ಬಡಾವಣೆಗಳು ಜಲಾವೃತ: ಕಾಂಗ್ರೆಸ್ ಸರ್ಕಾರದ ದುರಾಡಳಿತದ ಫಲ – ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360 ಬೆಂಗಳೂರು, ಸೆ.06: ಹಿಂದೆ ಇದ್ದ ಕಾಂಗ್ರೆಸ್ ಸರ್ಕಾರದ ಯೋಜನಾ ರಹಿತ ಹಾಗೂ ದುರಾಡಳಿತದ ಫಲವಾಗಿ ಈ ಬಡಾವಣೆಗಳು ಜಲಾವೃತಗೊಳ್ಳುವ ಸ್ಥಿತಿ  ಎದುರಿಸಬೇಕಾಗಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ  ಮಾತನಾಡಿ, ಎಗ್ಗಿಲ್ಲದೆ ಕೆರೆಗಳಲ್ಲಿ, ಕೆರೆ ಬಂಡ್ ಹಾಗೂ ಬಫರ್ ವಲಯಗಳಲ್ಲಿ ಅನುಮತಿಗಳನ್ನು ನೀಡಿದ್ದಾರೆ. ಈ ಪರಿಸ್ಥಿತಿಗೆ ಕಾಂಗ್ರೆಸ್ ಕಾರಣ. ಕೆರೆಗಳ ನಿರ್ವಹಣೆಯ ಬಗ್ಗೆ ಅವರು ಯೋಚಿಸಿಯೂ ಇಲ್ಲ. ನಾನು ಇದನ್ನು ಸವಾಲಾಗಿ ಸ್ವೀಕರಿಸಿದ್ದು 1500 ಕೋಟಿ … Read more

ನಿವೃತ್ತಿ ಹೊಂದುವ ಶಿಕ್ಷಕರ ಪ್ರಮಾಣದಷ್ಟೇ ಹೊಸ ಶಿಕ್ಷಕರ ನೇಮಕಾತಿಗೆ ವ್ಯವಸ್ಥೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360 ಬೆಂಗಳೂರು, ಸೆ.05: ಮುಂಬರುವ ದಿನಗಳಲ್ಲಿ ಪ್ರತಿ ವರ್ಷ ನಿವೃತ್ತಿ ಹೊಂದುವ ಶಿಕ್ಷಕರ ಪ್ರಮಾಣದಷ್ಟೇ ಹೊಸ ಶಿಕ್ಷಕರನ್ನು ಹಿಂದಿನ ವರ್ಷವೇ ನೇಮಿಸಿ, ತರಬೇತಿ ನೀಡಿ, ನಿವೃತ್ತಿ ಹೊಂದಲಿರುವ ಶಿಕ್ಷಕರ ಸ್ಥಾನಕ್ಕೆ ಅವರನ್ನು ನೇಮಿಸುವ ವ್ಯವಸ್ಥೆಯನ್ನು ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು  ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಮಾಜಿ ರಾಷ್ಟ್ರಪತಿ ರಾಧಾಕೃಷ್ಣನ್ ಅವರ ಜನ್ಮದಿನದ ಅಂಗವಾಗಿ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಶಿಕ್ಷಣ ಕ್ಷೇತ್ರಕ್ಕೆ 25 ಸಾವಿರ ಕೋಟಿ ರೂ. … Read more

ದಾವಣಗೆರೆ ಜಿಲ್ಲಾ ಕ ಸಾ ಪ ದಿಂದ ಸಮಸ್ತ ಶಿಕ್ಷಕ ಬಂಧುಗಳಿಗೆ ಹೃದಯಸ್ಪರ್ಶಿ  ಶುಭಾಶಯಗಳು

ಜಿಲ್ಲಾ “ಅತ್ಯುತ್ತಮ ಶಿಕ್ಷಕ ಪ್ರಶಸ್ತಿ” ಪುರಸ್ಕೃತರು ಹಾಗೂ ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರೂ ಆದ ಬಿ. ವಾಮದೇವಪ್ಪ ಅವರು ಶಿಕ್ಷಕರ ದಿನಾಚರಣೆಯ ಈ ಸಂದರ್ಭದಲ್ಲಿ ಶಿಕ್ಷಕ ಬಂಧುಗಳಿಗೆ ಹೃದಯಸ್ಪರ್ಶಿ ಶುಭಾಶಯ ಕೋರಿದ್ದಾರೆ. ಅಕ್ಷರ ವಿದ್ಯೆ ಕಲಿಸಿದ, ಜೀವನ ಪಾಠ ಕಲಿಸಿದ ಗುರುಹಿರಿಯರನ್ನು ಗೌರವದಿಂದ ಸ್ಮರಿಸುವ ಪವಿತ್ರವಾದ ದಿನ. II ಗುರು ಬ್ರಹ್ಮ  ಗುರು ವಿಷ್ಣು  ಗುರುದೇವೋ ಮಹೇಶ್ವರಃ IIII ಗುರು ಸಾಕ್ಷಾತ್ ಪರಬಹ್ಮ ತಸ್ಮೈಶ್ರೀ ಗುರುವೇ ನಮಃ II ಅಜ್ಞಾನದಿಂದ ಸುಜ್ಞಾನದತ್ತ…ಕತ್ತಲೆಯಿಂದ ಬೆಳಕಿನತ್ತ…ಭಯದಿಂದ ನಿರ್ಭಯದತ್ತ… … Read more

‘ಮುರುಘಾ ಶ್ರೀಗಳ ಪ್ರಕರಣ ಸಿಬಿಐಗೆ ವಹಿಸಿ’ –  ವಿದ್ಯಾರ್ಥಿಗಳ ರಕ್ಷಣೆಗೆ ಪ್ರಗತಿಪರರ ಒತ್ತಾಯ

ಸುದ್ದಿ360 ದಾವಣಗೆರೆ, ಸೆ.02: ಮುರುಘಾ ಶ್ರೀಗಳ ವಿರುದ್ಧದ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟದ ಮುಖಂಡರು ಹಾಗೂ ಸದಸ್ಯರು ನಗರದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಇಂದು ಪ್ರತಿಭಟನೆ ನಡೆಸಿ, ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಉಪವಿಭಾಗಾಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ಈ ವೇಳೆ ಮಾತನಾಡಿದ ನಿವೃತ್ತ ಪ್ರಾಧ್ಯಾಪಕ ಪ್ರೊ.ಎ.ಬಿ. ರಾಮಚಂದ್ರಪ್ಪ, ಪೋಕ್ಸೋ ಪ್ರಕರಣ ದಖಾಲಾದ ಆರು ದಿನಗಳ ಬಳಿಕವಾದರೂ ಮುರುಘಾ ಶರಣರನ್ನು ಬಂಧಿಸಿರುವುದು ಸ್ವಾಗತದ ವಿಷಯವಾಗಿದೆ. ಆದರೆ, ಶ್ರೀಗಳು ಪ್ರಭಾವಿಗಳಾಗಿರುವ ಕಾರಣ … Read more

ಮುರುಘಾ ಶರಣರ ಬಂಧನಕ್ಕೆ ವ್ಯಾಪಕ ಖಂಡನೆ – ದಾವಣಗೆರೆಯಲ್ಲಿ ವಿವಿಧ ಸಮುದಾಯಗಳಿಂದ ಪ್ರತಿಭಟನೆ

ಸುದ್ದಿ360 ದಾವಣಗೆರೆ, ಸೆ.02: ಚಿತ್ರದುರ್ಗದ ಮುರುಘಾ ಶ್ರೀಗಳ ಬಂಧನವನ್ನು ಖಂಡಿಸಿ, ನಗರದಲ್ಲಿ ಇಂದು ವಿವಿಧ ಧರ್ಮ, ಸಮುದಾಯಗಳ ಮುಖಂಡರು, ಶ್ರೀಮಠದ ಭಕ್ತರು, ಶ್ರೀಗಳ ಬೆಂಬಲಿಗರು ಶ್ರೀ ಮುರುಘರಾಜೇಂದ್ರ ವಿರಕ್ತಮಠದ ಶ್ರೀ ಬಸವಪ್ರಭು ಸ್ವಾಮೀಜಿ ನೇತೃತ್ವದಲ್ಲಿ ಬೃಹತ್ ಧರಣಿ ನಡೆಸಿದರು. ನಗರದ ಜಯದೇವ ವೃತ್ತದಲ್ಲಿ ಜಮಾವಣೆಗೊಂಡ ಪ್ರತಿಭಟನಾಕಾರರು, ಯಾರೋ ಮಾಡಿರುವ ಷಡ್ಯಂತ್ರದಿಂದಾಗಿ ಶ್ರೀಗಳು ಗಂಭೀರ ಆರೋಪದ ಪ್ರಕರಣ ಎದುರಿಸುವಂತಾಗಿದೆ. ತಪ್ಪು ಮಾಡದೇ ಇದ್ದರೂ ಶ್ರೀಗಳನ್ನು ಬಂಧಿಸಿರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಶ್ರೀ ಬಸವಪ್ರಭು ಸ್ವಾಮೀಜಿ … Read more

ಕೆರೆಗಳಿಗೆ  ಸ್ಲೂಯೀಸ್ ಗೇಟ್ ಅಳವಡಿಸಲು ತೀರ್ಮಾನ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360 ಬೆಂಗಳೂರು, ಸೆ.01: ಕೆರೆಗಳ  ಒತ್ತುವರಿ ತೆರವುಗೊಳಿಸಿ  ಬೊಮ್ಮನಹಳ್ಳಿ, ಮಹದೇವಪುರ, ಕೆ.ಆರ್.ಪುರಂ ಅಥವಾ ಎತ್ತರದ ಪ್ರದೇಶದಲ್ಲಿ ಅತಿ ಹೆಚ್ಚು ಕೆರೆಗಳಿದ್ದು, ಒಂದಕ್ಕೊಂದು  ಹೊಂದಿಕೊಂಡಿರುವ ಕೆರೆಗಳಿಗೆ  ಸ್ಲೂಯೀಸ್ ಗೇಟ್ ಗಳನ್ನು ಅಳವಡಿಸಲು  ತೀರ್ಮಾನಿಸಲಾಗಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ನಗರದಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಿದ ನಂತರ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ಮಳೆ ನೀರು ಚರಂಡಿಗಳ ನಿರ್ವಹಣೆಗೆ  ಕೈಪಿಡಿ ತೆರೆವುಗೊಳಿಸುವ ಕಾರ್ಯ ನಿರಂತರವಾಗಿ ಆಗಬೇಕು.  ತಗ್ಗು ಪ್ರದೇಶದಲ್ಲಿ ನೀರು … Read more

ಮುರುಘಾ ಶರಣರ ಬಂಧನ – ಪ್ರತಿಭಟನೆಗೆ ಮುಂದಾದ ಅಭಿಮಾನಿಗಳು

ಸುದ್ದಿ360 ಚಿತ್ರದುರ್ಗ, ಸೆ.01: ಪ್ರೌಢಶಾಲೆಯ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಮುರುಘಾ ಮಠದ ಡಾ. ಶಿವಮೂರ್ತಿ ಮುರುಘಾ ಶರಣರನ್ನು ಗುರುವಾರ ರಾತ್ರಿ 10 ಗಂಟೆ ವೇಳೆಗೆ  ಮುರುಘಾ ಮಠದಲ್ಲಿಯೇ ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ. ಮುರುಘಾ ಶರಣರನ್ನು ಬಂಧಿಸಿ, ವಿಚಾರಣೆಗೆ ಒಳಪಡಿಸಲಾಗಿದೆ. ವೈದ್ಯಕೀಯ ತಪಾಸಣೆಗಾಗಿ ಅವರನ್ನು ಜಿಲ್ಲಾ ಆಸ್ಪತ್ರೆಯ ನೂತನ ಕಟ್ಟಡಕ್ಕೆ ಕರೆದೊಯ್ಯಲು ಸಿದ್ಧತೆ ನಡೆದಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ್ ತಿಳಿಸಿದ್ದಾರೆ. ಭಾರಿ ಸಂಖ್ಯೆಯಲ್ಲಿ ಮುರುಘಾ ಮಠಕ್ಕೆ ಬಂದಿದ್ದ ಪೊಲೀಸ್ ತನಿಖಾ ತಂಡ, … Read more

ದಾವಣಗೆರೆ ಜಿಲ್ಲಾ ಕಾಂಗ್ರೆಸ್ ನಿಂದ ಭಾವೈಕ್ಯತೆಯ ಗಣಪತಿ ಪ್ರತಿಷ್ಠಾಪನೆ

ಸುದ್ದಿ360 ದಾವಣಗೆರೆ, ಸೆ.01: ಜಿಲ್ಲಾ ಕಾಂಗ್ರೆಸ್ ವತಿಯಿಂದ ಶಾಮನೂರು ಶಿವಶಂಕರಪ್ಪ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಸರ್ವಧರ್ಮದ ಹಿಂದೂ ಕ್ರೈಸ್ತ ಮುಸಲ್ಮಾನರು ಕೂಡಿ ಭಾವೈಕ್ಯತೆಯ ಗಣೇಶ ಪ್ರತಿಷ್ಠಾಪನೆ ಮಾಡಲಾಗಿತ್ತು. ಪ್ರತಿಷ್ಠಾಪನೆ ವೇಳೆ ಮಾಜಿ ಸಚಿವರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರೂ ಆದ ಡಾ. ಶಾಮನೂರು ಶಿವಶಂಕರಪ್ಪನವರು, ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಅನಿತಾಬಾಯಿ ಮಾಲತೇಶ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್‌ ಕೆ.ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಅಯೂಬ್ ಪೈಲ್ವಾನ್, ಕೆ.ಜಿ.ಶಿವಕುಮಾರ್, ಮಾಗನಳ್ಳಿ ಪರಶುರಾಮ್ ಜಿ.ಎಸ್.ಮಂಜುನಾಥ್, ಎ.ನಾಗರಾಜ್, ಮಹ್ಮದ್ ಸಮೀವುಲ್ಲಾ, … Read more

ಉಕ್ರೇನ್ ಮೇಲಿನ ರಷ್ಯಾ ಯುದ್ಧ ನಿಲ್ಲಿಸಲು ಎಐಯುಟಿಯುಸಿ ಆಗ್ರಹ – ‘ಯುದ್ಧ ಬೇಡ ಶಾಂತಿ ಬೇಕು’

ಸುದ್ದಿ360 ದಾವಣಗೆರೆ, ಸೆ.01: ಬಂಡವಾಳಶಾಹಿ-ಸಾಮ್ರಾಜ್ಯಶಾಹಿ ಶಕ್ತಿಗಳು ಅತಿ ಹೆಚ್ಚು ಲಾಭಗಳಿಸಲು ಈ ಯುದ್ಧಗಳನ್ನು ಹುಟ್ಟುಹಾಕತ್ತಿದ್ದು, ರಷ್ಯಾ ಉಕ್ರೇನ್ ಮೇಲೆ ನಡೆಸುತ್ತಿರುವ ಯುದ್ಧ ನಿಲ್ಲಿಸಬೇಕು ಎಂದು ಒತ್ತಾಯಿಸಿ ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್ (ಎಐಯುಟಿಯುಸಿ) ಕಾರ್ಯಕರ್ತರು ಇಂದು ನಗರದ ಮಹಾತ್ಮಾಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ವಿಶ್ವ ಕಾರ್ಮಿಕ ಸಂಘಟನೆಗಳ ಒಕ್ಕೂಟ ವರ್ಲ್ಡ್ ಫೆಡರೇಷನ್ ಆಫ್ ಟ್ರೇಡ್ ಯುನಿಯನ್ (WFTU )  ಸೆಪ್ಟೆಂಬರ್ 1 ರಂದು ‘ಶಾಂತಿಗಾಗಿ ಅಂತರಾಷ್ಟ್ರೀಯ ಕ್ರಿಯಾ ದಿನ’ ಎಂದು ಆಚರಿಸಲು ಕರೆನೀಡಿದ್ದು, ಈ … Read more

ಸೆ.5,6 ಶ್ರೀ ರೇಣುಕ ಶಿವಾಚಾರ್ಯ ಮಹಾಸ್ವಾಮಿಗಳವರ 75ನೇ ಜನ್ಮವರ್ಧಂತಿ ಅಮೃತ ಮಹೋತ್ಸವ

ಸುದ್ದಿ360 ದಾವಣಗೆರೆ, ಸೆ.01: ಚನ್ನಗಿರಿ ತಾಲೂಕಿನ ಪುರಾತನ ಮಠ ಹಾಗೂ ಕೆಳದಿ ಅರಸರ ಕಾಲದಲ್ಲಿ ನಿರ್ಮಾಣವಾದ ತಾವರಕರೆ ಶ್ರೀಶಿಲಾಮಠದಲ್ಲಿ ಸೆ.5ಹಾಗೂ 6ರಂದು ಪರಮಪೂಜ್ಯ ಶ್ರೀ ರೇಣುಕ ಶಿವಾಚಾರ್ಯ ಮಹಾಸ್ವಾಮಿಗಳವರ 75ನೇ ಜನ್ಮವರ್ಧಂತಿ ಅಮೃತ ಮಹೋತ್ಸವ ಹಮ್ಮಿಕೊಳ್ಳಲಾಗಿದೆ ಎಂದು ಮಠದ ಕಿರಿಯ ಪೂಜ್ಯರಾದ ಶ್ರೀ ಅಭಿನವ ಸಿದ್ದಲಿಂಗ ಶಿವಾಚಾರ್ಯ ಸ್ವಾಮಿಜಿ ಮಾಹಿತಿ ನೀಡಿದರು. ಈ ಕುರಿತು ಇಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಶ್ರೀಗಳು ಸೆ. 5ರಂದು ಸಂಜೆ 5ಕ್ಕೆ ಬಾಳೇಹೊನ್ನೂರು ರಂಭಾಪುರಿಪೀಠದ ಶ್ರೀ ರಂಭಾಪುರಿ ವೀರಸಿಂಹಾಸನಾಧೀಶ್ವರ ಸ್ವಾಮೀಜಿ ಹಾಗೂ … Read more

error: Content is protected !!