ಜಿಎಂಐಟಿ:  750 ವಿದ್ಯಾರ್ಥಿಗಳಿಗೆ ಜಾಬ್ ಆಫರ್ – ಜು.15 ರಂದು ‘ಆನ್ ಕ್ಯಾಂಪಸ್ ಎಂಪ್ಲಾಯ್ಮೆಂಟ್ ಆಫರ್ಸ್ ಸೆಲೆಬ್ರೇಶನ್ ಡೇ’

ಮಧ್ಯ ಕರ್ನಾಟಕ ಭಾಗದ ಜಿಎಂಐಟಿಯಲ್ಲಿ ಅತಿ ಹೆಚ್ಚು ಜಾಬ್ ಆಫರ್ಸ್ ಸುದ್ದಿ360, ದಾವಣಗೆರೆ, ಜು.07: ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ನಗರದ ಜಿಎಂ ತಾಂತ್ರಿಕ ಮಹಾವಿದ್ಯಾಲಯದ ಎಂಜಿನಿಯರಿಂಗ್ ವಿದ್ಯಾರ್ಥಿಗಳು ವಿವಿಧ ಕಂಪನಿಗಳ ಸಂದರ್ಶನ ಪ್ರಕ್ರಿಯೆಯಲ್ಲಿ ಒಟ್ಟು 750 ಜಾಬ್ ಆಫರ್ಸ್ ಸ್ವೀಕರಿಸಿದ್ದಾರೆ. ಇದರಿಂದ ಮಧ್ಯ ಕರ್ನಾಟಕ ಭಾಗದಲ್ಲಿ ಅತಿ ಹೆಚ್ಚು ಜಾಬ್ ಆಫರ್ಸ್ ಸ್ವೀಕರಿಸಿದ ಎಂಜಿನಿಯರಿಂಗ್ ಕಾಲೇಜು ಎಂಬ ಕೀರ್ತಿಗೆ ಪಾತ್ರವಾಗಿದೆ. ವಿವಿಧ ಪ್ರತಿಷ್ಠಿತ ಕಂಪನಿಗಳಾದ ವಿಪ್ರೋ, ಇನ್ಫೋಸಿಸ್, ಕ್ಯಾಪ್ಜೆಮಿನಿ, ಟಿಸಿಎಸ್,    ಎನ್ ಟಿಟಿ ಡೇಟಾ, ಹೆಚ್ ಸಿ … Read more

ಶ್ರೀ ಚಾಮುಂಡೇಶ್ವರಿಗೆ ಆಷಾಡ ಶುಕ್ರವಾರದ ನಿಮಿತ್ತ ವಿಶೇಷ ಅಲಂಕಾರ

ಸುದ್ದಿ360, ಮೈಸೂರು ಜು.08: ನಾಡದೇವತೆ ಮಹಿಷಾಸುರ ಮರ್ದಿನಿ ಚಾಮುಂಡೇಶ್ವರಿ ಅಮ್ಮನವರಿಗೆ ಆಷಾಡ ಮಾಸದ ಎರಡನೇ ಶುಕ್ರವಾರವಾದ ನಿಮಿತ್ತ  ವಿಶೇಷ ಅಲಂಕಾರ ಮಾಡಲಾಗಿದೆ. ಚಿತ್ರ ವರದಿ: ಮಹೇಶ್ ಕುಮಾರ್ ಆರ್.

ಗುತ್ತಿಗೆ, ಹೊರಗುತ್ತಿಗೆ ನೌಕರರ ವೇತನ ಪರಿಷ್ಕರಣೆಗೆ ಸಕಾರಾತ್ಮಕ ಸ್ಪಂದನೆ

ಸುದ್ದಿ360, ಬೆಂಗಳೂರು, ಜು.08:  ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ಗುತ್ತಿಗೆ-ಹೊರಗುತ್ತಿಗೆ ನೌಕರರ ವೇತನವನ್ನು ಹೆಚ್ಚಳ ಮಾಡಲು ಸರ್ಕಾರ ಪ್ರಯತ್ನ ಮಾಡಲಾಗುತ್ತಿದೆ. ಅಲ್ಲದೆ ಆರೋಗ್ಯ ವಿಮೆ ವಿಸ್ತರಿಸಲು ಕೂಡ ಸರ್ಕಾರ ಕ್ರಮ ಕೈಗೊಂಡಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಮುಷ್ಕರ ನಡೆಸುತ್ತಿರುವ ಗುತ್ತಿಗೆ-ಹೊರಗುತ್ತಿಗೆ ನೌಕರರನ್ನು ಭೇಟಿಯಾಗಿ ಚರ್ಚೆ ನಡೆಸಿದ ಬಳಿಕ ಮಾತನಾಡಿದ ಅವರು, ಸರ್ಕಾರದ ಇತಿಮಿತಿಯೊಳಗೆ ಎಲ್ಲಾ ಬೇಡಿಕೆಗಳನ್ನು ಆದಷ್ಟು ಶೀಘ್ರದಲ್ಲಿ ಈಡೇರಿಸಲಾಗುವುದು. ಶ್ರೀನಿವಾಸಾಚಾರಿಯವರ ವರದಿ ಅನುಷ್ಠಾನಕ್ಕೆ … Read more

ಅತಿವೃಷ್ಠಿ: ಇಂದು (ಜು.8) ಮಧ್ಯಾಹ್ನ 2.30 ಕ್ಕೆ ಅಧಿಕಾರಿಗಳೊಂದಿಗೆ ಸಿಎಂ ಸಭೆ

shimoga-riots-were-the-result-of-the-governments-appeasement-policy-basavaraj-bommai

ಸುದ್ದಿ360, ಬೆಂಗಳೂರು, ಜು.08: ರಾಜ್ಯದಲ್ಲಿ ಅತಿಯಾಗಿ ಸುರಿಯುತ್ತಿರುವ ಮಳೆ ಹಾಗೂ ಪ್ರಕೃತಿ ವಿಕೋಪ ಹಿನ್ನೆಲೆಯಲ್ಲಿಇಂದು ಶುಕ್ರವಾರ ಮಧ್ಯಾಹ್ನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯದ 13  ಜಿಲ್ಲೆಗಳ ಉಸ್ತುವಾರಿ ಹಾಗೂ ಸಂಬಂಧಪಟ್ಟ ಇಲಾಖೆಗಳ ಸಚಿವರು, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಸಿ ಇ ಒ ಮತ್ತು ಇತರೆ ಅಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್  ಕರೆದಿದ್ದಾರೆ. ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಮಧ್ಯಾಹ್ನ 2:30ಕ್ಕೆ ಸಭೆ ಕರೆಯಲಾಗಿದ್ದು, ಸಭೆಯಲ್ಲಿ ಯಾವ ಯಾವ ಜಿಲ್ಲೆಗಳಲ್ಲಿ ಎಷ್ಟು ಮಳೆಯಾಗಿದೆ? ಎಷ್ಟು … Read more

ದೇಶ ಅಧೋಗತಿಗೆ ಬಂದಿರುವುದೇ ಕಾಂಗ್ರೆಸ್ಸಿನಿಂದ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360, ಬೆಂಗಳೂರು, ಜು.08: ಕಾಂಗ್ರೆಸ್ ನವರು ಮಹಾತ್ಮಾಗಾಂಧಿ ಅವರ ಹೆಸರನ್ನು ಬಹಳಷ್ಟು ದುರುಪಯೋಗಪಡಿಸಿಕೊಂಡಿದ್ದಾರೆ. ಈ ದೇಶ ಅಧೋಗತಿಗೆ ಬಂದಿರುವುದೇ ಕಾಂಗ್ರೆಸ್ಸಿನಿಂದ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಗುರುವಾರ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಅವರ ಕಾಲದಲ್ಲಿ ಪಿ.ಎಸ್.ಐ ಪ್ರಕರಣದಲ್ಲಿ ಡಿಐಜಿ ಒಬ್ಬರು ಭಾಗಿಯಾಗಿದ್ದರು. ಕಾಂಗ್ರೆಸ್ ಏನೂ ಮಾಡಲಿಲ್ಲ. ಎಫ್.ಐ.ಆರ್ ನಲ್ಲಿ  ಹೆಸರು ಬಂದರೂ ಕೂಡ ಅವರ ವಿಚಾರಣೆ, ಬಂಧನ, ಅಮಾನತು ಯಾವುದನ್ನೂ ಮಾಡಲಿಲ್ಲ. ಈಗ ನಾನು ಬಂದ ನಂತರ ಕಾನೂನು ಕ್ರಮ ಜರುಗಿಸಿದ್ದೇನೆ. ಇವರು ಜನರ … Read more

ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಅನುಭವ ಇಡೀ ದೇಶಕ್ಕೆ ಲಾಭ ತಂದುಕೊಡಲಿದೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360, ಬೆಂಗಳೂರು, ಜು.08: ಡಾ. ಡಿ. ವೀರೇಂದ್ರ ಹೆಗ್ಗಡೆಯವರು ರಾಜ್ಯಸಭೆಗೆ ನಾಮನಿರ್ದೇಶನಗೊಂಡಿರುವುದು ಕನ್ನಡ ನಾಡಿನ ಸಮಗ್ರ ಜನತೆಗೆ ಬಹಳ ಸಂತಸವುಂಟಾಗಿದ್ದು, ಅವರ ಅಗಾಧವಾದ ಅನುಭವ ಇಡೀ ದೇಶಕ್ಕೆ ಲಾಭವನ್ನು ತಂದುಕೊಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಗುರುವಾರ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಶ್ರೀಯುತರು ನಾಲ್ಕೈದು ದಶಕಗಳಿಂದ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಮಾತ್ರವಲ್ಲ, ರಾಜ್ಯದಾದ್ಯಂತ ಹಲವಾರು ಜನೋಪಯೋಗಿ ಕಾರ್ಯಕ್ರಮಗಳನ್ನು ಮಾಡಿದ್ದಾರೆ.  ಅವರ ಗ್ರಾಮೀಣಾಭಿವೃದ್ಧಿ ಕಾರ್ಯಕ್ರಮ ಬಹಳ ಯಶಸ್ವಿಯಾಗಿದೆ. ಶುದ್ಧ ಕುಡಿಯುವ ನೀರಿನ ಘಟಕ, ಕೆರೆಗಳ ನಿರ್ಮಾಣ, … Read more

ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಎಸ್ ಯುಸಿಐ ಪ್ರತಿಭಟನೆ

ಸುಸುದ್ದಿ360, ದಾವಣಗೆರೆ, ಜು.08: ಕೇಂದ್ರ ಸರ್ಕಾರವು ಗೃಹ ಬಳಕೆಯ ಗ್ಯಾಸ್ ಸಿಲೆಂಡರ್ ಬೆಲೆ ಏರಿಕೆ ನಿರ್ಧಾರ ಖಂಡಿಸಿ ಎಸ್.ಯು.ಸಿ.ಐ (ಕಮ್ಯುನಿಸ್ಟ್) ಪಕ್ಷದ ಜಿಲ್ಲಾ ಸಮಿತಿಯಿಂದ ನಗರದ ಗಾಂಧಿ ವೃತ್ತದ ಬಳಿ ಗುರುವಾರ ಪ್ರತಿಭಟಿಸಲಾಯಿತು. ಕೇಂದ್ರ ಸರ್ಕಾರ ಬೆಲೆ ಏರಿಕೆ ನೀತಿಯ ವಿರುದ್ಧ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗುತ್ತಾ ಆಗ್ರೋಷ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಎಸ್.ಯು.ಸಿ.ಐ (ಸಿ) ಜಿಲ್ಲಾ ಸಂಘಟನಾ ಸಮಿತಿಯ ಕಾರ್ಯದರ್ಶಿ ಕಾಂ. ಕೈದಾಳೆ ಮಂಜುನಾಥ್ ರವರು ಮಾತನಾಡುತ್ತಾ “ಕೇಂದ್ರ ಸರ್ಕಾರ ಗೃಹ ಬಳಕೆಯ ಗ್ಯಾಸ್ ಸಿಲೆಂಡರ್ ಬೆಲೆಯನ್ನು … Read more

ಮಾದಕ ವಸ್ತು ಸೇವಿಸುವವರ ಮೇಲೂ ಕ್ರಮ, ಹುಷಾರ್ . . .

ಸುದ್ದಿ360, ದಾವಣಗೆರೆ, ಜು.07: ಮಾದಕ ವಸ್ತು ನಿಯಂತ್ರಿಸುವ ನಿಟ್ಟಿನಲ್ಲಿ ಮಾದಕ ಸೇವಿಸುವವರ ಮೇಲೆಯೂ ಕಠಿಣ ಕ್ರಮ ಜರುಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಕಾನೂನು ಮತ್ತು ಸುವ್ಯವಸ್ಥೆ  ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಕುಮಾರ್ ಹೇಳಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ದಾವಣಗೆರೆ ಹಾಗೂ ಚಿತ್ರದುರ್ಗ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಮೊದಲು ನೌಕರರು, ವಿದ್ಯಾರ್ಥಿಗಳು ಆಗಿರುತ್ತಾರೆ ಎಂಬ ಕಾರಣದಿಂದ  ಮಾದಕ ದ್ರವ್ಯ ಸೇವಿಸುವವರ ಮೇಲೆ ಮೃದು ಧೋರಣೆಯನ್ನು ಹೊಂದಲಾಗಿತ್ತು. … Read more

ಸಣ್ಣ ವಿಚಾರವೆಂದು ನಿರ್ಲಕ್ಷಿಸದೆ ಸೂಕ್ತ ಕ್ರಮ: ಎಡಿಜಿಪಿ ಅಲೋಕ್ ಕುಮಾರ್ ಸೂಚನೆ

ಸುದ್ದಿ360, ದಾವಣಗೆರೆ, ಜು.07: ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಉತ್ತಮ ನಿರ್ವಹಣೆ ನಡೆಯುತ್ತಿದ್ದು, ಯಾವುದೇ ಗಂಭೀರ ಸಮಸ್ಯೆ ಇಲ್ಲ  ಎಂದು  ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ಎರಡೂ ಜಿಲ್ಲೆಗಳ ಕಾರ್ಯ ನಿರ್ವಹಣೆಯನ್ನು ಪ್ರಶಂಸಿಸಿದರು. ಇದು  ಔಪಚಾರಿಕ ಭೇಟಿಯಾಗಿದ್ದು, ಇಂದಿನ ಸಭೆಯಲ್ಲಿ ಕೆಲವು ಸಲಹೆ ಸೂಚನೆಗಳನ್ನು ನೀಡಲಾಗಿದ್ದು, ಇಲಾಖೆಯಲ್ಲಿ ಉತ್ತಮ ಕೆಲಸ ಮಾಡಿದವರಿಗೆ ಗುರುತಿಸಿ ರಿವಾರ್ಡ್ ನೀಡುವ ಮೂಲಕ ಕರ್ತವ್ಯದಕ್ಷತೆ ಹೆಚ್ಚುವಂತೆ ಮೋಟಿವೇಟ್ ಮಾಡುವ ನಿಟ್ಟಿನಲ್ಲಿ ಇಂದು ಸಭೆಯಲ್ಲಿ ಚರ್ಚಿಸಲಾಗಿದೆ ಎಂದರು. … Read more

ಜು. 9,10ರಂದು ಧರ್ಮ ಸಮಾರಂಭ ಹಾಗೂ ಸಂಗೀತಯುಕ್ತ ಇಷ್ಟಲಿಂಗ ಮಹಾಪೂಜೆ

ಸುದ್ದಿ360 ದಾವಣಗೆರೆ.ಜು.07:  ಶ್ರೀ ಮದ್ ರಂಭಾಪುರಿ ಜಗದ್ಗುರುಗಳ ಹಾಗೂ ಶ್ರೀ ಹಿಮವತ್ಕೇದಾರ ಜಗದ್ಗುರುಗಳ ಸಾನ್ನಿಧ್ಯದಲ್ಲಿ ಪರಂಪರೆ ಪುನರ್‌ಮನನ ಧರ್ಮ ಸಮಾರಂಭ ಹಾಗೂ ಶ್ರೀ ಕೇದಾರ ಜಗದ್ಗುರುಗಳ ಸಂಗೀತಯುಕ್ತ ಇಷ್ಟಲಿಂಗ ಮಹಾಪೂಜೆ ಸಮಾರಂಭ ಜು.9 ಮತ್ತು 10ರಂದು ನಗರದ ಪಿಬಿ ರಸ್ತೆಯ ತ್ರಿಶೂಲ್ ಕಲಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಪೂಜಾ ಸಮಿತಿ ಸದಸ್ಯರು, ಧೂಡ ಅಧ್ಯಕ್ಷರೂ ಆದ ಕೆ.ಎಂ. ಸುರೇಶ್ ಹೇಳಿದರು. ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಆಧುನಿಕತೆಯ ಇಂದಿನ ದಿನಮಾನಗಳಲ್ಲಿ ಕೂಡು ಕುಟುಂಬದ ಪರಿಕಲ್ಪನೆ ಮರೆಯಾಗಿದ್ದು, ಪತಿ, ಪತ್ನಿ … Read more

error: Content is protected !!