ಕಾಲೇಜಿನ ಆದಿನಗಳು ವ್ಯಕ್ತಿಯ ಬಾಳಿನ ಸುವರ್ಣ ಕಾಲ: ಎಸ್‍ಪಿ ರಿಷ್ಯಂತ್‍

ಗೋಲ್ಡನ್‍ ಮೆಮೋರೀಸ್‍ಗೆ ಮರುಜೀವ ನೀಡಿದ ಬಾಪೂಜಿ ಶಿಕ್ಷಣ ಮಹಾವಿದ್ಯಾಲಯದ ಗೋಲ್ಡನ್‍ ಗ್ರೂಪ್‍ ಸುದ್ದಿ360 ದಾವಣಗೆರೆ, ಜೂ.19: ಕಾಲೇಜು ದಿನಗಳ ನೆನಪುಗಳು ವ್ಯಕ್ತಿಯ ಜೀವನದಲ್ಲಿ ಸದಾ ಹಚ್ಚ ಹಸಿರಾಗಿರುತ್ತವೆ. ಇವು ಜೀವನದ ಕಡೆಯವರೆಗೂ ನೆನಪಿನಲ್ಲಿ ಇರುವಂತವುಗಳಾಗಿದ್ದು, ಸುವರ್ಣ ಕಾಲವಿದ್ದಂತೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಕಾರಿ ಸಿ.ಬಿ. ರಿಷ್ಯಂತ್ ಅಭಿಪ್ರಾಯಪಟ್ಟರು. ಬಾಪೂಜಿ ಶಿಕ್ಷಣ ಮಹಾವಿದ್ಯಾಲಯದ 1989-90ನೇ ಸಾಲಿನ ವಿದ್ಯಾರ್ಥಿಗಳ ಗೋಲ್ಡನ್ ಮೆಮೋರಿಸ್ ಗ್ರೂಪ್ ವತಿಯಿಂದ ನಗರದ ಎಸ್.ಎಸ್. ಬಡಾವಣೆಯಲ್ಲಿನ ಆಫೀಸರ್ಸ್‌ ಕ್ಲಬ್‌ನಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಸ್ನೇಹ ಸಮ್ಮಿಲನ ಹಾಗೂ ಗುರುವಂದನೆ … Read more

ಎರಡು ಕುಟುಂಬಗಳ ನಡುವೆ ಜಮೀನು ವಿವಾದ: ಇಡೀ ಗ್ರಾಮ ಉದ್ವಿಗ್ನ

ಸುದ್ದಿ360 ಬೆಳಗಾವಿ, ಜೂ.19: ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಬೆಳಗಾವಿ ತಾಲೂಕಿನ ಗೌಂಡವಾಡ ಗ್ರಾಮದಲ್ಲಿ ವ್ಯಕ್ತಿಯೋರ್ವನ ಕೊಲೆ ನಡೆದಿದೆ. ಇದರಿಂದ ಉದ್ರಿಕ್ತಗೊಂಡ ಜನರು ಕಂಡಲ್ಲೆಲ್ಲ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ತಾಲೂಕಿನ ಗೌಂಡವಾಡ ಗ್ರಾಮದಲ್ಲಿ ಹಳೇ ಜಮೀನು ವಿವಾದಕ್ಶೆ ಸಂಬಂಧಿಸಿದಂತೆ  ಶನಿವಾರ ರಾತ್ರಿ ಎರಡು ಕುಟುಂಬಗಳ ನಡುವೆ ಜಗಳ ಆರಂಭಗೊಂಡಿದೆ. ಈ ವೇಳೆ ವ್ಯಕ್ತಿಯೋರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಇದರಿಂದ ಆಕ್ರೋಶಗೊಂಡ ಹತ್ಯೆಗೀಡಾದ ವ್ಯಕ್ತಿಯ ಕುಟುಂಬದವರು ಕೊಲೆ ಮಾಡಿದವರ ಮೇಲೆ ಸೇಡು ತೀರಿಸಿಕೊಳ್ಳಲು ಹುಡುಕಾಟ ಆರಂಭಿಸಿದ್ದಾರೆ. ಇಡೀ … Read more

ದೇಶ-ನಾಡು ಕಟ್ಟಿದವರ ಗೌರವ ಕಾಪಾಡಲು ಸಿದ್ದ: ಮುಖ್ಯಮಂತ್ರಿ ಬೊಮ್ಮಾಯಿ

ಸುದ್ದಿ360 ಬೆಂಗಳೂರು, ಜೂ.19:  ಪಠ್ಯಪುಸ್ತಕ ಪರಿಷ್ಕರಣೆಗೆ ಸಂಬಂಧಿಸಿದಂತೆ ಮಾತನಾಡಿ ಮಾಜಿ ಪ್ರಧಾನಿ ದೇವೇಗೌಡರು ಹಾಗೂ ಸ್ವಾಮೀಜಿ ಗಳು ನೀಡಿರುವ ಮನವಿಯನ್ನು ತರಿಸಿಕೊಂಡು ಏನೆಲ್ಲಾ ಬದಲಾವಣೆ ಮಾಡಬೇಕೋ ಅದನ್ನು ಮುಕ್ತ ಮನಸ್ಸಿನಿಂದ ಕೈಗೊಳ್ಳಲಾಗುವುದು. ಇದನ್ನು ಪ್ರತಿಷ್ಠೆ ಎಂದು ಪರಿಗಣಿಸಿಲ್ಲ. ಪಠ್ಯದ ಕುರಿತು ಆಕ್ಷೇಪವಿದ್ದರೆ, ಅದನ್ನು ನಿವಾರಿಸಲು ಸಿದ್ಧರಿದ್ದೇವೆ. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ, ಭಾರತ ಹಾಗೂ ಕರ್ನಾಟಕ ಕಟ್ಟಲು ಶ್ರಮಿಸಿರುವ ಹಿರಿಯರು, ರಾಜಮಹಾರಾಜರು, ಸಾಹಿತಿಗಳು, ಕಲಾಕಾರರು, ಜ್ಞಾನಪೀಠ ವಿಜೇತರ ಬಗ್ಗೆ ಅಪಾರ ಗೌರವವಿದೆ. ಯಾವುದೇ … Read more

ಕಾಂಗ್ರೆಸ್ನಿಂದ ಬೆಂಕಿಗೆ ತುಪ್ಪ ಹಾಕುವ ಕೆಲಸ: ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ

shimoga-riots-were-the-result-of-the-governments-appeasement-policy-basavaraj-bommai

ಸುದ್ದಿ360 ಬೆಂಗಳೂರು, ಜೂ.19:  ಕಾಂಗ್ರೆಸ್ ಬೆಂಕಿಗೆ ತುಪ್ಪ ಹಾಕುವ ಕೆಲಸವನ್ನು ಇಡೀ ದೇಶದಲ್ಲಿ ಮಾಡುತ್ತಿದೆ ಎನ್ನುವುದಕ್ಕೆ ಖಾನಾಪುರ ಶಾಸಕರು ಧರಣಿ ಮಾಡುತ್ತಿರುವುದು ಸಾಕ್ಷಿಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ,   ಅಗ್ನಿಪಥ್ ಒಂದು ವಿನೂತನ ಕಾರ್ಯಕ್ರಮ. ಇಡೀ ಜಗತ್ತಿನಲ್ಲಿ ಯುವಕರಿಗೆ ಮಿಲಿಟರಿ ತರಬೇತಿ ನೀಡುವ ವ್ಯವಸ್ಥೆ ಇದೆ. 17 – 21 ವರ್ಷ ಉತ್ತಮ ತರಬೇತಿ ಪಡೆದರೆ, ಬೇರೆ ಅವಕಾಶಗಳು ಸಿಗುತ್ತವೆ. ಮಿಲಿಟರಿ ಹಾಗೂ ಅರೆಮಿಲಿಟರಿ ಪಡೆಗಳಲ್ಲಿ … Read more

ಸರ್‌ಎಂವಿ ಕಾಲೇಜಿಗೆ ಅತ್ಯುತ್ತಮ ಫಲಿತಾಂಶ

ಸುದ್ದಿ360 ದಾವಣಗೆರೆ, ಜೂನ್ 18: ಪಿಯುಸಿ ಪರೀಕ್ಷೆಯಲ್ಲಿ ನಗರದ ಸರ್‌ಎಂವಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಫಲಿತಾಂಶ ಪಡೆದುಕೊಂಡಿದ್ದಾರೆ. ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಜಿಯಾ ಎಂ. ಜೈನ್ 589 ಅಂಕ ಗಳಿಸಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದರೆ, ಎಂ.ಎಸ್. ಶ್ರೇಷ್ಠ 587 ಹಾಗೂ ಜಿ. ಕಾರ್ತಿಕ 587 ಅಂಕ ಗಳಿಸಿ ಜಿಲ್ಲೆಗೆ ತೃತೀಯ ಸ್ಥಾನ ಗಳಿಸಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಉತ್ತಮ್ ಹಂಸರಾಜ್ ಹಾಗೂ ಕುಮಾರಿ ಎಂ.ಎಸ್. ಸೃಷ್ಟಿ 590 ಅಂಕ ಗಳಿಸಿ ಕಾಲೇಜಿಗೆ ಪ್ರಥಮ … Read more

ಮಾಗನೂರು ಬಸಪ್ಪ ಕಾಲೇಜಿಗೆ ಶೇ.96 ಫಲಿತಾಂಶ – ಜಿ.ಡಿ. ರಕ್ಷಿತ ಟಾಪರ್

ದ್ವಿತೀಯ ಪಿಯು ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ಮಾಗನೂರು ಬಸಪ್ಪ ಕಾಲೇಜು ವಿದ್ಯಾರ್ಥಿಗಳನ್ನು ನಿರ್ದೇಶಕ ಡಾ.ಜಿ.ಎನ್.ಎಚ್. ಕುಮಾರ್, ಪ್ರಾಚಾರ್ಯ ಡಾ.ಎಸ್. ಪ್ರಸಾದ್ ಬಂಗೇರಾ ಅಭಿನಂದಿಸಿದರು. ಸುದ್ದಿ360 ದಾವಣಗೆರೆ, ಜೂನ್ 18: ನಗರದ ಮಾಗನೂರು ಬಸಪ್ಪ ಪದವಿ ಪೂರ್ವ ಕಾಲೇಜು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ.96 ಫಲಿತಾಂಶ ಪಡೆದಿದ್ದು, ಜಿ.ಡಿ. ರಕ್ಷಿತ 592 ಅಂಕ ಪಡೆದು ರಾಜ್ಯಕ್ಕೆ 6ನೇ ರ್ಯಾಂಕ್ ಹಾಗೂ ಕಾಲೇಜಿಗೆ ಟಾಪರ್ ಆಗಿ ಹೊರಹೊಮ್ಮಿದ್ದಾರೆ. ಪ್ರಸಕ್ತ ಸಾಲಿನಲ್ಲಿ 216 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, … Read more

ಸೈನ್ಸ್ ಅಕಾಡೆಮಿಗೆ ಉತ್ತಮ ಫಲಿತಾಂಶ

ಸುದ್ದಿ360 ದಾವಣಗೆರೆ, ಜೂನ್ 18: 2022-23ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ನಗರದ ಸೈನ್ಸ್ ಅಕಾಡೆಮಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಎಚ್.ಡಿ. ಸುಪ್ರೀತಾ 591 ಅಂಕ (ಶೇ.98.5) ಗಳಿಸುವ ಮೂಲಕ ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಪ್ರೀತಮ್ ವಿ. ದಿವಾಕರ 587(ಶೇ.97.83), ಜೆ. ಸಹನಾ 584(ಶೇ.97.33), ಕೆ.ಜೆ. ತೇಜಸ್ವಿನಿ 584(ಶೇ.97.33) ಹಾಗೂ ಸಿ.ಎ. ಯಶೋಧಾ 584(ಶೇ.97.33) ಅಂಕ ಪಡೆದು ಕ್ರಮವಾಗಿ ದ್ವಿತೀಯ ಹಾಗೂ ತೃತೀಯ ಸ್ಥಾನ ಹಂಚಿಕೊAಡಿದ್ದಾರೆ. … Read more

ಸಿದ್ಧಗಂಗಾ ಕಾಲೇಜಿಗೆ ಉತ್ತಮ ಫಲಿತಾಂಶ

ಸುದ್ದಿ360 ದಾವಣಗೆರೆ, ಜೂನ್ 18: ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ವಿಜ್ಞಾನ ವಿಭಾಗದಲ್ಲಿ ದಾವಣಗೆರೆಯ ಶ್ರೀ ಸಿದ್ಧಗಂಗಾ ಪದವಿ ಪೂರ್ವ ಕಾಲೇಜಿನ ಎಲ್. ವಿನಾಯಕ 593 ಅಂಕ ಗಳಿಸಿ ಜಿಲ್ಲೆಗೆ ದ್ವಿತೀಯ ಹಾಗೂ ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಎಂ.ಡಿ. ಚಿನ್ಮಯ್ 591, ಎಸ್.ಆರ್. ರಕ್ಷಿತಾ 589, ದಿವ್ಯಶ್ರೀ 589, ಸೋನು ನಿಂಗರೆಡ್ಡಿ 588, ರಾಘವೇಂದ್ರ 587, ವಿ. ಕಿರಣ್ ಗಿ 586, ಮಂಜುನಾಥ ಸ್ವಾಮಿ 586, ಎನ್.ಯು. ಪೂಜಾ 585 , ಟಿ.ಎ. ಶಾಹಿದ್ … Read more

ಪಿಯುಸಿ ಫಲಿತಾಂಶ: ದಾವಣಗೆರೆಗೆ 19ನೇ ಸ್ಥಾನ – ಕಾವ್ಯ ಎಂ.ಜಿ. ಜಿಲ್ಲೆಗೆ ಟಾಪರ್

ಸುದ್ದಿ360 ದಾವಣಗೆರೆ, ಜೂ.18: ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಇಂದು ಪ್ರಕಟಗೊಂಡಿದ್ದು, ಎಂದಿನAತೆ ವಿಜ್ಞಾನ ವಿಭಾಗದಲ್ಲಿ ಅತಿ ಹೆಚ್ಚು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಕಲಾ ವಿಭಾಗದಲ್ಲಿ ಅತಿ ಕಡಿಮೆ ಫಲಿತಾಂಶ ಲಭ್ಯವಾಗಿದೆ. ಜಿಲ್ಲೆಯಲ್ಲಿ ಒಟ್ಟಾರೆ ಶೇ.62.72 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಜಿಲ್ಲೆ ರಾಜ್ಯ ಮಟ್ಟದಲ್ಲಿ 19ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಳ್ಳಬೇಕಾಗಿದೆ. ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಒಟ್ಟು 19,725 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಈ ಪೈಕಿ 11,568 ವಿದ್ಯಾರ್ಥಿಗಳು ಪಾಸಾಗಿದ್ದಾರೆ. ಕಲಾ ವಿಭಾಗದ 6302ರಲ್ಲಿ 2473 ವಿದ್ಯಾರ್ಥಿಗಳು(ಶೇ.39.24) ತೇರ್ಗಡೆಯಾಗಿದ್ದು, ವಾಣಿಜ್ಯ … Read more

ದ್ವಿತೀಯ ಪಿಯುಸಿ: ಶೇ.61.88 ಫಲಿತಾಂಶ – ದಕ್ಷಿಣ ಕನ್ನಡ ಪ್ರಥಮ

ಸುದ್ದಿ360 ಬೆಂಗಳೂರು, ಜೂನ್ 18:  ಪ್ರಸಕ್ತ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಶೇ.61.88ರಷ್ಟು ವಿದ್ಯಾರ್ಥಿಗಳು ತೇರ್ಗಡೆಹೊಂದಿದ್ದಾರೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್‍ ತಿಳಿಸಿದ್ದಾರೆ. ಸುದ್ದೀಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿರುವ ಸಚಿವರು,  ಒಟ್ಟು 5,99,794 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಈ ಪೈಕಿ 4,02,697 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ವಿಜ್ಞಾನ ವಿಭಾಗದ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಿದ್ದು, ಗ್ರಾಮಾಂತರ ಪ್ರದೇಶದ ಫಲಿತಾಂಶ ಶೇ.62.18ರಷ್ಟಿದ್ದು ಉತ್ತಮವಾಗಿದೆ. ನಗರ ಪ್ರದೇಶದಲ್ಲಿ 61.78ರಷ್ಟಿದೆ ಎಂದು ತಿಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ … Read more

error: Content is protected !!