ಸಂತ ಪೌಲರ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಸ್ವಾಗತ ಮತ್ತು ಪ್ರತಿಭಾ ಪುರಸ್ಕಾರ

ಸುದ್ದಿ360, ದಾವಣಗೆರೆ ಜು.28: ನಗರದ ಪಿ.ಜೆ. ಬಡಾವಣೆಯ ಸಂತ ಪೌಲರ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗಾಗಿ ಸ್ವಾಗತ ಸಮಾರಂಭ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಾಣಿಜ್ಯ ವಿಭಾಗದ ಸೌಮ್ಯ ಜಿ (97%), ಪೂಜಾ ಎಂ.ಜಿ. (96.83%) ಮತ್ತು ವಿಜ್ಞಾನ ವಿಭಾಗದ ಸಹನ  ಎ ಆರ್ (97.17%), ಭಾಗ್ಯಶ್ರೀ ಎಸ್ ಎ (96.5%) ಇವರಿಗೆ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಸಂಸ್ಥೆಯ ವ್ಯವಸ್ಥಾಪಕರಾದ ಸಿಸ್ಟರ್ ಮಾರ್ಜರಿ, ಕಾಲೇಜಿನ ಆಡಳಿತಾಧಿಕಾರಿ … Read more

ಅಮೋಘ ಕೆ.ಆರ್.ಗೆ ಡಾಕ್ಟರೇಟ್

ಸುದ್ದಿ360 ಶಿವಮೊಗ್ಗ ಜು.28: ನಗರದ ಕುವೆಂಪು ರಸ್ತೆಯ ನಿವಾಸಿಯಾದ ಅಮೋಘ ಕೆ.ಆರ್. ಇವರು ರಾಜ್ಯದ ಪಶುವೈದ್ಯಕೀಯ ವಿಶ್ವವಿದ್ಯಾನಿಲಯದ ಮಂಗಳೂರಿನ ಸರ್ಕಾರಿ ಮೀನುಗಾರಿಕೆ ಕಾಲೇಜಿನಲ್ಲಿ 2018-19 ರಿಂದ 2020-21ರ ವರೆಗೆ ವಿದ್ಯಾಭ್ಯಾಸ ಮಾಡಿ ಪಿಹೆಚ್.ಡಿ ಪದವಿ ಪಡೆದಿರುತ್ತಾರೆ, ಮೀನುಗಾರಿಕಾ ಅಕ್ವಾಕಲ್ಚರ್ ವಿಭಾಗದಲ್ಲಿ ಡಾ. ಗಣಪತಿ ನಾಯಕ್ ಇವರ ಮಾರ್ಗದರ್ಶನದಲ್ಲಿ ರೆಗ್ಯುಲರ್ ವಿಭಾಗ ವಿದ್ಯಾರ್ಥಿಯಾಗಿ ಅಧ್ಯಯನ ಮಾಡಿ ಡಾಕ್ಟರೇಟ್ ಪದವಿ ಪಡೆದಿರುತ್ತಾರೆ. ಡಾ. ಅಮೋಘ ಕೆ.ಆರ್. ಇವರು ಮಾಜಿ ಮುಖ್ಯಮಂತ್ರಿ ಶ್ರೀ ಬಿ.ಎಸ್.ಯಡಿಯೂರಪ್ಪ ಅವರ ಆಪ್ತ ಸಹಾಯಕರಾದ ಶ್ರೀ ಕೆ.ಆರ್. … Read more

ಪ್ರವೀಣ್ ನೆಟ್ಟಾರು ಹತ್ಯೆ- ಸಾಮೂಹಿಕ ರಾಜೀನಾಮೆಗೆ ಮುಂದಾದ ದಾವಣಗೆರೆ ಬಿಜೆಪಿ ಜಿಲ್ಲಾ ಯುವ ಮೋರ್ಚಾ ಪದಾಧಿಕಾರಿಗಳು

ಸುದ್ದಿ360 ದಾವಣಗೆರೆ ಜು.27: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಕಾರ್ಯಕಾರಣಿ ಸದಸ್ಯ ಪ್ರವೀಣ್ ನೆಟ್ಟಾರು‌‌ ಕೊಲೆ ಖಂಡಿಸಿ, ದಾವಣಗೆರೆ ಬಿಜೆಪಿ ಜಿಲ್ಲಾ ಯುವ ಮೋರ್ಚಾ ಪದಾಧಿಕಾರಿಗಳು ಬಿಜೆಪಿ ಜಿಲ್ಲಾಧ್ಯಕ್ಷರಿಗೆ ಸಾಮೂಹಿಕ ರಾಜೀನಾಮೆ ಸಲ್ಲಿಸಿದ್ದಾರೆ. ಹಾಗೂ ಹತ್ಯೆ ಕಾರಣರಾದವರನ್ನು ಕೂಡಲೇ ಬಂಧಿಸಿ ಉಗ್ರಶಿಕ್ಷೆ ನೀಡಬೇಕೆಂದು ಆಗ್ರಹಿಸಿದ್ದಾರೆ. ಈ ಬಗ್ಗೆ ಯುವ ಮೋರ್ಚಾದ ಜಿಲ್ಲಾಧ್ಯಕ್ಷ ಆರ್. ಎಲ್. ಶಿವಪ್ರಕಾಶ್‌‌ ಅವರು, ಜಿಲ್ಲಾಧ್ಯಕ್ಷ ಹಾಗೂ ಪ್ರಧಾನ ಕಾರ್ಯದರ್ಶಿ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಈ ಹಿಂದೆ ನಡೆದಂತ ಬಿಜೆಪಿ ಕಾರ್ಯಕರ್ತರ … Read more

ಶಿವಮೊಗ್ಗ ನಗರದಲ್ಲಿ ವಿಶೇಷ ಕಾರ್ಯಾಚರಣೆ – ಮಾರಕಾಸ್ತ್ರಗಳು ಪೊಲೀಸರ ವಶ

ಪೊಲೀಸರು ಕಾರ್ಯಾಚರಣೆಯಲ್ಲಿ ವಶಕ್ಕೆ ಪಡೆದಿರುವ ಮಾರಕಾಸ್ತ್ರಗಳು.

ಪ್ರವೀಣ್ ಹತ್ಯೆ ಪ್ರಕರಣ – ದುಷ್ಕರ್ಮಿಗಳ ದಮನ ಮಾಡುವವರೆಗೂ ವಿಶ್ರಮಿಸುವುದಿಲ್ಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360 ಬೆಂಗಳೂರು, ಜು. 27 : ಸಮಾಜದಲ್ಲಿ ಹಿಂಸೆ, ಕ್ಷೋಭೆ ಉಂಟು ಮಾಡುವಂತಹ ದುಷ್ಕೃತ್ಯವನ್ನು ಎಸಗಿರುವ ದುಷ್ಕರ್ಮಿಗಳನ್ನು ದಮನ ಮಾಡುವವರೆಗೂ ವಿಶ್ರಮಿಸುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಅವರು ಇಂದು ಆರ್ ಟಿ ನಗರದ ನಿವಾಸದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿ ಮಾತನಾಡಿ, ಮಂಗಳೂರಿನಲ್ಲಿ ನಿನ್ನೆ ನಡೆದ ಪ್ರವೀಣ್ ಹತ್ಯೆ ವಿಚಾರವಾಗಿ ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ.  ಅಪರಾಧಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲು ಆದೇಶ ನೀಡಲಾಗಿದೆ. ಕೇರಳ ರಾಜ್ಯದ ಪೊಲೀಸರೊಂದಿಗೆ ನಿರಂತರ ಸಂಪರ್ಕದಲ್ಲಿರಲಾಗಿದೆ. ಮಂಗಳೂರು ಹಾಗೂ ಕಾಸರಗೋಡು … Read more

ದಾವಣಗೆರೆ ಜಿಲ್ಲಾ ಕಾಂಗ್ರೆಸ್‍ನಿಂದ ಕಾರ್ಗಿಲ್ ವಿಜಯ ದಿವಸ್ – ಕೇಂದ್ರ ಸರ್ಕಾರ ಸೈನಿಕರನ್ನು ಗೌರವದಿಂದ ಕಾಣಲಿ: ದಿನೇಶ್ ಕೆ.ಶೆಟ್ಟಿ

ಸುದ್ದಿ360, ದಾವಣಗೆರೆ ಜು.26: ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಪಕ್ಷದ ವತಿಯಿಂದ ಕಾರ್ಗಿಲ್ ವಿಜಯ ದಿವಸ್‍ನ್ನು ದಾವಣಗೆರೆ ನಗರದ ಹರಳೆಣ್ಣೆ ಕೊಟ್ರಬಸಪ್ಪ (ರಾಂ ಅಂಡ್ ಕೋ) ವೃತ್ತದಲ್ಲಿ ಮಂಗಳವಾರ ಆಚರಿಸಲಾಯಿತು. ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಹುತಾತ್ಮ ಯೋಧರಿಗೆ ಗೌರವ ಸಲ್ಲಿಸಲಾಯಿತು. ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ ಮಾತನಾಡಿ ಇಡೀ ದೇಶ ಇಂದು ಕಾರ್ಗಿಲ್ ವಿಜಯ ದಿವಸವನ್ನು ಆಚರಿಸುತ್ತಿದೆ. ದೇಶಕ್ಕಾಗಿ ಹುತಾತ್ಮರಾದ ಎಲ್ಲ ಭಾರತೀಯ ಸೈನಿಕರಿಗೂ … Read more

‘ದಿವ್ಯಪಥ ಲೋಕಹಿತ’ ಶ್ರಾವಣಮಾಸ ಪ್ರವಚನ

ಸುದ್ದಿ360, ದಾವಣಗೆರೆ ಜು.26: ಬಸವಕೇಂದ್ರ, ಶ್ರೀ ಮುರುಘರಾಜೇಂದ್ರ ವಿರಕ್ತಮಠ ಹಾಗೂ ಶಿವಯೋಗಾಶ್ರಮ ವತಿಯಿಂದ ಇದೇ ಜುಲೈ 29 ರ  ಶುಕ್ರವಾರದಿಂದ ಆಗಸ್ಟ್ 28 ರವರೆಗೆ ಅಥಣಿ ಶಿವಯೋಗಿಗಳ ಜೀವನ ದರ್ಶನ ಕುರಿತಾದ ಡಾ. ಮುರುಘಾ ಶರಣರು ರಚಿಸಿರುವ ‘ದಿವ್ಯಪಥ ಲೋಕಹಿತ’ 112 ನೇ ವರ್ಷದ ಶ್ರಾವಣ ಮಾಸ ಪ್ರವಚನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ವಿರಕ್ತಮಠ ಧರ್ಮದರ್ಶಿ ಸಮಿತಿ ಸದಸ್ಯ ಕುಂಟೋಜಿ ಚೆನ್ನಪ್ಪ ತಿಳಿಸಿದರು. ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,  ಶ್ರಾವಣ ಮಾಸದ ತಿಂಗಳಪೂರ್ತಿ ಪ್ರತಿ ದಿನ … Read more

ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರೆಯ ಕೊಲೆ – ಮೃತದೇಹ ಮೆರವಣಿಗೆ

ಸುದ್ದಿ360 ದಕ್ಷಿಣ ಕನ್ನಡ, ಜು.27: ಸುಳ್ಯ ತಾಲ್ಲೂಕಿನ ಬೆಳ್ಳಾರೆಯಲ್ಲಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಎಂಬುವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಮಂಗಳವಾರ ರಾತ್ರಿ 9 ಗಂಟೆಗೆ ಈ ಘಟನೆ ನಡೆದಿದ್ದು,  ತಲವಾರಿನೊಂದಿಗೆ  ಬೈಕ್ ನಲ್ಲಿ ಬಂದ ತಂಡ ಪ್ರವೀಣ್ ತಲೆಗೆ ತಲವಾರ್ ಬೀಸಿದೆ. ಗಂಭೀರ ಗಾಯಗೊಂಡ ಅವರನ್ನು ಆಸ್ಪತ್ರೆಗೆ ಸಾಗಿಸುವ ಸಂದರ್ಭದಲ್ಲಿ ಮೃತಪಟ್ಟಿದ್ದಾರೆ. ಬೆಳ್ಳಾರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಕ್ಷಯ ಕೋಳಿ ಅಂಗಡಿ ನಡೆಸುತ್ತಿದ್ದ ಪ್ರವೀಣ್, ಬಜರಂಗದಳ ಸೇರಿದಂತೆ ಸಂಘಪರಿವಾರದ ಹಿಂದೂ ಸಂಘಟನೆಯಲ್ಲಿ ಸಕ್ರಿಯರಾಗಿದ್ದರು. ಮೃತದೇಹ … Read more

ರಾಹುಲ್ ಬಂಧನಕ್ಕೆ ಯುವ ಕಾಂಗ್ರೆಸ್ ಖಂಡನೆ

ಸುದ್ದಿ360 ದಾವಣಗೆರೆ, ಜು.26: ದೆಹಲಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ಪೊಲೀಸರು ಬಂಧಿಸಿರುವ ಕ್ರಮದ ವಿರುದ್ಧ ನಗರದ ಜಯದೇವ ವೃತ್ತದಲ್ಲಿ ಮಂಗಳವಾರ ಸಂಜೆ ಯುವ ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ಮಾತನಾಡಿದ ಯುವ ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ಎಚ್.ಜೆ. ಮೈನುದ್ದೀನ್, ಬೆಲೆ ಏರಿಕೆ, ಇಡಿ ದುರ್ಬಳಕೆ ಖಂಡಿಸಿ ಸಂಸತ್ ಭವನದ ಎದುರು ಮೌನ ಪ್ರತಿಭಟನೆ ನಡೆಸುತ್ತಿದ್ದ ರಾಹುಲ್ ಗಾಂಧಿಯವರನ್ನು ದೆಹಲಿ ಪೊಲೀಸರು ಬಂಧಿಸುವ ಮೂಲಕ ಹೋರಾಟ ಹತ್ತಿಕ್ಕುವ ಪ್ರಯತ್ನ ಮಾಡಿದ್ದಾರೆ. ಇಂದು … Read more

ಕಾರ್ಗಿಲ್ ವಿಜಯ ದಿವಸ್ ರಾಯಲ್ ಎನ್ಫೀಲ್ಡ್ ನಲ್ಲಿ ಸಾಗಿದ ತಿರಂಗ ರ್ಯಾಲಿ – ಯೋಧರಿಗೆ ಗೌರವ ನಮನ

ಸುದ್ದಿ360 ದಾವಣಗೆರೆ, ಜು.26: ಕಾರ್ಗಿಲ್ ವಿಜಯ ದಿವಸ್ ಸಂಭ್ರಮ ನಗರದೆಲ್ಲೆಡೆ ಕಳೆಗಟ್ಟಿತ್ತು. ಸಂಭ್ರಮಾಚರಣೆ ಹಾಗೂ ವಿಜಯೋತ್ಸವಕ್ಕೆ ಕಾರಣರಾದ ಯೋಧರಿಗೆ ಗೌರವ ನಮನ ಅರ್ಪಿಸುವ ನಿಟ್ಟಿನಲ್ಲಿ ಪ್ರೇರಣಾ ಸಂಸ್ಥೆಯಿಂದ ಮಂಗಳವಾರ ಬೈಕ್ ರ್ಯಾಲಿ ಜರುಗಿತು. ನಗರದ ಹೈಸ್ಜೂಲ್ ಮೈದಾನದಲ್ಲಿ ಹೊರಡಲು ಸಿದ್ಧವಾಗಿದ್ದ ಬೈಕ್ ರ್ಯಾಲಿಗೆ  ಮಹಾನಗರ ಪಾಲಿಕೆ ಮೇಯರ್ ಜಯಮ್ಮ ಗೋಪಿನಾಯ್ಕ ಹಾಗೂ   ಮಾಜಿ ಮೇಯರ್ ಎಸ್.ಟಿ. ವೀರೇಶ್ ತ್ರಿವರ್ಣ ಧ್ವಜ ತೋರಿಸುವ ಮೂಲಕ ಚಾಲನೆ ನೀಡಿದರು. ಮಾಜಿ ಮೇಯರ್ ಎಸ್ ಟಿ. ವೀರೇಶ್ ಮಾತನಾಡಿ, ಕಳೆದ 24 … Read more

error: Content is protected !!