ಬಡಾವಣೆಗಳು ಜಲಾವೃತ: ಕಾಂಗ್ರೆಸ್ ಸರ್ಕಾರದ ದುರಾಡಳಿತದ ಫಲ – ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360 ಬೆಂಗಳೂರು, ಸೆ.06: ಹಿಂದೆ ಇದ್ದ ಕಾಂಗ್ರೆಸ್ ಸರ್ಕಾರದ ಯೋಜನಾ ರಹಿತ ಹಾಗೂ ದುರಾಡಳಿತದ ಫಲವಾಗಿ ಈ ಬಡಾವಣೆಗಳು ಜಲಾವೃತಗೊಳ್ಳುವ ಸ್ಥಿತಿ  ಎದುರಿಸಬೇಕಾಗಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ  ಮಾತನಾಡಿ, ಎಗ್ಗಿಲ್ಲದೆ ಕೆರೆಗಳಲ್ಲಿ, ಕೆರೆ ಬಂಡ್ ಹಾಗೂ ಬಫರ್ ವಲಯಗಳಲ್ಲಿ ಅನುಮತಿಗಳನ್ನು ನೀಡಿದ್ದಾರೆ. ಈ ಪರಿಸ್ಥಿತಿಗೆ ಕಾಂಗ್ರೆಸ್ ಕಾರಣ. ಕೆರೆಗಳ ನಿರ್ವಹಣೆಯ ಬಗ್ಗೆ ಅವರು ಯೋಚಿಸಿಯೂ ಇಲ್ಲ. ನಾನು ಇದನ್ನು ಸವಾಲಾಗಿ ಸ್ವೀಕರಿಸಿದ್ದು 1500 ಕೋಟಿ … Read more

ಕೆರೆಗಳಿಗೆ  ಸ್ಲೂಯೀಸ್ ಗೇಟ್ ಅಳವಡಿಸಲು ತೀರ್ಮಾನ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360 ಬೆಂಗಳೂರು, ಸೆ.01: ಕೆರೆಗಳ  ಒತ್ತುವರಿ ತೆರವುಗೊಳಿಸಿ  ಬೊಮ್ಮನಹಳ್ಳಿ, ಮಹದೇವಪುರ, ಕೆ.ಆರ್.ಪುರಂ ಅಥವಾ ಎತ್ತರದ ಪ್ರದೇಶದಲ್ಲಿ ಅತಿ ಹೆಚ್ಚು ಕೆರೆಗಳಿದ್ದು, ಒಂದಕ್ಕೊಂದು  ಹೊಂದಿಕೊಂಡಿರುವ ಕೆರೆಗಳಿಗೆ  ಸ್ಲೂಯೀಸ್ ಗೇಟ್ ಗಳನ್ನು ಅಳವಡಿಸಲು  ತೀರ್ಮಾನಿಸಲಾಗಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ನಗರದಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಿದ ನಂತರ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ಮಳೆ ನೀರು ಚರಂಡಿಗಳ ನಿರ್ವಹಣೆಗೆ  ಕೈಪಿಡಿ ತೆರೆವುಗೊಳಿಸುವ ಕಾರ್ಯ ನಿರಂತರವಾಗಿ ಆಗಬೇಕು.  ತಗ್ಗು ಪ್ರದೇಶದಲ್ಲಿ ನೀರು … Read more

ಮುರುಘಾ ಶರಣರ ಬಂಧನ – ಪ್ರತಿಭಟನೆಗೆ ಮುಂದಾದ ಅಭಿಮಾನಿಗಳು

ಸುದ್ದಿ360 ಚಿತ್ರದುರ್ಗ, ಸೆ.01: ಪ್ರೌಢಶಾಲೆಯ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಮುರುಘಾ ಮಠದ ಡಾ. ಶಿವಮೂರ್ತಿ ಮುರುಘಾ ಶರಣರನ್ನು ಗುರುವಾರ ರಾತ್ರಿ 10 ಗಂಟೆ ವೇಳೆಗೆ  ಮುರುಘಾ ಮಠದಲ್ಲಿಯೇ ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ. ಮುರುಘಾ ಶರಣರನ್ನು ಬಂಧಿಸಿ, ವಿಚಾರಣೆಗೆ ಒಳಪಡಿಸಲಾಗಿದೆ. ವೈದ್ಯಕೀಯ ತಪಾಸಣೆಗಾಗಿ ಅವರನ್ನು ಜಿಲ್ಲಾ ಆಸ್ಪತ್ರೆಯ ನೂತನ ಕಟ್ಟಡಕ್ಕೆ ಕರೆದೊಯ್ಯಲು ಸಿದ್ಧತೆ ನಡೆದಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ್ ತಿಳಿಸಿದ್ದಾರೆ. ಭಾರಿ ಸಂಖ್ಯೆಯಲ್ಲಿ ಮುರುಘಾ ಮಠಕ್ಕೆ ಬಂದಿದ್ದ ಪೊಲೀಸ್ ತನಿಖಾ ತಂಡ, … Read more

ವದಂತಿಗಳಿಗೆ ಕಿವಿಗೊಡಬೇಡಿ – ಪಲಾಯನವಾದವೇ ಇಲ್ಲ- ನೆಲದ ಕಾನೂನು ಗೌರವಿಸುತ್ತೇವೆ: ಮುರುಘಾಶ್ರೀ

ಸುದ್ದಿ360 ಚಿತ್ರದುರ್ಗ, ಆ.29: ನಾವು ಪಲಾಯನ ಮಾಡುವ ಪ್ರಶ್ನೆಯೇ ಇಲ್ಲ. ನೆಲದ ಕಾನೂನಿಗೆ ಗೌರವಿಸಿ ಸಹಕಾರ ನೀಡುವುದಾಗಿ ಮುರುಘಾ ಶ್ರೀಗಳು ಹೇಳಿದ್ದಾರೆ. ಶ್ರೀಗಳು ಬಂಧನಕ್ಕೆ ಒಳಗಾಗಿದ್ದಾರೆ ಎಂಬ ವದಂತಿಗಳ ಬೆನ್ನೆಲ್ಲೇ ಶ್ರೀಗಳು ಇಂದು ಮಧ್ಯಾಹ್ನ 1 ಗಂಟೆ ವೇಳೆಗೆ ಮಠಕ್ಕೆ ಹಿಂದಿರುಗಿದ್ದಾರೆ. ಅವರು ಹಾವೇರಿಯಿಂದ ಬಿಗಿ ಪೊಲೀಸ್ ಭದ್ರೆತೆಯಲ್ಲಿ ಮಠಕ್ಕೆ ಹಿಂತಿರುಗಿದ ನಂತರ ಮಾತನಾಡಿ, ಭಕ್ತರು ಯಾವುದೇ ರೀತಿಯ ಗಾಳಿ ಸುದ್ದಿಗೆ ಕಿವಿಗೊಡದೇ ಧೈರ್ಯ ಹಾಗೂ ಶಾಂತ ರೀತಿಯಿಂದ  ಇರುವಂತೆ ಮನವಿ ಮಾಡಿದ್ದಾರೆ. ನಮ್ಮ ವಿರುದ್ಧ ಪಿತೂರಿ … Read more

ಸಮಗ್ರ ಕ್ಯಾನ್ಸರ್ ಚಿಕಿತ್ಸೆ ಈಗ ದಾವಣಗೆರೆಯಲ್ಲಿಯೇ ಲಭ್ಯ

ಸುದ್ದಿ360 ದಾವಣಗೆರೆ, ಆ.27: ವಿಶ್ವದಲ್ಲೇ ಅತ್ಯುತ್ತಮವಾಗಿರುವ ರೆಡಿಯೋಥೆರಪಿ ಚಿಕಿತ್ಸೆ ಈಗ ಮಧ್ಯ ಕರ್ನಾಟಕದಲ್ಲಿ ಲಭ್ಯವಿರುವುದಾಗಿ  ದಾವಣಗೆರೆಯ ವಿಶ್ವಾರಾಧ್ಯ ಕ್ಯಾನ್ಸರ್ ಆಸ್ಪತ್ರೆಯ ಕನ್ಸಲ್ಟಂಟ್ ಹೆಡ್ ಡಾ. ಜಗದೀಶ ತುಬಚಿ ಹೇಳಿದರು. ನಗರ ಹೊರವಲಯದ ಬಾಡಾ ಕ್ರಾಸ್ ಬಳಿ ಇರುವ ವಿಶ್ವಾರಾಧ್ಯ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ನೂತನ ಯಂತ್ರ ಹಾಗೂ ಅತ್ಯಾಧುನಿಕ ಚಿಕಿತ್ಸಾ ಸೌಲಭ್ಯಗಳ ಕುರಿತು ಮಾಹಿತಿ ನೀಡಿದ ಅವರು, ಈ ಮೊದಲು ಕ್ಯಾನ್ಸರ್ ರೆಡಿಯೋಥೆರಪಿ ಚಿಕಿತ್ಸೆ ಪಡೆಯಲು ರಾಜ್ಯದ ಜನ ಬೆಂಗಳೂರು, ಚೆನ್ನೈ, ಹೈದರಾಬಾದ್‌ಗೆ ಹೋಗಬೇಕಿತ್ತು. … Read more

ಮುರುಘಾ ಶ್ರೀಗಳ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ: ಫೋಕ್ಸೊ ಕೇಸ್ ದಾಖಲು – ಷಡ್ಯಂತ್ರ?

ಸುದ್ದಿ360 ಚಿತ್ರದುರ್ಗ, ಆ.27: ಚಿತ್ರದುರ್ಗದ ಪ್ರತಿಷ್ಠಿತ ಮುರುಘಾ ಮಠದ ಪೀಠಾಧಿಪತಿ ಶ್ರೀ ಮುರುಘಾ ಶರಣರು ಸೇರಿದಂತೆ ಐದು ಜನರ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ರಾಜ್ಯದಲ್ಲಿ ಸಂಚಲನ ಮೂಡಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಫೋಕ್ಸೋ ಕಾಯಿದೆ ಅಡಿಯಲ್ಲಿ ದೂರು ದಾಖಲಾಗಿದ್ದು, ಮೈಸೂರು ಒಡನಾಡಿ ಸಂಸ್ಥೆ ಮಾಡಿದ್ದ ಆರೋಪದ ಹಿನ್ನೆಲೆಯಲ್ಲಿ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯು ಮೈಸೂರಿನ ನಜರಾಬಾದ್ ಠಾಣೆಯಲ್ಲಿ ದೂರು ದಾಖಲಿಸಿದೆ. ಮಠವೇ ನಡೆಸುತ್ತಿರುವ ಪ್ರೌಢಶಾಲೆಯ ಹಾಸ್ಟೆಲ್‌ನಲ್ಲಿರುವ ವಿದ್ಯಾರ್ಥಿನಿಯರ ಮೇಲೆ ಸ್ವಾಮೀಜಿ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂಬ ಆರೋಪವಿದ್ದು, … Read more

ಅಪರಾಧಿಗಳಿಗೆ ಸಿಂಹಸ್ವಪ್ನವಾಗಿದ್ದ ‘ತುಂಗಾ’ ಇನ್ನು ನೆನಪು ಮಾತ್ರ – ಸರಕಾರಿ ಗೌರವದೊಂದಿಗೆ ವಿದಾಯ

650 ಪ್ರಕರಣಗಳಲ್ಲಿ ಆರೋಪಿಗಳ ಪತ್ತೆಗೆ ಹಾಜರಾಗಿದ್ದ ‘ತುಂಗಾ’ ಸುದ್ದಿ 360, ದಾವಣಗೆರೆ ಆ.26: ಜಿಲ್ಲಾ ಪೊಲೀಸ್ ಇಲಾಖೆಗೆ ಇಂದು ತುಂಬಲಾರದ ನಷ್ಟ ಎಂದರೆ ತಪ್ಪಾಗದು. ಪೊಲೀಸ್ ಕುಟುಂಬದ ಕಣ್ಮಣಿ, ಅಧಿಕಾರಿಗಳು, ಸಿಬ್ಬಂದಿಯ ಅಚ್ಚುಮೆಚ್ಚಿನ ಶ್ವಾನ ‘ತುಂಗಾ’ ಇಂದು ಶುಕ್ರವಾರ ಮಧ್ಯಾಹ್ನ ಕೊನೆಯುಸಿರೆಳೆದಿದ್ದಾಳೆ. ಪೊಲೀಸ್ ಇಲಾಖೆಯ ಅಪರಾಧ ಪತ್ತೆ ದಳದಲ್ಲಿ ಶಿಸ್ತಿನ ಸಿಪಾಯಿಯಂತೆ ಸೇವೆ ಸಲ್ಲಿಸಿರುವ ತುಂಗಾ (ಡಾಬರ್‌ಮನ್ ತಳಿಯ ಶ್ವಾನ), ಹತ್ತು ವರ್ಷಗಳಿಗೂ ಹೆಚ್ಚು ಕಾಲ ತನ್ನದೇ ಆದ ಸೇವೆ ಸಲ್ಲಿಸಿ ಇಲಾಖೆಯ ಮೆಚ್ಚುಗೆಗೆ ಪಾತ್ರವಾಗುವ ಜೊತೆಗೆ … Read more

ಪರಿಸರ ಸ್ನೇಹಿ ಗಣಪತಿ ಮಾರಾಟ  ಪ್ರತಿಷ್ಠಾಪನೆ – ನಿಯಮ ಉಲ್ಲಂಘಿಸಿದರೆ ದಂಡ ಶತಸಿದ್ಧ – ಪರಿಸರ ಕಾಳಜಿಗೆ ಮನವಿ

ಸುದ್ದಿ360 ದಾವಣಗೆರೆ, ಆ.26:  ಗಣೇಶ ಚತುರ್ಥಿಯನ್ನು ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪರಿಸರ ಸ್ನೇಹಿಯಾಗಿ ಆಚರಿಸಲು ಸರ್ಕಾರದ ನಿರ್ದೇಶನವಿದ್ದು, ಗಣೇಶ ಮೂರ್ತಿ ತಯಾರಕರು ಹಾಗೂ ಸಾರ್ವಜನಿಕರು ಆಗಸ್ಟ್ 30 ರಂದು ಆಚರಿಸಲಿರುವ ಗಣೇಶ ಚತುರ್ಥಿಯನ್ನು ಈ ಕೆಳಕಂಡ ಮಾರ್ಗಸೂಚಿಗಳನ್ನು ಅನುಸರಿಸಬೇಕು. ಗಣೇಶ ಮೂರ್ತಿಗಳನ್ನು ಜೇಡಿ ಮಣ್ಣಿನಿಂದ ತಯಾರಿಸಿ, ಬಣ್ಣರಹಿತ ಅಥವಾ ನೈಸರ್ಗಿಕ ಬಣ್ಣ ಲೇಪಿತ ಮೂರ್ತಿಗಳನ್ನು ಮಾತ್ರ ಮಾರಾಟ ಮಾಡುಬೇಕು. ಪ್ಲಾಸ್ಟರ್ ಆಫ್ ಪ್ಯಾರೀಸ್‍ನಿಂದ ಗಣೇಶ ಮೂರ್ತಿಗಳನ್ನು ತಯಾರಿಸಿ ಮಾರಾಟ ಮಾಡುವವರ ವಿರುದ್ಧ ಮಹಾನಗರಪಾಲಿಕೆ ಕಾಯ್ದೆ ರೀತ್ಯಾ … Read more

ಕುಹೂ… ಕುಹೂ… ದಾವಣಗೆರೆ ಕೋಗಿಲೆ – ಡಾ. ಪುನೀತ್ ರಾಜ್ ಕುಮಾರ್ ಅವಾರ್ಡ್

ಎಸ್‌ಎಸ್‌ಎಂ ಜನ್ಮದಿನ – Kannada-Hindi Karoke Singing Talent Hunt Show ಸುದ್ದಿ360 ದಾವಣಗೆರೆ, ಆ.25: ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಅವರ ಜನ್ಮ ದಿನದ ಅಂಗವಾಗಿ ಕುಹೂ ಕುಹೂ ದಾವಣಗೆರೆ ಕೋಗಿಲೆ, ಕನ್ನಡ ಮತ್ತು ಹಿಂದಿ ಹಾಡುಗಳ ಕರೋಕೆ ಗಾಯನ ಸ್ಪರ್ಧೆ ಹಾಗೂ ಡಾ. ಪುನೀತ್‌ರಾಜ್‌ಕುಮಾರ್ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಂಡಿದ್ದು, ಸಮಾರಂಭದಲ್ಲಿ ನಟ ದರ್ಶನ್ ಭಾಗವಹಿಸಲಿದ್ದಾರೆ ಎಂದು ದಿನೇಶ್ ಕೆ. ಶೆಟ್ಟಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಕುಹೂ ಕುಹೂ … Read more

ವಿ.ಡಿ. ಸಾವರ್ಕರ್ ವಿವಾದ – ಡಾ. ಎಂ.ಬಿ. ಪಾಟೀಲ ಹೇಳಿದ್ದೇನು ?

ಕಾಂಗ್ರೆಸ್ ನಿಂದ ಕನ್ನಡ ಹೋರಾಟಗಾರರ ರಥಯಾತ್ರೆ ಸುದ್ದಿ360 ವಿಜಯಪುರ, ಆ.25: ಬಿಜೆಪಿಯಿಂದ ವಿ.ಡಿ.ಸಾವರ್ಕರ್ ರಥಯಾತ್ರೆಗೆ ಪ್ರತ್ಯುತ್ತರವಾಗಿ ಕನ್ನಡ ನಾಡಿನ ಹೋರಾಟಗಾರರ ರಥಯಾತ್ರೆಗೆ ಕಾಂಗ್ರೆಸ್ ಸಿದ್ದವಾಗಿದೆ. ವೀರ ರಾಣಿ ಕಿತ್ತೂರ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ, ಹಲಗಲಿಯ ಬೇಡರು, ಸುರಪುರ ನಾಯಕರು….ಹೀಗೆ ಅನೇಕ ಹೋರಾಟಗಾರರನ್ನು ಗೌರವಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ರೂಪಿಸುವುದಾಗಿ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಡಾ.ಎಂ.ಬಿ‌. ಪಾಟೀಲ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಪ್ರತಿಕ್ರಿಯಿಸಿರುವ ಪಾಟೀಲರು, ಬಿಜೆಪಿಗೆ ಕನ್ನಡದ ಹೋರಾಟಗಾರರು ಬೇಡವಾ? ಅವರ ಫೋಟೋ ತೆಗೆದುಕೊಂಡು ರಥ ಯಾತ್ರೆ ಮಾಡಲಿ, ಹಲಗಲಿಯ … Read more

error: Content is protected !!