ಜೂ.21, ದಾವಣಗೆರೆ ಜಿಲ್ಲೆಯ ಮೂರು ಪಾರಂಪರಿಕ ತಾಣಗಳಲ್ಲಿ ಯೋಗ ದಿನಾಚರಣೆ

ಸುದ್ದಿ360 ನವದೆಹಲಿ, ಜೂನ್ 18: ಜಿಲ್ಲಾ ಆಡಳಿತದಿಂದ ಜೂನ್ 21 ರಂದು ನಡೆಯುವ 8 ನೇ ಅಂತರಾಷ್ಟಿçÃಯ ಯೋಗ ದಿನಾಚರಣೆಯನ್ನು ವಿಶೇಷವಾಗಿ ಆಚರಿಸಲಾಗುತ್ತಿದ್ದು ಜಿಲ್ಲೆಯ 3 ಐತಿಹಾಸಿಕ ಸ್ಥಳಗಳಲ್ಲಿ ಯೋಗ ದಿನಾಚರಣೆ ಮಾಡುವ ಮೂಲಕ ಯೋಗಾಭ್ಯಾಸವನ್ನು ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದರು. ಅವರು ಜೂನ್.17 ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಔಪಚಾರಿಕವಾಗಿ ಪತ್ರಕರ್ತರೊಂದಿಗೆ ಮಾತನಾಡಿದರು. ಯೋಗ ದಿನಾಚರಣೆಯನ್ನು ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ, ಭಾರತೀಯ ಪುರಾತತ್ವ ಇಲಾಖೆ, ಸ್ಮಾರ್ಟ್ ಸಿಟಿ ಲಿಮಿಟೆಡ್, … Read more

ಕಲಾಕುಂಚ: ವಿಶ್ವ ಪರಿಸರ ದಿನಾಚರಣೆ – ಉಚಿತ ಚಿತ್ರ ಬರೆಯುವ ಸ್ಪರ್ಧೆ ಫಲಿತಾಂಶ

ಸುದ್ದಿ360 ದಾವಣಗೆರೆ, ಜೂನ್ 18: ನಗರದ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ರಾಜ್ಯ ಮಟ್ಟದ ಉಚಿತ ಚಿತ್ರ ಬರೆಯುವ ಸ್ಪರ್ಧೆ ಹಮ್ಮಿಕೊಳ್ಳಲಾಗಿತ್ತು. ಇದರ  ಫಲಿತಾಂಶ ಪ್ರಕಟಿಸಲಾಗಿದೆ ಎಂದು ಸಂಸ್ಥೆಯ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈ  ತಿಳಿಸಿದ್ದಾರೆ. ರಾಜ್ಯ ಮಟ್ಟದ ಈ ಉಚಿತ ಚಿತ್ರ ಬರೆಯುವ ಸ್ಪರ್ಧೆಗೆ ಕರ್ನಾಟಕ ವಿವಿಧ ಜಿಲ್ಲೆಗಳೂ ಸೇರಿದಂತೆ ನೆರೆ ರಾಜ್ಯಗಳಿಂದಲೂ ಸ್ಪರ್ಧಿಗಳು ಪಾಲ್ಗೊಂಡಿದ್ದರು. ಸುಮಾರು ಒಂದು ಸಾವಿರದ ಎಂಟುನೂರ ಆರವತ್ತಮೂರು ಚಿತ್ರಗಳು ಬಂದಿದ್ದವು ಎಂದು ಗಣೇಶ್‍ ಶೆಣೈ … Read more

ಯಕ್ಷರಂಗದಿಂದ ಯಕ್ಷಗಾನ ತರಬೇತಿ ಶಿಬಿರ

ಸುದ್ದಿ360 ದಾವಣಗೆರೆ, ಜೂನ್ 18: ನಗರದ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಅಂಗ ಸಂಸ್ಥೆ ಯಕ್ಷರಂಗ-ಯಕ್ಷಗಾನ ಸಂಸ್ಥೆಯ ಆಶ್ರಯದಲ್ಲಿ ನಿರಂತರ ಯಕ್ಷಗಾನ ತರಬೇತಿ ಶಿಬಿರ ಹಮ್ಮಿಕೊಂಡಿದೆ. ತರಬೇತಿಯು ನಗರದ ಕೆ.ಬಿ. ಬಡಾವಣೆ, ಕುವೆಂಪು ರಸ್ತೆಯಲ್ಲಿರುವ (ಲಾಯರ್ ರಸ್ತೆ), ಕಲಾಕುಂಚ ಕಛೇರಿಯ ಸಭಾಂಗಣದಲ್ಲಿ ಪ್ರತೀ ಭಾನುವಾರ ಬೆಳಿಗ್ಗೆ 6-30 ರಿಂದ 9-00 ಗಂಟೆಯವರೆಗೆ ನಡೆಯಲಿದ್ದು, ಈ ಶಿಬಿರವನ್ನು ಖ್ಯಾತ ವೃತ್ತಿನಿರತ ಯಕ್ಷಗಾನ ಕಲಾವಿದ ಹಟ್ಟಿಯಂಗಡಿ ಆನಂದಶೆಟ್ಟಿಯವರು ನಡೆಸಿಕೊಡಲಿದ್ದಾರೆ ಎಂದು ಸಂಸ್ಥೆಗಳ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈ ತಿಳಿಸಿದ್ದಾರೆ. ಯಾವುದೇ ವಯಸ್ಸಿನ … Read more

ಇಂದು ಜೈನ್ ಕಾಲೇಜಲ್ಲಿ ಎಥ್ನಿಕ್ ಡೇ

ಸುದ್ದಿ360 ದಾವಣಗೆರೆ, ಜೂನ್ 18: ನಗರದ ಜೈನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಜನಾಂಗಿಯ ದಿನ (ಎಥ್ನಿಕ್ ಡೇ)ವನ್ನು ಜೂ.18 ರ ಇಂದು ಆಯೋಜಿಸಲಾಗಿದ್ದು, ಕಾಲೇಜಿನ ಎಲ್ಲಾ‌ ವಿಭಾಗದ ವಿದ್ಯಾರ್ಥಿಗಳು ಸಾಂಪ್ರಾದಾಯಿಕ ಉಡುಗೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲ ಡಾ. ಡಿ.ಬಿ. ಗಣೇಶ್ ತಿಳಿಸಿದ್ದಾರೆ.

ಯೋಗ ನಡಿಗೆಗೆ ವಚಾನಾನಂದ ಶ್ರೀಗಳಿಂದ ಚಾಲನೆ- ಮಕ್ಕಳಿಗೆ ಸುಲಭ ಯೋಗಾಸನ

ಸುದ್ದಿ360 ದಾವಣಗೆರೆ, ಜೂನ್ 18: ಅಂತರಾಷ್ಟ್ರೀಯ ಯೋಗ ದಿನಾಚರಣೆ ಪೂರ್ವಭಾವಿಯಾಗಿ ಇಂದು (ಜೂ.18) ಬೆಳಿಗ್ಗೆ 7 ಗಂಟೆಗೆ ನಗರದ  ಹೈಸ್ಕೂಲ್ ಮೈದಾನದಿಂದ ಪ್ರಾರಂಭವಾದ ಯೋಗನಡಿಗೆ  ಮೋತಿ ವೀರಪ್ಪ ಕಾಲೇಜು ಕ್ರೀಡಾಂಗಣ ತಲುಪಿತು. ಹರಿಹರ ಪಂಚಮಸಾಲಿ ಪೀಠದ ಶ್ರೀವಚನಾನಂದ ಸ್ವಾಮೀಜಿ ಯೋಗ ನಡಿಗೆಗೆ ಚಾಲನೆ ನೀಡಿದರು. ನಗರದ 4 ವಲಯಗಳ 50ಕ್ಕೂ ಹೆಚ್ಚು ಶಾಲೆಗಳ 2000ಕ್ಕೂ ಅಧಿಕ ಮಕ್ಕಳು ಯೋಗನಡಿಗೆಯಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಪೊಲೀಸ್‍ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್‍, ಸ್ಮಾರ್ಟ್ ಸಿಟಿ ಎಂ.ಡಿ ರವೀಂದ್ರ ಮಲ್ಲಾಪುರ, ಬಿ.ಸಿ. … Read more

ದ್ವಿತೀಯ ಪಿಯುಸಿ ಫಲಿತಾಂಶ- ಈ ಲಿಂಕ್‍ ಕ್ಲಿಕ್‍ ಮಾಡಿ

ಸುದ್ದಿ360 ಬೆಂಗಳೂರು, ಜೂನ್ 18: ದ್ವೀತಿಯ ಪಿಯುಸಿ ಫಲಿತಾಂಶ ಇಂದು (ಜೂ.18) ಬೆಳಿಗ್ಗೆ 11 ಗಂಟೆಗೆ ಪ್ರಕಟವಾಗಲಿದೆ ಎಂದು ಪಿಯು ಬೋರ್ಡ್ ಪ್ರಕಟಿಸಿದೆ.2022 ನೇ ಸಾಲಿಗೆ ಏಪ್ರಿಲ್ 22 ರಿಂದ ಆರಂಭವಾಗಿ ಮೇ 18 ವರೆಗ ಪರೀಕ್ಷೆ ನಡೆದಿತ್ತು. ಇದೀಗ ಉತ್ತರ ಪತ್ರಿಕೆಯ ಮೌಲ್ಯಮಾಪನ ಮುಕ್ತಾಯವಾಗಿ ಫಲಿತಾಂಶ ಪ್ರಕಟಣೆಗೆ ಸಿದ್ಧವಾಗಿದ್ದು, ಇಂದು ಬೆಳಿಗ್ಗೆ 11 ಗಂಟೆಗೆ ಫಲಿತಾಂಶ ಹೊರಬೀಳಲಿದೆ.ಫಲಿತಾಂಶವನ್ನು ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ ಸೈಟ್ www.karresult.nic.in ನಲ್ಲಿ ಪಡೆಯಬಹುದಾಗಿದೆ. ಈ ಬಾರಿ ಒಟ್ಟು … Read more

ಭದ್ರಾ  ಮೇಲ್ದಂಡೆ ಯೋಜನೆ: ಅನುದಾನ ಬಿಡುಗಡೆಗೆ ಒತ್ತಾಯ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360 ನವದೆಹಲಿ, ಜೂನ್ 18: ಭದ್ರಾ ಮೇಲ್ದಂಡೆ ಯೋಜನೆಗೆ ಈಗಾಗಲೇ ಆರ್ಥಿಕ ಇಲಾಖೆ ಅನುಮೋದನೆಯಾಗಿದೆ, ಕೂಡಲೇ ಸಚಿವ ಸಂಪುಟ ಸಭೆಯಲ್ಲಿಟ್ಟು ರಾಷ್ಟ್ರೀಯ ಯೋಜನೆಯಾಗಿ ದೊರಕುವ ಅನುದಾನವನ್ನು ಬಿಡುಗಡೆ ಮಾಡಲು ಜಲಶಕ್ತಿ ಮಂತ್ರಾಲಯ ನೇತೃತ್ವ ವಹಿಸಬೇಕೆಂದು ಒತ್ತಾಯ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಶುಕ್ರವಾರ ನವದೆಹಲಿಯಲ್ಲಿ ಜಿ.ಎಸ್.ಟಿ ಸಚಿವರ ಮಂಡಳಿ ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿ, ಕೇಂದ್ರ ಜಲಶಕ್ತಿ ಸಚಿವರೊಂದಿಗೆ ಭೇಟಿಯಾಗಿ ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ಚರ್ಚಿಸಲಾಗಿದೆ. ಮೇಕೆದಾಟು ಯೋಜನೆಯ ಡಿಪಿಆರ್ ಗೆ … Read more

ಮುತ್ತೋಡು ಗ್ರಾಮದಲ್ಲಿ ಕುಡಿಯುವ ನೀರಿಗೆ ಕೊಳವೆ ಬಾವಿ – ಗ್ರಾಮಸ್ಥರಿಂದ ಅಭಿನಂದನೆ

ಸುದ್ದಿ 360, ಶಿವಮೊಗ್ಗ, ಜೂ. 17: ನಗರದ ಹೊರವಲಯದ ಮತ್ತೋಡು ಗ್ರಾಮದಲ್ಲಿ ಅಬ್ಬಲಗೆರೆ ಗ್ರಾಮ ಪಂಚಾಯತ್ ವತಿಯಿಂದ ಕುಡಿಯುವ ನೀರಿನ ಬೋರ್ ವೆಲ್ ಅನ್ನು ಕೊರೆಸಲಾಯಿತು. ಕೊಳವೆ ಬಾವಿ ಕೊರೆಸುವಲ್ಲಿ ಮುತವರ್ಜಿ ವಹಿಸಿದ ಮುತ್ತೋಡು ಗ್ರಾಮ ಪಂಚಾಯಿತಿ ಸದಸ್ಯೆ ರಂಜಿತಾ ಪ್ರವೀಣ್‍ ಇವರಿಗೆ ಗ್ರಾಮಸ್ಥರು ಅಭಿನಂದಿಸಿದ್ದಾರೆ.

ಸೈದ್ಧಾಂತಿಕವಾಗಿ ಎದುರಿಸಲಾಗದ ಬಿಜೆಪಿ ಸರ್ಕಾರದಿಂದ ದ್ವೇಶದ ರಾಜಕಾರಣ

ಕಾಂಗ್ರೆಸ್‌ನಿಂದ ಪ್ರತಿಭಟನೆ – ರಾಷ್ಟ್ರಪತಿಗಳಿಗೆ ಮನವಿ ಸುದ್ದಿ360 ದಾವಣಗೆರೆ, ಜೂ.17: ಕೇಂದ್ರ ಬಿಜೆಪಿ ಸರಕಾರ ಇ.ಡಿ.ಯನ್ನು ದುರ್ಭಳಕೆ ಮಾಡಿಕೊಳ್ಳುತ್ತಿದ್ದು, ರಾಷ್ಟ್ರಪತಿಗಳು ಮಧ್ಯ ಪ್ರವೇಶಿಸಿ ಸೂಕ್ತ ಮಾರ್ಗದರ್ಶನ ನೀಡುವಂತೆ ಆಗ್ರಹಿಸಿ, ಕೆಪಿಸಿಸಿ ಜಿಲ್ಲಾ ಘಟಕ ಹಾಗೂ ಪಕ್ಷದ ಎಲ್ಲಾ ವಿಭಾಗಗಳ ವತಿಯಿಂದ ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿತು. ನಂತರ ಪ್ರತಿಭಟನಾಕಾರರು ಉಪವಿಭಾಗಾಧಿಕಾರಿಗಳ ಕಚೇರಿಗೆ ತೆರಳಿ ಅವರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.ನಗರದ ಕೆಇಬಿ ವೃತ್ತದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು, ಅಲ್ಲಿಂದ … Read more

ಜೂ.19: ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ 115ನೇ ಜಯಂತ್ಯುತ್ಸವ – ಗುರುವಂದನೆ

ಸುದ್ದಿ360 ದಾವಣಗೆರೆ, ಜೂ.17: ನಡೆದಾಡುವ ದೇವರು ಖ್ಯಾತಿಯ ತ್ರಿವಿಧ ದಾಸೋಹಿ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ೧೧೫ನೇ ಜಯಂತ್ಯುತ್ಸವ ಹಾಗೂ ಗುರುವಂದನೆ ಕಾರ್ಯಕ್ರಮ ನಗರದ ಅಕ್ಕಮಹಾದೇವಿ ರಸ್ತೆಯ ಎವಿಕೆ ಕಾಲೇಜು ಬಳಿಯ ಜಿಲ್ಲಾ ಗುರುಭವನದಲ್ಲಿ ಜೂ.೧೯ರಂದು ಬೆಳಗ್ಗೆ ೧೦.೩೦ಕ್ಕೆ ಹಮ್ಮಿಕೊಳ್ಳಲಾಗಿದೆ ಎಂದು ಚುಟುಕು ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಜಿ.ಹೆಚ್. ರಾಜಶೇಖರ್ ಗುಂಡಗಟ್ಟಿ ತಿಳಿಸಿದರು. ಈ ಕುರಿತು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಚುಟುಕು ಸಾಹಿತ್ಯ ಪರಿಷತ್, ಕನ್ನಡ ಮತ್ತು ಸಂಸ್ಕೃತಿ … Read more

error: Content is protected !!