ಅಗ್ನಿಪಥ ವಯೋಮಿತಿ 23 ಕ್ಕೆ ಏರಿಕೆ: ಜನರ ಅಗತ್ಯಗಳಿಗೆ ಸ್ಪಂದಿರುವ ಮೋದಿ ಸರ್ಕಾರ ಸಿಎಂ ಬೊಮ್ಮಾಯಿ

ಬೆಂಗಳೂರು, ಜೂನ್ 16: ಅಗ್ನಿಪಥ ಯೋಜನೆಯಡಿ ವಯೋಮಿತಿಯನ್ನು 21 ರಿಂದ 23 ಕ್ಕೆ ಏರಿಸುವ ಮೂಲಕ ಮೋದಿ ಸರ್ಕಾರವು ಜನರ ಅಗತ್ಯಗಳಿಗೆ ಸ್ಪಂದಿಸುವ ಸರ್ಕಾರ ಎಂದು ನಿರೂಪಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಕಳೆದ ಎರಡು ವರ್ಷಗಳಿಂದ ರಕ್ಷಣಾ ಪಡೆಗಳಿಗೆ ನೇಮಕಾತಿ ನಡೆದಿರಲಿಲ್ಲ. ಮೊದಲ ವರ್ಷದ ನೇಮಕಾತಿಯಲ್ಲಿ ವಯೋಮಿತಿಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹೆಚ್ಚಿಸಿದ್ದಾರೆ. ಈ ನಿರ್ಧಾರದಿಂದ ದೊಡ್ಡ ಸಂಖ್ಯೆಯಲ್ಲಿ ಯುವ ಜನರಿಗೆ ಪ್ರಯೋಜನವಾಗಲಿದೆ. ತಾಯ್ನಾಡಿನ ಸೇವೆಯ ಪಥದಲ್ಲಿ ಯಶಸ್ವಿಯಾಗಿ ನಡೆದು ತಮ್ಮ ಉಜ್ವಲ ಭವಿಷ್ಯವನ್ನು … Read more

ಆಶ್ಚರ್ಯವಲ್ಲ ಪರಮಾಶ್ಚರ್ಯ! – 10,000 ಕೇಳಿದರೆ 50,000 ರೂ. ಕೊಟ್ಟ ಎಟಿಎಂ!!

ಸುದ್ದಿ360 ನಾಗಪುರ: ನಮ್ಮಲ್ಲಿನ ಎಟಿಎಂಗಳಲ್ಲಿ ಹಣ ಇದೆ ಅಂದ್ರೇ ದೊಡ್ಡ ವಿಷಯ. ಇನ್ನು ಆ ಎಟಿಎಂ ಹಣ ಕೊಟ್ಟಿತೆಂದರೆ ಅದೃಷ್ಟವೇ ಸರಿ. ಕೆಲವೊಮ್ಮೆ ನಮ್ಮ ಹಣ ನಮಗೆ ಕೊಡಲು ಎಟಿಎಂಗಳು ಸತಾಯಿಸುತ್ತವೆ. ಸಿಟಿಯಲ್ಲಿರುವ ಅಷ್ಟೂ ಎಟಿಎಂ ಕೇಂದ್ರಗಳನ್ನು ಸುತ್ತಾಡಿ ಬಂದರೂ ಒಂದು ಗರಿ ಗರಿ ನೋಟು ಹುಟ್ಟುವುದಿಲ್ಲ. ಹೀಗಿರುವಾಗ ಕಿತ್ತಳೆ ನಾಡು ನಾಗಪುರ ಜಿಲ್ಲೆಯಲ್ಲೊಂದು ಎಟಿಎಂ ಪವಾಡವನ್ನೇ ಸೃಷ್ಟಿಸಿದೆ! ಗ್ರಾಹಕರೊಬ್ಬರು 10,000 ರೂ. ಕೇಳಿದರೆ ಆ ಎಟಿಎಂ ಬರೋಬ್ಬರಿ 50,000 ರೂ. ದಯಪಾಲಿಸಿದೆ!! ಇದು ಆಶ್ಚರ್ಯವಲ್ಲ ಪರಮಾಶ್ಚರ್ಯ! … Read more

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ದೆಹಲಿಗೆ

shimoga-riots-were-the-result-of-the-governments-appeasement-policy-basavaraj-bommai

ಸುದ್ದಿ೩೬೦, ಬೆಂಗಳೂರು, ಜೂ.೧೭: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಬೆಳಗ್ಗೆ ದೆಹಲಿಗೆ ಪ್ರಯಾಣ ಬೆಳಸಲಿದ್ದಾರೆ. ಅಲ್ಲಿ ಅವರು ಜಿಎಸ್ ಟಿ ಕೌನ್ಸಿಲ್ ಗೆ ಸಂಭಂದಿಸಿದಂತೆ ಸಚಿವರೊಂದಿಗಿನ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಅವರು ಬೆಳಗ್ಗೆ ತಮ್ಮ ಆರ್ ಟಿ ನಗರ ದ ನಿವಾಸದಲ್ಲಿ ಮಾಧ್ಯಮದವರೊಡನೆ ಮಾತನಾಡಿ, ಸಭೆಯ ನಂತರ ಟಿವಿ ಮಾಧ್ಯಮವೊಂದರ ಸಂದರ್ಶನದಲ್ಲಿ ಪಾಲ್ಗೊಳ್ಳಲುವುದಾಗಿ ತಿಳಿಸಿದರು. ದೆಹಲಿ ಭೇಟಿ ಬಹಳ ಅಲ್ಪಾವಧಿಯದ್ದಾಗಿದ್ದು ಸಂಜೆ ಹಿಂದಿರುಗಲಿದ್ದೇನೆ. ಪಕ್ಷದ ನಾಯಕರನ್ನು ಭೇಟಿಯಾಗುತ್ತಿಲ್ಲ . ನಡ್ಡಾಜಿಯವರು ನಾಳೆ ಇಲ್ಲಿಯೇ ಬರುವವರಿದ್ದಾರೆ. ಯಾರನ್ನೂ ಭೇಟಿಯಾಗುವ ಉದ್ದೇಶವೂ … Read more

192 ಮೆಟ್ರಿಕ್ ಟನ್‌ ದೇಶೀ ಹಸುವಿನ ಸಗಣಿ ಕುವೈತ್‍ಗೆ ರವಾನೆ. . .

ಇದೀಗ ದೇಶಿ ಹಸುವಿನ ಸಗಣಿಗೆ ಅಂತಾರಾಷ್ಟ್ರೀಯ ಬೇಡಿಕೆ ಜೈಪುರ:  ಕುವೈಟ್ ಕೃಷಿ ವಿಜ್ಞಾನಿಗಳ ವ್ಯಾಪಕ ಸಂಶೋಧನೆಯಿಂದಾಗಿ ಹಸುವಿನ ಸಗಣಿಗೆ ಎಲ್ಲಿಲ್ಲದ ಬೇಡಿಕೆ ಬಂದಿದ್ದು, ಇದೀಗ ಇತಿಹಾಸದಲ್ಲಿಯೇ ಪ್ರಥಮ ಬಾರಿಗೆ ಭಾರತದಿಂದ ಹಸುವಿನ ಸಗಣಿ ಕುವೈತ್ ಗೆ ರಫ್ತಾಗುತ್ತಿದೆ. ಅದೂ ಎಷ್ಟು ಅಂತೀರ. . .? ಬರೋಬ್ಬರಿ 192 ಮೆಟ್ರಿಕ್ ಟನ್‌ಗಳಷ್ಟು ಬೃಹತ್ ಪ್ರಮಾಣದಲ್ಲಿ ರಫ್ತಾಗಲಿದೆ. ಈ ಸಂಗತಿಯನ್ನು ಭಾರತೀಯ ಸಾವಯವ ರೈತ ಉತ್ಪಾದಕರ ಸಂಘದ ರಾಷ್ಟ್ರೀಯ ಅಧ್ಯಕ್ಷ ಅತುಲ್ ಗುಪ್ತಾ ಹೇಳಿದ್ದಾರೆ. ಇದು ಭಾರತೀಯ ಪಶುಸಂಗೋಪನಾ ಉದ್ಯಮದ … Read more

ಪವರ್ ಲಿಫ್ಟಿಂಗ್‌: ತಂದೆ-ಮಗ ಸಾಧನೆ – ರಾಷ್ಟ್ರಮಟ್ಟಕ್ಕೆ ಆಯ್ಕೆ

ಸುದ್ದಿ360 ದಾವಣಗೆರೆ, ಜೂ16:  ಮೈಸೂರಿನಲ್ಲಿ ಜೂ.10ರಿಂದ 12ರವರೆಗೆ ನಡೆದ ರಾಜ್ಯ ಮಟ್ಟದ ಪವರ್‌ಲಿಫ್ಟಿಂಗ್ ಸ್ಪರ್ಧೆಯಲ್ಲಿ ದಾವಣಗೆರೆಯ ಕನ್ನಿಕಾಪರಮೇಶ್ವರಿ ಕೋ-ಆಪರೇಟಿವ್ ಬ್ಯಾಂಕ್ ಉದ್ಯೋಗಿ ವಿ. ರಕ್ಷಿತ್ ಚಿನ್ನದ ಪದಕ ಮತ್ತು ರಕ್ಷಿತ್ ತಂದೆ, ಶ್ರೀ ಬೀರೇಶ್ವರ ವ್ಯಾಯಾಮ ಶಾಲೆ ಕ್ರೀಡಾಪಟು ಪಿ. ವಿಶ್ವನಾಥ್ ಕಂಚಿನ ಪದಕಕ್ಕೆ ಭಾಜನರಾಗುವ ಮೂಲಕ ತಂದೆ-ಮಗ  ಇಬ್ಬರೂ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಈ ಮೂಲಕ ಹೈದರಾಬಾದ್‌ನಲ್ಲಿ ಜು.೫ರಿಂದ ೧೦ರವರೆಗೆ ನಡೆಯಲಿರುವ ರಾಷ್ಟ್ರಮಟ್ಟದ ಪವರ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಭಾಗವಹಿಸಲು ಅರ್ಹತೆ ಪಡೆದಿದ್ದಾರೆ. ತಂದೆ ಮತ್ತು ಮಗ … Read more

ಕಿಕ್ ಬಾಕ್ಸಿಂಗ್‌: ದಾವಣಗೆರೆಗೆ 3 ಚಿನ್ನ, 4 ಬೆಳ್ಳಿ, 3 ಕಂಚು

ಜಿಲ್ಲೆಗೆ ಕೀರ್ತಿ ತಂದ ಕ್ರೀಡಾಪಟುಗಳಿಗೆ ಅಭಿನಂದನೆಗಳ ಮಹಾಪೂರ ಸುದ್ದಿ360 ದಾವಣಗೆರೆ, ಜೂ16:  ಮೈಸೂರಿನಲ್ಲಿ ಜೂ.೧೧, ೧೨ರಂದು ಕರ್ನಾಟಕ ಕಿಕ್ ಬಾಕ್ಸಿಂಗ್ ಸ್ಪೋರ್ಟ್ಸ್ ಅಸೋಸಿಯೇಷನ್ ಆಶ್ರಯದಲ್ಲಿ ನಡೆದ ೨ನೇ ರಾಜ್ಯಮಟ್ಟದ ಕಿಕ್ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ನಗರದ ಈಗಲ್ ಫಿಟ್ನೆಸ್ ಕೇಂದ್ರದ ವಿದ್ಯಾರ್ಥಿಗಳು 3 ಚಿನ್ನ, 4 ಬೆಳ್ಳಿ ಹಾಗೂ 3 ಕಂಚಿನ ಪದಕ ಪಡೆದು ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಕಿಕ್ ಲೈಟ್ ಇವೆಂಟ್‌ನ 7-9 ವರ್ಷದ ವಿಭಾಗದಲ್ಲಿ ಯು. ಅದಿತ್ಯ ಮತ್ತು ಎ.ಬಿ. ಅಧಿತಿ ಹಾಗೂ 11-13 ವರ್ಷದ … Read more

ಇ.ಡಿ. ದುರ್ಬಳಕೆ ಆರೋಪಿಸಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ ಇಂದು

ಸುದ್ದಿ360 ದಾವಣಗೆರೆ, ಜೂ16: ಎ.ಐ.ಸಿ.ಸಿ.  ಅಧ್ಯಕ್ಷರಾದ  ಶ್ರೀಮತಿ ಸೋನಿಯಾಗಾಂಧಿ ಮತ್ತು ರಾಹುಲ್ ಗಾಂಧಿಯವರಿಗೆ ಕೇಂದ್ರ ಬಿ.ಜೆ.ಪಿ ಸರ್ಕಾರ ರಾಜಕೀಯ ದುರುದ್ದೇಶದಿಂದ ಇ. ಡಿ. ನೋಟಿಸ್ ನೀಡಿದೆ ಎಂದು ಆರೋಪಿಸಿರುವ ಕಾಂಗ್ರೆಸ್‍ ಸಮಿತಿ, ಕೇಂದ್ರ ಸರ್ಕಾರದ ಈ ನಡೆಯನ್ನು ಖಂಡಿಸಿ ದಿನಾಂಕ ಜೂ.17ರಂದು ಬೆಳಿಗ್ಗೆ 11.30 ಗಂಟೆಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಮಂಜಪ್ಪ ರವರ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಂಡಿದೆ. ದೆಹಲಿಯಲ್ಲಿ ಕೇಂದ್ರ ಬಿಜೆಪಿ ಸರ್ಕಾರ ಇ.ಡಿ.ಯನ್ನು ದುರ್ಬಳಕೆ  ಮಾಡಿಕೊಂಡು ಕಾಂಗ್ರೆಸ್ ನಾಯಕರಿಗೆ ನೀಡುತ್ತಿರುವ ಕಿರುಕುಳದ ವಿರುದ್ಧ ಕಾಂಗ್ರೆಸ್ ಸಂಸದರು … Read more

ಜೂ.18ಕ್ಕೆ ‘ಅತ್ಯುತ್ತಮ ಶಾಲೆ ಪ್ರಶಸ್ತಿ’ ವಿತರಣೆ

ಜಿ.ಎಂ. ಹಾಲಮ್ಮ ಪದವಿಪೂರ್ವ ಕಾಲೇಜಿನಿಂದ ಕಾರ್ಯಕ್ರಮ ಆಯೋಜನೆ ಸುದ್ದಿ360 ದಾವಣಗೆರೆ, ಜೂ16: ನಗರದ ಜಿಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಜೂ.೧೮ರಂದು ಬೆಳಗ್ಗೆ ೯.೩೦ಕ್ಕೆ ‘ಅತ್ಯುತ್ತಮ ಶಾಲೆ ಪ್ರಶಸ್ತಿ’ ವಿತರಣೆ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಜಿ.ಎಂ . ಹಾಲಮ್ಮ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಹಾಗೂ ಸಿಇಒ ಡಾ.ವಿ. ವೆಂಕಟರಾಯಡು ಇಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಜಿ.ಎಂ. ಹಾಲಮ್ಮ ಪದವಿಪೂರ್ವ ಕಾಲೇಜು ವತಿಯಿಂದ ಹಮ್ಮಿಕೊಳ್ಳಲಾಗಿರುವ ಈ ಸಮಾರಂಭದಲ್ಲಿ ದಾವಣಗೆರೆ ಒಳಗೊಂಡಂತೆ ಸುತ್ತಮುತ್ತಲ ಜಿಲ್ಲೆಯ ಶಾಲೆಗಳಲ್ಲಿ ಎಸ್‌ಎಸ್‌ಎಲ್‌ಸಿಯಲ್ಲಿ ಶೇ.೧೦೦ ಫಲಿತಾಂಶ ಪಡೆದ ೧೦೦ ಶಾಲೆಗಳ … Read more

ಕಾಂಗ್ರೆಸ್ ನ್ನು ಜನರೇ ಮನೆಗೆ ಚಲೋ ಮಾಡಲಿದ್ದಾರೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360 ದಾವಣಗೆರೆ ಜೂ.16:  ಭ್ರಷ್ಟಾಚಾರ ಪ್ರಕರಣದ ತನಿಖೆ ವಿರುದ್ದ ಹೋರಾಟ ಮಾಡುತ್ತಿರುವುದು ಕಾಂಗ್ರೆಸ್‍ನ ದುರಂತವೇ ಸರಿ. ಕಾಂಗ್ರೆಸ್‍ನ ಇಂತಹ ನಿರ್ಧಾರಗಳಿಂದ ಜನರೇ ಕಾಂಗ್ರೆಸ್ ನ್ನು ಮನೆಗೆ ಚಲೋ ಮಾಡಲಿದ್ದಾರೆ ಎಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ವ್ಯಂಗ್ಯವಾಡಿದರು. ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲು ದಾವಣಗೆರೆಗೆ ಆಗಮಿಸಿದ್ದ ಮುಖ್ಯಮಂತ್ರಿಗಳು. ಜಿಎಂಐಟಿ ಹೆಲಿಪ್ಯಾಡ್ ನಲ್ಲಿ ಎದುರಾದ ಸುದ್ದಿಗಾರರೊಂದಿಗೆ ಮಾತನಾಡಿ, ಜಾರಿ ನಿರ್ದೇಶನಾಲಯ ಕಾಂಗ್ರೆಸ್  ಮುಖಂಡರಿಗೆ ವಿಚಾರಣೆಗೆ ಆಗಮಿಸುವಂತೆ ನೋಟೀಸ್ ನೀಡಿರುವುದನ್ನು ವಿರೋಧಿಸಿ ಕಾಂಗ್ರೆಸ್ ನವರು ರಾಜಭವನ ಚಲೋ ಮಾಡುತ್ತಿರುವುದು ಕಾಂಗ್ರೆಸ್‍ನ ದುರಂತ. ಕಾಂಗ್ರೆಸ್‍ನ  … Read more

ಪಠ್ಯಪುಸ್ತಕ ಸಲಹೆಗೆ ಸರ್ಕಾರ ಮುಕ್ತವಾಗಿದೆ: ಸಿಎಂ ಬೊಮ್ಮಾಯಿ

ಸುದ್ದಿ360 ದಾವಣಗೆರೆ ಜೂ.16: ಈ ಹಿಂದಿನ ಪಠ್ಯಪುಸ್ತಕದ ಬಗ್ಗೆಯೂ ಆಕ್ಷೇಪಣೆಗಳಿವೆ.  ಯಾವುದನ್ನು ಸರಿಪಡಿಸಬೇಕು ಎಂಬುದರ ಬಗ್ಗೆ ಸಲಹೆಗೆ ಮುಕ್ತ ಅವಕಾಶವಿದೆ. ರಾಜ್ಯದ ಜನರ ಸಲಹೆ ಸೂಚನೆ ಪಡೆದು ವೆಬ್ ಸೈಟ್ ನಲ್ಲಿ ಹಾಕಲಾಗುವುದು. ಒಟ್ಟಾರೆ ಎಲ್ಲಾ ಆಕ್ಷೇಪಣೆಗಳಿಗೆ ಸಲಹೆ ಪಡೆದ ನಂತರ ಪಠ್ಯ ಪರಿಷ್ಕರಣೆ ಅಂತಿಮ ರೂಪ ಪಡೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ದಾವಣಗೆರೆಯ ಜಿಎಂಐಟಿ ಹೆಲಿಪ್ಯಾಡ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಪ್ಪಳ್ಳಿಯಿಂದ ಬೆಂಗಳೂರಿಗೆ ಪ್ರಗತಿಪರರು ಪಾದಯಾತ್ರೆ ಮಾಡುತ್ತಿರುವ  ಕುರಿತ ಮಾಧ್ಯಮದವರ ಪ್ರಶ್ನೆಗೆ … Read more

error: Content is protected !!