ಡಬಲ್ ಎಂಜಿನ್ ಸರಕಾರವಲ್ಲ ಬೇಕಿರುವುದು ಹೊಸ ಎಂಜಿನ್ ಸರಕಾರ: ಕೇಜ್ರಿವಾಲ್

ಕರ್ನಾಟಕ ರಾಜ್ಯವನ್ನು ಭ್ರಷ್ಟಾಚಾರಮುಕ್ತಗೊಳಿಸಲು ಎಎಪಿಗೆ ಅಧಿಕಾರ ನೀಡುವಂತೆ ಕೇಜ್ರಿವಾಲ್ ಮನವಿ ಸುದ್ದಿ360 ದಾವಣಗೆರೆ, ಮಾ.4: ಪರ್ಸಂಟೇಜ್ ಪಕ್ಷಗಳನ್ನು ಬದಿಗಿರಿಸಿ ಒಂದು ಬಾರಿ ಆಮ್ ಆದ್ಮಿ ಪಕ್ಷದ ಹೊಸ ಎಂಜಿನ್ ಆಡಳಿತಕ್ಕೆ ಅವಕಾಶ ನೀಡುವಂತೆ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ, ಹೊಸದಿಲ್ಲಿ ಮುಖ್ಯಮಂತ್ರಿ ಕೇಜ್ರಿವಾಲ್ ಜನತೆಯಲ್ಲಿ ಮನವಿ ಮಾಡಿದರು. ಕರ್ನಾಟಕದಲ್ಲಿ ಅಧಿಕೃತವಾಗಿ ಚುನಾವಣಾ ಪ್ರಚಾರ ಆರಂಭಿಸುವ ನಿಮಿತ್ತ ಆಮ್ ಆದ್ಮಿ ಪಕ್ಷ, ದಾವಣಗೆರೆ ನಗರದ ಹೈಸ್ಕೂಲ್ ಮೈದಾನದಲ್ಲಿ ಇಂದು ರಾಜ್ಯ ಮಟ್ಟದ ಸಮಾವೇಶವನ್ನು ಆಯೋಜಿಸಲಾಗಿತ್ತು. ಸಮಾವೇಶವನ್ನು ಉದ್ಘಾಟಿಸಿ … Read more

ಜ.21, 22 ನಿರ್ಮಲ ತುಂಗಾ ಅಭಿಯಾನ – ಬೃಹತ್ ಪಾದಯಾತ್ರೆ

ಗಾಜನೂರಿನಿಂದ ಆರಂಭವಾಗುವ ಯಾತ್ರೆ ಪವಿತ್ರ ಕೂಡಲಿಯಲ್ಲಿ ಸಮಾರೋಪ ವರದಿ: ಶ್ರೀನಿವಾಸ ಮೂರ್ತಿ ಕೆ.ಎಂ. ಸುದ್ದಿ360 ಶಿವಮೊಗ್ಗ ಜ.20: ರಾಷ್ಟ್ರೀಯ ಸ್ವಾಭಿಮಾನಿ ಆಂದೋಲನ ಸಮಿತಿ, ಪರ್ಯಾವರಣ ಟ್ರಸ್ಟ್ ಹಾಗೂ ಶಿವಮೊಗ್ಗದ ವಿವಿಧ ಪರಿಸರಾಸಕ್ತರ ತಂಡಗಳ ಸಂಯುಕ್ತಾಶ್ರಯದಲ್ಲಿ ಜ.21 ಹಾಗೂ 22 ರಂದು ಗಾಜನೂರಿನಿಂದ ಶ್ರೀ ಕ್ಷೇತ್ರ ಕೂಡಲಿಯವರೆಗೆ ನಿರ್ಮಲ ತುಂಗಾ ಅಭಿಯಾನದ ಬೃಹತ್ ಪಾದಯಾತ್ರೆ ಮತ್ತು ಜನಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವುದಾಗಿ ಪರ್ಯಾವರಣ ಟ್ರಸ್ಟ್ ಅಧ್ಯಕ್ಷ ಪ್ರೊ. ಬಿ. ಎಂ. ಕುಮಾರಸ್ವಾಮಿ ತಿಳಿಸಿದರು. ನಗರದ ಮಥುರಾ ಪ್ಯಾರಡೈಸ್ನಲ್ಲಿ ಇಂದು ನಡೆದ … Read more

ಆರ್‌ಜೆಡಿ ನಾಯಕ ಶರದ್ ಯಾದವ್ ವಿಧಿವಶ

ಸುದ್ದಿ360 ನವದೆಹಲಿ ಜ.12: ಮಾಜಿ ಕೇಂದ್ರ ಸಚಿವ ಮತ್ತು ಆರ್‌ಜೆಡಿ ನಾಯಕ ಶರದ್ ಯಾದವ್ ಅವರು ಜ. 12 ರಂದು ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಅವರ ಪುತ್ರಿ ಸುಭಾಷಿಣಿ ಶರದ್ ಯಾದವ್ ಅವರು ಟ್ವಿಟರ್ನಲ್ಲಿ “ಪಾಪಾ ನಹೀ ರಹೇ (ಪಾಪಾ ಇನ್ನಿಲ್ಲ)” ಎಂದು ತಂದೆಯ ನಿಧನ ವಾರ್ತೆಯನ್ನು ಖಚಿತಪಡಿಸಿದ್ದಾರೆ.ಮಾಜಿ ಸಚಿವ ಶರದ್ ಯಾದವ್ ಅವರ ಆರೋಗ್ಯ ಹದಗೆಟ್ಟಿದ್ದ ಕಾರಣ ಅವರನ್ನು ಗುರುಗ್ರಾಮ್ನ ಫೋರ್ಟಿಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಜ.12 ರಂದು ಪ್ರಧಾನಿ ಮೋದಿ ಹುಬ್ಬಳ್ಳಿಗೆ ಆಗಮನ

ಸುದ್ದಿ360 ಬೆಂಗಳೂರು, ಜ.3: ಪ್ರಧಾನಿ ನರೇಂದ್ರ ಮೋದಿಯವರು ಜನವರಿ 12 ರ ಮಧ್ಯಾಹ್ನದಂದು ಹುಬ್ಬಳ್ಳಿಗೆ ಆಗಮಿಸುತ್ತಿದ್ದು, ರಾಷ್ಟ್ರೀಯ ಯುವಜನೋತ್ಸವದಲ್ಲಿ ಭಾಗವಹಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, ಏಳು ದಿನಗಳ ಕಾಲ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ದೇಶದ 28 ರಾಜ್ಯಗಳಿಂದ ಹಾಗೂ 8 ಕೇಂದ್ರೀಯ ಪ್ರಾಂತ್ಯದಿಂದ ಯುವಜನರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಪ್ರಧಾನಿ ಮೋದಿಯವರು ಈ ಕಾರ್ಯಕ್ರಮವನ್ನು ಭಾಗವಹಿಸಿ  ಹಿಂದಿರುಗಲಿದ್ದಾರೆ ಎಂದು ತಿಳಿಸಿದರು. ಜ.19 ರಂದು ಪ್ರಧಾನಿ ಮೋದಿಯವರು ನಾರಾಯಣಪುರ … Read more

ಮಹಾರಾಷ್ಟ್ರ ಮುಖ್ಯಮಂತ್ರಿಗಳು ರಾಜ್ಯಗಳ ನಡುವೆ ವ್ಯಾಜ್ಯ ಹೆಚ್ಚಿಸುವ ಕೆಲಸ ಮಾಡಬಾರದು: ಸಿಎಂ ಬೊಮ್ಮಾಯಿ

shimoga-riots-were-the-result-of-the-governments-appeasement-policy-basavaraj-bommai

ಸುದ್ದಿ360, ಬೆಂಗಳೂರು, ನ. 22: ರಾಜ್ಯ ರಾಜ್ಯಗಳ ನಡುವೆ ವ್ಯಾಜ್ಯ ಹೆಚ್ಚಿಸುವ ಕೆಲಸವನ್ನು ಮಹಾರಾಷ್ಟ್ರ ಸರ್ಕಾರದ ಮುಖ್ಯಮಂತ್ರಿಗಳು ಮಾಡಬಾರದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮಹಾರಾಷ್ಟ್ರದ ಕನ್ನಡ ಶಾಲೆಗಳಿಗೆ ವಿಶೇಷ ಅನುದಾನಗಡಿ ಅಭಿವೃದ್ಧಿ ಪ್ರಾಧಿಕಾರವು ಮಹಾರಾಷ್ಟ್ರದಲ್ಲಿರುವ ಕನ್ನಡ ಶಾಲೆಯ ಅಭಿವೃದ್ಧಿಗೆ ವಿಶೇಷ ಅನುದಾನ ನೀಡಬೇಕೆನ್ನುವ ತೀರ್ಮಾನ ಮಾಡಲಾಗಿದೆ. ಏಕೀಕರಣ ಹಾಗೂ ಸ್ವಾತಂತ್ರ್ಯ ಹೋರಾಟದಲ್ಲಿ ಹಾಗೂ ಗೋವಾ ವಿಮೋಚನೆಗೆ ಕೆಲಸ ಮಾಡಿದ ಮಹಾರಾಷ್ಟ್ರದಲ್ಲಿರುವ ಕನ್ನಡಿಗರ ದಾಖಲೆಗಳನ್ನು ತರಿಸಿ … Read more

ನರಬಲಿಗಾಗಿ 2 ತಿಂಗಳ  ಮಗು ಅಪಹರಣ : ಪೊಲೀಸರ ಕಾರ್ಯಾಚರಣೆಯಿಂದ ಮಗು ರಕ್ಷಣೆ

ಸುದ್ದಿ360 ಹೊಸದಿಲ್ಲಿ ನ.13: ಮೃತಪಟ್ಟಿದ್ದ ವ್ಯಕ್ತಿಯನ್ನು ಬದುಕಿಸಲು ಎರಡು ತಿಂಗಳ ಮಗುವೊಂದನ್ನು ನರಬಲಿ ಕೊಡುವ ಪ್ರಯತ್ನ ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ನಡೆದಿರುವುದು ಬೆಳಕಿಗೆ ಬ೦ದಿದೆ. ಮೂಢನಂಬಿಕೆಗೆ ಗಂಟುಬಿದ್ದ ಆರೋಪಿ ಮಹಿಳೆ ಇತ್ತೀಚಿಗೆ ಮೃತಪಟ್ಟಿದ್ದ ಅಪ್ಪನನ್ನು ಬದುಕಿಸಲು ನರಬಲಿ ಕೊಡಲು ಮುಂದಾಗಿದ್ದಳು ಎಂದು ಪೊಲೀಸರ ಕಾರ್ಯಾಚರಣೆಯಿಂದ ತಿಳಿದು ಬಂದಿದೆ.  ಸತ್ತ ಅಪ್ಪ ಮರಳಿ ಬದುಕಬೇಕೆಂದರೆ ಮಗುವೊಂದರ ನರಬಲಿಯಾಗಬೇಕು ಎಂದು ಜ್ಯೋತಿಷಿ ಹೇಳಿದ್ದರಂತೆ. ಪೊಲೀಸರ ಯಶಸ್ವೀ ಕಾರ್ಯಾಚರಣೆ ಪೊಲೀಸರ ಯಶಸ್ವೀ ಕಾರ್ಯಾಚರಣೆಯಿಂದ ಮಗುವನ್ನು ರಕ್ಷಿಸಲಾಗಿದೆ. ನರಬಲಿಗಾಗಿ ಮಗುವನ್ನು ಅಪಹರಿಸಿದ್ದ ಮಹಿಳೆಯನ್ನು … Read more

ಬಿಪಾಶ ಬಸುಗೆ ತಾಯ್ತನದ ಸಂಭ್ರಮ: ಹೆಣ್ಣು ಮಗುವಿಗೆ ಜನ್ಮ ನೀಡಿದ ಬಾಲಿವುಡ್ ಬೆಡಗಿ

ಸುದ್ದಿ360 ಮುಂಬಯಿ: ಬಾಲಿವುಡ್ ಖ್ಯಾತ ನಟಿ ಬಿಪಾಶ ಬಸು ಶನಿವಾರ ಮುಂಬೈಯ ಖಾಸಗಿ ಆಸ್ಪತ್ರೆ ಒಂದರಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ ಮತ್ತು ಮಗು ಇಬ್ಬರು ಆರೋಗ್ಯವಾಗಿದ್ದು, ಮಗುವಿಗೆ “ದೇವಿ ಬಸು ಸಿಂಗ್ ಗ್ರೋವರ್” ಎಂದು ಹೆಸರಿಡಲಾಗಿದೆ. ಒಂದು ಕಾಲದಲ್ಲಿ ಪಡ್ಡೆ ಹುಡುಗರ ನಿದ್ದೆಗೆಡಿಸಿದ್ದ ಬಾಲಿವುಡ್ ನಟಿ ಬಿಪಾಶ ಬಸು ಹಾಗೂ ನಟ ಕರಣ್ ಸಿಂಗ್ ಗ್ರೋವರ್ ದಂಪತಿ ಶನಿವಾರ ತಮ್ಮ ಕುಟುಂಬಕ್ಕೆ ಹೆಣ್ಣು ಮಗುವನ್ನು ಬರ ಮಾಡಿಕೊಂಡರು. ಈ ಖುಷಿ ಸಮಾಚಾರವನ್ನು ಸ್ಟಾರ್ ದಂಪತಿ … Read more

ತೆಲುಗು ನಟ ಪವರ್ ಸ್ಟಾರ್ ಪವನ್ ಕಲ್ಯಾಣ್ ವಿರುದ್ಧ ಎಫ್ಐಆರ್!

 ಸುದ್ದಿ360 ಸಿನೆಮಾ: ತೆಲುಗು ಸಿನಿಮಾ ಇಂಡಸ್ಟ್ರಿಯಲ್ಲಿ ಅತಿ ಹೆಚ್ಚು ಫ್ಯಾನ್ ಫಾಲೋಯಿಂಗ್ ಹೊಂದಿರುವ ನಟ ಪವನ್ ಕಲ್ಯಾಣ್ ವಿರುದ್ಧ ಹೈದರಾಬಾದ್ ಪೊಲೀಸರು ಪ್ರಕರಣ ಒಂದನ್ನು ದಾಖಲಿಸಿದ್ದಾರೆ. ಹಾಗಂತ ಪವನ್ ಏನು ಅಪರಾಧ ಮಾಡಿಲ್ಲ. ಆದರೆ ಕಾರಿನ ಮೇಲೆ ಸ್ಟಂಟ್ ಮಾಡಿದ್ದಕ್ಕಾಗಿ ಪವನ್ ಕಲ್ಯಾಣ ವಿರುದ್ಧ ಈ ಕ್ರಮ ಕೈಗೊಳ್ಳಲಾಗಿದೆ. ಅಪಾಯಕಾರಿ ಸ್ಟಂಟ್ಗಳನ್ನು ಮಾಡಬೇಡಿ ಎಂದು ಯುವಜನತೆಗೆ, ಸಮಾಜಕ್ಕೆ ತಿಳಿ ಹೇಳುವ ಸ್ಥಾನದಲ್ಲಿರುವ ಒಬ್ಬ ಸ್ಟಾರ್ ಸೆಲೆಬ್ರಿಟಿ ಆಗಿದ್ದುಕೊಂಡು ಪವನ್ ಕಲ್ಯಾಣ್ ಈ ರೀತಿ ಮಾಡಿರುವುದು ಬೇಜವಾಬ್ದಾರಿತನ ಎಂದು … Read more

ಕರ್ನಾಟಕ ಭಾರತ್ ಗೌರವ್ ಕಾಶಿ ದರ್ಶನ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ

ಬೆಂಗಳೂರು ನವೆಂಬರ್ 11 : ರಾಜ್ಯದ ಬಹುನಿರೀಕ್ಷಿತ ಕರ್ನಾಟಕ ಭಾರತ್ ಗೌರವ್ ಕಾಶಿ ದರ್ಶನ್ ವಿಶೇಷ ರೈಲಿಗೆ ಹಸಿರು ನಿಶಾನೆ ತೋರುವುದರ ಮೂಲಕ ಪ್ರಧಾನಿ ನರೇಂದ್ರ ಮೋದಿ ಇಂದು ನಗರದ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಚಾಲನೆ ನೀಡಿದರು. ಎಂಟು ದಿನಗಳ ಕಾಶಿ ದರ್ಶನದ ಈ ರೈಲು ವಾರಣಾಸಿ, ಪ್ರಯಾಗ್ ರಾಜ್, ಅಯೋಧ್ಯಾ ಮುಂತಾದ ಪವಿತ್ರ ಸ್ಥಳಗಳಿಗೆ ಯಾತ್ರಿಕರನ್ನು ಕರೆದೊಯ್ಯುತ್ತದೆ. ಮುಜರಾಯಿ ಇಲಾಖೆ ಭಾರತ ಸರ್ಕಾರದ ಸಹಯೋಗದಲ್ಲಿ ಈ ಕಾಶಿ ದರ್ಶನ ಯಾತ್ರೆ ಆಯೋಜಿಸಲಾಗಿದೆ. ಈ ಯಾತ್ರೆಗೆ … Read more

15 ಸೆಕೆಂಡ್ ಗಳಲ್ಲಿ ಧರೆಗುರುಳಲಿವೆ 40 ಅಂತಸ್ತಿನ ಸೂಪರ್‌ಟೆಕ್ ಅವಳಿ ಗೋಪುರಗಳು !!!

ಧರೆಗುರುಳಲು ಕ್ಷಣಗಣನೆಯಲ್ಲಿರುವ ಸೂಪರ್‌ಟೆಕ್ ಅವಳಿ ಗೋಪುರಗಳು ಸುದ್ದಿ360 ನೋಯ್ಡ, ಆ.26: ಕುಂಬಾರನಿಗೆ ವರುಷ ದೊಣ್ಣೆಗೆ ನಿಮಿಷ ಎಂಬ ಗಾದೆ ಮಾತು ಸಾಮಾನ್ಯವಾಗಿ ಎಲ್ಲರೂ ಕೇಳಿಯೇ ಇರುತ್ತೀರಿ. ಅಂತೆಯೇ 2004ರಲ್ಲಿ ಪ್ರಾರಂಭವಾದ ಯೋಜನೆಯಿಂದ ಹಲವರ ಕನಸಿನ ಮನೆಯಾಗಬೇಕಿದ್ದ ವಸತಿ ಸಮುಚ್ಛಯ ಇದೀಗ ನೆಲಸಮಗೊಳ್ಳಲು ಕ್ಷಣಗಣನೆಯಲ್ಲಿದೆ. ಉತ್ತರ ಪ್ರದೇಶದ ನೋಯ್ಡಾದ ಸೆಕ್ಟರ್ 93ರಲ್ಲಿನ ಅಪೆಕ್ಸ್ ಮತ್ತು ಸಿಯಾನ್ ಹೆಸರಿನ ಸೂಪರ್‌ಟೆಕ್ ಅವಳಿ ಗೋಪುರಗಳ ಅಸ್ತಿತ್ವ ಆಗಸ್ಟ್ 28 ರ ಮಧ್ಯಾಹ್ನ 2.30ರ ವರೆಗೆ ಮಾತ್ರ ನಂತರದ 15 ಸೆಕೆಂಡ್ ಗಳಲ್ಲಿ … Read more

error: Content is protected !!