ಪಿಎಚ್‍ಡಿ ಪದವಿ ಪ್ರದಾನ

ಡಾ. ಪ್ರಭಾಕರ ಎಸ್.

ಶಿವಮೊಗ್ಗ: ನಗರದ ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಸಹಾಯಕ ಗ್ರಂಥಪಾಲಕರಾದ ಪ್ರಭಾಕರ. ಎಸ್. ಇವರಿಗೆ ಪಿಎಚ್‍ಡಿ ಪದವಿ ಲಭಿಸಿದೆ. ತಮಿಳುನಾಡಿನ ಕೊಯಮತ್ತೂರಿನ ಭಾರತೀಯಾರ್‍ ವಿಶ್ವವಿದ್ಯಾಲಯವು “Use of electronic services by students and faculty members in medical institutions libraries of Karnataka” (ಕರ್ನಾಟಕದಲ್ಲಿ ವೈದ್ಯಕೀಯ ಸಂಸ್ಥೆಗಳ ಗ್ರಂಥಾಲಯಗಳಲ್ಲಿ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರಿಂದ ಎಲೆಕ್ಟ್ರಾನಿಕ್ ಸೇವೆಗಳ ಬಳಕೆ) ಎಂಬ ಸಂಶೋಧನಾ ಗ್ರಂಥಕ್ಕೆ ಪಿಎಚ್‍ಡಿ ಪದವಿ ಪ್ರದಾನ ಮಾಡಿದೆ.  ಇವರಿಗೆ ಚಿಕ್ಕಮಗಳೂರಿನ  ಎಸ್‍.ಟಿ.ಜೆ. ಮಹಿಳಾ ಕಾಲೇಜಿನ ಗ್ರಂಥಪಾಲಕರಾಗಿದ್ದ … Read more

ಶಿಕಾರಿಪುರ: ದಾಖಲೆ ಇಲ್ಲದ 5.45 ಕೋಟಿ ಸೀಜ್

ಸುದ್ದಿ360 ಶಿವಮೊಗ್ಗ (ಶಿಕಾರಿಪುರ) : ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿನ ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ ಬಿಗಿಗೊಳಿಸಲಾಗಿದ್ದು, ಶಿರಾಳಕೊಪ್ಪ ಹಾಗೂ ಆನವಟ್ಟಿ ಠಾಣಾ ವ್ಯಾಪ್ತಿಯಲ್ಲಿ ಒಟ್ಟು 5.45 ಕೋಟಿ ಹಣವನ್ನು ಪೊಲೀಸ್ ಹಾಗೂ ಚುನಾವಣಾಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಸೊರಬ ವೃತ್ತ ನಿರೀಕ್ಷಕಿ ಭಾಗ್ಯವತಿ ಬಂಟಿ, ಆನವಟ್ಟಿ ಠಾಣೆಯ ಪಿಎಸ್‌ಐಗಳಾದ ಶಿವಪ್ರಸಾದ್ ಹಾಗೂ ವಿಠ್ಠಲ್ ಅಗಸಿ ನೇತೃತ್ವದ ತಂಡ ಆನವಟ್ಟಿ ಠಾಣಾ ವ್ಯಾಪ್ತಿಯಲ್ಲಿ ಬರೋಬ್ಬರಿ 5ಕೋಟಿ ರೂ. ಹಣವನ್ನು ವಶಕ್ಕೆ ಪಡೆದಿದ್ದಾರೆ. ಶಿಕಾರಿಪುರ ಡಿವೈಎಸ್‌ಪಿ ಶಿವಾನಂದ ಮದರಕಂಡಿ, ಶಿಕಾರಿಪುರ ಟೌನ್ ಸರ್ಕಲ್ ಸಿಪಿಐ … Read more

ಕರ್ನಾಟಕ ನಂ.1 ರಾಜ್ಯವಾಗಿಸುವ ಗುರಿ: ಸಚಿವ ಸರ್ಬಾನಂದ್ ಸೋನೋವಾಲ

ಸುದ್ದಿ360 ದಾವಣಗೆರೆ ಏ. 25:  ಕರ್ನಾಟಕದ ಸರ್ವತೋಮುಖ ಅಭಿವೃದ್ಧಿ ಬಿಜೆಪಿಯ ಉದ್ದೇಶ. ರಾಜ್ಯದಲ್ಲಿ ಮತ್ತೊಮ್ಮೆ ಪಕ್ಷವನ್ನು ಅಧಿಕಾರಕ್ಕೆ ತಂದು ಕರ್ನಾಟಕವನ್ನು ದೇಶದ ನಂ.1 ರಾಜ್ಯವನ್ನಾಗಿಸುವ ಗುರಿ ನಮ್ಮದಾಗಿದೆ ಎಂದು ಕೇಂದ್ರ ಬಂದರು ಮತ್ತು ಆಯುಷ್ ಸಚಿವ ಸರ್ಬಾನಂದ್ ಸೋನೋವಾಲ ಹೇಳಿದರು. ನಗರದ ಜಿಎಂಐಟಿ ಅತಿಥಿಗೃಹದಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 9 ವರ್ಷಗಳ ಹಿಂದೆ ಭಾರತ ವಿಶ್ವದ ಅತಿ ದೊಡ್ಡ ಆರ್ಥಿಕತೆ ದೇಶಗಳ ಪೈಕಿ 11ನೇ ಸ್ಥಾನದಲ್ಲಿತ್ತು. ಪ್ರಧಾನಿ ಮೋದಿ ಆಡಳಿತದ ಅವಧಿಯಲ್ಲಿ ದೇಶ ಆರ್ಥಿಕವಾಗಿ ಪ್ರಗತಿ … Read more

ಸಿಇಟಿ, ನೀಟ್ ಮಾಜಿ ಸೈನಿಕರ ಮಕ್ಕಳ ಕೋಟಾಗೆ ದೃಢೀಕರಣ ಕಡ್ಡಾಯ

ಚುನಾವಣೆ ಹಿನ್ನೆಲೆ: ಕೊನೆ ದಿನಕ್ಕೆ ಕಾಯದಿರಲು ಸೂಚನೆ ಸುದ್ದಿ360: ಸಿ.ಇ.ಟಿ ಮತ್ತು ನೀಟ್‍ನ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಮಾಜಿ ಸೈನಿಕರ ಮಕ್ಕಳು ಮೀಸಲಾತಿ ಪಡೆಯಲು ಮಾಜಿ ಸೈನಿಕ ದೃಢೀಕರಣ ಪತ್ರವನ್ನು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಿಂದ ಪಡೆಯುವುದು ಕಡ್ಡಾಯವಾಗಿದೆ. ಈ ದೃಢೀಕರಣ ಪತ್ರವನ್ನು ವಿಶೇಷ ವರ್ಗಗಳ ದಾಖಲೆ ಮಂಡನೆ ಸಮಯದಲ್ಲಿ ಸಲ್ಲಿಸಬೇಕಾಗಿರುತ್ತದೆ.  ಪ್ರಸ್ತುತ ಸರ್ಕಾರಿ ನೌಕರರು, ಅಧಿಕಾರಿಗಳನ್ನು ಚುನಾವಣಾ ಕಾರ್ಯಗಳಲ್ಲಿ ಬಳಸಿಕೊಳ್ಳಬಹುದಾದ ಕಾರಣಗಳಿಂದ ಸಿ.ಇ.ಟಿ, ನೀಟ್‍ನಲ್ಲಿ ಮಾಜಿ ಸೈನಿಕನ ಮೀಸಲಾತಿ ಕೋರಿರುವ ಎಲ್ಲಾ ಮಾಜಿ ಸೈನಿಕರು ಕೊನೆಯ … Read more

ಹೈಕಮಾಂಡ್ ತೀರ್ಮಾನಕ್ಕೆ ಬದ್ಧ – ಆಯನೂರು ಮಂಜುನಾಥ್ ಕಾಂಗ್ರೆಸ್ಗೆ ಬರುವುದಾದರೆ ಸ್ವಾಗತ: ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್

ಸುದ್ದಿ360 ಶಿವಮೊಗ್ಗ, ಏ.4: ಕಾಂಗ್ರೆಸ್ ಪಕ್ಷದ ಸಿದ್ಧಾಂತ ಒಪ್ಪಿಕೊಂಡು ಬರುವುದಾದರೆ ಯಾರು ಬೇಕಾದರೂ ಬರಬಹುದು. ಅದಕ್ಕೆ ಸ್ವಾಗತ ವಿದೆ. ಆಯನೂರು ಮಂಜುನಾಥ್ ಅವರೂ ಕೂಡ ಕಾಂಗ್ರೆಸ್ ಪಕ್ಷಕ್ಕೆ ಬಂದರೆ ನಾನು ವೈಯಕ್ತಿಕವಾಗಿ ಸ್ವಾಗತಿಸುತ್ತೇನೆ  ಎಂದು ಮಾಜಿ ಶಾಸಕ ಹಾಗೂ ಅಭ್ಯರ್ಥಿ ಆಕಾಂಕ್ಷಿ ಕೆ.ಬಿ. ಪ್ರಸನ್ನಕುಮಾರ್ ಹೇಳಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಾಂಗ್ರೆಸ್ ಪಕ್ಷದಿಂದ ಶಿವಮೊಗ್ಗ ವಿಧಾನ ಸಭಾ ಕ್ಷೇತ್ರಕ್ಕೆ ಸ್ಪರ್ಧಿಸಲು ಹನ್ನೊಂದು ಜನ ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದಾರೆ. ಇವರಲ್ಲಿಯೇ ಯಾರಿಗಾದರೂ ಟಿಕೆಟ್ ಸಿಗಬಹುದೆಂಬ ನಂಬಿಕೆ ನಮಗಿದೆ. … Read more

20 ಶ್ರೀಗಂಧದ ಮರಗಳನ್ನು‌ ರಾತ್ರೊರಾತ್ರಿ ಸದ್ದಿಲ್ಲದೆ ಕದ್ದೊಯ್ದ ಖದೀಮರು

ದಾವಣಗೆರೆ ಮಾ.೨೪: ಎಲ್ಲರೂ ಯುಗಾದಿ ಚಂದ್ರನ ದರ್ಶನ ಪಡೆದು ಗುರುಹಿರಿಯರ ಆಶೀರ್ವಾದ ಪಡೆಯುವಲ್ಲಿ ಮಗ್ನರಾದ ಸಂದರ್ಭದಲ್ಲಿ ಖದೀಮರು ೨೦ ಶ್ರೀಗಂಧದ ಮರಗಳನ್ನು ಕಟಾವು ಮಾಡಿ ಸಾಗಿಸಿದ್ದಾರೆ. ಚನ್ನಗಿರಿ‌ ತಾಲೂಕಿನ ಕಾರಿಗನೂರು‌ ಗ್ರಾಮದ ರೈತ ಹಾಗೂ ಸಾವಯವ ಕೃಷಿಕ ರುದ್ರೇಶ್ ರವರ ಜಮೀನಿನಲ್ಲಿ ಬೆಳೆದಿದ್ದ‌ 15 ವರ್ಷ ವಯಸ್ಸಿನ 20 ಶ್ರೀಗಂದದ ಮರಗಳನ್ನು ಸೌಂಡ್ ಲೆಸ್ ಕಟಿಂಗ್ ಮಿಷಿನ್ ಬಳಸಿ ಕಳ್ಳತನ ಮಾಡಲಾಗಿದೆ. ಕಳ್ಳತನ ಮಾಡಲು ಯುಗಾದಿ ಹಬ್ಬದ ಚಂದ್ರದರ್ಶನ ದಿನ ಫಿಕ್ಸ್ ಮಾಡಿ ಪ್ಲಾನ್ ಪ್ರಕಾರ 20 … Read more

ಕೆ.ಪಿ.ಟಿ. ಸಿ.ಎಲ್ ನೌಕರರಿಗೆ ಶೇ 20 – ಸಾರಿಗೆ ನೌಕರರಿಗೆ ಶೇ 15 ರಷ್ಟು ವೇತನ ಪರಿಷ್ಕರಣೆ

shimoga-riots-were-the-result-of-the-governments-appeasement-policy-basavaraj-bommai

ಸುದ್ದಿ360 ಬೆಂಗಳೂರು ಮಾ.16: ಕೆ.ಪಿ.ಟಿ. ಸಿ.ಎಲ್ ನೌಕರರು ಮತ್ತು ಸಾರಿಗೆ ಇಲಾಖೆ ನೌಕರರ ವೇತನ ಪರಿಷ್ಕರಣೆ ಸಂಬಂಧ ಇಂದು ಆದೇಶ ಹೊರಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಇಂದು ನಿವಾಸದ ಬಳಿ ಮಾಧ್ಯಮದವರೊಂದಿಗೆ  ಮಾತನಾಡಿ, ಕೆ.ಪಿ.ಟಿ. ಸಿ.ಎಲ್ ನೌಕರರು ವೇತನ ಪರಿಷ್ಕರಣೆಗೆ ಬೇಡಿಕೆ ಇಟ್ಟಿದ್ದರು. ನಮ್ಮ ಮಂತ್ರಿಗಳು ಸುದೀರ್ಘವಾಗಿ ಚರ್ಚಿಸಿ ಶೇ 20 ರಷ್ಟು ವೇತನ ಪರಿಷ್ಕರಣೆಗೆ  ಒಪ್ಪಿದ್ದು,  ಇಂದು ಆದೇಶ ಹೊರಡಿಸಲಾಗುವುದು ಎಂದು ತಿಳಿಸಿದರು. ಸಾರಿಗೆ ನೌಕರರಿಗೆ ಶೇ 15 ರಷ್ಟು ವೇತನ … Read more

ದಾವಣಗೆರೆಯಲ್ಲಿ ಜೈನ ಶ್ರೀ ಸಂಕೇಶ್ವರ ಪಾರ್ಶ್ವ ರಾಜೇಂದ್ರ ದರ್ಶನ ಪಡೆದ ರಾಜ್ಯಪಾಲರು

ದಾವಣಗೆರೆ ಫೆ. 28: ದಾವಣಗೆರೆ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಭಾಗವಹಿಸಲು ಜಿಲ್ಲೆಗೆ ಆಗಮಿಸಿದ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ನಗರದಲ್ಲಿರುವ ಶ್ರೀ ಶಂಕೇಶ್ವರ ಪಾರ್ಶ್ವ ರಾಜೇಂದ್ರ ಸ್ವಾಮಿ ದರ್ಶನ ಪಡೆದರು. ದೇವಸ್ಥಾನದ ಆಡಳಿತ ಮಂಡಳಿ ರಾಜ್ಯಪಾಲರಿಗೆ ಸ್ವಾಗತ ಕೋರಿದರು. ಗೌರವಾನ್ವಿತ ರಾಜ್ಯಪಾಲರು ಅವರು ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು. ನಂತರ ಜೈನ ದೇವಾಲಯದ ಆಡಳಿತ ಮಂಡಳಿ ವತಿಯಿಂದ ರಾಜ್ಯಪಾಲರನ್ನು ಗೌರವಿಸಲಾಯಿತು. ಈ ಸಂದರ್ಭದಲ್ಲಿ ದೇವಾಲಯದ ಅಧ್ಯಕ್ಷರಾದ ಪೂನಂ ಚಂದ್ರ ಜಿ, ಕಾರ್ಯದರ್ಶಿಗಳಾದ ಮಹಾವೀರ್ … Read more

ಜ.15:  ಗಿನ್ನಿಸ್ ವಿಶ್ವ ದಾಖಲೆ ಯೋಗಥಾನ್‍-2022 ದಾವಣಗೆರೆಯಲ್ಲಿ 8 ಸಾವಿರ ಯೋಗಪಟುಗಳು ಭಾಗಿಯಾಗುವ ನಿರೀಕ್ಷೆ

ಸುದ್ದಿ360 ದಾವಣಗೆರೆ ಜ.13: ಯೋಗಥಾನ್ 2022ರ ಗಿನ್ನಿಸ್ ವಿಶ್ವ ದಾಖಲೆ ಕಾರ್ಯಕ್ರಮ ಜ.15ರಂದು ಬೆಳಗ್ಗೆ 6 ಗಂಟೆಗೆ  ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ದಾವಣಗೆರೆಯ ಎಂಟು ಸಾವಿರಕ್ಕೂ ಅಧಿಕ ಯೋಗಪಟುಗಳು ಭಾಗವಹಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ತಿಳಿಸಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದರು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಯೋಗವನ್ನು ಕ್ರೀಡೆಯೆಂದು ಪರಿಗಣಿಸಿ ಆದೇಶ ಹೊರಡಿಸಿದ್ದು, ಯೋಗದ ಮಹತ್ವ ಕುರಿತು ಅರಿವು ಮೂಡಿಸಲು ಮತ್ತು … Read more

ಆರ್ ಟಿ ಐ ಕಾರ್ಯಕರ್ತ ರಾಮಕೃಷ್ಣ ಹತ್ಯೆ ಕೇಸ್; ಪಿಡಿಒ‌ ಸೇರಿ 11ಜನರ ವಿರುದ್ಧ ಎಫ್ ಐಆರ್ ದಾಖಲು

ಸುದ್ದಿ೩೬೦ ದಾವಣಗೆರೆ, ಜ.೯: ಜಿಲ್ಲೆಯ ಜಗಳೂರಿನಲ್ಲಿ ಆರ್ ಟಿ ಐ ಕಾರ್ಯಕರ್ತ ಹಾಗೂ ಕರವೇ ತಾಲ್ಲೂಕು ಅಧ್ಯಕ್ಷ ಜಿ.ಪಿ.ರಾಮಕೃಷ್ಣ ಹತ್ಯೆ ಪ್ರಕರಣಕ್ಕೆ ಸಂಬಂಧಸಿದಿಂತೆ ಪೊಲೀಸರು ಪಿಡಿಒ ಸೇರಿದಂತೆ 11 ಜನರ ವಿರುದ್ಧ ಎಫ್ ಐಆರ್ ದಾಖಲಿಸಿದ್ದಾರೆ. ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಪೊಲೀಸರು ಪಿಡಿಓ ಎ.ಟಿ.ನಾಗರಾಜ್ ಸೇರಿ 11 ಜನರ ವಿರುದ್ಧ ಎಫ್ ಐಆರ್ ದಾಖಲಿಸಿದ್ದಾರೆ. ಪ್ರಕರಣ ಸಂಬಂಧ ಈಗಾಗಲೇ ಪ್ರಶಾಂತ್, ದರ್ಶನ್ ಎಂಬುವರನ್ನು ಬಂಧಿಸಲಾಗಿದ್ದು, ಇಬ್ಬರನ್ನೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಜಿಲ್ಲೆಯ ಜಗಳೂರು ತಾಲೂಕಿನ … Read more

error: Content is protected !!