ಕಲ್ಲೇಶ್ವರ ರೈಸ್ ಮಿಲ್ ಹೆಸರು ಹೇಳಿದ್ದು ಮಾಲು ಸಮೇತ ಸಿಕ್ಕ ಆರೋಪಿಯೇ ಹೊರತು ಬಿಜೆಪಿಯಲ್ಲ: ವೀರೇಶ್ ಹನಗವಾಡಿ

ಸುದ್ದಿ360 ದಾವಣಗೆರೆ, ಜ.18: ಅಕ್ರಮ ವನ್ಯ ಜೀವಿ ಪತ್ತೆಗೆ ಸಂಬಂಧಿಸಿದಂತೆ  ಕಲ್ಲೇಶ್ವರ ರೈಸ್ ಮಿಲ್ ಹೆಸರು ಹೇಳಿದ್ದು ಮಾಲು ಸಮೇತ ಸಿಕ್ಕ ಆರೋಪಿಯೇ ಹೊರತು ಬಿಜೆಪಿಯವರಲ್ಲ ಎಂದು  ಬಿಜೆಪಿ ಜಿಲ್ಲಾಧ್ಯಕ್ಷ ವೀರೇಶ್ ಹನಗವಾಡಿ ವೀರೇಶ್ ಹನಗವಾಡಿ ಕಟುವಾಗಿ ಹೇಳಿದರು. ಜಿಲ್ಲಾ ವರದಿಗಾರರ ಕೂಟದಲ್ಲಿ ಪತ್ರಕರ್ತರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಅಮಾಯಕರಿಗೆ ಶಿಕ್ಷೆಯಾಗಬಾರದು. ತಪ್ಪಿತಸ್ಥರಿಗೆ ಆಗಬೇಕು ಎಂಬುದು ನಮ್ಮ ಹೋರಾಟ. ಬಿಜೆಪಿಯವರಿಗೆ ಮೆದುಳಿಲ್ಲ ಎಂಬ ಮಲ್ಲಿಕಾರ್ಜುನ್ ಹೇಳಿಕೆಗೆ ಪ್ರತಿಕ್ರಿಯಿಸಿ, ಮೆದುಳು ಜಾಸ್ತಿ ಇರುವುದಕ್ಕೆ ಕೃಷ್ಮಮೃಗ, ಜಿಂಕೆ, ಮುಳ್ಳು ಹಂದಿ … Read more

ಸ್ಯಾಮ್ ಸನ್ ಡಿಸ್ಟಿಲರಿಯಲ್ಲೇನು ನಂದಿನಿ ಹಾಲು ತಯಾರಿಸುತ್ತಿದ್ದರಾ!?

ದಾವಣಗೆರೆ ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಯಶವಂತರಾವ್ ಜಾಧವ್ ಪ್ರಶ್ನೆ ಸುದ್ದಿ360 ದಾವಣಗೆರೆ ಜ.18:  ನಾವು ಬುದ್ದಿಹೀನರೇ ಹಾಗಾಗಿಯೇ ನಾವು ವನ್ಯ  ಜೀವಿಗಳ ತಂಟೆಗೆ ಹೋಗಿಲ್ಲ. ಬುದ್ದಿವಂತರು ಅವುಗಳನ್ನು ತಮ್ಮ ಫಾರ್ಮ್ ಹೌಸ್‍ನಲ್ಲಿ ಇಟ್ಟುಕೊಂಡಿದ್ದರು. ಯಾವುದೇ ತಪ್ಪು ಮಾಡಿಲ್ಲ ಎಂದು ಹೇಳಿಕೊಳ್ಳುವವರು ಬುದ್ದಿವಂತಿಕೆಯಿಂದ ಕೋರ್ಟ್ ನಿಂದ ನಿರೀಕ್ಷಣಾ ಜಾಮೀನಿನ ಮೊರೆ ಹೋಗಿದ್ದಾರೆ ಎಂದು ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಯಶವಂತರಾವ್ ಜಾಧವ್ ಕುಟುಕಿದ್ದಾರೆ. ಜಿಲ್ಲಾ ವರದಿಗಾರರ ಕೂಟದಲ್ಲಿ ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವನ್ಯ ಜೀವಿ ಪತ್ತೆ … Read more

ನಾಳೆಯೇ ಚುನಾಣೆ ನಡೆದ್ರೂ ಕಾಂಗ್ರೆಸ್ ಅಧಿಕಾರಕ್ಕೆ ಬರೋದು ಗ್ಯಾರಂಟಿ: ಶಾಮನೂರು ಶಿವಶಂಕರಪ್ಪ

ಜ.19ಕ್ಕೆ ದಾವಣಗೆರೆಯಲ್ಲಿ ಪ್ರಜಾಧ್ವನಿ ಯಾತ್ರೆ ಸುದ್ದಿ360 ದಾವಣಗೆರೆ, ಜ.17: ರಾಜ್ಯದಲ್ಲಿ ನಾಳೆಯೇ ಚುನಾವಣೆ ನಡೆದರೂ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ. ಬಿಜೆಪಿ ದುರಾಡಳಿತದಿಂದ ರಾಜ್ಯದಲ್ಲಿ ಜನರು ಬೇಸತ್ತಿದ್ದಾರೆ. ಇದರಿಂದ ರಾಜ್ಯದಲ್ಲಿ ಕಾಂಗ್ರೆಸ್ ಗಾಳಿ ಬೀಸತೊಡಗಿದೆ ಎಂದು ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಹೇಳಿದರು. ಜ.19 ರಂದು ನಡೆಯುವ ಪ್ರಜಾಧ್ವನಿ ಬಸ್ ಯಾತ್ರೆ ಸಮಾರಂಭ ಪೂರ್ವ ಸಿದ್ಧತೆ ಸಭೆ ಬಳಿಕ  ನಗರದ ಹೈಸ್ಕೂಲ್ ಮೈದಾನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯ ಆಡಳಿತದಲ್ಲಿ ಕಮಿಷನ್ ದಂಧೆ ಜಾಸ್ತಿಯಾಗಿದೆ. ದಿನಕ್ಕೊಂದು … Read more

ಶೀಘ್ರದಲ್ಲೇ ಗಂಗಾಮತಸ್ತ ಸಮುದಾಯ ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ: ಸಿಎಂ ಬೊಮ್ಮಾಯಿ

ಸುದ್ದಿ360 ಹಾವೇರಿ (ರಾಣೀಬೆನ್ನೂರು), ಜ.15: ಶೀಘ್ರಲ್ಲಿಯೇ ಗಂಗಾಮತಸ್ತ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ  ಸೇರ್ಪಡೆಗೊಳಿಸಲು ಕ್ರಮಕೈಗೊಳ್ಳಲಾಗಿದೆ ಎಂದು  ಮುಖ್ಯಮಂತ್ರಿ  ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಶ್ರೀ ನಿಜಶರಣ ಅಂಬಿಗರ ಚೌಡಯ್ಯನವರ ಗುರುಪೀಠ (ರಿ) ವತಿಯಿಂದ ಸುಕ್ಷೇತ್ರ ನರಸೀಪುರದ  ಗುರುಪೀಠದಲ್ಲಿ ಆಯೋಜಿಸಿರುವ ಶ್ರೀ ನಿಜಶರಣ ಅಂಬಿಗರಚೌಡಯ್ಯನವರ 5ನೇ ಶರಣ ಸಂಸ್ಕøತಿ ಉತ್ಸವ , ಹಾಗೂ ಶ್ರೀ ನಿಜಶರಣ ಅಂಬಿಗರಚೌಡಯ್ಯನವರ 903ನೇ ಜಯಂತ್ಯುತ್ಸವ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು. ಈಗಾಗಲೇ ರಿಜಿಸ್ಟ್ರಾರ್ ಜನರಲ್ ಆಫ್ ಇಂಡಿಯಾ ಬಳಿ ಎಸ್.ಟಿ ಗೆ … Read more

ಟೀಕೆ ಟಿಪ್ಪಣಿಗೆ ಜಗ್ಗದೆ ಸಮಾಜಕ್ಕೆ ನ್ಯಾಯ ಒದಗಿಸಲು ಬದ್ಧ: ಸಿಎಂ ಬೊಮ್ಮಾಯಿ

ಸುದ್ದಿ360 ದಾವಣಗೆರೆ (ಹರಿಹರ) ಜ.14: ಟೀಕೆ ಮಾಡುವವರು ಮಾಡಲಿ ಅವುಗಳನ್ನೇ ಮೆಟ್ಟಿಲುಗಳನ್ನಾಗಿ ಮಾಡಿಕೊಂಡು ಸಮಾಜಕ್ಕೆ ನ್ಯಾಯ ಒದಗಿಸಲು ನಾನು ಸಿದ್ಧನಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಇಂದು ಪಂಚಮಸಾಲಿ ಜಗದ್ಗುರು ಪೀಠ, ಹರಿಹರ ಇವರ ವತಿಯಿಂದ ಆಯೋಜಿಸಿದ್ದ ಹರಜಾತ್ರಾ 2023 ಹಾಗೂ ರೈತ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿ, ಸಮುದಾಯದಲ್ಲಿ ಹೆಚ್ಚಿರುವ ರೈತಾಪಿ ವರ್ಗಕ್ಕೆ ಶಕ್ತಿಯನ್ನು ತುಂಬಬೇಕು. ಶಕ್ತಿ ತುಂಬಲು ಸಾಮಾಜಿಕ ನ್ಯಾಯ ನೀಡಬೇಕು. ನಾವು ಈ ವಿಷಯದಲ್ಲಿ ಟೀಕೆಟಿಪ್ಪಣಿಗಳಿಗೆ ಗಮನ ನೀಡದೆ ಸಾಮಾಜಿಕ ಬದ್ಧತೆಯಿಂದ … Read more

ಜನಪರ ಬಜೆಟ್ – ರಾಜ್ಯದಲ್ಲಿ 25 ನೂತನ ಜವಳಿ ಪಾರ್ಕ್ ಸ್ಥಾಪನೆಗೆ ಪ್ರಾಶಸ್ತ್ಯ: ಸಿಎಂ

ಸುದ್ದಿ360 ದಾವಣಗೆರೆ ಜ.14: ಹಣಕಾಸು ಪರಿಸ್ಥಿತಿ ವಿಶ್ಲೇಷಣೆ ಸಂಬಂಧ ಸಭೆ ನಡೆಸಲಾಗಿದ್ದು, ಇನ್ನೂ ಹಲವು ಸುತ್ತಿನ ಸಭೆ ನಡೆಸುವ ಅಗತ್ಯವಿದೆ. ಇನ್ನೆರಡು ದಿನದಲ್ಲಿ ಬಜೆಟ್‌ಗೆ ಸಂಬಂಧಿಸಿದ ಪೂರ್ವಭಾವಿ ಸಭೆಗಳನ್ನು ಆರಂಭಿಸಲಾಗುವುದು. ಫೆಬ್ರವರಿ ಎರಡನೇ ವಾರದಲ್ಲಿ ಜನಪರ ಬಜೆಟ್ ಮಂಡನೆಯಾಗಲಿದೆ ಎಂದು ಮುಖ್ಯಮಂತ್ರಿ ತಿಳಿಸಿದರು. ನಗರದ ಜಿಎಂಐಟಿ ಹೆಲಿಪ್ಯಾಡ್‌ನಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, 2022ರ ಡಿಸೆಂಬರ್‌ವರೆಗೆ ರಾಜ್ಯದಲ್ಲಿ ನಿರೀಕ್ಷೆ ಮೀರಿ ತೆರಿಗೆ ಸಂಗ್ರಹವಾಗಿದೆ. ವಾಣಿಜ್ಯ ತೆರಿಗೆ, ಅಬಕಾರಿ, ವಾಹನ ತೆರಿಗೆ, ಸ್ಟಾಂಪ್ ಡ್ಯೂಟಿ ಸಂಗ್ರಹ … Read more

ಚುನಾವಣಾ ಪ್ರೇರಿತ ಹೇಳಿಕೆಗಳಿಂದ ಕಾಂಗ್ರೆಸ್ ಜನರನ್ನು ಮರಳು ಮಾಡಲು ಹೊರಟಿದೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360 ದಾವಣಗೆರೆ ಜ.14: ಚುನಾವಣೆ ಸಮೀಪಿಸುತ್ತಿದ್ದಂತೆ ಹತ್ತಾರು ಚುನಾವಣಾ ಪ್ರೇರಿತ ಹೇಳಿಕೆಗಳು ಕಾಂಗ್ರೆಸ್ಸಿಗರಿಂದ ಬರುತ್ತಲೇ ಇರುತ್ತವೆ. ಇದು ಜನರಿಗೂ ತಿಳಿದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಹರಿಹರದ ಹರ ಜಾತ್ರೆ ಸಮಾರಂಭಕ್ಕೆ ತೆರಳುವ ಮುನ್ನ ನಗರದ ಜಿಎಂಐಟಿ ಹೆಲಿಪ್ಯಾಡ್‌ನಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಹತಾಶ ಮನಸ್ಥಿತಿಯಲ್ಲಿರುವ ಕಾಂಗ್ರೆಸಿಗರು, ಜನರನ್ನು ಮರುಳು ಮಾಡಲು ಹೊರಟಿದ್ದಾರೆ. ಕಾಂಗ್ರೆಸ್ನವರು ಕೇವಲ ಮಾತನಾಡುತ್ತಾರೆ. ಆದರೆ ನಮ್ಮ ಸರ್ಕಾರ ಅಭಿವೃದ್ಧಿ ಪರ ಕೆಲಸಗಳನ್ನು ಮಾಡಿ ತೋರಿಸುತ್ತಿದೆ ಎಂದರು. 200 ಯುನಿಟ್ … Read more

ಸಿದ್ದರಾಮಯ್ಯ ಹರಕೆಯ ಕುರಿಯಾಗಲಿದ್ದಾರೆ: ಎಚ್.ಡಿ.ಕೆ

ಸುದ್ದಿ360 ಕಲಬುರಗಿ ಜ.13: ಸಿದ್ಧರಾಮಯ್ಯನವರನ್ನು ಕೋಲಾರದಲ್ಲಿ ಕಣಕ್ಕಿಳಿಸುವ ಮೂಲಕ ಅವರ ಪಕ್ಷದವರೇ ಅವರನ್ನು ಹರಕೆಯ ಕುರಿಯನ್ನಾಗಿ ಮಾಡಲು ಹೊರಟಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಶುಕ್ರವಾರ ಅವರು ಜಿಲ್ಲೆಯ ಕಡಣಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸಿದ್ಧರಾಮಯ್ಯರಿಗೆ  ಕೋಲಾರ ಕ್ಷೇತ್ರ ಸೇಫ್ ಅಲ್ಲ. ಅವರಿಗೆ ಅಲ್ಲಿ  ನಿಲ್ಲುವಂತೆ ಯಾರು ಒತ್ತಡ ಹಾಕಿದ್ದಾರೆ ಎಂಬುದು ಗೊತ್ತಿಲ್ಲ. ನಾನು ಸ್ವತಃ ಕೋಲಾರದಲ್ಲಿ ಸುತ್ತಾಡಿ, ಅಲ್ಲಿಯ ಜನರ ಭಾವನೆ ಅರಿತುಕೊಂಡಿದ್ದೇನೆ. ಕೋಲಾರದಲ್ಲಿ ಕಾಂಗ್ರೆಸ್ ಪಕ್ಷಕ್ಕಾಗಲಿ ಅಥವಾ ನಾಯಕರಿಗಾಗಲಿ ಮತ ಪಡೆಯುವ ಶಕ್ತಿ … Read more

ಸಂಕ್ರಾಂತಿಯಂದು ಪಿಂಚಣಿ ಕ್ರಾಂತಿಗೆ ಮುಂದಾದ ಅನುದಾನಿತ ಶಾಲೆ ಕಾಲೇಜುಗಳ ನೌಕರರು

ಕುಟುಂಬ ಸಮೇತ ಕ್ರಾಂತಿಗಿಳಿದ ಪಿಂಚಣಿ ವಂಚಿತ ನೌಕರರು ಸುದ್ದಿ360 ದಾವಣಗೆರೆ ಜ.12: ನಾಡೆಲ್ಲ ಸಂಕ್ರಾಂತಿಯ ಸಡಗರಕ್ಕೆ ಸಜ್ಜಾಗುತ್ತಿದ್ದರೆ ಹತ್ತಿಪ್ಪತ್ತು ವರ್ಷಗಳಿಂದ ಸೇವೆ ಸಲ್ಲಿಸುತ್ತ ಬಂದಿರುವ ಅನುದಾನಿತ ಶಾಲೆ ಕಾಲೇಜುಗಳ ಪಿಂಚಣಿ ವಂಚಿತ ನೌಕರರು ತಮ್ಮ ಸೇವೆಗೆ ಜೀವನದ ಕೊನೆಯಘಟ್ಟದಲ್ಲಿ ಪಿಂಚಣಿಯ ಬೆಳ್ಳಿಗೆರೆ ಮೂಡಲಿ ಎಂಬ ಉದ್ದೇಶದಿಂದ ಕ್ರಾಂತಿಗೆ ಮುಂದಡಿ ಇಟ್ಟಿದ್ದಾರೆ. ಈ ಕುರಿತು ಇಂದು ಜಿಲ್ಲಾ ವರದಿಗಾರರ ಕೂಟದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಅನುದಾನಿತ ಶಾಲಾ ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಸಂಘದ ಜಿಲ್ಲಾ ಕಾರ್ಯದರ್ಶಿ … Read more

ನರ್ಸಿಂಗ್ ಮರು ಪರೀಕ್ಷೆಗೆ ವಿದ್ಯಾರ್ಥಿಗಳಿಂದ ವಿರೋಧ

ಸುದ್ದಿ360 ದಾವಣಗೆರೆ ಜ.12: ಕರ್ನಾಟಕ ಸ್ಟೇಟ್ ಡಿಪ್ಲೋಮ ಇನ್ ನರ್ಸಿಂಗ್ ಎಕ್ಸಾಮಿನೇಷನ್ ಬೋರ್ಡ್ ಕಳೆದ ನ.22ರಿಂದ 25ರವರೆಗೆ ನಡೆಸಿದ ಪರೀಕ್ಷೆಗಳ ಮರು ಪರೀಕ್ಷೆ ಮಾಡಲು ಮುಂದಾಗಿರುವುದನ್ನು ಖಂಡಿಸಿ ನಗರದ ನರ್ಸಿಂಗ್ ವಿದ್ಯಾರ್ಥಿಗಳು ಇಂದು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ನಗರದ ಜಯದೇವ ವೃತ್ತದಲ್ಲಿ ಜಮಾವಣೆಗೊಂಡ ನೂರಕ್ಕೂ ಹೆಚ್ಚು ನರ್ಸಿಂಗ್ ವಿದ್ಯಾರ್ಥಿಗಳು ಮರು ಪರೀಕ್ಷೆ ನಡೆಸುತ್ತಿರುವುದನ್ನು ಖಂಡಿಸಿ ಘೋಷಣೆಗಳನ್ನು ಕೂಗಿದರು. ಈ ಸಂದರ್ಭದಲ್ಲಿ ಮಾತನಾಡಿದ  ನರ್ಸಿಂಗ್ ವಿದ್ಯಾರ್ಥಿ ಶಿವಕುಮಾರಸ್ವಾಮಿ “ಕಳೆದ ನವೆಂಬರ್ ನಲ್ಲಿ ನಡೆದಿರುವ ಮೊದಲನೇ ಮತ್ತು … Read more

error: Content is protected !!