ಪಠ್ಯದ ಜೊತೆ ಸಾಹಿತ್ಯ, ಸಂಸ್ಕೃತಿ, ಲಲಿತಕಲೆಗಳು ಶಿಕ್ಷಣಕ್ಕೆ ಭದ್ರ ಬುನಾದಿ: ಸಾಲಿಗ್ರಾಮ ಗಣೇಶ್ ಶೆಣೈ ಅಭಿಮತ

ಸುದ್ದಿ360 ದಾವಣಗೆರೆ.ಜು.05: ಶಿಕ್ಷಣ ಕೇವಲ ಅಂಕಪಟ್ಟಿ, ರ‍್ಯಾಂಕ್ ಮಾನದಂಡವಲ್ಲ, ಕಲೆ, ಸಾಹಿತ್ಯ, ಸಂಗೀತ, ಸಂಸ್ಕೃತಿ, ಲಲಿತಕಲೆಗಳ ಎಲ್ಲಾ ಪ್ರಕಾರಗಳು ಪೂರ್ಣ ಪ್ರಮಾಣದಲ್ಲಿ ಭದ್ರವಾದ ಬುನಾದಿ ಇತ್ತೀಚಿನ ದಿನಮಾನಗಳಲ್ಲಿ ಆಧುನಿಕ ತಂತ್ರಜ್ಞಾನದ ಭರಾಟೆಯಲ್ಲಿ ಸಾಹಿತ್ಯ ಕಲಾಪ್ರಕಾರಗಳು ಮರೆಯಾಗುತ್ತಿರುವುದು ವಿಷಾದದ ಸಂಗತಿ. ಮಕ್ಕಳು ವಿದ್ಯಾಭ್ಯಾಸದ ಜತೆಯಲ್ಲಿ ಕವನ ರಚನೆ, ಸಾಹಿತ್ಯದ ಕಡೆ ಹೆಚ್ಚು ಒಲವು ತೋರಿದರೆ ಶಿಕ್ಷಣಕ್ಕೆ ಸಾರ್ಥಕತೆ ಬರುತ್ತದೆ ಮತ್ತು ಮುಂದಿನ ಜೀವನದಲ್ಲಿ ಸಾಧನೆಗಳ ಹಾದಿ ಸುಗಮವಾಗುತ್ತದೆ ಎಂದು ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ … Read more

ದಾವಣಗೆರೆ ಮಹಾನಗರ ಪಾಲಿಕೆಯಲ್ಲಿ ಬಳಕೆಯಾಗದ ಸ್ವಚ್ಛತಾ ಪರಿಕರಗಳು: ನಿರ್ಲಕ್ಷ್ಯಕ್ಕೆ ಕೈ ಸದಸ್ಯರ ಆಕ್ರೋಶ

ಸುದ್ದಿ360 ದಾವಣಗೆರೆ.ಜು.05: ನಗರದ ಸ್ವಚ್ಛತೆಗೆ ಅನುಕೂಲವಾಗಲೆಂದು ಸರ್ಕಾರದ ಅನುದಾನದಿಂದ ಬಂದಿರುವ ಕೋಟ್ಯಂತರ ರೂಪಾಯಿ ವೆಚ್ಚದ ವಾಹನಗಳು ಹಾಗೂ ಪರಿಕರಗಳು ತುಕ್ಕು ಹಿಡಿಯುತ್ತಿದ್ದು, ಮಹಾನಗರ ಪಾಲಿಕೆ ಆಡಳಿತ ವರ್ಗದ ನಿರ್ಲಕ್ಷ್ಯಕ್ಕೆ ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕ ಹಾಗೂ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎಲೆಕ್ಟ್ರಿಕಲ್ ಆಟೋಗಳು, ಮುಕ್ತಿವಾಹಿನಿ, ಮಿನಿ ಹಿಟಾಚಿ ಕೊಂಡೊಯ್ಯುವ ಲಾರಿ, ಜಟ್ಟಿಂಗ್ ಸ್ಪ್ರೇ, ಕಸ ತುಂಬುವ ಕಾಂಪ್ಯಾಕ್ಟರ್, ತಳ್ಳು ಗಾಡಿಗಳು, ಕಾರ್ಡನ್ ಡಸ್ಟ್ ಸೇರಿದಂತೆ ಪರಿಕರಗಳು ಮಹಾನಗರ ಪಾಲಿಕೆಗೆ ಬಂದಿವೆ. ಆದರೆ ಬಳಕೆ‌ ಮಾಡುವುದನ್ನು ಬಿಟ್ಟು … Read more

102 ಕೆ.ಜಿ. ಬೆಳ್ಳಿ ಕಾಲ್ಗೆಜ್ಜೆ ಪೊಲೀಸರ ವಶ – ಇಬ್ಬರ ಬಂಧನ

ಸುದ್ದಿ360,ದಾವಣಗೆರೆ,ಜು.05: ತಮಿಳುನಾಡಿನ ಸೇಲಂನಿಂದ ನಗರಕ್ಕೆ 102 ಕೆ.ಜಿ ಬೆಳ್ಳಿ ಕಾಲ್ಗೆಜ್ಜೆಗಳನ್ನು ಅಕ್ರಮವಾಗಿ ತಂದಿದ್ದ 20 ಲಕ್ಷ ರೂ. ಮೌಲ್ಯದ 102 ಕೆಜಿ ಬೆಳ್ಳಿ ಕಾಲ್ಗೆಜ್ಜೆಗಳನ್ನು ನಗರದ ಬಡಾವಣೆ ಠಾಣೆ ಪೊಲೀಸರು ವಶಕ್ಕೆ ಪಡೆದು, ಈ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಡಾವಣೆ ಪೊಲೀಸ್ ಠಾಣೆ ಆವರಣದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಕಾರಿ ಸಿ.ಬಿ. ರಿಷ್ಯಂತ್, ಆರೋಪಿಗಳಾದ ಸೆಲ್ವಿ ಮತ್ತು ಬಾಲಾಜಿ ಎಂಬುವರು ತಮಿಳುನಾಡಿನ ಸೇಲಂನಿಂದ ನಗರಕ್ಕೆ 102 ಕೆ.ಜಿ ಬೆಳ್ಳಿ … Read more

ಪ್ರತಿಭಾ ಪುರಸ್ಕಾರಕ್ಕೆ ಆರ್ಜಿ ಆಹ್ವಾನ

ಸುದ್ದಿ360,ದಾವಣಗೆರೆ,ಜು.05: ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಸರಕಾರಿ ನೌಕರರ ಮಕ್ಕಳಿಗೆ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಸಂಘದ ಜಿಲ್ಲಾಧ್ಯಕ್ಷ ಬಿ. ಪಲಾಕ್ಷಿ, ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಶೇ.90 ಹಾಗೂ ಅದಕ್ಕೂ ಹೆಚ್ಚು ಅಂಕ ಗಳಿಸಿರುವ ಸರಕಾರಿ ನೌಕರರ ಮಕ್ಕಳಿಗೆ ಕೇಂದ್ರ ಸಂಘದಿಂದ ಪ್ರತಿಭಾ ಪುರಸ್ಕಾರ ನೀಡಲಾಗುತ್ತದೆ. ಈ ನಿಟ್ಟಿನಲ್ಲಿ ಜಿಲ್ಲೆಯ … Read more

ಪಠ್ಯಪುಸ್ತಕ ಪರಿಷ್ಕರಣೆ ಲೋಪ ವಿರೋಧಿಸಿ ಎನ್.ಎಸ್.ಯು.ಐ ನಿಂದ ತಿರಂಗ ರ‍್ಯಾಲಿ

ಸುದ್ದಿ360,ದಾವಣಗೆರೆ,ಜು.05: ರಾಜ್ಯದಲ್ಲಿ ಪಠ್ಯ ಪುಸ್ತಕ ಪರಿಷ್ಕರಣೆಯ ಲೋಪದಿಂದ ರಾಜ್ಯದ ವಿದ್ಯಾರ್ಥಿಗಳ ಮೇಲೆ ಅಗಾಧ ಪರಿಣಾಮ ಬೀರಿದೆ. ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಕಿಂಚಿತ್ತೂ ಯೋಚನೆ ಮಾಡದ ರಾಜ್ಯ ಬಿಜೆಪಿ ಸರ್ಕಾರ ಪ್ರತಿಯೊಂದು ಹಂತದ ವಿದ್ಯಾರ್ಥಿಗಳ ಜೀವನದ ಜೊತೆ ಚೆಲ್ಲಾಟವಾಡುತ್ತಿದೆ ಎಂದು ಆರೋಪಿಸಿ ಜಿಲ್ಲಾ ಎನ್.ಎಸ್‌.ಯು.ಐ ಘಟಕ ಮಂಗಳವಾರ ಜನಜಾಗೃತಿ ರ‍್ಯಾಲಿ ನಡೆಸಿತು. ಮೂರು ನೂರು ಅಡಿಗಳ ತಿರಂಗದೊಂದಿಗೆ ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿಗಳು ರ‍್ಯಾಲಿಯಲ್ಲಿ ಭಾಗವಹಿಸಿದ್ದರು.  ನಗರದ ಎವಿಕೆ ಕಾಲೇಜು ಸಮೀಪದಿಂದ ಆರಂಭಗೊಂಡ ರ‍್ಯಾಲಿ ಬಿ.ಎಸ್.ಚನ್ನಬಸಪ್ಪ ಅಂಗಡಿಯ ಮುಂಭಾಗದಿಂದ … Read more

ಮಂಗಳಮುಖಿಯರು ಜೇಬಿಗೆ ಕೈಹಾಕಿದ್ರೆ ದೂರು ಕೊಡಿ!

ಸುದ್ದಿ360,ದಾವಣಗೆರೆ,ಜು.05: ನಗರದ ಹೊರವಲಯ ಬಾಡ ಕ್ರಾಸ್ ಬಳಿ ಮಂಗಳಮುಖಿಯರ ಕಾಟ ಹೆಚ್ಚಾಗಿದೆ ಎಂಬ ದೂರುಗಳು ಬಂದಿದ್ದು ಕ್ರಮ ಕೈಗೊಳ್ಳಲಾಗಿದೆ ಎಂದು ಎಸ್‌ಪಿ ಸಿ.ಬಿ. ರಿಷ್ಯಂತ್  ತಿಳಿಸಿದ್ದಾರೆ. ನಗರದ ಬಡಾವಣೆ ಪೊಲೀಸ್ ಠಾಣೆ ಆವರಣದಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿ, ಸಾರ್ವಜನಿಕರ ವಾಹನ ಅಡ್ಡಗಟ್ಟಿ, ಹಣ ಕೇಳುವುದು, ಮೈ ಮುಟ್ಟುವುದು, ಜೇಬಿಗೆ ಕೈ ಹಾಕಿ ಹಣ ತೆಗೆದುಕೊಳ್ಳುತ್ತಿದ್ದಾರೆ ಎಂಬ ದೂರುಗಳು ವ್ಯಾಪಕವಾಗಿ ಕೇಳಿಬರುತ್ತಿರುವ ಹಿನ್ನೆಲೆಯಲ್ಲಿಈ ಸಂಬಂಧ ಅವರೊಂದಿಗೆ ಮಾತುಕತೆ ನಡೆಸಿದ್ದು, ಹಣ ಕೇಳುವ ನೆಪದಲ್ಲಿ ಸಾರ್ವಜನಿಕರಿಗೆ ತೊಂದರೆ ನೀಡದಂತೆ ಎಚ್ಚರಿಕೆ … Read more

ಜು.8 ಕ್ಕೆ ಶ್ರೀಶೈಲ ಮಠದಲ್ಲಿ ಪೂರ್ವಭಾವಿ ಸಭೆ

ಸುದ್ದಿ360,ದಾವಣಗೆರೆ,ಜು.05: ಶ್ರೀ ಶೈಲ ಪೀಠ ಜಗದ್ಗುರು ಡಾ.‌ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳವರ ದ್ವಾದಶ ಪೀಠಾರೋಹಣ ಮಹೋತ್ಸವ ಹಾಗೂ ಜನ್ಮ ಸುವರ್ಣ ಮಹೋತ್ಸವ ಅಂಗವಾಗಿ ಅಕ್ಟೋಬರ್ 29ರಿಂದ ಜನವರಿ 15ರವರೆಗೆ ನಡೆಯಲಿರುವ ವಿವಿಧ ಧಾರ್ಮಿಕ ಮತ್ತು ಸಾಮಾಜಿಕ ಹಾಗೂ ಜನಜಾಗೃತಿ ಪಾದಯಾತ್ರೆ ಕಾರ್ಯಕ್ರಮಗಳ ಪೂರ್ವಭಾವಿ ಸಭೆ ಜು.8ರಂದು ಸಂಜೆ 4 ಗಂಟೆಗೆ ವಿನೋಬನಗರದ ಶ್ರೀ ಜಗದ್ಗುರು ಪಂಚಾಚಾರ್ಯ ಮಂದಿರದಲ್ಲಿ ಜರುಗಲಿದೆ. ನಗರದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಆವರಗೊಳ್ಳ ಪುರವರ್ಗ ಮಠದ ಶ್ರೀ ಓಂಕಾರ ಶಿವಾಚಾರ್ಯ ಸ್ವಾಮೀಜಿ ಈ ಕುರಿತು … Read more

ಸುಗಮ ಸಂಚಾರಕ್ಕೆ ಕ್ರಮ: ಎಸ್ ಪಿ ರಿಷ್ಯಂತ್

ಸುದ್ದಿ360 ದಾವಣಗೆರೆ.ಜು.05: ದಿನೇ ದಿನೇ ಹೆಚ್ಚುತ್ತಿರುವ ಜನಸಂಖ್ಯೆಯ ಜೊತೆಗೆ ಅಗತ್ಯ ವಾಹನಗಳ ಸಂಖ್ಯೆಯೂ ಹೆಚ್ಚುತ್ತಿದೆ. ಇದು ರಸ್ತೆಗಳಲ್ಲಿ ವಾಹನದಟ್ಟಣೆಗೂ ಕಾರಣವಾಗಿದೆ. ಇದರ ಜೊತೆಗೆ ಸಂಚಾರ ನಿಯಮ ಪಾಲಿಸದಿರುವ ಮತ್ತು ಎಲ್ಲೆಂದರಲ್ಲಿ ವಾಹನ ನಿಲ್ಲಿಸುವವರಿಗೆ ದಂಡ ವಿಧಿಸುವ ಮತ್ತು ಸುಗಮ ಸಂಚಾರಕ್ಕೆ ಇಲಾಖೆ ಕೈಗೊಂಡಿರುವ ಕ್ರಮಗಳ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಕಾರಿ ಸಿ.ಬಿ. ರಿಷ್ಯಂತ್ ಮಾಹಿತಿ ನೀಡಿದರು. ನಗರದ ಬಡಾವಣೆ ಪೊಲೀಸ್ ಠಾಣೆ ಆವರಣದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಡೆಂಟಲ್ ಕಾಲೇಜು, ಹದಡಿ, ಶಾಮನೂರು ರಸ್ತೆ ಸೇರಿ ನಗರದ … Read more

ಸರಳ ವಾಸ್ತುತಜ್ಞ ಚಂದ್ರಶೇಖರ್ ಗುರೂಜಿ ಬರ್ಬರ ಹತ್ಯೆ

ಸುದ್ದಿ360 ಹುಬ್ಬಳ್ಳಿ,ಜು.05:  ಪ್ರಸಿದ್ಧ ವಾಸ್ತು ತಜ್ಞ ಚಂದ್ರಶೇಖರ್ ಗುರೂಜಿ  ಅವರನ್ನು ನಗರದ ಉಣಕಲ್ ಬಳಿಯ ಪ್ರೆಸಿಡೆಂಟ್ ಹೊಟೇಲ್’ನ ಸ್ವಾಗತಕಾರರ ಕೌಂಟರ್ ಬಳಿ ಇಬ್ಬರು ದುಷ್ಕರ್ಮಿಗಳು ಚಾಕವಿನಿಂದ ಇರಿದು ಕೊಲೆ ಮಾಡಿರುವ ಪ್ರಕರಣ ಮಂಗಳವಾರ ಮಧ್ಯಾಹ್ನ‌ ನಡೆದಿದೆ. ಸ್ವಾಗತಕಾರರ ಕೌಂಟರ್ ಬಳಿ ಭಕ್ತರ ಸೋಗಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಹತ್ಯೆ ಮಾಡಿ ಪರಾರಿ ಆಗಿದ್ದಾರೆ. ನಲವತ್ತಕ್ಕು ಹೆಚ್ಚು ಬಾರಿ ಕುತ್ತಿಗೆ, ಹೊಟ್ಟೆಗೆ ಇರಿದು ಹತ್ಯೆ ಮಾಡಿರುವ ಹಾಗೂ ಪರಾರಿಯಾಗಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದೆ. ಬೆಳಗ್ಗೆ ಪ್ರಸಿಡೆಂಟ್ ಹೋಟೆಲ್ … Read more

ಆದಾಯ ಮೀರಿದ ಆಸ್ತಿ? : ಎಸಿಬಿಯಿಂದ  ಶಾಸಕ ಜಮೀರ್ ಅಹಮ್ಮದ್ ಆಸ್ತಿ ಲೆಕ್ಕಾಚಾರ

ಸುದ್ದಿ360 ಬೆಂಗಳೂರು.ಜು.05: ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಬಿ.ಜೆಡ್. ಜಮೀರ್ ಅಹಮ್ಮದ್ ಖಾನ್ ಅವರ ಮನೆ ಸೇರಿದಂತೆ ಐದು ಕಡೆ ಮಂಗಳವಾರ ನಸುಕಿನಿಂದಲೇ ಎಸಿಬಿ ಶೋಧ ಕಾರ್ಯ ನಡೆಸಿದೆ. ಆದಾಯ ಮೀರಿದ ಆಸ್ತಿ ಹೊಂದಿರುವುದಾಗಿ ಎಫ್ಐಆರ್ ದಾಖಲಿಸಿರುವ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ), ಜಾರಿ ನಿರ್ದೇಶನಾಲಯ ನೀಡಿರುವ ವರದಿ ಆಧರಿಸಿ ತಿನಿಖೆ ಕೈಗೊಂಡಿದೆ. ಕಂಟೋನ್ಮೆಂಟ್ ರೈಲ್ವೇ ನಿಲ್ದಾಣದ ಸಮೀಪದ ಜಮೀರ್ ಅಹಮ್ಮದ್ ಅವರ ಮನೆ, ಸಿಲ್ವರ್ ಓಕ್ ಅಪಾರ್ಟ್ ಮೆಂಟ್ ಫ್ಲ್ಯಾಟ್, ಸದಾಶಿವನಗರದಲ್ಲಿರುವ ಅತಿಥಿಗೃಹ, ಕಲಾಸಿಪಾಳ್ಯದಲ್ಲಿನ ನ್ಯಾಷನಲ್ … Read more

error: Content is protected !!