ದಾವಣಗೆರೆಯ ಪ್ರತಿಭೆ ಪೃಥ್ವಿ ಶಾಮನೂರ್‍ಗೆ  SIIMA (ಸೌತ್‍ ಇಂಡಿಯ  ಇಂಟರ್‍ನ್ಯಾಷನಲ್‍ ಮೂವಿ ಅವಾರ್ಡ್‍) ದಿಂದ ಬೆಸ್ಟ್ ಕನ್ನಡ ಡೆಬ್ಯುಯೆಂಟ್ ಆಕ್ಟರ್ (best debut actor) ಪ್ರಶಸ್ತಿ

pruthvi shamanur-siima-davangere

ಸುದ್ದಿ360, ದಾವಣಗೆರೆ: ಕನ್ನಡ ಚಿತ್ರ ರಂಗ ಹಾಗೂ ಮಾಡೆಲಿಂಗ್‍ ಕ್ಷೇತ್ರದಲ್ಲಿ ಹಲವು ಪ್ರಶಸ್ತಿಗಳನ್ನು ಮುಡಿ ಏರಿಸಿಕೊಂಡಿರುವ  ಯುವ ಪ್ರತಿಭೆ, ಯುವ ನಾಯಕ ನಟ ಪೃಥ್ವಿ ಶಾಮನೂರು ಈಗ ಕನ್ನಡ ಚಿತ್ರರಂಗದಲ್ಲಿ  ‘ಸೌತ್‍ ಇಂಡಿಯ  ಇಂಟರ್‍ನ್ಯಾಷನಲ್‍ ಮೂವಿ ಅವಾರ್ಡ್‍’ ನಿಂದ “ಬೆಸ್ಟ್ ಕನ್ನಡ ಡೆಬ್ಯುಯೆಂಟ್ ಆಕ್ಟರ್’ (best debut actor) ಪ್ರಶಸ್ತಿಗೆ ಭಾಜನರಾಗುವ ಮೂಲಕ ಕನ್ನಡ ಚಿತ್ರರಂಗದಲ್ಲಿ ಮಿಂಚುತ್ತಿದ್ದಾರೆ. ಸೆ.15ರ ಶುಕ್ರವಾರ ರಾತ್ರಿ ದುಬೈನಲ್ಲಿ ನಡೆದ  ಸೌತ್‍ ಇಂಡಿಯ  ಇಂಟರ್‍ನ್ಯಾಷನಲ್‍ ಮೂವಿ ಅವಾರ್ಡ್‍’ (SIIMA AWARD) ನಿಂದ ಪೃಥ್ವಿ … Read more

ಶತಮಾನಕ್ಕೊಬ್ಬ ವಿಶ್ವೇಶ್ವರಯ್ಯ ಹುಟ್ಟಬೇಕು: ಬಸವರಾಜ ಬೊಮ್ಮಾಯಿ

ಸುದ್ದಿ360, ಬೆಂಗಳೂರು ಸೆ.16: ಭಾರತ ರತ್ನ ಸರ್ ಎಂ. ವಿಶ್ವೇಶ್ವರಯ್ಯ (Visvesvaraya) ಗ್ರೇಟ್ ವಿಜನರಿ ಆಗಿದ್ದರು. ಭಾರತಕ್ಕೆ ಈಗಲೂ ಅವರ ಅಗತ್ಯ ಇದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಅವರು ಶುಕ್ರವಾರ ಎಫ್ ಕೆಸಿಸಿಐ ವತಿಯಿಂದ ಏರ್ಪಡಿಸಿದ್ದ ಸಂಸ್ಥಾಪಕರ ದಿನಾಚರಣೆ ಹಾಗೂ ಸರ್ ಎಂ. ವಿ. ಸ್ಮಾರಕ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಭಾರತ ಒಂದು ವಿಶೇಷವಾಗಿರುವ ದೇಶ ಭಾರತದಂತ ದೇಶ ಇನ್ನೊಂದಿಲ್ಲ. ಭಾರತವನ್ನು ಹುಡುಕಲು ಹೋಗಿ ಬೇರೆ ದೇಶ‌ವನ್ನು ಹುಡುಕಿದರು. ಆದರೆ … Read more

ನಾಡಿನ ಮಹತ್ವದ ಚಿಂತನೆಗಳ ಪ್ರೇರಕ ಶಕ್ತಿ ಭಾರತರತ್ನ ಸರ್ ಎಂ ವಿಶ್ವೇಶ್ವರಯ್ಯ: ಎಲ್ ಎಸ್ ಪ್ರಭುದೇವ್

ಸುದ್ದಿ360, ದಾವಣಗೆರೆ ಸೆ.16:  ಈ ನಾಡಿನ ಮಹತ್ವದ ಚಿಂತನೆಗಳ, ಯೋಜನೆಗಳ ಪ್ರೇರಕ ಶಕ್ತಿ ಯಾಗಿದ್ದವರು ಭಾರತರತ್ನ ಸರ್ ಎಂ ವಿಶ್ವೇಶ್ವರಯ್ಯ ಎಂದು ವಿಶ್ರಾಂತ ಕಾರ್ಯನಿರ್ವಾಹಕ ಅಧಿಕಾರಿ,ಇಂಜಿನಿಯರ್ ಎಲ್ ಎಸ್ ಪ್ರಭುದೇವ್ ತಿಳಿಸಿದರು. ಅವರು ಶುಕ್ರವಾರ ನಗರದ ಬಿಇಎ ಶಿಕ್ಷಣ ಮಹಾವಿದ್ಯಾಲಯದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಬಿಇಎ  ಶಿಕ್ಷಣ ಮಹಾವಿದ್ಯಾಲಯ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಡಾ. ಸರ್ ಎಂ ವಿಶ್ವೇಶ್ವರಯ್ಯನವರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಭಾರತರತ್ನ  ಸರ್ ಎಂ ವಿಶ್ವೇಶ್ವರಯ್ಯ ಎಂಬ ವಿಷಯದ ಕುರಿತಾಗಿ ಉಪನ್ಯಾಸ ನೀಡುತ್ತಾ … Read more

ಸೆ.17: ದಾವಣಗೆರೆ ಜಿಲ್ಲಾ ಗಂಗಾಮತಸ್ತರ (ಬೆಸ್ತರ) ಸಂಘ ದಿಂದ ಚಿಂತನ-ಮಂಥನ ಸಭೆ

ಸುದ್ದಿ360, ದಾವಣಗೆರೆ: ಸಮಾಜದ ಅಭಿವೃದ್ಧಿ ಮತ್ತು ಮೀನುಗಾರಿಕೆ ಬಗ್ಗೆ ಚಿಂತನ ಮಂಥನ ಸಭೆ ಮತ್ತು ಸಮಾಜದ ಮುಖಂಡರ ಸಭೆಯನ್ನು ಇದೆ ಸೆ.17ರ ಭಾನುವಾರ ಮಧ‍್ಯಾಹ್ನ 12.30 ಗಂಟೆಗೆ ಹಮ್ಮಿಕೊಳ್ಳಲಾಗಿದೆ.  ನಗರದ ಎಂಸಿಸಿ ಎ ಬ್ಲಾಕ್, ಆಶ್ರಯ ಆಸ್ಪತ್ರೆ ಹತ್ತಿರ ಇರುವ ಗಂಗಾಮತಸ್ಥರ ( ಬೆಸ್ತರ ) ಸಂಘದ ವಿದ್ಯಾರ್ಥಿ ನಿಲಯದ ಸಭಾಭವನದಲ್ಲಿ ನಡೆಯಲಿದೆ. ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್ ಸಭೆಯ ನೇತೃತ್ವ ವಹಿಸಲಿದ್ದಾರೆ.  ಈ ಸಭೆಗೆ ಜಿಲ್ಲಾ ಕಾರ್ಯಕಾರಿ ಸಮಿತಿಯ ಪಾದಾಧಿಕಾರಿಗಳು ಸದಸ್ಯರು ಮತ್ತು  ಜಿಲ್ಲೆಯ ಎಲ್ಲಾ … Read more

ಹುಬ್ಬಳ್ಳಿ: ರಾಣಿ ಚೆನ್ನಮ್ಮ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಅನುಮತಿಗಾಗಿ 2ನೇ ದಿನಕ್ಕೆ ಕಾಲಿಟ್ಟ ಧರಣಿಯಲ್ಲಿ ಶಾಸಕ ಮಹೇಶ ಟೆಂಗಿನಕಾಯಿ

ಸುದ್ದಿ360, ಹುಬ್ಬಳ್ಳಿ ಸೆ.15: ನಗರದ ರಾಣಿ ಚನ್ನಮ್ಮ‌ ಮೈದಾನ(ಈದ್ಗಾ)ದಲ್ಲಿ ಗಣೇಶಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ನೀಡಬೇಕು ಎಂದು ಆಗ್ರಹಿಸಿ ಬಿಜೆಪಿ  ಕಾರ್ಯಕರ್ತರು ನಡೆಸುತ್ತಿರುವ ಪ್ರತಿಭಟನೆ ಶುಕ್ರವಾರವೂ ಮುಂದುವರಿದಿದೆ. ಅರವಿಂದ ಬೆಲ್ಲದ ನೇತೃತ್ವದಲ್ಲಿ ಗುರುವಾರ ಬೆಳಗ್ಗೆಯಿಂದಲೇ ಪ್ರತಿಭಟನೆ ಹು-ಧಾ ಪಶ್ಚಿಮ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ ನೇತೃತ್ವದಲ್ಲಿ ಗುರುವಾರ ಬೆಳಗ್ಗೆಯಿಂದ ಆರಂಭವಾದ ಪ್ರತಿಭಟನೆ ಅಹೋರಾತ್ರಿ ನಡೆಯಿತು. ಪಾಲಿಕೆಯ ಬಿಜೆಪಿ ಸದಸ್ಯರು ಆಯುಕ್ತರ ಕಚೇರಿಯಲ್ಲಿಯೇ ಮಲಗಿ ಪ್ರತಿಭಟಿಸಿದರು. ಬೆಂಗಳೂರಿನಿಂದ ಹುಬ್ಬಳ್ಳಿಗೆ ಶುಕ್ರವಾರ ಬೆಳಗ್ಗೆ ಬಂದ ಹು-ಧಾ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ … Read more

ಆಮ್‍ ಆದ್ಮಿಯಿಂದ  ‘ಎಲ್ಲಾ ಸೇರೋಣ; ಬನ್ನಿ ಮಾತಾಡೋಣ’

ಸುದ್ದಿ360 ದಾವಣಗೆರೆ ಸೆ.12: ಸಾರ್ವಜನಿಕರ ಸಮಸ್ಯೆ ಅರಿಯಲು ಆಮ್ ಆದ್ಮಿ ಪಕ್ಷದಿಂದ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ `ಎಲ್ಲಾ ಸೇರೋಣ; ಬನ್ನಿ ಮಾತಾಡೋಣ’ ಎಂಬ ಸಂವಾದ ಕಾರ್ಯಕ್ರಮ ಆಯೋಜಿಸಲಾಗುತ್ತಿರುವುದಾಗಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಹೇಳಿದರು. ನಗರದಲ್ಲಿ ಇಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಆಮ್ ಆದ್ಮಿ ಪಕ್ಷದ ಸಂಘಟನೆ ಮಾಡಿ, ಶಕ್ತಿ ಹೆಚ್ಚಿಸುವ ಉದ್ದೇಶದೊಂದಿಗೆ ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳಲಾಗಿದೆ. ಪ್ರತಿ ಜಿಲ್ಲೆಯಲ್ಲಿ 15-20 ಗ್ರಮಗಳನ್ನು ಒಳಗೊಂಡಂತೆ ಗ್ರಾಮಾಂತರ ಪ್ರದೇಶಗಳಲ್ಲಿ ಒಟ್ಟು ಎರಡು ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. ಈಗಾಗಲೆ … Read more

ಡಾ.ಎ ಜೆ ರವಿಕುಮಾರ್ ಇವರಿಗೆ ಪತಂಜಲಿ ರತ್ನ ರಾಜ್ಯ ಪ್ರಶಸ್ತಿ

ಸುದ್ದಿ360 ಶಿವಮೊಗ್ಗ: ಪತಂಜಲಿ ಯೋಗ ಮತ್ತು ಪ್ರಕೃತಿ ಸಂಸ್ಥೆ ಜಾನಪದ ಕಲಾ ಕೇಂದ್ರ ಹೊಸಮನೆ ಶಿವಮೊಗ್ಗ ಸಂಸ್ಥೆಯ  25ನೇ ವರ್ಷದ ಬೆಳ್ಳಿ ಹಬ್ಬದ ಪ್ರಯುಕ್ತ ಕನಕ ಕಲಾವೈಭವ ಜಾನಪದ ಕನಕಶ್ರೀ ಚೇತನ ಪತಂಜಲಿ ರತ್ನ ರಾಜ್ಯ ಪ್ರಶಸ್ತಿಯನ್ನು ಡಾ.ಎ ಜೆ ರವಿಕುಮಾರ್, ಸಮಾಜ ಸೇವಕರು ದಾವಣಗೆರೆ ಇವರಿಗೆ  ಪ್ರಶಸ್ತಿ ನೀಡಿ ಸನ್ಮಾನಿಸಿದೆ. ಸಮಾರಂಭದ ಅಧ್ಯಕ್ಷತೆಯನ್ನುಗೌರವಾಧ್ಯಕ್ಷರಾದ ಎಂ ಈಶ್ವರಪ್ಪ ನವುಲೆ ವಹಿಸಿದ್ದರು. ಸಂಸ್ಥೆಯ ಅಧ್ಯಕ್ಷರಾದ ಎಚ್ ಶ್ಯಾಮಲಾ, ಶಿವಾನಂದಪ್ಪ, ಪರಿಸರ ಪ್ರೇಮಿ  ರಮೇಶ್, ಡಾ.ಬಾಲಣ್ಣ  ಹಾಗೂ ರಾಜ್ಯ ಯುವ … Read more

ದಾವಣಗೆರೆಯಲ್ಲಿ ಹೀಗೊಂದು ದುಬಾರಿ ಹೈಟೆಕ್ ಶೌಚಾಲಯ!!!? – ಕುಚೇಷ್ಟೆ ಅಂದುಕೊಳ್ಳೋದಾದರೆ ಪ್ರತ್ಯಕ್ಷವಾಗಿ ನೋಡಬಹುದು ಅಂತಾರೆ ಇದನು ಕಂಡವರು. . .!

ಪ್ರಪಂಚದಲ್ಲಿಯೇ ದುಬಾರಿ ಹೈಟೆಕ್ ಶೌಚಾಲಯ ನಿರ್ಮಿಸಿದ ದಾವಣಗೆರೆ ಸ್ಮಾರ್ಟ್ ಸಿಟಿ ಅಧಿಕಾರಿಗಳು – ಕೆ.ಎಲ್.ಹರೀಶ್ ಬಸಾಪುರ ಸುದ್ದಿ360: ದಾವಣಗೆರೆ ನಗರದಲ್ಲಿ ಸುಮಾರು 26 ಕೋಟಿ ರೂ ವೆಚ್ಚದಲ್ಲಿ ಎಸ್ಕಲೇಟರ್, ಲಿಫ್ಟ್, ಸಿಸಿ ಕ್ಯಾಮೆರಾ ಗಳು, ಬಹು ಮಹಡಿ ಮಳಿಗೆಗಳು ಸೇರಿದಂತೆ ನಿರ್ಮಿಸಿರುವ ಖಾಸಗಿ ಬಸ್ ನಿಲ್ದಾಣ ಕೇವಲ ಸಾರ್ವಜನಿಕರ ಶೌಚಾಲಯಕ್ಕೆ ಮೀಸಲಾಗಿರುವುದನ್ನು ನೋಡಿದ ನಾಗರಿಕರು ಪ್ರಪಂಚದಲ್ಲಿಯೇ ದುಬಾರಿ ಹೈಟೆಕ್ ಶೌಚಾಲಯ (high-tech toilet) ವನ್ನು ನಮ್ಮ ಸ್ಮಾರ್ಟ್ ಸಿಟಿ ಎಂಜಿನಿಯರ್ ಗಳು ಹಾಗೂ ಅಧಿಕಾರಿಗಳು ನಿರ್ಮಿಸಿದ್ದಾರೆ ಎಂದು … Read more

‘ರಾಜ್ಯ ಸರ್ಕಾರದ ಜನ ವಿರೋಧಿ ನೀತಿ’ –  ಬಿಜೆಪಿ ಪ್ರತಿಭಟನೆ

ಸುದ್ದಿ360 ಬೆಂಗಳೂರು ಸೆ.8:  ರಾಜ್ಯ ಸರ್ಕಾರದ ಜನ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಗುತ್ತಿದೆ. “ಸ್ವಾತಂತ್ರ್ಯ ಉದ್ಯಾನವನ”ದಲ್ಲಿ ನಡೆಯುತ್ತಿರುವ ಈ ಪ್ರತಿಭಟನೆಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.‌ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಡಿ.ವಿ. ಸದಾನಂದಗೌಡ , ಮಾಜಿ ಸಚಿವರಾದ ಆರ್ ಅಶೋಕ್, ಗೋಪಾಲಯ್ಯ, ಮುನಿರತ್ನ, ಬೈರತಿ ಬಸವರಾಜ, ಕೋಟ ಶ್ರೀನಿವಾಸ ಪೂಜಾರಿ ಸೇರಿದಂತೆ ಮಾಜಿ ಸಚಿವರು ಶಾಸಕರು ಪಾಲ್ಗೊಂಡಿದ್ದಾರೆ.

ಸೆ.9: ದಾವಣಗೆರೆ ಜಿಲ್ಲಾ ಕ.ಸಾ.ಪ.ದಿಂದ ‘ಗ್ರಾಮೀಣ ಸಿರಿ’ – ‘ನಗರ ಸಿರಿ’ ಪ್ರಶಸ್ತಿ ಪ್ರದಾನ ಮತ್ತು ಪ್ರತಿಭಾ ಪುರಸ್ಕಾರ

ಸುದ್ದಿ360 ದಾವಣಗೆರೆ, ಸೆ. 7: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು 2022-23ನೇ ಸಾಲಿನ ದಾವಣಗೆರೆ ಜಿಲ್ಲಾ ಮಟ್ಟದ ‘ಗ್ರಾಮೀಣ ಸಿರಿ’ ಹಾಗೂ ‘ನಗರ ಸಿರಿ’ ಪ್ರಶಸ್ತಿ ಪ್ರದಾನ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಇದೇ ಸೆ.9ರ ಶನಿವಾರ ನಗರದ ಕುವೆಂಪು ಕನ್ನಡ ಭವನದಲ್ಲಿ ಆಯೋಜಿಸಿದೆ. ಸಮಾರಂಭವು ಅಂದು ಬೆಳಿಗ್ಗೆ 11 ಗಂಟೆಗೆ ಪ್ರಾರಂಭಗೊಳ್ಳಲಿದ್ದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ರವಿಚಂದ್ರ ಇವರು ಉದ್ಘಾಟಿಸಲಿದ್ದಾರೆ. ಜಿಲ್ಲಾ ಕ.ಸಾ.ಪ ಅಧ್ಯಕ್ಷರಾದ ಬಿ. ವಾಮದೇವಪ್ಪನವರ  ಅಧ್ಯಕ್ಷತೆಯಲ್ಲಿ ನಡೆಯಲಿದೆ. ಜಾನಪದ … Read more

error: Content is protected !!