ಕಾಂಗ್ರೆಸ್ನಿಂದ ಬೆಂಕಿಗೆ ತುಪ್ಪ ಹಾಕುವ ಕೆಲಸ: ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ

shimoga-riots-were-the-result-of-the-governments-appeasement-policy-basavaraj-bommai

ಸುದ್ದಿ360 ಬೆಂಗಳೂರು, ಜೂ.19:  ಕಾಂಗ್ರೆಸ್ ಬೆಂಕಿಗೆ ತುಪ್ಪ ಹಾಕುವ ಕೆಲಸವನ್ನು ಇಡೀ ದೇಶದಲ್ಲಿ ಮಾಡುತ್ತಿದೆ ಎನ್ನುವುದಕ್ಕೆ ಖಾನಾಪುರ ಶಾಸಕರು ಧರಣಿ ಮಾಡುತ್ತಿರುವುದು ಸಾಕ್ಷಿಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ,   ಅಗ್ನಿಪಥ್ ಒಂದು ವಿನೂತನ ಕಾರ್ಯಕ್ರಮ. ಇಡೀ ಜಗತ್ತಿನಲ್ಲಿ ಯುವಕರಿಗೆ ಮಿಲಿಟರಿ ತರಬೇತಿ ನೀಡುವ ವ್ಯವಸ್ಥೆ ಇದೆ. 17 – 21 ವರ್ಷ ಉತ್ತಮ ತರಬೇತಿ ಪಡೆದರೆ, ಬೇರೆ ಅವಕಾಶಗಳು ಸಿಗುತ್ತವೆ. ಮಿಲಿಟರಿ ಹಾಗೂ ಅರೆಮಿಲಿಟರಿ ಪಡೆಗಳಲ್ಲಿ … Read more

ಪಿಯುಸಿ ಫಲಿತಾಂಶ: ದಾವಣಗೆರೆಗೆ 19ನೇ ಸ್ಥಾನ – ಕಾವ್ಯ ಎಂ.ಜಿ. ಜಿಲ್ಲೆಗೆ ಟಾಪರ್

ಸುದ್ದಿ360 ದಾವಣಗೆರೆ, ಜೂ.18: ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಇಂದು ಪ್ರಕಟಗೊಂಡಿದ್ದು, ಎಂದಿನAತೆ ವಿಜ್ಞಾನ ವಿಭಾಗದಲ್ಲಿ ಅತಿ ಹೆಚ್ಚು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಕಲಾ ವಿಭಾಗದಲ್ಲಿ ಅತಿ ಕಡಿಮೆ ಫಲಿತಾಂಶ ಲಭ್ಯವಾಗಿದೆ. ಜಿಲ್ಲೆಯಲ್ಲಿ ಒಟ್ಟಾರೆ ಶೇ.62.72 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಜಿಲ್ಲೆ ರಾಜ್ಯ ಮಟ್ಟದಲ್ಲಿ 19ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಳ್ಳಬೇಕಾಗಿದೆ. ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಒಟ್ಟು 19,725 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಈ ಪೈಕಿ 11,568 ವಿದ್ಯಾರ್ಥಿಗಳು ಪಾಸಾಗಿದ್ದಾರೆ. ಕಲಾ ವಿಭಾಗದ 6302ರಲ್ಲಿ 2473 ವಿದ್ಯಾರ್ಥಿಗಳು(ಶೇ.39.24) ತೇರ್ಗಡೆಯಾಗಿದ್ದು, ವಾಣಿಜ್ಯ … Read more

ದ್ವಿತೀಯ ಪಿಯುಸಿ: ಶೇ.61.88 ಫಲಿತಾಂಶ – ದಕ್ಷಿಣ ಕನ್ನಡ ಪ್ರಥಮ

ಸುದ್ದಿ360 ಬೆಂಗಳೂರು, ಜೂನ್ 18:  ಪ್ರಸಕ್ತ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಶೇ.61.88ರಷ್ಟು ವಿದ್ಯಾರ್ಥಿಗಳು ತೇರ್ಗಡೆಹೊಂದಿದ್ದಾರೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್‍ ತಿಳಿಸಿದ್ದಾರೆ. ಸುದ್ದೀಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿರುವ ಸಚಿವರು,  ಒಟ್ಟು 5,99,794 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಈ ಪೈಕಿ 4,02,697 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ವಿಜ್ಞಾನ ವಿಭಾಗದ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಿದ್ದು, ಗ್ರಾಮಾಂತರ ಪ್ರದೇಶದ ಫಲಿತಾಂಶ ಶೇ.62.18ರಷ್ಟಿದ್ದು ಉತ್ತಮವಾಗಿದೆ. ನಗರ ಪ್ರದೇಶದಲ್ಲಿ 61.78ರಷ್ಟಿದೆ ಎಂದು ತಿಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ … Read more

ಕಲಾಕುಂಚ: ವಿಶ್ವ ಪರಿಸರ ದಿನಾಚರಣೆ – ಉಚಿತ ಚಿತ್ರ ಬರೆಯುವ ಸ್ಪರ್ಧೆ ಫಲಿತಾಂಶ

ಸುದ್ದಿ360 ದಾವಣಗೆರೆ, ಜೂನ್ 18: ನಗರದ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ರಾಜ್ಯ ಮಟ್ಟದ ಉಚಿತ ಚಿತ್ರ ಬರೆಯುವ ಸ್ಪರ್ಧೆ ಹಮ್ಮಿಕೊಳ್ಳಲಾಗಿತ್ತು. ಇದರ  ಫಲಿತಾಂಶ ಪ್ರಕಟಿಸಲಾಗಿದೆ ಎಂದು ಸಂಸ್ಥೆಯ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈ  ತಿಳಿಸಿದ್ದಾರೆ. ರಾಜ್ಯ ಮಟ್ಟದ ಈ ಉಚಿತ ಚಿತ್ರ ಬರೆಯುವ ಸ್ಪರ್ಧೆಗೆ ಕರ್ನಾಟಕ ವಿವಿಧ ಜಿಲ್ಲೆಗಳೂ ಸೇರಿದಂತೆ ನೆರೆ ರಾಜ್ಯಗಳಿಂದಲೂ ಸ್ಪರ್ಧಿಗಳು ಪಾಲ್ಗೊಂಡಿದ್ದರು. ಸುಮಾರು ಒಂದು ಸಾವಿರದ ಎಂಟುನೂರ ಆರವತ್ತಮೂರು ಚಿತ್ರಗಳು ಬಂದಿದ್ದವು ಎಂದು ಗಣೇಶ್‍ ಶೆಣೈ … Read more

ದ್ವಿತೀಯ ಪಿಯುಸಿ ಫಲಿತಾಂಶ- ಈ ಲಿಂಕ್‍ ಕ್ಲಿಕ್‍ ಮಾಡಿ

ಸುದ್ದಿ360 ಬೆಂಗಳೂರು, ಜೂನ್ 18: ದ್ವೀತಿಯ ಪಿಯುಸಿ ಫಲಿತಾಂಶ ಇಂದು (ಜೂ.18) ಬೆಳಿಗ್ಗೆ 11 ಗಂಟೆಗೆ ಪ್ರಕಟವಾಗಲಿದೆ ಎಂದು ಪಿಯು ಬೋರ್ಡ್ ಪ್ರಕಟಿಸಿದೆ.2022 ನೇ ಸಾಲಿಗೆ ಏಪ್ರಿಲ್ 22 ರಿಂದ ಆರಂಭವಾಗಿ ಮೇ 18 ವರೆಗ ಪರೀಕ್ಷೆ ನಡೆದಿತ್ತು. ಇದೀಗ ಉತ್ತರ ಪತ್ರಿಕೆಯ ಮೌಲ್ಯಮಾಪನ ಮುಕ್ತಾಯವಾಗಿ ಫಲಿತಾಂಶ ಪ್ರಕಟಣೆಗೆ ಸಿದ್ಧವಾಗಿದ್ದು, ಇಂದು ಬೆಳಿಗ್ಗೆ 11 ಗಂಟೆಗೆ ಫಲಿತಾಂಶ ಹೊರಬೀಳಲಿದೆ.ಫಲಿತಾಂಶವನ್ನು ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ ಸೈಟ್ www.karresult.nic.in ನಲ್ಲಿ ಪಡೆಯಬಹುದಾಗಿದೆ. ಈ ಬಾರಿ ಒಟ್ಟು … Read more

ಭದ್ರಾ  ಮೇಲ್ದಂಡೆ ಯೋಜನೆ: ಅನುದಾನ ಬಿಡುಗಡೆಗೆ ಒತ್ತಾಯ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360 ನವದೆಹಲಿ, ಜೂನ್ 18: ಭದ್ರಾ ಮೇಲ್ದಂಡೆ ಯೋಜನೆಗೆ ಈಗಾಗಲೇ ಆರ್ಥಿಕ ಇಲಾಖೆ ಅನುಮೋದನೆಯಾಗಿದೆ, ಕೂಡಲೇ ಸಚಿವ ಸಂಪುಟ ಸಭೆಯಲ್ಲಿಟ್ಟು ರಾಷ್ಟ್ರೀಯ ಯೋಜನೆಯಾಗಿ ದೊರಕುವ ಅನುದಾನವನ್ನು ಬಿಡುಗಡೆ ಮಾಡಲು ಜಲಶಕ್ತಿ ಮಂತ್ರಾಲಯ ನೇತೃತ್ವ ವಹಿಸಬೇಕೆಂದು ಒತ್ತಾಯ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಶುಕ್ರವಾರ ನವದೆಹಲಿಯಲ್ಲಿ ಜಿ.ಎಸ್.ಟಿ ಸಚಿವರ ಮಂಡಳಿ ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿ, ಕೇಂದ್ರ ಜಲಶಕ್ತಿ ಸಚಿವರೊಂದಿಗೆ ಭೇಟಿಯಾಗಿ ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ಚರ್ಚಿಸಲಾಗಿದೆ. ಮೇಕೆದಾಟು ಯೋಜನೆಯ ಡಿಪಿಆರ್ ಗೆ … Read more

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ದೆಹಲಿಗೆ

shimoga-riots-were-the-result-of-the-governments-appeasement-policy-basavaraj-bommai

ಸುದ್ದಿ೩೬೦, ಬೆಂಗಳೂರು, ಜೂ.೧೭: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಬೆಳಗ್ಗೆ ದೆಹಲಿಗೆ ಪ್ರಯಾಣ ಬೆಳಸಲಿದ್ದಾರೆ. ಅಲ್ಲಿ ಅವರು ಜಿಎಸ್ ಟಿ ಕೌನ್ಸಿಲ್ ಗೆ ಸಂಭಂದಿಸಿದಂತೆ ಸಚಿವರೊಂದಿಗಿನ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಅವರು ಬೆಳಗ್ಗೆ ತಮ್ಮ ಆರ್ ಟಿ ನಗರ ದ ನಿವಾಸದಲ್ಲಿ ಮಾಧ್ಯಮದವರೊಡನೆ ಮಾತನಾಡಿ, ಸಭೆಯ ನಂತರ ಟಿವಿ ಮಾಧ್ಯಮವೊಂದರ ಸಂದರ್ಶನದಲ್ಲಿ ಪಾಲ್ಗೊಳ್ಳಲುವುದಾಗಿ ತಿಳಿಸಿದರು. ದೆಹಲಿ ಭೇಟಿ ಬಹಳ ಅಲ್ಪಾವಧಿಯದ್ದಾಗಿದ್ದು ಸಂಜೆ ಹಿಂದಿರುಗಲಿದ್ದೇನೆ. ಪಕ್ಷದ ನಾಯಕರನ್ನು ಭೇಟಿಯಾಗುತ್ತಿಲ್ಲ . ನಡ್ಡಾಜಿಯವರು ನಾಳೆ ಇಲ್ಲಿಯೇ ಬರುವವರಿದ್ದಾರೆ. ಯಾರನ್ನೂ ಭೇಟಿಯಾಗುವ ಉದ್ದೇಶವೂ … Read more

ಕಾಂಗ್ರೆಸ್ ನ್ನು ಜನರೇ ಮನೆಗೆ ಚಲೋ ಮಾಡಲಿದ್ದಾರೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360 ದಾವಣಗೆರೆ ಜೂ.16:  ಭ್ರಷ್ಟಾಚಾರ ಪ್ರಕರಣದ ತನಿಖೆ ವಿರುದ್ದ ಹೋರಾಟ ಮಾಡುತ್ತಿರುವುದು ಕಾಂಗ್ರೆಸ್‍ನ ದುರಂತವೇ ಸರಿ. ಕಾಂಗ್ರೆಸ್‍ನ ಇಂತಹ ನಿರ್ಧಾರಗಳಿಂದ ಜನರೇ ಕಾಂಗ್ರೆಸ್ ನ್ನು ಮನೆಗೆ ಚಲೋ ಮಾಡಲಿದ್ದಾರೆ ಎಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ವ್ಯಂಗ್ಯವಾಡಿದರು. ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲು ದಾವಣಗೆರೆಗೆ ಆಗಮಿಸಿದ್ದ ಮುಖ್ಯಮಂತ್ರಿಗಳು. ಜಿಎಂಐಟಿ ಹೆಲಿಪ್ಯಾಡ್ ನಲ್ಲಿ ಎದುರಾದ ಸುದ್ದಿಗಾರರೊಂದಿಗೆ ಮಾತನಾಡಿ, ಜಾರಿ ನಿರ್ದೇಶನಾಲಯ ಕಾಂಗ್ರೆಸ್  ಮುಖಂಡರಿಗೆ ವಿಚಾರಣೆಗೆ ಆಗಮಿಸುವಂತೆ ನೋಟೀಸ್ ನೀಡಿರುವುದನ್ನು ವಿರೋಧಿಸಿ ಕಾಂಗ್ರೆಸ್ ನವರು ರಾಜಭವನ ಚಲೋ ಮಾಡುತ್ತಿರುವುದು ಕಾಂಗ್ರೆಸ್‍ನ ದುರಂತ. ಕಾಂಗ್ರೆಸ್‍ನ  … Read more

ಪಠ್ಯಪುಸ್ತಕ ಸಲಹೆಗೆ ಸರ್ಕಾರ ಮುಕ್ತವಾಗಿದೆ: ಸಿಎಂ ಬೊಮ್ಮಾಯಿ

ಸುದ್ದಿ360 ದಾವಣಗೆರೆ ಜೂ.16: ಈ ಹಿಂದಿನ ಪಠ್ಯಪುಸ್ತಕದ ಬಗ್ಗೆಯೂ ಆಕ್ಷೇಪಣೆಗಳಿವೆ.  ಯಾವುದನ್ನು ಸರಿಪಡಿಸಬೇಕು ಎಂಬುದರ ಬಗ್ಗೆ ಸಲಹೆಗೆ ಮುಕ್ತ ಅವಕಾಶವಿದೆ. ರಾಜ್ಯದ ಜನರ ಸಲಹೆ ಸೂಚನೆ ಪಡೆದು ವೆಬ್ ಸೈಟ್ ನಲ್ಲಿ ಹಾಕಲಾಗುವುದು. ಒಟ್ಟಾರೆ ಎಲ್ಲಾ ಆಕ್ಷೇಪಣೆಗಳಿಗೆ ಸಲಹೆ ಪಡೆದ ನಂತರ ಪಠ್ಯ ಪರಿಷ್ಕರಣೆ ಅಂತಿಮ ರೂಪ ಪಡೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ದಾವಣಗೆರೆಯ ಜಿಎಂಐಟಿ ಹೆಲಿಪ್ಯಾಡ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಪ್ಪಳ್ಳಿಯಿಂದ ಬೆಂಗಳೂರಿಗೆ ಪ್ರಗತಿಪರರು ಪಾದಯಾತ್ರೆ ಮಾಡುತ್ತಿರುವ  ಕುರಿತ ಮಾಧ್ಯಮದವರ ಪ್ರಶ್ನೆಗೆ … Read more

ಬಸ್ – ಲಾರಿ ಮುಖಾಮುಖಿ ಡಿಕ್ಕಿ, 25 ಜನರಿಗೆ ಗಾಯ

ಸುದ್ದಿ 360, ವಿಜಯನಗರ,ಜೂ16: ಬಳ್ಳಾರಿ-ಹೊಸಪೇಟೆ ರಾಷ್ಟ್ರೀಯ ಹೆದ್ದಾರಿ ಮಾರ್ಗದ ಹೊಸಪೇಟೆ ತಾಲೂಕಿನ ಕೊಟಗಿನಾಳ ಗ್ರಾಮದ ಸಮೀಪ ಗುರುವಾರ ಬೆಳಗ್ಗೆ ಸಾರಿಗೆ ಸಂಸ್ಥೆಯ ಬಸ್ ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾಗಿ 25 ಜನರು ಗಾಯಗೊಂಡಿದ್ದಾರೆ. ಹೊಸಪೇಟೆಯಿಂದ ಬಳ್ಳಾರಿ ಕಡೆ ಚಲಿಸುತ್ತಿದ್ದ ಸರಕಾರಿ ಬಸ್ಸಿಗೆ ಲಾರಿ ಡಿಕ್ಕಿ ಹೊಡೆದಿದ್ದು, ಲಾರಿ ಚಾಲಕನ ನಿರ್ಲಕ್ಷ್ಯತನ ಅಪಘಾತಕ್ಕೆ ಕಾರಣ ಎನ್ನಲಾಗಿದೆ‌.  ಅಪಘಾತದಿಂದ ಬಸ್ಸಿನಲ್ಲಿದ್ದ ಕೆಲ ಪ್ರಯಾಣಿಕರಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಗಾಯಗೊಂಡ ಕೆಲವರನ್ನ ಕೂಡಲೇ ಹೊಸಪೇಟೆಯ ತಾಲೂಕು ಆಸ್ಪ್ರತ್ರೆಯಲ್ಲಿ ದಾಖಲಿಸಲಾಗಿದೆ.. ಗಾಯಗೊಂಡವರಲ್ಲಿ ಬಹುತೇಕರು … Read more

error: Content is protected !!