ದಲಿತರ ಸಾಗುವಳಿಯಲ್ಲಿದ್ದ ಜಮೀನು ಸ್ಮಶಾನಕ್ಕೆ : ಬಹುಜನ ಸಮಾಜ ಪಾರ್ಟಿ ಖಂಡನೆ

ಸುದ್ದಿ360 ದಾವಣಗೆರೆ ಮಾ.6: ಜಿಲ್ಲೆಯ ಹರಿಹರ ತಾಲೂಕಿನ ಸಾಲಕಟ್ಟೆ ಗ್ರಾಮದಲ್ಲಿ ದಲಿತರು ಸಾಗುವಳಿ ಮಾಡಿರುವ ಸರ್ಕಾರಿ ಭೂಮಿಯನ್ನು ಉದ್ದೇಶಪೂರ್ವಕವಾಗಿ ಸ್ಮಶಾನಕ್ಕೆ ಸೇರಿಸಲು ಹೊರಟಿರುವ ಕುತಂತ್ರವನ್ನು ಬಹುಜನ ಸಮಾಜ ಪಾರ್ಟಿ ತೀವ್ರವಾಗಿ ಖಂಡಿಸುತ್ತದೆ ಎಂದು ಜಿಲ್ಲಾಧ್ಯಕ್ಷ ಡಿ. ಹನುಮಂತಪ್ಪ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಸಾಲಕಟ್ಟೆ ಗ್ರಾಮದಲ್ಲಿ 15 ಎಕರೆ 30 ಸೆಂಟ್ಸ್ ಗೋಮಾಳ ಜಮೀನು ಇದ್ದು ಇದರಲ್ಲಿ 6 ಎಕರೆ ಜಮೀನನ್ನು 1 ಎಕರೆ 30 ಸೆಂಟ್ಸ್ ನಂತೆ 5 ಜನ ದಲಿತರು … Read more

ಸವಿತಾಬಾಯಿ ಮಲ್ಲೇಶ್ ನಾಯಕ್ ಅವರ ಮಾನಹಾನಿಯಲ್ಲಿ ತೊಡಗಿರುವವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

ಕೆ.ಎಸ್. ಬಸವರಾಜ್ ವಿರುದ್ಧ ಕ್ರಮಕ್ಕೆ ರಾಜ್ಯ ಬಂಜಾರ ವಿದ್ಯಾರ್ಥಿ ಸಂಘ ಒತ್ತಾಯ ಸುದ್ದಿ360 ದಾವಣಗೆರೆ ಮಾ.06: ಮಾಯಕೊಂಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸವಿತಾಬಾಯಿ ಮಲ್ಲೇಶ್ ನಾಯಕ್ ಅವರ ಭಾವಚಿತ್ರವನ್ನು ಕೆ.ಎಸ್. ಬಸವರಾಜ್ (ಬಸವಂತಪ್ಪ) ಇವರು ಅಶ್ಲೀಲವಾಗಿ ಮಾರ್ಪಾಡಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುತ್ತಿದ್ದಾರೆ ಎಂದು ಆರೋಪಿಸಿ, ಕರ್ನಾಟಕ ರಾಜ್ಯ ಬಂಜಾರ ವಿದ್ಯಾರ್ಥಿ ಸಂಘದ ನೇತೃತ್ವದಲ್ಲಿ ಜಿಲ್ಲಾ ರಕ್ಷಣಾಧಿಕಾರಿಗಳ ಕಚೇರಿ ಎದುರು ಇಂದು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಬಂಜಾರ ವಿದ್ಯಾರ್ಥಿ ಸಂಘದ ರಾಜ್ಯಾಧ್ಯಕ್ಷ … Read more

ಕಾಂಗ್ರೆಸ್ ಖುದ್ದು ಬಂದ್ ಆಗುವ ಕಾಲ ಬಂದಿದೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360 ಹುಬ್ಬಳ್ಳಿ, ಮಾ. 06:  ಕಾಂಗ್ರೆಸ್ ಮಾಡಿರುವ ಕರ್ಮಕಾಂಡ ಒಂದೆರಡಲ್ಲ. ಕಾಂಗ್ರೆಸ್ ಖುದ್ದು ಬಂದ್ ಆಗುವ ಕಾಲ ಬಂದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಭ್ರಷ್ಟಾಚಾರದ ವಿರುದ್ಧ  ಕಾಂಗ್ರೆಸ್ ಕರೆ ನೀಡಿರುವ ಬಂದ್ ಗೆ ಸಂಬಂಧಿಸಿದಂತೆ ಅವರು ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ಪ್ರತಿಭಟನೆ, ಬಂದ್ ಮೂಲಕ ತಮ್ಮ ರಾಜಕೀಯ ಭವಿಷ್ಯ ಬರೆಯಬಹುದೆಂದು ಬಂದ್ ಗೆ ಕರೆ ನೀಡಿದ್ದಾರೆ. ಅವರಿಗೆ ಯಾವ ಪ್ರತಿಕ್ರಿಯೆ ದೊರೆಯಿವುದಿಲ್ಲ ಎಂದರು.  ಕಾಂಗ್ರೆಸ್ ಭ್ರಷ್ಟಾಚಾರದ ಕೂಪ : ಕಾಂಗ್ರೆಸ್ ಭ್ರಷ್ಟಾಚಾರದ … Read more

ಬಸವ ತತ್ವ ಗುನುಗುತ್ತಿರುವ ದಾವಣಗೆರೆ ಮಹಾನಗರ ಪಾಲಿಕೆ – ಮೇಯರ್ ಗಿರಿ ನಮ್ಮದು – ನಮ್ಮದು ಎನ್ನುತ್ತಿರುವ ಉಭಯ ಪಕ್ಷಗಳು

ಇವನಾರವ ಇವನಾರವ  ಎಂದೆನಿಸದಿರಯ್ಯಾ – ಇವ ನಮ್ಮವ ಇವ ನಮ್ಮವ ಎಂದೆನಿಸಿರಯ್ಯಾ. . . ಸುದ್ದಿ360 ದಾವಣಗೆರೆ ಮಾ. 4: ದಾವಣಗೆರೆ ಮಹಾನಗರ ಪಾಲಿಕೆಗೆ ಇಂದು ನಡೆದ ಮೇಯರ್ ಉಪಮೇಯರ್ ಚುನಾವಣೆಯಲ್ಲಿ ಹೈಡ್ರಾಮವೇ ನಡೆಯಿತು. ಈ ಸಂದರ್ಭದಲ್ಲಿ ನಡೆದ ಘಟನೆಗಳು ಮತ್ತು ಅಂತಿಮ ಫಲಿತಾಂಶದಿಂದ ಜನಸಾಮಾನ್ಯರಲ್ಲಿ ಮೂಡಿದ ಪ್ರಶ್ನೆ ಎಂದರೆ ಮೇಯರ್ ಸ್ಥಾನ ಈಗ ‘ಕೈ’ ನಲ್ಲಿದೆಯೋ ಅಥವಾ ಆಪರೇಷನ್ ಕಮಲದ ತೆಕ್ಕೆಗೆ ಜಾರಿತೋ ಎಂಬುದಾಗಿತ್ತು. ಫಲಿತಾಂಶದ ನಂತರ ಕೈ ಮತ್ತು ಕಮಲ ಪಾಳಯದ ಸಾಮಾಜಿಕ ಜಾಲತಾಣದಲ್ಲಿ … Read more

ಡಬಲ್ ಎಂಜಿನ್ ಸರಕಾರವಲ್ಲ ಬೇಕಿರುವುದು ಹೊಸ ಎಂಜಿನ್ ಸರಕಾರ: ಕೇಜ್ರಿವಾಲ್

ಕರ್ನಾಟಕ ರಾಜ್ಯವನ್ನು ಭ್ರಷ್ಟಾಚಾರಮುಕ್ತಗೊಳಿಸಲು ಎಎಪಿಗೆ ಅಧಿಕಾರ ನೀಡುವಂತೆ ಕೇಜ್ರಿವಾಲ್ ಮನವಿ ಸುದ್ದಿ360 ದಾವಣಗೆರೆ, ಮಾ.4: ಪರ್ಸಂಟೇಜ್ ಪಕ್ಷಗಳನ್ನು ಬದಿಗಿರಿಸಿ ಒಂದು ಬಾರಿ ಆಮ್ ಆದ್ಮಿ ಪಕ್ಷದ ಹೊಸ ಎಂಜಿನ್ ಆಡಳಿತಕ್ಕೆ ಅವಕಾಶ ನೀಡುವಂತೆ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ, ಹೊಸದಿಲ್ಲಿ ಮುಖ್ಯಮಂತ್ರಿ ಕೇಜ್ರಿವಾಲ್ ಜನತೆಯಲ್ಲಿ ಮನವಿ ಮಾಡಿದರು. ಕರ್ನಾಟಕದಲ್ಲಿ ಅಧಿಕೃತವಾಗಿ ಚುನಾವಣಾ ಪ್ರಚಾರ ಆರಂಭಿಸುವ ನಿಮಿತ್ತ ಆಮ್ ಆದ್ಮಿ ಪಕ್ಷ, ದಾವಣಗೆರೆ ನಗರದ ಹೈಸ್ಕೂಲ್ ಮೈದಾನದಲ್ಲಿ ಇಂದು ರಾಜ್ಯ ಮಟ್ಟದ ಸಮಾವೇಶವನ್ನು ಆಯೋಜಿಸಲಾಗಿತ್ತು. ಸಮಾವೇಶವನ್ನು ಉದ್ಘಾಟಿಸಿ … Read more

ಮಾ.9: ಸಿಪಿಐ ನೇತೃತ್ವದಲ್ಲಿ ನಿವೇಶನ ರಹಿತರಿಂದ ವಿಧಾನ ಸೌಧ ಚಲೋ

ಸುದ್ದಿ360 ದಾವಣಗೆರೆ ಮಾ.9: ಭಾರತ ಕಮ್ಯುನಿಸ್ಟ್ ಪಕ್ಷದ ನೇತೃತ್ವದಲ್ಲಿ ಮಾರ್ಚ್ 9 ರಂದು ನಿವೇಶನ ರಹಿತರಿಂದ ವಿಧಾನಸೌಧ ಚಲೋ ನಡೆಸಲಾಗುವುದು ಎಂದು ಸಿಪಿಐ ಜಿಲ್ಲಾ ಕಾರ್ಯದರ್ಶಿ ಕಾಂ. ಅವರಗೆರೆ ಚಂದ್ರು ತಿಳಿಸಿದ್ದಾರೆ. ವಸತಿ ಇಲ್ಲದವರಿಗೆ ವಸತಿ ಒದಗಿಸಬೇಕು, ನಿವೇಶನ ಇಲ್ಲದವರಿಗೆ ನಿವೇಶನ ಕೊಡಬೇಕೆಂದು ಸರ್ಕಾರಕ್ಕೆ ಒತ್ತಾಯಿಸಿ ವಿಧಾನಸೌಧ ಚಲೋ ನಡೆಸುವ ಮೂಲಕ ಸರ್ಕಾರಕ್ಕೆ ಒತ್ತಾಯಿಸಲಾಗುವುದು. ಅಂದು ಬೆಳಗ್ಗೆ 10.30 ಕ್ಕೆ ಬೃಹತ್ ಪ್ರತಿಭಟನೆ ಮೂಲಕ ಬೆಂಗಳೂರು ರೈಲು ನಿಲ್ದಾಣದಿಂದ ಫ್ರೀಡಂ ಪಾರ್ಕಿಗೆ ತೆರಳಿ ನಡೆಸಿ ಧರಣಿ ನಡೆಸಲಾಗುವುದು. … Read more

ದೇವರ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆಯಲ್ಲ – ಭಕ್ತಿ ಪ್ರತಿಷ್ಠಾಪನೆ: ತರಳಬಾಳು ಶ್ರೀ

ಕೊಂಡಜ್ಜಿಯಲ್ಲಿ ವಿದ್ಯುಕ್ತವಾಗಿ ನಡೆದ ಆಂಜನೇಯಸ್ವಾಮಿ‌ ಹಾಗೂ ಗಂಗಾಪರಮೇಶ್ವರಿ ದೇವಿ ದೇವಸ್ಥಾನ ಉದ್ಘಾಟನೆ – ಕಳಸಾರೋಹಣ ಸುದ್ದಿ360 ದಾವಣಗೆರೆ ಮಾ.3: ಇಡೀ ಮಾನವ ಕುಲಕ್ಕೆ ಪ್ರಾಣ ಕೊಡುವವನು ದೇವರೇ ಆಗಿರುವಾಗ, ದೇವರ ಮೂರ್ತಿಗೆ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ಎನ್ನುವುದು ಸರಿಯಲ್ಲ. ಬದಲಿಗೆ ಇದನ್ನು ಭಕ್ತಿ ಪ್ರತಿಷ್ಠಾಪನೆ ಎಂದು ಕರೆಯಬೇಕು ಎಂದು ಸಿರಿಗೆರೆಯ ತರಳಬಾಳು ಬೃಹ್ಮಠದ ಶ್ರೀ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅಭಿಪ್ರಾಯಪಟ್ಟರು. ಜಿಲ್ಲೆಯ ಹರಿಹರ ತಾಲ್ಲೂಕಿನ ಕೊಂಡಜ್ಜಿ‌ ಗ್ರಾಮದದಲ್ಲಿ ನೂತನವಾಗಿ ನಿರ್ಮಿಸಿರುವ ಆಂಜನೇಯಸ್ವಾಮಿ‌ ಹಾಗೂ ಗಂಗಾಪರಮೇಶ್ವರಿ ದೇವಿ ದೇವಸ್ಥಾನ … Read more

State level convention of Aam Aadmi Party in Davangere ಮಾ.4- ದಾವಣಗೆರೆಯಲ್ಲಿ ಆಮ್ ಆದ್ಮಿ ಪಕ್ಷದ ರಾಜ್ಯಮಟ್ಟದ ಸಮಾವೇಶ

ಅರವಿಂದ ಕೇಜ್ರಿವಾಲ್ , ಭಗವಂತ್ ಸಿಂಗ್ ಮಾನ್ ರಿಂದ ಕರ್ನಾಟಕದಲ್ಲಿ ಚುನಾವಣಾ ಪ್ರಚಾರಕ್ಕೆ ಅಧಿಕೃತ ಚಾಲನೆ ಸುದ್ದಿ360 ದಾವಣಗೆರೆ ಮಾ.2: ಆಮ್ ಆದ್ಮಿ ಪಕ್ಷದ ಪಕ್ಷದ ರಾಷ್ಟ್ರೀಯ ಅಧ್ಯಕ್ಷರೂ, ಹೊಸದಿಲ್ಲಿ ಮುಖ್ಯಮಂತ್ರಿಯೂ ಆದ ಅರವಿಂದ ಕೇಜ್ರಿವಾಲ್ ಹಾಗೂ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಸಿಂಗ್ ಮಾನ್ ಇವರು ಮದ್ಯ ಕರ್ನಾಟಕ ದಾವಣಗೆರೆಯಲ್ಲಿ ನಡೆಯುತ್ತಿರುವ ರಾಜ್ಯಮಟ್ಟದ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಈ ಸಮಾವೇಶದ ಮೂಲಕ ರಾಜ್ಯದಲ್ಲಿ ಚುನಾವಣಾ ಪ್ರಚಾರಕ್ಕೆ ಅಧಿಕೃತವಾಗಿ ಚಾಲನೆ ನೀಡಲಾಗುತ್ತಿದೆ ಎಂದು ಎಎಪಿ ರಾಜ್ಯ ಉಪಾಧ್ಯಕ್ಷ ವಿಜಯ್ ಶರ್ಮಾ … Read more

ಜಿಎಂಐಟಿಯ ಹಲವು ವಿದ್ಯಾರ್ಥಿಗಳು ವಿವಿಧ ಕಂಪನಿಗಳಿಗೆ ಆಯ್ಕೆ

ಜಿಎಂಐಟಿ ವಿದ್ಯಾರ್ಥಿಗಳಿಗೆ ಹಲವು ಪ್ರತಿಷ್ಠಿತ ಕಂಪನಿಗಳಿಂದ ಸಂದರ್ಶನ ಪ್ರಕ್ರಿಯೆ ದಾವಣಗೆರೆ ಮಾ.2: ನಗರದ ಜಿಎಂ ತಾಂತ್ರಿಕ ಮಹಾವಿದ್ಯಾಲಯದ ಅಂತಿಮ ವರ್ಷದ ಇಂಜಿನಿಯರಿಂಗ್ ಮತ್ತು ಎಂಬಿಎ ವಿಭಾಗದ ಹಲವು ವಿದ್ಯಾರ್ಥಿಗಳು ವಿವಿಧ ಪ್ರತಿಷ್ಠಿತ ಕಂಪನಿಗಳಿಗೆ ಆಯ್ಕೆಯಾಗಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ ಸಂಜಯ್ ಪಾಂಡೆ ಎಂಬಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇತ್ತೀಚೆಗೆ ಪ್ರತಿಷ್ಠಿತ ಕಂಪನಿಗಳಾದ ಮರ್ಸಿ ಡೇಸ್ ಬೆಂಜ್, ಬೈಜೂಸ್, ಇಂಟೆಲಿಪಾತ್ ಟೆಕ್ನಾಲಜಿ ಸರ್ವಿಸಸ್, ಡಿ ಮಾರ್ಟ್, ಐಸಿಐಸಿಐ ಬ್ಯಾಂಕ್, ಹೆಚ್ ಡಿ ಎಫ್ ಸಿ ಬ್ಯಾಂಕ್, ಸ್ಟ್ರಾಟೊಜೇಂಟ್ … Read more

error: Content is protected !!