ದಾವಣಗೆರೆ: ಗಾಂಜಾ ಮಾರಾಟ ಮಾಡುತ್ತಿದ್ದಾತನ ಬಂಧನ

ಸುದ್ದಿ360 ದಾವಣಗೆರೆ, ಸೆ.11: ಜಿಲ್ಲೆಯ ಹರಿಹರ ನಗರದ ಮನೆಯೊಂದರಲ್ಲಿ ಅಕ್ರಮ ಗಾಂಜಾ ಸೊಪ್ಪು ಮಾರಾಟ ಮಾಡುತ್ತಿದ್ದ ಒಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿರುವ ಪೊಲೀಸರು ಆತನಿಂದ 14 ಸಾವಿರ ಮೌಲ್ಯದ 280 ಗ್ರಾಂ ಗಾಂಜಾ ಸೊಪ್ಪು, ಒಂದು ಮೊಬೈಲ್ ವಶಕ್ಕೆ ಪಡೆದಿದ್ದಾರೆ. ಹರಿಹರ ನಗರದ ಆಶ್ರಯ ಕಾಲೋನಿಯ ಮನೆಯೊಂದರಲ್ಲಿ ಅಕ್ರಮವಾಗಿ ಗಾಂಜಾ ಸೊಪ್ಪು ಮಾರಾಟ ಮಾಡಲಾಗಿತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ, ಆರೋಪಿಯನ್ನು ಬಂಧಿಸಿದ್ದಾರೆ. ದಾವಣಗೆರೆ ಗ್ರಾಮಾಂತರ ವಿಭಾಗದ ಡಿವೈಎಸ್ ಪಿ ಕನಿಕಾ ಸಿಕ್ರಿವಾಲ್ ನೇತೃತ್ವದಲ್ಲಿ … Read more

ನಾರಾಯಣ ಗುರುವಿಗೆ ಸಿಎಂ ಅಪಮಾನ – ಶೀಘ್ರದಲ್ಲೇ ಬೆಂಗಳೂರು ಪಾದಯಾತ್ರೆ

ಸುದ್ದಿ360 ದಾವಣಗೆರೆ, ಸೆ.11: ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ಸರಕಾರದಿಂದ ನಿರಂತರವಾಗಿ ಅಪಮಾನ ಆಗುತ್ತಿದೆ. ಇದನ್ನು ಖಂಡಿಸಿ, ಮುಂದಿನ 10 ದಿನಗಳ ಒಳಗಾಗಿ ಮಂಗಳೂರಿನಿಂದ ಬೆಂಗಳೂರಿಗೆ ಪಾದಯಾತ್ರೆ ನಡೆಸುವ ಚಿಂತನೆ ಇದೆ ಎಂದು ಚಿತ್ತಾಪುರ ತಾಲೂಕು ಕರದಾಳದ ಬ್ರಹ್ಮಶ್ರೀ ನಾರಾಯಣ ಗುರುಗಳ ಶಕ್ತಿ ಪೀಠದ ಡಾ. ಶ್ರೀ ಪ್ರಣವಾನಂದ ಸ್ವಾಮೀಜಿ ಹೇಳಿದರು. ಜಿಲ್ಲಾ ವರದಿಗಾರರ ಕೂಟದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶ್ರೀಗಳು, ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆಸಬೇಕಿದ್ದ ಬ್ರಹ್ಮಶ್ರೀ ನಾರಾಯಣ ಗುರುಗಳ 168ನೇ ಜಯಂತಿಯನ್ನು ಮಂಗಳೂರಿಗೆ ಸ್ಥಳಾಂತರಿಸುವ ಮೂಲಕ … Read more

ಆಧ್ಯಾತ್ಮದೆಡೆ ಸಾಗಲು ಯೋಗವೇ ಮಾರ್ಗ: ಡಾ. ವಿದ್ಯಾ ಹಿರೇಮಠ

ನೋಬೆಲ್ ವರ್ಲ್ಡ್ ರೆಕಾರ್ಡ್ ಯೋಗಾಸನ ಪ್ರಶಸ್ತಿ ಪ್ರದಾನ ಸಮಾರಂಭ ಸುದ್ದಿ360 ದಾವಣಗೆರೆ, ಸೆ.10: ವ್ಯಕ್ತಿಯು ಮಾನಸಿಕ, ಸಾಮಾಜಿಕ ಹಾಗೂ ಆಧ್ಯಾತ್ಮಿಕ ಕ್ಷೇಮವನ್ನು ಪಡೆಯಲು ಯೋಗಾಭ್ಯಾಸ ಸೂಕ್ತ ಸಾಧನವಾಗಿದೆ ಎಂದು ಮಂಗಳೂರಿನ ಯೆನಾಪೋಯಾ ಪ್ರಕೃತಿ ಚಿಕಿತ್ಸಾ ಯೋಗ ಕಾಲೇಜಿನ ಉಪನ್ಯಾಸಕಿ ಡಾ. ವಿದ್ಯಾ ಹಿರೇಮಠ ಅಭಿಪ್ರಾಯಪಟ್ಟರು. ನಗರದ ಅರುಣ ಚಿತ್ರಮಂದಿರ ಬಳಿ ಇರುವ ಜಿಲ್ಲಾ ನಿವೃತ್ತ ಪೊಲೀಸ್ ಅಧಿಕಾರಿಗಳ ಸಂಘದ ಸಮುದಾಯ ಭವನದಲ್ಲಿ ಶನಿವಾರ ಸಪ್ತರಿಷಿ ಯೋಗಾಸನ ಸ್ಪೋರ್ಟ್ಸ್ ಅಕಾಡೆಮಿ ಹಮ್ಮಿಕೊಂಡಿದ್ದ ನೋಬೆಲ್ ವರ್ಲ್ಡ್ ರೆಕಾರ್ಡ್ ಯೋಗಾಸನ ಪ್ರಶಸ್ತಿ … Read more

ರಾಮನಗರ: ಮತ್ತೆ ಕಂಪಿಸಿದ ಭೂಮಿ – ಜನರಲ್ಲಿ ಆತಂಕ

ಸುದ್ದಿ360 ರಾಮನಗರ, ಸೆ.10: ರಾಮನಗರ ತಾಲ್ಲೂಕಿನ ಹಲವಡೆ ಭೂಮಿ ಕಂಪಿಸಿದ ಅನುಭವವಾಗಿದ್ದು, ಇಂದು ಸಂಜೆ 5:40 ಹಾಗೂ 7:15 ರ ಸುಮಾರಿಗೆ ಎರಡು ಬಾರಿ ಭೂ ಕಂಪನ ಉಂಟಾಗಿರುವುದು ಜನರ ಅನುಭವಕ್ಕೆ ಬಂದಿದೆ. ಎರಡು ಭಾರಿ ಕಂಪಿಸಿದ ಭೂಮಿ. ರಾಮನಗರ ತಾಲ್ಲೂಕಿನ ಬೆಜ್ಜರಹಳ್ಳಿ ಕಟ್ಟೆಯಲ್ಲಿ ದೊಡ್ಡ ಪ್ರಮಾಣದಲ್ಲಿ ಶಬ್ದ ಬಂದ ಹಿನ್ನಲೆಯಲ್ಲಿ ಜನರು ಮನೆಯಿಂದ ಹೊರ ಬಂದಿದ್ದಾರೆ. ಭೂಕಂಪಿಸಿದ ಅನುಭವವಾಗಿದ್ದು, ಜನರು ಭಯದಿಂದ ಮನೆಯಿಂದ ಹೊರಗಡೆ ಬಂದಿದ್ದಾರೆ. ಭಾರಿ ಪ್ರಮಾಣದಲ್ಲಿ ಭೂಮಿ.ಕಂಪಿಸಿದ ಅನುಭವವಾಗಿದ್ದು, ಬೆಳಗ್ಗೆ 5.30 ರ … Read more

ಮೂಲಭೂತ ಸೌಲಭ್ಯಕ್ಕಾಗಿ ಆಶ್ರಯ ನಿವಾಸಿಗಳ ಒತ್ತಾಯ

ಸುದ್ದಿ360 ದಾವಣಗೆರೆ, ಸೆ.09: ಪಾಲಿಕೆ ವ್ಯಾಪ್ತಿಯ ಆವರಗೆರೆ ಬಳಿಯ ಆಶ್ರಯ ಕಾಲೋನಿಗೆ ರಸ್ತೆ ಸೇರಿದಂತೆ ಇತರೆ ಮೂಲಭೂತ ಸೌಲಭ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿ ಭಾರತ ಕಮ್ಯೂನಿಷ್ಟ್ ಪಕ್ಷ ಮತ್ತು ಕರ್ನಾಟಕ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘದ ನೇತೃತ್ವದಲ್ಲಿ ಕಾಲೋನಿಯ ನಿವಾಸಿಗಳು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು. ನಗರದ ಡಿಸಿಎಂ ಟೌನ್‌ಶಿಪ್ ಬಳಿಯ ರೈಲ್ವೆ ಕೆಳ ಸೇತುವೆಯಲ್ಲಿ ಜಮಾಯಿಸಿದ ನಿವಾಸಿಗಳು ಎತ್ತಿನ ಸಂತೆಗೆ ಹೋಗುವ ರಸ್ತೆಯಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ … Read more

ಎಸಿಬಿ ರದ್ದು: ಬಲಗೊಂಡ ಲೋಕಾಯುಕ್ತ

ಸುದ್ದಿ360 ಬೆಂಗಳೂರು, ಸೆ.09:ಲೋಕಾಯುಕ್ತ ಪೊಲೀಸ್ ವಿಭಾಗಕ್ಕೆ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಈ ಹಿಂದೆ ನೀಡಿದ್ದ ಅಧಿಕಾರಗಳನ್ನು ಮರುಸ್ಥಾಪಿಸಿ ರಾಜ್ಯ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದ್ದು, ಹೈಕೋರ್ಟ್ ಆದೇಶದಂತೆ ಭ್ರಷ್ಟಾಚಾರ ನಿಗ್ರಹ ದಳವನ್ನು (ಎಸಿಬಿ) ರದ್ದುಗೊಳಿಸಲಾಗಿದೆ. ಎಸಿಬಿಯಲ್ಲಿ ತನಿಖಾ ಹಂತದಲ್ಲಿರುವ ಪ್ರಕರಣಗಳು, ಬಾಕಿ ಉಳಿದಿರುವ ವಿಚಾರಣೆಗಳು, ಶಿಸ್ತುಕ್ರಮಕ್ಕೆ ಸಂಬಂಧಿಸಿದ ಪ್ರಕರಣಗಳು ಮತ್ತು ಖಾಸಗಿ ದೂರುಗಳಿಗೆ ಸಂಬಂಧಿಸಿದ ಎಲ್ಲ ಪ್ರಕರಣಗಳನ್ನು ಲೋಕಾಯುಕ್ತಕ್ಕೆ ವರ್ಗಾಯಿಸುವಂತೆ ಆದೇಶದಲ್ಲಿ ತಿಳಿಸಲಾಗಿದೆ.

ಸಿದ್ಧರಾಮೋತ್ಸವ ಬಳಿಕ ಬೆಣ್ಣೆನಗರಿಯಲ್ಲಿ ಮತ್ತೊಂದು ಬೃಹತ್ ಸಮಾವೇಶ

ಎಸ್‌ಎಸ್‌ಎಂ 55  ಅದ್ದೂರಿ ಕಾರ್ಯಕ್ರಮಕ್ಕೆ ಭೂಮಿಪೂಜೆ ಸುದ್ದಿ360 ದಾವಣಗೆರೆ, ಸೆ.09: ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನರವರ 55ನೇ ಜನ್ಮದಿನಾಚರಣೆ ಇದೇ ತಿಂಗಳ 22 ರಂದು ನಡೆಯಲಿದ್ದು, ಜನ್ಮದಿನಾಚರಣೆ ಅಂಗವಾಗಿ ನಗರದ ಎಸ್‌ಎಸ್ ಲೇಔಟ್ ಬಿ ಬ್ಲಾಕ್‌ನಲ್ಲಿರುವ ಬಾಪೂಜಿ ಇನ್ಸ್ಟಿಟ್ಯೂಟ್ ಆಫ್ ಹೈಟೆಕ್ ಎಜುಕೇಷನ್ (ಎಂಬಿಎ ಕಾಲೇಜು) ಮೈದಾನದಲ್ಲಿ ಶುಕ್ರವಾರ ಎಸ್‌ಎಸ್‌ಎಂ 55ನೇ ಜನ್ಮದಿನ ಸಮಾರಂಭದ ವೇದಿಕೆ ನಿರ್ಮಾಣಕ್ಕೆ ಇಂದು ಭೂಮಿ ಪೂಜೆ ನೆರವೇರಿಸಲಾಯಿತು. ಎಸ್‌ಎಸ್‌ಎಂ ಅಭಿಮಾನಿ ಬಳಗ ಈ ಕಾರ್ಯಕ್ರಮವನ್ನು ಆಯೋಜಿಸುತ್ತಿದ್ದು, ಬೆಣ್ಣೆನಗರಿಯಲ್ಲಿ ಯಶಸ್ವಿಯಾಗಿ ಮತ್ತು ಅದ್ದೂರಿಯಾಗಿ … Read more

4ನೇ ದಿನಕ್ಕೆ ಕಾಲಿಟ್ಟ ಸಿ ಮತ್ತು ಡಿ ಗ್ರೂಪ್ ಹೊರಗುತ್ತಿಗೆ ನೌಕರರ ಮುಷ್ಕರ – ಜಿಲ್ಲಾಧಿಕಾರಿಗಳಿಗೆ ಮನವಿ

ಸುದ್ದಿ360 ದಾವಣಗೆರೆ, ಸೆ.09: ಯುಬಿಡಿಟಿ ಇಂಜಿನಿಯರಿಂಗ್ ಕಾಲೇಜಿನ ಸಿ ಮತ್ತು ಡಿ ಗ್ರೂಪ್ ಹೊರಗುತ್ತಿಗೆ ನೌಕರರು ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಡೆಸುತ್ತಿರುವ ಮುಷ್ಕರ ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಎದುರು ಎಐಯುಟಿಯುಸಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಸಿದರು. ನಗರದ ಡೆಂಟಲ್ ಕಾಲೇಜು ರಸ್ತೆಯಲ್ಲಿರುವ ಯುಬಿಡಿಟಿ ಕಾಲೇಜಿನಿಂದ ಕಾಲ್ನಡಿಗೆಯಲ್ಲಿ ಹೊರಟ ಪ್ರತಿಭಟನಾ ಮೆರವಣಿಗೆ ಜಿಲ್ಲಾಧಿಕಾರಿಗಳ ಕಚೇರಿ ತಲುಪಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ತಮ್ಮ ಬೇಡಿಕೆಗಳ ಈಡೆರಿಸುವಂತೆ ಘೋಷಣೆಗಳನ್ನು ಕೂಗಿದರು. ಕಾಲೇಜಿನಲ್ಲಿ … Read more

ಹೊರ ರಾಜ್ಯಕ್ಕೆ ಟ್ರ್ಯಾಕ್ಟರ್ ಬಿಡಿ ಭಾಗಗಳ ಅಕ್ರಮ ಮಾರಾಟ – ತಡೆದ ದಾವಣಗೆರೆ ಪೊಲೀಸರು

ಸುದ್ದಿ360 ದಾವಣಗೆರೆ, ಸೆ.07: ಯಾವುದೇ ದಾಖಲೆ ಹೊಂದಿರದೇ ಆರ್‌ಟಿಒ ದಿಂದ ಪರವಾನಿಗೆ ಪಡೆಯದೇ ದಾವಣಗೆರೆಯಿಂದ ಪಂಜಾಬ್‌ಗೆ ಅಕ್ರಮವಾಗಿ ಟ್ರಾಕ್ಟರ್ ಬಿಡಿ ಭಾಗಗಳನ್ನು ಮಾರಾಟವಾಗುತ್ತಿದ್ದುದನ್ನು ಜಿಲ್ಲಾ ಪೊಲೀಸರು ಪತ್ತೆಹಚ್ಚಿ ವಿಚಾರಣೆ ನಡೆಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಜಿಲ್ಲಾ ಪೊಲೀಸ್ ಕಛೇರಿಯ ಡಿಸಿಆರ್‌ಬಿ ಘಟಕದ ಪೊಲೀಸ್ ಉಪಾಧೀಕ್ಷಕರಾದ ಶ್ರೀ ಬಿ. ಎಸ್. ಬಸವರಾಜ್ ಮತ್ತು ಅಧಿಕಾರಿ, ಸಿಬ್ಬಂದಿಗಳು ದಾವಣಗೆರೆ ನಗರದ ರೈತರ ಸಂಘದ ಕಾಂಪೌಂಡ್, ಬಿಲಾಲ್ ಕಾಂಪೌಂಡ್ ಬಳಿ ಇರುವ ಗ್ಯಾರೇಜುಗಳನ್ನು ಪರಿಶೀಲಿಸಿದ್ದಾರೆ. ಈ ಸಂದರ್ಭದಲ್ಲಿ ಅಲ್ಲಿ ಹಳೇಯ ಟ್ರಾಕ್ಟರ್‌ಗಳನ್ನು … Read more

ಪತ್ನಿಯ ಕತ್ತು ಕುಯ್ದು ಆತ್ಮಹತ್ಯೆಗೆ ಯತ್ನಿಸಿದ ಪತಿ

ಸುದ್ದಿ360 ಶಿವಮೊಗ್ಗ, ಸೆ.07: ಗಂಡ ಹೆಂಡತಿಯ ನಡುವಿನ ಜಗಳದಿಂದಾಗಿ ಹೆಂಡತಿ ರಕ್ತದಮಡುವಿನಲ್ಲಿ ಕೊನೆಯುಸಿರೆಳೆದರೆ, ಪತಿ ಆತ್ಮಹತ್ಯೆಗೆ ಯತ್ನಿಸಿ ಬದುಕುಳಿದಿರುವ ಘಟನೆ ಶಿವಮೊಗ್ಗ ನಗರದಲ್ಲಿ ವರದಿಯಾಗಿದೆ. ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ನಗರದ ಪ್ರಿಯಾಂಕ ಲೇ ಔಟ್ ನಲ್ಲಿನ ಮನೆಯೊಂದರಲ್ಲಿನ ಅಡುಗೆ ಮನೆಯ ರಕ್ತದ ಮಡುವಿನಲ್ಲಿ ಪತ್ನಿ ಪತ್ತೆಯಾಗಿದ್ದಾಳೆ. ಮೃತ ಮಹಿಳೆಯನ್ನ ಮಂಜುಳ (30) ಎಂದು ಗುರುತಿಸಲಾಗಿದೆ.ಪತಿ ದಿನೇಶ್ ಮೆಸ್ಕಾಂ ಉದ್ಯೋಗಿ ಎನ್ನಲಾಗಿದ್ದು, ಆತ ಸಹ ಕೈಕೊಯ್ದುಕೊಂಡಿದ್ದಾನೆ. ಆತನಿಗೆ ನಾರಾಯಣ ಹೃದಯಾಲಯಕ್ಕೆ ದಾಖ ಲಿಸಲಾಗಿದೆ. … Read more

error: Content is protected !!