ಸಿದ್ಧರಾಮೋತ್ಸವ ಅಲ್ಲ 75ನೇ ಹುಟ್ಟುಹಬ್ಬದ ಅಮೃತ ಮಹೋತ್ಸವ: ಎಚ್. ಎಮ್. ರೇವಣ್ಣ

ಸುದ್ದಿ360, ದಾವಣಗೆರೆ ಜು.11: ಸಿದ್ಧರಾಮೋತ್ಸವ ಅಲ್ಲ ಇದು ಸಿದ್ಧರಾಮಯ್ಯರ 75ನೇ ಹುಟ್ಟುಹಬ್ಬದ ಅಮೃತ ಮಹೋತ್ಸವ. ಅವರ ಜೀವನದಲ್ಲಿನ ಒಂದು ಸಂಭ್ರಮದ ಸನ್ನಿವೇಶ ಇದಾಗಿದೆ ಎಂದು ಕುರುಬರ ಸಾಂಸ್ಕೃತಿಕ ಪರಿಷತ್ತಿನ ಅಧ್ಯಕ್ಷರಾದ ಎಚ್. ಎಮ್. ರೇವಣ್ಣ ತಿಳಿಸಿದರು. ನಗರದಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿ, ಸಿದ್ಧರಾಮಯ್ಯನವರು ತಮ್ಮ ರಾಜಕೀಯ ಜೀವನದಲ್ಲಿ ಕಳಂಕರವಹಿತವಾಗಿ ಉತ್ತಮ ಜೀವನ ನಡೆಸುವುದರ ಜೊತೆಗೆ, ಕಷ್ಟ-ಸುಖಗಳನ್ನು ಅನುಭವಿಸಿ, ರಾಜ್ಯದಲ್ಲಿ ಬಲಿಷ್ಟ ನಾಯಕನಾಗಿ ಬೆಳೆದು, ಐದು ವರ್ಷ ಉತ್ತಮ ಆಡಳಿತ ಕೊಟ್ಟಿದ್ದಾರೆ. ನೆಚ್ಚಿನ ನಾಯಕ 75 ವಸಂತಗಳನ್ನು ಕಳೆದಿರುವ … Read more

ಮಳೆ ಪೀಡಿತ  ಜಿಲ್ಲೆಗಳಿಗೆ ಸಿಎಂ ಪ್ರವಾಸ

ಸ್ಥಿತಿಗತಿ ಪರಿಶೀಲಿಸಿ ಪರಿಹಾರಕ್ಕೆ ಕ್ರಮ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸುದ್ದಿ360, ಬೆಂಗಳೂರು, ಜು.11: ಅತಿವೃಷ್ಟಿ ಯಿಂದ ಹಾನಿಗೊಳಗಾದ ಕೊಡಗು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ನಾಳೆ ಪ್ರವಾಸ ಕೈಗೊಳ್ಳುವುದಾಗಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ಮಲೆನಾಡು, ಕೊಡಗು, ಕರಾವಳಿ ಹಾಗೂ ಉತ್ತರ ಕನ್ನಡ ಭಾಗದಲ್ಲಿಕಳೆದ 10 ದಿನಗಳಿಂದ ವ್ಯಾಪಕವಾಗಿ ಮಳೆಯಾಗುತ್ತಿದೆ. ಈಗಾಗಲೇ ಸಂಬಂಧಿಸಿದ ಜಿಲ್ಲಾಧಿಕಾರಿಗಳೊಂದಿಗೆ ವೀಡಿಯೊ ಸಂವಾದ ಹಾಗೂ ನೇರವಾಗಿಯೂ ಮಾತನಾಡಿದ್ದು, ಮಳೆ … Read more

ಭೂಕುಸಿತ ಆಗುಂಬೆ ಘಾಟಿಯಲ್ಲಿ ವಾಹನ ಸಂಚಾರ ನಿರ್ಭಂಧ: ಬದಲಿ ಸಂಚಾರ ವ್ಯವಸ್ಥೆ

ಸುದ್ದಿ360, ಶಿವಮೊಗ್ಗ ಜು.10: ಭಾರಿ ಮಳೆಯಿಂದಾಗಿ ಆಗುಂಬೆ ಘಾಟಿಯ 11ನೇ ತಿರುವಿನಲ್ಲಿ ಗುಡ್ಡಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ವಾಹನ ಸಂಚಾರಕ್ಕೆ ಬದಲಿ ಮಾರ್ಗ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ತಿಳಿಸಿದ್ದಾರೆ. ಸ್ಥಳದಲ್ಲಿ ಭೂ ಕುಸಿತದ ಮಣ್ಣು ಮತ್ತು ಮರಮಟ್ಟುಗಳನ್ನು ತೆರವುಗೊಳಿಸುವ ಕಾರ್ಯವನ್ನು ಮಾಡಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಯಾವುದೇ ರೀತಿಯ ವಾಹನಗಳ ಸಂಚಾರವನ್ನು ಜುಲೈ 12ರ ಮುಂಜಾನೆ 8ಗಂಟೆಯವರೆಗೆ ನಿರ್ಬಂಧಿಸಲಾಗಿದೆ. ಆ ಬಳಿಕ ಜುಲೈ 30ರವರೆಗೆ ಈ ಮಾರ್ಗದಲ್ಲಿ ಲಘು ವಾಹನಗಳ ಸಂಚಾರಕ್ಕೆ ಮಾತ್ರ ಅನುವು ಮಾಡಿಕೊಡಲಾಗುವುದು. … Read more

ಶರಣ ಸಂಸ್ಕೃತಿ: ವಿಶೇಷ ಪ್ರವಚನ ಸಮಾರೋಪ ಸಮಾರಂಭ (ಜು.11)

ಸುದ್ದಿ360, ದಾವಣಗೆರೆ, ಜು.10:  ಶ್ರೀ ಜಯದೇವ ಮುರುಘರಾಜೇಂದ್ರ ಮಹಾಸ್ವಾಮಿಗಳವರ 65 ನೇ ಸ್ಮರಣೋತ್ಸವ, ಶರಣ ಸಂಸ್ಕೃತಿ ಉತ್ಸವ, ಶ್ರೀ ಮುರುಘೇಂದ್ರ ಶಿವಯೋಗಿಗಳವರ ಲಿಂಗೈಕ್ಯ ಶತಮಾನೋತ್ಸವ, ಡಾ. ಶಿವಮೂರ್ತಿ ಮುರುಘಾಶರಣರ ಶೂನ್ಯಪೀಠಾರೋಹಣದ ತೃತೀಯ ದಶಮಾನೋತ್ಸವದ ಅಂಗವಾಗಿ ನಗರದ ಶಿವಯೋಗಾಶ್ರಮದಲ್ಲಿ ಜು.7ರಿಂದ ಪ್ರಾರಂಭವಾದ ವಿಶೇಷ ಪ್ರವಚನ ಮಾಲೆ ಜು.11ರಂದು ಸಮಾರೋಪಗೊಳ್ಳಲಿದೆ. ವಿಶೇಷ ಪ್ರವಚನ ಸಮಾರೋಪ ಸಮಾರಂಭವು ಜು.11ರ ಸೋಮವಾರ ಸಂಜೆ 6-30 ಗಂಟೆಗೆ ಜರುಗಲಿದ್ದು, ಸಮಾರೋಪ ಸಮಾರಂಭದಲ್ಲಿ ಜನವಾಡ ಅಲ್ಲಮಪ್ರಭು ಆಶ್ರಮದ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿಯವರು ವಿಶೇಷ ಪ್ರವಚನ ನೀಡಲಿದ್ದಾರೆ. … Read more

ಇತರ ಧರ್ಮಗಳನ್ನು ಗೌರವಿಸಿ ಸಮನ್ವಯ ಸಾಧಿಸಿದಾಗ ಮಾತ್ರ ಸಮಾಜದಲ್ಲಿ ಸಮಾನತೆ ಸಾಧ್ಯ

ಡಾ. ಎಲ್.ಶಿವಲಿಂಗಯ್ಯನವರ ‘ನುಡಿ-ನಮನ’ ಕಾರ್ಯಕ್ರಮದಲ್ಲಿ ಸಿಎಂ ಅಭಿಮತ ಸುದ್ದಿ360, ಬೆಂಗಳೂರು, ಜು.10: ಇತರ ಧರ್ಮಗಳನ್ನು ಗೌರವಿಸುವ ಮೂಲಕ ಸಮನ್ವಯ ಸಾಧಿಸಬೇಕಿದೆ. ಸಮಾಜದ ಎಲ್ಲ ವರ್ಗದ ಜನರೊಂದಿಗೆ ಆರ್ಥಿಕವಾಗಿ, ಸಾಮಾಜಿಕವಾಗಿ, ಧಾರ್ಮಿಕವಾಗಿ ಸಮನ್ವಯ ಸಾಧಿಸಿದಾಗ ಮಾತ್ರ ಸಮಾಜದಲ್ಲಿ ಸಮಾನತೆಯ ಭಾವವನ್ನು ತರಲು ಸಾಧ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಇಂದು  ಬೆಂಗಳೂರಿನಲ್ಲಿ ನಿವೃತ್ತ ಇಂಜಿನಿಯರ್ ಇನ್ ಚೀಫ್ ಹಾಗೂ ರಾಜ್ಯ ಸರ್ಕಾರದ ವಿಶೇಷ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದ  ಡಾ. ಎಲ್.ಶಿವಲಿಂಗಯ್ಯನವರ ‘ನುಡಿ-ನಮನ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. … Read more

‘ನನ್ನ ಅಮ್ಮ ನಂಬರ್-1’ ಹೃದಯ ಮುಟ್ಟುವ ಟೈಟಲ್: ಲತೀಕಾ ದಿನೇಶ್ ಕೆ. ಶೆಟ್ಟಿ ಅವರ ಮನದ ಮಾತು

ಬೆಣ್ಣೆನಗರಿಯಲ್ಲಿ ಮನಮುಟ್ಟುವ  ವಿನೂತನ ರಿಯಾಲಿಟಿ ಶೋ ಸುದ್ದಿ360, ದಾವಣಗೆರೆ, ಜು.10:  ದಾವಣಗೆರೆಯಲ್ಲಿ ಪ್ರಥಮ ಬಾರಿಗೆ  ನಗರದ ಕಲಾ ಕಲ್ಪ ಆರ್ಟ್ ಅಕಾಡೆಮಿ ಹಾಗೂ ವಿ ಯೂನಿಯನ್ ಇವೆಂಟ್ ವತಿಯಿಂದ “ನನ್ನ ಅಮ್ಮ ನಂಬರ್ 1” ಎಂಬ ಮನಮುಟ್ಟುವ ರಿಯಾಲಿಟಿ ಶೋ  ಕಾರ್ಯಕ್ರಮ ಭಾನುವಾರ ಆಯೋಜಿಸಲಾಗಿತ್ತು. ನಗರದ ರಾಮ್ ಅಂಡ್ ಕೋ ಸರ್ಕಲ್ ಬಳಿ ಇರುವ ಸ್ವೆಟ್ ಪಾರ್ಕ್ ಜಿಮ್ ನಲ್ಲಿ ಆಯೋಜಿಸಲಾಗಿದ್ದ ಈ ವಿನೂತನ ಕಾರ್ಯಕ್ರಮವನ್ನು ನಗರದ ಪ್ರತಿಷ್ಟಿತ ಜಿಲ್ಲಾ ಕ್ರೀಡಾಪಟುಗಳ ಸಂಘದ ಅಧ್ಯಕ್ಷರು, ಮಾಜಿ ನಗರಸಭೆ … Read more

ದಕ್ಷಿಣ ಕೇದಾರವಾಗಲಿದೆ ದೇವನಗರಿ ದಾವಣಗೆರೆ

ಸುದ್ದಿ360, ದಾವಣಗೆರೆ, ಜು.10:  ಉತ್ತರದಲ್ಲಿ ಕೇದಾರನಾಥನ ಸನ್ನಿದಾನ ಇರುವಂತೆ ದಕ್ಷಿಣದಲ್ಲೂ ಕೇದಾರನಾಥ ಮಠ ಮತ್ತು ಕೇದಾರ ಮಾದರಿಯ ಭವ್ಯ ಮಂದಿರ ನಿರ್ಮಾಣ ಮಾಡುವ ಇಚ್ಛೆಯಿದೆ. ಈ ನಿಟ್ಟಿನಲ್ಲಿ ಈಗಾಗಲೇ ಕಾರ್ಯಾರಂಭವಾಗಿದೆ ಎಂದು ಶ್ರೀ ಕೇದಾರ ಜಗದ್ಗುರು ಶ್ರೀ ಭೀಮಾಶಂಕರಲಿಂಗ ಶಿವಾಚಾರ್ಯ ಸ್ವಾಮೀಜಿ ನುಡಿದರು. ದಾವಣಗೆರೆಯ ತ್ರಿಶೂಲ್ ಕಲಾಭವನದಲ್ಲಿ ಭಾನುವಾರ ನಡೆದ ಸಂಗೀತಯುಕ್ತ ಇಷ್ಟಲಿಂಗ ಮಹಾಪೂಜೆಯ ನಂತರ ಭಕ್ತರನ್ನುದ್ದೇಶಿಸಿ ಸಂದೇಶ ನೀಡುತ್ತಾ, ದಾವಣಗೆರೆ-ಹರಿಹರ ನಡುವೆ ಬರುವ ಶಂಶೀಪುರ ಬಳಿ ನಾವು ಬಂದು ತಂಗಲು ಗುರು ನಿವಾಸ ನಿರ್ಮಾಣ ಕಾರ್ಯ … Read more

ಸಂಗೀತಯುಕ್ತ ಇಷ್ಟಲಿಂಗ ಮಹಾಪೂಜೆ ಸಂಪನ್ನ

ಸುದ್ದಿ360, ದಾವಣಗೆರೆ, ಜು.10:  ಸಾವಿರಾರು ಭಕ್ತಗಣದ ಸಮ್ಮುಖದಲ್ಲಿ ಶ್ರೀ ಕೇದಾರ ಜಗದ್ಗುರು ಶ್ರೀ ಭೀಮಾಶಂಕರಲಿಂಗ ಶಿವಾಚಾರ್ಯ ಸ್ವಾಮೀಜಿಯವರ ಸಂಗೀತಯುಕ್ತ ಇಷ್ಟಲಿಂಗ ಮಹಾಪೂಜೆ ನಗರದ ತ್ರಿಶೂಲ್ ಕಲಾಭವನದಲ್ಲಿ ಭಾನುವಾರ  ಸಾಂಗವಾಗಿ ನೆರವೇರಿತು. ನೆರೆದ ಭಕ್ತಗಣ ಶ್ರೀಗಳು ನೆರವೇರಿಸಿದ ಮಹಾಪೂಜೆಯಲ್ಲಿ ಭಕ್ತಪರವಶರಾಗಿ ದೈವಾನುಗ್ರಹಕ್ಕೆ ಪಾತ್ರರಾದರು. ತಪೋಕ್ಷೇತ್ರ ಕಣ್ವಕುಪ್ಪೆ ಗವಿಮಠದ ಶ್ರೀ ನಾಲ್ವಡಿ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿಯವರು ಪೂಜಾ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು. ಬೆಳಗ್ಗೆ 9 ಗಂಟೆಗೆ ಆರಂಭವಾದ ಇಷ್ಟಲಿಂಗ ಮಹಾಪೂಜೆ ಮಧ್ಯಾಹ್ನ 1.30ರ ಸುಮಾರಿಗೆ ಸಂಪನ್ನಗೊಂಡಿತು. ಇಷ್ಟಲಿಂಗ ಪೂಜೆಯ ನಂತರ … Read more

ಜು.12ಕ್ಕೆ ನಟ ಶಿವರಾಜ್ ಕುಮಾರ್ ಹುಟ್ಟುಹಬ್ಬ ಆಚರಣೆ

ಸುದ್ದಿ360, ದಾವಣಗೆರೆ, ಜು.10:  ಅಖಿಲ ಕರ್ನಾಟಕ ಡಾ. ರಾಜ್ ಕುಮಾರ್ ಅಭಿಮಾನಿ ಸಂಘಗಳ ಒಕ್ಕೂಟ, ಅಖಿಲ ಕರ್ನಾಟಕ ಡಾ. ಶಿವರಾಜ್ ಕುಮಾರ್ ಅಭಿಮಾನಿ ಸಂಘ ಮತ್ತು ಅಖಿಲ ಕರ್ನಾಟಕ ಪುನೀತ್ ರಾಜ್ ಕುಮಾರ್ ಅಭಿಮಾನಿ ಸಂಘಗಳ ವತಿಯಿಂದ  ನಟ ಶಿವರಾಜ್ ಕುಮಾರ್ ರವರ 60ನೇ ಹುಟ್ಟುಹಬ್ಬವನ್ನು ಜು. 12ರಂದು ದಾವಣಗೆರೆಯಲ್ಲಿ ಆಚರಿಸಲಾಗುತ್ತಿರುವುದಾಗಿ ಒಕ್ಕೂಟದ ಜಿಲ್ಲಾಧ್ಯಕ್ಷ ಯೋಗೇಶ್ ತಿಳಿಸಿದರು. ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ,  ಅಂದು ನಗರದ ಜಯದೇವ ವೃತ್ತದಲ್ಲಿ ಬೆಳಿಗ್ಗೆ 11.30ಕ್ಕೆ ನೆಚ್ಚಿನ ನಟ ಶಿವರಾಜ್ … Read more

ದಾವಣಗೆರೆಯಲ್ಲಿ ಜು.11ರಂದು ವಿಶ್ವಕರ್ಮ ಜನಜಾಗೃತಿ ಸಮಾವೇಶ

ವಿಶ್ವ ಬ್ರಾಹ್ಮಣ ಪೀಠಾಧಿಪತಿಗಳ, ಮಠಾಧಿಪತಿಗಳ ಒಕ್ಕೂಟದ ಸಮ್ಮಿಲನ ಸುದ್ದಿ360, ದಾವಣಗೆರೆ, ಜು.10: ಅಖಿಲ ಕರ್ನಾಟಕ ವಿಶ್ವ ಬ್ರಾಹ್ಮಣ ಪೀಠಾಧಿಪತಿಗಳ ಮತ್ತು ಮಠಾಧಿಪತಿಗಳ ಒಕ್ಕೂಟದ ಸಮ್ಮಿಲನ ಮತ್ತು ವಿಶ್ವಕರ್ಮ ಜನಜಾಗೃತಿ ಸಮಾವೇಶ, ಪ್ರಶಸ್ತಿ ಪ್ರದಾನ ಸಮಾರಂಭವು ಅಖಿಲ ಭಾರತ ವಿಶ್ವಕರ್ಮ ಪರಿಷತ್, ಕರ್ನಾಟಕ ರಾಜ್ಯ ವಿಶ್ವಕರ್ಮ ಸಮಾಜದ ವಿವಿಧ ಸಂಘ-ಸಂಸ್ಥೆಗಳ ಆಶ್ರಯದಲ್ಲಿ ಜುಲೈ 11ರಂದು ನಗರದ ಶಾಬನೂರು ರಸ್ತೆಯ ಬಾಪೂಜಿ ಬ್ಯಾಂಕ್ ಸಮುದಾಯ ಭವನದಲ್ಲಿ ನಡೆಯಲಿದೆ. ನಗರದಲ್ಲಿ ಶನಿವಾರ ಸುದ್ದಿಗೋಷ್ಟಿಯಲ್ಲಿ ಈ ವಿಷಯ ತಿಳಿಸಿದ ರಾಷ್ಟ್ರೀಯ ಅಧ್ಯಕ್ಷ ಎಚ್.ವಿ.ಸತೀಶಕುಮಾರ್, … Read more

error: Content is protected !!