ದಾವಣಗೆರೆ: ಪೊಲೀಸ್ ಹೆಡ್ ಕಾನ್ಸ್ಟೇಬಲ್ ಓರ್ವರ ವಿರುದ್ಧ ಇಲಾಖಾ ಶಿಸ್ತುಕ್ರಮ

ಸುದ್ದಿ360 ದಾವಣಗೆರೆ ಡಿ.27:  ಚೆಕ್ ಬೌನ್ಸ್ ಪ್ರಕರಣದಲ್ಲಿ  ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದ ದಾವಣಗೆರೆ ಜಿಲ್ಲೆ ಹೊನ್ನಾಳಿ ಪೊಲೀಸ್ ಠಾಣೆಯ ಪೊಲೀಸ್ ಹೆಡ್ ಕಾನ್ಸ್ಟೇಬಲ್  ಭರತ್ ಹಾಗೂ ಲಂಚದ ಹಣವನ್ನು ಪಡೆಯಲು ಸಹಕರಿಸಿದ ಪೊಲೀಸ್ ಹೆಡ್ ಕಾನ್ಸ್ಟೇಬಲ್ ರವರ ಸಂಬಂಧಿ  ಸುರೇಶ ಇವರ ವಿರುದ್ಧ ಲೋಕಾಯುಕ್ತ ಪ್ರಕರಣ ದಾಖಲಾಗಿದೆ. ಹೊನ್ನಾಳಿ ಪೊಲೀಸ್ ಠಾಣೆಯ  ಹೆಡ್ ಕಾನ್ಸ್ಟೇಬಲ್ ಭರತ್ ರವರ ವಿರುದ್ಧ ಇಲಾಖಾ ಶಿಸ್ತು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ದಾವಣಗೆರೆ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಸಿ ಬಿ ರಿಷ್ಯಂತ್ … Read more

ಕೋವಿಡ್ ಎದುರಿಸಲು ದಾವಣಗೆರೆ ಜಿಲ್ಲೆ ಸನ್ನದ್ದ – ಅಧಿಕಾರಿಗಳು ಹೇಳಿದ್ದೇನು?

ಸುದ್ದಿ360 ದಾವಣಗೆರೆ ಡಿ.27: ಕೋವಿಡ್ ತವರು ರಾಷ್ಟ್ರ ಚೀನಾ ಸೇರಿದಂತೆ ಜಗತ್ತಿನ ಹಲವು ರಾಷ್ಟ್ರಗಳಲ್ಲಿ ಕೋವಿಡ್ 19ರ ರೂಪಾಂತರಿ ತಳಿ ಬಿಎಫ್-7 ವ್ಯಾಪಕವಾಗಿ ಹರಡುತ್ತಿರುವ ಮುನ್ಸೂಚನೆಯಿಂದ ರಾಜ್ಯದ ಎಲ್ಲ ಸರಕಾರಿ ಆಸ್ಪತ್ರೆಗಳು ಕೋವಿಡ್ ನ್ನು ಸಮರ್ಥವಾಗಿ ಎದುರಿಸಲು ಶಸ್ತ್ರಸಜ್ಜಿತವಾಗತೊಡಗಿವೆ. ಈ ಹಿನ್ನೆಲೆಯಲ್ಲಿ ದಾವಣಗೆರೆಯ ಚಿಗಟೇರಿ ಜಿಲ್ಲಾಸ್ಪತ್ರೆಯಲ್ಲಿ ಕೂಡ ಮಂಗಳವಾರ ಸಿದ್ಧತೆಗಳ ಅಣಕು ತಾಲೀಮು ನಡೆಸಲಾಯಿತು. ಸರಕಾರಿ ಆಸ್ಪತ್ರೆಗಳಲ್ಲಿನ ಕೋವಿಡ್ ಸಂಬಂಧಿಸಿದ ಸೌಲಭ್ಯಗಳ ಕುರಿತು ಆನ್‌ಲೈನ್‌ನಲ್ಲಿ ಮಾಹಿತಿ ಕೇಳಿ ಪಡೆಯಲಾಯಿತು. ಅದರಂತೆ ದಾವಣಗೆರೆಯಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ. ನಾಗರಾಜ್, … Read more

‘ವನ್ಯಜೀವಿ ಸಾಕಾಣಿಕೆ ಲೈಸನ್ಸ್ ಬಹಿರಂಗಪಡಿಸಿ – ಅಮಾಯಕರನ್ನು ಕೈಬಿಡಲು ಆಗ್ರಹ

ಸುದ್ದಿ360  ದಾವಣಗೆರೆ ಡಿ.27: ಕಲ್ಲೇಶ್ವರ ರೈಸ್ ಮಿಲ್ ಆವರಣದಲ್ಲಿ ಶೆಡ್ಯೂಲ್ಡ್ ವನ್ಯಜೀವಿಗಳನ್ನು ಅಕ್ರಮವಾಗಿ ಸಾಕಾಣಿಕೆ ಮಾಡಲಾಗಿದ್ದ ಪ್ರಕರಣದಲ್ಲಿ ಸ್ಥಳದ ಮಾಲೀಕ ಎಸ್.ಎಸ್. ಮಲ್ಲಿಕಾರ್ಜುನ ಅವರನ್ನು ಆರೋಪಿ ನಂ.-1ನ್ನಾಗಿ ನಮೂದಿಸಲಾಗಿಲ್ಲ. ಅಲ್ಲದೆ ಇಲ್ಲಿ ಹೊಟ್ಟೆಪಾಡಿಗಾಗಿ ಕೆಲಸ ನಿರ್ವಹಿಸುತ್ತಿದ್ದ ಕೆಲಸಗಾರರನ್ನು ಆರೋಪಿಯನ್ನಾಗಿ ಮಾಡಲಾಗಿದೆ ಎಂದು ಎಂದು ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಯಶವಂತ ರಾವ್ ಜಾಧವ್‌ ಆರೋಪಿಸಿದರು. ವನ್ಯಜೀವಿಗಳು ಸಿಕ್ಕಿರುವ ರೈಸ್ ಮಿಲ್ಲು ಯಾರ ಒಡೆತನದಲ್ಲಿ ಇದೆ ಎಂಬುದನ್ನು ಎಸ್‍ಎಸ್‍ ಮಲ್ಲಿಕಾರ್ಜುನ್ ಅವರು  ಹೇಳಲಿ. ವನ್ಯಜೀವಿಗಳ ಸಾಕಾಣಿಕೆಗೆ ಅಧಿಕೃತ ಲೈಸನ್ಸ್ … Read more

ಡಿ. 31ರಂದು ‘ದವನ್ ಕಾರ್ನಿವಲ್-2022’

ಸುದ್ದಿ360  ದಾವಣಗೆರೆ ಡಿ.27: ಇಲ್ಲಿನ ದವನ್‌ ಇನ್ಸ್ಟಿಟ್ಯೂಟ್ ಆಫ್ ಅಡ್ವಾನ್ಸ್‍ ಡ್ ಮ್ಯಾನೇಜ್‍ಮೆಂಟ್‍ ಸ್ಟಡೀಸ್ ವತಿಯಿಂದ ‘ದವನ್ ಕಾರ್ನಿವಲ್ – 2022’ ನ್ನು ನಗರದ ಬಾಪೂಜಿ ಬ್ಯಾಂಕ್‌ ಸಮುದಾಯ ಭವನದಲ್ಲಿ ಡಿ. 31ರ ಶನಿವಾರ ಹಮ್ಮಿಕೊಳ್ಳಲಾಗಿದೆ ಎಂದು ಕಾಲೇಜಿನ  ಉಪಪ್ರಾಂಶುಪಾಲರಾದ ಅನಿತಾ ಎನ್. ಹೇಳಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ವಿದ್ಯಾರ್ಥಿಗಳಲ್ಲಿ, ವಾಣಿಜ್ಯ ಮತ್ತು ನಿರ್ವಹಣಾ ಜ್ಞಾನದ ಅರಿವು ಮೂಡಿಸುವ ಉದ್ದೇಶದಿಂದ ಈ ಯುವ ಉತ್ಸವವನ್ನು ಹಮ್ಮಿಕೊಳ್ಳಲಾಗಿದ್ದು, ಉತ್ಸವದಲ್ಲಿ ವಿದ್ಯಾರ್ಥಿಗಳಿಗೆ ಆಹಾರ ಮತ್ತು ಆಟದ … Read more

ದಾವಣಗೆರೆ ಕೆಎಸ್ಆರ್‍ ಟಿಸಿ ನೂತನ ಬಸ್ ನಿಲ್ದಾಣಕ್ಕೆ ಚನ್ನಯ್ಯ ವಡೇಯರ್ ಹೆಸರಿಡಲು ಒತ್ತಾಯ

ಸುದ್ದಿ360 ದಾವಣಗೆರೆ ಡಿ.26:  ನಗರದಲ್ಲಿ ಹೊಸದಾಗಿ ನಿರ್ಮಾಣವಾಗುತ್ತಿರುವ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣಕ್ಕೆ ದಾವಣಗೆರೆ ಲೋಕಸಭಾ ಕ್ಷೇತ್ರದಿಂದ ಸತತವಾಗಿ ಮೂರು ಬಾರಿ ಸಂಸದರಾಗಿದ್ದ ಚನ್ನಯ್ಯ ವಡೇಯರವರ ಹೆಸರನ್ನು ನಾಮಕಾರಣ ಮಾಡಬೇಕೆಂದು ಹರಿಹರ ತಾಲ್ಲೂಕು ಕುರುಬರ ಸಂಘ ಒತ್ತಾಯಿಸುವುದಾಗಿ ಸಂಘದ ಸಂಚಾಲಕ ಡಾ. ಕರಿಬಸಯ್ಯ ಮಠದ ತಿಳಿಸಿದ್ದಾರೆ. ಈ ಕುರಿತು ಜಿಲ್ಲಾ ವರದಿಗಾರರ ಕೂಟದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಚನ್ನಯ್ಯ ವಡೇಯರವರು ದಾವಣಗೆರೆ ಕ್ಷೇತ್ರಕ್ಕೆ ತಮ್ಮದೇ ಆದ ಕೊಡುಗೆಗಳನ್ನು ನೀಡಿದ್ದು, ದಾವಣಗೆರೆಯ ಅಭಿವೃದ್ಧಿಗಾಗಿ ಶ್ರಮಿಸಿದವರಾಗಿದ್ದಾರೆ. ಅವರ ಹೆಸರನ್ನು ಸರ್ಕಾರ … Read more

ಜನಸಾಮಾನ್ಯರ ಆರ್ಥಿಕತೆಗೆ ತೊಂದರೆಯಾಗದಂತೆ ಕೋವಿಡ್ ಮುಂಜಾಗ್ರತಾ ಕ್ರಮಗಳ ಜಾರಿ : ಸಿಎಂ ಬಸವರಾಜ ಬೊಮ್ಮಾಯಿ

shimoga-riots-were-the-result-of-the-governments-appeasement-policy-basavaraj-bommai

ಸುದ್ದಿ360 ಬೆಳಗಾವಿ, ಡಿ. 26 :  ಕೋವಿಡ್ ನಿಂದಾಗಿ ಜನರ ಆರ್ಥಿಕತೆಗೆ ಯಾವುದೇ  ರೀತಿಯ ತೊಂದರೆಯಾಗದಂತೆ ಮುನ್ನೆಚ್ಚರಿಕೆ ಹಾಗೂ ಮುಂಜಾಗ್ರತಾ ಕ್ರಮಗಳನ್ನು ಹಂತಹಂತವಾಗಿ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಬೆಳಗಾವಿ ಸುವರ್ಣಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದರು. ರಾಜ್ಯದಲ್ಲಿ ಕೋವಿಡ್ ನಿಯಂತ್ರಣ ಬಗ್ಗೆ ಪ್ರತಿಕ್ರಿಯೆ ನೀಡಿ, ಸಚಿವಸಂಪುಟದಲ್ಲಿ ಈ ಬರ್ಗೆ ಚರ್ಚಿಸಲಾಗಿದ್ದು, ಜನರಲ್ಲಿ  ಜಾಗೃತಿ ಮೂಡಿಸುವುದು, ಬೂಸ್ಟರ್ ಡೋಸ್ ಹೆಚ್ಚಿಸುವುದು, ಐಎಲ್ಐ ಮತ್ತು ಸಾರಿ ಪರೀಕ್ಷೆಗಳನ್ನು ಹೆಚ್ಚಿಸುವುದು, ಮಾಸ್ಕ್ ಗಳ ಧಾರಣೆ, ಒಳಾಂಗಣಗಳಲ್ಲಿ ಮಾಸ್ಕ್ … Read more

ವನ್ಯಜೀವಿ ಅಕ್ರಮ ಸಾಕಣೆ: ಎಸ್‌ಎಸ್ಎಂ ಬಂಧಿಸುವಂತೆ ಸಿಎಂ ಭೇಟಿಗೆ ಹೊರಟ ದಾವಣಗೆರೆ ಬಿಜೆಪಿ ನಿಯೋಗ

ಸುದ್ದಿ೩೬೦ ದಾವಣಗೆರೆ ಡಿ.೨೬: ಮಾಜಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ಒಡೆತನದ ಕಲ್ಲೇಶ್ವರ ರೈಸ್ ಮಿಲ್ ಮೇಲೆ ದಾಳಿ ನಡೆದು ೫ ದಿನಗಳು ಕಳೆದರೂ ಕೂಡ ತನಿಖೆ ಪ್ರಗತಿ ಕಂಡಿಲ್ಲ. ಅಪರಾಧಿಗಳನ್ನು ಬಂಧಿಸಿಲ್ಲ ಎಂದು ಆರೋಪಿಸಿ ಉನ್ನತಮಟ್ಟದ ತನಿಖೆ ನಡೆಸುವಂತೆ ದಾವಣಗೆರೆ ಬಿಜೆಪಿ ಕಾರ್ಯಕರ್ತರು ಮುಖ್ಯಮಂತ್ರಿಗಳಿಗೆ ಮನವಿ ಮಾಡಲು ನಿಯೋಗ ಬೆಳಗಾವಿಗೆ ತೆರಳಿದೆ. ತನಿಖೆ ದಿಕ್ಕು ತಪ್ಪುತ್ತಿದೆ ಎಂದು ಆಕ್ರೋಶಗೊಂಡಿರುವ ಬಿಜೆಪಿ ಕಾರ್ಯಕರ್ತರು ಯಶವಂತರಾವ್ ಜಾಧವ್ ನೇತೃತ್ವದಲ್ಲಿ ಇಂದು ಬೆಳಗ್ಗೆ  ಯಶವಂತರಾವ್‌ ಜಾಧವ್ ನೇತೃತ್ವದಲ್ಲಿ ಮಹಾನಗರ ಪಾಲಿಕೆ … Read more

ವನ್ಯಜೀವಿ ಪತ್ತೆ ಪ್ರಕರಣ: ಎಸ್ ಎಸ್ ಮಲ್ಲಿಕಾರ್ಜುನ್ ಬಂಧನಕ್ಕೆ ಆಗ್ರಹ

ಉಪ್ಪು ತಿಂದವರು ನೀರು ಕುಡಿಯಲೇಬೇಕು- ಜಿ.ಎಂ. ಸಿದ್ದೇಶ್ವರ್ ಸುದ್ದಿ360 ದಾವಣಗೆರೆ ಡಿ.25:  ನಗರದ ಕಲ್ಲೇಶ್ವರ ರೈಸ್ ಮಿಲ್ ನಲ್ಲಿ ವನ್ಯಜೀವಿಗಳ ಪತ್ತೆಯಾಗಿದ್ದು, ಇದು ಮಾಜಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ರ ಒಡೆತನದ ಮಿಲ್ ಎಂಬುದು ಎಲ್ಲರಿಗೂ ತಿಳಿದಿರುವ ವಿಷಯವಾಗಿದೆ. ಹೀಗಿದ್ದರೂ ಆರೋಪಿಗಳನ್ನು ಬಂಧಿಸುವಲ್ಲಿ ಅಧಿಕಾರಿಗಳು ಹಿಂದೆಬಿದ್ದಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಡಿಎಫ್ಓ ಯಾರದೋ ಒತ್ತಡಕ್ಕೆ ಮಣಿದಂತೆ ಕಾಣುತ್ತಿದೆ ಎಂದು ಸಂಸದ ಜಿ.ಎಂ. ಸಿದ್ದೇಶ್ವರ ಅನುಮಾನ ವ್ಯಕ್ತಪಡಿಸಿದರು. ಅವರು ಇಂದು ಜಿಎಂಐಟಿಯಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪ್ರಕರಣದಲ್ಲಿ … Read more

ದೇವನಗರಿಯಲ್ಲಿ ಸಾಹಿತ್ಯ ಸಮ್ಮೇಳನದ ಕನ್ನಡ ರಥಕ್ಕೆ ಅದ್ಧೂರಿ ಸ್ವಾಗತ

ಸುದ್ದಿ360 ದಾವಣಗೆರೆ ಡಿ.25:  ಹಾವೇರಿಯಲ್ಲಿ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕನ್ನಡ ರಥ ದಾವಣಗೆರೆಗೆ ಆಗಮಿಸಿದ ಸಂದರ್ಭದಲ್ಲಿ ನಗರದ ವಿದ್ಯಾನಗರದ ಶ್ರೀ ಈಶ್ವರ ದೇವಾಲಯದ ಬಳಿ ಅದ್ದೂರಿಯಾಗಿ ಕನ್ನಡ ರಥವನ್ನು ಬರಮಾಡಿಕೊಳ್ಳಲಾಯಿತು. ಈ ಸಂಧರ್ಭದಲ್ಲಿ ಜಿಲ್ಲಾಧಿಕಾರಿ ಶಿವಾನಂದ ಕಪಾಶಿ, ಕಸಾಪ ಅಧ್ಯಕ್ಷರಾದ ಬಿ.ವಾಮದೇವಪ್ಪ,  ಪಾಂಡೋಮಟ್ಟಿ ಶ್ರೀಗಳು, ಯರಗುಂಟಿ ಶ್ರೀಗಳು, ಹರಿಹರ ಮಾಜಿ ಶಾಸಕ ಬಿ.ಪಿ ಹರೀಶ್, ಸಾಹಿತಿ ಎನ್ ಟಿ. ಯರ್ರಿಸ್ವಾಮಿ,  ಕಸಾಪ ಕೋಶಾಧಿಕಾರಿ ರಾಘವೇಂದ್ರ ನಾಯರಿ, ರೇವಣಸಿದ್ದಪ್ಪ ಅಂಗಡಿ, ಪತ್ರಕರ್ತರಾದ ಜಿಗಳಿ ಪ್ರಕಾಶ್, … Read more

ಸಾವಿನಲ್ಲೂ ಒಂದಾದ ವೃದ್ಧ ದಂಪತಿ

ಸುದ್ದಿ360 ದಾವಣಗೆರೆ ಡಿ.25: ನಗರದ ಎಸ್.ಓ.ಜಿ ಕಾಲೋನಿಯ ಫಕೀರಪ್ಪ ಗೋಕಾವಿ, ಚಂದ್ರಮ್ಮ ಗೋಕಾವಿ ಎಂಬ ವೃದ್ಧ ದಂಪತಿ ಒಂದೇ ದಿನ ಸಾವನ್ನಪ್ಪುವ ಮೂಲಕ ಸಾವಲ್ಲೂ ಒಂದಾಗಿದ್ದಾರೆ.85 ವರ್ಷದ ಫಕೀರಪ್ಪ ಗೋಕಾವಿ ಶನಿವಾರ (ಡಿ.24) ರಾತ್ರಿ ಹೃದಯಾಘಾತದಿಂದ ಮನೆಯಲ್ಲೇ ನಿಧನ ಹೊಂದಿದ್ದಾರೆ. ಪತಿಯ ನಿಧನ ಹೊಂದಿರುವರೆಂದು ತಿಳಿಯುತ್ತಿದ್ದಂತೆ ಪತ್ನಿ ಚಂದ್ರಮ್ಮ ಗೋಕಾವಿ ಸ್ಥಳದಲ್ಲೇ ಅಸ್ವಸ್ಥರಾಗಿ ಬಿದ್ದು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.55 ವರ್ಷಗಳ ದಾಂಪತ್ಯ ಜೀವನ ನಡೆಸಿ, ಅನ್ಯೋನ್ಯವಾಗಿ ಬದುಕಿದ್ದ ದಂಪತಿಗಳು ಇಹಲೋಕ ತ್ಯಜಿಸುವ ಮೂಲಕ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

error: Content is protected !!