ನಿದ್ದೆ ಮಾಡುವ  ಸಿಂಹವನ್ನೇ ನಂಬಿಕೊಂಡ ಸಂಸ್ಕೃತಿಯವರು ವಿರೋಧ ಪಕ್ಷದವರು :ಸಿಎಂ

ಸುದ್ದಿ360 ಉಡುಪಿ, ಜು.13: ಪ್ರಧಾನಿ ನರೇಂದ್ರ ಮೋದಿ ಕ್ರಿಯಾಶೀಲವಾಗಿದ್ದಾರೆ. ಅದಕ್ಕೆ ತಕ್ಕ ಹಾಗೆ ನಮ್ಮ ದೇಶದ ಲಾಂಛನವಾಗಿರುವ ಸಿಂಹ ಸಶಕ್ತ ಹಾಗೂ ಘರ್ಜನಾ ರೂಪದಲ್ಲಿ ಇರಬೇಕು. ಆ ರೀತಿಯಲ್ಲಿ ಸಿಂಹ ಲಾಂಛನ ಇದೆ. ಆದರೆ ವಿರೋಧ ಪಕ್ಷದವರು ನಿದ್ದೆ ಮಾಡಿಕೊಂಡೇ ಇರುವ ಸಿಂಹವನ್ನು ನಂಬಿಕೊಂಡಿರುವ ಸಂಸ್ಕೃತಿಯವರು. ಇದು ಉಡುಪಿಯಲ್ಲಿ ಇಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಕಾಂಗ್ರೆಸ್ ಪಕ್ಷಕ್ಕೆ ಸಿಂಹ ಲಾಂಛನ ವಿಚಾರವಾಗಿ ನೀಡಿದ ಪ್ರತಿಕ್ರಿಯೆ. ಸಿಂಹದ ಲಾಂಛ ಉಗ್ರವಾಗಿದೆ, ವ್ಯಗ್ರವಾಗಿದೆ ಎಂಬುದು ನೋಡುವವರ ದೃಷ್ಟಿಕೋನವಾಗಿದೆ. ಕಾಂಗ್ರೆಸ್ … Read more

ಅಶೋಕ ಲಾಂಛನವನ್ನೊಮ್ಮೆ ಮ್ಯೂಸಿಯಂನಲ್ಲಿ ನೋಡಲಿ – ಆರೋಪಗಳು ಯಾರನ್ನೂ ಬಿಟ್ಟಿಲ್ಲ : ಜಗ್ಗೇಶ್

ಆರಾಧಿಸುವವರು 98% ಇದ್ರೆ, ವಿರೋಧಿಸುವವರು 2% ಏನ್ ಮಾಡೋಕಾಗುತ್ತೆ. . . ಸುದ್ದಿ360 ತುಮಕೂರು ಜು.13: ಅಶೋಕ ಲಾಂಛನದ ಮೂಲ ಇವರುಗಳು ಮ್ಯೂಸಿಯಂನಲ್ಲಿ ನೋಡಲಿ. ಸುಖಾಸುಮ್ಮನೆ ಮೋದಿ ವಿರುದ್ದ ಮಾತಾಡುತ್ತಾರೆ ಎಂದು ರಾಜ್ಯಸಭಾ ಸದಸ್ಯ ಜಗ್ಗೇಶ್ ಹೇಳಿಕೆ ನೀಡಿದ್ದಾರೆ. ತುಮಕೂರಿನಲ್ಲಿ ಸಿದ್ದಗಂಗಾ ಮಠಕ್ಕೆ ಬುಧವಾರ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ರಾಷ್ಟ್ರೀಯ ಲಾಂಛನ ತಿರುಚಿದ್ದಾರೆ ಎಂಬ ಆರೋಪ ವಿಚಾರವಾಗಿ ಅವರು, ಮ್ಯೂಸಿಯಂನಲ್ಲಿ ಇರುವ ಹಾಗೆ ಯಥಾವತ್ ಸಿಂಹ ಲಾಂಛನವನ್ನು ಸೆಂಟ್ರಲ್ ವಿಸ್ತಾದಲ್ಲಿ ಮಾಡಲಾಗಿದೆ. ಇಷ್ಟು ವರ್ಷ … Read more

ಕಾವೇರಿಯಲ್ಲಿ ಕೊಚ್ಚಿ ಹೋದ ಯುವಕ – ಶೋಧ ಕಾರ್ಯ

ಸುದ್ದಿ360, ಮಂಡ್ಯ, ಜು.13: ಶ್ರೀರಂಗಪಟ್ಟಣ ಹೊರ ವಲಯದ ಸಂಗಮದಲ್ಲಿ ಸ್ನಾನ ಮಾಡಲು ಹೋದ ಯುವಕ ನದಿ ನೀರಲ್ಲಿ ಕೊಚ್ಚಿ ಹೋಗಿರುವ ಘಟನೆ ಬುಧವಾರ ಬೆಳಗ್ಗೆ ಸಂಭವಿಸಿದೆ. ಬೆಂಗಳೂರಿನ ಯಲಹಂಕ ನಿವಾಸಿ ಅಶೋಕ್ (26) ನದಿಯಲ್ಲಿ ಕೊಚ್ಚಿಹೋದ ಯುವಕ. ಕುಟುಂಬಸ್ಥರು, ಸ್ನೇಹಿತರೊಂದಿಗೆ ಪೂಜೆಗಾಗಿ ಸಂಗಮಕ್ಕೆ ಆಗಮಿಸಿದ್ದ ವೇಳೆ ಬೆಳಿಗ್ಗೆ ನದಿಯಲ್ಲಿ ಸ್ನಾನ ಮಾಡುವಾಗ ಕಾಲು ಜಾರಿ ಬಿದ್ದಿದ್ದಾನೆ. ನದಿಯಲ್ಲಿ ನೀರಿನ ರಭಸ ಹೆಚ್ಚಿರುವ ಕಾರಣ ಯುವಕ ಕೊಚ್ಚಿಹೋಗಿದ್ದಾನೆ. ಸ್ಥಳೀಯರು ತಕ್ಷಣ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದು, 30ಕ್ಕೂ ಹೆಚ್ಚು … Read more

ಜಲಾಶಯದಿಂದ 1.3 ಲಕ್ಷ ಕ್ಯೂಸೆಕ್ ನೀರು ನದಿಗೆ – ಹಂಪಿ ಸ್ಮಾರಕಗಳು ಜಲಾವೃತ

ಸುದ್ದಿ360, ವಿಜಯನಗರ ಜು.13: ಹೊಸಪೇಟೆ ತುಂಗಭದ್ರ ಜಲಾಶಯ ಭರ್ತಿಗೊಂಡಿರುವ ಹಿನ್ನೆಲೆಯಲ್ಲಿ ಬುಧವಾರ ಬೆಳಗ್ಗೆ ಜಲಾಶಯದಿಂದ 30 ಕ್ರಸ್ಟ್ ಗೇಟ್ ಗಳ ಮೂಲಕ 103174 ಕ್ಯೂಸೆಕ್ ನೀರು ನದಿಗೆ ಹರಿಸಲಾಗಿದೆ. ಅಪಾರ ಪ್ರಮಾಣದ ನೀರು ನದಿಗೆ ಹರಿದು ಬಂದ ಪರಿಣಾಮ ಐತಿಹಾಸಿಕ ಹಂಪಿಯ ಸ್ಮಾರಕಗಳು ಜಲಾವೃತಗೊಂಡಿವೆ. ನದಿ ಪಾತ್ರದಲ್ಲಿರುವ ವಿಶ್ವವಿಖ್ಯಾತ ಹಂಪಿಯ ವಿಜಯನಗರ ಕಾಲದ ಸೇತುವೆ, ಪುರಂದರ ಮಂಟಪ, ರಾಮಲಕ್ಷ್ಮಣ ದೇವಸ್ಥಾನ, ಚಕ್ರತೀರ್ಥ ಸ್ನಾನಘಟ್ಟ ಜಲಾವೃತಗೊಂಡಿದ್ದು, ಪ್ರವಾಸಿಗರು ಅತ್ತ ಹೋಗದಂತೆ ಸೂಕ್ತ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಜಲಾಶಯದಿಂದ ಸಧ್ಯ … Read more

ಜು. 15, 16 ಅಕ್ಕಿಗಿರಣಿ, ಆಹಾರ ಧಾನ್ಯಗಳ ಸಗಟು ವ್ಯಾಪರ ಬಂದ್

ಆಹಾರ ಧಾನ್ಯಗಳ ಮೇಲಿನ ಜಿ ಎಸ್ ಟಿಗೆ ವಿರೋಧ ಸುದ್ದಿ360, ದಾವಣಗೆರೆ, ಜು.13: ಸಾರ್ವಜನಿಕರ ದಿನನಿತ್ಯದ ಅತ್ಯಾವಶ್ಯಕ ಆಹಾರ ಧಾನ್ಯಗಳ ಮೇಲೆ ಜಿಎಸ್ ಟಿ ವಿಧಿಸಿರುವುದನ್ನು ಖಂಡಿಸಿ, ಅಕ್ಕಿ ಗಿರಣಿದಾರರ ಸಂಘ ಜು.15 ಮತ್ತು 16ರಂದು ಜಿಲ್ಲೆಯಾದ್ಯಂತ ಅಕ್ಕಿ ಗಿರಣಿಗಳ ಬಂದ್ ಮತ್ತು ಆಹಾರ ಧಾನ್ಯಗಳ ಮಾರಾಟ ವಹಿವಾಟನ್ನು ನಿಲ್ಲಿಸುವುದಾಗಿ ಜಿಲ್ಲಾ ಅಕ್ಕಿಗಿರಣಿದಾರರ ಸಂಘದ ಕಾರ್ಯದರ್ಶಿ ಕೋಗುಂಡಿ ಬಕ್ಕೇಶಪ್ಪ ತಿಳಿಸಿದರು. ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿ, ಜಿಎಸ್ ಟಿ ಮಂಡಳಿ ಅಹಾರ ಧಾನ್ಯಗಳ … Read more

ಸ್ವರಾಜ್ಯಕ್ಕೆ ಮುಕ್ಕಾಲು ನೂರು ಸಂಭ್ರಮಕ್ಕೆ ಕನ್ನಡ ತೇರು

ಜು.14ರಿಂದ 17ರವರೆಗೆ ದಾವಣಗೆರೆ ಜಿಲ್ಲಾ ಸಂಚಾರ ಸುದ್ದಿ360, ದಾವಣಗೆರೆ, ಜು.13: ಭಾರತದ 75ನೇ ಸ್ವಾತಂತ್ರ‍್ಯೋತ್ಸವದ ಅಮೃತ ಮಹೋತ್ಸವ ನಿಮಿತ್ತ ಯುವಾ ಬ್ರಿಗೇಡ್ ವತಿಯಿಂದ ಸ್ವರಾಜ್ಯಕ್ಕೆ ಮುಕ್ಕಾಲು ನೂರು ಸಂಭ್ರಮಕ್ಕೆ ಕನ್ನಡ ತೇರು ಹೆಸರಿನ ತೇರು ದಾವಣಗೆರೆ ಜಿಲ್ಲೆಯಲ್ಲಿ ಜುಲೈ 14ರಂದು ದಾವಣಗೆರೆ ಜಿಲ್ಲೆ ಪ್ರವೇಶಿಸಿ 17ರವರೆಗೆ ಸಂಚರಿಸಲಿದೆ ಎಂದು ಯುವಾ ಬ್ರಿಗೇಡ್ ನ ಜಿಲ್ಲಾ ಸಂಚಾಲಕ ಕೆ.ಎಸ್. ಗಜೇಂದ್ರ ತಿಳಿಸಿದರು. ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಜೂನ್ 27ರಂದು ಬೀಳಗಿಯಿಂದ ಸಂಚಾರ ಆರಂಭಿಸಿರುವ ತೇರು 100 … Read more

ಕನಿಷ್ಠ ವೇತನ ನಿಗದಿಗೆ ಗ್ರಾಮ ಪಂಚಾಯಿತಿ ನೌಕರರ ಒತ್ತಾಯ

ದಾವಣಗೆರೆ ಜಿಲ್ಲಾ ಕಾರ್ಮಿಕ ಇಲಾಖೆ ಕಚೇರಿ ಎದುರು ಪ್ರತಿಭಟನೆ ಸುದ್ದಿ360, ದಾವಣಗೆರೆ, ಜು.13:  ಗ್ರಾಮ ಪಂಚಾಯಿತಿ ನೌಕರರಿಗೆ ಕನಿಷ್ಠ ವೇತನ ನಿಗದಿ ಮತ್ತು ಬಾಕಿ ವೇತನಕ್ಕೆ ಒತ್ತಾಯಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರ ಸಂಘ (ಸಿಐಟಿಯು ಸಂಯೋಜಿತ) ವತಿಯಿಂದ ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು. ನಗರದ ಪಿಬಿ ರಸ್ತೆಯ ಸಂಗೊಳ್ಳಿ ರಾಯಣ್ಣ ವೃತ್ತದ ಬಳಿ ಇರುವ ಕಾರ್ಮಿಕ ಇಲಾಖೆ ಕಚೇರಿ ಎದುರು ಪ್ರತಿಭಟನೆ ನಡೆಸಿದ  ಗ್ರಾಮ ಪಂಚಾಯಿತಿ ನೌಕರರು ತಮ್ಮ ಬೇಡಿಕೆಗಳನ್ನು ಈಡೇರಿಕಗೆ ಒತ್ತಾಯಿಸಿ, ಕಾರ್ಮಿಕ … Read more

2023ರಲ್ಲಿ 135 ಕ್ಕೂ ಹೆಚ್ಚು ಸ್ಥಾನ ಗೆದ್ದು ಕಾಂಗ್ರೆಸ್ ಅಧಿಕಾರಕ್ಕೆ

ದಾವಣಗೆರೆಯಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ ಸುದ್ದಿ360 ದಾವಣಗೆರೆ, ಜು.12:  2023ರಲ್ಲಿ ನೂರಕ್ಕೆ  ನೂರರಷ್ಟು ಕಾಂಗ್ರೆಸ್ ಸರ್ಕಾರ ಬರುತ್ತದೆ. 135 ಕ್ಕೂ ಹೆಚ್ಚು ಸ್ಥಾನಗಳನ್ನ ಕಾಂಗ್ರೆಸ್ ಗೆಲ್ಲುತ್ತದೆ. ಈಗ ಚುನಾವಣೆ ಮಾಡಿದರೂ ನಾವು ಚುನಾವಣೆಗೆ ಸಿದ್ಧರಿದ್ದೇವೆ ಎಂದು ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ ಹೇಳಿದರು. ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿಯ ನಾಯಕರಿಗೆ ಈಗಾಗಲೇ ಭಯ ಶುರುವಾಗಿದೆ. ವಿಶೇಷವಾಗಿ ಸಚಿವ ಸ್ಥಾನ ಕಳೆದುಕೊಂಡಿರುವ ಕೆಎಸ್ ಈಶ್ವರಪ್ಪ ಅವರಿಗೆ ಭಯ ಶುರುವಾಗಿದೆ‌. ಇದೇ ಕಾರಣಕ್ಕೆ ಅವರು ಅಮೃತ ಮಹೋತ್ಸವದ ಬಗ್ಗೆ … Read more

ದ್ರೋಣ ಎಜು ಇ ಲರ್ನಿಂಗ್ ನಿಂದ ವಿದ್ಯಾರ್ಥಿಗಳಿಗೆ ಇ-ತರಗತಿ

ಸುದ್ದಿ360 ದಾವಣಗೆರೆ, ಜು.12: ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಮತ್ತು ಶಿಕ್ಷಣ ಕ್ಷೇತ್ರದ ಆಧುನಿಕ ಸೌಲಭ್ಯಗಳನ್ನು ಪ್ರತಿಯೊಬ್ಬ ವಿದ್ಯಾರ್ಥಿಗೂ ತಲುಪಿಸುವ ಆಶಯದಿಂದ ದ್ರೋಣ ಎಜುಕೇಷನ್ ಅಪ್ಲಿಕೇಷನ್ ಸಿದ್ಧಪಡಿಸಲಾಗಿದೆ ಎಂದು ಜಾವ ಟೆಕ್ ಬಿಸಿನೆಸ್ ಸಲ್ಯೂಷನ್ಸ್ ಸಂಸ್ಥೆಯ ರಾಜ್ಯ ಮುಖ್ಯಸ್ಥ ಸಂಜೀವ್ ತಿಳಿಸಿದರು. ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಆಧುನಿಕ ತಂತ್ರಜ್ಞಾನದಿಂದ ಶಿಕ್ಷಣ ಕ್ಷೇತ್ರದಲ್ಲಿ ಮಹತ್ತರ ಬದಲಾವಣೆ ಆಗುತ್ತಿದ್ದು, ವಿದ್ಯಾರ್ಥಿಗಳಿಗೆ ಪಠ್ಯ ಹಾಗೂ ಶೈಕ್ಷಣಿಕ ಅಧ್ಯಯನಕ್ಕೆ ಪೂರಕ ಆಗಿರುವ ಪುಸ್ತಕಗಳು ಆನ್‌ ಲೈನ್‌ ಮೂಲಕವೇ ಸಿಗುತ್ತಿದೆ. ವಿದ್ಯಾರ್ಥಿಗಳಿಗೆ ಅನುಕೂಲಕ್ಕಾಗಿ ದೃಶ್ಯ … Read more

ಕೇಕ್ ಮತ್ತು ಅನ್ನಸಂತರ್ಪಣೆಯೊಂದಿಗೆ ಶಿವರಾಜ್ ಕುಮಾರ್ ಹುಟ್ಟುಹಬ್ಬ ಆಚರಣೆ

ಸುದ್ದಿ360 ದಾವಣಗೆರೆ, ಜು.12:  ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಬಡವರು, ವಿದ್ಯಾರ್ಥಿಗಳಿಗೆ ಸಹಾಯ ಮಾಡುವ ಸೃಜನಶೀಲ ಗುಣ ಉಳ್ಳವರಾಗಿದ್ದು ಅವರ ಮಾರ್ಗದರ್ಶನದಲ್ಲಿ ನಾವೆಲ್ಲರೂ ಮುಂದುವರೆಯೋಣ ಎಂದು ದಿನೇಶ್ ಕೆ.ಶೆಟ್ಟಿ ಹೇಳಿದರು. ನಗರದ ಜಯದೇವ ವೃತ್ತದಲ್ಲಿ ಮಂಗಳವಾರ ಅಖಿಲ ಕರ್ನಾಟಕ ಡಾ. ರಾಜ್ ಕುಮಾರ್ ಅಭಿಮಾನಿ ಸಂಘಗಳ ಒಕ್ಕೂಟ, ಅಖಿಲ ಕರ್ನಾಟಕ ಡಾ. ಶಿವರಾಜ್ ಕುಮಾರ್ ಅಭಿಮಾನಿ ಸಂಘ ಮತ್ತು ಅಖಿಲ ಕರ್ನಾಟಕ ಪುನೀತ್ ರಾಜ್ ಕುಮಾರ್ ಅಭಿಮಾನಿ ಸಂಘಗಳ ವತಿಯಿಂದ ಆಯೋಜಿಸಿದ್ದನಟ ಶಿವರಾಜ್ ಕುಮಾರ್ ರವರ 60ನೇ … Read more

error: Content is protected !!