ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದ ಸಚಿವ ತಿಮ್ಮಾಪುರ – ‘ತಡವಾಗಬಹುದು ಆದರೆ ಕೊಟ್ಟ ಮಾತಿಗೆ ತಪ್ಪೋದಿಲ್ಲ’

ಸುದ್ದಿ360 ದಾವಣಗೆರೆ: ಬಡವರ ಅನ್ನದ ಜತೆ ಕೇಂದ್ರ ಸರ್ಕಾರ  ಆಟವಾಡುತ್ತಿದೆ ಇದು ಖಂಡನೀಯ  ಎಂದು ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದರು. ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಚುನಾವಣೆಯಲ್ಲಿ ಕೊಟ್ಟ ಮಾತಿನಂತೆ ನಡೆಯುತ್ತಿದ್ದು, ರಾಜ್ಯ ಸರಕಾರ ಹತ್ತು ಕೆಜಿ ಅಕ್ಕಿ ನೀಡಲು ಬದ್ಧವಾಗಿದೆ. ಆದರೆ, “ಕೇಂದ್ರ ಸರಕಾರ ಅಕ್ಕಿ ಪೂರೈಸದೆ ಅಸಹಕಾರ ನೀತಿ ಅನುಸರಿಸುತ್ತಿರುವ ಕಾರಣ ತಕ್ಷಣಕ್ಕೆ ಅಕ್ಕಿ ಕೊಡಲಾಗುತ್ತಿಲ್ಲ ಎಂದರು. ಪ್ರಧಾನಿ ನರೇಂದ್ರ ಮೋದಿಯವರು ನಮ್ಮ ಆಹಾರ ಸಚಿವ … Read more

ದೈವಜ್ಞ ವಿದ್ಯಾ ಸಂಸ್ಥೆಯಲ್ಲಿ ಕಳೆಗಟ್ಟಿದ ವಿಶ್ವ ಯೋಗ ದಿನಾಚರಣೆ

ಸುದ್ದಿ360, ದಾವಣಗೆರೆ: ನಗರದ ದೇವರಾಜು ಅರಸು ಬಡವಾಣೆಯಲ್ಲಿರುವ ದೈವಜ್ಞ ವಿದ್ಯಾ ಸಂಸ್ಥೆಯ ಆವರಣದಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಶಾಲೆಯ ಹಿರಿಯ ಶಿಕ್ಷಕಿ ಆಶಾ ಬಂಡಿಗೇರಿ ಯವರು  ಮಕ್ಕಳಿಗೆ ಯೋಗಾಭ್ಯಾಸದ ಜೊತೆ ಯೋಗದ ಮಹತ್ವವನ್ನು ವಿವರಿಸಿದರು. ಸೂರ್ಯನಮಸ್ಕಾರ, ಪ್ರಾಣಾಯಾಮ  ಹಾಗೂ ಯೋಗಾಸನ ಬಂಗಿಗಳನ್ನು ವಿದ್ಯಾರ್ಥಿಗಳಿಂದ ಮಾಡಿಸಿದರು. ಶಾಲೆಯ ಬೋಧಕ ಮತ್ತು ಬೋಧಕೇತರ ವರ್ಗದವರು ಯೋಗಾಭ್ಯಾಸದಲ್ಲಿ ತೊಡಗಿಕೊಳ್ಳುವ ಮೂಲಕ ಯೋಗದ ಮಹತ್ವವನ್ನು ಮಕ್ಕಳಿಗೆ ಮನವರಿಕೆ ಮಾಡಿದರು. ಹಾಗೆಯೇ ಪ್ರತಿ ಶನಿವಾರ ಬೆಳಿಗ್ಗೆ ಮಕ್ಕಳಿಗೆ ಯೋಗಾಸನ ತರಬೇತಿಯನ್ನು ನೀಡುವ … Read more

ಜೂ.25, 26: ಹೆಬ್ಬಾಳು ವಿರಕ್ತಮಠದಲ್ಲಿ ಸಾವಯವ ಕೃಷಿ ಅರಿವು

ಸುದ್ದಿ360 ದಾವಣಗೆರೆ: ಗೋಆಧಾರಿತ ಕೃಷಿ ಹಾಗೂ ಸಾವಯವ ಕೃಷಿ ಕುರಿತು  ಅರಿವು ಮೂಡಿಸುವ ಕಾರ್ಯಕ್ರಮವನ್ನು ಸಮೀಪದ ಹೆಬ್ಬಾಳು ವಿರಕ್ತ ಮಠದಲ್ಲಿ ಜೂ.25, 26ರಂದು ಹಮ್ಮಿಕೊಳ್ಳಲಾಗಿದೆ ಎಂದು ಭಾರತೀಯ ಕಿಸಾನ್ ಸಂಘದ ಜಿಲ್ಲಾ ಕಾರ್ಯದರ್ಶಿ ಕೆ.ಆರ್. ಧನಂಜಯ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಮಹಾರಾಷ್ಟ್ರದ ಕೊಲ್ಲಾಪುರ ಸಿದ್ಧಗಿರಿ ಮಠದ ಶ್ರೀ ಅದೃಷ್ಯ ಕಾಡುಸಿದ್ಧೇಶ್ವರ ಸ್ವಾಮೀಜಿ ಹಾಗೂ ಹೆಬ್ಬಾಳು ವಿರಕ್ತ ಮಠದ ಶ್ರೀ ಮಹಾಂತ ರುದ್ರೇಶ್ವರ ಸ್ವಾಮೀಜಿ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದರು. ಜೂ.25ರಂದು ಸಂಜೆ … Read more

ಬಡವರ ಅನ್ನಕ್ಕೆ ಕನ್ನ: ಕೇಂದ್ರದ ನಡೆಯ ವಿರುದ್ಧ ದಾವಣಗೆರೆಯಲ್ಲಿ ‘ಕೈ’ ಪ್ರತಿಭಟನೆ

ಸುದ್ದಿ360 ದಾವಣಗೆರೆ: ಅನ್ನಭಾಗ್ಯ ಯೋಜನೆಯಡಿ ರಾಜ್ಯ ಸರ್ಕಾರ ಬಡ ಜನರಿಗೆ ವಿತರಿಸುತ್ತಿದ್ದ ಅಕ್ಕಿಗೆ ಕೇಂದ್ರ ಸರ್ಕಾರ ಕನ್ನ ಹಾಕಿದೆ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಹಾಗೂ ಶಾಸಕರು ನಗರದ ಜಯದೇವ ವೃತ್ತದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು. ಅನ್ನಭಾಗ್ಯ ಯೋಜನೆಯಿಂದ ಕಾಂಗ್ರೆಸ್‌ಗೆ ಹೆಸರು ಬರುತ್ತದೆ ಎಂದು ಬೆದರಿರುವ ಕೇಂದ್ರ ಬಿಜೆಪಿ ಸರಕಾರ, ಕರ್ನಾಟಕಕ್ಕೆ ಅಕ್ಕಿ ಸರಬರಾಜು ಮಾಡದಂತೆ ಭಾರತೀಯ ಆಹಾರ ನಿಗಮಕ್ಕೆ (ಎಫ್‌ಸಿಐ) ಸೂಚನೆ ನೀಡುವ ಮೂಲಕ ರಾಜ್ಯದ ಬಡ ಜನತೆಗೆ ಅನ್ಯಾಯ ಮಾಡಿದ್ದಾರೆ ಎಂದು … Read more

ಉಚಿತ ಪ್ರಯಾಣ – ನೂಕುನುಗ್ಗಲು – ಮಾಂಗಲ್ಯ ಸರ ಮಂಗಮಾಯ

ಸುದ್ದಿ360 ದಾವಣಗೆರೆ: ಸರ್ಕಾರಿ ಬಸ್ಗಳಲ್ಲಿ ಮಹಿಳೆಯರ ಪ್ರಯಾಣ ಹೆಚ್ಚಾಗಿದ್ದು, ಅಂತೆಯೇ ಕಳ್ಳರ ಕೈಚಳಕಕ್ಕೂ ದಾರಿಯಾಗಿದೆ. ಬಸ್ ಹತ್ತಲು ಬಂದಿದ್ದ ಮಹಿಳೆಯೊಬ್ಬರ 1.80 ಲಕ್ಷ ಮೌಲ್ಯದ ಮಾಂಗಲ್ಯ ಸರವನ್ನು ಕಳ್ಳರು ಎಗರಿಸಿದ ಘಟನೆ ಜಿಲ್ಲೆಯ ಹರಿಹರ ಬಸ್ ನಿಲ್ದಾಣದಲ್ಲಿ ನಡೆದಿದೆ. ಸರ್ಕಾರಿ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಸಂಚಾರಕ್ಕೆ ಸರ್ಕಾರ ಅನುವು ಮಾಡಿಕೊಟ್ಟಿರುವುದರಿಂದ ಮಹಿಳೆಯರ ಬಸ್ ಸಂಚಾರ ಸಹಜವಾಗಿಯೇ ಹೆಚ್ಚಾಗಿದೆ. ಮಹಿಳೆಯರು ಜಾಗರೂಕತೆಯಿಂದ ಪ್ರಯಾಣ ಬೆಳೆಸಬೇಕಿದ್ದು, ಪೊಲೀಸ್ ಪ್ರಕಟಣೆಗಳನ್ನು ಪಾಲಿಸುವ ಮೂಲಕ ಕಳ್ಳರ ಕುಕೃತ್ಯವನ್ನು ತಡೆಯಬಹುದಾಗಿದೆ. ಹರಿಹರ ಬಸ್ ನಿಲ್ದಾಣದಲ್ಲಿ … Read more

ಹೆಣ್ಣುಮಕ್ಕಳು ಸ್ವಾವಲಂಬನೆಯತ್ತ ಹೆಜ್ಜೆ ಹಾಕಲಿ: ಜಿಲ್ಲಾ ಕ ಸಾ ಪ ಅಧ್ಯಕ್ಷ ಬಿ .ವಾಮದೇವಪ್ಪ ಸಲಹೆ

ಸುದ್ದಿ360 ದಾವಣಗೆರೆ: ಹೆಣ್ಣುಮಕ್ಕಳು ವಿದ್ಯಾಭ್ಯಾಸದ ನಂತರದಲ್ಲಿ ಸರ್ಕಾರಿ ಉದ್ಯೋಗ ಸಿಗಲಿಲ್ಲವೆಂದು ಕೈಕಟ್ಟಿ ಕೂರದೆ ಸ್ವ–ಉದ್ಯೋಗ ಕೈಗೊಳ್ಳುವ ಮೂಲಕ ಆರ್ಥಿಕವಾಗಿ ಸ್ವಾವಲಂಬಿಗಳಾಗುವತ್ತ ಹೆಜ್ಜೆ ಹಾಕಲಿ ಎಂದು ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಅಧ್ಯಕ್ಷ ಬಿ.ವಾಮದೇವಪ್ಪ ಸಲಹೆ ನೀಡಿದರು. ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಆವರಣದಲ್ಲಿ ಶನಿವಾರ ನಡೆದ ಪಠ್ಯಪೂರಕ ಚಟುವಟಿಕೆ ಸಮಾರೋಪ ಸಮಾರಂಭದಲ್ಲಿ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ  ಭಾಗವಹಿಸಿ ಮಾತನಾಡಿದರು. ಸರ್ಕಾರಿ ಕಾಲೇಜಿನ ವಿದ್ಯಾರ್ಥಿನಿಯರು ಯಾರಿಗೂ ಕಡಿಮೆ ಇಲ್ಲ ಎಂಬಂತೆ ಉತ್ತಮ ಸಾಧನೆ ತೋರಿರುವುದು … Read more

‘ಮಾವನವರ ಮಾತು ನನಗೆ ಆಶೀರ್ವಾದ’ ಎನ್ನುತ್ತಲೇ ಸವಾಲು ಸ್ವೀಕರಿಸಲು ಸಿದ್ಧ ಎಂದಿರುವ ಸಂಸದ ಜಿ.ಎಂ. ಸಿದ್ದೇಶ‍್ವರ

ಸುದ್ದಿ360 ದಾವಣಗೆರೆ: `ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಸಿದ್ದೇಶ್ವರ ಸೋಲುವುದನ್ನು ನೋಡುತ್ತೇನೆ’ ಎಂದು ಹೇಳಿರುವ ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ಮಾತಿಗೆ ಸಂಸದ ಜಿ.ಎಂ. ಸಿದ್ದೇಶ್ವರ ಅವರು “ಹಿರಿಯರು ಹಾಗೂ ನಮ್ಮ ಮಾವನವರಾಗಿರುವ ಶಾಮನೂರು ಶಿವಶಂಕರಪ್ಪ ಅವರ ಬಗ್ಗೆ ನನಗೆ ಅಪಾರ ಗೌರವವಿದೆ. ಅವರು ಏನೇ ಹೇಳಿರಲಿ, ಅವರ ಮಾತುಗಳು ನನಗೆ ಆಶೀರ್ವಾದ ಇದ್ದಂತೆ” ಎಂದಿದ್ದಾರೆ. ನಗರದ ಜಿಎಂಐಟಿ ಅತಿಥಿಗೃಹದಲ್ಲಿ ಶನಿವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣೆಗೆ ನಿಂತರೆ ಫಂಡ್ ಕೊಡುವುದಾಗಿ ಹಿರಿಯರಾಗಿರುವ … Read more

ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ, ಔದ್ಯೋಗಿಕ, ಉದ್ಯಮ, ಸೇವಾ ಕ್ಷೇತ್ರದಲ್ಲಿ ಎಸ್‌ಎಸ್ ಸಾಧನೆ ಅನನ್ಯ: ಸಚಿವ ಈಶ್ವರ ಖಂಡ್ರೆ

ಸುದ್ದಿ360 ದಾವಣಗೆರೆ: 93ನೇ ವಯಸ್ಸಿನಲ್ಲಿ ಶಾಸಕರಾಗಿ ಯುವ ರಾಜಕಾರಣಿಗಳು ನಾಚುವಂತೆ ಕೆಲಸ ಮಾಡುತ್ತಿರುವ ಶಾಮನೂರು ಶಿವಶಂಕರಪ್ಪನವರದು ವಿಶಿಷ್ಟವಾದ ವ್ಯಕ್ತಿತ್ವ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದರು. ನಗರದ ಎಸ್‌ಎಸ್ ಕನ್ವೆನ್ಷನ್ ಹಾಲ್‌ನಲ್ಲಿ ನಡೆದ ಶಾಮನೂರು ಶಿವಶಂಕರಪ್ಪನವರ ಹುಟ್ಟುಹಬ್ಬ ಆಚರಣೆ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿ, ನಾವು ಮಾಡುವ ಒಳ್ಳೆಯ ಕೆಲಸಗಳು ಅಜರಾಮರವಾಗಿ ಉಳಿಯುತ್ತವೆ. ಅಂತಹ ಕೆಲಸಗಳನ್ನು ಶಾಮನೂರು ಶಿವಶಂಕರಪ್ಪ ಮಾಡಿದ್ದಾರೆ. ಜಾತಿ, ಮತ, ಧರ್ಮ ಭೇದವಿಲ್ಲದೆ ನೆರವಾಗುವ ಅವರ ಗುಣ ಎಲ್ಲರಿಗೂ ಆದರ್ಶ. ಅತ್ಯಂತ ಅಪರೂಪದ … Read more

ಸಚಿವ ಈಶ್ವರ ಬಿ. ಖಂಡ್ರೆ ದಾವಣಗೆರೆ ಭೇಟಿ

ದಾವಣಗೆರೆ: ಕರ್ನಾಟಕ ಸರ್ಕಾರದ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು ಆದ ಈಶ್ವರ ಬಿ. ಖಂಡ್ರೆ ಅವರು ಜೂನ್ 16ರಂದು ದಾವಣಗೆರೆ ಜಿಲ್ಲೆ ಪ್ರವಾಸ ಕೈಗೊಳ್ಳಲಿದ್ದು, ಪ್ರವಾಸದ ವಿವರ ಇಂತಿದೆ. ಸಚಿವರು ಬೆ.10ಕ್ಕೆ ಬೆಂಗಳೂರಿನಿಂದಿ ರಸ್ತೆ ಮಾರ್ಗದಲ್ಲಿ ಪ್ರಯಾಣಿಸುತ್ತಿದ್ದು, ಬೆ.12ಕ್ಕೆ ಚಿತ್ರದುರ್ಗ ತಲುಪಿ, ಶ್ರೀ ಇಮ್ಮಡಿ ಸಿದ್ರಾಮೇಶ್ವರ ಭೋವಿ ಗುರುಪೀಠ ಸ್ವಾಮಿಜಿಯವರನ್ನು ಭೇಟಿ ಮಾಡಲಿದ್ದಾರೆ. 12.30ಕ್ಕೆ ಚಿತ್ರದುರ್ಗದಿಂದ ಹೊರಟು 1.30ಕ್ಕೆ ದಾವಣಗೆರೆ ತಲುಪಿ, ಕಾಂಗ್ರೆಸ್ನ ಹಿರಿಯ ಶಾಸಕರಾದ ಶಾಮನೂರು ಶಿವಶಂಕರಪ್ಪ ಅವರ 93ನೇ ಹುಟ್ಟುಹಬ್ಬದಲ್ಲಿ ಪಾಲ್ಗೊಳ್ಳಲಿದ್ದಾರೆ. ನಂತರ … Read more

ಜಿಎಂಐಟಿಯಲ್ಲಿ ಸಾರಸ್-3D ಯಶಸ್ವಿ ಕಾರ್ಯಗಾರ

ದಾವಣಗೆರೆ: ನಗರದ ಜಿ ಎಮ್ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಇತ್ತೀಚೆಗೆ ನಡೆದ ಸಾರಸ್-3D ಕಾರ್ಯಗಾರವು ಯಶಸ್ವಿಯಾಗಿ ಪೂರ್ಣಗೊಂಡಿತು. ಸಾರಸ್-3D ಸಂಸ್ಥೆಯು ಹಮ್ಮಿಕೊಂಡಿದ್ದ ಈ ಕಾರ್ಯಗಾರದಲ್ಲಿ ವಿವಿಧ ಸ್ಕೂಲ್ ಮತ್ತು ಕಾಲೇಜಿನ ಪ್ರಾಧ್ಯಾಪಕರುಗಳು ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಸಾರಸ್-3D ಸಂಸ್ಥೆಯು ರಸಾಯನಶಾಸ್ತ್ರ ಭೌತಶಾಸ್ತ್ರ ಗಣಿತಶಾಸ್ತ್ರ ಮತ್ತು ಜೀವಶಾಸ್ತ್ರ ವಿಷಯಗಳ ಮೇಲೆ 3D ಮಾಡಲ್‌ಗಳನ್ನು ರಚಿಸಿದ್ದು, ಪ್ರಾಧ್ಯಾಪಕರುಗಳಿಗೆ ಮತ್ತು ವಿದ್ಯಾರ್ಥಿಗಳಿಗೆ ಸುಲಭವಾಗಿ ಅರ್ಥವಾಗುವ ರೀತಿಯಲ್ಲಿ ಮೂಡಿಬಂದಿವೆ. 6ನೇ ತರಗತಿಯಿಂದ 12ನೇ ತರಗತಿವರೆಗೂ ಈ ನಾಲ್ಕು ವಿಷಯಗಳ ಮೇಲೆ 3D ಮಾಡೆಲ್ ಗಳು … Read more

error: Content is protected !!