ಸೈದ್ಧಾಂತಿಕವಾಗಿ ಎದುರಿಸಲಾಗದ ಬಿಜೆಪಿ ಸರ್ಕಾರದಿಂದ ದ್ವೇಶದ ರಾಜಕಾರಣ

ಕಾಂಗ್ರೆಸ್‌ನಿಂದ ಪ್ರತಿಭಟನೆ – ರಾಷ್ಟ್ರಪತಿಗಳಿಗೆ ಮನವಿ ಸುದ್ದಿ360 ದಾವಣಗೆರೆ, ಜೂ.17: ಕೇಂದ್ರ ಬಿಜೆಪಿ ಸರಕಾರ ಇ.ಡಿ.ಯನ್ನು ದುರ್ಭಳಕೆ ಮಾಡಿಕೊಳ್ಳುತ್ತಿದ್ದು, ರಾಷ್ಟ್ರಪತಿಗಳು ಮಧ್ಯ ಪ್ರವೇಶಿಸಿ ಸೂಕ್ತ ಮಾರ್ಗದರ್ಶನ ನೀಡುವಂತೆ ಆಗ್ರಹಿಸಿ, ಕೆಪಿಸಿಸಿ ಜಿಲ್ಲಾ ಘಟಕ ಹಾಗೂ ಪಕ್ಷದ ಎಲ್ಲಾ ವಿಭಾಗಗಳ ವತಿಯಿಂದ ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿತು. ನಂತರ ಪ್ರತಿಭಟನಾಕಾರರು ಉಪವಿಭಾಗಾಧಿಕಾರಿಗಳ ಕಚೇರಿಗೆ ತೆರಳಿ ಅವರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.ನಗರದ ಕೆಇಬಿ ವೃತ್ತದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು, ಅಲ್ಲಿಂದ … Read more

ಜೂ.19: ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ 115ನೇ ಜಯಂತ್ಯುತ್ಸವ – ಗುರುವಂದನೆ

ಸುದ್ದಿ360 ದಾವಣಗೆರೆ, ಜೂ.17: ನಡೆದಾಡುವ ದೇವರು ಖ್ಯಾತಿಯ ತ್ರಿವಿಧ ದಾಸೋಹಿ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ೧೧೫ನೇ ಜಯಂತ್ಯುತ್ಸವ ಹಾಗೂ ಗುರುವಂದನೆ ಕಾರ್ಯಕ್ರಮ ನಗರದ ಅಕ್ಕಮಹಾದೇವಿ ರಸ್ತೆಯ ಎವಿಕೆ ಕಾಲೇಜು ಬಳಿಯ ಜಿಲ್ಲಾ ಗುರುಭವನದಲ್ಲಿ ಜೂ.೧೯ರಂದು ಬೆಳಗ್ಗೆ ೧೦.೩೦ಕ್ಕೆ ಹಮ್ಮಿಕೊಳ್ಳಲಾಗಿದೆ ಎಂದು ಚುಟುಕು ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಜಿ.ಹೆಚ್. ರಾಜಶೇಖರ್ ಗುಂಡಗಟ್ಟಿ ತಿಳಿಸಿದರು. ಈ ಕುರಿತು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಚುಟುಕು ಸಾಹಿತ್ಯ ಪರಿಷತ್, ಕನ್ನಡ ಮತ್ತು ಸಂಸ್ಕೃತಿ … Read more

ಅಗ್ನಿಪಥ ವಯೋಮಿತಿ 23 ಕ್ಕೆ ಏರಿಕೆ: ಜನರ ಅಗತ್ಯಗಳಿಗೆ ಸ್ಪಂದಿರುವ ಮೋದಿ ಸರ್ಕಾರ ಸಿಎಂ ಬೊಮ್ಮಾಯಿ

ಬೆಂಗಳೂರು, ಜೂನ್ 16: ಅಗ್ನಿಪಥ ಯೋಜನೆಯಡಿ ವಯೋಮಿತಿಯನ್ನು 21 ರಿಂದ 23 ಕ್ಕೆ ಏರಿಸುವ ಮೂಲಕ ಮೋದಿ ಸರ್ಕಾರವು ಜನರ ಅಗತ್ಯಗಳಿಗೆ ಸ್ಪಂದಿಸುವ ಸರ್ಕಾರ ಎಂದು ನಿರೂಪಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಕಳೆದ ಎರಡು ವರ್ಷಗಳಿಂದ ರಕ್ಷಣಾ ಪಡೆಗಳಿಗೆ ನೇಮಕಾತಿ ನಡೆದಿರಲಿಲ್ಲ. ಮೊದಲ ವರ್ಷದ ನೇಮಕಾತಿಯಲ್ಲಿ ವಯೋಮಿತಿಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹೆಚ್ಚಿಸಿದ್ದಾರೆ. ಈ ನಿರ್ಧಾರದಿಂದ ದೊಡ್ಡ ಸಂಖ್ಯೆಯಲ್ಲಿ ಯುವ ಜನರಿಗೆ ಪ್ರಯೋಜನವಾಗಲಿದೆ. ತಾಯ್ನಾಡಿನ ಸೇವೆಯ ಪಥದಲ್ಲಿ ಯಶಸ್ವಿಯಾಗಿ ನಡೆದು ತಮ್ಮ ಉಜ್ವಲ ಭವಿಷ್ಯವನ್ನು … Read more

ಪವರ್ ಲಿಫ್ಟಿಂಗ್‌: ತಂದೆ-ಮಗ ಸಾಧನೆ – ರಾಷ್ಟ್ರಮಟ್ಟಕ್ಕೆ ಆಯ್ಕೆ

ಸುದ್ದಿ360 ದಾವಣಗೆರೆ, ಜೂ16:  ಮೈಸೂರಿನಲ್ಲಿ ಜೂ.10ರಿಂದ 12ರವರೆಗೆ ನಡೆದ ರಾಜ್ಯ ಮಟ್ಟದ ಪವರ್‌ಲಿಫ್ಟಿಂಗ್ ಸ್ಪರ್ಧೆಯಲ್ಲಿ ದಾವಣಗೆರೆಯ ಕನ್ನಿಕಾಪರಮೇಶ್ವರಿ ಕೋ-ಆಪರೇಟಿವ್ ಬ್ಯಾಂಕ್ ಉದ್ಯೋಗಿ ವಿ. ರಕ್ಷಿತ್ ಚಿನ್ನದ ಪದಕ ಮತ್ತು ರಕ್ಷಿತ್ ತಂದೆ, ಶ್ರೀ ಬೀರೇಶ್ವರ ವ್ಯಾಯಾಮ ಶಾಲೆ ಕ್ರೀಡಾಪಟು ಪಿ. ವಿಶ್ವನಾಥ್ ಕಂಚಿನ ಪದಕಕ್ಕೆ ಭಾಜನರಾಗುವ ಮೂಲಕ ತಂದೆ-ಮಗ  ಇಬ್ಬರೂ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಈ ಮೂಲಕ ಹೈದರಾಬಾದ್‌ನಲ್ಲಿ ಜು.೫ರಿಂದ ೧೦ರವರೆಗೆ ನಡೆಯಲಿರುವ ರಾಷ್ಟ್ರಮಟ್ಟದ ಪವರ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಭಾಗವಹಿಸಲು ಅರ್ಹತೆ ಪಡೆದಿದ್ದಾರೆ. ತಂದೆ ಮತ್ತು ಮಗ … Read more

ಕಿಕ್ ಬಾಕ್ಸಿಂಗ್‌: ದಾವಣಗೆರೆಗೆ 3 ಚಿನ್ನ, 4 ಬೆಳ್ಳಿ, 3 ಕಂಚು

ಜಿಲ್ಲೆಗೆ ಕೀರ್ತಿ ತಂದ ಕ್ರೀಡಾಪಟುಗಳಿಗೆ ಅಭಿನಂದನೆಗಳ ಮಹಾಪೂರ ಸುದ್ದಿ360 ದಾವಣಗೆರೆ, ಜೂ16:  ಮೈಸೂರಿನಲ್ಲಿ ಜೂ.೧೧, ೧೨ರಂದು ಕರ್ನಾಟಕ ಕಿಕ್ ಬಾಕ್ಸಿಂಗ್ ಸ್ಪೋರ್ಟ್ಸ್ ಅಸೋಸಿಯೇಷನ್ ಆಶ್ರಯದಲ್ಲಿ ನಡೆದ ೨ನೇ ರಾಜ್ಯಮಟ್ಟದ ಕಿಕ್ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ನಗರದ ಈಗಲ್ ಫಿಟ್ನೆಸ್ ಕೇಂದ್ರದ ವಿದ್ಯಾರ್ಥಿಗಳು 3 ಚಿನ್ನ, 4 ಬೆಳ್ಳಿ ಹಾಗೂ 3 ಕಂಚಿನ ಪದಕ ಪಡೆದು ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಕಿಕ್ ಲೈಟ್ ಇವೆಂಟ್‌ನ 7-9 ವರ್ಷದ ವಿಭಾಗದಲ್ಲಿ ಯು. ಅದಿತ್ಯ ಮತ್ತು ಎ.ಬಿ. ಅಧಿತಿ ಹಾಗೂ 11-13 ವರ್ಷದ … Read more

ಇ.ಡಿ. ದುರ್ಬಳಕೆ ಆರೋಪಿಸಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ ಇಂದು

ಸುದ್ದಿ360 ದಾವಣಗೆರೆ, ಜೂ16: ಎ.ಐ.ಸಿ.ಸಿ.  ಅಧ್ಯಕ್ಷರಾದ  ಶ್ರೀಮತಿ ಸೋನಿಯಾಗಾಂಧಿ ಮತ್ತು ರಾಹುಲ್ ಗಾಂಧಿಯವರಿಗೆ ಕೇಂದ್ರ ಬಿ.ಜೆ.ಪಿ ಸರ್ಕಾರ ರಾಜಕೀಯ ದುರುದ್ದೇಶದಿಂದ ಇ. ಡಿ. ನೋಟಿಸ್ ನೀಡಿದೆ ಎಂದು ಆರೋಪಿಸಿರುವ ಕಾಂಗ್ರೆಸ್‍ ಸಮಿತಿ, ಕೇಂದ್ರ ಸರ್ಕಾರದ ಈ ನಡೆಯನ್ನು ಖಂಡಿಸಿ ದಿನಾಂಕ ಜೂ.17ರಂದು ಬೆಳಿಗ್ಗೆ 11.30 ಗಂಟೆಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಮಂಜಪ್ಪ ರವರ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಂಡಿದೆ. ದೆಹಲಿಯಲ್ಲಿ ಕೇಂದ್ರ ಬಿಜೆಪಿ ಸರ್ಕಾರ ಇ.ಡಿ.ಯನ್ನು ದುರ್ಬಳಕೆ  ಮಾಡಿಕೊಂಡು ಕಾಂಗ್ರೆಸ್ ನಾಯಕರಿಗೆ ನೀಡುತ್ತಿರುವ ಕಿರುಕುಳದ ವಿರುದ್ಧ ಕಾಂಗ್ರೆಸ್ ಸಂಸದರು … Read more

ಜೂ.18ಕ್ಕೆ ‘ಅತ್ಯುತ್ತಮ ಶಾಲೆ ಪ್ರಶಸ್ತಿ’ ವಿತರಣೆ

ಜಿ.ಎಂ. ಹಾಲಮ್ಮ ಪದವಿಪೂರ್ವ ಕಾಲೇಜಿನಿಂದ ಕಾರ್ಯಕ್ರಮ ಆಯೋಜನೆ ಸುದ್ದಿ360 ದಾವಣಗೆರೆ, ಜೂ16: ನಗರದ ಜಿಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಜೂ.೧೮ರಂದು ಬೆಳಗ್ಗೆ ೯.೩೦ಕ್ಕೆ ‘ಅತ್ಯುತ್ತಮ ಶಾಲೆ ಪ್ರಶಸ್ತಿ’ ವಿತರಣೆ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಜಿ.ಎಂ . ಹಾಲಮ್ಮ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಹಾಗೂ ಸಿಇಒ ಡಾ.ವಿ. ವೆಂಕಟರಾಯಡು ಇಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಜಿ.ಎಂ. ಹಾಲಮ್ಮ ಪದವಿಪೂರ್ವ ಕಾಲೇಜು ವತಿಯಿಂದ ಹಮ್ಮಿಕೊಳ್ಳಲಾಗಿರುವ ಈ ಸಮಾರಂಭದಲ್ಲಿ ದಾವಣಗೆರೆ ಒಳಗೊಂಡಂತೆ ಸುತ್ತಮುತ್ತಲ ಜಿಲ್ಲೆಯ ಶಾಲೆಗಳಲ್ಲಿ ಎಸ್‌ಎಸ್‌ಎಲ್‌ಸಿಯಲ್ಲಿ ಶೇ.೧೦೦ ಫಲಿತಾಂಶ ಪಡೆದ ೧೦೦ ಶಾಲೆಗಳ … Read more

ಕಾಂಗ್ರೆಸ್ ನ್ನು ಜನರೇ ಮನೆಗೆ ಚಲೋ ಮಾಡಲಿದ್ದಾರೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360 ದಾವಣಗೆರೆ ಜೂ.16:  ಭ್ರಷ್ಟಾಚಾರ ಪ್ರಕರಣದ ತನಿಖೆ ವಿರುದ್ದ ಹೋರಾಟ ಮಾಡುತ್ತಿರುವುದು ಕಾಂಗ್ರೆಸ್‍ನ ದುರಂತವೇ ಸರಿ. ಕಾಂಗ್ರೆಸ್‍ನ ಇಂತಹ ನಿರ್ಧಾರಗಳಿಂದ ಜನರೇ ಕಾಂಗ್ರೆಸ್ ನ್ನು ಮನೆಗೆ ಚಲೋ ಮಾಡಲಿದ್ದಾರೆ ಎಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ವ್ಯಂಗ್ಯವಾಡಿದರು. ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲು ದಾವಣಗೆರೆಗೆ ಆಗಮಿಸಿದ್ದ ಮುಖ್ಯಮಂತ್ರಿಗಳು. ಜಿಎಂಐಟಿ ಹೆಲಿಪ್ಯಾಡ್ ನಲ್ಲಿ ಎದುರಾದ ಸುದ್ದಿಗಾರರೊಂದಿಗೆ ಮಾತನಾಡಿ, ಜಾರಿ ನಿರ್ದೇಶನಾಲಯ ಕಾಂಗ್ರೆಸ್  ಮುಖಂಡರಿಗೆ ವಿಚಾರಣೆಗೆ ಆಗಮಿಸುವಂತೆ ನೋಟೀಸ್ ನೀಡಿರುವುದನ್ನು ವಿರೋಧಿಸಿ ಕಾಂಗ್ರೆಸ್ ನವರು ರಾಜಭವನ ಚಲೋ ಮಾಡುತ್ತಿರುವುದು ಕಾಂಗ್ರೆಸ್‍ನ ದುರಂತ. ಕಾಂಗ್ರೆಸ್‍ನ  … Read more

ಪಠ್ಯಪುಸ್ತಕ ಸಲಹೆಗೆ ಸರ್ಕಾರ ಮುಕ್ತವಾಗಿದೆ: ಸಿಎಂ ಬೊಮ್ಮಾಯಿ

ಸುದ್ದಿ360 ದಾವಣಗೆರೆ ಜೂ.16: ಈ ಹಿಂದಿನ ಪಠ್ಯಪುಸ್ತಕದ ಬಗ್ಗೆಯೂ ಆಕ್ಷೇಪಣೆಗಳಿವೆ.  ಯಾವುದನ್ನು ಸರಿಪಡಿಸಬೇಕು ಎಂಬುದರ ಬಗ್ಗೆ ಸಲಹೆಗೆ ಮುಕ್ತ ಅವಕಾಶವಿದೆ. ರಾಜ್ಯದ ಜನರ ಸಲಹೆ ಸೂಚನೆ ಪಡೆದು ವೆಬ್ ಸೈಟ್ ನಲ್ಲಿ ಹಾಕಲಾಗುವುದು. ಒಟ್ಟಾರೆ ಎಲ್ಲಾ ಆಕ್ಷೇಪಣೆಗಳಿಗೆ ಸಲಹೆ ಪಡೆದ ನಂತರ ಪಠ್ಯ ಪರಿಷ್ಕರಣೆ ಅಂತಿಮ ರೂಪ ಪಡೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ದಾವಣಗೆರೆಯ ಜಿಎಂಐಟಿ ಹೆಲಿಪ್ಯಾಡ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಪ್ಪಳ್ಳಿಯಿಂದ ಬೆಂಗಳೂರಿಗೆ ಪ್ರಗತಿಪರರು ಪಾದಯಾತ್ರೆ ಮಾಡುತ್ತಿರುವ  ಕುರಿತ ಮಾಧ್ಯಮದವರ ಪ್ರಶ್ನೆಗೆ … Read more

ದಕ್ಷಿಣ ಪದವೀಧರರ ಕ್ಷೇತ್ರ: ಕಾಂಗ್ರೆಸ್ ದಾಖಲೆ ಅಂತರದ ಗೆಲುವು

ಸುದ್ದಿ ೩೬೦ ಮೈಸೂರು, ಜೂ.16:ವಿಧಾನ ಪರಿಷತ್ ದಕ್ಷಿಣ ಪದವೀಧರರ ಕ್ಷೇತ್ರದ ಫಲಿತಾಂಶ ಕಡೆಗೂ ಹೊರಬಿದ್ದಿದ್ದು, ಕಾಂಗ್ರೆಸ್ ಅಭ್ಯರ್ಥಿ ಮಧು ಜಿ. ಮಾದೇಗೌಡ ಬರೋಬ್ಬರಿ 12,205 ಮತಗಳ ಅಂತರದ್ದಿಂ ಜಯ ದಾಖಲಿಸಿದ್ದಾರೆ.ಮಧು ಮಾದೇಗೌಡ 46,083 ಮತಗಳನ್ನು ಪಡೆದರೆ, ಅವರ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಮೈ.ವಿ.‌ ರವಿಶಂಕರ್ 33,878 ಮತಗಳನ್ನು ಪಡೆಯುವ ಮುಲಕ ಸೋಲುಂಡರು. ಇದು ರವಿಶಂಕರ್ಗ ಅವರ ಸತತ ಎರಡನೇ ಸೋಲು.ಉಳಿದಂತೆ ಜೆಡಿಎಸ್‌ನ ಎಚ್‌.ಕೆ.ರಾಮು 17,072, ಪಕ್ಷೇತರ ಸದಸ್ಯರಾದ ಪ್ರಸನ್ನ 6,470, ವಿನಯ್ 3,672 ಹಾಗೂವಾಟಾಳ್ ನಾಗರಾಜ್ 480 … Read more

error: Content is protected !!