ದ್ವೇಷದ ತೀರ್ಮಾನ ತೆಗೆದುಕೊಳ್ಳುತ್ತಿರುವ ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ಶಾಪವಾಗಿದೆ: ಬಸವರಾಜ ಬೊಮ್ಮಾಯಿ

shimoga-riots-were-the-result-of-the-governments-appeasement-policy-basavaraj-bommai

ಬೆಂಗಳೂರು: ರಾಜ್ಯದಲ್ಲಿ ‌ಮುಂಗಾರು ವೈಫಲ್ಯವಾಗಿ ಹಲವಾರು ಗ್ರಾಮದಲ್ಲಿ ಕುಡಿಯುವ ನಿರಿನ ಹಾಹಾಕಾರ ಉಂಟಾಗಿದೆ, ಅಂತರ ಜಲ ಕುಸಿದಿದೆ. ರೈತರ ಪಾಲಿಗೆ ಮುಂಗಾರು ವೈಫಲ್ಯ ಬಹಳ ದೊಡ್ಡ ಹೊಡೆತ ಕೊಟ್ಟಿದೆ. ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚೆ ಮಾಡಿ ತೀರ್ಮಾನ ಕೈಗೊಳ್ಳುವ ಬದಲು, ದ್ವೇಷದ ತೀರ್ಮಾನಗಳನ್ನು ತೆಗೆದುಕೊಂಡು ಸಂಕಷ್ಟದಲ್ಲಿರುವ ಕರ್ನಾಟಕದ ಜನರಿಗೆ ಈ ಸರ್ಕಾರ ಶಾಪವಾಗಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಈ ಕುರಿತು ಟ್ಚೀಟ್ ಮಾಡಿರುವ ಅವರು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ … Read more

ಪಠ್ಯ ಪರಿಷ್ಕರಣೆ, ಮತಾಂತರ ಬಿಲ್ ಜೊತೆಗೆ ಎಪಿಎಂಸಿ  ಕಾಯ್ದೆಯೂ ರದ್ದುಪಡಿಸಲು ಸಚಿವ ಸಂಪುಟ ನಿರ್ಧಾರ

ಬೆಂಗಳೂರು; ರಾಷ್ಟ್ರಗೀತೆ ಹಾಡುವ ಸ್ಥಳಗಳಲ್ಲಿ ಸಂವಿಧಾನದ ಪೀಠಿಕೆ ಓದುವುದನ್ನು ಕಡ್ಡಾಯಗೊಳಿಸುವುದು, ಪಠ್ಯಪುಸ್ತಕ ಪರಿಷ್ಕರಣೆ ಹಾಗೂ ಎಪಿಎಂಸಿ ತಿದ್ದುಪಡಿ ಕಾಯ್ದೆ ರದ್ದು ಮಾಡುವುದು ಸೇರಿದಂತೆ ಹಲವು ನಿರ್ಧಾರಗಳಿಗೆ   ಸಚಿವ ಸಂಪುಟ ಸಭೆ ಅನುಮೋದಿಸಿದೆ. ಸಚಿವ ಸಂಪುಟ ಸಭೆ ಬಳಿಕ ಮಾತನಾಡಿದ ಸಂಸದೀಯ ವ್ಯವಹಾರಗಳ ಸಚಿವ  ಎಚ್ ಕೆ ಪಾಟೀಲ್ ಮಾತನಾಡಿ, ಪಠ್ಯ ಪರಿಷ್ಕರಣೆ, ಮತಾಂತರ ಬಿಲ್ ಜೊತೆಗೆ ಎಪಿಎಂಸಿ  ಕಾಯ್ದೆಯೂ ರದ್ದುಪಡಿಸಲು ಸಚಿವ ಸಂಪುಟ ನಿರ್ಧಾರ ಕೈಗೊಂಡಿದೆ. ಸಾರಿಗೆ ನೌಕರರ ವೇತನ 15ರಷ್ಟು ಪರಿಷ್ಕರಣೆಗೆ ಕ್ಯಾಬಿನೆಟ್ ಒಪ್ಪಿದೆ. 28 … Read more

ದಾವಣಗೆರೆ ಪಾಲಿಕೆ ಆಯುಕ್ತರ ಮೊಬೈಲ್ಗೆ ಬಂದ ಲಂಚಾವತಾರದ ವೀಡಿಯೋ – ಕರ ವಸೂಲಿಕಾರ ಅಮಾನತು

ದಾವಣಗೆರೆ: ಲಂಚ ಸ್ವೀಕರಿಸುತ್ತಿರುವ ವೀಡಿಯೋ ಅಧರಿಸಿ, ಮಹಾನಗರ ಪಾಲಿಕೆ ವಲಯ ಕಚೇರಿ 3ರ ಕಂದಾಯಶಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕರ ವಸೂಲಿಕಾರನನ್ನು ಅಮಾನತುಗೊಳಿಸಿ ಮಹಾನಗರ ಪಾಲಿಕೆ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಎನ್. ಶಿವಣ್ಣ ಅಮಾನತುಗೊಂಡ ಕರ ವಸೂಲಿಕಾರನಾಗಿದ್ದು, ಆಸ್ತಿ ಒಂದರ ಖಾತೆ ವರ್ಗಾವಣೆಗೆ ಸಂಬಂಧಿಸಿದಂತೆ ಲಂಚ ಪಡೆದ ಆರೋಪದಲ್ಲಿ ಅಮಾನತು ಮಾಡಲಾಗಿದೆ. ಶಿವಣ್ಣ ಖಾತೆ ವರ್ಗಾವಣೆ ಮಾಡಲು ಕಚೇರಿಯಲ್ಲಿ ಲಂಚ ಸ್ವೀಕರಿಸುತ್ತಿರುವ ಕುರಿತ ವಿಡಿಯೋವನ್ನು ಸಾರ್ವಜನಿಕರೊಬ್ಬರು ಆಯುಕ್ತರ ಮೋಬೈಲ್‌ಗೆ ವಾಟ್ಸ್ಆ್ಯಪ್ ಮಾಡಿ, ವಿಡಿಯೋ ಆಧಾರದಲ್ಲಿ ಕ್ರಮ ಕೈಗೊಳ್ಳುವಂತೆ ಕೋರಿದ್ದರು. ವೀಡಿಯೋ … Read more

ಪ್ರತಿಭಾ ಪುರಸ್ಕಾರ: ಗಂಗಾಮತಸ್ಥರ ಸಂಘದಿಂದ ಅರ್ಜಿ ಆಹ್ವಾನ

ಸುದ್ದಿ360 ದಾವಣಗೆರೆ: ಜಿಲ್ಲಾ ಗಂಗಾಮತಸ್ಥರ (ಬೆಸ್ತರ ) ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಸಲಾಗುತ್ತಿದ್ದು, ಸಮಾಜದ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಕಳೆದ ಸಾಲಿನಲ್ಲಿ  ವೈದ್ಯಕೀಯ ಇಂಜಿನಿಯರಿಂಗ್ ಪ್ರವೇಶ ಪಡೆದಿರುವ,  ಪ್ರಸಕ್ತ ಸಾಲಿನ ಪಿಯುಸಿ ಮತ್ತು ಎಸ್ಎಸ್ಎಲ್ ಸಿ, ತರಗತಿಗಳಲ್ಲಿ, ಶೇಕಡ 75ಕ್ಕಿಂತ ಹೆಚ್ಚಿನ ಅಂಕಗಳನ್ನು ಗಳಿಸಿದ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಗುವುದು. ಅರ್ಹ ವಿದ್ಯಾರ್ಥಿಗಳು ದಿನಾಂಕ 15.06.2023ರ ಬೆಳಗ್ಗೆ 10:30 ರಿಂದ ಸಂಜೆ 5:50 ಗಂಟೆಯವರೆಗೆ ಸ್ವ ವಿವರಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ ಅರ್ಜಿಯೊಂದಿಗೆ ಅಂಕಪಟ್ಟಿ, … Read more

ಮುಖ್ಯಮಂತ್ರಿ ಉಪಮುಖ್ಯಮಂತ್ರಿ ಸೇರಿದಂತೆ 36 ಕೈ ಮುಖಂಡರಿಗೆ ಕೋರ್ಟ್‍ ಸಮನ್ಸ್ : ಸಿಎಂ – ಡಿಸಿಎಂ ಗೆ ಖುದ್ಧು ಹಾಜರಾಗುವಂತೆ ಕೋರ್ಟ್‍ ಸೂಚನೆ

ಸುದ್ದಿ360 ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ  ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ಸಮನ್ಸ್ ಜಾರಿ ಮಾಡಿದ್ದು, ಜುಲೈ 28ರಂದು ಖುದ್ದು ಹಾಜರಾಗುವಂತೆ ಸೂಚಿಸಿದೆ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸೇರಿದಂತೆ 36 ಕಾಂಗ್ರೆಸ್ ಮುಖಂಡರಿಗೆ ಜನಪ್ರತಿನಿಧಿಗಳ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. ಈ ಹಿಂದೆ ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟನೆ ವೇಳೆ ನಿಯಮ ಉಲ್ಲಂಘನೆ ಮಾಡಿದ ಆರೋಪದ ಮೇಲೆ ಕಾಂಗ್ರೆಸ್ ಮುಖಂಡರ ವಿರುದ್ಧ ಪೊಲೀಸರು ಪ್ರಕರಣ … Read more

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಜತೆ ಮೈತ್ರಿ ಗಾಳಿಸುದ್ದಿ –  ಹೆಚ್.ಡಿ.ಕುಮಾರಸ್ವಾಮಿ – ನಂದುಬಿಡಿ ಹಾಲಿ ಸಂಸದರ ಕಥೆಯೇ ಕೇಳಿ ಎಂದದ್ದು ಯಾಕೆ. . .?

ಸುದ್ದಿ360 ರಾಮನಗರ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜತೆ ಜೆಡಿಎಸ್ ಮೈತ್ರಿ ಎಂಬುದೆಲ್ಲಾ ಗಾಳಿ ಸುದ್ದಿ, ಆ ರೀತಿಯ ಯಾವುದೇ ಚರ್ಚೆ ಆಗಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಖಡಕ್‍ ಆಗಿ ಪ್ರತಿಕ್ರಿಯಿಸಿದ್ದಾರೆ. ಚನ್ನಪಟ್ಟಣದಲ್ಲಿ ಸೋಮವಾರ ಕೆಡಿಪಿ ಸಭೆಯಲ್ಲಿ ಭಾಗವಹಿಸುವ ಮುನ್ನ ಅವರು ಮಾಧ್ಯಮಗಳ ಜತೆ ಮಾತನಾಡಿ, ರಾಜಕಾರಣದಲ್ಲಿ ಊಹಾಪೋಹ ಮಾಮೂಲಿ, ಈ ವಿಚಾರವನ್ನು ನನ್ನ ಮುಂದೆ ಯಾರೂ ಪ್ರಸ್ತಾಪ ಮಾಡಿಲ್ಲ. ಲೋಕಸಭಾ ಚುನಾವಣೆ ಬಗ್ಗೆ ನಾನು ಜಿಲ್ಲಾವಾರು ಸಭೆ ನಡೆಸಿ. ಗೆದ್ದ ಸೋತ  ಅಭ್ಯರ್ಥಿಗಳ ಜತೆ ಮಾತನಾಡಿದ್ದೇನೆ. … Read more

ಬಿಸಿಯೂಟ ತಯಾರಕರ ವೇತನ ಹೆಚ್ಚಳಕ್ಕೆ ಎಐಟಿಯುಸಿ ಮನವಿ

ಸುದ್ದಿ360 ದಾವಣಗೆರೆ: ಮಧ್ಯಾಹ್ನ ಉಪಹಾರ ಯೋಜನೆ ಅಡಿಯಲ್ಲಿ ರಾಜ್ಯಾದ್ಯಂತ ಇರುವ ಶಾಲೆಗಳಲ್ಲಿಅಡುಗೆ ಕೆಲಸ ನಿರ್ವಹಿಸುತ್ತಿರುವ ಬಿಸಿಯೂಟ ತಯಾರಕರ ವೇತನವನ್ನು ಆರು ಸಾವಿರ ರೂ. ಗಳಿಗೆ ಹೆಚ್ಚಿಸುವಂತೆ ಬಿಸಿಯೂಟ ತಯಾರಕರ ಫೆಡರೇಷನ್ (ಎಐಟಿಯುಸಿ ಸಂಯೋಜಿತ) ರಾಜ್ಯ ಸಮಿತಿ ಕರೆಯ ಮೇರೆಗೆ ದಾವಣಗೆರೆ ಜಿಲ್ಲಾ ಸಮಿತಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವರಿಗೆ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಿತು. 2023 ಜುಲೈ ತಿಂಗಳನಲ್ಲಿ ಮಂಡಿಸುವ ಬಜೆಟ್‌ನಲ್ಲಿ ರಾಜ್ಯ ಸರ್ಕಾರವು ಬಿಸಿಯೂಟ ತಯಾರಕರಿಗೆ ಅವರ ವೇತನವನ್ನು ಆರು ಸಾವಿರ … Read more

ದಶಪಥ ಹೆದ್ದಾರಿಯಲ್ಲಿ ದುಬಾರಿ ಸಂಚಾರ – ಪ್ರಯಾಣಿಕರ ಜೇಬಿಗೆ ಕತ್ತರಿ – ಯಾವ ವಾಹನಕ್ಕೆ ಎಷ್ಟು?

ಸುದ್ದಿ360 ರಾಮನಗರ: ದಶಪಥ ಹೆದ್ದಾರಿಯಲ್ಲಿ ಸಂಚಾರ ಮತ್ತಷ್ಟು ದುಬಾರಿಯಾಗಿದ್ದು, ಎಕ್ಸ್‌ಪ್ರೆಸ್‌ ಟೋಲ್ ದರ ಸದ್ದಿಲ್ಲದೇ  ಹೆಚ್ಚಾಗಿದೆ. ಈ ಹಿಂದೆ ಏ.1ರಂದೇ ದರ ಏರಿಕೆ ಮಾಡಿದ್ದ ಹೆದ್ದಾರಿ ಪ್ರಾಧಿಕಾರ ಸಾರ್ವಜನಿಕ ಆಕ್ರೋಶದ ಹಿನ್ನಲೆಯಲ್ಲಿ ದರ ಹೆಚ್ಚಳ ವಾಪಸ್ಸ್ ಪಡೆದಿತ್ತು. ಇದೀಗ ಮತ್ತೆ ಟೋಲ್ ದರ ಏರಿಕೆ ಮಾಡಿದೆ. ಶೇ.22ರಷ್ಟು ಟೋಲ್ ದರ ಏರಿಕೆ ಮಾಡಿರೋ ಹೆದ್ದಾರಿ ಪ್ರಾಧಿಕಾರ ಜೂನ್ 1ರಿಂದಲೇ ದುಬಾರಿ ಶುಲ್ಕ ವಸೂಲಿ ಮಾಡುತ್ತಿದೆ. ಪ್ರಯಾಣಿಕರ ಜೇಬಿಗೆ ಕತ್ತರಿ ಫಾಸ್ಟ್ ಟ್ಯಾಗ್ ಇರೋ ಕಾರಣ ವಾಹನ ಸವಾರರ … Read more

ಕಳಪೆ ಬೀಜ ವಿತರಣೆ-ಅಧಿಕಾರಿಗಳೇ ಹೊಣೆ: ಸಚಿವ ಚಲುವರಾಯಸ್ವಾಮಿ

ಮುಂಗಾರು ವಿಳಂಬ: ಸಮರ್ಪಕ ಬೀಜ ದಾಸ್ತಾನು, ವಿತರಣೆಗೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ಬೆಳಗಾವಿ: ರಾಜ್ಯದಲ್ಲಿ ಮುಂಗಾರು ವಿಳಂಬವಾಗಿರುವುದರಿಂದ ಬಿತ್ತನೆ ಕೂಡ ತಡವಾಗುತ್ತಿದೆ. ಆದ್ದರಿಂದ ಮಳೆಯಾದ ಕೂಡಲೇ ಎಲ್ಲೆಡೆ ಏಕಕಾಲಕ್ಕೆ ಬಿತ್ತನೆ ಆರಂಭಗೊಳ್ಳಲಿದೆ. ಈ ಸಂದರ್ಭದಲ್ಲಿ ಬೀಜ-ಗೊಬ್ಬರ ಕೊರತೆಯಾಗದಂತೆ ಅಧಿಕಾರಿಗಳು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಕಳಪೆ ಬೀಜ ವಿತರಣೆ ಕಂಡುಬಂದರೆ ಅಧಿಕಾರಿಗಳನ್ನೇ ಹೊಣೆ ಮಾಡಲಾಗುವುದು ಎಂದು ಕೃಷಿ ಇಲಾಖೆಯ ಸಚಿವರಾದ ಎನ್.ಚಲುವರಾಯಸ್ವಾಮಿ ಎಚ್ಚರಿಕೆ ನೀಡಿದರು. ಮುಂಗಾರು ಸಿದ್ಧತೆ ಪರಿಶೀಲನೆಗೆ ಸಂಬಂಧಿಸಿದಂತೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸೋಮವಾರ  ನಡೆದ … Read more

ಮಹಿಳೆಯರಿಗೆ ಉಚಿತ ಪ್ರಯಾಣ ಅಂತಾರೆ. . . ನಮ್ಮ ಗೋಳು ಕೇಳೋರ್ಯಾರು?

ಸುದ್ದಿ360 ಬಾಗಲಕೋಟೆ : ಮಹಿಳೆಯರಿಗೆ ಉಚಿತ ಪ್ರಯಾಣ ಅಂತಾರೆ ಹಾಗಾದ್ರೆ ನಮ್ಮಂತವರ ಗೋಳು ಕೇಳೋರ್ಯಾರು ? ಈ ಕೂಗು ಕೇಳಿ ಬಂದದ್ದು  ಬಾಗಲಕೋಟೆ ಜಿಲ್ಲೆಯ ಇಳಕಲ್ ಪಟ್ಟಣದಲ್ಲಿ ಸಂಚರಿಸುತ್ತಿದ್ದ ಕೆ.ಎಸ್.ಆರ್‍.ಟಿ.ಸಿ ಬಸ್ನಲ್ಲಿ. ನಮ್ಮ ಲಗೇಜ್ ಹಾಕಿದ್ರೆ ನಡುದಾರಿಯಲ್ಲಿ ತೆಗೆದು ಹಾಕ್ತಿವಿ ಅಂತ ಕಂಡಕ್ಟರ್ ಹೇಳ್ತಾರೆ ಎಂಬುದು ಮಹಿಳೆಯ ಆರೋಪ. ಇಳಕಲ್ ದಿಂದ ಮುದಗಲ್ ಕಡೆಗೆ ತೆರಳುತ್ತಿದ್ದ ಬಸ್ನಲ್ಲಿ ಲಗೇಜ್ ವಿಚಾರದಲ್ಲಿ ಸಾರಿಗೆ ಸಿಬ್ಬಂದಿ, ಪ್ರಯಾಣಿಕರ ಮಧ್ಯೆ ವಾಗ್ವಾದ ನಡೆದು ತೀವ್ರ ಮಾತಿನ ಚಕಮಕಿಗೆ ಕಾರಣವಾಗಿದೆ. ವ್ಯಾಪಾರಕ್ಕೆಂದು ಪ್ಲಾಸ್ಟಿಕ್ … Read more

error: Content is protected !!