ನಮ್ಮದು ರಾಷ್ಟ್ರೀಯ ಪಕ್ಷ – ರಾಷ್ಟ್ರೀಯತೆಯೇ ನಮ್ಮ ನಿಲುವು: ಸಿಎಂ ಬೊಮ್ಮಾಯಿ

ಸುದ್ದಿ360 ದಾವಣಗೆರೆ, ಆ. 01: ನಮ್ಮದು ರಾಷ್ಟ್ರೀಯ ಪಕ್ಷ. ರಾಷ್ಟ್ರೀಯತೆಯೇ ನಮ್ಮ ನಿಲುವು. ಯಾರಿಗೂ ಬೇಧ-ಭಾವ ಮಾಡುವ ಪ್ರಶ್ನೆಯಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ  ಬೊಮ್ಮಾಯಿ ತಿಳಿಸಿದರು. ಇಂದು ದಾವಣಗೆರೆಗೆ ಶಿವಯೋಗಿ ಶ್ರೀ ಸಿದ್ದರಾಮೇಶ್ವರ ರಥ ವಜ್ರ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಂದಂತಹ ಸಂದರ್ಭ ಜಿಎಂಐಟಿ ಹಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಯಾರಿಗೂ ಬೇಧಭಾವ ಮಾಡುವ ಮಾತೇ ಇಲ್ಲ. ಅಂತಹ ವಿಚಾರಗಳು ಹಿಂದಿನ ಸರ್ಕಾರಗಳು ಅವರ ಕಾಲದಲ್ಲಿ ಏನೇನು ಮಾಡಿದ್ದಾರೆ ಅದರ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ಅವರು ಸುದ್ದಿಗಾರರ … Read more

ಸಿದ್ದರಾಮಯ್ಯ ಅಮೃತ ಮಹೋತ್ಸವ: ಎಸ್ ಎಸ್ ಮಲ್ಲಿಕಾರ್ಜುನ್ ನೇತೃತ್ವದಲ್ಲಿ ಬೃಹತ್ ಬೈಕ್ ರ್ಯಾಲಿ

ಸುದ್ದಿ360 ದಾವಣಗೆರೆ ಜು.31: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ 75ನೇ ಹುಟ್ಟುಹಬ್ಬದ ಅಮೃತ ಮಹೋತ್ಸವ ಹಿನ್ನೆಲೆ ಆ.1ರ ಸೋಮವಾರ ಮಧ್ಯಾಹ್ನ 2.30 ಗಂಟೆಗೆ ಆನೆಕೊಂಡದ ಬಸವೇಶ್ವರ ದೇವಸ್ಥಾನದ ಆವರಣದಿಂದ ಬೃಹತ್ ಬೈಕ್ ರ್ಯಾಲಿಯನ್ನು ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದೆ. ಆನೆಕೊಂಡದ ಬಸವೇಶ್ವರ ದೇವಸ್ಥಾನದಿಂದ ಪ್ರಾರಂಭವಾಗಿ ಕೊರಚರಹಟ್ಟಿ, ಅರಳಿಮರ ಸರ್ಕಲ್, ಹಳೆ ಬೇತೂರ್ ರಸ್ತೆ, ಭಾಷಾ ನಗರ ಮುಖ್ಯ ರಸ್ತೆ ಮುಖಾಂತರ ಅಕ್ಬರ್ ರಾಜ್ ಸರ್ಕಲ್, ಎಸ್. ಪಿ.ಎಸ್ ನಗರ, ಹೊಂಡದ ಸರ್ಕಲ್ ಮಾರ್ಗವಾಗಿ ಚೌಕಿಪೇಟೆ, ಬಂಬೂ … Read more

22 ವರ್ಷಗಳಿಂದ ಸ್ನಾನ ತೊರೆಯಲು ಈತ ಮಾಡಿದ ಪ್ರತಿಜ್ಞೆಯಾದರೂ ಏನು. . .?

ಸುದ್ದಿ360 ಗೋಪಾಲಗಂಜ್ (ಬಿಹಾರ) ಜು.31:  ಒಂದು ದಿನ ಸ್ನಾನ ಮಾಡದೇ ಇದ್ದರೂ ಚಡಪಡಿಕೆಗೆ ಒಳಗಾಗುವವರನ್ನು ನೋಡಿದ್ದೇವೆ ಮತ್ತು ಅನುಭವಿಸಿಯೂ ಇದ್ದೇವೆ. ಇಲ್ಲೊಬ್ಬ ವ್ಯಕ್ತಿ ಒಂದು ದಿನ. . . . ತಿಂಗಳು. . . ವರ್ಷ. . .  !? ಅಲ್ಲವೇ ಅಲ್ಲ ಬರೋಬ್ಬರಿ 22 ವರ್ಷಗಳಿಂದ ಸ್ನಾನ ಮಾಡುವುದನ್ನು ನಿಲ್ಲಿಸಿ, ಆರೋಗ್ಯವಾಗಿಯೇ ಇದ್ದಾರೆ. ಬಿಹಾರದ ಗೋಪಾಲ್ ಗಂಜ್ ಜಿಲ್ಲೆಯ ಮಂಜಾ ಬ್ಲಾಕ್ ನಲ್ಲಿರುವ ಬೈಕುಂತ್ ಪುರ ಗ್ರಾಮದ 62 ವರ್ಷದ ಧರಂದೇವ್ ರಾಮ್ ಈ ರೀತಿಯಾಗಿ … Read more

ಶಿವಯೋಗಿ ಸಿದ್ಧರಾಮೇಶ್ವರರ ಸಾಮಾಜಿಕ ಕ್ರಾಂತಿ ಇಂದಿಗೂ ಶಾಶ್ವತ: ಬಸವಪ್ರಭುಶ್ರೀ

ಸುದ್ದಿ360, ದಾವಣಗೆರೆ ಜು.30: 12 ನೇ ಶತಮಾನದಲ್ಲಿ ಶಿವಯೋಗಿ ಸಿದ್ದರಾಮೇಶ್ವರು ಅನುಷ್ಠಾನಗೊಳಿಸಿದ ಸಾಮಾಜಿಕ ಕ್ರಾಂತಿ ಇಂದಿಗೂ ಶಾಶ್ವತವಾಗಿದೆ ಎಂದು ವಿರಕ್ತಮಠದ ಬಸವಪ್ರಭು ಸ್ವಾಮೀಜಿ ಹೇಳಿದರು. ದಾವಣಗೆರೆಯ ವೆಂಕಾ ಭೋವಿ ಕಾಲೋನಿಯಲ್ಲಿರುವ ಶಿವಯೋಗಿ ಸಿದ್ದರಾಮೇಶ್ವರ ಸಂಸ್ಥಾನ ಮಠದಲ್ಲಿ ನಡೆದ 60 ನೇ ವರ್ಷದ ರಥೋತ್ಸವ ಅಂಗವಾಗಿ ಲಿಂ. ಶ್ರೀ ಸಿದ್ದರಾಮೇಶ್ವರ ಮಹಾಸ್ವಾಮಿಗಳವರ ಅಮೃತ ಶಿಲೆಯ ಮೂರ್ತಿ ಪ್ರತಿಷ್ಠಾಪನೆ ಸಮಾರಂಭದ  ಸಮ್ಮುಖ ವಹಿಸಿಕೊಂಡು ಮಾತನಾಡಿದರು. ಮಹಾಯೋಗಿಯಾದ ಶಿವಯೋಗಿ ಸಿದ್ದರಾಮರು ಬಳಿ ಬಂದವರಿಗೆ ಆಶೀರ್ವದಿಸಿ ಜನರನ್ನು ಉದ್ದರಿಸಿದ್ದಾರೆ. ಅಷ್ಟೇ ಅಲ್ಲದೇ ಕೆರೆಗಳನ್ನು … Read more

ಜಿಎಂ ಫಾರ್ಮಸಿ ಕಾಲೇಜಿನಲ್ಲಿ ಅಂತರ ವಲಯ ಕಬಡ್ಡಿ ಪಂದ್ಯಾವಳಿ

ಸುದ್ದಿ360, ದಾವಣಗೆರೆ ಜು.30: ನಗರದ ಜಿಎಂ ಫಾರ್ಮಸಿ ಕಾಲೇಜಿನಲ್ಲಿ ರಾಜೀವ್ ಗಾಂಧಿ ವಿಶ್ವವಿದ್ಯಾಲಯ ಅಡಿಯಲ್ಲಿ ಬೆಳಗಾಂ ಜೋನ್ ಅಂತರ ವಲಯ ಕಬ್ಬಡ್ಡಿ ಪಂದ್ಯಾವಳಿಗಳು ಇದೇ ಮೊದಲ ಬಾರಿ ಜಿಎಂ ಫಾರ್ಮಸಿ ಕಾಲೇಜಿನ ಮೈದಾನದಲ್ಲಿ ಏರ್ಪಡಿಸಲಾಗಿತ್ತು. ಎಲ್ಲಾ ಆಟಗಾರರಿಗೂ ಪಂದ್ಯಾವಳಿಗೆ ಅಗತ್ಯ ಸೌಲಭ್ಯವನ್ನು ಒದಗಿಸಿದ್ದು, ಯಾವುದೇ ಅಡಚಣೆಗೂ ಅವಕಾಶವನ್ನು ಕೊಡದೆ ವ್ಯವಸ್ಥಿತವಾಗಿ ಪಂದ್ಯಾವಳಿಗಳನ್ನು ಆಯೋಜಿಸಲಾಗುತ್ತಿದ್ದು, ಪಂದ್ಯಾವಳಿಗಳು ಯಶಸ್ವಿಯಾಗಿ ಮುಕ್ತಾಯವಾಗಲಿದೆ. ಸುಮಾರು ಇಪ್ಪತ್ತಕ್ಕೂ ಹೆಚ್ಚು ತಂಡಗಳು ಭಾಗವಹಿಸಿದ್ದು, ಬೆಂಗಳೂರು, ಚಿತ್ರದುರ್ಗ, ಗದಗ ದಾವಣಗೆರೆ, ಬಳ್ಳಾರಿ ಹೀಗೆ ವಿವಿಧ ಜಿಲ್ಲೆಗಳಿಂದ ವಿದ್ಯಾರ್ಥಿಗಳು … Read more

ಜಿಎಂಎಸ್ ಅಕ್ಯಾಡೆಮಿ: ಐಐಟಿ ರೂರ್ಕೇ ಸಹಯೋಗದಲ್ಲಿ ವಿದ್ಯಾರ್ಥಿಗಳಿಗೆ ಉದ್ಯೋಗ ತರಬೇತಿ

ಸುದ್ದಿ360, ದಾವಣಗೆರೆ ಜು.30: ನಗರದ ಜಿಎಂಎಸ್ ಅಕ್ಯಾಡೆಮಿ ಫಸ್ಟ್ ಗ್ರೇಡ್ ಡಿಗ್ರಿ ಕಾಲೇಜ್ ವತಿಯಿಂದ ವಿದ್ಯಾರ್ಥಿಗಳಿಗೆ ಒಂದು ದಿನದ ಕೈಗಾರಿಕಾ ಕೌಶಲ್ಯತೆ ಗಳು ಮತ್ತು ಸಂದರ್ಶನ ಪ್ರಕ್ರಿಯೆಗಳ ಬಗ್ಗೆ ಐಐಟಿ ರೂರ್ಕೇ ಸಹಯೋಗದಲ್ಲಿ ತರಬೇತಿ ಹಮ್ಮಿಕೊಳ್ಳಲಾಗಿತ್ತು. ಪ್ರಾಂಶುಪಾಲರಾದ ಶ್ವೇತ ಮರಿಗೌಡರ್ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಸ್ವಭಾವ ಮತ್ತು ನಡತೆ ಉತ್ತಮವಾಗಿ ಇಟ್ಟುಕೊಂಡಲ್ಲಿ ಏನನ್ನಾದರೂ ಸಾಧಿಸಬಹುದೆಂದು ತಿಳಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಬೆಂಗಳೂರಿನ ತರಬೇತುದಾರರಾದ ಶ್ರೀಮತಿ ಮನಿಷಾ ಬೆಲಾನಿ ಆಗಮಿಸಿದ್ದರು. ಜಿಎಂಐಟಿ ಕಾಲೇಜಿನ ತರಬೇತಿ ಮತ್ತು ಉದ್ಯೋಗ … Read more

ರಾಜಕೀಯ ಕಾರಣಕ್ಕೆ ಕೊಲೆಗಳಾಗುತ್ತಿರುವುದು ನಮ್ಮ ದೌರ್ಬಾಗ್ಯ: ಸಚಿವ ಜೆ.ಸಿ. ಮಾಧುಸ್ವಾಮಿ

ಚುನಾವಣಾ ವರ್ಷವಾದ್ದರಿಂದ ಪ್ರಚೋದನೆಗಳು ಹೆಚ್ಚಾಗಿವೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸರ್ಕಾರ ದಿಟ್ಟ ಕ್ರಮ ಕೈಗೊಳ್ಳಲಿದೆ ಎಂದು ಕಾನೂನು ಸಂಸದೀಯ ಹಾಗೂ ಸಣ್ಣ ನೀರಾವರಿ ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿದರು. ಸುದ್ದಿ360, ದಾವಣಗೆರೆ ಜು.30: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿಲ್ಲ. ಕೆಲವೇ ಘಟನೆ ಹೊರತುಪಡಿಸಿದರೆ, ಕಾಂಗ್ರೆಸ್ ಕಾಲದಲ್ಲಿ ನಡೆದಷ್ಟು ಪ್ರತಿಭಟನೆ, ಹೋರಾಟ, ಬಿಜೆಪಿ ಸರ್ಕಾರದ ಅವಧಿಯಲ್ಲಿ ಆಗಿಲ್ಲ ಎಂದು ಕಾನೂನು ಸಂಸದೀಯ ಹಾಗೂ ಸಣ್ಣ ನೀರಾವರಿ ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿದರು. ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಕೊಲೆಗಳಾಗಿದ್ದಕ್ಕೆ … Read more

ಮುಖ್ಯಮಂತ್ರಿ, ಗೃಹ ಸಚಿವರು ಸಮರ್ಥರಿದ್ದಾರೆ – ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರಿಸಿರುವುದು ಸ್ವಾಗತಾರ್ಹ ಸುದ್ದಿ360 ದೊಡ್ಡಬಳ್ಳಾಪುರ, ಜು.30: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈಗಾಗಲೇ ಪ್ರಕರಣವನ್ನು ಸರ್ಕಾರ ರಾಷ್ಟ್ರೀಯ ತನಿಖಾ ದಳಕ್ಕೆ(NIA) ಹಸ್ತಾಂತರಿಸಿದೆ ಎಂದು ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು. ದೊಡ್ಡಬಳ್ಳಾಪುರ ನಗರದ ಬಸವ ಭವನದಲ್ಲಿ ದೊಡ್ಡಬಳ್ಳಾಪುರ ತಾಲೂಕು ವೀರಶೈವ ಲಿಂಗಾಯತ ಸಮಾಜ ಆಯೋಜಿಸಿರುವ ಶ್ರೀ ಶಿವಕುಮಾರ ಸ್ವಾಮೀಜಿಯವರ ಗುರುವಂದನಾ ಕಾರ್ಯಕ್ರಮಕ್ಕೆ ತೆರಳುವ ಮುನ್ನ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ … Read more

ನೂರಾರು ನೀರುನಾಯಿಗಳ ಚಿನ್ನಾಟ ನೋಡುವ ಭಾಗ್ಯ!  ಎಲ್ಲಿ ಅಂತೀರಾ. . .?

ಸುದ್ದಿ360 ವಿಜಯನಗರ (ಹೊಸಪೇಟೆ) ಜು.30: ತುಂಗಭದ್ರಾ ನದಿ ಹಿನ್ನೀರು ಪ್ರದೇಶದ  ಗುಂಡಾ ಸಸ್ಯೋದ್ಯಾನವನ ವೀಕ್ಷಣೆಗೆ ಬಂದ ಪ್ರವಾಸಿಗರಿಗೆ ಶನಿವಾರ  ಕಾದಿತ್ತು ನೋಡಿ ನೂರಾರು ನೀರು ನಾಯಿಗಳ ಚಿನ್ನಾಟದ ದೃಶ್ಯ. ಸಸ್ಯೋದ್ಯಾನವನದ ಬಳಿಯ ಹಿನ್ನೀರಿನಲ್ಲಿ ಈ ರೀತಿಯಾಗಿ ಕಾಣಿಸಿಕೊಂಡ ನೀರು ನಾಯಿಗಳ ಗುಂಪು ಪ್ರವಾಸಿಗರ ಮನಕೆ ಕಚಗುಳಿ ಕೊಟ್ಟಿದೆ. ಕಳೆದ ಎರಡು ವರ್ಷದಿಂದ ತುಂಗಭದ್ರಾ ಹಿನ್ನೀರು ಪ್ರದೇಶ ನೀರಿನಿಂದ ತುಂಬಿದ್ದ ಕಾರಣ ಗುಂಡಾ ಕಾಯ್ದಿಟ್ಟ ಅರಣ್ಯ ಪ್ರದೇಶವು ಹತ್ತಾರು ವಿವಿಧ ಜೀವ ಸಂಕುಲದ ತಾಣವಾಗಿ ಮಾರ್ಪಟ್ಟಿದ್ದು, ಅರಣ್ಯ ಇಲಾಖೆಯಿಂದ … Read more

ಯುವ ಮೋರ್ಚಾ ಕಾರ್ಯಕರ್ತರು ರಾಜೀನಾಮೆ ಕೊಟ್ಟ ತಕ್ಷಣ ಬಿಜೆಪಿ ಮುಳುಗಿಹೋಗಲ್ಲ- ಯಾರೂ ರಾಜೀನಾಮೆ ನೀಡಿಲ್ಲ : ಸಂಸದ ಸಿದ್ದೇಶ್ವರ

ಸುದ್ದಿ360, ದಾವಣಗೆರೆ ಜು.30: ಯುವ ಮೋರ್ಚಾ ಕಾರ್ಯಕರ್ತರು ಯಾರೂ ಪಕ್ಷಕ್ಕೆ ರಾಜೀನಾಮೆ ನೀಡಿಲ್ಲ. ರಾಜೀನಾಮೆ ಕೊಡುವ ಮುನ್ನ ನಮ್ಮ ಜಿಲ್ಲಾಧ್ಯಕ್ಷರು, ಶಾಸಕರು ನಮ್ಮ ಬಳಿ ಮಾತನಾಡಬೇಕು. ಅವರು ಪಕ್ಷಕ್ಕೆ ಇದುವರೆಗೂ ರಾಜೀನಾಮೆ ಸಲ್ಲಿಸಿಲ್ಲ. ಕೆಲವರು ಟಿವಿಯಲ್ಲಿ ಬರಬೇಕೆಂದು ರಾಜೀನಾಮೆ ಕೊಟ್ಟಿದ್ದೇವೆಂದು ಹೇಳಿರಬೇಕು ಎಂದು ಸಂಸದ ಜಿ.ಎಂ. ಸಿದ್ದೇಶ್ವರ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದರು, ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಸಾಲು ಸಾಲು ರಾಜೀನಾಮೆ ನೀಡುತ್ತಿರುವ ಬಗ್ಗೆ ಪ್ರತಿಕ್ರಿಯಿಸಿ, ಬಿಜೆಪಿ … Read more

error: Content is protected !!