ಎಸಿಬಿ ರದ್ದು: ಬಲಗೊಂಡ ಲೋಕಾಯುಕ್ತ

ಸುದ್ದಿ360 ಬೆಂಗಳೂರು, ಸೆ.09:ಲೋಕಾಯುಕ್ತ ಪೊಲೀಸ್ ವಿಭಾಗಕ್ಕೆ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಈ ಹಿಂದೆ ನೀಡಿದ್ದ ಅಧಿಕಾರಗಳನ್ನು ಮರುಸ್ಥಾಪಿಸಿ ರಾಜ್ಯ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದ್ದು, ಹೈಕೋರ್ಟ್ ಆದೇಶದಂತೆ ಭ್ರಷ್ಟಾಚಾರ ನಿಗ್ರಹ ದಳವನ್ನು (ಎಸಿಬಿ) ರದ್ದುಗೊಳಿಸಲಾಗಿದೆ. ಎಸಿಬಿಯಲ್ಲಿ ತನಿಖಾ ಹಂತದಲ್ಲಿರುವ ಪ್ರಕರಣಗಳು, ಬಾಕಿ ಉಳಿದಿರುವ ವಿಚಾರಣೆಗಳು, ಶಿಸ್ತುಕ್ರಮಕ್ಕೆ ಸಂಬಂಧಿಸಿದ ಪ್ರಕರಣಗಳು ಮತ್ತು ಖಾಸಗಿ ದೂರುಗಳಿಗೆ ಸಂಬಂಧಿಸಿದ ಎಲ್ಲ ಪ್ರಕರಣಗಳನ್ನು ಲೋಕಾಯುಕ್ತಕ್ಕೆ ವರ್ಗಾಯಿಸುವಂತೆ ಆದೇಶದಲ್ಲಿ ತಿಳಿಸಲಾಗಿದೆ.

ಸಿದ್ಧರಾಮೋತ್ಸವ ಬಳಿಕ ಬೆಣ್ಣೆನಗರಿಯಲ್ಲಿ ಮತ್ತೊಂದು ಬೃಹತ್ ಸಮಾವೇಶ

ಎಸ್‌ಎಸ್‌ಎಂ 55  ಅದ್ದೂರಿ ಕಾರ್ಯಕ್ರಮಕ್ಕೆ ಭೂಮಿಪೂಜೆ ಸುದ್ದಿ360 ದಾವಣಗೆರೆ, ಸೆ.09: ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನರವರ 55ನೇ ಜನ್ಮದಿನಾಚರಣೆ ಇದೇ ತಿಂಗಳ 22 ರಂದು ನಡೆಯಲಿದ್ದು, ಜನ್ಮದಿನಾಚರಣೆ ಅಂಗವಾಗಿ ನಗರದ ಎಸ್‌ಎಸ್ ಲೇಔಟ್ ಬಿ ಬ್ಲಾಕ್‌ನಲ್ಲಿರುವ ಬಾಪೂಜಿ ಇನ್ಸ್ಟಿಟ್ಯೂಟ್ ಆಫ್ ಹೈಟೆಕ್ ಎಜುಕೇಷನ್ (ಎಂಬಿಎ ಕಾಲೇಜು) ಮೈದಾನದಲ್ಲಿ ಶುಕ್ರವಾರ ಎಸ್‌ಎಸ್‌ಎಂ 55ನೇ ಜನ್ಮದಿನ ಸಮಾರಂಭದ ವೇದಿಕೆ ನಿರ್ಮಾಣಕ್ಕೆ ಇಂದು ಭೂಮಿ ಪೂಜೆ ನೆರವೇರಿಸಲಾಯಿತು. ಎಸ್‌ಎಸ್‌ಎಂ ಅಭಿಮಾನಿ ಬಳಗ ಈ ಕಾರ್ಯಕ್ರಮವನ್ನು ಆಯೋಜಿಸುತ್ತಿದ್ದು, ಬೆಣ್ಣೆನಗರಿಯಲ್ಲಿ ಯಶಸ್ವಿಯಾಗಿ ಮತ್ತು ಅದ್ದೂರಿಯಾಗಿ … Read more

ಆ್ಯಂಥೆ ಪರೀಕ್ಷೆ ನೋಂದಣಿಗೆ ಚಾಲನೆ – ಇಬ್ಬರಿಗೆ ನಾಸಾಗೆ ಭೇಟಿ ನೀಡುವ ಅವಕಾಶ !

ಸುದ್ದಿ360 ದಾವಣಗೆರೆ, ಸೆ. 06: ನಗರದ ಅಕ್ಕಮಹಾದೇವಿ ರಸ್ತೆಯ ಎವಿಕೆ ಕಾಲೇಜು ಎದುರಿರುವ ಆಕಾಶ್ ಬೈಜೂಸ್ ಶಾಖೆಯಲ್ಲಿ ಮಂಗಳವಾರ ಆಕಾಶ್ ನ್ಯಾಷನಲ್ ಟ್ಯಾಲೆಂಟ್ ಹಂಟ್ ಪರೀಕ್ಷೆ-2022ರ ದಿನಾಂಕಗಳನ್ನು ಘೋಷಿಸಿ, ವಿದ್ಯಾರ್ಥಿಗಳ ನೋಂದಣಿ ಪ್ರಕ್ರಿಯೆಗೆ ಇಂದು ಚಾಲನೆ ನೀಡಲಾಯಿತು. ಆಕಾಶ್ ಬೈಜೂಸ್ ಸಂಸ್ಥೆ ಉಪ ನಿರ್ದೇಶಕ ಸುಧೀರ್ ಕುಮಾರ್ ಮಾತನಾಡಿ, ಆಕಾಶ್ ನ್ಯಾಷನಲ್ ಟ್ಯಾಲೆಂಟ್ ಹಂಟ್ ಎಕ್ಸಾಮ್ (ಆ್ಯಂಥೆ) ರಾಷ್ಟ್ರಮಟ್ಟದ ಪ್ರತಿಭಾನ್ವೇಷಣೆ ಪರೀಕ್ಷೆಯಾಗಿದೆ. ಇದು ಆನ್‌ಲೈನ್ ಮತ್ತು ಆಫ್‌ಲೈನ್ ಮಾದರಿಯಲ್ಲಿ ನಡೆಯಲಿದ್ದು, ನ.5ರಿಂದ ನ.13ರವರೆಗೆ ಬೆಳಗ್ಗೆ 10ರಿಂದ ಸಂಜೆ … Read more

ಶಸ್ತ್ರಚಿಕಿತ್ಸೆಯಿಂದ ತೆಗೆದ ಪತಿಯ ಕಾಲನ್ನು ಮಣ್ಣು ಮಾಡಲು ಪತ್ನಿಯ ಕೈಗೆ ಕೊಟ್ಟರು !!!

ಸುದ್ದಿ360 ಮಂಡ್ಯ ಸೆ.06: ಗ್ಯಾಂಗ್ರೀನ್ ಹಿನ್ನೆಲೆಯಲ್ಲಿ ಶಸ್ತ್ರಚಿಕಿತ್ಸೆ ಮಾಡಿ ಕತ್ತರಿಸಿದ್ದ ರೋಗಿಯ ಕಾಲನ್ನು ಮಣ್ಣು ಮಾಡುವಂತೆ ಪತ್ನಿ ಕೈಗೆ ಕೊಟ್ಟಿರುವ ಘಟನೆ ನಗರದ ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಮಿಮ್ಸ್)ಯಲ್ಲಿ ಇಂದು ನಡೆದಿದೆ. ತಾಲೂಕಿನ ಕೀಲಾರ ಗ್ರಾಮದ ಭಾಗ್ಯಮ್ಮ ಎಂಬುವರ ಪತಿ ಪ್ರಕಾಶ್‌ ಅವರ ಕಾಲಿಗೆ ಗ್ಯಾಂಗ್ರೀನ್ ಆಗಿತ್ತು. ಈ ಹಿನ್ನೆಲೆಯಲ್ಲಿ ಮಂಗಳವಾರ ಮಿಮ್ಸ್ ನಲ್ಲಿ‌ ಶಸ್ತ್ರಚಿಕಿತ್ಸೆ ನಡೆದಿದೆ. ಆತನ ಕಾಲನ್ನು ಕತ್ತರಿಸಿ ಕವರ್‌ನಲ್ಲಿ ಸುತ್ತಿ ಎಲ್ಲಾದರೂ ಮಣ್ಣು ಮಾಡುವಂತೆ ಪತ್ನಿಯ ಕೈಗೆ ಕೊಟ್ಟಿದ್ದಾರೆ. ಇದರಿಂದ ದಿಗ್ಬಮ್ರೆಗೊಂಡ ಭಾಗ್ಯಮ್ಮ … Read more

ವೈದ್ಯಕೀಯ ಶಿಕ್ಷಣಕ್ಕಾಗಿ ಅರ್ಜಿ ಆಹ್ವಾನ

ಸುದ್ದಿ360 ಶಿವಮೊಗ್ಗ, ಸೆ. 06: 2022-23ನೇ ಸಾಲಿನ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಶಿಕ್ಷಣಕ್ಕಾಗಿ ನೀಟ್ ಅರ್ಹತಾ ಪರೀಕ್ಷೆಯಲ್ಲಿ ಅರ್ಹತೆಯನ್ನು ಪಡೆದ ಮಾಜಿ ಸೈನಿಕರು ಮತ್ತು ಮಾಜಿ ಸೈನಿಕರ ಅವಲಂಬಿತರ ಮಕ್ಕಳು ಕೇಂದ್ರೀಯ ಸೈನಿಕ ಮಂಡಳಿ ಮುಖಾಂತರ ವಿತರಿಸಲಾಗುವ ಸೀಟುಗಳನ್ನು ಪಡೆಯಲಿಚ್ಚಿಸುವವರು, ನೀಟ್ ಅರ್ಹತಾ ಪರೀಕ್ಷೆಯ ಫಲಿತಾಂಶದ 20 ದಿನಗಳೊಳಗಾಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಇವರಿಂದ ಮಾಜಿ ಸೈನಿಕ ಅರ್ಹತಾ ಪ್ರಮಾಣ ಪತ್ರವನ್ನು ಪಡೆದು, ಇಲಾಖೆಯ ನಿರ್ದೇಶನಾಲಯದಿಂದ ಮೇಲು ರುಜು ಪಡೆದ ನಂತರ … Read more

ಮಳೆ ಯಾವ ಪಕ್ಷವನ್ನೂ ನೋಡಿ ಬರೋಲ್ಲ – ಪ್ರವಾಹದ ವಿಚಾರದಲ್ಲಿ ರಾಜಕೀಯ ಬೇಡ: ಬಸವರಾಜ ಬೊಮ್ಮಾಯಿ

shimoga-riots-were-the-result-of-the-governments-appeasement-policy-basavaraj-bommai

ಸುದ್ದಿ360 ಬೆಂಗಳೂರು, ಸೆ.06: ಮಳೆ ಪ್ರವಾಹದ ವಿಚಾರದಲ್ಲಿ ರಾಜಕೀಯ ಬೇಡ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಮಳೆ, ಪ್ರವಾಹದ ವಿಷಯದಲ್ಲಿ ರಾಜಕೀಯವಾಗುತ್ತಿರುವುದು ದುರ್ದೈವದ ಸಂಗತಿ. ಮಳೆ ತಂದಿರುವ ಸಂಕಷ್ಟದ ಸಂದರ್ಭದಲ್ಲಿ ಎಲ್ಲರೂ ಯುದ್ಧೋಪಾದಿಯಲ್ಲಿ  ಒಗ್ಗಟ್ಟಿನಿಂದ ಕೆಲಸ ಮಾಡಬೇಕು. ಮಳೆ ಯಾವ ಪಕ್ಷವನ್ನೂ ನೋಡಿ ಬರುವುದಿಲ್ಲ. ಇಡೀ ರಾಜ್ಯದಲ್ಲಿ ಎಲ್ಲ ಕೆರೆಗಳೂ ತುಂಬಿದ್ದು, ದಾಖಲೆಯ ಮಳೆಯಾಗಿದೆ. ಚಿಕ್ಕಬಳ್ಳಾಪುರ ಹಾಗೂ ದೊಡ್ಡಬಳ್ಳಾಪುರದಲ್ಲಿ ಹೆಚ್ಚು ಮಳೆಯಾಗಿದೆ. ಬೆಂಗಳೂರಿನಲ್ಲಿ ಕೆರೆಗಳೆಲ್ಲಾ ತುಂಬಿ ಹರಿಯುತ್ತಿದೆ. ಜಲಪ್ರವಾಹದ … Read more

ಬೆಂಗಳೂರಿನ ಮಳೆ ಅವಘಡಕ್ಕೆ ಎಲ್ಲ ಪಕ್ಷದವರೂ ಪಾಲುದಾರರೇ . . . ದಾವಣಗೆರೆಯಲ್ಲಿ ಬಿ.ಸಿ. ಪಾಟೀಲ್ ಹೇಳಿಕೆ

ಸುದ್ದಿ360 ದಾವಣಗೆರೆ, ಸೆ. 06: ಬೆಂಗಳೂರಿನಲ್ಲಿ ಆಗಿರುವ ಮಳೆ ಅವಘಡಕ್ಕೆ ಯಾರನ್ನು ದೂಷಿಸುವುದು ಸರಿಯಲ್ಲ.  ಅವರು ಇವರೆನ್ನದೆ ಎಲ್ಲರೂ ಪ್ರಾಕೃತಿಕ ವಿಕೋಪಕ್ಕೆ ಕಾರಣರಾಗಿದ್ದಾರೆ ಎಂದು ಕೃಷಿ ಸಚಿವ ಬಿ. ಸಿ. ಪಾಟೀಲ್ ಹೇಳಿದರು. ದಾವಣಗೆರೆಯಲ್ಲಿ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬೆಂಗಳೂರಿನಲ್ಲಿ ಆಗಿರುವ ಮಳೆ ಅವಘಡಕ್ಕೆ ಯಾವುದೇ ಪಕ್ಷವನ್ನು ದೂಷಿಸುವಂತಹದ್ದಲ್ಲ. ಕೆಲವು ಸಂದರ್ಭಗಳಲ್ಲಿ ಸರಿಯಾದ ರೀತಿಯಲ್ಲಿ ಕಾಲುವೆ ವ್ಯವಸ್ಥೆಯನ್ನು ಮಾಡಿರದೇ ಇರುವುದು. ಟೌನ್ ಪ್ಲಾನಿಂಗ್ ಸಂದರ್ಭದಲ್ಲಿ ಬೇಕಾಬಿಟ್ಟಿ ಒಪ್ಪಿಗೆ ಕೊಟ್ಟಿರುವುದು ಸೇರಿದಂತೆ. ಬೆಂಗಳೂರು ಸಂಪೂರ್ಣ … Read more

12ನೇ ತಾರೀಖಿನೊಳಗೆ ನೆರೆ ಪರಿಹಾರ ಫಲಾನುಭವಿಗಳ ಖಾತೆಗೆ: ಕೃಷಿ ಸಚಿವ ಬಿ ಸಿ ಪಾಟೀಲ್

18 ಕೋಟಿ ವೆಚ್ಚದಲ್ಲಿ ಶೀಥಿಲೀಕರಣ ಘಟಕ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ಸುದ್ದಿ360 ದಾವಣಗೆರೆ, ಸೆ. 06: ರೈತರು ತಾವು ಬೆಳೆದಂತಹ ಬೆಳೆಗೆ  ಕಟಾವು ಸಂದರ್ಭದಲ್ಲಿ ಉತ್ತಮ ಬೆಲೆ ದೊರಕದೆ ಕಂಗಾಲಾಗುವುದನ್ನು ತಪ್ಪಿಸಲು ಶಿಥೀಲೀಕರಣ ಘಟಕ ಸಹಕಾರಿಯಾಗಲಿದೆ ಎಂದು  ಕೃಷಿ ಸಚಿವ ಬಿ ಸಿ ಪಾಟೀಲ್ ಹೇಳಿದರು. ನಗರದ ಲೋಕಿಕೆರೆ ರಸ್ತೆಯ ಕೈಗಾರಿಕಾ ಪ್ರದೇಶದಲ್ಲಿ ನಬಾರ್ಡ್ ಆರ್ ಐ ಡಿ ಎಫ್ 27ರಲ್ಲಿ 9 ಕೋಟಿ 50 ಲಕ್ಷ ರೂ. ವೆಚ್ಚದಲ್ಲಿ ಶಿಥಿಲೀಕರಣ ಘಟಕ, 4 ಕೋಟಿ … Read more

ದಾವಣಗೆರೆ: ಕನಿಷ್ಠ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಯುಬಿಡಿಟಿ ಕಾಲೇಜಿನ ಎದುರು ಪ್ರತಿಭಟನೆ

ಸುದ್ದಿ360 ದಾವಣಗೆರೆ, ಸೆ.06: ಕಳೆದ 15 ವರ್ಷಗಳಿಂದ ದುಡಿಯುತ್ತಿರುವ ನೌಕರರಿಗೆ ಸರಕಾರದ ಆದೇಶದಂತೆ ಕನಿಷ್ಠ ವೇತನ ಜಾರಿಗೊಳಿಸಿಲ್ಲ. ಹಲವು ವರ್ಷಗಳಿಂದ ಮಾಸಿಕ ವೇತನವನ್ನು ಸರಿಯಾದ ಸಮಯಕ್ಕೆ ನೀಡುತ್ತಿಲ್ಲ ಎಂದು ಆರೋಪಿಸಿ, ನಗರದ ಡೆಂಟಲ್ ಕಾಲೇಜು ರಸ್ತೆಯಲ್ಲಿರುವ ಯುಬಿಡಿಟಿ ಕಾಲೇಜಿನ ಎದುರು ಮಂಗಳವಾರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕಾಲೇಜಿನ ಸಿ ಮತ್ತು ಡಿ ದರ್ಜೆ ಹೊರಗುತ್ತಿಗೆ ನೌಕರರು ಎಐಯುಟಿಯುಸಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ಈ ವೇಳೆ ಮಾತನಾಡಿದ ಎಐಯುಟಿಯುಸಿ ಜಿಲ್ಲಾಧ್ಯಕ್ಷ ಮಂಜುನಾಥ್ ಕೈದಾಳೆ, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ … Read more

ಪ್ರತಿ ತಾಲೂಕಲ್ಲಿ ಪತ್ರಕರ್ತ ಭವನ ನಿರ್ಮಾಣ ಗುರಿ – ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಹೇಳಿಕೆ

ಸುದ್ದಿ360 ದಾವಣಗೆರೆ: ರಾಜ್ಯದ ಪ್ರತಿ ತಾಲೂಕು ಕೇಂದ್ರಗಳಲ್ಲಿ ಪತ್ರಕರ್ತರ ಭವನ ನಿರ್ಮಾಣ ಮಾಡಬೇಕೆಂಬ ಮಹತ್ವಾಕಾಂಕ್ಷೆಯ ಗುರಿ ಸಂಘಕ್ಕಿದೆ. ಸದ್ಯ 120 ಕಡೆಗಳಲ್ಲಿ ಭವನಗಳಿದ್ದು, ಉಳಿದೆಡೆಯೂ ಭವನ ಸ್ಥಾಪಿಸುವ ಉದ್ದೇಶವಿದೆ ಎಂದು ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಹೇಳಿದರು. ನಗರದ ವರದಿಗಾರರ ಕೂಟದಲ್ಲಿ ಭಾನುವಾರ, ಜಿಲ್ಲಾ ವರದಿಗಾರರ ಕೂಟ ಹಾಗೂ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಸಂಘಟನೆ ಬಲವಾಗಿದ್ದರೆ ಏನನ್ನಾದರೂ ಸಾಧಿಸಬಹುದು ಎಂಬುದಕ್ಕೆ ಉದಾಹರಣೆಯಾಗಿ ಕಾರ್ಯನಿರತ ಪತ್ರಕರ್ತರ … Read more

error: Content is protected !!