ಅಗತ್ಯ ವಸ್ತುಗಳ ಬೆಲೆ ಏರಿಕೆ: ಸೌದೆ ಒಲೆ ಹೊತ್ತಿಸಿ ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕ ಪ್ರತಿಭಟನೆ

ಜೀವನಾವಶ್ಯಕ ವಸ್ತುಗಳ ಮೇಲಿನ ಜಿಎಸ್ಟಿ ಹೇರಿಕೆಗೆ ಗುಡುಗಿದ ಮಹಿಳಾಮಣಿಯರು ಸುದ್ದಿ360, ದಾವಣಗೆರೆ, ಜು.19: ಅಡುಗೆ ಅನಿಲ, ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಹಾಗೂ ಆಹಾರ ಧಾನ್ಯ ಮತ್ತು ಮೊಸರು ಸೇರಿದಂತೆ ಜನಸಾಮಾನ್ಯರು ದಿನನಿತ್ಯ ಬಳಸುವ ಉತ್ಪನ್ನಗಳ ಮೇಲಿನ ಜಿಎಸ್ ಟಿ ಹೇರಿಕೆಯನ್ನು ವಿರೋಧಿಸಿ ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಲಾಯಿತು. ನಗರದ ರಿಂಗ್ ರಸ್ತೆಯ ಕ್ಲಾಕ್ ಟವರ್ ಬಳಿ ಇರುವ ಸೈನಿಕ ಉದ್ಯಾನವನದ  ಎದುರಲ್ಲಿ ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷರಾದ ಅನಿತಾಬಾಯಿ ಮಾಲತೇಶ್ … Read more

ಸಿಎಂ ಸೂಚನೆ ಮೇರೆಗೆ ದರ ಮರು ಪರಿಷ್ಕರಣೆ ಮಾಡಿದ ಕೆಎಂಎಫ್ – ನೂತನ ದರ ಇಲ್ಲಿದೆ ನೋಡಿ

ಸುದ್ದಿ360, ಬೆಂಗಳೂರು, ಜು.18: ಮೊಸರು, ಮಜ್ಜಿಗೆ ಮತ್ತು ಲಸ್ಸಿ ಮೇಲೆ ಶೇ. 5 ರಷ್ಟು ಜಿಎಸ್ ಟಿ ಯಿಂದ ದರ ಹೆಚ್ಚಾಗಿತ್ತು ನಂದಿನಿ‌ ಮೊಸರು, ಮಜ್ಜಿಗೆ, ಲಸ್ಸಿ ಮೇಲೆ ಶೇ.5 ಜಿಎಸ್ ಟಿ ಆಕರಣೆಯಿಂದ ಹೆಚ್ಚಾಗಿದ್ದ ದರ ಮರು ಪರಿಷ್ಕರಣೆ ಮಾಡಿದ ಕೆ ಎಂ ಎಫ್. ಮೊಸರು, ಮಜ್ಜಿಗೆ ಮತ್ತು ಲಸ್ಸಿ ಮೇಲೆ ಶೇ. 5 ರಷ್ಟು ಜಿಎಸ್ ಟಿ ಯಿಂದ ದರ ಹೆಚ್ಚಾಗಿತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ಮೇರೆಗೆ ದರ ಮರು ಪರಿಷ್ಕರಣೆ ಮಾಡಿದ … Read more

ಆಗಸ್ಟ್ 12ಕ್ಕೆ ಗಾಳಿಪಟ-2 ರಾಜ್ಯಾದ್ಯಂತ ತೆರೆಗೆ

ಸುದ್ದಿ360, ಬೆಂಗಳೂರು, ಜು.18: ರೋಚಕ ತಿರುವುಗಳನ್ನೊಳಗೊಂಡ, ಹಾಸ್ಯಭರಿತ ಪ್ರಸಂಗಗಳೊಂದಿಗೆ ಸಾಗುವ ಪ್ರಯಾಣದ ಮೂವರು ಹುಡುಗರು ಮತ್ತು ಅವರ ಪ್ರೇಮಗಳ ಕತೆ ಹೊಂದಿರುವ ಗಾಳಿಪಟ-2 ಚಲನಚಿತ್ರ ಮುಂಬರುವ ಆಗಸ್ಟ್ 12ರಂದು ರಾಜ್ಯಾದ್ಯಂತ ತೆರೆ ಕಾಣಲಿದೆ ಎಂದು ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನ, ಮಡೆನೂರು ಮನು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಇಬ್ಬರೂ ಕಲಾವಿದರು, ಗಣೇಶ್, ದಿಗಂತ್ ಹಾಗೂ ಭೂಷಣ್ ಎನ್ನುವ ಮೂವರು ಪ್ರಾಣ ಸ್ನೇಹಿತರ ನಡುವೆ ನಡೆಯುವ ಕಥೆಯ ಹಂದರವನ್ನು ಹೊಂದಿದೆ. ಮೂವರು ಪ್ರಾಣ ಸ್ನೇಹಿತರು ನೀರುಕೋಟೆ ಎನ್ನುವ ಊರಿನ … Read more

ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಬಹುಮಾತದೊಂದಿಗೆ ಗೆಲುವು ನಿಶ್ಚಿತ: ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360, ಬೆಂಗಳೂರು, ಜು.18: ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರ ಆಯ್ಕೆಯನ್ನು ಹಲವಾರು ಪಕ್ಷಗಳು ಬೆಂಬಲಿಸಿರುವುದರಿಂದ 2/3  ಬಹುಮತದೊಂದಿಗೆ ಗೆಲ್ಲುವುದು ನಿಶ್ಚಿತ  ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ವಿಧಾನ ಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ರಾಷ್ಟ್ರಪತಿ ಚುನಾವಣೆಯಲ್ಲಿ ಇದ್ದ ಹಿಂದಿನ  ದಾಖಲೆಯನ್ನ ಮುರಿಯುವ ಎಲ್ಲಾ ಸಾಧ್ಯತೆಗಳಿವೆ.  ದ್ರೌಪದಿ ಮುರ್ಮು ಅವರು ಮಾನವೀಯ ಗುಣಗಳನ್ನು ಹೊಂದಿದ್ದು, ಅತ್ಯುನ್ನತ ಸ್ಥಾನ ಕ್ಕೇರುವುದು ಭಾರತದ ಪ್ರಜಾಪ್ರಭುತ್ವ ಹಾಗೂ ಭವಿಷ್ಯಕ್ಕೆ ಒಳ್ಳೆಯದಾಗಲಿದೆ ಎಂಬ ನಿರೀಕ್ಷೆ ನಮ್ಮದು ಎಂದರು. ದೇಶಾದ್ಯಂತ ರಾಷ್ಟ್ರಪತಿ … Read more

ಕಾಂಗ್ರೆಸ್ ಪಕ್ಷದಲ್ಲಿ ಪಕ್ಷ ಪೂಜೆಗೆ ಆದ್ಯತೆ, ವ್ಯಕ್ತಿ ಪೂಜೆಗಲ್ಲ: ಎಸ್ ಎಸ್ ಮಲ್ಲಿಕಾರ್ಜುನ್

ಸಿದ್ದರಾಮಯ್ಯ ಅಮೃತಮಹೋತ್ಸವ ಅಭಿಮಾನಿಗಳಿಂದಲೇ ರೂಪುಗೊಂಡಿರುವ ಕಾರ್ಯಕ್ರಮ ಸುದ್ದಿ360, ದಾವಣಗೆರೆ, ಜು.18: ಸಿದ್ದರಾಮಯ್ಯ ಅವರು ನಮ್ಮ ಬಲವಂತಕ್ಕೆ ಮಣಿದು ಅಮೃತ ಮಹೋತ್ಸವಕ್ಕೆ ಒಪ್ಪಿ  ಸಮ್ಮತಿ ನೀಡಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಪಕ್ಷ ಪೂಜೆಗೆ ಆದ್ಯತೆ ಇದೆಯೇ ಹೊರತು ವ್ಯಕ್ತಿ ಪೂಜೆಗಲ್ಲ. ಹೀಗಾಗಿ ಸಿದ್ಧರಾಮಯ್ಯ ಅವರ ಅಮೃತ ಮಹೋತ್ಸವ ವ್ಯಕ್ತಿ ಪೂಜೆಯಲ್ಲ ಎಂದು  ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಹೇಳಿದರು. ದಾವಣಗೆರೆಯಲ್ಲಿ ನಡೆಯಲಿರುವ ಸಿದ್ದರಾಮಯ್ಯ ಅಮೃತ ಮಹೋತ್ಸವ ಸಮಾರಂಭದ ವೇದಿಕೆ ನಿರ್ಮಾಣ ಕಾರ್ಯಕ್ರಮಕ್ಕೆ ಸೋಮವಾರ ಪೂಜೆ ನೆರವೇರಿಸಿದ ಬಳಿಕ ಸುದ್ದಿಗಾರರ ಜತೆ … Read more

ದಾವಣಗೆರೆ ಜಿಲ್ಲೆಯಲ್ಲಿ ಕನ್ನಡ ತೇರಿನ ಯಶಸ್ವೀ ಸಂಚಾರ – ಚಿತ್ರದುರ್ಗಕ್ಕೆ ಮುಂದುವರೆದ ಸಂಚಾರ

ಸುದ್ದಿ360, ದಾವಣಗೆರೆ, ಜು.18: ಸ್ವರಾಜ್ಯಕ್ಕೆ 75 ರ ಸಂಭ್ರಮಕ್ಕಾಗಿ ಯುವಾಬ್ರಿಗೇಡ್ ಆಯೋಜಿಸಿರುವ ಕನ್ನಡ ತೇರು ಭಾನುವಾರದಂದು ದಾವಣಗೆರೆ ಜಿಲ್ಲೆಯ ವಿವಿಧ ಭಾಗದಲ್ಲಿ ಸಂಚರಿಸಿತು. ಹೆಬ್ಬಾಳು ಗ್ರಾಮದಲ್ಲಿ ಬೆಳಗ್ಗೆ ಶ್ರೀ ವಿರಕ್ತಮಠದ ಶ್ರೀ ಮಹಾಂತ ರುದ್ರೇಶ್ವರ ಮಹಾಸ್ವಾಮಿಗಳಿಂದ ಕನ್ನಡತೇರಿನ ಪೂಜೆ ಹಾಗೂ ಸ್ವಾಗತದೊಂದಿಗೆ ಪ್ರಾರಂಭವಾದ ಕನ್ನಡ ತೇರು, ಗ್ರಾಮದ ವಿದ್ಯಾರ್ಥಿಗಳು, ಯುವಕರು ಹಾಗೂ ಗ್ರಾಮಸ್ಥರಿಗೆ ಸ್ವಾತಂತ್ರ್ಯ ಹೋರಾಟಗಾರರ, ದೇಶಕ್ಕಾಗಿ ತಮ್ಮ ಜೀವನವನ್ನೇ  ಮುಡಿಪಾಗಿಟ್ಟ ವೀರಯೋಧರ ಕುರಿತಾದ ಸಾಕ್ಟ್ಯಚಿತ್ರವನ್ನು ಪ್ರದರ್ಶಿಸಲಾಯಿತು. ನಂತರ ಸಂತೇಬೆನ್ನೂರು ಗ್ರಾಮಸ್ಥರು ಕಹಳೆ ಸದ್ದಿನೊಂದಿಗೆ ಕನ್ನಡ ತೇರಿಗೆ … Read more

ಸ್ವಯಂ ಮೌಲ್ಯಮಾಪನದ ಆಧಾರದ ಮೇಲೆ ಕೈಗಾರಿಕೆಗಳಿಗೆ ತೆರಿಗೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360 ಹುಬ್ಬಳ್ಳಿ, ಜು.16: ಸ್ವಯಂ ಮೌಲ್ಯಮಾಪನದ ಆಧಾರದ ಮೇಲೆ ಕೈಗಾರಿಕೆಗಳಿಗೆ ತೆರಿಗೆ ವಿಧಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಕರ್ನಾಟಕ ವಾಣಿಜ್ಯೋದ್ಯಮ ಸಂಘ ಆಯೋಜಿಸಿದ್ದ ರಾಜ್ಯ ಮಟ್ಟದ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಸಂಸ್ಥೆಗಳ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಸರ್ಕಾರ ಉದ್ಯೋಗ ನೀತಿಯನ್ನು ಹೊರತರುತ್ತಿದೆ. ನಮ್ಮ ಯುವಕರು ಹಾಗೂ ಮಹಿಳೆಯರ ಕೈಗೆ ಉದ್ಯೋಗ ನೀಡಬೇಕು. ಮಹಿಳೆಯರು ಉದ್ದಿಮೆದಾರರಾಗಬೇಕು. ದೇಶದ ಅತ್ಯಂತ ಹೆಚ್ಚಿನ ರಫ್ತನ್ನು ಕರ್ನಾಟದಿಂದ ಮಾಡಲಾಗುತ್ತದೆ. ರಾಜ್ಯದಲ್ಲಿ ಬಹಳಷ್ಟು ಕೆಲಸಗಳಾಗುತ್ತಿದ್ದು, ಮೌನಕ್ರಾಂತಿಯಾಗುತ್ತಿದೆ. … Read more

ಮಳೆಯನ್ನು ಲೆಕ್ಕಿಸದೆ ಸಾಗಿದ ಡ್ರಗ್ಸ್ ವಿರುದ್ಧದ ಬೃಹತ್ ಕಾಲ್ನಡಿಗೆ ಜಾಥಾ

ಸುದ್ದಿ360 ದಾವಣಗೆರೆ, ಜು.16: ದೊಡ್ಡ ಸಾಮಾಜಿಕ ಪಿಡುಗಾಗಿ ಬೆಳೆಯುತ್ತ ಯುವಜನರನ್ನು ಬಲಿ ತೆಗೆದುಕೊಳ್ಳುತ್ತಿರುವ ಡ್ರಗ್ಸ್ ವಿರುದ್ಧ ಬೃಹತ್ ಕಾಲ್ನಡಿಗೆ ಜಾಥಾ ಬೆಣ್ಣೆನಗರಿಯಲ್ಲಿ ಶನಿವಾರ ಜರುಗಿತು. ವಿಜಯ ಕರ್ನಾಟಕ ದಿನಪತ್ರಿಕೆ ಜಿಲ್ಲಾ ಪೊಲೀಸ್ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ಮಾದಕ ವಸ್ತುಗಳ ವಿರುದ್ಧದ ಬೃಹತ್ ಕಾಲ್ನಡಿಗೆ ಜಾಥಾಕ್ಕೆ ನಗರದ  ಗುಂಡಿ ಚೌಲ್ಟ್ರಿ ವೃತ್ತದಲ್ಲಿ ಡಿಸಿ ಶಿವಾನಂದ ಕಾಪಾಶಿ ‘ಮಾದಕ ವಸ್ತುಗಳ ವಿರುದ್ಧದ ಹೋರಾಟಕ್ಕೆ ಪೊಲೀಸರಿಗೆ ಸಹಕಾರ ನೀಡಿ’ ಎಂಬ ಘೋಷವಾಕ್ಯದ ಪ್ಲೇ ಕಾರ್ಡ್‌ನ್ನು ವಿದ್ಯಾರ್ಥಿಗಳಿಗೆ ನೀಡುವ ಮೂಲಕ ಕಾಲ್ನಡಿಗೆ ಜಾಥಾಗೆ … Read more

ಅಹಾರ ಧಾನ್ಯಗಳ ಮೇಲಿನ ಜಿಎಸ್ಟಿ ಹಿಂತೆಗೆಯುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ

ಸುದ್ದಿ360,ದಾವಣಗೆರೆ ಜು.15: ಜಿಲ್ಲಾ ಅಕ್ಕಿಗಿರಣಿ ಮಾಲೀಕರ ಸಂಘ, ಆಹಾರ ಧಾನ್ಯಗಳ ವರ್ತಕ ಸಂಘ ಹಾಗೂ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕೋದ್ಯಮ ಸಂಸ್ಥೆಗಳ ಸಹಯೋಗದೊಂದಿಗೆ ದಾವಣಗೆರೆಯಲ್ಲಿ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಅಹಾರ ಧಾನ್ಯಗಳ ಮೇಲೆ ವಿಧಿಸಿರುವ ಶೇ. 5 ಜಿಎಸ್ ಟಿ ಹಿಂದಕ್ಕೆ ಪಡೆಯುವಂತೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಅಕ್ಕಿಗಿರಣಿದಾರರ ಸಂಘದ ಕಾರ್ಯದರ್ಶಿ ಕೋಗುಂಡಿ ಬಕ್ಕೇಶಪ್ಪಮಾತನಾಡಿ, ಜಿಎಸ್ ಟಿ ಮಂಡಳಿ ಅಹಾರ ಧಾನ್ಯಗಳ ಮೇಲೆ ವಿಧಿಸಿರುವ ಶೇ. 5ರಷ್ಟು ಜಿಎಸ್ ಟಿ ವಿಧಿಸುತ್ತಿದೆ. ಈ ಬಗ್ಗೆ … Read more

ಭ್ರಷ್ಟ ರಾಜಕಾರಣ ಕೊನೆಗಾಣಿಸಲು ಜನಚೈತನ್ಯ ಯಾತ್ರೆ : ಕೆ ಆರ್ ಎಸ್ ರಾಜ್ಯಾಧ್ಯಕ್ಷ ರವಿ ಕೃಷ್ಣಾರೆಡ್ಡಿ

ಸುದ್ದಿ360, ದಾವಣಗೆರೆ, ಜು.16: ಕೆಆರ್ ಎಸ್ ಪಕ್ಷದಿಂದ ಎರಡನೇ ಹಂತದ ಜನ ಚೈತನ್ಯ ಯಾತ್ರೆ ಜು.15 ರಂದು ಚಿತ್ರದುರ್ಗ ಜಿಲ್ಲೆಯಿಂದ ಆರಂಭವಾಗಿದ್ದು, ಜುಲೈ ಅಂತ್ಯದವರೆಗೆ 16ಜಿಲ್ಲೆಗಳಲ್ಲಿ ಸಂಚರಿಸಿ, ಭ್ರಷ್ಟ, ಹಾಗೂ ಪರಮನೀಚ ರಾಜಕಾರಣ ಕೊನೆಗಾಣಿಸುವ ನಿಟ್ಟಿನಲ್ಲಿ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯವನ್ನು ಪಕ್ಷ ಹಮ್ಮಿಕೊಂಡಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ರವಿ ಕೃಷ್ಣಾರೆಡ್ಡಿ ತಿಳಿಸಿದರು. ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜನಚೈತನ್ಯ ಯಾತ್ರೆಯ ಅಂಗವಾಗಿ ಇಂದು ದಾವಣಗೆರೆಯಲ್ಲಿ ಹಲವು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಯಾತ್ರೆಯುದ್ದಕ್ಕೂ ಬಹಿರಂಗ ಸಭೆಗಳು, ಪತ್ರಿಕಾಗೋಷ್ಠಿಗಳು, … Read more

error: Content is protected !!