12ನೇ ಶತಮಾನದ ವಚನ ಸಾಹಿತ್ಯ ಸಾರ್ವಕಾಲಿಕ

ಶರಣರ ಸಮ ಸಮಾಜದ ಮಾರ್ಗದಲ್ಲಿ ಸಾಗಬೇಕಿದೆ : ಡಾ.ಬಿ.ಪಿ. ಕುಮಾರ್ ಸುದ್ದಿ360, ದಾವಣಗೆರೆ, ಜು.9:  ವಚನಗಳಲ್ಲಿ ಜಾತಿ, ಮತ, ಪಂಥ, ವರ್ಗ, ವರ್ಣ, ಲಿಂಗ ತಾರತಮ್ಯ, ಪ್ರಾದೇಶಿಕ ಭಿನ್ನತೆ ಹೀಗೆ ಹತ್ತು ಹಲವಾರು ತಾರತಮ್ಯದ ವಿಚಾರಗಳಿಗೆ ಪರಿಹಾರ ಸೂಚಿಸಲಾಗಿದ್ದು, ಶರಣರು ಹಾಕಿಕೊಟ್ಟ ಸಮ ಸಮಾಜದ ಮಾರ್ಗದಲ್ಲಿ ನಮಗೆ ಸಾಗಲು ಆಗುತ್ತಿಲ್ಲ ಎಂದು ಎ.ವಿ ಕಮಲಮ್ಮ ಮಹಿಳಾ ಕಾಲೇಜಿನ ಪ್ರಾಂಶುಪಾಲ ಡಾ.ಬಿ.ಪಿ. ಕುಮಾರ್ ವಿಷಾದಿಸಿದರು. ನಗರದ ಅಕ್ಕಮಹಾದೇವಿ ರಸ್ತೆಯ ಎವಿಕೆ ಕಾಲೇಜಿನಲ್ಲಿ ಶನಿವಾರ ಕನ್ನಡ ವಿಭಾಗದಿಂದ ಹಮ್ಮಿಕೊಂಡಿದ್ದ ವಚನ … Read more

ಕೇಂದ್ರ ಹಾಗೂ ರಾಜ್ಯ ಸರ್ಕಾರದ ಬೆಲೆ ಏರಿಕೆ ನೀತಿ ವಿರುಧ್ಧ ಜಿಲ್ಲಾ ಯುವ ಕಾಂಗ್ರೆಸ್ ಆಕ್ರೋಶ

ಸುದ್ದಿ360, ದಾವಣಗೆರೆ, ಜು.9:  ಅಗತ್ಯ ವಸ್ತುಗಳ ಬೆಲ ಏರಿಕೆ ಖಂಡಿಸಿ, ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುಧ್ಧ ದಾವಣಗೆರೆ ಜಿಲ್ಲಾ ಯುವ ಕಾಂಗ್ರೆಸ್ ಶನಿವಾರ ನಗರದ ಜಯದೇವ ವೃತ್ತದಲ್ಲಿ ಪ್ರತಿಭಟನೆ ನಡೆಸುವುದರ ಮೂಲಕ ತೀವ್ರ ಆಕ್ರೋಶ ವ್ಯಕ್ತ ಪಡಿಸಿತು. ಪ್ರತಿಭಟನೆಯಲ್ಲಿ ಮಾತನಾಡಿದ ಜಿಲ್ಲಾ ಅಧ್ಯಕ್ಷ ನಿಖಿಲ್ ಕೊಂಡಜ್ಜಿ ಕೇಂದ್ರ ಸರ್ಕಾರವು ಸಾಮಾನ್ಯ ಜನರನ್ನ ಅಕ್ಷರಶಃ ಬೀದಿಗೆ ತಳ್ಳಿದೆ ದಿನೇ ದಿನೇ ದಿನಬಳಕೆಯ ವಸ್ತುಗಳ ಬೆಲೆಯನ್ನು ಏರಿಸಿ ಜನಸಾಮಾನ್ಯರ ಬದುಕು ದುಸ್ತರವಾಗಿಸುತ್ತಿದೆ ಎಂದು ಆರೋಪಿಸಿದರು. ಜಿಲ್ಲಾ ಉಪಾಧ್ಯಕ್ಷ  ರಂಜಿತ್ … Read more

ಸಿದ್ದರಾಮಯ್ಯ ಅಮೃತ ಮಹೋತ್ಸವ – ದಾವಣಗೆರೆಯಲ್ಲಿ ಸ್ಥಳ ವೀಕ್ಷಿಸಿದ‌ ಕಾಂಗ್ರೆಸ್ ಮುಖಂಡರು

ಶಾಮನೂರು ಶಿವಶಂಕರಪ್ಪ ಅವರ ಒಡೆತನದ 50 ಎಕರೆ ಸ್ಥಳದಲ್ಲಿ ಕಾರ್ಯಕ್ರಮ ಸುದ್ದಿ360, ದಾವಣಗೆರೆ, ಜು.9: ಈಗಾಗಲೇ ಭಾರೀ ಪ್ರಚಾರ ಗಿಟ್ಟಿಸಿರುವ  ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 75ನೇ ವರ್ಷದ ಜನ್ಮ ದಿನದ ಅಮೃತ ಮಹೋತ್ಸವ ಆಗಸ್ಟ್ 3ರಂದು ಬೆಳಿಗ್ಗೆ 11ಕ್ಕೆ ದಾವಣಗೆರೆ ನಗರದಲ್ಲಿ ಏರ್ಪಡಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸಿದ್ಧರಾಮಯ್ಯ  ಆಪ್ತರ ತಂಡ ಶನಿವಾರ ದಾವಣಗೆರೆಗೆ ದೌಡಾಯಿಸಿ ಪರಿಶೀಲನೆಯಲ್ಲಿ ತೊಡಗಿದೆ. ಇಲ್ಲಿನ ರಾಷ್ಟ್ರೀಯ ಹೆದ್ದಾರಿ 48ರ ದಾವಣಗೆರೆ- ಹರಿಹರ  ರಸ್ತೆಯ ಬಳಿ ಶಾಸಕ ಶಾಮನೂರು ಶಿವಶಂಕರಪ್ಪ ಅವರ ಒಡೆತನದ … Read more

ದೇಹ ಮನಸ್ಸನ್ನು ಸದೃಢಗೊಳಿಸುವ ಆಟ-ಪಾಠಗಳಲ್ಲಿ ಕಿಕ್ ಕಂಡುಕೊಳ್ಳಿ

ವಿದ್ಯಾರ್ಥಿಗಳಿಗೆ ರೆಡ್‌ಕ್ರಾಸ್ ಜಿಲ್ಲಾ ಚೇರ್ಮನ್ ಡಾ.ಎ.ಎಂ. ಶಿವಕುಮಾರ್ ಕಿವಿಮಾತು ಸುದ್ದಿ360, ದಾವಣಗೆರೆ, ಜು.9: ಯುವ ಪೀಳಿಗೆ ಹೊಗೆ ಉಗುಳುವುದರಲ್ಲಿ, ಮದ್ಯ ಸೇವನೆಯಲ್ಲಿ ಕಿಕ್ ಕಂಡುಕೊಳ್ಳುತ್ತಿದೆ. ಅದರ ಬದಲು, ದೇಹ ಮತ್ತು ಮನಸನ್ನು ಸ್ಥಿಮಿತದಲ್ಲಿಡುವ ವಿವಿಧ ಆಟಗಳಲ್ಲಿ, ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸುವುದರಲ್ಲಿ ಹಾಗೂ ಉತ್ತಮ ಆಹಾರ ಸೇವಿಸುವುದರಲ್ಲಿ ಕಿಕ್ ಕಂಡುಕೊಂಡರೆ ಜೀವನ ಉತ್ತಮವಾಗುವುದರ ಜೊತೆಗೆ ಸದೃಢ ಸಮಾಜ ನಿರ್ಮಾಣವಾಗುತ್ತದೆ ಎಂದು ರೆಡ್‌ಕ್ರಾಸ್ ಜಿಲ್ಲಾ ಚೇರ್ಮನ್ ಡಾ.ಎ.ಎಂ. ಶಿವಕುಮಾರ್ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ನಗರದ ಡಿಆರ್‌ಎಂ ವಿಜ್ಞಾನ … Read more

ಅಮರನಾಥ: ಸಹಾಯವಾಣಿಯ ವಿವರ ಇಲ್ಲಿದೆ

ಕನ್ನಡಿಗರ ರಕ್ಷಣೆಗೆ ಕ್ರಮ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸುದ್ದಿ360, ಬೆಂಗಳೂರು, ಜು.09: ಅಮರನಾಥದಲ್ಲಿ ಮೇಘಸ್ಪೋಟದಿಂದ 15 ಜನ ಸಾವನ್ನಪ್ಪಿದ್ದು,  ಪ್ರಾಥಮಿಕ ಮಾಹಿತಿಯ ಪ್ರಕಾರ ನೂರಕ್ಕೂ ಹೆಚ್ಚು ಜನ ಕನ್ನಡಿಗರು ಅಮರನಾಥ ಯಾತ್ರೆಯಲ್ಲಿದ್ದಾರೆ. ಕನ್ನಡಿಗರ ರಕ್ಷಣೆಗೆ ಸರ್ಕಾರ ಕ್ರಮ ಕೈಗೊಂಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ರಾಜ್ಯದಿಂದ ಅಮರನಾಥ ಯಾತ್ರೆ ಕೈಗೊಂಡಿದ್ದ ಕನ್ನಡಿಗರು ಸುರಕ್ಷಿತವಾಗಿದ್ದು, ಬೇರೆ ಯಾವ ಅಹಿತರಕರ ಸುದ್ದಿಯೂ ಬಂದಿಲ್ಲ. ಅಲ್ಲಿಯ ರಾಜ್ಯ ಸರ್ಕಾರ ಮತ್ತು … Read more

ಅಮರನಾಥ ಯಾತ್ರೆಯಲ್ಲಿ ಸಿಲುಕಿದವರಿಗೆ ಕರ್ನಾಟಕ ಸರ್ಕಾರದಿಂದ ಸಹಾಯವಾಣಿ

ಸುದ್ದಿ360, ಬೆಂಗಳೂರು ಜು.8: ಇಂದು ಸುಮಾರು 5:30 ರ ಸಮಯಕ್ಕೆ  ಶ್ರೀ ಅಮರನಾಥ ಗುಹೆಯ ಬಳಿ ಮೋಡದ ಸ್ಫೋಟದಿಂದಾಗಿ ಯಾತ್ರಿಕರ ವಾಸಸ್ಥಳಗಳಿಗೆ ಹಾನಿಯಾಗಿದೆ. NDRF, ITBP, ಭಾರತೀಯ ಸೇನೆ, CRPF, BSF, SDRF ಮತ್ತು ಜಮ್ಮು ಮತ್ತು ಕಾಶ್ಮೀರ್ ಪೋಲಿಸ್ ಜಂಟಿ ರಕ್ಷಣಾ ಕಾರ್ಯಾಚರಣೆಯಲ್ಲಿ ನಿರತರಾಗಿದ್ದಾರೆ. ಸಂಕಷ್ಟದಲ್ಲಿ ಸಿಲುಕಿದವರಿಗೆ ಜಮ್ಮು ಕಾಶ್ಮೀರ ಸರ್ಕಾರವು ಸಹಾಯಹಸ್ತ ಚಾಚಿದೆ. ಶ್ರೀ ಅಮರನಾಥ ಗುಹೆಯ ಬಳಿ ಕರ್ನಾಟಕದ ಯಾವುದೇ ವ್ಯಕ್ತಿಯು ಸಿಕ್ಕಿಬಿದ್ದಲ್ಲಿ ದಯವಿಟ್ಟು ಕೆಳಗಿನ ಸಂಖ್ಯೆಗೆ ಕರೆ ಮಾಡಿ ಸಂಪರ್ಕ ಮಾಡಬಹುದಾಗಿದೆ.‌  … Read more

ಸಾಲುಮರದ ತಿಮ್ಮಕ್ಕನಿಗೆ ಸಂಪುಟ ದರ್ಜೆ ಸ್ಥಾನಮಾನ

ಸುದ್ದಿ360, ಬೆಂಗಳೂರು ಜು.8: ರಾಜ್ಯ ಸರ್ಕಾರವು ಪರಿಸರ ರಾಯಭಾರಿಯನ್ನಾಗಿ ನೇಮಿಸಿರುವ ಸಾಲುಮರದ ತಿಮ್ಮಕ್ಕ ಅವರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿ ಆದೇಶ ಹೊರಡಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಿಮ್ಮಕ್ಕ ಅವರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡುವುದಾಗಿ ಇತ್ತೀಚೆಗೆ ಘೋಷಿಸಿದ್ದರು. ಇಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಶಿಷ್ಟಾಚಾರ ವಿಭಾಗ ಈ ಕುರಿತು ಅಧಿಸೂಚನೆ ಹೊರಡಿಸಿದ್ದು, ತಿಮ್ಮಕ್ಕ ಅವರಿಗೆ ವೇತನ, ಭತ್ಯೆ, ವಸತಿಗೃಹ, ಸಿಬ್ಬಂದಿ ಕಾರು ಸೇರಿದಂತೆ ಸಂಪುಟ ದರ್ಜೆ ಸಚಿವರಿಗೆ ದೊರೆಯವ ಸೌಲಭ್ಯಗಳು ದೊರೆಯಲಿವೆ.

ಶ್ರೀಶೈಲಕ್ಕೆ ಅ.10ರಿಂದ 80 ದಿನಗಳ ಧಾರ್ಮಿಕ, ಸಾಮಾಜಿಕ, ಜನಜಾಗೃತಿ ಪಾದಯಾತ್ರೆ

ಸುದ್ದಿ360, ದಾವಣಗೆರೆ, ಜು.08: ಶ್ರೀಶೈಲ ಜಗದ್ಗುರುಗಳ ದ್ವಾದಶ ಪೀಠಾರೋಹಣ ಮಹೋತ್ಸವ ಹಾಗೂ ಜನ್ಮ ಸುವರ್ಣಮಹೋತ್ಸವದ ಅಂಗವಾಗಿ, ಸ್ವಸ್ಥ ಸಮಾಜದ ನಿರ್ಮಾಣಕ್ಕಾಗಿ ಹತ್ತು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಈ ನಿಟ್ಟಿನಲ್ಲಿ ಇದೇ ಬರುವ ಅ.10ರಿಂದ 2023ರ ಜ.15ರವರೆಗೆ 80 ದಿನಗಳ ಕಾಲ ವಿವಿಧ ಧಾರ್ಮಿಕ, ಸಾಮಾಜಿಕ ಹಾಗೂ ಜನಜಾಗೃತಿ ಪಾದಯಾತ್ರೆ ಹಮ್ಮಿಕೊಂಡಿರುವುದಾಗಿ ಶ್ರೀಶೈಲ ಜಗದ್ಗುರು ಶ್ರೀ ಡಾ. ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮೀಜಿ ತಿಳಿಸಿದರು. ನಗರದ ಪಿಬಿ ರಸ್ತೆಯಲ್ಲಿರುವ ಶ್ರೀಶೈಲ ಮಠದ ಶ್ರೀ ಜಗದ್ಗುರು ಪಂಚಾಚಾರ್ಯ ಮಂದಿರದಲ್ಲಿ ಶುಕ್ರವಾರ … Read more

ಎಸ್ ಸಿ, ಎಸ್ ಟಿ ಮೀಸಲಾತಿಗಾಗಿ ಶ್ರೀಗಳ ಹೋರಾಟ ಬೆಂಬಲಿಸಿ ಜು.11ಕ್ಕೆ ಪ್ರತಿಭಟನೆ

ಸುದ್ದಿ360, ದಾವಣಗೆರೆ, ಜು.08: ರಾಜನಹಳ್ಳಿ ಮಹರ್ಷಿ ವಾಲ್ಮೀಕಿ ಪೀಠದ ಶ್ರೀ ಪ್ರಸನ್ನಾನಂದ ಸ್ವಾಮೀಜಿಯವರು ಕಳೆದ 150 ದಿನಗಳಿಂದ ಎಸ್‌ಸಿ, ಎಸ್‌ಟಿ ಸಮುದಾಯಗಳ ಮೀಸಲಾತಿಗಾಗಿ ನಡೆಸುತ್ತಿರುವ  ಹೋರಾಟ ಬೆಂಬಲಿಸಿ ಜು.11ರಂದು ಬೆಳಗ್ಗೆ 11 ಗಂಟೆಗೆ ನಗರದ ಜಿಲ್ಲಾದಿಕಾರಿ ಕಚೇರಿ ಎದುರು  ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಸ್ವಾಭಿಮಾನಿ ಎಸ್‌ಸಿ-ಎಸ್‌ಟಿ ಸಂಘಟನೆಗಳ ಒಕ್ಕೂಟದ ಸಂಚಾಲಕ ಹೊದಿಗೆರೆ ರಮೇಶ್ ತಿಳಿಸಿದರು. ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನ್ಯಾ. ನಾಗಮೋಹನ್ ದಾಸ್ ವರದಿಯಂತೆ ಜನಸಂಖ್ಯೆ ಆಧಾರದಲ್ಲಿ ಎಸ್‌ಸಿ, ಎಸ್‌ಟಿ ಸಮುದಾಯಗಳ ಮೀಸಲಾತಿ ಹೆಚ್ಚಿಸುವಂತೆ ಒತ್ತಾಯಿಸಿ … Read more

ಶಾಲಾಮಕ್ಕಳಿಗೆ ಶೂ, ಸಾಕ್ಸ್  ಹಂಚಿಕೆಗೆ 132 ಕೋಟಿ ರೂ.ಗಳ ಅನುಮೋದನೆ: ಸಿಎಂ

ಸುದ್ದಿ360, ಬೆಂಗಳೂರು, ಜು. 08: ಶಾಲಾ ಮಕ್ಕಳಿಗೆ ಶೂ ಮತ್ತು ಸಾಕ್ಸ್  ಹಂಚಿಕೆಗೆ 132 ಕೋಟಿ ರೂ.ಗಳನ್ನು ಒದಗಿಸಿ ಅನುಮೋದನೆ ನೀಡಲಾಗಿದೆ ಎಂದು  ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಸಮವಸ್ತ್ರದ ವಿಚಾರದಲ್ಲಿ ಸರ್ಕಾರ ಈಗಾಗಲೇ ಸಮವಸ್ತ್ರಕ್ಕೆ ಅನುಮೋದನೆ ನೀಡಿದೆ. ಸಮವಸ್ತ್ರ ತಯಾರಾಗಲು ಸ್ವಲ್ಪ ಸಮಯ ಹಿಡಿಯುತ್ತದೆ. ನಂತರ ವಿತರಣೆಯಾಗಲಿದೆ. ಈ ವಿಷಯದಲ್ಲಿ ಯಾವುದೇ ಗೊಂದಲ ಸೃಷ್ಟಿಸುವ ಅಗತ್ಯವಿಲ್ಲ ಎಂದರು. ಆಗ ಭಿಕ್ಷೆ ಬೇಡಿರುವ ಹಣ ಎಲ್ಲಿ? ಕೆಪಿಸಿಸಿ ಅಧ್ಯಕ್ಷ  … Read more

error: Content is protected !!