ನಿಗಮ ಮಂಡಳಿ: ಹೊಸಬರಿಗೆ ಅವಕಾಶ

ಸುದ್ದಿ360 ಮೈಸೂರು, ಜು.12: ನಿಗಮ ಮಂಡಳಿಗಳಿಗೆ ಹೊಸಬರಿಗೆ ಅವಕಾಶ ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ನಿಗಮ ಮಂಡಳಿಗಳ ಕೋರ್ ಕಮಿಟಿಯಲ್ಲಿ  ಒಂದೂವರೆ ವರ್ಷ ಮೇಲ್ಪಟ್ಟವರನ್ನು ತೆಗೆದು ಹೊಸಬರಿಗೆ ಅವಕಾಶ ನೀಡಬೇಕು ಎನ್ನುವ ತೀರ್ಮಾನ ಆರು ತಿಂಗಳ ಹಿಂದೆಯೇ ಆಗಿದೆ. ಈ ನಿಟ್ಟಿನಲ್ಲಿ ಬೇರೆಯವರಿಗೂ ಅವಕಾಶ ಒದಗಿಸುವ ಕಾರ್ಯ ನಡೆಯುತ್ತಿದೆ ಎಂದಿದ್ದಾರೆ.

ರೈತರ ಬೇಡಿಕೆಗೆ ಮುಖ್ಯಮಂತ್ರಿಯಿಂದ ಸಕಾರಾತ್ಮಕ ಸ್ಪಂದನೆಯ ಭರವಸೆ

ಸುದ್ದಿ360, ದಾವಣಗೆರೆ, ಜು.12: ಕರ್ನಾಟಕ ರಾಜ್ಯ ರೈತ ಸಂಘದವರ ನಿಯೋಗ ಸೋಮವಾರ‌ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ತಮ್ಮ ಪ್ರತಿಭಟನೆಯನ್ನು ಹಿಂದಕ್ಕೆ ಪಡೆಯುವ ನಿರ್ಧಾರ ಪ್ರಕಟಿಸಿದರು. ರೈತರ ಬೇಡಿಕೆಗಳನ್ನು ಈಡೇರಿಸುವ ಸಂಬಂಧ ಸಕಾರಾತ್ಮಕವಾಗಿ ನಿರ್ಧಾರ ಕೈಗೊಳ್ಳುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಸಚಿವರಾದ ನಾರಾಯಣಗೌಡ, ಶಾಸಕ ಸಿ ಪಿ ಯೋಗೇಶ್ವರ  ಸೇರಿದಂತೆ ಇತರರು ಉಪಸ್ಥಿತರಿದ್ದರು.

ದಾವಣಗೆರೆ ವಿ ವಿ ಕುಲಪತಿಯಾಗಿ ಪ್ರೊ.ಬಿ.ಡಿ. ಕುಂಬಾರ ನೇಮಕ

ಸುದ್ದಿ360, ದಾವಣಗೆರೆ, ಜು.12: ಕರ್ನಾಟಕ ವಿಶ್ವವಿದ್ಯಾಲಯದ ಗ್ರಂಥಾಲಯ ಮತ್ತು ಮಾಹಿತಿ ತಂತ್ರಜ್ಞಾನ ವಿಭಾಗದ ನಿವೃತ್ತ ಪ್ರಾಧ್ಯಾಪಕ ಪ್ರೊ.ಬಿ.ಡಿ.ಕುಂಬಾರ ಅವರು ದಾವಣಗೆರೆ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ನೇಮಕವಾಗಿದ್ದಾರೆ. ಕುಲಪತಿಯಾಗಿದ್ದ ಪ್ರೊ. ಶರಣಪ್ಪ ವಿ.ಹಲಸೆ ಅವರು ಮಾರ್ಚ್ 26ರಂದು ನಿವೃತ್ತಿಯಾಗಿದ್ದರು. ಪ್ರೊ.ಪಿ.ಲಕ್ಷ್ಮಣ ಅವರು ಹಂಗಾಮಿ ಕುಲಪತಿಯಾಗಿದ್ದರು. ಪ್ರೊ. ಕುಂಬಾರ ಅವರು ಸೋಮವಾರ ವಿಶ್ವವಿದ್ಯಾನಿಲಯದ ನಾಲ್ಕನೇ ಕುಲಪತಿಯಾಗಿ ಅಧಿಕಾರ ವಹಿಸಿಕೊಂಡರು.

ಹಂದಿ ಹಾವಳಿ ತಡೆಗೆ ರೈತರ ಆಗ್ರಹ

ಸುದ್ದಿ360, ದಾವಣಗೆರೆ, ಜು.12: ನಗರದ ಹೊರವಲಯದ ಗ್ರಾಮಗಳಲ್ಲಿ ಭತ್ತದ ಸಸಿ ಮಡಿ ಮತ್ತಿತರ ಬೆಳೆಗಳ ಮೇಲೆ ಹಂದಿಗಳು ದಾಳಿ ಮಾಡಿ ಹಾನಿ ಮಾಡುತ್ತಿರುವುದನ್ನು ತಡೆಯುವಂತೆ ಆಗ್ರಹಿಸಿ ಅಖಿಲ ಭಾರತ ಹಿಸಾನ್ ಸಭಾ ಜಿಲ್ಲಾ ಸಮಿತಿ ನೇತೃತ್ವದಲ್ಲಿ ರೈತರು ಸೋಮವಾರ ಪ್ರತಿಭಟನೆ ನಡೆಸಿದರು. ನಗರದ ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಿದ ರೈತರು, ದೊಡ್ಡ ಬೂದಿಹಾಳ್, ಚಿಕ್ಕ ಬೂದಿಹಾಳ್ ಹಾಗೂ ಯರಗುಂಟೆ ಗ್ರಾಮಗಳಲ್ಲಿ ರೈತರ ವಿವಿಧ ಬೆಳೆಗಳ ಮೇಲೆ ದಾಳಿ ಮಾಡುತ್ತಿರುವ ಹಂದಿಗಳ ಕಾಟ ತಡೆಯುವಂತೆ ಆಗ್ರಹಿಸಿದರು. ಈ … Read more

ಶರಣ ಸಂಸ್ಕೃತಿ ಉತ್ಸವದಲ್ಲಿ ಪಾಲ್ಗೊಳ್ಳಿ: ಬಸವಪ್ರಭುಶ್ರೀ

ಸುದ್ದಿ360, ದಾವಣಗೆರೆ ಜು.11: ಮಾನವ ಬದುಕಿನಲ್ಲಿ ಸತ್ ಚಿಂತನೆ ಬೇಕು , ಸತ್ ಚಿಂತನೆ ಇಲ್ಲದೇ ಹೋದರೆ ಬದುಕು ದುಷ್ಕೃತ್ಯದ ಗೂಡು ಆಗುತ್ತದೆ ಎಂದು ಬಸವಪ್ರಭು ಸ್ವಾಮೀಜಿ ಹೇಳಿದರು. ನಗರದ ಶ್ರೀ ಶಿವಯೋಗಾಶ್ರಮದಲ್ಲಿ ಸೋಮವಾರ ಶ್ರೀ ಜಯದೇವ ಮುರುಘರಾಜೇಂದ್ರ ಮಹಾಸ್ವಾಮಿಗಳವರ 65 ನೇ ಸ್ಮರಣೋತ್ಸವ, ಶರಣ ಸಂಸ್ಕೃತಿ ಉತ್ಸವದ ನಿಮಿತ್ತ ಜರುಗಿದ ವಿಶೇಷ ಪ್ರವಚನ ಮಾಲೆಯ ಸಾನಿಧ್ಯ ವಹಿಸಿ ಅವರಯ ಆಶೀರ್ವಚನ ನೀಡಿದರು. ಶರಣ ಸಂಸ್ಕೃತಿ ಉತ್ಸವದಲ್ಲಿ ಪಾಲ್ಗೊಳ್ಳಿ ಪ್ರತಿಯೊಬ್ಬ ವ್ಯಕ್ತಿಯಲ್ಲಿ ದುಷ್ಟ ವಿಚಾರಗಳು ಬಂದೇ ಬರುತ್ತವೆ. … Read more

ವಿಶೇಷ ಪ್ರವಚನಮಾಲೆ ಸಮಾರೋಪ

ಸುದ್ದಿ360, ದಾವಣಗೆರೆ ಜು.11: ಶ್ರೀ ಜಯದೇವ ಮುರುಘರಾಜೇಂದ್ರ ಮಹಾಸ್ವಾಮಿಗಳವರ 65 ನೇ ಸ್ಮರಣೋತ್ಸವ, ಶರಣ ಸಂಸ್ಕೃತಿ ಉತ್ಸವದ ನಿಮಿತ್ತ ಜರುಗಿದ ವಿಶೇಷ ಪ್ರವಚನ ಮಾಲೆಯಲ್ಲಿ ಸೋಮವಾರ ಜನವಾಡ ಅಲ್ಲಮಪ್ರಭು ಆಶ್ರಮದ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಪ್ರವಚನ ನೀಡಿದರು. ಮಲ್ಲಿಕಾರ್ಜುನ ಸ್ವಾಮೀಜಿ ಮಾತನಾಡುತ್ತಾ ಮಾನವನ ಮನಸ್ಸು ಅದ್ಬುತವಾದ ಶಕ್ತಿ. ನಮ್ಮ ಮನಸ್ಸನ್ನು ಗೆದ್ದರೆ ಜಗತ್ತನ್ನು ಗೆದ್ದಂತೆ.  ಮನಸ್ಸಿನ ಗುಣ ಚಂಚಲ. ಮಂಗನಂತೆ ಜಿಗಿಯುವ ಸ್ವಭಾವವಿದೆ. ಅದನ್ನು ಧ್ಯಾನ , ಶಿವಯೋಗದಿಂದ ಪಳಗಿಸಿದಾಗ ನಮ್ಮ ಕೈವಶವಾಗುತ್ತದೆ ಎಂದು ಹೇಳಿದರು.

ಧರ್ಮಸಂಸತ್ ಆಶಯದಂತೆ ಪಂಚ ಪೀಠಗಳು ಒಂದಾಗಲಿವೆ : ಕೇದಾರ ಶ್ರೀ

ಎಸ್.ಎಸ್. ಮಲ್ಲಿಕಾರ್ಜುನ್ ನಿವಾಸದಲ್ಲಿಇಷ್ಟಲಿಂಗ ಮಹಾಪೂಜೆ ನೆರವೇರಿಸಿದ ಶ್ರೀಗಳು ಸುದ್ದಿ360, ದಾವಣಗೆರೆ ಜು.11: ಸಿದ್ಧಾಂತ ಶಿಖಾಮಣಿಯಲ್ಲಿ ಹೇಳಿದಂತೆ ಧರ್ಮಸಂಸತ್ ಎಂಬ ಸಂವಿಧಾನವಿದ್ದು, ಅದರ ಆಶಯದಂತೆ ಪಂಚ ಪೀಠಗಳು ಒಂದಾಗಲಿವೆ ಎಂದು ಕೇದಾರ ಪೀಠದ ಶ್ರೀಭೀಮಾಶಂಕರಲಿಂಗ ಜಗದ್ಗುರು ತಿಳಿಸಿದರು. ನಗರದ ಎಂಸಿಸಿ ಬಿ ಬ್ಲಾಕ್‌ನಲ್ಲಿರುವ ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ನಿವಾಸದಲ್ಲಿ ಸೋಮವಾರ ಶಾಸಕ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಕುಟುಂಬದ ಕೋರಿಕೆ ಮೇರೆಗೆ ಇಷ್ಟಲಿಂಗ ಮಹಾಪೂಜೆ ನೆರವೇರಿಸಿದ ನಂತರ ಆಶೀರ್ವಚನ ನೀಡಿದರು. ಪಂಚ … Read more

ದಾವಣಗೆರೆ ನೂತನ ಜಿಲ್ಲಾಧಿಕಾರಿಯಾಗಿ ಶಿವಾನಂದ ಕಾಪಶಿ

ಸುದ್ದಿ360, ದಾವಣಗೆರೆ ಜು.11: ದಾವಣಗೆರೆ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಶಿವಾನಂದ ಕಾಪಶಿ ಅವರನ್ನು ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಈ ತಕ್ಷಣದಿಂದಲೇ ಆದೇಶ ಜಾರಿಗೆ ಬರುವಂತೆ ದಾವಣಗೆರೆ ಜಿಲ್ಲಾಧಿಕಾರಿಯನ್ನಾಗಿ ಸರ್ಕಾರ ನೇಮಿಸಿದೆ. ಶಿವಾನಂದ ಕಾಪಶಿ ಅವರು ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತದ‌ ವ್ಯವಸ್ಥಾಪಕ ನಿರ್ದೇಶಕರಾಗಿ ಬೆಂಗಳೂರಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ದಾವಣಗೆರೆ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದ ಮಹಾಂತೇಶ್ ಬೀಳಗಿ ಅವರಿಗೆ ವರ್ಗಾವಣೆ ಆಗಿದ್ದು ಈವರೆಗೂ ಯಾವುದೇ ಸ್ಥಳ ತೋರಿಸಿಲ್ಲ. ಕರ್ನಾಟಕ ರಾಜ್ಯಪಾಲರ ಆದೇಶದ … Read more

ಮೀಸಲಾತಿ: ಜಿಲ್ಲಾಡಳಿತ ಕಚೇರಿ ಮುತ್ತಿಗೆಗೆ ಮುಂದಾದ ಎಸ್ಸಿ-ಎಸ್ಟಿ ಸಂಘಟನೆಗಳು

ಅರ್ಧಗಂಟೆಗೂ ಹೆಚ್ಚು ಕಾಲ ಜಿಲ್ಲಾಡಳಿತ ಭವನ ಮುಖ್ಯ ದ್ವಾರದ ಎದುರು ಪಿಬಿ ರಸ್ತೆ ತಡೆ ಸುದ್ದಿ360, ದಾವಣಗೆರೆ ಜು.11: ಕರ್ನಾಟಕ ಸ್ವಾಭಿಮಾನಿ ಎಸ್ಸಿ-ಎಸ್ಟಿ ಸಂಘಟನೆಗಳ ಒಕ್ಕೂಟ ಮತ್ತು ಮೀಸಲಾತಿ ಹೆಚ್ಚಳ ಹೋರಾಟ ಕ್ರಿಯಾ ಸಮಿತಿ ಸದಸ್ಯರು, ನ್ಯಾ. ನಾಗಮೋಹನ್ ದಾಸ್ ಆಯೋಗದ ವರದಿ ಜಾರಿಗೆ ಆಗ್ರಹಿಸಿದ ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ ಹಾಕಲು ಮುಂದಾದ ಘಟನೆ ಸೋಮವಾರ ನಗರದಲ್ಲಿ ಜರುಗಿತು. ಮುನ್ನೆಚ್ಚರಿಕೆ ಕ್ರಮವಾಗಿ ಪಿಬಿ ರಸ್ತೆಗೆ ಹೊಂದಿಕೊಂಡಿರುವ ಜಿಲ್ಲಾಡಳಿತ ಭವನದ ಮುಖ್ಯದ್ವಾರದ ಕಮಾನು ಬಳಿಯೇ ಪೊಲೀಸರು ಬ್ಯಾರಿಕೇಡ್ … Read more

ಪಿಂಚಣಿಗಾಗಿ ಹಿರಿಯ ಜೀವಗಳ ಪರದಾಟ – ಇದೇನು ಅಧಿಕಾರಿಗಳ ಜಾಣ ಕಿವುಡೇ ?

ಸುದ್ದಿ360, ದಾವಣಗೆರೆ ಜು.11: ಇದೇನು ನಮ್ಮ ಹಿರಿಯ ನಾಗರೀಕರು ಹೀಗೆ ತಮ್ಮ ಜೋಡು ಬಿಟ್ಟು ಸರತಿ ಸಾಲಿನಲ್ಲಿ ಕೂತಿದ್ದಾರೆ ಎಂದು ಆಶ್ಚರ್ಯ ಪಡುತ್ತಿದ್ದೀರಾ… ಇದು ದಾವಣಗೆರೆ  ನಗರದ ಗಡಿಯಾರ ಕಂಬದ ಬಳಿ ಇರುವ ಮುಖ್ಯ ಅಂಚೆ ಕಚೇರಿಯ ಮುಂಭಾಗ ಸೋಮವಾರ ಕಂಡು ಬಂದ ದೃಶ್ಯ. ಹೌದು ಸ್ವಾಮಿ ಇವರೆಲ್ಲಾ ಸಾಮಾಜಿಕ ಭದ್ರತಾ ಯೋಜನೆಯಡಿ ಪ್ರತಿ ತಿಂಗಳು ನೀಡುವ ಪಿಂಚಣಿ ಪಡೆಯಲು ಹೀಗೆ ಬೆಳಗ್ಗೆ 5 ಗಂಟೆಯಿಂದಲೇ ಕಚೇರಿ ಬಳಿ ಸಾಲು ಸಾಲಾಗಿ ನಿಂತು ಕೊನೆಗೆ ನಿಲಲು ಆಗದೆ … Read more

error: Content is protected !!