ಅ.02 : ಗಾಂಧಿ ಭವನದಲ್ಲಿ ಸರ್ವಧರ್ಮ ಪ್ರಾರ್ಥನೆ

ಸುದ್ದಿ360, ದಾವಣಗೆರೆ(davangere) ಅ.01: ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ದಾವಣಗೆರೆ ಇವರ ಸಂಯುಕ್ತಾಶ್ರಯದಲ್ಲಿ ಗಾಂಧಿ ಭವನದಲ್ಲಿ  ಅಕ್ಟೋಬರ್ 2 ರ ಸೋಮವಾರ ಬೆಳಗ್ಗೆ 10 ಗಂಟೆಗೆ ಗಾಂಧೀ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮ ದಿನಾಚರಣೆ ಏರ್ಪಡಿಸಲಾಗಿದೆ. ಗಣಿ ಮತ್ತು ಭೂವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ್ ಅವರು ಗಾಂಧಿಜೀಯವರ ಪ್ರತಿಮೆಗೆ ಮಾಲಾರ್ಪಣೆ ಮಾಡುವರು. ದಕ್ಷಿಣ ಕ್ಷೇತ್ರದ ಶಾಸಕರಾದ ಡಾ.ಶಾಮನೂರು … Read more

ಮಟ್ಕಾ-ಜೂಜಾಟ 42 ಸಾವಿರ ನಗದಿನೊಂದಿಗೆ ಆರೋಪಿ ಬಂಧನ

matka-gambling-accused-arrested-with-42-thousand-cash

ಸುದ್ದಿ360 ದಾವಣಗೆರೆ, ಅ.1: ಮಟ್ಕಾ ಜೂಜಾಟದಲ್ಲಿ ತೊಡಗಿದ್ದ ವ್ಯಕ್ತಿಯನ್ನು ಬಂಧಿಸಿ, ಜೂಜಾಟದಲ್ಲಿ ತೊಡಗಿಸಿದ್ದ ಒಟ್ಟು 42,000/- ರೂ ನಗದು ಹಣ ಮತ್ತು ಮಟ್ಕಾ ಜೂಜಾಟದ ಸಾಮಾಗ್ರಿಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.   ಈತ ಜಿಲ್ಲೆಯ ಹೊನ್ನಾಳಿ ಪಟ್ಟಣದ ಟಿ.ಬಿ ಸರ್ಕಲ್ ನಿಂದ ಬಸ್‌ ನಿಲ್ದಾಣದ ಕಡೆಗೆ ಹೋಗುವ ಮುಖ್ಯ ರಸ್ತೆಯಲ್ಲಿರುವ ಅಂಗಾಳ ಪರಮೇಶ್ವರಿ ಗ್ಯಾರೇಜಿನ ಮುಂಭಾಗದ ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಜೂಜಾಟ ನಡೆಸುತ್ತಿದ್ದ. ಈ  ಬಗ್ಗೆ ಮಾಹಿತಿ ಬಂದ ಮೇರೆಗೆ ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ್ ರವರು  ಸಿಇಎನ್ … Read more

ದಾವಣಗೆರೆ ಜಿಲ್ಲಾ ಕಸಾಪ ವತಿಯಿಂದ ಮಹಾತ್ಮ ಗಾಂಧೀಜಿ – ಲಾಲ್ ಬಹದ್ದೂರ್ ಶಾಸ್ತ್ರಿಜಿ ಹುಟ್ಟುಹಬ್ಬ ಆಚರಣೆ

gandhi-lalbahaddur shastri-kasapa-davangere

ಸುದ್ದಿ360 ದಾವಣಗೆರೆ ಅ.1: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಅ.2ರ ಸೋಮವಾರ ಮುಂಜಾನೆ 8.30 ಘಂಟೆಗೆ ದಾವಣಗೆರೆ ವಿದ್ಯಾನಗರ ಮುಖ್ಯ ರಸ್ತೆಯಲ್ಲಿರುವ ಕುವೆಂಪು ಕನ್ನಡ ಭವನದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 154 ನೇ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿಯವರ 119 ನೇ ಜನ್ಮ ದಿನಾಚರಣೆ ಆಚರಿಸಲಾಗುವುದು. ಸಮಾರಂಭದ ಅಧ್ಯಕ್ಷತೆಯನ್ನು ಜಿಲ್ಲಾ ಕಸಾಪ ಅಧ್ಯಕ್ಷ ಬಿ.ವಾಮದೇವಪ್ಪ ವಹಿಸುವರು ಹಾಗೂ ವಿನೂತನ ಮಹಿಳಾ ಸಮಾಜದ ಸದಸ್ಯೆಯರಿಂದ ಸರ್ವ ಧರ್ಮ ಪ್ರಾರ್ಥನೆಯನ್ನು ಹಮ್ಮಿಕೊಳ್ಳಲಾಗಿದೆ. ಸದರಿ ಕಾರ್ಯಕ್ರಮಕ್ಕೆ ಜಿಲ್ಲೆಯ … Read more

ಅ.4ಕ್ಕೆ ಭಾರತ ಕಮ್ಯುನಿಸ್ಟ್ ಪಕ್ಷ ವತಿಯಿಂದ ‘ಜನಾಗ್ರಹ ಜನಾಂದೋಲನ ಚಳುವಳಿ’ ಪೋಸ್ಟರ್ ಬಿಡುಗಡೆ

protest-dvg

ಸುದ್ದಿ360 ದಾವಣಗೆರೆ ಅ.1: ಚುನಾವಣಾ ಸಂದರ್ಭದಲ್ಲಿ ಜನತೆಗೆ ಕೊಟ್ಟ ಭರವಸೆಗಳನ್ನು ಈಡೇರಿಸಬೇಕೆಂದು ಸರ್ಕಾರಕ್ಕೆ ಒತ್ತಾಯಿಸಿ ಭಾರತ ಕಮ್ಯುನಿಸ್ಟ್ ಪಕ್ಷದ ವತಿಯಿಂದ ಅಕ್ಟೋಬರ್ 4 ರ ಬುಧವಾರದಂದು ಸರ್ಕಾರಕ್ಕೆ ಒತ್ತಾಯಿಸುವ ಜನಾಗ್ರಹ  ಜನಾಂದೋಲನದ ಚಳುವಳಿಯ ಪೋಸ್ಟರ್ ಅನ್ನು ಸಿಪಿಐ ಹಿರಿಯ ಮುಖಂಡ ಹಾಗೂ ಪಕ್ಷದ ಜಿಲ್ಲಾ ಮಂಡಳಿ ಖಜಾಂಚಿ ಕಾಮ್ರೆಡ್ ಆನಂದರಾಜ್ ರವರು ಬಿಡುಗಡೆ ಮಾಡುವರು ಎಂದು ದಾವಣಗೆರೆ ಸಿಪಿಐ ಜಿಲ್ಲಾ ಕಾರ್ಯದರ್ಶಿ ಕಾಮ್ರೆಡ್ ಆವರಗೆರೆ ಚಂದ್ರು ತಿಳಿಸಿದ್ದಾರೆ. 2023 ರ ಕರ್ನಾಟಕ ವಿಧಾನಸಭೆಗೆ ನಡೆದ ಸಾರ್ವತ್ರಿಕ ಚುನಾವಣೆ … Read more

ಸ್ವಚ್ಛತಾ ಸೇವಾ ಕಾರ್ಯಕ್ರಮ

ಸುದ್ದಿ360 ದಾವಣಗೆರೆ, ಸೆ.30: ಜಿಲ್ಲಾ ಪೊಲೀಸ್ ಕಚೇರಿ ಮತ್ತು ಸುತ್ತಮುತ್ತಲಿನ ಆವರಣದಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ದಾವಣಗೆರೆ ದಕ್ಷಿಣ ವಿಭಾಗ ಮತ್ತು ರೋಟರಿ ಸಂಸ್ಥೆ ಸಹಕಾರದೊಂದಿಗೆ ಸ್ವಚ್ಛತಾ ಸೇವಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು  ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಅವರ ನೇತೃತ್ವದಲ್ಲಿ  ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಆರ್. ಬಿ. ಬಸರಗಿ, ಮಕ್ಕಳ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಡಾ. ರವಿಕುಮಾರ್ ಎ.ಜೆ. ರೋಟರಿ ಅಧ್ಯಕ್ಷರಾದ ಕುಸುಮ ವಿಜಯಾನಂದ, ರೋ.ಪುಟ್ಟೇಶಿ,  ರೋ.ಆರ್.ಟಿ.  ಮೃತ್ಯುಂಜಯ, ಮತ್ತು ಪೊಲೀಸ್ ಉಪ … Read more

ನ್ಯಾಷನಲ್‍ ಲೆವೆಲ್ ಅಬಾಕಾಸ್ ಸ್ಪರ್ಧೆಯಲ್ಲಿ ವಿಜೇತರಾದ ಸೀಮಾಸ್‍ ಅಕಾಡೆಮಿ ಮಕ್ಕಳು: ಸಂಸ್ಥೆಯಿಂದ ಅಭಿನಂದನೆ

Seamus Academy Kids Winners of National Level Abacus Competition: Congratulation by the Institute

ಸುದ್ದಿ360 ದಾವಣಗೆರೆ, ಸೆ.30: 19ನೇ ನ್ಯಾಷನಲ್ ಲೆವೆಲ್ ಅಬಾಕಾಸ್ ಸ್ಪರ್ಧೆಯಲ್ಲಿ ದಾವಣಗೆರೆಯ ಸೀಮಾಸ್ ಅಕಾಡೆಮಿಯಿಂದ ಭಾಗವಹಿಸಿದ ಮಕ್ಕಳು ಉತ್ತಮ ಫಲಿತಾಂಶದೊಂದಿಗೆ ಮುಂದಿನ ಹಂತಕ್ಕೆ ಕಾಲಿಟ್ಟಿದ್ದಾರೆ. ಗ್ಲೋಬಲ್ ಅಸೋಸಿಯೇಷನ್ ಆಫ್ ಜಪಾನೀಸ್ ಸೋರ್ಬನ್ ಮತ್ತು ಮೆಂಟಲ್ ಅರ್ಥಮೆಟಿಕ್ (ಜೆ.ಎ.ಜೆ.ಎಂಎ.) ಇಂಡಿಯಾ, ಅಂತರಾಷ್ಟ್ರೀಯ ಸಂಸ್ಥೆಯಿಂದ ಆಗಸ್ಟ್ 27ರಂದು ಸ್ಪರ್ಧೆಗಳು ನಡೆದಿದ್ದವು. ದಾವಣಗೆರೆಯ ಪಿ.ಜೆ. ಬಡಾವಣೆಯಲ್ಲಿರುವ ವನಿತಾ ಸಮಾಜದಲ್ಲಿ ತರಗತಿಗಳನ್ನು ನಡೆಸುತ್ತಿರುವ ಸೀಮಾಸ್ ಅಕಾಡೆಮಿಯಿಂದ 21 ಮಕ್ಕಳು ಭಾಗವಹಿಸಿದ್ದರು. ಇವರಲ್ಲಿ 3 ಸೂಪರ್ ಚಾಂಪಿಯನ್, 2 ಚಾಂಪಿಯನ್, 4 ಪ್ರಥಮ ಸ್ಥಾನ, … Read more

ಎಸ್.ಎಸ್.ಕೇರ್‌ ಟ್ರಸ್ಟ್‍ ನಿಂದ ಹಿರಿಯ ನಾಗರೀಕರಿಗೆ ಉಚಿತ ಆರೋಗ್ಯ ತಪಾಸಣೆ

free-health-checkup-for-senior-citizens-by-sscare-trust

ಸುದ್ದಿ360 ದಾವಣಗೆರೆ (davangere) ಸೆ.30: ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಎಸ್.ಎಸ್.ಕೇರ್‌ಟ್ರಸ್ಟ್( SS Care trust) ವತಿಯಿಂದ ಅ.1ರ ಭಾನುವಾರದಂದು ಹಿರಿಯ ನಾಗರಿಕರಿಗೆ ಉಚಿತಆರೋಗ್ಯತಪಾಸಣೆ (free health checkup) ಹಮ್ಮಿಕೊಳ್ಳಲಾಗಿದೆ. ಅಂದು ಬೆಳಿಗ್ಗೆ 9-30 ಗಂಟೆಗೆ ನಗರದ ಪದ್ಮಶ್ರೀ ಚಿಂದೋಡಿ ಲೀಲಾ ಕಲಾಕ್ಷೇತ್ರದಲ್ಲಿ ನಡೆವ ಈ ತಪಾಸಣೆಗೆ ಎಸ್.ಎಸ್.ಕೇರ್‌ಟ್ರಸ್ಟ್ನ ಲೈಫ್ ಟ್ರಸ್ಟಿ ಡಾ. ಪ್ರಭಾ ಮಲ್ಲಿಕಾರ್ಜುನ್‌ಅವರು ಚಾಲನೆ ನೀಡುವರು. ಹಿರಿಯ ನಾಗರಿಕರು ಈ ತಪಾಸಣೆಯ ಅನುಕೂಲ ಪಡೆಯಬೇಕೆಂದು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಜಿಲ್ಲಾಅಧಿಕಾರಿ ಡಾ.ಕೆ.ಕೆ.ಪ್ರಕಾಶ್ … Read more

ಪ್ರತಿಭಾಕಾರಂಜಿ ವಿಜೇತ ಮಕ್ಕಳಿಗೆ ಅಭಿನಂದನೆ

ಸುದ್ದಿ360 ದಾವಣಗೆರೆ ಸೆ.30: ನಗರದ ಹಳೇಪೇಟೆಯ ಶತಮಾನದ ಶಾಲೆಯಾದ ಉನ್ನತಿಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ದಾವಣಗೆರೆ ಹಳೇಪೇಟೆ ಕ್ಲಸ್ಟರ್ ಮಟ್ಟದಲ್ಲಿ ನಡೆದ ಪ್ರತಿಭಾ ಕಾರಂಜಿಯಲ್ಲಿ ವಿವಿಧ ವಿಭಾಗಗಳಲ್ಲಿ ಭಾಗವಹಿಸಿ ವಿಜೇತರಾಗಿದ್ದು, ವಿಜೇತ ಮಕ್ಕಳಿಗೆ ಶಾಲಾವತಿಯಿಂದ ಅಭಿನಂದಿಸಲಾಯಿತು. ದಾವಣಗೆರೆ ಹಳೇಪೇಟೆ ಕ್ಲಸ್ಟರ್ ಮಟ್ಟದಲ್ಲಿ ನಡೆದ ಪ್ರತಿಭಾ ಕಾರಂಜಿಯಲ್ಲಿ ಭಾಗವಹಿಸಿದ  ಹಳೇಪೇಟೆ ಉನ್ನತಿಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಾದ ಏಳನೆಯ ತರಗತಿಯ ಚಂದನ್ ಸಿ.ಆರ್.(ಇಂಗ್ಲಿಷ್ ಕಂಠಪಾಠ ದಲ್ಲಿ ಪ್ರಥಮ ಸ್ಥಾನ) ಏಳನೆಯ ತರಗತಿಯ ವಿದ್ಯಾರ್ಥಿ ಶಿವಾಜಿ … Read more

ಖೋ-ಖೋ, ಕಬ್ಬಡ್ಡಿಗೆ ರಾಜ್ಯಮಟ್ಟಕ್ಕೆ ಆಯ್ಕೆಯಾದ ಅತ್ತಿಗೆರೆ ಕಾಲೇಜು ವಿದ್ಯಾರ್ಥಿಗಳು

sttigere-state-level-kho-kho-kabbaddi

ಸುದ್ದಿ360 ದಾವಣಗೆರೆ, ಸೆ.30: ದಾವಣಗೆರೆ ಜಿಲ್ಲೆ ಅತ್ತಿಗೆರೆಯ ಶ‍್ರೀಮತಿ ಚನ್ನಪ್ಪ ಶಿವಲಿಂಗಮ್ಮ ಗುರುಬಸಪ್ಪ ಪದವಿ ಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ರಾಜ್ಯ ಮಟ್ಟದ ಕ್ರೀಡೆಗೆ ಆಯ್ಕೆಯಾಗಿದ್ದಾರೆ. ಇಲ್ಲಿ ಪ್ರಥಮ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿರುವ ಲೀಲಾವತಿ ಎ.ಎಂ. ಖೋ-ಖೋ ಟೀಂಗೆ ಹಾಗೂ ರಮ್ಯಾ ಹೆಚ್‍.ಟಿ. ಕಬ್ಬಡ್ಡಿ ಟೀಂಗೆ ಆಯ್ಕೆ ಯಾಗಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಕಾಲೇಜು ಆಡಳಿತ ಮಂಡಳಿ, ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುವ  ಈ ಇಬ್ಬರು ವಿದ್ಯಾರ್ಥಿನಿಯರನ್ನು  ಪ್ರಶಂಸಿಸಿದೆ.   ವಿದ್ಯಾರ್ಥಿಗಳು ಕ್ರೀಡೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗುವ ಮೂಲಕ … Read more

ಕರ್ನಾಟಕ ರಾಜ್ಯ ಪರಿಶಿಷ್ಟ ಪಂಗಡಗಳ ಸರ್ಕಾರಿ ನೌಕರರ ಸಂಘದಿಂದ ಪ್ರತಿಭಾ ಪುರಸ್ಕಾರ

ಸುದ್ದಿ360, ದಾವಣಗರೆ ಸೆ.30: ಕರ್ನಾಟಕ ರಾಜ್ಯ ಪರಿಶಿಷ್ಟ ಪಂಗಡಗಳ ಸರ್ಕಾರಿ ನೌಕರರ ಸಂಘ, ಬೆಂಗಳೂರು ಹಾಗೂ‌ ದಾವಣಗೆರೆ ಜಿಲ್ಲಾ ಘಟಕ ಇವರ ಸಹಯೋಗದಲ್ಲಿ ವಾಲ್ಮೀಕಿ ಸಮುದಾಯದ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಗಳಿಸಿದ  ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭವನ್ನು ಅ.8 ರಂದು ಹಮ್ಮಿಕೊಳ್ಳಲಾಗಿದೆ ಎಂದು ದಾವಣಗೆರೆ ಜಲ್ಲಾ ಘಟಕದ ಅಧ್ಯಕ್ಷ ಕೆ.ಸಿ. ಶ್ರೀನಿವಾಸಮೂರ್ತಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಈ ಕುರಿತಾಗಿ ಮಾಹಿತಿ ನೀಡಿದ ಅವರು, ಪ್ರತಿಭಾ ಪುರಸ್ಕಾರ ಸಮಾರಂಭವು ನಗರದ ನಿಜಲಿಂಗಪ್ಪ‌ … Read more

error: Content is protected !!