ಅಂತಾರಾಷ್ಟ್ರೀಯ ಸ್ಪರ್ಧೆಯಲ್ಲಿ ಎಆರ್‌ಜಿ ವಿದ್ಯಾರ್ಥಿ ಉಮೇಶ್ ಗೆ ಚಿನ್ನ

ಸುದ್ದಿ360 ದಾವಣಗೆರೆ, ಜು.13: ಥಾಯ್ಲೆಂಡ್‌ನ ಸ್ಪೋರ್ಟ್ಸ್ ಯೂನಿವರ್ಸಿಟಿ ಆಫ್ ಚೌನಬುರಿ ವತಿಯಿಂದ ಜೂನ್ ತಿಂಗಳಲ್ಲಿ ಆಯೋಜಿಸಿದ್ದ ಥಾಯ್ಲೆಂಡ್ ಸೌಥ್ ಏಷಿಯನ್ ಗೇಮ್ಸ್-2022ರ ಕುಸ್ತಿ ಪಂದ್ಯದಲ್ಲಿ ನಗರದ ಎಆರ್‌ಜಿ ಕಾಲೇಜು ವಿದ್ಯಾರ್ಥಿ ಬಿ. ಉಮೇಶ ಚಿನ್ನದ ಪದಕ ಗೆದ್ದಿದ್ದಾರೆ. ಪಂದ್ಯಾವಳಿಯ 65 ಕೆ.ಜಿ ವಿಭಾಗದಲ್ಲಿ ಭಾರತವನ್ನು ಪ್ರತಿನಿಸಿದ್ದ ಎಆರ್‌ಜಿ ಕಾಲೇಜು ಅಂತಿಮ ವರ್ಷದ ಬಿಎ ವಿದ್ಯಾರ್ಥಿ ಉಮೇಶ್, ಮಲೇಶಿಯಾ ಕುಸ್ತಿಪಟು ವಿರುದ್ಧ 10-00 ಅಂತರದಲ್ಲಿ ಭರ್ಜರಿ ಗೆಲುವು ಸಾಸಿದರು. ಬಿ. ಉಮೇಶ ಈಗಾಗಲೇ ಮೂರು ರಾಷ್ಟ್ರೀಯ ಪದಕಗಳ ಸಾಧನೆ … Read more

ನಿದ್ದೆ ಮಾಡುವ  ಸಿಂಹವನ್ನೇ ನಂಬಿಕೊಂಡ ಸಂಸ್ಕೃತಿಯವರು ವಿರೋಧ ಪಕ್ಷದವರು :ಸಿಎಂ

ಸುದ್ದಿ360 ಉಡುಪಿ, ಜು.13: ಪ್ರಧಾನಿ ನರೇಂದ್ರ ಮೋದಿ ಕ್ರಿಯಾಶೀಲವಾಗಿದ್ದಾರೆ. ಅದಕ್ಕೆ ತಕ್ಕ ಹಾಗೆ ನಮ್ಮ ದೇಶದ ಲಾಂಛನವಾಗಿರುವ ಸಿಂಹ ಸಶಕ್ತ ಹಾಗೂ ಘರ್ಜನಾ ರೂಪದಲ್ಲಿ ಇರಬೇಕು. ಆ ರೀತಿಯಲ್ಲಿ ಸಿಂಹ ಲಾಂಛನ ಇದೆ. ಆದರೆ ವಿರೋಧ ಪಕ್ಷದವರು ನಿದ್ದೆ ಮಾಡಿಕೊಂಡೇ ಇರುವ ಸಿಂಹವನ್ನು ನಂಬಿಕೊಂಡಿರುವ ಸಂಸ್ಕೃತಿಯವರು. ಇದು ಉಡುಪಿಯಲ್ಲಿ ಇಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಕಾಂಗ್ರೆಸ್ ಪಕ್ಷಕ್ಕೆ ಸಿಂಹ ಲಾಂಛನ ವಿಚಾರವಾಗಿ ನೀಡಿದ ಪ್ರತಿಕ್ರಿಯೆ. ಸಿಂಹದ ಲಾಂಛ ಉಗ್ರವಾಗಿದೆ, ವ್ಯಗ್ರವಾಗಿದೆ ಎಂಬುದು ನೋಡುವವರ ದೃಷ್ಟಿಕೋನವಾಗಿದೆ. ಕಾಂಗ್ರೆಸ್ … Read more

ಅಶೋಕ ಲಾಂಛನವನ್ನೊಮ್ಮೆ ಮ್ಯೂಸಿಯಂನಲ್ಲಿ ನೋಡಲಿ – ಆರೋಪಗಳು ಯಾರನ್ನೂ ಬಿಟ್ಟಿಲ್ಲ : ಜಗ್ಗೇಶ್

ಆರಾಧಿಸುವವರು 98% ಇದ್ರೆ, ವಿರೋಧಿಸುವವರು 2% ಏನ್ ಮಾಡೋಕಾಗುತ್ತೆ. . . ಸುದ್ದಿ360 ತುಮಕೂರು ಜು.13: ಅಶೋಕ ಲಾಂಛನದ ಮೂಲ ಇವರುಗಳು ಮ್ಯೂಸಿಯಂನಲ್ಲಿ ನೋಡಲಿ. ಸುಖಾಸುಮ್ಮನೆ ಮೋದಿ ವಿರುದ್ದ ಮಾತಾಡುತ್ತಾರೆ ಎಂದು ರಾಜ್ಯಸಭಾ ಸದಸ್ಯ ಜಗ್ಗೇಶ್ ಹೇಳಿಕೆ ನೀಡಿದ್ದಾರೆ. ತುಮಕೂರಿನಲ್ಲಿ ಸಿದ್ದಗಂಗಾ ಮಠಕ್ಕೆ ಬುಧವಾರ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ರಾಷ್ಟ್ರೀಯ ಲಾಂಛನ ತಿರುಚಿದ್ದಾರೆ ಎಂಬ ಆರೋಪ ವಿಚಾರವಾಗಿ ಅವರು, ಮ್ಯೂಸಿಯಂನಲ್ಲಿ ಇರುವ ಹಾಗೆ ಯಥಾವತ್ ಸಿಂಹ ಲಾಂಛನವನ್ನು ಸೆಂಟ್ರಲ್ ವಿಸ್ತಾದಲ್ಲಿ ಮಾಡಲಾಗಿದೆ. ಇಷ್ಟು ವರ್ಷ … Read more

ದಕ್ಷಿಣ ಕೇದಾರವಾಗಲಿದೆ ದೇವನಗರಿ ದಾವಣಗೆರೆ

ಸುದ್ದಿ360, ದಾವಣಗೆರೆ, ಜು.10:  ಉತ್ತರದಲ್ಲಿ ಕೇದಾರನಾಥನ ಸನ್ನಿದಾನ ಇರುವಂತೆ ದಕ್ಷಿಣದಲ್ಲೂ ಕೇದಾರನಾಥ ಮಠ ಮತ್ತು ಕೇದಾರ ಮಾದರಿಯ ಭವ್ಯ ಮಂದಿರ ನಿರ್ಮಾಣ ಮಾಡುವ ಇಚ್ಛೆಯಿದೆ. ಈ ನಿಟ್ಟಿನಲ್ಲಿ ಈಗಾಗಲೇ ಕಾರ್ಯಾರಂಭವಾಗಿದೆ ಎಂದು ಶ್ರೀ ಕೇದಾರ ಜಗದ್ಗುರು ಶ್ರೀ ಭೀಮಾಶಂಕರಲಿಂಗ ಶಿವಾಚಾರ್ಯ ಸ್ವಾಮೀಜಿ ನುಡಿದರು. ದಾವಣಗೆರೆಯ ತ್ರಿಶೂಲ್ ಕಲಾಭವನದಲ್ಲಿ ಭಾನುವಾರ ನಡೆದ ಸಂಗೀತಯುಕ್ತ ಇಷ್ಟಲಿಂಗ ಮಹಾಪೂಜೆಯ ನಂತರ ಭಕ್ತರನ್ನುದ್ದೇಶಿಸಿ ಸಂದೇಶ ನೀಡುತ್ತಾ, ದಾವಣಗೆರೆ-ಹರಿಹರ ನಡುವೆ ಬರುವ ಶಂಶೀಪುರ ಬಳಿ ನಾವು ಬಂದು ತಂಗಲು ಗುರು ನಿವಾಸ ನಿರ್ಮಾಣ ಕಾರ್ಯ … Read more

ಅಮರನಾಥ: ಸಹಾಯವಾಣಿಯ ವಿವರ ಇಲ್ಲಿದೆ

ಕನ್ನಡಿಗರ ರಕ್ಷಣೆಗೆ ಕ್ರಮ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸುದ್ದಿ360, ಬೆಂಗಳೂರು, ಜು.09: ಅಮರನಾಥದಲ್ಲಿ ಮೇಘಸ್ಪೋಟದಿಂದ 15 ಜನ ಸಾವನ್ನಪ್ಪಿದ್ದು,  ಪ್ರಾಥಮಿಕ ಮಾಹಿತಿಯ ಪ್ರಕಾರ ನೂರಕ್ಕೂ ಹೆಚ್ಚು ಜನ ಕನ್ನಡಿಗರು ಅಮರನಾಥ ಯಾತ್ರೆಯಲ್ಲಿದ್ದಾರೆ. ಕನ್ನಡಿಗರ ರಕ್ಷಣೆಗೆ ಸರ್ಕಾರ ಕ್ರಮ ಕೈಗೊಂಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ರಾಜ್ಯದಿಂದ ಅಮರನಾಥ ಯಾತ್ರೆ ಕೈಗೊಂಡಿದ್ದ ಕನ್ನಡಿಗರು ಸುರಕ್ಷಿತವಾಗಿದ್ದು, ಬೇರೆ ಯಾವ ಅಹಿತರಕರ ಸುದ್ದಿಯೂ ಬಂದಿಲ್ಲ. ಅಲ್ಲಿಯ ರಾಜ್ಯ ಸರ್ಕಾರ ಮತ್ತು … Read more

ಅಮರನಾಥ ಯಾತ್ರೆಯಲ್ಲಿ ಸಿಲುಕಿದವರಿಗೆ ಕರ್ನಾಟಕ ಸರ್ಕಾರದಿಂದ ಸಹಾಯವಾಣಿ

ಸುದ್ದಿ360, ಬೆಂಗಳೂರು ಜು.8: ಇಂದು ಸುಮಾರು 5:30 ರ ಸಮಯಕ್ಕೆ  ಶ್ರೀ ಅಮರನಾಥ ಗುಹೆಯ ಬಳಿ ಮೋಡದ ಸ್ಫೋಟದಿಂದಾಗಿ ಯಾತ್ರಿಕರ ವಾಸಸ್ಥಳಗಳಿಗೆ ಹಾನಿಯಾಗಿದೆ. NDRF, ITBP, ಭಾರತೀಯ ಸೇನೆ, CRPF, BSF, SDRF ಮತ್ತು ಜಮ್ಮು ಮತ್ತು ಕಾಶ್ಮೀರ್ ಪೋಲಿಸ್ ಜಂಟಿ ರಕ್ಷಣಾ ಕಾರ್ಯಾಚರಣೆಯಲ್ಲಿ ನಿರತರಾಗಿದ್ದಾರೆ. ಸಂಕಷ್ಟದಲ್ಲಿ ಸಿಲುಕಿದವರಿಗೆ ಜಮ್ಮು ಕಾಶ್ಮೀರ ಸರ್ಕಾರವು ಸಹಾಯಹಸ್ತ ಚಾಚಿದೆ. ಶ್ರೀ ಅಮರನಾಥ ಗುಹೆಯ ಬಳಿ ಕರ್ನಾಟಕದ ಯಾವುದೇ ವ್ಯಕ್ತಿಯು ಸಿಕ್ಕಿಬಿದ್ದಲ್ಲಿ ದಯವಿಟ್ಟು ಕೆಳಗಿನ ಸಂಖ್ಯೆಗೆ ಕರೆ ಮಾಡಿ ಸಂಪರ್ಕ ಮಾಡಬಹುದಾಗಿದೆ.‌  … Read more

ಎಲ್ಲಾದರೂ ಇರು ಎಂದೆಂದಿಗೂ ನೀ ಕನ್ನಡವಾಗಿರು – ಕವಿವಾಣಿ ಸ್ಮರಿಸಿದ ಸಿಎಂ

ಸುದ್ದಿ360 ಹೈದರಾಬಾದ್ ಜು.02: ಎಲ್ಲಾದರೂ ಇರು ಎಂದೆಂದಿಗೂ ನೀ ಕನ್ನಡವಾಗಿರು.’’ಎಂಬ ಕವಿವಾಣಿಯಂತೆ ಕನ್ನಡನಾಡಿನಿಂದ ಹೈದರಾಬಾದಿನಲ್ಲಿ ನೆಲೆಸಿದ್ದರೂ ಕನ್ನಡದ ಕಂಪು ಹಾಗೂ ಭಾಷೆಯನ್ನು ಬಿಟ್ಟಿಲ್ಲ. ನಮಗಿಂತ ಅಚ್ಚಕಟ್ಟಿನ ಕನ್ನಡದ ಪ್ರೇಮಿಗಳು ನೀವು’ ಎಂದು ಮುಖ್ಯಮಂತ್ರಿಗಳು ಬಸವರಾಜ ಬೊಮಾಯಿ ಅವರು ತಿಳಿಸಿದರು. ಅವರು ಇಂದು ಕಾಚಿಗುಡದ ಲಿಂಗಂಪಲ್ಲಿಯಲ್ಲಿರುವ ನೃಪತುಂಗ ಶಾಲೆಯಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಮಾತನಾಡಿದರು. ನೃಪತುಂಗ ಕನ್ನಡದ ಆದಿಕವಿಯ ಹೆಸರಿನಲ್ಲಿ ಸಂಸ್ಥೆಯನ್ನು ಕಟ್ಟಿ ಸಾವಿರಾರು ಮಕ್ಕಳಿಗೆ ವಿದ್ಯೆ ನೀಡುತ್ತಿರುವುದು ದೊಡ್ಡ ಕೆಲಸ. ಇದರ ಸ್ಥಾಪಕರಿಗೆ ಹಾಗೂ ಪದಾಧಿಕಾರಿಗಳು ಅಭಿನಂದನೆಗೆ ಅರ್ಹರು. ಹೈದರಾಬಾದಿನ … Read more

ಜಿಎಸ್ ಟಿ ಪರಿಹಾರ: ಆಗಸ್ಟ್ ತಿಂಗಳಲ್ಲಿ  ಅಂತಿಮ ನಿರ್ಣಯ – ಸಿಎಂ

shimoga-riots-were-the-result-of-the-governments-appeasement-policy-basavaraj-bommai

ಸುದ್ದಿ360 ಬೆಂಗಳೂರು, ಜೂನ್ 30: ಜಿಎಸ್ ಟಿ ಮಂಡಳಿ ಸಭೆಯಲ್ಲಿ ರಾಜ್ಯಗಳಿಗೆ ಜಿಎಸ್ ಟಿ ಪರಿಹಾರವನ್ನು ವಿಸ್ತರಿಸುವ ಬಗ್ಗೆ ಚರ್ಚೆಯಾಗಿದೆ. ಆಗಸ್ಟ್ ತಿಂಗಳಲ್ಲಿ ಈ ಬಗ್ಗೆ ಅಂತಿಮ ನಿರ್ಣಯ ಕೈಗೊಳ್ಳುವುದಾಗಿ ತಿಳಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ, ಜಿ. ಎಸ್.ಟಿ ಕಾನೂನು ಸಮಿತಿಯು ಕಾನೂನು ತೊಡಕುಗಳನ್ನು ನಿವಾರಣೆ ಮಾಡಲು ಎಲ್ಲಾ ಕ್ರಮಗಳನ್ನು ತೆಗೆದುಕೊಂಡಿದೆ.  ಫಿಟ್ ಮೆಂಟ್ ಸಮಿತಿಯ ಶಿಫಾರಸ್ಸುಗಳನ್ನು ಅಂಗೀಕರಿಸಲಾಗಿದೆ ಎಂದು ತಿಳಿಸಿದರು.

ರಾಷ್ಟ್ರಮಟ್ಟದ ಕರಾಟೆ ಚಾಂಪಿಯನ್ಶಿಪ್‍ ಜೀವನ್‍ ಸಾಗರ್ ಪ್ರಥಮ : ಮಂಜುನಾಥ್ ಗಡಿಗುಡಾಳ್‍ ರಿಂದ ಸನ್ಮಾನ

ಸುದ್ದಿ360 ದಾವಣಗೆರೆ, ಜೂನ್ 28: ಆತ್ಮ ರಕ್ಷಣೆ ಮತ್ತು ಏಕಾಗ್ರತೆಯ ಕರಾಟೆ ಕಲೆಯಲ್ಲಿ ಸಾಕಷ್ಟು ಪರಿಶ್ರಮ ವಹಿಸಿ ಕಠಿಣ ಅಭ್ಯಾಸ ಮಾಡಿರುವ ಇಲ್ಲಿನ ಜಯನಗರದ ಕರಾಟೆ ಕೇಸರಿ ಮಾರ್ಷಲ್ ಆರ್ಟ್ಸ್ ಸಂಸ್ಥೆಯ ಎಂ.‌ ಜೀವನ್ ಸಾಗರ್ ಪಂಜಾಬ್ ನಲ್ಲಿ ನಡೆದ ರಾಷ್ಟ್ರಮಟ್ಟದ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆಯುವ ಮೂಲಕ ಜಿಲ್ಲೆಗೆ ಮತ್ತು ರಾಜ್ಯದ ಹಿರಿಮೆಗೆ ಕಾರಣರಾಗಿದ್ದಾರೆ. ಈ ಮೂಲಕ ರಾಷ್ಟ್ರಮಟ್ಟದಲ್ಲಿ ದಾವಣಗೆರೆಯನ್ನು ಗುರುತಿಸುವಂತೆ ಮಾಡಿರುವ ಎಂ.‌ ಜೀವನ್ ಸಾಗರ್ ಅವರನ್ನು ಎಂಸಿಸಿ … Read more

47ನೇ ಜಿಎಸ್‍ಟಿ ಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ  ಬೊಮ್ಮಾಯಿ

ಸುದ್ದಿ360 ಚಂಡಿಗಡ, ಜೂನ್ 28: ಮುಖ್ಯಮಂತ್ರಿ ಬಸವರಾಜ  ಬೊಮ್ಮಾಯಿ ಅವರು ಇಂದು ಚಂಡಿಗಡದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಅಧ್ಯಕ್ಷತೆಯಲ್ಲಿ ಆರಂಭವಾದ ಎರಡು ದಿನಗಳ 47ನೇ ಜಿಎಸ್ಟಿ ಸಭೆಯಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ನಿರ್ಮಲಾ ಸೀತಾರಾಮನ್ ಅವರು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಕಾಣಿಕೆ ನೀಡಿ ಗೌರವಿಸಿದರು. ನಂತರ ಕೆಲಕಾಲ ವಿವಿಧ ವಿಷಯಗಳ ಕುರಿತು ಸಮಾಲೋಚನೆ ನಡೆಯಿತು.  ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ , ವಾಣಿಜ್ಯ ತೆರಿಗೆ ಇಲಾಖೆ ಆಯುಕ್ತೆ ಸಿ.ಶಿಖಾ … Read more

error: Content is protected !!