ಸಚಿವ ಸಂಪುಟ ವಿಸ್ತರಣೆ ? ನಾನು ಹೇಳುವವರೆಗೆ ಏನೂ ಇಲ್ಲ . . .

shimoga-riots-were-the-result-of-the-governments-appeasement-policy-basavaraj-bommai

ಸುದ್ದಿ 360 ನವದೆಹಲಿ, ಜೂನ್ 23: ನಾನು ಪ್ರತಿ ಬಾರಿ ದೆಹಲಿಗೆ ಭೇಟಿ ನೀಡುವ ಸಂದರ್ಭದಲ್ಲಿ ಸಚಿವ ಸಂಪುಟ ಕುರಿತಾದ ಸುದ್ಧಿಗಳು ಮಾಧ್ಯಮಗಳಲ್ಲಿ ಬಂದಿರುತ್ತದೆ. ಸಚಿವ ಸಂಪುಟ ವಿಸ್ತರಣೆ ಬಗ್ಗೆ ನಾನಾಗಿ ಅಧಿಕೃತವಾಗಿ ಹೇಳುವವರೆಗೆ ಏನೂ ಇರುವುದಿಲ್ಲ. ಪಕ್ಷದ ವರಿಷ್ಠರನ್ನು ಭೇಟಿಯಾಗಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು ರಾಷ್ಟ್ರಪತಿ ಚುನಾವಣೆ ಪ್ರಯುಕ್ತ ವರಿಷ್ಠರ ಸೂಚನೆ ಮೇರೆಗೆ ನವದೆಹಲಿ ತಲುಪಿರುವ ಅವರು, ಸಚಿವ ಸಂಪುಟ ಕುರಿತಾದ ಮಾದ್ಯಮದವರ ಪ್ರಶ್ನೆಗೆ ಈ ರೀತಿ ಪ್ರತಿಕ್ರಿಯಿಸಿದ್ದಾರೆ.

ವರಿಷ್ಠರ ಸೂಚನೆ ಮೇರೆಗೆ ದೆಹಲಿ ಪ್ರವಾಸ : ಸಿಎಂ ಬಸವರಾಜ ಬೊಮ್ಮಾಯಿ

ಸುದ್ದಿ 360 ನವದೆಹಲಿ, ಜೂನ್ 23: ಭಾರತದ ರಾಷ್ಟ್ರಪತಿ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಅಧಿಕಾರದಲ್ಲಿರುವ ಎಲ್ಲಾ ಮುಖ್ಯಮಂತ್ರಿಗಳು ಹಾಜರಿದ್ದು ನಾಮಪಾತ್ರಕ್ಕೆ ಸೂಚಕರಾಗಿ ಸಹಿಹಾಕಲು ಹಾಗೂ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಎಲ್ಲರೂ ಹಾಜರಿರಬೇಕೆಂದು ವರಿಷ್ಠರ ಸೂಚನೆ ಮೇರೆಗೆ ದೆಹಲಿಗೆ ಬಂದಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಕರ್ನಾಟಕ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಜೂ.25 ಶಿವಮೊಗ್ಗದಲ್ಲಿ ಪೆಂಕಾಕ್ ಸಿಲಾತ್ (ಸಮರ ಕಲೆ) ಕ್ರೀಡಾಕೂಟ

ಸುದ್ದಿ360 ಶಿವಮೊಗ್ಗ ಜೂ.23:  ನಗರದಲ್ಲಿ ಪ್ರಪ್ರಥಮ ಬಾರಿಗೆ ನಗರದಲ್ಲಿ ದಕ್ಷಿಣ ರಾಜ್ಯಗಳ ಪೆಂಕಾಕ್ ಸಿಲಾತ್ (ಸಮರ ಕಲೆ)ಯ ಕ್ರೀಡಾಕೂಟವನ್ನು ಏರ್ಪಡಿಸಲಾಗಿದ್ದು, ಇಲ್ಲಿನ ನೆಹರೂ ಒಳಾಂಗಣ ಕ್ರೀಡಾಂಗಣದಲ್ಲಿ ಜೂನ್ 25 ಮತ್ತು 26 ರಂದು ನಡೆಯಲಿದೆ ಎಂದು ರಾಜ್ಯ ಪೆಂಕಾಕ್ ಸಿಲಾತ್ ಸಂಸ್ಥೆಯ ಜಿಲ್ಲಾ ಅಧ್ಯಕ್ಷ ಚಂದ್ರಕಾಂತ್ ಜಿ. ಭಟ್ಟ ತಿಳಿಸಿದ್ದಾರೆ. ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ವಿಶ್ವದ ಬಹುತೇಕ ರಾಷ್ಟ್ರಗಳಲ್ಲಿ ಪ್ರಸಿದ್ಧಿ ಹೊಂದಿರುವ ಈ ಕಲೆಯು  ಅಂತರರಾಷ್ಟ್ರೀಯ ಕ್ರೀಡಾಕೂಟದಲ್ಲಿ ಸೇರ್ಪಡೆಗೊಂಡಿದೆ. ಶಿವಮೊಗ್ಗದಲ್ಲಿ … Read more

ವ್ಯಕ್ತಿಯ ಕಂಠದಲ್ಲಿ ಕೃಷ್ಣ- ಕೆಎಲ್‍ಇ ವೈದ್ಯರಿಂದ ಯಶಸ್ವಿ ಶಸ್ತ್ರಚಿಕಿತ್ಸೆ

ಸುದ್ದಿ360 ಬೆಳಗಾವಿ ಜೂ.23:  ತ್ರೇತಾಯುಗದಲ್ಲಿ ಹನುಮ ತನ್ನ ಎದೆ ಬಗೆದು ರಾಮನನ್ನು ತೋರಿಸಿದ್ದ ಎಂಬುದನ್ನು ಕೇಳಿದ್ದೇವೆ. ಆದರೆ ಇಲ್ಲೊಬ್ಬ ಭಕ್ತನ ಕಂಠದಲ್ಲಿ ಶ್ರೀಕೃಷ್ಣ ಕಂಡಿದ್ದಾನೆ. ಆತನ ಕಂಠದಿಂದ ಕೃಷ್ಣನನ್ನು ಹೊರತೆಗೆಯುವಲ್ಲಿ  ವೈದ್ಯರು ಯಶಸ್ವಿಯಾಗಿದ್ದಾರೆ. ಆಶ್ಚರ್ಯವಾಗುತ್ತಿದೆಯಾ. . .  48 ವರ್ಷದ ವ್ಯಕ್ತಿಯೊಬ್ಬ ದೇವರ ತೀರ್ಥ ಸೇವನೆ ಮಾಡುವ ಅಭ್ಯಾಸ ಹೊಂದಿದ್ದ. ಎಂದಿನಂತೆ ತೀರ್ಥ ಸೇವನೆ  ಮಾಡುವಾಗ ಗಮನಿಸದೇ ಲೋಹದ ಕೃಷ್ಣನನ್ನು ನುಂಗಿದ್ದಾನೆ. ಇದರಿಂದ ಆತನಿಗೆ ಗಂಟಲು ನೋವು ಮತ್ತು ಗಂಟಲು ಊತ ಉಂಟಾಗಿ ಸ್ಥಳಿಯ ವೈದ್ಯರನ್ನು ಚಿಕಿತ್ಸೆಗಾಗಿ … Read more

ಕೆ.ಆರ್.ಪೇಟೆಯಲ್ಲಿ ಭೂಕಂಪ –ಆತಂಕಗೊಂಡ ಜನ

ಸುದ್ದಿ360 ಮಂಡ್ಯ ಜೂ.23:  ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಕಿಕ್ಕೇರಿ ಹೋಬಳಿಯ ಐಕನಹಳ್ಳಿ, ಮಾದಾಪುರ, ಚಿನ್ನೇನಹಳ್ಳಿ, ಗೊಂದಿಹಳ್ಳಿ, ಬಿದರಹಳ್ಳಿ, ಗೂಡೇಹೊಸಹಳ್ಳಿ ಗ್ರಾಮದ ಭಾಗಗಳಲ್ಲಿ ಇಂದು ಮುಂಜಾನೆ ಭೂಮಿ ಕಂಪಿಸಿದ ಅನುಭವವಾಗಿದ್ದು, ಸಾರ್ವಜನಿರು ಭಯಭೀತಗೊಂಡಿದ್ದು, ಆತಂಕಕ್ಕೊಳಗಾಗಿದ್ದಾರೆ. ಪಕ್ಕದ ಹಾಸನ, ಹೊಳೆನರಸೀಪುರ, ಅರಕಲಗೂಡು ತಾಲೂಕು ವ್ಯಾಪ್ತಿಯಲ್ಲಿಯೂ ಕೂಡ ಭೂಕಂಪದ ಅನುಭವವಾಗಿದೆ. ಇದೇ ವ್ಯಾಪ್ತಿಯಲ್ಲಿ ಬರುವ ಕೆ.ಆರ್.ಪೇಟೆ ತಾಲೂಕಿನ ಹಲವು ಗ್ರಾಮಗಳಲ್ಲಿ ಮುಂಜಾನೆ 4.30 ರಿಂದ 5 ಗಂಟೆ ಸಮಯದಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ.  ಇದರಿಂದ ಆತಂಕಗೊಂಡ ಜನರು ಮನೆಯಿಂದ ಹೊರಗೆ ಓಡಿ  … Read more

ಜಿಲ್ಲಾ ಸರ್ವೇಕ್ಷಣಾಕಾರಿ ರಾಘವನ್‌ಗೆ ಎಚ್‌ಡಿಡಿ ಪ್ರಶಸ್ತಿ

ಸುದ್ದಿ360 ದಾವಣಗೆರೆ, ಜೂ.23: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಹುಟ್ಟುಹಬ್ಬದ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ನಾಡಿನ ಗಣ್ಯರಿಗೆ ನೀಡುವ 2022ನೇ ಸಾಲಿನ ಎಚ್.ಡಿ. ದೇವೇಗೌಡ ಪ್ರಶಸ್ತಿಗೆ ಜಿಲ್ಲಾ ಸರ್ವೇಕ್ಷಣಾಕಾರಿ ಡಿ.ಜಿ. ರಾಘವನ್ ಭಾಜನರಾಗಿದ್ದಾರೆ. ನಗರದ ಪ್ರವಾಸಿ ಮಂದಿರದಲ್ಲಿ ಗುರುವಾರ ಎಚ್.ಡಿ. ದೇವೇಗೌಡ ಪ್ರತಿಷ್ಠಾನದ ಅಧ್ಯಕ್ಷ ಎಚ್.ಸಿ. ಗುಡ್ಡಪ್ಪ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕಾರಿ ಸಭೆಯಲ್ಲಿ  ಈ ತೀರ್ಮಾನ ಕೈಗೊಳ್ಳಲಾಗಿದೆ. ರಾಘವನ್ ಅವರೊಂದಿಗೆ 2020ನೇ ಸಾಲಿನ ಪ್ರಶಸ್ತಿಗೆ ಆಂಧ್ರಪ್ರದೇಶ ಮೂಲದ ಮಂದಕೃಷ್ಣ ಮಾದಿಗ, 2021ನೇ ಸಾಲಿನ … Read more

ಸಿಲಿಂಡರ್ ಸ್ಪೋಟ – ಅಜ್ಜಮೊಮ್ಮಗಳಿಗೆ ಗಂಭೀರ ಗಾಯ

ಸುದ್ದಿ360 ಚಿಕ್ಕಮಗಳೂರು, ಜೂ.23: ಜಿಲ್ಲೆಯ ಬೀರೂರು ಸಮೀಪದ ಅಜ್ಜಂಪುರ ರಸ್ತೆಯಲ್ಲಿರುವ ಯರೇಹಳ್ಳಿ ಗ್ರಾಮದ ಮನೆಯೊಂದರಲ್ಲಿ ಸಿಲಿಂಡರ್ ಸ್ಫೋಟಿಸಿದ್ದು ಮನೆಯಲ್ಲಿದ್ದ ಮರುಳ ಸಿದ್ದಪ್ಪ ಮತ್ತು ಅವರ ಮೊಮ್ಮಗಳು ಚೈತನ್ಯ ಎಂಬುವರಿಗೆ ಗಾಯಗಳಾಗಿವೆ. ಅಲ್ಲದೆ ಸ್ಪೋಟದ ತೀವ್ರತೆಗೆ ಮನೆಯ ಛಾವಣಿಯ ಹಂಚುಗಳು ಹಾರಿ ಹೋಗಿ ಮನೆಯೂ ಹಾನಿಗೊಳಗಾಗಿದೆ. ಮನೆಯಲ್ಲಿ ಮಗಳು ಮತ್ತು ಅಳಿಯನೊಂದಿಗೆ ವಾಸವಿದ್ದ ಮರುಳ ಸಿದ್ದಪ್ಪ ಮಧ್ಯಾಹ್ನ ಅಡುಗೆ ಮಾಡಲು ಹೋದಾಗ ಅನಿಲ ಸೋರಿಕೆಯಾಗಿ ಸಿಲಿಂಡರ್ಗೆ ಬೆಂಕಿ ಹೊತ್ತಿಕೊಂಡಿದೆ. ಮನೆಯಿಂದ ಹೊರಗೆ ಓಡಿ ಬರುವಷ್ಟರಲ್ಲಿಯೇ ಸಿಲಿಂಡರ್ ಸ್ಫೋಟಿಸಿದ ಪರಿಣಾಮ … Read more

ಇ-ಬೈಕ್ – ಶೋರೂಮ್  ಉದ್ಘಾಟನೆ (ಜೂ.24) – ವಾಹನ ಬುಕಿಂಗ್‍ ಆರಂಭ

ಸೇಲ್ಸ್‌, ಸರ್ವಿಸ್, ಸ್ಪೇರ್ಸ್‌ ಮತ್ತು ಸೇಫ್ಟಿ (4 ಎಸ್‍) ಮಳಿಗೆ ಸುದ್ದಿ360 ದಾವಣಗೆರೆ, ಜೂ.23: ಆ್ಯಂಪೈರ್ ಎಲೆಕ್ಟ್ರಿಕ್‍ ದ್ವಿಚಕ್ರ ವಾಹನಗಳ ಅನುಶರಣ್ ಆ್ಯಂಪೈರ್ ಶೋರೂಮ್ ಜೂ.24ರಂದು ನಗರದ ಪಿಬಿ ರಸ್ತೆಯ ಪೂಜಾ ಹೋಟೆಲ್ ಸಮೀಪ ಉದ್ಘಾಟನೆಗೊಳ್ಳಲಿದೆ ಎಂದು ಬ್ರಾಂಚ್ ಮುಖ್ಯಸ್ಥ ಅಣ್ಣಾರಾವ್ ಕುಲಕರ್ಣಿ ಮಾಹಿತಿ ನೀಡಿದರು. ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜೂ.24ರಂದು ಸಂಜೆ ೫ ಗಂಟೆಗೆ ಆ್ಯಂಪೈರ್ ಸಂಸ್ಥೆಯ ಸೇಲ್ಸ್ ಹೆಡ್ ಎಸ್. ಪ್ರಣೇಶ್ ನೂತನ ಶೋರೂಮ್ ಉದ್ಘಾಟಿಸುವರು. ರಾಜ್ಯದ ಸೇಲ್ಸ್ ಹೆಡ್ ಎ.ಎನ್. ಪ್ರೀತಮ್ … Read more

ದಾವಣಗೆರೆಯಲ್ಲಿ ಜೂ.24ರಿಂದ 3 ದಿನಗಳ ನೀಲಕಂಠ ಆಭರಣ ಮೇಳ

ಸುದ್ದಿ360 ದಾವಣಗೆರೆ, ಜೂ.23: ನಗರದ ಶಾಮನೂರು ರಸ್ತೆಯ ಹೋಟೆಲ್ ಸದರ್ನ್ ಸ್ಟಾರ್‌ನಲ್ಲಿ ಜೂ.24ರಿಂದ ಮೂರು ದಿನಗಳ ಕಾಲ ನೀಲಕಂಠ ಜ್ಯುವೆಲ್ಲರ್ಸ್‌ ಸುವರ್ಣ ಸಮೃದ್ಧಿ  ಆಭರಣ ಪ್ರದರ್ಶನ ಮತ್ತು ಮಾರಾಟ ಮೇಳ ನಡೆಯಲಿದೆ. ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ನೀಲಕಂಠ ಜ್ಯುವೆಲ್ಲರ್ಸ್‌ ಮ್ಯಾನೇಜರ್ ರಮೇಶ್ ಬಾಬು ಈ ಕುರಿತು ಮಾಹಿತಿ ನೀಡಿದರು. ಜೂ.24ರಂದು ಬೆಳಗ್ಗೆ 11 ಗಂಟೆಗೆ ಉದ್ಯಮಿ ಎಸ್.ಎಸ್. ಗಣೇಶ್ ಹಾಗೂ ರೇಖಾ ಗಣೇಶ್ ಮೇಳಕ್ಕೆ ಚಾಲನೆ ನೀಡುವರು. ಶಾಸಕ ಶಾಮನೂರು ಶಿವಶಂಕರಪ್ಪ ಹಾಗೂ ನೀಲಕಂಠ ಜ್ಯುವೆಲ್ಲರ್ಸ್‌ ಸಿಇಒ … Read more

ರಾಷ್ಟ್ರಪತಿ ಅಭ್ಯರ್ಥಿ ಆಯ್ಕೆ: ‘ವಿಶೇಷ’ತೆ ಮುಂದುವರಿಸಿದ ಬಿಜೆಪಿ

ಬಿಜೆಪಿ-ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಪ್ರಥಮ ಪ್ರಜೆ ಆಗುವುದು ಖಚಿತ? ಸುದ್ದಿ360 ವಿಶೇಷ ವರದಿ:  ಒಡಿಶಾ ಮೂಲದ ರಾಜಕಾರಣಿ, ಸಮಾಜ ಸೇವಕಿ ಹಾಗೂ ಬುಡಕಟ್ಟು ನಾಯಕಿ ದ್ರೌಪದಿ ಮುರ್ಮು ಭಾರತದ 15ನೇ ರಾಷ್ಟ್ರಪತಿಯಾಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ. ಎನ್‌ಡಿಎಗೆ ಇರುವ ಸಂಖ್ಯಾ ಬಲ ಮತ್ತು ಬಿಜು ಜನತಾದಳ, ವೈಎಸ್‌ಆರ್ ಕಾಂಗ್ರೆಸ್ ಸೇರಿ ಹಲವು ಪ್ರಾದೇಶಿಕ ಪಕ್ಷಗಳ ಬೆಂಬಲ  ಇರುವ ಕಾರಣ ಮುರ್ಮು ರಾಷ್ಟ್ರಪತಿ ಆಗುವುದರಲ್ಲಿ ಯಾವುದೇ ಅನುಮಾನವಿಲ್ಲ. ರಾಷ್ಟ್ರಪತಿ ಹುದ್ದೆಗೆ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಅವಕಾಶ ದೊರೆತಾಗಲೆಲ್ಲಾ … Read more

error: Content is protected !!