ಜಿಎಂಐಟಿಯಲ್ಲಿ ಜು. 16 ರಂದು “ಆನ್ ಕ್ಯಾಂಪಸ್ ಎಂಪ್ಲಾಯ್ಮೆಂಟ್ ಆಫರ್ಸ್ ಸೆಲೆಬ್ರೇಶನ್ ಡೇ”

ಗ್ಲೋಬಲ್ ಟ್ಯಾಲೆಂಟ್ ಟ್ರ್ಯಾಕ್ ಫೌಂಡೇಶನ್ ಪುಣೆ ಸಂಸ್ಥೆಯ ಸಹಯೋಗದಲ್ಲಿ ಸುದ್ದಿ360, ದಾವಣಗೆರೆ, ಜು.15: ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ನಗರದ ಜಿಎಂ ತಾಂತ್ರಿಕ ಮಹಾವಿದ್ಯಾಲಯದ ಎಂಜಿನಿಯರಿಂಗ್ ಮತ್ತು ಎಂಬಿಎ ವಿದ್ಯಾರ್ಥಿಗಳು ವಿವಿಧ ಕಂಪನಿಗಳ ಸಂದರ್ಶನ ಪ್ರಕ್ರಿಯೆಯಲ್ಲಿ ಒಟ್ಟು 783 ಜಾಬ್ ಆಫರ್ಸ್ ಸ್ವೀಕರಿಸಿದ್ದಾರೆ. ಇದರಿಂದ ಮಧ್ಯ ಕರ್ನಾಟಕ ಭಾಗದಲ್ಲಿ ಅತಿ ಹೆಚ್ಚು ಜಾಬ್ ಆಫರ್ಸ್ ಸ್ವೀಕರಿಸಿದ ಕಾಲೇಜು ಎಂಬ ಕೀರ್ತಿಗೆ ಪಾತ್ರವಾಗಿದೆ. ಆಯ್ಕೆಯಾದ ಎಲ್ಲಾ ವಿದ್ಯಾರ್ಥಿಗಳಿಗೆ ಇದೇ ದಿನಾಂಕ 16ನೇ ಜುಲೈ ರಂದು  ಬೆಳಗ್ಗೆ 9.30 ಕ್ಕೆ ಕಾಲೇಜಿನ … Read more

‘ಭವತಾರಿಣಿ’ಯಿಂದ ‘ದೇವವನ’ -1000 ಗಿಡ ನೆಡುವ ಮಾದರಿ ಕಾರ್ಯಕ್ರಮ

ಸುದ್ದಿ360, ದಾವಣಗೆರೆ, ಜು.15: ನಗರದ ಐಟಿಐ ಕಾಲೇಜಿನ ಆವರಣದಲ್ಲಿ ಭವತಾರಿಣಿ ಸಂಸ್ಥೆಯು ಗುರುಪೂರ್ಣಿಮೆಯ ಅಂಗವಾಗಿ ಆಯೋಜಿಸಿದ್ದ “ದೇವವನ” ಎಂಬ ವಿನೂತನ ಮಾದರಿ ಕಾರ್ಯಕ್ರಮ ಜರುಗಿತು. 1000 ಗಿಡಗಳನ್ನು ನೆಡುವ ಕಾರ್ಯಕ್ರಮ ಇದಾಗಿತ್ತು. ನಗರದ ರಾಮಕೃಷ್ಣಾಶ್ರಮದ ಅಧ್ಯಕ್ಷರಾದ ಪರಮಪೂಜ್ಯ ಸ್ವಾಮಿ ತ್ಯಾಗೀಶ್ವರಾನಂದಜೀ ಅವರು ಉದ್ಘಾಟಿಸಿದರು.  ಜು.10ರಂದು ನಡೆದ ಈ ಕಾರ್ಯಕ್ರಮದಲ್ಲಿ ಮಾವು, ಹಲಸು, ಮತ್ತಿ, ನೆಲ್ಲಿ  ಸೇರಿದಂತೆ ಸುಮಾರು 45ಕ್ಕೂ ಹೆಚ್ಚು ಜಾತಿಯ ಗಿಡಗಳನ್ನು ನೆಡಲಾಗಿದೆ ಎಂದು ಭವತಾರಿಣಿ ಟ್ರಸ್ಟ್ ‘ನ ಮುಖ್ಯಸ್ಥರಾದ ಶಾರದಾ ಡಿ.ಆರ್ ಮತ್ತು ಚಂದ್ರಮೋಹನ್ … Read more

ನೂತನ ಜಿಲ್ಲಾಧಿಕಾರಿಗೆ ಲಿಂಗಾಯತ ಮಹಾಸಭಾದಿಂದ ಸ್ವಾಗತ

ಸುದ್ದಿ360, ದಾವಣಗೆರೆ, ಜು.15:  ದಾವಣಗೆರೆ ಜಿಲ್ಲಾ ಅಖಿಲ ಭಾರತ ವೀರಶೈವ – ಲಿಂಗಾಯತ ಮಹಾಸಭಾ ವತಿಯಿಂದ ದಾವಣಗೆರೆ ಜಿಲ್ಲಾ ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಶಿವಾನಂದ್ ಕಪಾಶಿ ಅವರಿಗೆ ಸ್ವಾಗತ ಕೋರಾಲಾಯಿತು. ಈ ಸಂಧರ್ಭದಲ್ಲಿ ಅಖಿಲ ಭಾರತ ವೀರಶೈವ – ಲಿಂಗಾಯತ ಮಹಾಸಭಾ ಜಿಲ್ಲಾಧ್ಯಕ್ಷರಾದ ದೇವರಮನೆ ಶಿವಕುಮಾರ್, ಯುವ ಘಟಕದ ರಾಷ್ಟ್ರೀಯ ಉಪಾಧ್ಯಕ್ಷರಾದ ಸಂದೀಪ್ ಅಣಬೇರು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ಆರ್. ಸಿದ್ದೇಶ್, ಜಿಲ್ಲಾ ಕಾರ್ಯದರ್ಶಿ ರಮೇಶ್ ಬಿ.ಜೆ, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಶುಭಾ ಐನಹಳ್ಳಿ, … Read more

ಇಗ್ನೋದಿಂದ ವಿವಿಧ ಕೋರ್ಸ್ ಗಳಿಗೆ ಅರ್ಜಿ ಆಹ್ವಾನ

ಸುದ್ದಿ360, ದಾವಣಗೆರೆ, ಜು.15: ಇಂದಿರಾ ಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾನಿಲಯವು ಜುಲೈ  2022 ರ ಸಾಲಿಗೆ ವಿವಿಧ ಸರ್ಟಿಫಿಕೇಟ್ ಕೋರ್ಸ್,  ಡಿಪ್ಲೊಮಾ , ಪಿ.ಜಿ.ಡಿಪ್ಲೊಮಾ , ಪದವಿ ಮತ್ತು ಸ್ನಾತಕೋತ್ತರ ಪದವಿ ಒಳಗೊಂಡಂತೆ ವಿವಿಧ ಶೈಕ್ಷಣಿಕ  ಕಾರ್ಯಕ್ರಮಗಳ ಪ್ರವೇಶಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಬೆಂಗಳೂರು ಕೇಂದ್ರ ವ್ಯಾಪ್ತಿಯ ಸಹಾಯಕ ಪ್ರಾದೇಶಿಕ ನಿರ್ದೇಶಕರಾದ ಹೇಮಾಮಾಲಿನಿ ಮಾಹಿತಿ ನೀಡಿದರು. ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗೃಹಿಣಿಯರು, ವೃತ್ತಿಪರರು, ವಿದ್ಯಾರ್ಥಿಗಳು, ನಿವೃತ್ತಿ ಹೊಂದಿರುವವರೂ ಸೇರಿದಂತೆ 18 ವರ್ಷ ಪೂರೈಸಿದ ಯಾರೇ … Read more

ಸೇವಾನಿರತರಿಗೆ ಲಾಭ ನಷ್ಟ ಲೆಕ್ಕಿಸದೆ ಸೂಕ್ತ ವೇತನ ನೀಡುವುದು ಸರ್ಕಾರದ ಹೊಣೆ: ಸಿರಿಗೆರೆಶ್ರೀ

ಸುದ್ದಿ 360, ದಾವಣಗೆರೆ, ಜು.15: ಸಾರಿಗೆ ನೌಕರರದು ಜವಾಬ್ದಾರಿಯುತ ಕೆಲಸವಾಗಿದ್ದು, ಸರ್ಕಾರವೂ ಸಹ ನೌಕರರನ್ನು ಜವಾಬ್ದಾರಿಯುತವಾಗಿ ನಡೆಸಿಕೊಳ್ಳಬೇಕು. ನೌಕರರನ್ನಾಗಿ ಪರಿಗಣಿಸದೆ ಸೇವಾ ಧುರೀಣರು ಎಂದು ಪರಿಗಣಿಸುವ ಮೂಲಕ ನಿಮ್ಮ ಸಂಕಷ್ಟವನ್ನು ಪರಿಹರಿಸಲು ಮುಂದಾಗಬೇಕು ಎಂದು ಸಿರಿಗೆರೆ ಬೃಹನ್ಮಠದ ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟದ ವತಿಯಿಂದ ನಗರದ ತ್ರಿಶೂಲ್ ಕಲಾ ಭವನದಲ್ಲಿ ಆಯೋಜಿಸಲಾಗಿದ್ದ ಅಖಿಲ ಕರ್ನಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಮಹಾ ಸಮ್ಮೇಳನ ಸಮಾರಂಭದ … Read more

ಯಾರೂ ಧರ್ಮಕ್ಕೆ ಹೊರತಲ್ಲ: ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ

ಸುದ್ದಿ360, ದಾವಣಗೆರೆ, ಜು.15:  ಯಾರೂ ಧರ್ಮಕ್ಕೆ ಹೊರತಲ್ಲ ಮತ್ತು ಕಾನೂನು ಧರ್ಮ ಬಿಟ್ಟು ಬೇರೆ ಅಲ್ಲ ಎಂದು ಸಿರಿಗೆರೆ ಬೃಹನ್ಮಠದ ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅಭಿಪ್ರಾಯಪಟ್ಟರು. ಅವರು ನಗರದ ತ್ರಿಶೂಲ್ ಕಲಾ ಭವನದಲ್ಲಿ ನಡೆದ ಅಖಿಲ ಕರ್ನಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಮಹಾ ಸಮ್ಮೇಳನ ಸಮಾರಂಭದ ಸಾನ್ನಿಧ್ಯ ವಹಿಸಿ ಮಾತನಾಡಿ, ಅನೇಕ ವೇಳೆ ಧರ್ಮ ಮತ್ತು ಕಾನೂನು ವಿಷಯಗಳ ಮಧ್ಯೆ ಸಂಘರ್ಷವಾಗುತ್ತಿರುತ್ತದೆ. ಯಾರು ಕಾನೂನಿಗೆ ಹೊರತಲ್ಲ ಎಂದು ಹೇಳುತ್ತಾರೆ. ಆದರೆ ಕಾನೂನು ಧರ್ಮ ಬಿಟ್ಟು … Read more

ಸುರಿವ ಮಳೆಯಲ್ಲಿಯೂ ಚಾಮುಂಡೇಶ್ವರಿ ಅಮ್ಮನ ದರ್ಶನಕ್ಕೆ ಹರಿದು ಬರುತ್ತಿರುವ ಭಕ್ತ ಸಮೂಹ

ಸುದ್ದಿ360, ಮೈಸೂರು ಜು.15: ನಾಡದೇವತೆ ಮಹಿಷಾಸುರ ಮರ್ದಿನಿ ಚಾಮುಂಡೇಶ್ವರಿ ಅಮ್ಮನವರಿಗೆ ಆಷಾಡ ಮಾಸದ ಮೂರನೇ ಶುಕ್ರವಾರವಾದ ನಿಮಿತ್ತ  ವಿಶೇಷ ಅಲಂಕಾರ ಮಾಡಲಾಗಿದ್ದು, ಬಿಡುವು ನೀಡದೆ ಸುರಿಯುತ್ತಿರುವ ಮಳೆಯಲ್ಲಿಯೂ ಭಕ್ತರು ಬಂದು ದೇವಿಯ ದರ್ಶನ ಪಡೆದು ಪುನೀತರಾಗುತ್ತಿದ್ದಾರೆ. ವೀಡಿಯೋ ಸಹಿತವರದಿ:  ಮಹೇಶ್ ಕುಮಾರ್ ಆರ್.

ಜಲಸಿರಿ ಯೋಜನಾ ಅನುಷ್ಠಾನ ಸಭೆ

ಸುದ್ದಿ360, ದಾವಣಗೆರೆ, ಜು.15: ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೆ.ಯು.ಐ.ಡಿ.ಎಫ್.ಸಿ ವತಿಯಿಂದ ಜಲಸಿರಿ ಯೋಜನೆಯಡಿ ಅನುಷ್ಠಾನಗೊಳಿಸಲಾಗುತ್ತಿರುವ ನೀರು ಸರಬರಾಜು ಹಾಗೂ ನಿರಂತರ ನೀರು ಸರಬರಾಜು ಕಾಮಗಾರಿಯ ಪ್ರಗತಿ ಪರಿಶೀಲನಾ ಹಾಗೂ ಕಾಮಗಾರಿಗಳಿಗೆ ಸಂಬಂಧಿಸಿದ ವಿವಿಧ ಇಲಾಖೆಗಳ ಸಮನ್ವಯ ಸಮಿತಿ ಸಭೆಯನ್ನು ಜುಲೈ.15 ರಂದು ನಡೆಯಲಿದೆ. ದಾವಣಗೆರೆ ಲೋಕಸಭಾ ಸದಸ್ಯರಾದ ಡಾ.ಜಿ.ಎಂ ಸಿದ್ದೇಶ್ವರ್ ಅವರ ಅಧ್ಯಕ್ಷತೆಯಲ್ಲಿ ಮತ್ತು ವ್ಯವಸ್ಥಾಪಕ ನಿರ್ದೇಶಕರು, ಕೆ.ಯು.ಐ.ಡಿ.ಎಫ್.ಸಿ ಬೆಂಗಳೂರು, ಜಿಲ್ಲಾಧಿಕಾರಿಗಳ ಉಪಸ್ಥಿತಿಯಲ್ಲಿ ದಾವಣಗೆರೆ ಸ್ಮಾರ್ಟ್ ಸಿಟಿ ಕಚೇರಿಯ ಸಭಾಂಗಣದಲ್ಲಿ ಮಧ್ಯಾಹ್ನ 12 ಗಂಟೆಗೆ ಏರ್ಪಡಿಸಲಾಗಿದೆ … Read more

ಜು.15 – ವಿಶ್ವ ಜನಸಂಖ್ಯಾ ದಿನಾಚರಣೆ

ಸುದ್ದಿ360, ದಾವಣಗೆರೆ, ಜು.15: ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಛೇರಿ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ದಾವಣಗೆರೆ ಇವರ ಸಂಯಕ್ತಾಶ್ರಯದಲ್ಲಿ “ವಿಶ್ವ ಜನಸಂಖ್ಯಾ ದಿನಾಚರಣೆ-2022” ರ “ಕುಟುಂಬ ಯೋಜನೆ ಉಪಾಯಗಳನ್ನು ನಮ್ಮದಾಗಿಸಿ, ಉನ್ನತಿಯ ಹೊಸ ಅಧ್ಯಾಯ ಬರೆಯೋಣ” ಎಂಬ ಘೋಷಣೆಯೊಂದಿಗೆ ಜು.15 ರ ಶುಕ್ರವಾರ ದಂದು ಬೆ.10.30ಕ್ಕೆ ವಿದ್ಯಾನಗರದ ಕುವೆಂಪು ಕನ್ನಡ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮಕ್ಕೂ ಮುನ್ನ ಬೆ.09 ಗಂಟೆಗೆ ಸಿ.ಜಿ. ಆಸ್ಪತ್ರೆ ಆವರಣದಿಂದ ಗುಂಡಿ … Read more

ಶ್ರೀ ವಾಣಿ ಲ್ಯಾಂಡ್ ಲಿಂಕ್ಸ್ ಕಚೇರಿಯಲ್ಲಿ ಎಸ್ ಟಿ ವೀರೇಶ್ ಜನ್ಮದಿನಾಚರಣೆ

ಸುದ್ದಿ360, ದಾವಣಗೆರೆ, ಜು.14: ನಗರದ ಕೆ. ಬಿ.‌ ಬಡಾವಣೆಯ ಒಂದನೇ ಮುಖ್ಯ‌ ರಸ್ತೆಯ ಶ್ರೀ ವಾಣಿ ಲ್ಯಾಂಡ್ ಲಿಂಕ್ಸ್ ಕಚೇರಿಯಲ್ಲಿ ಮಹಾನಗರ ಪಾಲಿಕೆಯ ಮಾಜಿ‌ ಮೇಯರ್ ಹಾಗೂ ಹಾಲಿ‌ ಸದಸ್ಯ ಎಸ್. ಟಿ. ವೀರೇಶ್ ಅವರ 48ನೇ ವರ್ಷದ ಹುಟ್ಟುಹಬ್ಬವನ್ನು ಕೇಕ್‌ ಕತ್ತರಿಸುವ ಮೂಲಕ ಆಚರಿಸಲಾಯಿತು. ಈ ವೇಳೆ ಶ್ರೀ ವಾಣಿ ಲ್ಯಾಂಡ್ ಲಿಂಕ್ಸ್ ನ ಮಾಲೀಕರಾದ ನಾಗಭೂಷಣ್ ವಾಣಿ, ಡೈಮಂಡ್ ಮಂಜುನಾಥ್, ಎಸ್. ರವೀಂದ್ರ ಮೊಯ್ಲಿ, ಬಿಜೆಪಿ ಯುವ ಮುಖಂಡ ಶ್ರೀನಿವಾಸ್,  ನಾಗರಾಜ್ ಬ್ರಷ್ ಮ್ಯಾನ್, … Read more

error: Content is protected !!