ವಿ.ಡಿ. ಸಾವರ್ಕರ್ ವಿವಾದ – ಡಾ. ಎಂ.ಬಿ. ಪಾಟೀಲ ಹೇಳಿದ್ದೇನು ?

ಕಾಂಗ್ರೆಸ್ ನಿಂದ ಕನ್ನಡ ಹೋರಾಟಗಾರರ ರಥಯಾತ್ರೆ ಸುದ್ದಿ360 ವಿಜಯಪುರ, ಆ.25: ಬಿಜೆಪಿಯಿಂದ ವಿ.ಡಿ.ಸಾವರ್ಕರ್ ರಥಯಾತ್ರೆಗೆ ಪ್ರತ್ಯುತ್ತರವಾಗಿ ಕನ್ನಡ ನಾಡಿನ ಹೋರಾಟಗಾರರ ರಥಯಾತ್ರೆಗೆ ಕಾಂಗ್ರೆಸ್ ಸಿದ್ದವಾಗಿದೆ. ವೀರ ರಾಣಿ ಕಿತ್ತೂರ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ, ಹಲಗಲಿಯ ಬೇಡರು, ಸುರಪುರ ನಾಯಕರು….ಹೀಗೆ ಅನೇಕ ಹೋರಾಟಗಾರರನ್ನು ಗೌರವಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ರೂಪಿಸುವುದಾಗಿ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಡಾ.ಎಂ.ಬಿ‌. ಪಾಟೀಲ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಪ್ರತಿಕ್ರಿಯಿಸಿರುವ ಪಾಟೀಲರು, ಬಿಜೆಪಿಗೆ ಕನ್ನಡದ ಹೋರಾಟಗಾರರು ಬೇಡವಾ? ಅವರ ಫೋಟೋ ತೆಗೆದುಕೊಂಡು ರಥ ಯಾತ್ರೆ ಮಾಡಲಿ, ಹಲಗಲಿಯ … Read more

ಗಣೇಶೋತ್ಸವ ಪರಿಸರ ಪೂರಕ ಹಬ್ಬವಾಗಲಿ : ಜಿಲ್ಲಾಧಿಕಾರಿ ಶಿವಾನಂದ ಕಾಪಶಿ

ಸುದ್ದಿ360 ದಾವಣಗೆರೆ, ಆ.24: ಗಣೇಶೋತ್ಸವವು ಸಾರ್ವಜನಿಕವಾಗಿ ಆಚರಿಸುವ ಹಬ್ಬವಾಗಿದೆ, ಶಾಂತಿ, ಸೌಹಾರ್ದತೆ ಕಾಪಾಡುವ ಜೊತೆಗೆ ಪರಿಸರ ಸ್ನೇಹಿ ಮಣ್ಣಿನ ಗಣೇಶ ಸ್ಥಾಪಿಸಿ ಹಬ್ಬವನ್ನು ಆಚರಿಸಬೇಕೆಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಹೇಳಿದರು. ಬುಧವಾರ ಜಿಲ್ಲಾಡಳಿತ ಭವನದ ತುಂಗಭದ್ರ ಸಭಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪೊಲೀಸ್ ಇಲಾಖೆ ಸಂಯುಕ್ತಾಶ್ರಯದಲ್ಲಿ ಗೌರಿ ಗಣೇಶ ಚತುರ್ಥಿ ಪ್ರಯುಕ್ತ ಆಯೋಜಿಸಲಾಗಿದ್ದ ‘ನಾಗರಿಕ ಸೌಹಾರ್ದ ಸಮನ್ವಯ ಸಭೆ’ಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಗಣೇಶೋತ್ಸವ ಆಚರಿಸುವ ಸಂಘ-ಸಂಸ್ಥೆಗಳು ಸರ್ಕಾರದ ಸುತ್ತೋಲೆಯ ಅಂಶಗಳನ್ನು ಪಾಲಿಸುವ ಮೂಲಕ ಹಬ್ಬವನ್ನು … Read more

ನಕಲಿ ಬಂಗಾರದ ಬಿಲ್ಲೆ ನೀಡಿ 22 ಲಕ್ಷ ವಂಚನೆ: ಆರೋಪಿಯ ಬಂಧನ

ಸುದ್ದಿ360 ದಾವಣಗೆರೆ, ಆ.23: ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಸಂತೇಬೆನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಕಲಿ ಬಂಗಾರದ ಬಿಲ್ಲೆ ಜಾಲ ಪತ್ತೆಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರಿಗೆ 22 ಲಕ್ಷ ವಂಚನೆ ಮಾಡಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಂತೇಬೆನ್ನೂರು ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಬಂಧಿಸಿದಂತೆ ಆರೋಪಿ ದುರುಗಪ್ಪ (70) ಚನ್ನಗಿರಿ ನಗರದ ಎಸ್ ಬಿಆರ್ ಕಾಲೋನಿಯ ಬಸ್ ನಿಲ್ದಾಣ ಬಳಿ ವಶಕ್ಕೆ ಪಡೆದಿದ್ದಾರೆ. ಡಿವೈಎಸ್ ಪಿ ಎಸ್.‌ಸಂತೋಷ್, ಸಿಪಿಐ ಮಹೇಶ್, ಪಿಎಸ್ ಐ ಶಿವರುದ್ರಪ್ಪ‌ ಎಸ್.ಮೇಟಿ ಹಾಗೂ ಸಿಬ್ಬಂದಿಗಳಾದ … Read more

ಪುಸ್ತಕ ಮಾರಾಟ ಅಭಿಯಾನ

ಸುದ್ದಿ360 ದಾವಣಗೆರೆ, ಆ.23: ಕರ್ನಾಟಕ ಸಾಹಿತ್ಯ ಅಕಾಡೆಮಿಯು ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಆಗಸ್ಟ್ 02 ರಿಂದ ಆ.29 ರವರಗೆ ನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಅಮೃತ ಭಾರತಿಗೆ ಕನ್ನಡದಾರತಿ ಅಂಗವಾಗಿ ಅಮೃತ ಪುಸ್ತಕ ಮಾರಾಟ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಈ ಅಭಿಯಾನವನ್ನು ಆ.25 ರಂದು ಬೆಳಗ್ಗೆ 10 ಗಂಟೆಗೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ದಾವಣಗೆರೆ ಹಾಗೂ ಮಧ್ಯಾಹ್ನ 12 ಗಂಟೆಗೆ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಎಲ್ಲಾ ಪುಸ್ತಕಗಳನ್ನು ಶೇ.50% ರ ರಿಯಾಯಿತಿ ದರದಲ್ಲಿ ಮಾರಾಟ … Read more

ಜೀವನದಲ್ಲಿ ವಚನಗಳನ್ನು ಅಳವಡಿಸಿಕೊಂಡಲ್ಲಿ ವ್ಯಕ್ತಿ ವಿಶ್ವಮಾನವನಾಗುತ್ತಾನೆ: ಬಸವಪ್ರಭು ಶ್ರೀ

ಸುದ್ದಿ360 ದಾವಣಗೆರೆ, ಆ.23: ಪ್ರತಿಯೊಬ್ಬರೂ ವಚನಗಳನ್ನು ಓದಬೇಕು, ಕಲಿಯಬೇಕು ಮತ್ತು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ವಚನಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ವ್ಯಕ್ತಿ ವಿಶ್ವಮಾನವನಾಗುತ್ತಾನೆ ಎಂಬುದಾಗಿ  ವಿರಕ್ತ ಮಠದ ಶ್ರೀ ಬಸವಪ್ರಭು ಸ್ವಾಮೀಜಿ ವಿಶ್ವಾಸ ವ್ಯಕ್ತಪಡಿಸಿದರು. ನಗರದ ದೊಡ್ಡಪೇಟೆಯ ಶ್ರೀ ಮುರುಘರಾಜೇಂದ್ರ ವಿರಕ್ತಮಠದಲ್ಲಿ ಇಂದು ಹಮ್ಮಿಕೊಂಡಿದ್ದ ವಚನ ಕಂಠಪಾಠ ಸ್ಪರ್ಧೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ವಚನ ಗ್ರಂಥಗಳಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಉದ್ಘಾಟಿಸಿ, ಆಶೀರ್ವಚನ ನೀಡಿದರು. ಸಮಾಜದಲ್ಲಿ ವೈದ್ಯರು, ಎಂಜಿನಿಯರ್, ಬುದ್ಧಿವಂತರು, ವಿದ್ಯಾವಂತರು, ವಿಜ್ಞಾನಿಗಳು ಸಿಗುತ್ತಾರೆ. ಆದರೆ ಸಾತ್ವಿಕರು ಸಿಗುವುದಿಲ್ಲ. ನಮ್ಮ … Read more

ಐ.ಬಿ.ಪಿ.ಎಸ್ ರಾಷ್ಟ್ರೀಕೃತ ಬ್ಯಾಂಕ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ

ಸುದ್ದಿ360 ದಾವಣಗೆರೆ, ಆ.22: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ “ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ”ದ ವತಿಯಿಂದ ಐ.ಬಿ.ಪಿ.ಎಸ್ ರಾಷ್ಟ್ರೀಕೃತ ಬ್ಯಾಂಕ್ ನವರು ಅಧಿಕಾರಿಗಳ ಮತ್ತು ಗುಮಾಸ್ತರ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 45 ದಿನಗಳ ತರಬೇತಿಯನ್ನು ನೀಡಲಾಗುತ್ತದೆ. ಆಸಕ್ತರು ಆಗಸ್ಟ್ 29 ರೊಳಗಾಗಿ ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಲು ದೂರವಾಣಿ: 0821-2515944 ಸಂಖ್ಯೆಯನ್ನು ಸಂಪರ್ಕಿಸಬಹುದೆಂದು ಕರಾಮುವಿ ಪ್ರಭಾರ ಕುಲಸಚಿವರಾದ ಡಾ. ಎ. ಖಾದರ್ ಪಾಷ ಅವರು … Read more

ಭಾರತವನ್ನು ಇಸ್ಲಾಂ ರಾಷ್ಟ್ರವಾಗಿಸುವ ಹುನ್ನಾರ: ಹಿಂದೂ ರಾಷ್ಟ್ರಸೇನೆ ಆರೋಪ – ಬಿಜೆಪಿ ವಿರುದ್ಧ ಹೋರಟಕ್ಕೂ ಸಿದ್ದ!

ಸುದ್ದಿ360 ದಾವಣಗೆರೆ, ಆ.22: ಎಸ್‌ಡಿಪಿಐ, ಪಿಎಫ್‌ಐ ಸಂಘಟನೆಗಳು ಕರ್ನಾಟಕ ಸೇರಿ ದೇಶಾದ್ಯಂತ ತಮ್ಮ ಚಟುವಟಿಕೆ ವಿಸ್ತರಿಸಿದ್ದು, ಭಾರತವನ್ನು ಇಸ್ಲಾಮಿಕ್ ರಾಷ್ಟ್ರವನ್ನಾಗಿ ಮಾಡಲು ಹುನ್ನಾರ ನಡೆಸಿವೆ ಎಂದು ಹಿಂದೂ ರಾಷ್ಟ್ರಸೇನೆ ರಾಷ್ಟ್ರೀಯ ಸಂಸ್ಥಾಪಕ ಅಧ್ಯಕ್ಷ ಧನಂಜಯ ಜಯರಾಮ ದೇಸಾಯಿ ಆರೋಪಿಸಿದರು. ನಗರದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇರಳದಲ್ಲಿ ಜನ್ಮ ತಳೆದಿರುವ ಈ ಸಂಘಟನೆಗಳು 2047ರ ವೇಳೆಗೆ ಭಾರತವನ್ನು ಸಂಪೂರ್ಣ ಇಸ್ಲಾಮಿಕ್ ರಾಷ್ಟ್ರವನ್ನಾಗಿ ಮಾಡಲು ನಿರಂತರವಾಗಿ ಪ್ರಯತ್ನಿಸುತ್ತಿವೆ. ಎಸ್‌ಡಿಪಿಐ ಸೇರಿದಂತೆ ಇತರೆ ಮುಸ್ಲಿಂ ಸಂಘಟನೆಗಳ ಈ ಪ್ರಯತ್ನಕ್ಕೆ ತಕ್ಕ … Read more

ಇದೀಗ ಪ್ರತಿ ಕನ್ನಡಿಗರಿಗೂ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಆಜೀವ  ಸದಸ್ಯರಾಗುವ ಅವಕಾಶ

ಸುದ್ದಿ360 ದಾವಣಗೆರೆ, ಆ.22: ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿಗೆ ಆಜೀವ ಸದಸ್ಯತ್ವ ಪಡೆಯಲು, ರೂಪಾಯಿ 250-00 ಆನ್ಲೈನ್ ಮೂಲಕವೇ  ಪಾವತಿಸಿ ಸದಸ್ಯತ್ವ ಪಡೆಯುವ ಸದಾವಕಾಶವನ್ನು 18 ವರ್ಷ ತುಂಬಿದ ಪ್ರತಿಯೊಬ್ಬ ಕನ್ನಡಿಗರಿಗೂ ಕಲ್ಪಿಸಿ ಕೊಟ್ಟಿದೆ ಎಂದು ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಬಿ ವಾಮದೇವಪ್ಪ ಅವರು  ತಮ್ಮ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ. ಪರಿಷತ್ತನ್ನು ಜನಸಾಮಾನ್ಯರ ಪರಿಷತ್ತನ್ನಾಗಿ ಮಾಡುವ ಸದುದ್ದೇಶದಿಂದಲೂ, ವಿಶ್ವದಾದ್ಯಂತ ಕನ್ನಡವನ್ನು ಒಗ್ಗೂಡಿಸಲು ಹೊರರಾಜ್ಯ, ಕೇಂದ್ರಾಡಳಿತ ಪ್ರದೇಶ ಮತ್ತು ಹೊರದೇಶ ಘಟಕಗಳನ್ನು ಸ್ಥಾಪಿಸುವ … Read more

ದಾವಣಗೆರೆ ಎಂಸಿಸಿ ಬಿ ಬ್ಲಾಕ್ ನಲ್ಲಿ ವೋಟರ್ ಐಡಿ – ಆಧಾರ್ ಕಾರ್ಡ್ ಸಂಖ್ಯೆಗಳ ಜೋಡಣೆ ಶಿಬಿರ ಇಂದು

ಸುದ್ದಿ360 ದಾವಣಗೆರೆ ಆ. 22: ನಗರದ ಎಂಸಿಸಿ ಬಿ ಬ್ಲಾಕ್‌ನ ನಾಗರಿಕರ ಅನುಕೂಲಕ್ಕಾಗಿ ಆ. 22ರಂದು ವೋಟರ್ ಐಡಿ ಹಾಗೂ ಆಧಾರ್ ಕಾರ್ಡ್ ಸಂಖ್ಯೆಗಳ ಜೋಡಣಾ ಶಿಬಿರ ಆಯೋಜಿಸಲಾಗಿದೆ. ಬೆಳಿಗ್ಗೆ10 ಗಂಟೆಯಿಂದ ಇಲ್ಲಿನ ಐಎಂಎ ಹಾಲ್ ನಲ್ಲಿ ಶಿಬಿರ ನಡೆಯಲಿದೆ. ಸಾರ್ವಜನಿಕರು ತಮ್ಮ ಚುನಾವಣಾ ಗುರುತಿನ ಚೀಟಿಗೆ (ವೋಟರ್ ಐಡಿ) ಆಧಾರ್ ಸಂಖ್ಯೆಯನ್ನು ಲಿಂಕ್ ಮಾಡುವುದು ಅತ್ಯಗತ್ಯ. ಆದ ಕಾರಣ ಶಿಬಿರ ಆಯೋಜಿಸಲಾಗಿದೆ.  ಜನರು ಈ ಶಿಬಿರಕ್ಕೆ ಬರುವಾಗ ತಮ್ಮ ವೋಟರ್ ಐ.ಡಿ., ಆಧಾರ್ ಕಾರ್ಡ್, ಆಧಾರ್ … Read more

ಸಿಎಂ ಮಾಧ್ಯಮ ಸಂಯೋಜಕ ಗುರುಲಿಂಗ ಸ್ವಾಮಿ ಹೊಳಿಮಠ ನಿಧನ

ಸುದ್ದಿ360 ಬೆಂಗಳೂರು ಆ.22: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮಾಧ್ಯಮ ಸಂಯೋಜಕ ಗುರುಲಿಂಗ ಸ್ವಾಮಿ ಹೊಳಿಮಠ (40) ಹೃದಯಾಘಾತದಿಂದ ಸೋಮವಾರ ಬೆಳಿಗ್ಗೆ ನಿಧನರಾದರು. ಇಂದು (ಆ.22) ಬೆಳಿಗ್ಗೆ ಜಿಮ್‌ಗೆ ಹೋಗಿದ್ದ ಅವರು ವರ್ಕ್ಔಟ್ ಮಾಡುವ ಸಮಯದಲ್ಲಿ ಕುಸಿದುಬಿದ್ದಿದ್ದರು. ತಕ್ಷಣ ಅವರನ್ನು ನಾಗರಭಾವಿಯ ಖಾಸಗಿ ಆಸ್ಪತ್ರೆಗೆ ಸಾಗಿಸಿತಾದರೂ ಪ್ರಯೋಜನ ಆಗಲಿಲ್ಲ ಎಂದು ಕುಟುಂಬ ಮೂಲಗಳು ತಿಳಿಸಿವೆ. ಬಸವರಾಜ ಬೊಮ್ಮಾಯಿ ಅವರು ಗೃಹ ಸಚಿವರಾಗಿದ್ದಾಗಲೂ ಮಾಧ್ಯಮ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದ ಗುರುಲಿಂಗಸ್ವಾಮಿ ಅವರು ಅದಕ್ಕೂ ಮೊದಲು ವಿವಿಧ ಪತ್ರಿಕೆ, ಟಿವಿ ಚಾನೆಲ್‌ಗಳಲ್ಲಿ … Read more

error: Content is protected !!