ಮುಖ್ಯಮಂತ್ರಿ, ಗೃಹ ಸಚಿವರು ಸಮರ್ಥರಿದ್ದಾರೆ – ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರಿಸಿರುವುದು ಸ್ವಾಗತಾರ್ಹ ಸುದ್ದಿ360 ದೊಡ್ಡಬಳ್ಳಾಪುರ, ಜು.30: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈಗಾಗಲೇ ಪ್ರಕರಣವನ್ನು ಸರ್ಕಾರ ರಾಷ್ಟ್ರೀಯ ತನಿಖಾ ದಳಕ್ಕೆ(NIA) ಹಸ್ತಾಂತರಿಸಿದೆ ಎಂದು ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು. ದೊಡ್ಡಬಳ್ಳಾಪುರ ನಗರದ ಬಸವ ಭವನದಲ್ಲಿ ದೊಡ್ಡಬಳ್ಳಾಪುರ ತಾಲೂಕು ವೀರಶೈವ ಲಿಂಗಾಯತ ಸಮಾಜ ಆಯೋಜಿಸಿರುವ ಶ್ರೀ ಶಿವಕುಮಾರ ಸ್ವಾಮೀಜಿಯವರ ಗುರುವಂದನಾ ಕಾರ್ಯಕ್ರಮಕ್ಕೆ ತೆರಳುವ ಮುನ್ನ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ … Read more

ನೂರಾರು ನೀರುನಾಯಿಗಳ ಚಿನ್ನಾಟ ನೋಡುವ ಭಾಗ್ಯ!  ಎಲ್ಲಿ ಅಂತೀರಾ. . .?

ಸುದ್ದಿ360 ವಿಜಯನಗರ (ಹೊಸಪೇಟೆ) ಜು.30: ತುಂಗಭದ್ರಾ ನದಿ ಹಿನ್ನೀರು ಪ್ರದೇಶದ  ಗುಂಡಾ ಸಸ್ಯೋದ್ಯಾನವನ ವೀಕ್ಷಣೆಗೆ ಬಂದ ಪ್ರವಾಸಿಗರಿಗೆ ಶನಿವಾರ  ಕಾದಿತ್ತು ನೋಡಿ ನೂರಾರು ನೀರು ನಾಯಿಗಳ ಚಿನ್ನಾಟದ ದೃಶ್ಯ. ಸಸ್ಯೋದ್ಯಾನವನದ ಬಳಿಯ ಹಿನ್ನೀರಿನಲ್ಲಿ ಈ ರೀತಿಯಾಗಿ ಕಾಣಿಸಿಕೊಂಡ ನೀರು ನಾಯಿಗಳ ಗುಂಪು ಪ್ರವಾಸಿಗರ ಮನಕೆ ಕಚಗುಳಿ ಕೊಟ್ಟಿದೆ. ಕಳೆದ ಎರಡು ವರ್ಷದಿಂದ ತುಂಗಭದ್ರಾ ಹಿನ್ನೀರು ಪ್ರದೇಶ ನೀರಿನಿಂದ ತುಂಬಿದ್ದ ಕಾರಣ ಗುಂಡಾ ಕಾಯ್ದಿಟ್ಟ ಅರಣ್ಯ ಪ್ರದೇಶವು ಹತ್ತಾರು ವಿವಿಧ ಜೀವ ಸಂಕುಲದ ತಾಣವಾಗಿ ಮಾರ್ಪಟ್ಟಿದ್ದು, ಅರಣ್ಯ ಇಲಾಖೆಯಿಂದ … Read more

ಯುವ ಮೋರ್ಚಾ ಕಾರ್ಯಕರ್ತರು ರಾಜೀನಾಮೆ ಕೊಟ್ಟ ತಕ್ಷಣ ಬಿಜೆಪಿ ಮುಳುಗಿಹೋಗಲ್ಲ- ಯಾರೂ ರಾಜೀನಾಮೆ ನೀಡಿಲ್ಲ : ಸಂಸದ ಸಿದ್ದೇಶ್ವರ

ಸುದ್ದಿ360, ದಾವಣಗೆರೆ ಜು.30: ಯುವ ಮೋರ್ಚಾ ಕಾರ್ಯಕರ್ತರು ಯಾರೂ ಪಕ್ಷಕ್ಕೆ ರಾಜೀನಾಮೆ ನೀಡಿಲ್ಲ. ರಾಜೀನಾಮೆ ಕೊಡುವ ಮುನ್ನ ನಮ್ಮ ಜಿಲ್ಲಾಧ್ಯಕ್ಷರು, ಶಾಸಕರು ನಮ್ಮ ಬಳಿ ಮಾತನಾಡಬೇಕು. ಅವರು ಪಕ್ಷಕ್ಕೆ ಇದುವರೆಗೂ ರಾಜೀನಾಮೆ ಸಲ್ಲಿಸಿಲ್ಲ. ಕೆಲವರು ಟಿವಿಯಲ್ಲಿ ಬರಬೇಕೆಂದು ರಾಜೀನಾಮೆ ಕೊಟ್ಟಿದ್ದೇವೆಂದು ಹೇಳಿರಬೇಕು ಎಂದು ಸಂಸದ ಜಿ.ಎಂ. ಸಿದ್ದೇಶ್ವರ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದರು, ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಸಾಲು ಸಾಲು ರಾಜೀನಾಮೆ ನೀಡುತ್ತಿರುವ ಬಗ್ಗೆ ಪ್ರತಿಕ್ರಿಯಿಸಿ, ಬಿಜೆಪಿ … Read more

ದಾವಣಗೆರೆಯಲ್ಲಿ ಸಿದ್ಧರಾಮೋತ್ಸವ ಮಾಡೋದರಿಂದ ಗೆಲ್ಲೋಕೆ ಸಾಧ್ಯಾನಾ? – ಉತ್ಸವದಲ್ಲಿ ಜನ ಸೇರೋದು ಕಾಮನ್

ಬರೋಬ್ಬರಿ 11 ಲಕ್ಷ ಜನ ಸೇರಿದ್ದ ಹಾವೇರಿಯಲ್ಲೇ ನಾವು ಸೋತಿದ್ವಿ : ಸಚಿವ ಮಾಧುಸ್ವಾಮಿ ಸುದ್ದಿ360, ದಾವಣಗೆರೆ ಜು.30: ಉತ್ಸವಗಳಲ್ಲಿ ಜನ ಸೇರಿಸೋದು ಎಲ್ಲಾ ಕಾಮನ್. ರಾಜಕೀಯದಲ್ಲಿ ಎರಡ್ಮೂರು ಲಕ್ಷ ಜನ ಸೇರಿಸಿ ಬಿಟ್ಟರೆ ಏನೋ ಮಹತ್ವದ್ದು ಆಗಿ ಬಿಡುತ್ತದೆ ಅನ್ನೋ ಕಾಲ ಈಗ ಇಲ್ಲ ಎಂದು ಕಾನೂನು ಸಂಸದೀಯ ಹಾಗೂ ಸಣ್ಣ ನೀರಾವರಿ ಸಚಿವ ಮಾಧುಸ್ವಾಮಿಯವರು ಸಿದ್ದರಾಮಯ್ಯ ಅಮೃತ ಮಹೋತ್ಸವ ಕುರಿತು ಪ್ರತಿಕ್ರಿಯಿಸಿದರು. ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವೆಲ್ಲ ಯಡಿಯೂರಪ್ಪನವರ ಜೊತೆ ಕೆಜೆಪಿಗೆ … Read more

ದಿವ್ಯಪಥ ಲೋಕಹಿತ ಪ್ರವಚನ ಕಾರ್ಯಕ್ರಮ ಬಸವಪ್ರಭುಶ್ರೀಗಳಿಂದ ಚಾಲನೆ

ಸುದ್ದಿ360 ದಾವಣಗೆರೆ, ಜು.29: ಶ್ರವಣ ಎಂದರೆ ಕೇಳುವುದು . ಒಳ್ಳೆಯ ವಿಚಾರಗಳು ಕೇಳಿಸಿಕೊಳ್ಳಬೇಕು. ಮನದ ಮೈಲಿಗೆಯನ್ನು  ತೊಳೆಯಲು ಸುಜ್ಞಾನ ಬೇಕು. ಮಹಾತ್ಮರ , ಶರಣರ ನುಡಿಗಳೇ ಸುಜ್ಞಾನ . ಸುಜ್ಞಾನದಿಂದ ಬದುಕು ಶ್ರೇಷ್ಠವಾಗುತ್ತದೆ ಎಂದು ಬಸವಪ್ರಭುಶ್ರೀಗಳು ನುಡಿದರು. ಬಸವಪ್ರಭು ಸ್ವಾಮೀಜಿ , ಕುಮಾರಶಾಸ್ತ್ರೀ ಹಿರೇಮಠ , ಯಶವಂತರಾವ್ ಜಾದವ್ , ಲೋಕಿಕೆರೆ ನಾಗರಾಜ್ ದಿವ್ಯಪಥ ಲೋಕಹಿತ ಗ್ರಂಥಕ್ಕೆ ಪುಷ್ಪಾರ್ಚನೆ ಮಾಡಿದರು. ಅಥಣಿ ಶಿವಯೋಗಿಗಳ ಜೀವನ ದರ್ಶನ ಕುರಿತಾದ ಡಾ. ಮುರುಘಾ ಶರಣರು ರಚಿಸಿರುವ ‘ದಿವ್ಯಪಥ ಲೋಕಹಿತ’ 112 … Read more

ಸಿದ್ದರಾಮಯ್ಯ ಹೇಳುವುದೆಲ್ಲಾ ವೇದವಾಕ್ಯವಲ್ಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360 ಬೆಂಗಳೂರು, ಜು.29: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳುವುದೆಲ್ಲಾ ವೇದವಾಕ್ಯವಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ, ಸಿದ್ಧರಾಮಯ್ಯ ಅವರ ಕಾಲದಲ್ಲಿ 32 ಸರಣಿ ಕೊಲೆಗಳಾಗಿದ್ದವು. ಆಗ ಅವರು ಏನು ಮಾಡುತ್ತಿದ್ದರು ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು, ಎಲ್ಲಾ ವಿಷಯಗಳಲ್ಲಿ ರಾಜಕಾರಣವನ್ನು ಮಾಡಬಾರದು. ಅವರ ಹೇಳಿಕೆಗೆ ಹೆಚ್ಚಿನ ಮಹತ್ವವಿಲ್ಲ ಎಂದರು. ಶಾಸಕ ತನ್ವೀರ್ ಸೇಠ್ ಮೇಲೆ ಎಸ್‍ಡಿಪಿಐ ಹಾಗೂ ಪಿಎಫ್‍ಐ ಸಂಘಟನೆಯ ಸುಮಾರು 200 ಜನರನ್ನು ದಾಳಿ ನಡೆಸಿದ … Read more

ರಾಷ್ಟ್ರೀಯ  ತನಿಖಾ ದಳಕ್ಕೆ ಪ್ರವೀಣ್ ಹತ್ಯೆ ಪ್ರಕರಣ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360 ಬೆಂಗಳೂರು, ಜು. 29: ಸುಳ್ಯದ ಬಿಜೆಪಿ ಮುಖಂಡ  ಪ್ರವೀಣ್ ನೆಟ್ಟಾರು ಅವರ ಹತ್ಯೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ  ತನಿಖಾ ದಳಕ್ಕೆ (NIA) ವಹಿಸಲು ತೀರ್ಮಾನಿಸಲಾಗಿದೆ  ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಬೆಂಗಳೂರಿನ  ಶಕ್ತಿಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಪ್ರವೀಣ್ ಹತ್ಯೆ ವ್ಯವಸ್ಥಿತವಾಗಿ ಆಗಿದೆ ಹಾಗೂ ಇದೊಂದು  ಅಂತರರಾಜ್ಯ ವಿಚಾರವಾಗಿದೆ. ಡಿಜಿ, ಐಜಿ ಅವರ ಬಳಿ ಚರ್ಚಿಸಲಾಗಿದ್ದು, ಅದರ ಸಂಪೂರ್ಣ ಮಾಹಿತಿಯನ್ನು ಪಡೆಯಲು ಸೂಚಿಸಲಾಗಿದೆ. ತನಿಖೆ ತೀವ್ರಗತಿಯಲ್ಲಿ ನಡೆಯುತ್ತಿದ್ದು, ಮಾಹಿತಿ ಪಡೆದ ನಂತರ ಗೃಹ … Read more

ಸಾರ್ವಜನಿಕ ಶಿಕ್ಷಣ ಉಳಿಸಿ ದಿನದ ಪ್ರಯುಕ್ತ ಎಐಡಿಎಸ್‌ಓದಿಂದ ಪ್ರತಿಭಟನೆ

ಪ್ರಶ್ನಿಸಿದವರನ್ನು ಹತ್ತಿಕ್ಕುತ್ತಿರುವ ಸರ್ಕಾರ: ಎ.ಬಿ. ರಾಮಚಂದ್ರಪ್ಪ ಆರೋಪ ಸುದ್ದಿ360 ದಾವಣಗೆರೆ, ಜು.29: ಸರ್ಕಾರದ ನಿಲುವು ಪ್ರಶ್ನಿಸಿದವರನ್ನು ಹತ್ತಿಕ್ಕುವುದು ಮತ್ತು ದೇಶದ್ರೋಹ ಪಟ್ಟ ಕಟ್ಟುವ ಏಕಸ್ವಾಮ್ಯ ಧೋರಣೆ ಸರ್ಕಾರದ್ದಾಗಿದೆ ಎಂದು ಪ್ರೊ. ಎ.ಬಿ. ರಾಮಚಂದ್ರಪ್ಪ  ದೂರಿದರು. ಅವರು ನಗರದ ಜಯದೇವ ವೃತ್ತದಲ್ಲಿ ಎಐಡಿಎಸ್‌ಓ ನೇತೃತ್ವದಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯಲ್ಲಿ ಮುಖ್ಯ ಭಾಷಣಕಾರರಾಗಿ ಪಾಲ್ಗೊಂಡು ಮಾತನಾಡಿದರು. ಒತ್ತಾಯ ಪೂರ್ವಕ ಎನ್‌ಇಪಿ ಹೇರಿಕೆ, ಸರ್ಕಾರಿ ಶಾಲೆ ಮುಚ್ಚುವ ಸರ್ಕಾರದ ಕ್ರಮವನ್ನು ಖಂಡಿಸಿ ಎಐಡಿಎಸ್ಓ ಮಾನವತಾವಾದಿ ಈಶ್ವರಚಂದ್ರ ವಿದ್ಯಾಸಾಗರ್ ಅವರ ಸ್ಮರಣ ದಿನದ … Read more

ದಾವಣಗೆರೆಯಲ್ಲಿಯೇ ವಿಶ್ವ ಕನ್ನಡ ಸಮ್ಮೇಳನಕ್ಕೆ ಭಗೀರಥ ಪ್ರಯತ್ನ- ಮಾಗನೂರು ಬಸಪ್ಪ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಹೇಶ್ ಜೋಷಿ ಹೇಳಿಕೆ

ಸುದ್ದಿ360 ದಾವಣಗೆರೆ, ಜು.29: ದಾವಣಗೆರೆಯಲ್ಲಿಯೇ ವಿಶ್ವ ಕನ್ನಡ ಸಮ್ಮೇಳನ ಮಾಡಲು ಭಗೀರಥ ಪ್ರಯತ್ನ ಮಾಡುವುದಾಗಿ ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಮಹೇಶ್ ಜೋಷಿ ಹೇಳಿದರು. ನಗರದ ಕುವೆಂಪು ಕನ್ನಡ ಭವನದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಮಾಗನೂರು ಬಸಪ್ಪ ಪ್ರತಿಷ್ಠಾನದ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಆರೂಢ ದಾಸೋಹಿ ಶರಣ ಮಾಗನೂರು ಬಸಪ್ಪ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿ, ಸಾಹಿತ್ಯ ಪರಿಷತ್ತಿನ ಅಧ್ಯಕ್ಷನಾಗಿ, ನನ್ನ 5 ವರ್ಷದ ಅವಧಿಯೊಳಗೆ ಸ್ಥಳ ಬದಲಾವಣೆ ಇಲ್ಲದೆ, ಇಲ್ಲಿಯೇ ವಿಶ್ವ … Read more

ದಾವಣಗೆರೆ: ಹಿಂದೂ ಮಹಾಗಣಪತಿ – 5ನೇ ವರ್ಷದ ಗಣೇಶೋತ್ಸವಕ್ಕೆ ಹಂದರ ಕಂಬ ಪೂಜೆ

ಸುದ್ದಿ360 ದಾವಣಗೆರೆ, ಜು.29: ನಗರದ ಹಿಂದೂ ಮಹಾಗಣಪತಿ ಟ್ರಸ್ಟ್ ನಿಂದ 5ನೇ ವರ್ಷದ ಗಣಪತಿ ಹಬ್ಬದ ಆಚರಣೆಗೆ ಇಂದು ನಗರದ ಸರ್ಕಾರಿ ಬಾಲಕರ ಪ್ರೌಢಶಾಲೆ ಮೈದಾನದಲ್ಲಿ ಮಹಾಮಂಟಪದ ಹಂದರ ಕಂಬ ಪೂಜೆ ಸಲ್ಲಿಸಲಾಯಿತು. ಶಾಸಕ ಡಾ.ಶಾಮನೂರು ಶಿವಶಂಕರಪ್ಪ, ಮಾಜಿ ಸಚೇತಕ ಡಾ.ಎ.ಹೆಚ್.ಶಿವಯೋಗಿಸ್ವಾಮಿ, ಹಿಂದೂ ಮಹಾಗಣಪತಿ ಟ್ರಸ್ಟ್ ನ ಅಧ್ಯಕ್ಷ ಜೊಳ್ಳಿಗುರು ಸೇರಿದಂತೆ ಇತರೆ ಗಣ್ಯರು ಹಂದರ ಕಂಬಕ್ಕೆ ಹಾಲು ಬಿಟ್ಟು ಪೂಜಾ ಕಾರ್ಯಕ್ರಮ ನೆರವೇರಿಸುವ ಮೂಲಕ ಗಣೇಶೋತ್ಸವ ಮಹಾಮಂಟಪಕ್ಕೆ  ಚಾಲನೆ ನೀಡಿದರು. ಕೊಲ್ಕತ್ತಾ ಕಲಾವಿದರಿಂದ ಮಹಾಮಂಟಪ ನಂತರ … Read more

error: Content is protected !!