ದಾವಣಗೆರೆ: ಜೂ.4ರಂದು ಮಾಧ್ಯಮ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ-ಬಿರುದು-ಸಮ್ಮಾನ

ದಾವಣಗೆರೆ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಜೂನ್. 4 ರಂದು ಬೆಳಿಗ್ಗೆ 10. 45ಕ್ಕೆ ನಗರದ ದೇವರಾಜು ಅರಸು ಬಡಾವಣೆಯಲ್ಲಿನ ಶಿವಧ್ಯಾನ ಮಂದಿರದಲ್ಲಿ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಸಂದರ್ಭದಲ್ಲಿ 2022 ನೇ ಸಾಲಿನ ಮಾಧ್ಯಮ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ಪ್ರದಾನ, ವಿವಿಧ ಪ್ರಶಸ್ತಿಗಳ ಪುರಸ್ಕೃತ ಪತ್ರಕರ್ತರಿಗೆ ಗೌರವಾರ್ಪಣೆ, ಮಹಿಳಾ ಪತ್ರಕರ್ತರಿಗೆ ಸನ್ಮಾನ ಹಾಗೂ ಪತ್ರಕರ್ತರಿಗೆ ಧನಸಹಾಯ ವಿತರಣಾ ಕಾರ್ಯಕ್ರಮ ಜರುಗಲಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಇ.ಎಂ ಮಂಜುನಾಥ್ ತಿಳಿಸಿದರು. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ … Read more

ಮಾಜಿಯಿಂದ ಹಾಲಿ ಮುಖ್ಯಮಂತ್ರಿಗಳಿಗೆ ಹೀಗೊಂದು ಪತ್ರ

ಸನ್ಮಾನ್ಯ ಮುಖ್ಯಮಂತ್ರಿಗಳೆ,  ತಾವು ಮುಖ್ಯಮಂತ್ರಿ ಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದು ತಮಗೆ ನನ್ನ ಅಭಿನಂದನೆಗಳು. ಕಳೆದ ಎರಡು ವಾರದಿಂದ ತಾವು ತಮ್ಮ ಪಕ್ಷ ನೀಡಿರುವ ಐದು ಗ್ಯಾರೆಂಟಿಗಳ ಅನುಷ್ಠಾನಕ್ಕಾಗಿ ಹಲವಾರು ಸಭೆಗಳನ್ನು ನಡೆಸಿದ್ದೀರಿ. ಅದರಲ್ಲಿಯೂ ಆರ್ಥಿಕ ಇಲಾಖೆಯ ಅಧಿಕಾರಿಗಳ ಜೊತೆ ಸಭೆ ನಡೆಸಿರುವುದು ಎಲ್ಲರಿಗೂ ತಿಳಿದಿದೆ‌. ತಾವೇ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿರುವಂತೆ ಎಲ್ಲ ಗ್ಯಾರೆಂಟಿ ಯೋಜನೆಗಳನ್ನು ಅನುಷ್ಠಾನ ಮಾಡಲು ಸುಮಾರು ಐವತ್ತು ಸಾವಿರ ಕೋಟಿ ರೂಪಾಯಿ ಬೇಕೆಂದು ರಾಜ್ಯದ ಜನತೆಗೆ ತಿಳಿಸಿದ್ದೀರಿ. ಈ ಯೋಜನೆಗಳ ಅನುಷ್ಠಾನದ ಸಂದರ್ಭದಲ್ಲಿ … Read more

ದಾವಣಗೆರೆ ಜಿಲ್ಲೆಯ ನೂತನ ಪೊಲೀಸ್ ಅಧೀಕ್ಷಕರಾಗಿ ಡಾ. ಕೆ ಅರುಣ್ ಅಧಿಕಾರ ಸ್ವೀಕಾರ

ಸುದ್ದಿ360 ದಾವಣಗೆರೆ, ಏ. 24: ದಾವಣಗೆರೆ ಜಿಲ್ಲೆಯ ನೂತನ ಪೊಲೀಸ್ ಅಧೀಕ್ಷಕರಾಗಿ ಡಾ. ಕೆ ಅರುಣ್ ಐಪಿಎಸ್ ರವರು  ಇಂದು ಅಧಿಕಾರ ವಹಿಸಿಕೊಂಡರು. ನೂತನ ಅಧಿಕಾರಿ ಡಾ. ಅರುಣ್ ಅವರು  ಈ ಮೊದಲು ವಿಜಯನಗರ ಹಾಗೂ ಚಿತ್ರದುರ್ಗ ಜಿಲ್ಲೆಯ ರಕ್ಷಣಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದು, ಕಲಬುರಗಿಯ ಪೊಲೀಸ್ ತರಬೇತಿ ಶಾಲೆಯ ಪ್ರಾಚಾರ್ಯರಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಈ ಮೊದಲು ಜಿಲ್ಲೆಯ ವರಿಷ್ಠಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಸಿ.ಬಿ. ರಿಷ್ಯಂತ್‍ ಅವರು ಚುನಾವಣೆ ಮಾರ್ಗಸೂಚಿಯನ್ವಯ ವರ್ಗಾವಣೆ ಹೊಂದಿದ್ದಾರೆ. ಸಿ. ಬಿ. ರಿಷ್ಯಂತ್‍ ಅವರ … Read more

ಆಸ್ಪತ್ರೆಯಲ್ಲಿ ಎಚ್ ಡಿಕೆ ಭೇಟಿಯಾಗಿ ಆರೋಗ್ಯ ವಿಚಾರಿಸಿದ ಆದಿಚುಂಚನಗಿರಿ ಶ್ರೀ

ಸುದ್ದಿ360, ಏ. 23: ಆರೋಗ್ಯದ ಏರುಪೇರಿನಿಂದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರನ್ನು ಶ್ರೀ ಆದಿಚುಂಚನಗಿರಿ ಮಹಸಂಸ್ಥಾನ ಮಠದ ಪರಮಪೂಜ್ಯ ಜಗದ್ಗುರುಗಳಾದ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರು ಇಂದು ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದರು. ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಬಿರುಸಿನ ಓಡಾಟದಿಂದ ಪ್ರಚಾರ ಮಾಡುತ್ತಿದ್ದ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅವರು ಶನಿವಾರ ಜ್ವರದಿಂದ ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿದ್ದರು. ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.

ದಾವಣಗೆರೆ ಎಸ್‌ಪಿ ರಿಷ್ಯಂತ್ ವರ್ಗಾವಣೆಗೆ ಕಾರಣ ಏನು ಅಂತೀರಾ?

ಸುದ್ದಿ360 ದಾವಣಗೆರೆ ಏ. 23: ದಾವಣಗೆರೆ ಪೊಲೀಸ್ ವರಿಷ್ಠಾಧಿಕಾರಿಯಾಗಿ‌ ಸೇವೆ ಸಲ್ಲಿಸುತ್ತಿದ್ದ ಸಿ.ಬಿ ರಿಷ್ಯಂತ್ ಅವರ ವರ್ಗಾವಣೆಯಾಗಿದ್ದು. ಸ್ಥಳ ಸೂಚಿಸಿಲ್ಲ. ಈ ಕುರಿತಾಗಿ ರಿಷ್ಯಂತ್ ಅವರು ಮಾಧ್ಯಮದವರಿಗೆ‌ ಮಾಹಿತಿ‌ ನೀಡಿದ್ದು,  ಅವರು ತಮ್ಮ ವರ್ಗಾವಣೆಗೆ ಕಾರಣವನ್ನು ತಿಳಿಸಿದ್ದಾರೆ.  ತಮ್ಮ ಹತ್ತಿರದ ಸಂಬಂಧಿಯೊಬ್ಬರು ವಿಧಾನಸಭಾ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಹಿನ್ಮೆಲೆಯಲ್ಲಿ  ಚುನಾವಣಾ ಮಾರ್ಗಸೂಚಿಗಳ ಪ್ರಕಾರ ರಾಜ್ಯದ ಯಾವುದೇ ಕ್ಷೇತ್ರದಲ್ಲಿ ನಿಕಟ ಸಂಬಂಧಿ ಚುನಾವಣೆಯಲ್ಲಿ ನಿಂತಿದ್ದರೆ ಅಧಿಕಾರಿ ಚುನಾವಣಾ ಪ್ರಕ್ರಿಯೆಯ ಭಾಗವಾಗಿರಬಾರದು. ಈ ಕಾರಣದಿಂದಾಗಿ ನನ್ನನ್ನು ದಾವಣಗೆರೆಯಿಂದ ವರ್ಗಾವಣೆ ಮಾಡಲಾಗಿದೆ ಎಂದು … Read more

ಡಾ.ಕೆ. ಅರುಣ್ ದಾವಣಗೆರೆ ನೂತನ ಎಸ್ ಪಿ

ಸುದ್ದಿ360, ದಾವಣಗೆರೆ ಏ.23: ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿ ಆಗಿ ಡಾ.ಕೆ. ಅರುಣ್ ನಿಯೋಜನೆಗೊಂಡಿದ್ದಾರೆ. ದಾವಣಗೆರೆ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಸಿ.ಬಿ. ರಿಷ್ಯಂತ್ ಅವರನ್ನು ರಾಜ್ಯ ಸರಕಾರ ವರ್ಗಾವಣೆ ಮಾಡಿದ್ದು, ಅವರ ಜಾಗಕ್ಕೆ ಡಾ.ಕೆ. ಅರುಣ್ ಅವರನ್ನು ನೇಮಿಸಿ ಆದೇಶ ಹೊರಡಿಸಿದೆ. ಆದರೆ, ರಿಷ್ಯಂತ್ ಅವರಿಗೆ ಯಾವುದೇ ಸ್ಥಳ ನಿಯೋಜನೆ ಮಾಡಿಲ್ಲ. ಈ ಹಿಂದೆ ವಿಜಯನಗರ ಜಿಲ್ಲೆಯ ರಕ್ಷಣಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಡಾ. ಅರುಣ್ ಅವರು ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ವರ್ಗಾವಣೆ ಆಗುವ … Read more

33 ವರ್ಷಗಳಿಂದ ಲಿಂಗಾಯತರನ್ನು ಸಿಎಂ ಮಾಡದ ಕಾಂಗ್ರೆಸ್ನದ್ದು ಓಲೈಕೆ ರಾಜಕಾರಣ – ವೀರೇಶ್ ಹನಗವಾಡಿ

ಸುದ್ದಿ360 ದಾವಣಗೆರೆ, ಏ.23: ಕಳೆದ 33 ವರ್ಷಗಳಿಂದ ಲಿಂಗಾಯತರನ್ನು ಮುಖ್ಯಮಂತ್ರಿ ಸ್ಥಾನದಲ್ಲಿ ಕೂರಿಸದ, ಕಾಂಗ್ರೆಸ್ ಈಗ ಓಲೈಕೆ ರಾಜಕಾರಣ ಮಾಡಲು ಮುಂದಾಗಿದೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ವೀರಶೈವ-ಲಿಂಗಾಯತರನ್ನು ವಿಭಜಿಸಲು ಪ್ರಯತ್ನಿಸಿದ್ದನ್ನು ಜನ ಮರೆತಿಲ್ಲ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ವೀರೇಶ್ ಹನಗವಾಡಿ ಹೇಳಿದರು. ಜಗದೀಶ್ ಶೆಟ್ಟರ್ ಶೆಟ್ಟರ್ ಆತ್ಮಾವಲೋಕನ ಮಾಡಿಕೊಳ್ಳಬೇಕು. ಬಾವುಟ ಬದಲಾದಾಕ್ಷಣ ಅವರಲ್ಲಿರುವ ಭಾವನೆಗಳು ಬದಲಾಗಲು ಸಾಧ್ಯವಿಲ್ಲ. -ಡಾ.ಎ.ಎಚ್. ಶಿವಯೋಗಿಸ್ವಾಮಿ, ವಿಧಾನ ಪರಿಷತ್ ಮಾಜಿ ಮುಖ್ಯ ಸಚೇತಕ . ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲಿಂಗಾಯತ ಸಮುದಾಯ ಪ್ರಜ್ಞಾವಂತ … Read more

ಮಾಯಕೊಂಡ: ಬಿಜೆಪಿ ಬಂಡಾಯ ಶಮನಕ್ಕೆ ಯತ್ನ- ವೀರೇಶ್ ಹನಗವಾಡಿ

ಸುದ್ದಿ360 ದಾವಣಗೆರೆ, ಏ. 22: ಮಾಯಕೊಂಡ ಕ್ಷೇತ್ರದಲ್ಲಿ ಆಕಾಂಕ್ಷಿಗಳು ಒಟ್ಟಾಗಿ ಬಂಡಾಯ ಅಭ್ಯರ್ಥಿಯಾಗಿ ಶಿವಪ್ರಕಾಶ್‍ ರನ್ನು ಕಣಕ್ಕಿಳಿಸಿದ್ದಾರೆ. ಅಲ್ಲಿನ ಬಂಡಾಯವನ್ನು ಶಮನಗೊಳಿಸುವ ಪ್ರಯತ್ನ ನಡೆಯುತ್ತಿದೆ. ನಾಮ ಪತ್ರ ಹಿಂಪಡೆಯಲು ಇನ್ನೂ ಒಂದು ದಿನ ಕಾಲಾವಕಾಶ ಇದ್ದು ಬಂಡಾಯ ಶಮನವಾಗುವ ವಿಶ್ವಾಸವಿದೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ವೀರೇಶ್ ಹನಗವಾಡಿ ತಿಳಿಸಿದರು. ಈಗಾಗಲೇ ಬಂಡಾಯ ಎದ್ದಿರುವವರ ಜತೆ ಮಾತುಕತೆ ನಡೆಯುತ್ತಿದೆ. ಎಂದು ತಿಳಿಸಿದ ಅವರು,  ನಾಮಪತ್ರ ವಾಪಸ್ ತೆಗೆಸುತ್ತೇವೆ. ಎಲ್ಲೂ ಬಂಡಾಯವಾಗಲು ಬಿಡುವುದಿಲ್ಲ. ಮಾಡಾಳ್ ಮಲ್ಲಿಕಾರ್ಜುನ್ ಜತೆ ಮಾತುಕತೆ … Read more

ಮಹಿಳೆ ನಾಪತ್ತೆ ಪ್ರಕರಣ – ಫೋನ್ ಪೇ ಮೂಲಕ 50 ಸಾವಿರ ಲಂಚ – ಪಿಎಸ್ಐ, ಕಾನ್ಸ್ಟೇಬಲ್ ಲೋಕಾಯುಕ್ತ ಬಲೆಗೆ

ಸುದ್ದಿ360 ದಾವಣಗೆರೆ, ಏ.22: ಮಹಿಳೆ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಹಾಯ ಮಾಡಲು ಪೋನ್ ಪೇ ಮೂಲಕ ಲಂಚದ ಹಣ ಸ್ವೀಕರಿಸಿದ್ದ ದಾವಣಗೆರೆ ಗ್ರಾಮಾಂತರ ಠಾಣೆ ಪಿಎಸ್ಐ ಶಿವನಗೌಡ ಹಾಗೂ ಕಾನ್ಸ್ಟೇಬಲ್ ಶನಿವಾರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಇವರಿಬ್ಬರು  ನಾಪತ್ತೆ ಪ್ರಕರಣದಲ್ಲಿ ಕಾಣೆಯಾದ ಮಹಿಳೆಯನ್ನು ಜೊತೆಗೆ ಕಳಿಸಿಕೊಡಲು ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ತಾಳೆಕಟ್ಟೆ ಗ್ರಾಮದ ಕೆ.ರಂಗಸ್ವಾಮಿ ಎಂಬುವರಿಗೆ 50 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ರಂಗಸ್ವಾಮಿ ದಾವಣಗೆರೆ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ … Read more

ಕೇಂದ್ರ ಸರ್ಕಾರದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ದಾವಣಗೆರೆ; ಏ.18 : ಕೇಂದ್ರ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗವು ವಿವಿಧ ಇಲಾಖೆಯಲ್ಲಿ ಖಾಲಿ ಇರುವ ಸಹಾಯಕ ಸೆಕ್ಷನ್ ಆಫೀಸರ್, ಸಹಾಯಕ ಲೆಕ್ಕ ಪರಿಶೋಧನಾ ಆಧಿಕಾರಿ, ಸಹಾಯಕ ಲೆಕ್ಕಪತ್ರ ಅಧಿಕಾರಿ, ಇನ್ಸ್ಪೆಕ್ಟರ್, ಎಇಒ, ಸಬ್- ಇನ್ಸ್ಪೆಕ್ಟರ್, ಕಿರಿಯ ಅಂಕಿ ಅಂಶ ಅಧಿಕಾರಿ, ಎನ್‌ಹೆಚ್‌ಆರ್‌ಸಿ ಸಂಶೋಧನಾ ಸಹಾಯಕ, ಹಿರಿಯ ಸೆಕ್ರೆಟರಿಯೇಟ್ ಸಹಾಯಕ, ಅಪ್ಪರ್ ಡಿವಿಜನ್ ಕ್ಲರ್ಕ್, ಅಂಚೆ ಸಹಾಯಕ, ವಿಂಗಡಣೆ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಅಥವಾ ತತ್ಸಮಾನ … Read more

error: Content is protected !!