“ಭಾವಗಳ ಬಿಂಬ” ಕವನ ಸಂಕಲನ ಲೋಕಾರ್ಪಣೆ

ಗೃಹಿಣಿಯರ ಸಾಹಿತ್ಯದೊಲವಿನಿಂದ ಸಮಾಜಕ್ಕೆ ಬೆಳಕು: ಶಿವಾನಂದ ತಗಡೂರು ಅಭಿಮತ ದಾವಣಗೆರೆ: ಬದುಕಿನ ಜಂಜಾಟದಲ್ಲಿ ಮುಳುಗಿರುವ ಗೃಹಿಣಿಯರು ತಮ್ಮ ಬಿಡುವಿನ ವೇಳೆಯಲ್ಲಿ ಸಾಹಿತ್ಯಾಸಕ್ತಿ ಹಾಗೂ ಬರವಣಿಗೆಯೊಂದಿಗೆ ಬೆಸೆದುಕೊಂಡಲ್ಲಿ ಹೊರಗಿನ ಜಗತ್ತಿಗೆ ಬೆಳಕನ್ನು ನೀಡಬಹುದು. ಇಂತಹ ತುಡಿತ ಹೊಂದಿರುವ ಶ್ರೀಮತಿ ಅನುಪಮ ವಿರುಪಾಕ್ಷಪ್ಪ ಅವರ ಸಾಹಿತ್ಯ ಕೃಷಿ ಶ್ಲಾಘನೀಯವಾದುದು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (KUWJ) ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅಭಿಪ್ರಾಯಪಟ್ಟರು. ಅವರು ಎ.ವಿ.ಪ್ರಕಾಶನ, ದಾವಣಗೆರೆ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ದಾವಣಗೆರೆ ಇವರ ಸಹಯೋಗದಲ್ಲಿ ಆಯೋಜನೆಗೊಂಡಿದ್ದ … Read more

ತರಬೇತುದಾರ ಹೆಚ್.ದಾದಾಪೀರ್‌ಗೆ ‘ಅತ್ಯುತ್ತಮ ಶಿಸ್ತು ತೀರ್ಪುಗಾರ’ ಪ್ರಶಸ್ತಿ: ಅಭಿನಂದನೆ

best-disciplined-referee-award-to-coach-h-dadapir-congratulations

ಸುದ್ದಿ360 ದಾವಣಗೆರೆ: ದಾವಣಗೆರೆಯ ಹಿರಿಯ ಕ್ರೀಡಾಪಟು ಅಂತರಾಷ್ಟ್ರೀಯ ತೀರ್ಪುಗಾರರಾದ ಏಕಲವ್ಯ ಪ್ರಶಸ್ತಿ ವಿಜೇತ ಹೆಚ್.ದಾದಾಪೀರ್‌ (H Dadapir) ಇವರು ನವದೆಹಲಿಯಲ್ಲಿಇತ್ತೀಚೆಗೆ ನಡೆದಕೇಲೋ ಇಂಡಿಯಾ ಪ್ಯಾರಾ ಪವರ್ ಲಿಫ್ಟಿಂಗ್‌ಸ್ಪರ್ಧೆಯಲ್ಲಿ ತೀರ್ಪುಗಾರರಾಗಿ ಭಾಗವಹಿಸಿ ‘ಅತ್ಯುತ್ತಮ ಶಿಸ್ತು ತೀರ್ಪುಗಾರ’ ಪ್ರಶಸ್ತಿಗೆ (best disciplined referee award) ಭಾಜನರಾಗಿದ್ದಾರೆ. ಹೆಚ್.ದಾದಾಪೀರ್‌ ಅವರಿಗೆ ದಾವಣಗೆರೆ ಜಿಲ್ಲಾಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್, ದಾವಣಗೆರೆ ಜಿಲ್ಲಾ ಪೊಲೀಸ್‌ ಅಧೀಕ್ಷಕರಾದ ಶ್ರೀಮತಿ ಉಮಾ ಪ್ರಶಾಂತ್, ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಡಿವೈಎಸ್ಪಿ ಪಿ.ಬಿ.ಪ್ರಕಾಶ್, ಗ್ರೂಪ್‌ ಆಫ್‌ ಐರನ್‌ ಗೇಮ್ಸ್ ಹಾಗೂ … Read more

ಅ.2: ನೂತನ ಬಸ್ ನಿಲ್ದಾಣಕ್ಕೆ ಕಾಂ.ಪಂಪಾಪತಿ ಹೆಸರಿಡುವ ಬಗ್ಗೆ AITUC ಚಿಂತನ-ಮಂಥನ ಸಭೆ

ಸುದ್ದಿ360 ದಾವಣಗೆರೆ ಸೆ.30: ಆಲ್ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್, ದಾವಣಗೆರೆ ಜಿಲ್ಲಾ ಸಮಿತಿ ವತಿಯಿಂದ ನಗರದ ಅಶೋಕ ರಸ್ತೆಯಲ್ಲಿರುವ ಕಾಂ. ಪಂಪಾಪತಿ ಭವನದಲ್ಲಿ ಅಕ್ಟೋಬರ್ 2ರ ಬೆಳಿಗ್ಗೆ 11.30ಕ್ಕೆ ದಾವಣಗೆರೆ ಕೆ.ಎಸ್.ಆರ್.ಟಿ.ಸಿ. ನೂತನ ಬಸ್ ನಿಲ್ದಾಣಕ್ಕೆ ಕಾಂ.ಪಂಪಾಪತಿ ಹೆಸರಿಡುವ ಬಗ್ಗೆ ಚಿಂತನ-ಮಂಥನ ಸಭೆ ಆಯೋಜಿಸಲಾಗಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಹೊಸತು ವಾರ ಪತ್ರಿಕೆ ಸಂಪಾದಕ ಡಾ. ಸಿದ್ದನಗೌಡ ಪಾಟೀಲ್ ನೆರವೇರಿಸಲಿದ್ದು, ಎಐಟಿಯುಸಿ ಜಿಲ್ಲಾ ಅಧ್ಯಕ್ಷ ಕೆ.ರಾಘವೇಂದ್ರ ನಾಯರಿ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಮಾಯಕೊಂಡ ಶಾಸಕ ಕೆ.ಎಸ್. … Read more

ಗ್ಯಾರೆಂಟಿ ದೋಖಾ- ನವೆಂಬರ್ ಗೆ ರಾಜ್ಯ ಕತ್ತಲೆ – ವರ್ಗಾವಣೆ ದಂಧೆ: ಬಸವರಾಜ ಬೊಮ್ಮಾಯಿ ಆರೋಪ

guarantee-dokha-state-will-bi-in-darkness-basavaraja-bommai

‘ರಾಜ್ಯ ಸರ್ಕಾರ ಒಂದು ಅಗಳು ಅಕ್ಕಿಯನ್ನು ನೀಡಿಲ್ಲ- ಜನರಿಗೆ ಅಕ್ಕಿ ಕೊಡುತ್ತಿರುವುದು ಮೋದಿ’ ಸುದ್ದಿ360 ಬೆಂಗಳೂರು ಸೆ.8: ಕಾಂಗ್ರೆಸ್ (congress) ಸರ್ಕಾರ ಅಧಿಕಾರಕ್ಕೆ ಬಂದು ಗ್ಯಾರೆಂಟಿ (Guarantee) ಗಳ ಹೆಸರಲ್ಲಿ ದೋಖಾ, ವರ್ಗಾವಣೆ ದಂಧೆಯಲ್ಲಿ ಅಧಿಕಾರಿಗಳ ಹರಾಜು ನಡೆಯುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraja bommai) ಆರೋಪಿಸಿದ್ದಾರೆ. ರಾಜ್ಯ ಸರ್ಕಾರದ ವೈಫಲ್ಯಗಳ ವಿರೋಧಿಸಿ ರಾಜ್ಯ ಬಿಜೆಪಿ ವತಿಯಿಂದ ಫ್ರೀಡಂ ಪಾರ್ಕ್ ನಲ್ಲಿ ಏರ್ಪಡಿಸಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಮ್ಮ ಸರ್ವೋಚ್ಚ ನಾಯಕ ಯಡಿಯೂರಪ್ಪ … Read more

‘ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ನಾ ಕಂಡಂತೆ’ – ಸಾಮಾಜಿಕ ಹೋರಾಟಗಾರ ಮಂಜುನಾಥ್ ಕೈದಾಳೆಯವರ ಮಾತುಗಳಲ್ಲಿ. . .

ನಾ ಕಂಡಂತಹ ಜಿಲ್ಲಾಧಿಕಾರಿ  ಅಧಿಕಾರ ವಹಿಸಿಕೊಂಡ ಮೊದಲನೆಯ ಕೆಲಸ ಜಗಳೂರು ತಾಲೂಕಿನ ಕಡುಬಡತನದ ಒಂದು ಅಂಗವಿಕಲ ಕುಟುಂಬದ ಮನೆಗೆ ಬೇಟಿ ನೀಡಿ ಅವರಿಗೆ ಮಾಸಾಷನ ಪತ್ರ ನೀಡಿದ್ದು ಪತ್ರಿಕೆಯಲ್ಲಿ ಸಣ್ಣದಾಗಿ ವರದಿಯಾಯಿತು. ನಾನು ಕೂತುಹಲ ಮತ್ತು ಇಷ್ಟು ದಿವಸ ಈ ಕುಟುಂಬಕ್ಕೆ ಅಂಗವಿಕಲ ಮಾಸಾಶನ  ಸಿಗುತ್ತಿರಲಿಲ್ಲವೇ ಎನ್ನುವ ಪ್ರಶ್ನೆಯು ಮೂಡಿತು. ಆಗ ಮಾಹಿತಿಗಾಗಿ ಜಗಳೂರಿನ ನನಗೆ ಪರಿಚಯ ವಿರುವವರನ್ನು  ವಿಚಾರಿಸಿದಾಗ ತಿಳಿದದ್ದು ತುಂಬಾ ಬೇಸರವಾಯಿತು. ಅಲ್ಲಿಯವರೆಗೂ ಆ ಕುಟುಂಬಕ್ಕೆ ಆ ಸೌಲಭ್ಯವೇ ದೊರಕಿಲ್ಲ ಎನ್ನುವುದು ಬೇಸರ ಮೂಡಿಸಿತು. … Read more

ಜಿಲ್ಲಾ ಕ ಸಾ ಪ ವತಿಯಿಂದ ಡಾ.ಪ್ರಭಾ ಮಲ್ಲಿಕಾರ್ಜುನ್ ರವರಿಗೆ ಆತ್ಮೀಯ ಸನ್ಮಾನ

davangere-kasapa-honoured-dr-prabha-mallikarjun

 ಸುದ್ದಿ360 ದಾವಣಗೆರೆ :  ನಗರದ ಕುವೆಂಪು ಕನ್ನಡ ಭವನದಲ್ಲಿ ಡಿ ಆರ್ ಆರ್ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ಕುವೆಂಪು ಕನ್ನಡ ಭವನಕ್ಕೆ ಪ್ರಥಮ ಬಾರಿಗೆ ಆಗಮಿಸಿದ್ದ ಡಾ ಪ್ರಭಾಮಲ್ಲಿಕಾರ್ಜುನ್ ರವರನ್ನು ಜಿಲ್ಲಾ ಕ ಸಾ ಪ ಪರವಾಗಿ ಅಧ್ಯಕ್ಷರಾದ ಬಿ ವಾಮದೇವಪ್ಪ ನವರು ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ  ಡಾ. ಪ್ರಭಾ ಮಲ್ಲಿಕಾರ್ಜುನ್ ರವರ ವೈವಿಧ್ಯಮಯವಾದ ಸೇವೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸುತ್ತಾ ಹೀಗೆ ಅವರ ಸೇವೆ ನಿರಂತರವಾಗಿ ಮುಂದುವರೆಯಲಿ ಎಂದು … Read more

ಪುಸ್ತಕಗಳು ಜ್ಞಾನ ಭಂಡಾರದ ಕೀಲಿ ಕೈ : ಜಿಲ್ಲಾ ಕ ಸಾ ಪ ಅಧ್ಯಕ್ಷ  ಬಿ.ವಾಮದೇವಪ್ಪ.

kasapa-davangere

ಸುದ್ದಿ360 ದಾವಣಗೆರೆ:  ಯಾರು ಹೆಚ್ಚು ಹೆಚ್ಚು ಪುಸ್ತಕಗಳನ್ನು ಓದುವ ಅಭ್ಯಾಸ ಮತ್ತು ಹವ್ಯಾಸ  ಇಟ್ಟುಕೊಳ್ಳುತ್ತಾರೋ ಅವರಲ್ಲಿ ಜ್ಞಾನಾರ್ಜನೆ ವೃದ್ಧಿಯಾಗುತ್ತದೆ. ಪುಸ್ತಕಗಳು ಜ್ಞಾನ ಭಂಡಾರದ ಕೀಲಿ ಕೈ ಇದ್ದಂತೆ ಎಂಬುದಾಗಿ ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ, ಬಿ . ವಾಮದೇವಪ್ಪ ಹೇಳಿದರು. ಅವರು ದಾವಣಗೆರೆ ನಗರದ ಶ್ರೀಮತಿ ಪುಷ್ಪ ಶಾಮನೂರು ಮಹಾಲಿಂಗಪ್ಪ ವಿಜ್ಞಾನ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ  ಆಯೋಜನೆ ಗೊಂಡಿದ್ದ  “ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ  ಅಧ್ಯಕ್ಷರ ಭಾಷಣಗಳು” ಪುಸ್ತಕವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. … Read more

ಕರ್ನಾಟಕದಲ್ಲಿ ಜಂಗಲ್ ರಾಜ್ಯ – ದಪ್ಪ ಚರ್ಮದ ಸರ್ಕಾರ : ಬಸವರಾಜ ಬೊಮ್ಮಾಯಿ

BJP protests against the state government - suddi360

ರಾಜ್ಯ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ: ರಾಜ್ಯಪಾಲರಿಗೆ ಮನವಿ ಸುದ್ದಿ360 ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದನ್ನು ಖಂಡಿಸಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಶಾಸಕರು ವಿಧಾನಸೌಧದ ಬಳಿ ಇರುವ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿ, ರಾಜ್ಯ ಸರ್ಕಾರಕ್ಕೆ ಸೂಚನೆ ನೀಡುವಂತೆ ರಾಜ್ಯಪಾಲರಿಗೆ ಮನವಿ ಮಾಡಿದರು. ವಿಧಾನಸೌಧದಿಂದ ರಾಜಭವನದವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಬಸವರಾಜ ಬೊಮ್ಮಾಯಿಯವರು, ಕರ್ನಾಟಕದಲ್ಲಿ ಜಂಗಲ್ ರಾಜ್ಯ ಶುರುವಾಗಿದೆ. ಸಾಮಾನ್ಯರು ಭಯ … Read more

ಎಸ್ ಎಸ್. ಮಲ್ಲಿಕಾರ್ಜುನ್ ರವರಿಗೆ,  ಜಿಲ್ಲಾ ಕ ಸಾ ಪ  ವತಿಯಿಂದ ಹೃದಯಸ್ಪರ್ಶಿ ಸನ್ಮಾನ

honour-davangere-kasapa-ssm

ಸುದ್ದಿ360 ದಾವಣಗೆರೆ: ಕರ್ನಾಟಕ ರಾಜ್ಯದ ಗಣಿ ಮತ್ತು ಭೂವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು  ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರು ಆಗಿರುವ ಎಸ್. ಎಸ್. ಮಲ್ಲಿಕಾರ್ಜುನ್ ರವರನ್ನು ಇಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಬಿ. ವಾಮದೇವಪ್ಪ ಅವರ ನೇತೃತ್ವದಲ್ಲಿ ಅವರ ನಿವಾಸಕ್ಕೆ ತೆರಳಿ  ಮಾನ್ಯ ಸಚಿವರನ್ನು ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಪರವಾಗಿ ಹಾಗೂ ಎಲ್ಲಾ ಕನ್ನಡದ ಮನಸುಗಳ ಪರವಾಗಿ ಅಭಿನಂದಿಸಿ ಹೃದಯಸ್ಪರ್ಶಿ ಸನ್ಮಾನವನ್ನು ಮಾಡಲಾಯಿತು. ಇದೇ ಸಂದರ್ಭದಲ್ಲಿ ಜಿಲ್ಲಾ ಕ ಸಾ ಪ … Read more

ವಿಪಕ್ಷ ನಾಯಕ ಸ್ಥಾನಕ್ಕೆ ನಮ್ಮಲ್ಲಿ ಎಲ್ಲರೂ ಸಮರ್ಥರು: ಬಸವರಾಜ ಬೊಮ್ಮಾಯಿ

shimoga-riots-were-the-result-of-the-governments-appeasement-policy-basavaraj-bommai

ಸುದ್ದಿ360 ಬೆಂಗಳೂರು: ಕರ್ನಾಟಕ ವಿಧಾನಸಭೆ ಬಜೆಟ್‍ ಅಧಿವೇಶನವು ಇಂದಿನಿಂದ ಆರಂಭಗೊಂಡಿದ್ದು, 10 ದಿನಗಳ ಕಾಲ ನಡೆಯಲಿದೆ. ಸರ್ಕಾರ ರಚನೆಯಾಗಿ ಒಂದು ತಿಂಗಳು ಕಳೆದರೂ ಪ್ರಮುಖ ವಿರೋಧ ಪಕ್ಷ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರನ್ನು ಘೋಷಣೆ ಮಾಡದಿರುವುದು ಮುಖ್ಯಮಂತ್ರಿ ಸಿದ್ಧರಮಯ್ಯ ಸೇರಿದಂತೆ ಕಾಂಗ್ರೆಸ್‍ ಮುಖಂಡರ ಟೀಕೆಗೆ ಬಿಜೆಪಿ ಒಳಗಾಗಿದೆ. ನಮ್ಮಲ್ಲಿ ಎಲ್ಲರೂ ಸಮರ್ಥರು ವಿಪಕ್ಷ ನಾಯಕನ ಆಯ್ಕೆ ವಿಚಾರಕ್ಕೆ ಸಿಎಂ ಸಿದ್ದರಾಮಯ್ಯ ಟೀಕಿಸಿರುವುದಕ್ಕೆ ತಿರುಗೇಟು ನೀಡಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ನಾಳೆಯಿಂದ ಅಧಿವೇಶನ ಅಧಿಕೃತವಾಗಿ ಆರಂಭವಾಗಲಿದೆ. … Read more

error: Content is protected !!