ಇತರ ಧರ್ಮಗಳನ್ನು ಗೌರವಿಸಿ ಸಮನ್ವಯ ಸಾಧಿಸಿದಾಗ ಮಾತ್ರ ಸಮಾಜದಲ್ಲಿ ಸಮಾನತೆ ಸಾಧ್ಯ

ಡಾ. ಎಲ್.ಶಿವಲಿಂಗಯ್ಯನವರ ‘ನುಡಿ-ನಮನ’ ಕಾರ್ಯಕ್ರಮದಲ್ಲಿ ಸಿಎಂ ಅಭಿಮತ ಸುದ್ದಿ360, ಬೆಂಗಳೂರು, ಜು.10: ಇತರ ಧರ್ಮಗಳನ್ನು ಗೌರವಿಸುವ ಮೂಲಕ ಸಮನ್ವಯ ಸಾಧಿಸಬೇಕಿದೆ. ಸಮಾಜದ ಎಲ್ಲ ವರ್ಗದ ಜನರೊಂದಿಗೆ ಆರ್ಥಿಕವಾಗಿ, ಸಾಮಾಜಿಕವಾಗಿ, ಧಾರ್ಮಿಕವಾಗಿ ಸಮನ್ವಯ ಸಾಧಿಸಿದಾಗ ಮಾತ್ರ ಸಮಾಜದಲ್ಲಿ ಸಮಾನತೆಯ ಭಾವವನ್ನು ತರಲು ಸಾಧ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಇಂದು  ಬೆಂಗಳೂರಿನಲ್ಲಿ ನಿವೃತ್ತ ಇಂಜಿನಿಯರ್ ಇನ್ ಚೀಫ್ ಹಾಗೂ ರಾಜ್ಯ ಸರ್ಕಾರದ ವಿಶೇಷ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದ  ಡಾ. ಎಲ್.ಶಿವಲಿಂಗಯ್ಯನವರ ‘ನುಡಿ-ನಮನ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. … Read more

ದಕ್ಷಿಣ ಕೇದಾರವಾಗಲಿದೆ ದೇವನಗರಿ ದಾವಣಗೆರೆ

ಸುದ್ದಿ360, ದಾವಣಗೆರೆ, ಜು.10:  ಉತ್ತರದಲ್ಲಿ ಕೇದಾರನಾಥನ ಸನ್ನಿದಾನ ಇರುವಂತೆ ದಕ್ಷಿಣದಲ್ಲೂ ಕೇದಾರನಾಥ ಮಠ ಮತ್ತು ಕೇದಾರ ಮಾದರಿಯ ಭವ್ಯ ಮಂದಿರ ನಿರ್ಮಾಣ ಮಾಡುವ ಇಚ್ಛೆಯಿದೆ. ಈ ನಿಟ್ಟಿನಲ್ಲಿ ಈಗಾಗಲೇ ಕಾರ್ಯಾರಂಭವಾಗಿದೆ ಎಂದು ಶ್ರೀ ಕೇದಾರ ಜಗದ್ಗುರು ಶ್ರೀ ಭೀಮಾಶಂಕರಲಿಂಗ ಶಿವಾಚಾರ್ಯ ಸ್ವಾಮೀಜಿ ನುಡಿದರು. ದಾವಣಗೆರೆಯ ತ್ರಿಶೂಲ್ ಕಲಾಭವನದಲ್ಲಿ ಭಾನುವಾರ ನಡೆದ ಸಂಗೀತಯುಕ್ತ ಇಷ್ಟಲಿಂಗ ಮಹಾಪೂಜೆಯ ನಂತರ ಭಕ್ತರನ್ನುದ್ದೇಶಿಸಿ ಸಂದೇಶ ನೀಡುತ್ತಾ, ದಾವಣಗೆರೆ-ಹರಿಹರ ನಡುವೆ ಬರುವ ಶಂಶೀಪುರ ಬಳಿ ನಾವು ಬಂದು ತಂಗಲು ಗುರು ನಿವಾಸ ನಿರ್ಮಾಣ ಕಾರ್ಯ … Read more

ಸಂಗೀತಯುಕ್ತ ಇಷ್ಟಲಿಂಗ ಮಹಾಪೂಜೆ ಸಂಪನ್ನ

ಸುದ್ದಿ360, ದಾವಣಗೆರೆ, ಜು.10:  ಸಾವಿರಾರು ಭಕ್ತಗಣದ ಸಮ್ಮುಖದಲ್ಲಿ ಶ್ರೀ ಕೇದಾರ ಜಗದ್ಗುರು ಶ್ರೀ ಭೀಮಾಶಂಕರಲಿಂಗ ಶಿವಾಚಾರ್ಯ ಸ್ವಾಮೀಜಿಯವರ ಸಂಗೀತಯುಕ್ತ ಇಷ್ಟಲಿಂಗ ಮಹಾಪೂಜೆ ನಗರದ ತ್ರಿಶೂಲ್ ಕಲಾಭವನದಲ್ಲಿ ಭಾನುವಾರ  ಸಾಂಗವಾಗಿ ನೆರವೇರಿತು. ನೆರೆದ ಭಕ್ತಗಣ ಶ್ರೀಗಳು ನೆರವೇರಿಸಿದ ಮಹಾಪೂಜೆಯಲ್ಲಿ ಭಕ್ತಪರವಶರಾಗಿ ದೈವಾನುಗ್ರಹಕ್ಕೆ ಪಾತ್ರರಾದರು. ತಪೋಕ್ಷೇತ್ರ ಕಣ್ವಕುಪ್ಪೆ ಗವಿಮಠದ ಶ್ರೀ ನಾಲ್ವಡಿ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿಯವರು ಪೂಜಾ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು. ಬೆಳಗ್ಗೆ 9 ಗಂಟೆಗೆ ಆರಂಭವಾದ ಇಷ್ಟಲಿಂಗ ಮಹಾಪೂಜೆ ಮಧ್ಯಾಹ್ನ 1.30ರ ಸುಮಾರಿಗೆ ಸಂಪನ್ನಗೊಂಡಿತು. ಇಷ್ಟಲಿಂಗ ಪೂಜೆಯ ನಂತರ … Read more

ಜು.12ಕ್ಕೆ ನಟ ಶಿವರಾಜ್ ಕುಮಾರ್ ಹುಟ್ಟುಹಬ್ಬ ಆಚರಣೆ

ಸುದ್ದಿ360, ದಾವಣಗೆರೆ, ಜು.10:  ಅಖಿಲ ಕರ್ನಾಟಕ ಡಾ. ರಾಜ್ ಕುಮಾರ್ ಅಭಿಮಾನಿ ಸಂಘಗಳ ಒಕ್ಕೂಟ, ಅಖಿಲ ಕರ್ನಾಟಕ ಡಾ. ಶಿವರಾಜ್ ಕುಮಾರ್ ಅಭಿಮಾನಿ ಸಂಘ ಮತ್ತು ಅಖಿಲ ಕರ್ನಾಟಕ ಪುನೀತ್ ರಾಜ್ ಕುಮಾರ್ ಅಭಿಮಾನಿ ಸಂಘಗಳ ವತಿಯಿಂದ  ನಟ ಶಿವರಾಜ್ ಕುಮಾರ್ ರವರ 60ನೇ ಹುಟ್ಟುಹಬ್ಬವನ್ನು ಜು. 12ರಂದು ದಾವಣಗೆರೆಯಲ್ಲಿ ಆಚರಿಸಲಾಗುತ್ತಿರುವುದಾಗಿ ಒಕ್ಕೂಟದ ಜಿಲ್ಲಾಧ್ಯಕ್ಷ ಯೋಗೇಶ್ ತಿಳಿಸಿದರು. ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ,  ಅಂದು ನಗರದ ಜಯದೇವ ವೃತ್ತದಲ್ಲಿ ಬೆಳಿಗ್ಗೆ 11.30ಕ್ಕೆ ನೆಚ್ಚಿನ ನಟ ಶಿವರಾಜ್ … Read more

ಸಿದ್ದರಾಮಯ್ಯ ಅಮೃತ ಮಹೋತ್ಸವ – ದಾವಣಗೆರೆಯಲ್ಲಿ ಸ್ಥಳ ವೀಕ್ಷಿಸಿದ‌ ಕಾಂಗ್ರೆಸ್ ಮುಖಂಡರು

ಶಾಮನೂರು ಶಿವಶಂಕರಪ್ಪ ಅವರ ಒಡೆತನದ 50 ಎಕರೆ ಸ್ಥಳದಲ್ಲಿ ಕಾರ್ಯಕ್ರಮ ಸುದ್ದಿ360, ದಾವಣಗೆರೆ, ಜು.9: ಈಗಾಗಲೇ ಭಾರೀ ಪ್ರಚಾರ ಗಿಟ್ಟಿಸಿರುವ  ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 75ನೇ ವರ್ಷದ ಜನ್ಮ ದಿನದ ಅಮೃತ ಮಹೋತ್ಸವ ಆಗಸ್ಟ್ 3ರಂದು ಬೆಳಿಗ್ಗೆ 11ಕ್ಕೆ ದಾವಣಗೆರೆ ನಗರದಲ್ಲಿ ಏರ್ಪಡಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸಿದ್ಧರಾಮಯ್ಯ  ಆಪ್ತರ ತಂಡ ಶನಿವಾರ ದಾವಣಗೆರೆಗೆ ದೌಡಾಯಿಸಿ ಪರಿಶೀಲನೆಯಲ್ಲಿ ತೊಡಗಿದೆ. ಇಲ್ಲಿನ ರಾಷ್ಟ್ರೀಯ ಹೆದ್ದಾರಿ 48ರ ದಾವಣಗೆರೆ- ಹರಿಹರ  ರಸ್ತೆಯ ಬಳಿ ಶಾಸಕ ಶಾಮನೂರು ಶಿವಶಂಕರಪ್ಪ ಅವರ ಒಡೆತನದ … Read more

ಅಮರನಾಥ: ಸಹಾಯವಾಣಿಯ ವಿವರ ಇಲ್ಲಿದೆ

ಕನ್ನಡಿಗರ ರಕ್ಷಣೆಗೆ ಕ್ರಮ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸುದ್ದಿ360, ಬೆಂಗಳೂರು, ಜು.09: ಅಮರನಾಥದಲ್ಲಿ ಮೇಘಸ್ಪೋಟದಿಂದ 15 ಜನ ಸಾವನ್ನಪ್ಪಿದ್ದು,  ಪ್ರಾಥಮಿಕ ಮಾಹಿತಿಯ ಪ್ರಕಾರ ನೂರಕ್ಕೂ ಹೆಚ್ಚು ಜನ ಕನ್ನಡಿಗರು ಅಮರನಾಥ ಯಾತ್ರೆಯಲ್ಲಿದ್ದಾರೆ. ಕನ್ನಡಿಗರ ರಕ್ಷಣೆಗೆ ಸರ್ಕಾರ ಕ್ರಮ ಕೈಗೊಂಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ರಾಜ್ಯದಿಂದ ಅಮರನಾಥ ಯಾತ್ರೆ ಕೈಗೊಂಡಿದ್ದ ಕನ್ನಡಿಗರು ಸುರಕ್ಷಿತವಾಗಿದ್ದು, ಬೇರೆ ಯಾವ ಅಹಿತರಕರ ಸುದ್ದಿಯೂ ಬಂದಿಲ್ಲ. ಅಲ್ಲಿಯ ರಾಜ್ಯ ಸರ್ಕಾರ ಮತ್ತು … Read more

ಅಮರನಾಥ ಯಾತ್ರೆಯಲ್ಲಿ ಸಿಲುಕಿದವರಿಗೆ ಕರ್ನಾಟಕ ಸರ್ಕಾರದಿಂದ ಸಹಾಯವಾಣಿ

ಸುದ್ದಿ360, ಬೆಂಗಳೂರು ಜು.8: ಇಂದು ಸುಮಾರು 5:30 ರ ಸಮಯಕ್ಕೆ  ಶ್ರೀ ಅಮರನಾಥ ಗುಹೆಯ ಬಳಿ ಮೋಡದ ಸ್ಫೋಟದಿಂದಾಗಿ ಯಾತ್ರಿಕರ ವಾಸಸ್ಥಳಗಳಿಗೆ ಹಾನಿಯಾಗಿದೆ. NDRF, ITBP, ಭಾರತೀಯ ಸೇನೆ, CRPF, BSF, SDRF ಮತ್ತು ಜಮ್ಮು ಮತ್ತು ಕಾಶ್ಮೀರ್ ಪೋಲಿಸ್ ಜಂಟಿ ರಕ್ಷಣಾ ಕಾರ್ಯಾಚರಣೆಯಲ್ಲಿ ನಿರತರಾಗಿದ್ದಾರೆ. ಸಂಕಷ್ಟದಲ್ಲಿ ಸಿಲುಕಿದವರಿಗೆ ಜಮ್ಮು ಕಾಶ್ಮೀರ ಸರ್ಕಾರವು ಸಹಾಯಹಸ್ತ ಚಾಚಿದೆ. ಶ್ರೀ ಅಮರನಾಥ ಗುಹೆಯ ಬಳಿ ಕರ್ನಾಟಕದ ಯಾವುದೇ ವ್ಯಕ್ತಿಯು ಸಿಕ್ಕಿಬಿದ್ದಲ್ಲಿ ದಯವಿಟ್ಟು ಕೆಳಗಿನ ಸಂಖ್ಯೆಗೆ ಕರೆ ಮಾಡಿ ಸಂಪರ್ಕ ಮಾಡಬಹುದಾಗಿದೆ.‌  … Read more

ಶಾಲಾಮಕ್ಕಳಿಗೆ ಶೂ, ಸಾಕ್ಸ್  ಹಂಚಿಕೆಗೆ 132 ಕೋಟಿ ರೂ.ಗಳ ಅನುಮೋದನೆ: ಸಿಎಂ

ಸುದ್ದಿ360, ಬೆಂಗಳೂರು, ಜು. 08: ಶಾಲಾ ಮಕ್ಕಳಿಗೆ ಶೂ ಮತ್ತು ಸಾಕ್ಸ್  ಹಂಚಿಕೆಗೆ 132 ಕೋಟಿ ರೂ.ಗಳನ್ನು ಒದಗಿಸಿ ಅನುಮೋದನೆ ನೀಡಲಾಗಿದೆ ಎಂದು  ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಸಮವಸ್ತ್ರದ ವಿಚಾರದಲ್ಲಿ ಸರ್ಕಾರ ಈಗಾಗಲೇ ಸಮವಸ್ತ್ರಕ್ಕೆ ಅನುಮೋದನೆ ನೀಡಿದೆ. ಸಮವಸ್ತ್ರ ತಯಾರಾಗಲು ಸ್ವಲ್ಪ ಸಮಯ ಹಿಡಿಯುತ್ತದೆ. ನಂತರ ವಿತರಣೆಯಾಗಲಿದೆ. ಈ ವಿಷಯದಲ್ಲಿ ಯಾವುದೇ ಗೊಂದಲ ಸೃಷ್ಟಿಸುವ ಅಗತ್ಯವಿಲ್ಲ ಎಂದರು. ಆಗ ಭಿಕ್ಷೆ ಬೇಡಿರುವ ಹಣ ಎಲ್ಲಿ? ಕೆಪಿಸಿಸಿ ಅಧ್ಯಕ್ಷ  … Read more

ನಿವೃತ್ತ ಸರ್ಕಾರಿ ನೌಕರರಿಗೆ ಆರೋಗ್ಯ ಯೋಜನೆ ವಿಸ್ತರಣೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360, ಬೆಂಗಳೂರು, ಜು. 08: ನಿವೃತ್ತ ಸರ್ಕಾರಿ ನೌಕರರಿಗೆ ಆರೋಗ್ಯ ಯೋಜನೆಯ  ವಿಸ್ತರಣೆ ಮಾಡುವುದಾಗಿ   ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು  ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ವತಿಯಿಂದ  ಆಯೋಜಿಸಿದ್ದ  ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ  ಸುವರ್ಣ ಮಹೋತ್ಸವವನ್ನು ಉದ್ಘಾಟಿಸಿ  ಮಾತನಾಡಿದರು. ಆರ್ಥಿಕ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ಆದಷ್ಟು ಬೇಗನೆ  ಈ ಬಗ್ಗೆ ಘೋಷಣೆ ಮಾಡಲಾಗುವುದು. ನಿವೃತ್ತ ನೌಕರರು ನಿರಂತರವಾಗಿ  ಕ್ರಿಯಾಶೀಲರಾಗಿದ್ದು, ಉತ್ತಮ ಸಮಾಜ ನಿರ್ಮಾಣಕ್ಕೆ ಕಟಿಬದ್ಧರಾಗಿ ಕೆಲಸ ಮಾಡಬೇಕು ಎಂದರು. … Read more

ಗುತ್ತಿಗೆ, ಹೊರಗುತ್ತಿಗೆ ನೌಕರರ ವೇತನ ಪರಿಷ್ಕರಣೆಗೆ ಸಕಾರಾತ್ಮಕ ಸ್ಪಂದನೆ

ಸುದ್ದಿ360, ಬೆಂಗಳೂರು, ಜು.08:  ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ಗುತ್ತಿಗೆ-ಹೊರಗುತ್ತಿಗೆ ನೌಕರರ ವೇತನವನ್ನು ಹೆಚ್ಚಳ ಮಾಡಲು ಸರ್ಕಾರ ಪ್ರಯತ್ನ ಮಾಡಲಾಗುತ್ತಿದೆ. ಅಲ್ಲದೆ ಆರೋಗ್ಯ ವಿಮೆ ವಿಸ್ತರಿಸಲು ಕೂಡ ಸರ್ಕಾರ ಕ್ರಮ ಕೈಗೊಂಡಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಮುಷ್ಕರ ನಡೆಸುತ್ತಿರುವ ಗುತ್ತಿಗೆ-ಹೊರಗುತ್ತಿಗೆ ನೌಕರರನ್ನು ಭೇಟಿಯಾಗಿ ಚರ್ಚೆ ನಡೆಸಿದ ಬಳಿಕ ಮಾತನಾಡಿದ ಅವರು, ಸರ್ಕಾರದ ಇತಿಮಿತಿಯೊಳಗೆ ಎಲ್ಲಾ ಬೇಡಿಕೆಗಳನ್ನು ಆದಷ್ಟು ಶೀಘ್ರದಲ್ಲಿ ಈಡೇರಿಸಲಾಗುವುದು. ಶ್ರೀನಿವಾಸಾಚಾರಿಯವರ ವರದಿ ಅನುಷ್ಠಾನಕ್ಕೆ … Read more

error: Content is protected !!