ಕರ್ನಾಟಕದಲ್ಲಿ ಬೃಹತ್ ಜವಳಿ ಪಾರ್ಕ್ ಸ್ಥಾಪನೆ

ಜಾಗತಿಕ ಮಟ್ಟದಲ್ಲಿ ಭಾರತದ ಗೌರವ ಹೆಚ್ಚಲು ನಿಮ್ಮ ಒಂದು ಮತ ಕಾರಣ : ಪ್ರಧಾನಿ ಮೋದಿ ದಾವಣಗೆರೆ: ವಿಶ್ವ ಭೂಪಟದಲ್ಲಿ ಹಿಂದೂಸ್ಥಾನದ ಬಗ್ಗೆ ಜೈ ಕಾರ ಕೇಳಿಬರುತ್ತಿದೆ. ಜಾಗತಿಕ ಮಟ್ಟದಲ್ಲಿ ನಮ್ಮ ಗೌರವ ಹೆಚ್ಚಿದೆ. ಇದಕ್ಕೆ ಮೋದಿ ಕಾರಣವಲ್ಲ, ನಿಮ್ಮ ಒಂದು ಮತ ಇದನ್ನು ಸಾಧ್ಯವಾಗಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಲಿದರು.. ದಾವಣಗೆರೆಯ ಜಿಎಂಐಟಿ ಪಕ್ಕದಲ್ಲಿ ಆಯೋಜಿಸಿದ್ದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ಸಮಾರೋಪ ಸಮಾರಂಭದ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಅವರು,  ಕರ್ನಾಟಕದ ಉಜ್ವಲ ಭವಿಷ್ಯ … Read more

ಶ್ರವಣಬೆಳಗೊಳದ ಶ್ರೀ ಚಾರುಕೀರ್ತಿ‌‌ ಜೈನಭಟ್ಟಾರಕ ಸ್ವಾಮೀಜಿ ವಿಧಿವಶ – ಸರ್ಕಾರಿ ಗೌರವಗಳೊಂದಿಗೆ ಶ್ರೀಗಳ ಅಂತ್ಯಕ್ರಿಯೆ : ಸಿಎಂ ಬೊಮ್ಮಾಯಿ

ಸುದ್ದಿ360 ಹಾಸನ ಮಾ. 23: ಜೈನ‌ಕಾಶಿ ಶ್ರವಣಬೆಳಗೊಳದ ಶ್ರೀ ಚಾರುಕೀರ್ತಿ‌‌ ಜೈನಭಟ್ಟಾರಕ ಸ್ವಾಮೀಜಿ ಅವರು ಇಂದು (ಮಾ.23) ವಿಧಿವಶರಾಗಿದ್ದಾರೆ. ಕಳೆದ ಮುರ್ನಾಲ್ಕು ತಿಂಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀಗಳನ್ನು ಶ್ರವಣಬೆಳಗೊಳ ಮಠದಲ್ಲೇ ವೈದ್ಯರು ಚಿಕಿತ್ಸೆ ನೀಡುತ್ತಿದ್ದರು.ಹೆಚ್ಚಿನ ಚಿಕಿತ್ಸೆಗಾಗಿ ಆದಿಚುಂಚನಗಿರಿ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿತ್ತು. ಸ್ವಸ್ತಿ ಶ್ರೀ ಚಾರುಕೀರ್ತಿ ಬಿರುದಾಂಕಿತ ಜೈನಭಟ್ಟಾರಕ ಸ್ವಾಮೀಜಿಗಳು ದೇಶಾದ್ಯಂತ ಅಪಾರ ಭಕ್ತವರ್ಗವನ್ನು ಹೊಂದಿದ್ದಾರೆ. ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ: ಸಿಎಂ ಬೊಮ್ಮಾಯಿ ಶ್ರೀಕ್ಷೇತ್ರ ಶ್ರವಣಬೆಳಗೊಳದ ಪರಮ ಪೂಜ್ಯ ಜಗದ್ಗುರು ಕರ್ಮಯೋಗಿ ಸ್ವಸ್ತಿಶ್ರೀ  ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ … Read more

ಅಭಿವೃದ್ಧಿ ಕಾರ್ಯಗಳೇ ನಮ್ಮ ಶಕ್ತಿ ಎನ್ನುವವರು ಆಮಿಶ ಒಡ್ಡುವುದಾದರೂ ಯಾಕೆ?! ಯಶ್ವಂತ್ ರಾವ್ ಜಾಧವ್ ಪ್ರಶ್ನೆ

ಸುದ್ದಿ360 ದಾವಣಗೆರೆ ಮಾ.18: ಹಗಲು ದರೋಡೆ ಮಾಡುವವರು ಕಾಂಗ್ರೆಸ್ ನವರು ಆದರೆ ಬಿಜೆಪಿ ಮೇಲೆ ಗೂಬೆ ಕೂರಿಸುತ್ತಾರೆ ಎಂದು ಬಿಜೆಪಿ ಮುಖಂಡ ಯಶವಂತ್ ರಾವ್ ಜಾಧವ್ ಹರಿಹಾಯ್ದರು. ಅವರು ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನಾವು ಮಾಡಿರುವ ಅಭಿವೃದ್ಧಿ ಕಾರ್ಯಗಳೇ ನಮ್ಮ ಶಕ್ತಿ, ಇದರಿಂದಲೇ ಜನರು ನಮ್ಮನ್ನು ಗೆಲ್ಲಿಸಿದ್ದಾರೆ ಎನ್ನುವ ಶಾಮನೂರು ಶಿವಶಂಕರಪ್ಪ ಹಾಗೂ ಮಲ್ಲಿಕಾರ್ಜುನ್ ಅವರು ಸೀರೆ, ಕುಕ್ಕರ್ ಗಳನ್ನು ನೀಡುವ ಮೂಲಕ ಮತದಾರರಿಗೆ ಆಮಿಷ  ಒಡ್ಡುತ್ತಿರುವುದಾದರೂ ಯಾಕೆ ಎಂದು ಪ್ರಶ್ನಿಸಿದರು. ಎಸ್ಸೆಸ್ ಹಾಗೂ ಮಲ್ಲಿಕಾರ್ಜುನ್ … Read more

ದಾವಣಗೆರೆ: ಜಿಲ್ಲಾಸ್ಪತ್ರೆ ಹೊರಗುತ್ತಿಗೆ ನೌಕರರ ಧರಣಿಗೆ ಅಲ್ಪ ವಿರಾಮ – ಕಪ್ಪುಪಟ್ಟಿಯೊಂದಿಗೆ  ಮರಳಿದ  ನೌಕರರು

ಮಾರ್ಚ್ 26ರೊಳಗೆ ಬೇಡಿಕೆ ಈಡೇರುವ ಆಶ್ವಾಸನೆ ಸುದ್ದಿ360 ದಾವಣಗೆರೆ, ಮಾ.18: ಹಲವು ಬೇಡಿಕೆಗಳ ಈಡೇರಿಸುವಂತೆ ಸತತ ನಾಲ್ಕು ದಿನಗಳಿಂದ ಕೆಲಸಕ್ಕೆ ಹಾಜರಾಗದೆ ಪ್ರತಿಭಟನಾ ಧರಣಿಯಲ್ಲಿ ನಿರತರಾಗಿದ್ದ ಇಲ್ಲಿನ ಚಿಗಟೇರಿ ಜಿಲ್ಲಾ ಆಸ್ಪತ್ರೆಯ ಹೊರಗುತ್ತಿಗೆ ನೌಕರರು ಕಪ್ಪುಪಟ್ಟಿ ಧರಿಸಿ ಇಂದು ಸೇವೆಗೆ ಹಾಜರಾಗಿದ್ದಾರೆ. ಮುಖ್ಯಮಂತ್ರಿಗಳು, ಜಿಲ್ಲಾಧಿಕಾರಿಗಳು ಮತ್ತು ಅಧೀಕ್ಷಕರು ನಮ್ಮ ಬೇಡಿಕೆಗೆ ಸ್ಪಂದಿಸಿ, ತಮ್ಮ ಬೇಡಿಕೆಗಳನ್ನು ಇದೇ ಮಾರ್ಚ್ 26 ರೊಳಗಾಗಿ ಈಡೇರಿಸುವ  ಆಶ್ವಾಸನೆ ನೀಡಿದ್ದರಿಂದ ನೌಕರರು ಸೇವೆಗೆ ಹಿಂದಿರುಗಲು ಒಪ್ಪಿದ್ದು, ಕೈಗೆ ಕಪ್ಪುಪಟ್ಟಿ ಧರಿಸಿ ಧರಣಿಯನ್ನು ಜೀವಂತವಾಗಿಡಲಾಗಿದೆ … Read more

ಕೊಲೆ ಆರೋಪಿಗಳಿಗೆ ನೆರವು: ಪತ್ರಕರ್ತ ಮೆಹಬೂಬ್ ಮುನವಳ್ಳಿ ಬಂಧನ

ಸುದ್ದಿ360 ದಾವಣಗೆರೆ ಮಾ.18 : ಶಿವಮೊಗ್ಗದ ರೌಡಿ ಶೀಟರ್ ಹಂದಿ ಅಣ್ಣಿ ಹತ್ಯೆ ಪ್ರಕರಣದೊಂದಿಗೆ ತಳಕು ಹಾಕಿಕೊಂಡಿರುವ ಚೀಲೂರು ಬಳಿ ಬುಧವಾರ ನಡೆದಿದ್ದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಗಳಿಗೆ ನೆರವಾಗಿರುವ ಆರೋಪದಲ್ಲಿ ಧಾರವಾಡದ ಪತ್ರಕರ್ತರೊಬ್ಬರನ್ನು ಪೊಲೀಸರು ಶುಕ್ರವಾರ ರಾತ್ರಿ ಬಂಧಿಸಿದ್ದಾರೆ ಖಾಸಗಿ ಸುದ್ದಿವಾಹಿನಿಯ ವರದಿಗಾರ ಮೆಹಬೂಬ್ ಮುನವಳ್ಳಿಯನ್ನು ನ್ಯಾಮತಿ ಠಣೆ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಹಂದಿ ಅಣ್ಣಿ ಕೊಲೆ ಪ್ರಕರಣದ ಇಬ್ಬರು  ಆರೋಪಿಗಳ ಮೇಲೆ ಬುಧವಾರ ಚೀಲೂರು ಬಳಿ ನಡೆದ ಘಟನೆಗೆ ಸಂಬಂಧಿಸಿದಂತೆ ನಾಲ್ವರು … Read more

ಕೆಆರ್ ಎಸ್ ಪಕ್ಷದ ಪ್ರಣಾಳಿಕೆ ಬಿಡುಗಡೆ

ಸ್ವಚ್ಛ, ಸದೃಢ, ಸಮೃದ್ಧ, ಸಾಂಸ್ಕೃತಿಕ, ಹಸಿರು ಕರ್ನಾಟಕಕ್ಕಾಗಿ ನವ ಸೂತ್ರಗಳು ಸುದ್ದಿ360 ದಾವಣಗೆರೆ, ಮಾ.17: ಮುಂಬರುವ ವಿಧಾನಸಭಾ ಚುನಾವಣೆ ಪ್ರಯುಕ್ತ ಕೆ ಆರ್ ಎಸ್ ಪಕ್ಷವು  ಸ್ವಚ್ಛ, ಸದೃಢ, ಸಮೃದ್ಧ, ಸಾಂಸ್ಕೃತಿಕ, ಹಸಿರು ಕರ್ನಾಟಕಕ್ಕಾಗಿ ನವ ಸೂತ್ರಗಳನ್ನೊಳಗೊಂಡ ಪ್ರಣಾಳಿಕೆ  ಸಿದ್ಧಪಡಿಸಿ ಬಿಡುಗಡೆ ಮಾಡಲಾಗಿದೆ ಎಂದು ಕೆಅರ್ ಎಸ್ ಪಕ್ಷದ ಜಿಲ್ಲಾ ಕಾರ್ಯದರ್ಶಿ ಕೆ.ಮಲ್ಲಪ್ಪ ಹಾಗೂ ಕಾನೂನು ಘಟಕದ ಅಧ್ಯಕ್ಷ ಬಿ.ಸೋಮಶೇಖರ್ ತಿಳಿಸಿದರು. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಭ್ರಷ್ಟಾಚಾರಮುಕ್ತ ದಕ್ಷ ಆಡಳಿತ, ಆರೋಗ್ಯ, ಶಿಕ್ಷಣ, ಕೃಷಿ, ಮಹಿಳೆ ಮತ್ತು … Read more

ಮಹಾರಾಷ್ಟ್ರ ಸಚಿವ ಸಂಪುಟದ  ನಿರ್ಣಯಕ್ಕೆ ಸಿಎಂ ಬೊಮ್ಮಾಯಿ ತೀವ್ರ ಖಂಡನೆ

ಬೆಂಗಳೂರು,  ಮಾರ್ಚ್ 16: ಗಡಿ ಕನ್ನಡಿಗರಿಗೆ ಆರೋಗ್ಯ ವಿಮೆ ಯೋಜನೆಯ ಮಹಾರಾಷ್ಟ್ರ ಸಚಿವ ಸಂಪುಟದ  ನಿರ್ಣಯವನ್ನು ತೀವ್ರವಾಗಿ ಖಂಡಿಸುವುದಾಗಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ  ಮಾತನಾಡಿದರು. ಕರ್ನಾಟಕ ಗಡಿ ಭಾಗದ ಜನರಿಗೆ ಆರೋಗ್ಯ ಯೋಜನೆ ವಿಮೆ ಯೋಜನೆಯನ್ನು ಮಹಾರಾಷ್ಟ್ರದ ಸಂಪುಟ ನಿರ್ಣಯ ಘೋಷಿಸಿರುವುದು ಅಕ್ಷಮ್ಯ ಅಪರಾಧ. ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರೊಂದಿಗೆ ಮಾತನಾಡಿದಾಗ ಸುಪ್ರೀಂಕೋರ್ಟ್ ಆದೇಶ ಬರುವವರೆಗೆ ಕಾಯಬೇಕು. ಯಾವುದೇ ಪ್ರಚೋದನೆ ಯಾಗಬಾರದೆಂದು ಒಪ್ಪಲಾಗಿತ್ತು. … Read more

ಬೆಂಗಳೂರು- ಮೈಸೂರು ಟೋಲ್ – ಡಿ.ಕೆ.ಶಿ ರಾಜಕಾರಣ: ಸಿಎಂ ಬೊಮ್ಮಾಯಿ

ಜನಸಾಮಾನ್ಯರ ತಕರಾರಿಲ್ಲ – ಬಹಳಷ್ಟು ಸೇವೆ ಸರ್ವಿಸ್ ರಸ್ತೆಯಲ್ಲೇ ಲಭ್ಯ – ಅಲ್ಲೆಲ್ಲೂ ಟೋಲ್ ಇಲ್ಲ ಬೆಂಗಳೂರು, ಮಾರ್ಚ್ 16 : ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿ ಟೋಲ್ ಸಂಗ್ರಹದ ಬಗ್ಗೆ ತಕರಾರು ಜನಸಾಮಾನ್ಯರದ್ದಲ್ಲ, ಕೆಪಿಸಿಸಿ  ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ರಾಜಕಾರಣ ಮಾಡುತ್ತಿದ್ದಾರೆ. ಅವರು ಬಳಸುವ ಭಾಷೆ, ನಡೆದುಕೊಂಡ  ರೀತಿ ಯಾವುದೇ ಕನ್ನಡಿಗರಿಗೆ ಶೋಭೆ ತರುವಂಥದ್ದಲ್ಲ ಎಂದು ಮುಖ್ಯಮಂತ್ರಿ  ಬಸವರಾಜ ಬೊಮ್ಮಾಯಿ ತಿಳಿಸಿದರು. ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿ ಟೋಲ್ ಸಂಗ್ರಹದ ಬಗ್ಗೆ ತಮ್ಮ … Read more

5 ಮತ್ತು 8ನೇ ತರಗತಿ ಬೋರ್ಡ್ ಪರೀಕ್ಷೆಗೆ ಹೈಕೋರ್ಟ್ ಅಸ್ತು – ಮಾರ್ಚ್ 27ರಿಂದ ಪರೀಕ್ಷೆ

ಸುದ್ದಿ360 ಬೆಂಗಳೂರು: ರಾಜ್ಯ ಪಠ್ಯಕ್ರಮದಂತೆ ಅಭ್ಯಾಸ ನಡೆಸುತ್ತಿರುವ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಮೌಲ್ಯಾಂಕನ (ಬೋರ್ಡ್) ಪರೀಕ್ಷೆ ನಡೆಸಲು ಹೈಕೋರ್ಟ್ ಹಸಿರು ನಿಶಾನೆ ನೀಡಿದೆ. ಈ ಮೂಲಕ  ಹೈಕೋರ್ಟ್ ವಿಭಾಗೀಯ ಪೀಠ ಈ ಹಿಂದೆ ಹೈಕೋರ್ಟ್ ಏಕಸದಸ್ಯ ಪೀಠ ನೀಡಿದ್ದ ಆದೇಶಕ್ಕೆ ತಡೆ ನೀಡಿದ್ದು, ಬೋರ್ಡ್ ಪರೀಕ್ಷೆಗೆ ಷರತ್ತು ಬದ್ಧ ಅನುಮತಿ ನೀಡಿದೆ. ಸರ್ಕಾರದ ಆದೇಶವನ್ನು ಎತ್ತಿ ಹಿಡಿದಿರುವ ವಿಭಾಗೀಯ ಪೀಠ ಯಾವುದೇ ವಿದ್ಯಾರ್ಥಿಯನ್ನು ಫೇಲ್ ಮಾಡುವಂತಿಲ್ಲ ಎಂದು ಆದೇಶಿಸಿದೆ. 5 ಮತ್ತು 8ನೇ ತರಗತಿಯ … Read more

ಎರಡನೇ ದಿನಕ್ಕೆ ಕಾಲಿಟ್ಟ ಹೊರಗುತ್ತಿಗೆ ನೌಕರರ ಪ್ರತಿಭಟನೆ

ಕೋವಿಡ್ ಸಮಯದ ಸೇವೆಯನ್ನೂ ಲೆಕ್ಕಿಸದೆ ಕಡೆಗಣಿಸಿರುವ ಸರ್ಕಾರ – ನೌಕರರ ಆಕ್ರೋಶ ಸುದ್ದಿ360 ದಾವಣಗೆರೆ, ಮಾ.15: ಇಲ್ಲಿನ ಚಿಗಟೇರಿ ಜಿಲ್ಲಾ ಆಸ್ಪತ್ರೆಯ ಹೊರಗುತ್ತಿಗೆ ನೌಕರರಾದ ನಾನ್ ಕ್ಲಿನಿಕಲ್ ಮತ್ತು ಡಿ ಗ್ರೂಪ್ ದಿನಗೂಲಿ ನೌಕರರು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮಾ.14ರಿಂದ ಪ್ರತಿಭಟನೆಯಲ್ಲಿ ತೊಡಗಿದ್ದಾರೆ. ನೌಕರರ ಪ್ರತಿಭಟನೆ ಎರಡನೇ ದಿನಕ್ಕೆ ಕಾಲಿಟ್ಟಿದ್ದು ಸಂಜೆಯವರೆಗೂ ಸರ್ಕಾರದಿಂದ ಯಾವ ರೀತಿಯ ಸ್ಪಂದನೆ ಸಿಕ್ಕದೇ ಇರುವುದು ನೌಕರರಲ್ಲಿ ಪ್ರತಿಭಟನೆಯ ಕಿಚ್ಚನ್ನು ಹೆಚ್ಚಿಸಿದೆ. ಈ ವೇಳೆ ಡಾ. ಬಿ.ಆರ್. ಅಂಬೇಡ್ಕರ್ ರಾಜ್ಯ … Read more

error: Content is protected !!