೆ 16ಜಿಲ್ಲೆಗಳಲ್ಲಿ ಸಂಚರಿಸಿ, ಭ್ರಷ್ಟ, ಹಾಗೂ ಪರಮನೀಚ ರಾಜಕಾರಣ ಕೊನೆಗಾಣಿಸುವ ನಿಟ್ಟಿನಲ್ಲಿ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯವನ್ನು ಪಕ್ಷ ಹಮ್ಮಿಕೊಂಡಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ರವಿ ಕೃಷ್ಣಾರೆಡ್ಡಿ ತಿಳಿಸಿದರು. ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜನಚೈತನ್ಯ ಯಾತ್ರೆಯ ಅಂಗವಾಗಿ ಇಂದು ದಾವಣಗೆರೆಯಲ್ಲಿ ಹಲವು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಯಾತ್ರೆಯುದ್ದಕ್ಕೂ ಬಹಿರಂಗ ಸಭೆಗಳು, ಪತ್ರಿಕಾಗೋಷ್ಠಿಗಳು, … Read more

ದುರಾಡಳಿತ ತಡೆಯಲು ವಾಚ್ಮನ್ ಗಳಾಗಲು ಸಿದ್ಧ: ವಿಪಕ್ಷ ನಾಯಕ ಗಡಿಗುಡಾಳ್ ಮಂಜುನಾಥ್

ಆರೋಪಗಳಿಗೆ ಸಮರ್ಪಕ ಉತ್ತರ ನೀಡದ ಆಡಳಿತ ಪಕ್ಷ : ಎ. ನಾಗರಾಜ್ ಸುದ್ದಿ360, ದಾವಣಗೆರೆ, ಜು.16:  ವಾರ್ಡ್ ನ ಸಮಸ್ಯೆಗಳಿಗೆ ಧ್ವನಿಯಾಗಿ ನಿಲ್ಲುವುದು ತಪ್ಪಾ? ನಮ್ಮನ್ನು ಆರಿಸಿ ಕಳಿಸಿದವರ ಒಳಿತಿಗಾಗಿ ನಾವು ವಾಚ್ ಮನ್ ಆಗಿಯೂ ಕೆಲಸ ಮಾಡುತ್ತೇವೆ. ಭ್ರಾಷ್ಟಾಚಾರದಲ್ಲಿ ಮುಳುಗಿರುವ ಬಿಜೆಪಿಗೆ ತಡೆಯೊಡ್ಡಲು ನಾವು ಕಾವಲುಗಾರರೇ ಹೌದು ಎಂದು ಮಹಾನಗರ ಪಾಲಿಕೆ ವಿಪಕ್ಷ ನಾಯಕ ಗಡಿಗುಡಾಳ್ ಮಂಜುನಾಥ್ ಗುಡುಗಿದ್ದಾರೆ. ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ವಿಪಕ್ಷದವರು ಮಹಾನಗರ ಪಾಲಿಕೆ ಆಡಳಿತದ ವಿರುದ್ಧ ಮಾಡಿರುವ ಆರೋಪಗಳು ಸುಳ್ಳು … Read more

ಸರ್ಕಾರಿ ಕಚೇರಿ ಫೋಟೊ-ವೀಡಿಯೋ ಕುರಿತು ಇದ್ದ ನಿಷೇಧದ ಆದೇಶ ವಾಪಸ್

ಸುದ್ದಿ360, ಬೆಂಗಳೂರು, ಜು.16: ರಾಜ್ಯ ಸರ್ಕಾರದ ಇಲಾಖೆಗಳ ಕಚೇರಿ ವೇಳೆಯಲ್ಲಿ ಖಾಸಗಿ ವ್ಯಕ್ತಿಗಳು ಫೋಟೋ ವೀಡಿಯೋ ಮಾಡಬಾರದು ಎಂಬ ಆದೇಶವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸೂಚನೆ ಮೇರೆಗೆ ವಾಪಸ್ ಪಡೆಯಲಾಗಿದೆ. ಕರ್ನಾಟಕ ರಾಜ್ಯ ನೌಕರರ ಸಂಘ ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ಸರ್ಕಾರಿ ಇಲಾಖೆಗಳ ಕಚೇರಿ ವೇಳೆಯಲ್ಲಿ ಖಾಸಗಿ ವ್ಯಕ್ತಿಗಳು ಫೋಟೋ ತೆಗೆಯಬಾರದು ಮತ್ತು ವಿಡಿಯೋ ಮಾಡದಂತೆ ನಿಷೇಧಿಸಿ ಆದೇಶವನ್ನು ಹೊರಡಿಸಲಾಗಿತ್ತು. ಈ ಆದೇಶವನ್ನು ಪರಿಶೀಲನೆ ನಡೆಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸೂಚನೆ ಮೇರೆಗೆ ಮಧ್ಯರಾತ್ರಿಯೇ … Read more

ಮಂಗಳ ಗ್ರಹದ ಮೇಲೆ ವಸಹತು ಸ್ಥಾಪಿಸುವುದರಲ್ಲಿ ಯಾವುದೇ ಅನುಮಾನವಿಲ್ಲ!

ಬಾಹ್ಯಾಕಾಶ: ಮಕ್ಕಳ ಜ್ಞಾನದಾಹಕ್ಕೆ ನೀರೆರೆದ ಇಸ್ರೋ ಮಾಜಿ ಮುಖ್ಯಸ್ಥ ಕೆ.ಎಸ್. ಕಿರಣ್ ಕುಮಾರ್ ಸುದ್ದಿ360, ದಾವಣಗೆರೆ, ಜು.15: ಪ್ರಸಕ್ತ ಬಾಹ್ಯಾಕಾಶ ವಲಯದಲ್ಲಿ ಭಾರತ 5 ಇಲ್ಲವೇ ಆರನೇ ಸ್ಥಾನದಲ್ಲಿದೆ. ಭಾರತ ಬಾಹ್ಯಾಕಾಶ ವಲಯದಲ್ಲಿ ಮೊದಲ ಸ್ಥಾನಕ್ಕೆ ಬಂದರೆ ಮಂಗಳನ ಮೇಲೆ ನೆಲೆ ಕಾಣುವಂತಹ ಸಾಧನೆ ಮಾಡಲು ಸಾಧ್ಯ. ಇದಕ್ಕಾಗಿ ಈಗಿನ ವಿದ್ಯಾರ್ಥಿಗಳು ವಿಜ್ಞಾನ ಮತ್ತು ತಂತ್ರಜ್ಞಾನ ವಲಯದಲ್ಲಿ ಹೆಚ್ಚಾಗಿ ತೊಡಗಿಕೊಳ್ಳಬೇಕು ಎಂದು ಇಸ್ರೋ ಮಾಜಿ ಮುಖ್ಯಸ್ಥ ಕೆ.ಎಸ್. ಕಿರಣ್ ಕುಮಾರ್ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಲಿಂ. ಶ್ರೀ … Read more

ಡಿಸೆಂಬರ್ ಅಂತ್ಯದ ವೇಳೆಗೆ ಜಲಸಿರಿ ಯೋಜನೆಯಡಿ ನೀರು ಒದಗಿಸಿ : ಡಾ.ಜಿ.ಎಂ.ಸಿದ್ದೇಶ್ವರ್

ಸುದ್ದಿ360, ದಾವಣಗೆರೆ, ಜು.15: ಜಲಸಿರಿ ಯೋಜನೆಯಡಿ ಕೈಗೊಂಡಿರುವ ವಿವಿಧ ಕಾಮಗಾರಿಗಳನ್ನು ಡಿಸೆಂಬರ್ ಅಂತ್ಯದ ವೇಳೆಗೆ ಪೂರ್ಣಗೊಳಿಸಿ, ಕುಡಿಯುವ ನೀರು ಸರಬರಾಜು ಮಾಡಬೇಕೆಂದು ಲೋಕಸಭಾ ಸದಸ್ಯ ಡಾ. ಜಿ.ಎಂ.ಸಿದ್ದೇಶ್ವರ ಹೇಳಿದರು. ಶುಕ್ರವಾರ ದಾವಣಗೆರೆ ಸ್ಮಾರ್ಟ್ ಸಿಟಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ನಿರಂತರ ನೀರು ಸರಬರಾಜು ಕಾಮಗಾರಿಯ ಪ್ರಗತಿ ಪರಿಶೀಲನಾ ಹಾಗೂ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೆ.ಯು.ಐ.ಡಿ.ಎಫ್.ಸಿ ವತಿಯಿಂದ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ ನೀರು ಸರಬರಾಜು ಹಾಗೂ 24*7 ನೀರು ಸರಬರಾಜು ಕಾಮಗಾರಿಯನ್ನು ಸಾರ್ವಜನಿಕರಿಗೆ … Read more

error: Content is protected !!