ಆ.30 ರಂದು ಗೃಹಲಕ್ಷ್ಮಿ ಗ್ಯಾರಂಟಿ ಯೋಜನೆ ಚಾಲನಾ ಕಾರ್ಯಕ್ರಮದ ಸಿದ್ದತೆ ಪರಿಶೀಲನೆ

ಸುದ್ದಿ360 ದಾವಣಗೆರೆ: ಸರ್ಕಾರದ ಮಹತ್ವಕಾಂಕ್ಷೆ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಗೆ ಆಗಸ್ಟ್ 30 ರಂದು ರಾಜ್ಯದ್ಯಾಂತ ಚಾಲನೆ ನೀಡಲಾಗುತ್ತಿದೆ. ದಾವಣಗೆರೆ  ನಗರದ 11 ಕಡೆ ವಿವಿಧ ಸ್ಥಳಗಳಲ್ಲಿ ಮತ್ತು ಎಲ್ಲ ತಾಲ್ಲೂಕುಗಳಲ್ಲಿ ಕಾರ್ಯಕ್ರಮ ನಡೆಯಲಿದೆ. ಜಿಲ್ಲಾ ಮಟ್ಟದ ಕಾರ್ಯಕ್ರಮ ಬೆಳಿಗ್ಗೆ 11 ಗಂಟೆಗೆ ನಗರದ ಹದಡಿ ರಸ್ತೆಯಲ್ಲಿರುವ ಶಾಮನೂರು ಶಿವಶಂಕರಪ್ಪ ಪಾರ್ವತಮ್ಮ ಸಮುದಾಯ ಭವನದಲ್ಲಿ ನಡೆಯಲಿದೆ. ಈ ಕಾರ್ಯಕ್ರಮದ ವೇದಿಕೆ ಹಾಗೂ ನೇರಪ್ರಸಾರದ ಸಿದ್ದತೆ ಸೇರಿದಂತೆ ಆಗಮಿಸುವ ಫಲಾನುಭವಿಗಳಿಗೆ ಊಟೋಪಚಾರದ ಬಗ್ಗೆ ಕೈಗೊಂಡಿರುವ ಸಿದ್ದತೆಯನ್ನು ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ ಪರಿಶೀಲನೆ ನಡೆಸಿದರು.

ಏಕಕಾಲಕ್ಕೆ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಹಾಗೂ ನಗರದ 11 ಕಡೆ ವಿವಿಧ ಸ್ಥಳಗಳಲ್ಲಿ ಹಾಗೂ ಜಗಳೂರು. ಹರಿಹರ, ಹೊನ್ನಾಳಿ ಮತ್ತು ಚನ್ನಗಿರಿ ತಾಲ್ಲೂಕುಗಳ ನಗರ ಸ್ಥಳೀಯ ಸಂಸ್ಥೆಗಳ ಸಹಯೋಗದಲ್ಲಿ ನಗರ ಪ್ರದೇಶಗಳ ವಾರ್ಡ್‍ ಗಳಲ್ಲಿ  ಕಾರ್ಯಕ್ರಮ ಆಯೋಜಿಸಲಾಗಿದೆ.

ಜಿಲ್ಲೆಯಲ್ಲಿ ಇಲ್ಲಿಯವರೆಗೆ 3,27,870 ಫಲಾನುಭವಿಗಳು ನೋಂದಣಿ ಮಾಡಿಕೊಂಡಿದ್ದು, ಒಟ್ಟು  ಶೇ, 87.93 ರಷ್ಟು ನೋಂದಣಿ ಪೂರ್ಣಗೊಂಡಿರುತ್ತದೆ.  ಗೃಹಲಕ್ಷ್ಮಿ ಯೋಜನೆಯಡಿ ನೋಂದಣಿ ಮಾಡಿಸಿದ ಕುಟುಂಬದ ಯಜಮಾನಿ ಮಹಿಳೆಗೆ ರೂ. 2,000 ಗಳನ್ನು ನೇರವಾಗಿ ಡಿಬಿಟಿ ಮೂಲಕ ಅವರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುತ್ತದೆ.

ನಗರದಲ್ಲಿ ಜರುಗುವ ಕಾರ್ಯಕ್ರಮ ಸ್ಥಳಗಳು: ಮಹಾನಗರ ಪಾಲಿಕೆ ಕಛೇರಿ, ಪಿ.ಬಿ ರಸ್ತೆ ವಾರ್ಡ್ ನಂ.25, 17, ಮಹಾನಗರ ಪಾಲಿಕೆ ಕಛೇರಿ 3 ವಿಭಾಗ ವಾರ್ಡ್ ನಂ.25, ನೂರಾನಿ ಶಾದಿ ಮಹಲ್, ಇಮಾಂ ನಗರ, ವಾರ್ಡ್ ನಂ.11, ಆಯಿಷಾ ಶಾದಿಮಹಲ್, ಅಕ್ಸ ಮಸೀದಿ ಪಕ್ಕ, ವಾರ್ಡ್ ನಂ.12, ಚನ್ನಗಿರಿ ವಿರುಪಾಕ್ಷಪ್ಪ ಕಲ್ಯಾಣ ಮಂದಿರ, ಗಡಿಯಾರ ಕಂಬದ ಹತ್ತಿರ ವಾರ್ಡ್ ನಂ. 18, ಮಲ್ಲಿಕಾರ್ಜುನ ಸಮುದಾಯ ಭವನ, ಆರ್.ಎಂ.ಸಿ. ರಸ್ತೆ, ಬಂಬೂ ಬಜಾರ್ ವಾರ್ಡ್ ನಂ.20, 21, ಗೋಲ್ಡನ್ ಪ್ಯಾಲೇಸ್ ಬೂದಾಳ್ ರೋಡ್, ರಿಂಗ್ ರಸ್ತೆ, ವಾರ್ಡ್ ನಂ. 5, ಯಲ್ಲಮ್ಮ ದೇವಿ ಸಮುದಾಯ ಭವನ, ಜಾಲಿನಗರ ವಾರ್ಡ್ ನಂ.7, ಚಿದಂಬರ ದೇವಸ್ಥಾನ ಸಮುದಾಯ ಭವನ , ನಿಟ್ಟುವಳ್ಳಿ ವಾರ್ಡ್ ನಂ.29, ಅಂಬೇಡ್ಕರ್ ಸಮುದಾಯ ಭವನ, ಗಾಂಧಿ ನಗರ ವಾರ್ಡ್ ನಂ.1 ಇಲ್ಲಿ ಕಾರ್ಯಕ್ರಮ ನಡೆಯಲಿದೆ.

admin

admin

Leave a Reply

Your email address will not be published. Required fields are marked *

error: Content is protected !!