ಗೆಲ್ಲುವ ಪಕ್ಷದಲ್ಲಿ ಅಭ್ಯರ್ಥಿಗಳ ಪೈಪೋಟಿ ಸಹಜ- ಹೈಕಮಾಂಡ್ ಸಮರ್ಥವಾಗಿ ನಿರ್ವಹಿಸಲಿದೆ: ಮುಖ್ಯಮಂತ್ರಿ ಬೊಮ್ಮಾಯಿ

ಬೆಳಗಾವಿ, ಮಾರ್ಚ್ 15 : ಭಾಜಪ ಪಕ್ಷ ಸಂಘಟನೆಯಲ್ಲಿ ಗಟ್ಟಿಯಾಗಿದೆ. ಪಕ್ಷದ ಕಾರ್ಯಕರ್ತರಲ್ಲಿ ಬಹಳಷ್ಟು ಉತ್ಸಾಹವಿದೆ. ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸಂಪೂರ್ಣ ಬಹುಮತ ಪಡೆಯುವ ಆತ್ಮವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಬೆಳಗಾವಿಯ ವಿಮಾನ ನಿಲ್ದಾಣಕ್ಕೆ ಬಂದಿಳಿದು ಕಾರ್ಯಕ್ರಮಕ್ಕೆ ತೆರಳುವ ಮುನ್ನ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ವಿವಿಧ ಮೋರ್ಚಾ, ಸಮ್ಮೇಳನ , ಬೂತ್ ಮಟ್ಟದ ವಿಜಯ ಸಂಕಲ್ಪ ಯಾತ್ರೆ, ಫಲಾನುಭವಿಗಳ ಕಾರ್ಯಕ್ರಮ, ರಥಯಾತ್ರೆ ಸೇರಿದಂತೆ ಹಲವು ಕಾರ್ಯಕ್ರಮಗಳು ನಿರಂತರವಾಗಿ ರಾಜ್ಯದಲ್ಲಿ ನಡೆಯುತ್ತಿದೆ.  ಬಿಜೆಪಿಯಲ್ಲಿ … Read more

ರಾಜಕಾರಣಿಗಳು ಕೆಡುವುದಕ್ಕೆ ಮತದಾರರೇ ಕಾರಣ

ಶಾಂತವೇರಿ ಗೋಪಾಲಗೌಡರ ಶತಮಾನೋತ್ಸವ ಸಭೆಯಲ್ಲಿ ದಿನೇಶ್ ಅಮೀನ್ ಮಟ್ಟು ಅಭಿಮತ ಸುದ್ದಿ360, ಶಿವಮೊಗ್ಗ: ಇಂದು ರಾಜಕಾರಣಿಗಳು ಕೆಡುವುದಕ್ಕೆ ಅವರನ್ನು ಆರಿಸಿ, ಅಧಿಕಾರ ನೀಡಿರುವ ಜನರೇ ಕಾರಣವಾಗಿದ್ದಾರೆ. ಇಂದಿನ ರಾಜಕಾರಣಿಗಳು ಶಾಂತವೇರಿ ಗೋಪಾಲ ಗೌಡರ ಹತ್ತಿರಕ್ಕೂ ತಲುಪಿಲ್ಲ ಎಂದು ಹಿರಿಯ ಪತ್ರಕರ್ತ ದಿನೇಶ್ ಅಮೀನ್ ಮಟ್ಟು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ಸರ್ಕಾರಿ ನೌಕರರ ಭವನದಲ್ಲಿ ಸರ್ಕಾರಿ ಪೀಪಲ್ಸ್ ಲಾಯರ್ಸ್ ಗಿಲ್ಡ್ , ಅಹರ್ನಿಶಿ ಪ್ರಕಾಶನ ಶಿವಮೊಗ್ಗ .ಜನ ಪ್ರಕಾಶನ ಬೆಂಗಳೂರು ಏರ್ಪಡಿಸಿದ ಶಾಂತವೇರಿ ಗೋಪಾಲಗೌಡರ ಶತಮಾನೋತ್ಸವ ಹಾಗೂ … Read more

ಮುಂದಿನ ಮೂರು ವರ್ಷಗಳ ಅವಧಿಯಲ್ಲಿ 25 ಸಾವಿರಕ್ಕೂ ಅಧಿಕ ಶಾಲಾ‌ ಕೊಠಡಿಗಳ ನಿರ್ಮಾಣ : ಸಿಎಂ ಬೊಮ್ಮಾಯಿ

ಹಾವೇರಿ, ಮಾರ್ಚ್ 14: ರಾಜ್ಯದಲ್ಲಿ ಮುಂದಿನ ಮೂರು ವರ್ಷಗಳ ಅವಧಿಯಲ್ಲಿ 25 ಸಾವಿರಕ್ಕೂ ಅಧಿಕ ಶಾಲಾ‌ ಕೊಠಡಿಗಳನ್ನು ನಿರ್ಮಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಜಿಲ್ಲೆಯ ಶಿಗ್ಗಾಂವಿ ತಾಲ್ಲೂಕು ಕೋಣನಕೇರಿಯಲ್ಲಿ ಮಂಗಳವಾರ ಕರ್ನಾಟಕ ಮಾದರಿ ಶಾಲೆಗಳ ಮಾರ್ಗದರ್ಶಿ ಕಾರ್ಯಕ್ರಮದಡಿ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ವಿಜ್ಞಾನ ಪ್ರಯೋಗಾಲಯ ಉದ್ಘಾಟನೆ ಹಾಗೂ ವಿವೇಕ ಯೋಜನೆಯಡಿ ಶಾಲಾ ಕೊಠಡಿ ನಿರ್ಮಾಣಕ್ಕೆ ಶಂಕುಸ್ಥಾಪನೆ ಹಾಗೂ ಕಂಪ್ಯೂಟರ್ ಲ್ಯಾಬ್‌ ಉದ್ಘಾಟಿಸಿ ಅವರು ಮಾತಾನಾಡಿದರು. ನನ್ನ ಕ್ಷೇತ್ರದಲ್ಲಿ ಸಾರ್ವಜನಿಕ ಸಹಭಾಗಿತ್ವದಲ್ಲಿ ಪ್ರಸ್ತುತ ವರ್ಷ 151 … Read more

ದಾವಣಗೆರೆ ಉತ್ತರದಲ್ಲಿ ಪ್ರಜಾಧ್ವನಿ ಯಾತ್ರೆ – ಶಾಮನೂರಲ್ಲಿ ಎಸ್ ಎಸ್ ಎಂ ಪರ ಮತಯಾಚನೆ

ಬಿಜೆಪಿಯಂತೆ ಸುಳ್ಳು ಹೇಳಲ್ಲ- ನುಡಿದಂತೆ ನಡೆಯುತ್ತೇವೆ: ಸಿದ್ಧು ಸುದ್ದಿ360 ದಾವಣಗೆರೆ ಮಾ.14: ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ವಿಧಾನಸಭೆ ವಿಪಕ್ಷ ನಾಯಕ ಸಿದ್ಧರಾಮಯ್ಯ ನೇತೃತ್ವದ ಪ್ರಜಾಧ‍್ವನಿ ಯಾತ್ರೆ ಸಂಚರಿಸಿ, ಕಾಂಗ್ರೆಸ್ ಪಕ್ಷ ಹೊರಡಿಸಿರುವ ಗ್ಯಾರಂಟಿ ಕಾರ್ಡ್ಗಳನ್ನು ಮನೆಮನೆಗೆ ವಿತರಿಸಿತು. ಪ್ರಜಾಧ್ವನಿ ಯಾತ್ರೆಗಾಗಿ ರೂಪಿಸಿರುವ ಬಸ್‌ನಲ್ಲಿ ಶಾಮನೂರಿಗೆ ಬಂದಿಳಿದ ದಾವಣಗೆರೆ ಉತ್ತರ ಕ್ಷೇತ್ರದ ಅಭ್ಯರ್ಥಿ ಎಸ್.ಎಸ್. ಮಲ್ಲಿಕಾರ್ಜುನ್, ಹರಿಹರ ಶಾಸಕ ರಾಮಪ್ಪ, ಜಮೀರ್, ಸಲೀಂ ಅಹಮದ್, ಎಂಎಲ್ ಸಿ ಪ್ರಕಾಶ್ ರಾಥೋಡ್, ಮಾಜಿ ಸಭಾಪತಿ ಬಿ.ಕೆ. ಕೋಳಿವಾಡ ಸೇರಿದಂತೆ … Read more

ದಶಪಥ ಹೆದ್ದಾರಿ ತರಾತುರಿ ಉದ್ಘಾಟನೆ: ಟೋಲ್ ಸಂಗ್ರಹ ಸಲ್ಲ –  ಸಿದ್ಧು

ಸುದ್ದಿ360 ದಾವಣಗೆರೆ ಮಾ.14: ಬೆಂಗಳೂರು ಮೈಸೂರು ದಶಪಥ ಹೆದ್ದಾರಿ ಕಾಮಗಾರಿ ಅರೆ ಬರೆಯಾಗಿದೆ. ಸರ್ವಿಸ್ ರಸ್ತೆಗಳೇ ಪೂರ್ಣಗೊಂಡಿಲ್ಲ. ಹೀಗಿರುವಾಗ ಟೋಲ್ ಸಂಗ್ರಹ ಮಾಡುವುದು ಸರಿಯಲ್ಲ ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ಹೇಳಿದರು. ಪ್ರಜಾಧ್ವನಿ ಯಾತ್ರೆಯಲ್ಲಿ ಪಾಲ್ಗೊಳ್ಳಲು ದಾವಣಗೆರೆಗೆ ಆಗಮಿಸಿದ್ದ ಸಂದರ್ಭದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ದಶಪಥ ರಸ್ತೆ ಇನ್ನೂ ಸಂಪೂರ್ಣವಾಗಿ ಮುಗಿದಿಲ್ಲ. ಸರ್ವಿಸ್ ರಸ್ತೆಗಳು ನಿರ್ಮಾಣವಾಗಿಲ್ಲ. ಅಲ್ಲಿನ್ನು ಬೈಪಾಸ್, ಹಲವು ಅಂಡರ್ ಪಾಸ್ ಕಾಮಗಾರಿಗಳೂ ಆಗಿಲ್ಲ. ಇದರಿಂದ ಅಲ್ಲಿನ ಸುತ್ತಮುತ್ತಲಿನ ಹಳ್ಳಿಜನರು ಬಹಳಷ್ಟು ತೊಂದರೆಗೆ ಈಡಾಗುತ್ತಾರೆ. … Read more

ಯುವಕ ಕಾಣೆ; ಸಿಕ್ಕವರು ಮಾಹಿತಿ ನೀಡಲು ಕೋರಿಕೆ

ಸುದ್ದಿ360 ದಾವಣಗೆರೆ ಮಾ.14: ಇಲ್ಲಿನ ಬಸಾಪುರ ಗ್ರಾಮದ ಎ.ಕೆ. ಕಾಲೋನಿಯ ಯುವಕ ಸಂತೋಷ್ (23) ಕಾಣೆಯಾಗಿದ್ದು, ಯಾರಿಗಾದರೂ ಕಂಡುಬಂದಲ್ಲಿ ಮಾಹಿತಿ ನೀಡುವಂತೆ ಆತನ ತಂದೆ ಗೋವಿಂದಪ್ಪ ಕೋರಿದ್ದಾರೆ. ಮೈಸೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಸಂತೋಷ್ ಕಳೆದ ಫೆ.4ರಂದು ದಾವಣಗೆರೆಗೆ ಬರುವುದಾಗಿ ತಿಳಿಸಿದ್ದು, ಬಾರದೆ ಇರುವುದರಿಂದ ಸಂಜೆ ಕರೆ ಮಾಡಿದರೆ ಅಂದಿನಿಂದ ಇಂದಿನವರೆಗೆ ಮೊಬೈಲ್ ಸ್ವಿಚ್ ಆಫ್ ಆಗಿದೆ. ತಮ್ಮ ಸಂಬಂಧಿಯೊಬ್ಬರ ಮಗಳೊಂದಿಗೆ ಹೋಗಿದ್ದಾನೆಂದು ಮಾಹಿತಿ ಇದೆಯಾದರೂ ಆ ಬಗ್ಗೆ ಖಾತ್ರಿ ಇಲ್ಲ. ಆರ್ ಎಂ ಸಿ … Read more

ಕವಲುದಾರಿಯ ಸುಳಿವು ನೀಡಿದ್ದ ಸಚಿವ ಸೋಮಣ್ಣ ಕಣ್ಣೀರಿಟ್ಟಿದ್ದು ಯಾಕೆ

ಸುದ್ದಿ360 ಬೆಂಗಳೂರು ಮಾ.14: ನಾನು ಬಿಜೆಪಿ ಬಿಟ್ಟು ಹೋಗುವುದಿಲ್ಲ ಎಂದು ಹೇಳುವ ಮೂಲಕ ಹಲವು ದಿನಗಳಿಂದ ಎದ್ದಿದ್ದ ಊಹಾಪೋಹದ ಮಾತುಗಳಿಗೆ ಸಚಿವ ಸೋಮಣ್ಣ ಉತ್ತರ ನೀಡಿದ್ದಾರೆ. ಅವರು ಇಂದು ಸುದೀರ್ಘ ಪತ್ರಿಕಾಗೋಷ್ಠಿಯಲ್ಲಿ ತಮ್ಮ ರಾಜಕೀಯ ಜೀವನ ಕುರಿತ ಮಾಹಿತಿಯನ್ನು ಹಂಚಿಕೊಂಡರು. ಪ್ರಧಾನಿ ಮೋದಿ, ಅಮಿತ್ ಶಾ, ಯಡಿಯೂರಪ್ಪ ಮತ್ತು ಕಟೀಲ್ ನನ್ನ ನಾಯಕರು ಎಂದು ಹೇಳಿದ ಅವರು ಬಿಜೆಪಿ ಬಿಟ್ಟು ಹೋಗೋದಿಲ್ಲ ಎಂದು ಸ್ಪಷ್ಟಪಡಿಸಿದರು. ಈ ಮೂಲಕ  ಹಲವು ದಿನಗಳಿಂದ ಸಚಿವ ಸೋಮಣ್ಣನವರು ಬಿಜೆಪಿ ತೊರೆದು ಬೇರೆ … Read more

ಭ್ರಷ್ಟಾಚಾರ: ಬಿಜೆಪಿ ಅಧಿಕಾರ ದುರ್ಭಳಕೆ – ಮುಖ್ಯಮಂತ್ರಿಗಳ ರಾಜೀನಾಮೆಗೆ ಎಎಪಿ ಒತ್ತಾಯ

ಸುದ್ದಿ360, ದಾವಣಗೆರೆ ಮಾ 10: ಚನ್ನಗಿರಿ ಶಾಸಕ ಮಾಡಾಳ್ ವಿರುಪಾಕ್ಷಪ್ಪನವರ ಮಿತಿಮೀರಿದ ಭ್ರಷ್ಟಾಚಾರ ಕೃತ್ಯವನ್ನು ಖಂಡಿಸಿ, ನಿಸ್ಸಾಹಾಯಕ‌ ಮಖ್ಯಮಂತ್ರಿಗಳು ಇದರ ನೈತಿಕ ಹೊಣೆಹೊತ್ತು ರಾಜೀನಾಮೆ ನೀಡಲು ಅಗ್ರಹಿಸಿ ಆಮ್ ಆದ್ಮಿ ಪಕ್ಷ ಜಿಲ್ಲಾ ಘಟಕ ಮಾನ್ಯ ರಾಜ್ಯಪಾಲರಿಗೆ ಜಿಲ್ಲಾ ಉಪವಿಭಾಗಾಧಿಕಾರಿಗಳ ಮೂಲಕ ಮನವಿ ಸಲ್ಲಿಸಿದರು. ಇಂದು ನಗರದ ಜಯದೇವ ಸರ್ಕಲ್ ನಲ್ಲಿ ಜಮಾವಣೆಗೊಂಡ ಎಎಪಿ ಕಾರ್ಯಕರ್ತರು ರಾಜ್ಯ‌ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ. ಮತ್ತು ಭ್ರಷ್ಟಾಚಾರದಲ್ಲಿ ನಿರತರಾದವರನ್ನು ರಕ್ಣಿಸುವ ಕಾರ್ಯ ಮಾಡುತ್ತಿದೆ ಎಂದು ಆರೋಪಿಸಿ ಘೋಷೆಣೆಗಳನ್ನು ಕೂಗುತ್ತ ಮುಖ್ಯಮಂತ್ರಿಗಳ ನಡೆಯನ್ನು … Read more

ಸುಮಲತಾ ಅಂಬರೀಶ್ ಬಿಜೆಪಿ ಸೇರುವುದು ಬಹುತೇಕ ಖಚಿತ

ಸುದ್ದಿ360 ಬೆಂಗಳೂರು, ಮಾ.09: ಮಂಡ್ಯದಿಂದ ರಾಜ್ಯ ವಿಧಾನಸಭೆಗೆ ಸ್ಪರ್ಧಿಸಲು ಒಲವು ಹೊಂದಿರುವ  ಮಂಡ್ಯ ಸಂಸದೆ ಸುಮಲತಾ ಅವರು ನಾಳೆ ಅಧಿಕೃತವಾಗಿ ಬಿಜೆಪಿ ಸೇರುವ ಸಾಧ್ಯತೆ ಇದೆ. ನಾಳೆ ಮಾ.10ರಂದು ಸುಮಲತಾ ಅಂಬರೀಶ್ ಮಹತ್ವದ ಪತ್ರಿಕಾಗೋಷ್ಟಿ ಕರೆದಿದ್ದಾರೆ. ಇದರಲ್ಲಿ ಸುಮಲತಾ ಅಧಿಕೃತವಾಗಿ ತಮ್ಮ ತೀರ್ಮಾನ ತೆಗೆದುಕೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಈ ಕುರಿತು ಅವರ ಆಪ್ತರಾಗಿರುವ ಸಚ್ಚಿದಾನಂದ ಸೇರಿದಂತೆ ಹಲವು ನಾಯಕರು ಈ ಸುಳಿವು ನೀಡಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸಹ ಈ ಕುರಿತ ಮಾಧ್ಯಮದವರ ಪ್ರಶ್ನೆಗೆ … Read more

ಮಾ.10,11 ರಂದು ದಾವಣಗೆರೆ ಜಿಲ್ಲೆಯಲ್ಲಿ ‘ಪ್ರಜಾಧ್ವನಿ’ – ಸಿದ್ಧರಾಮಯ್ಯ ಭಾಗಿ

ಸುದ್ದಿ360 ದಾವಣಗೆರೆ: ಜನರನ್ನು ಜಾಗೃತಿಗೊಳಿಸುವ ಪ್ರಜಾಧ್ವನಿ ಯಾತ್ರೆ ಈಗ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಪ್ರಾರಂಭಗೊಂಡಿದ್ದು, ದಾವಣಗೆರೆ ಜಿಲ್ಲೆಯಲ್ಲಿ ಮಾರ್ಚ್ 10 ಮತ್ತು 11 ರಂದು ನಡೆಯಲಿದೆ ಎಂದು ಕಾಂಗ್ರೆಸ್‍ ಜಿಲ್ಲಾ ಘಟಕದ ಅಧ್ಯಕ್ಷ  ಎಚ್. ಬಿ. ಮಂಜಪ್ಪ ತಿಳಿಸಿದ್ದಾರೆ. ಕಾರ್ಯಕ್ರಮದಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ, ಪ್ರಚಾರ ಸಮಿತಿ ರಾಜ್ಯಾಧ್ಯಕ್ಷರಾದ ಎಂ. ಬಿ.ಪಾಟೀಲ್, ಸತೀಶ್ ಜಾರಕಿಹೊಳಿ, ಸಲೀಂ ಅಹಮದ್ ಸೇರಿದಂತೆ ಮುಖಂಡರಾದ ಶಾಮನೂರು ಶಿವಶಂಕರಪ್ಪ, ಎಸ್ ಎಸ್ ಮಲ್ಲಿಕಾರ್ಜುನ್ ಹಾಗೂ ಈ ಕಾರ್ಯಕ್ರಮದ ಉಸ್ತುವಾರಿ ವಹಿಸಿರುವ … Read more

error: Content is protected !!