ಸಂಸ್ಕೃತಿ – ಸಮಾಜ ನಾಣ್ಯದ ಎರಡು ಮುಖಗಳು: ಸಾಹಿತಿ ಪ್ರೊ. ಅರವಿಂದ ಮಾಲಗತ್ತಿ

ಸುದ್ದಿ360 ಶಿವಮೊಗ್ಗ, ಜೂ.20: ಸಂಸ್ಕೃತಿ ಮತ್ತು ಸಮಾಜ ಒಂದು ನಾಣ್ಯದ ಎರಡು ಮುಖಗಳಿದ್ದಂತೆ. ಸಮಾಜ ಕ್ಕಿಂತ ಸಂಸ್ಕೃತಿ ಹೆಚ್ಚು ಪ್ರಧಾನವಾಗುತ್ತದೆ. ತರ್ಕ ವಿಲ್ಲದೆ ವಿಚಾರವಿಲ್ಲ. ವೈಚಾರಿಕ ತರ್ಕ ಅವರವರ  ವ್ಯಕ್ತಿತ್ವಕ್ಕೆ ಬಿಟ್ಟಿದ್ದು ಎಂದು ಹಿರಿಯ ಸಾಹಿತಿಗಳಾದ ಪ್ರೊ. ಅರವಿಂದ ಮಾಲಗತ್ತಿ ಅಭಿಪ್ರಾಯಪಟ್ಟರು. ಅವರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ನೇತೃತ್ವದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಮತ್ತು ಸಹ್ಯಾದ್ರಿ ವಿಹಾರ ವಿಚಾರ ವೇದಿಕೆ ಸಹಕಾರದಲ್ಲಿ ಗೋಪಿಶೆಟ್ಟಿಕೊಪ್ಪ ದಲ್ಲಿರುವ ಸಾಹಿತ್ಯ ಗ್ರಾಮದಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ಡಾ. ಸಣ್ಣರಾಮ ಅಭಿನಂದನಾ … Read more

ಉನ್ನತೀಕರಿಸಿದ ಐಟಿಐ ಲೋಕಾರ್ಪಣೆ – ದಾವಣಗೆರೆಯಲ್ಲಿ ವಿವಿಧ ಹೊಸ ಕೋರ್ಸ್‍ಗಳು

ಸುದ್ದಿ360 ದಾವಣಗೆರೆ, ಜೂ.20: ನಗರದ ಹದಡಿ ರಸ್ತೆಯಲ್ಲಿರುವ ಸರಕಾರಿ ಐಟಿಐ ಕಾಲೇಜಿನಲ್ಲಿ ಕಾಲೇಜು ಉನ್ನತೀಕರಣದ ಶಿಲಾಫಲಕವನ್ನು ಶಾಸಕ ಎಸ್.ಎ. ರವೀಂದ್ರನಾಥ ಸೋಮವಾರ ಅನಾವರಣಗೊಳಿಸಿದರು. ಭಾರತ ಸ್ವಾತಂತ್ರ‍್ಯೋತ್ಸವ ಅಮೃತ ಮಹೊತ್ಸವದ ಅಂಗವಾಗಿ ರಾಜ್ಯಾದ್ಯಂತ ತಾಂತ್ರಿಕ ಕೇಂದ್ರಗಳನ್ನಾಗಿ ಉನ್ನತೀಕರಿಸಿರುವ 150 ಐಟಿಐಗಳ ಲೋಕಾರ್ಪಣೆ ಅಂಗವಾಗಿ ನಗರದ ಐಟಿಐ ಕಾಲೇಜಿನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಟಾಟಾ ಟೆಕ್ನಾಲಜೀಸ್ ಲಿಮಿಟೆಡ್ ಮತ್ತು ಇತರೇ 20 ಉದ್ಯಮ ಪಾಲುದಾರರ ಸಹಯೋಗದೊಂದಿಗೆ ಕರ್ನಾಟಕ ಸರಕಾರ, ರಾಜ್ಯದ 150 ಸರಕಾರಿ ಕೈಗಾರಿಕಾ ತರಬೇತಿ ಕೇಂದ್ರಗಳನ್ನು ತಾಂತ್ರಿಕ ಕೇಂದ್ರಗಳನ್ನಾಗಿ ಪರಿವರ್ತಿಸಿದ್ದು, … Read more

ಜಿಲ್ಲಾ ಕಾಂಗ್ರೆಸ್‍ ಕಚೇರಿಯಲ್ಲಿ ಯೋಗ ದಿನಾಚರಣೆ

ಸುದ್ದಿ360 ದಾವಣಗೆರೆ, ಜೂ.20: ದಾವಣಗೆರೆ ಜಿಲ್ಲಾ ಕಾಂಗ್ರೆಸ್ ವತಿಯಿಂದ ಜಿಲ್ಲಾಧ್ಯಕ್ಷರಾದ ಎಚ್.ಬಿ ಮಂಜಪ್ಪ ರವರ ಅಧ್ಯಕ್ಷತೆಯಲ್ಲಿ ಯೋಗ ಗುರು ನೀಲಪ್ಪ ರವರ ನೇತೃತ್ವದಲ್ಲಿ ದಿನಾಂಕ 21-06-2022ರ ಮಂಗಳವಾರ ಬೆಳಗ್ಗೆ 11.30 ಕ್ಕೆ ಪಕ್ಷದ ಕಚೇರಿಯಲ್ಲಿ ಯೋಗ  ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ರಾಜ್ಯ ಸಮಿತಿ ಪದಾಧಿಕಾರಿಗಳು, ಜಿಲ್ಲಾ ಸಮಿತಿಯ ಪದಾಧಿಕಾರಿಗಳು, ಪಕ್ಷದ ಬ್ಲಾಕ್ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಎಲ್ಲಾ ವಿಭಾಗಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಪಕ್ಷದ ಜನಪ್ರತಿನಿಧಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಬೇಕೆಂದು ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನೇಶ ಕೆ … Read more

ಭೂ-ಕಬಳಿಕೆ ಹುನ್ನಾರ : ದೌರ್ಜನ್ಯ ತಡೆಯಲು ಹಕ್ಕಿಪಿಕ್ಕಿ ಬುಡಕಟ್ಟಿನವರ ಮನವಿ

ಸುದ್ದಿ360 ದಾವಣಗೆರೆ, ಜೂ.20: ಕಳೆದ ಎರಡು ತಿಂಗಳಿAದ ನಮ್ಮದೇ ಜಮೀನಿನಲ್ಲಿ ನಾವು ಉಳುಮೆ ಮಾಡಲು ಆಗುತ್ತಿಲ್ಲ. ವಿನಾ ಕಾರಣ ಜಯಂತಿನಗರದ ಜನ ಜಮೀನಿಗೆ ಬಂದು ದೌರ್ಜನ್ಯ ನಡೆಸುತ್ತಿದ್ದಾರೆ. ಸುಮಾರು 60 ವರ್ಷಗಳಿಂದ ಉಳುಮೆ ಮಾಡುತ್ತಾ ಬಂದಿರುವ ಹಕ್ಕಿಪಿಕ್ಕಿ ಸಮುದಾಯದ ರೈತರ ಜಮೀನನ್ನು ಕಬಳಿಸಲು ಕೆಲ ಪ್ರಭಾವಿ ವ್ಯಕ್ತಿಗಳು ಹುನ್ನಾರ ನಡೆಸಿದ್ದಾರೆ ಎಂದು ಕರ್ನಾಟಕ ಹಕ್ಕಿಪಿಕ್ಕಿ ಬುಡಕಟ್ಟು ಯುವ ಸಂಘಟನೆ ಅಧ್ಯಕ್ಷ ಆರ್. ಪುನೀತ್ಕುಮಾರ್ ಆರೋಪಿಸಿದರು. ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚನ್ನಗಿರಿ ತಾಲೂಕು ನಲ್ಲೂರು ಬಳಿಯ … Read more

ಮಹಾನಗರ ಪಾಲಿಕೆ ಆಡಳಿತ ವೈಫಲ್ಯ : ಸೂಪರ್‍ ಸೀಡ್‍ಗೆ ಪ್ರತಿಪಕ್ಷ ಕಾಂಗ್ರೆಸ್‍ ಒತ್ತಾಯ

ಸುದ್ದಿ360 ದಾವಣಗೆರೆ, ಜೂ.20:  ಮಹಾನಗರ ಪಾಲಿಕೆಯ ನೂತನ ಮೇಯರ್ ಅಧಿಕಾರ ವಹಿಸಿಕೊಂಡು 4 ತಿಂಗಳು ಕಳೆದರೂ ಇದುವರೆಗೂ ಸಾಮಾನ್ಯ ಸಭೆ ನಡೆಸಿಲ್ಲ. ವಾರ್ಡ್‍ಗಳ ಸಮಸ್ಯೆಗಳ ಚರ್ಚೆಗೆ ಅವಕಾಶ ಕಲ್ಪಿಸಿಲ್ಲ. ಮಹಾನಗರ ಪಾಲಿಕೆ ಆರ್ಥಿಕವಾಗಿ ದಿವಾಳಿಯಾಗಿದೆ ಅಲ್ಲದೆ, ಟೆಂಡರ್ ಕರೆಯಲು ಕೂಡ ಪಾಲಿಕೆ ಬಳಿ ಹಣವಿಲ್ಲ. ಹೀಗಾಗಿ ಮಹಾನಗರ ಪಾಲಿಕೆಯನ್ನು ಸೂಪರ್‌ಸೀಡ್ ಮಾಡಬೇಕು ಎಂದು ಪ್ರತಿಪಕ್ಷ ಕಾಂಗ್ರೆಸ್ ಆಗ್ರಹಿಸಿದೆ. ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದ ಪಾಲಿಕೆ ಪ್ರತಿಪಕ್ಷ ನಾಯಕ ಜಿ.ಎಸ್. ಮಂಜುನಾಥ್ ಗಡಿಗುಡಾಳ್, ಮಹಾನಗರ ಪಾಲಿಕೆಗಳಲ್ಲಿ … Read more

ಪುಲ್ವಾಮಾ ದಾಳಿ ರಾಜಕೀಯ ಪ್ರೇರಿತ – ಕೆಪಿಸಿಸಿ ವಕ್ತಾರ ಡಿ.ಬಸವರಾಜ್ ಆರೋಪ

ಪ್ರಧಾನಿಯ ರಾಜ್ಯ ಪ್ರವಾಸ ಅಧಿಕಾರದ ಕುರ್ಚಿಗಾಗಿ – ಯೋಗ ನೆಪಮಾತ್ರ . . ? ಸುದ್ದಿ360 ದಾವಣಗೆರೆ, ಜೂ.20: ೨೦೧೯ರಲ್ಲಿ ನಡೆದ ಪುಲ್ವಾಮಾ ದಾಳಿ ಒಂದು ರಾಜಕೀಯ ಪ್ರೇರಿತ. ಇಲ್ಲವೆಂದಾದರೆ ದಾಳಿಯ ಬಗ್ಗೆ ಗುಪ್ತಚರ ಇಲಾಖೆಯ ಮಾಹಿತಿ ನೀಡಿರಲಿಲ್ಲವೇ, ನೀಡಿದ್ದರೂ ಅದನ್ನು ಹಗುರವಾಗಿ ಪರಿಗಣಿಸಿದ್ದು ಏಕೆ ..? ಇಂದೂ ಸಹ ಅಧಿಕಾರದ ಕುರ್ಚಿಗಾಗಿ ಯೋಗ ದಿನಾಚರಣೆ ನೆಪದಲ್ಲಿ ಪ್ರಧಾನಿಯವರು ರಾಜ್ಯಕ್ಕೆ ಭೇಟಿ ನೀಡಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಡಿ.ಬಸವರಾಜ್ ಕಿಡಿಕಾರಿದರು. ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, … Read more

ಪ್ರಧಾನಿಗಳೇ ರೈತರ ಸಂಕಷ್ಟ ಗಮನಿಸಿ: ದಾವಣಗೆರೆಯಲ್ಲಿ ರೈತರ ಕೂಗು

ಸುದ್ದಿ360 ದಾವಣಗೆರೆ, ಜೂ.20: ಕೃಷಿ ಉತ್ಪನ್ನಗಳ ಉತ್ಪಾದನಾ ವೆಚ್ಚ, ಕನಿಷ್ಠ ಬೆಂಬಲ ಬೆಲೆಯಿಂದ ಮಾರುಕಟ್ಟೆಯಲ್ಲಿ ಅನುಭವಿಸಿರುವ ನಷ್ಟಗಳ ವಿವರವನ್ನು ರಾಜ್ಯ ಪ್ರವಾಸದಲ್ಲಿರುವ ಪ್ರದಾನಿ ಮೋದಿಯವರ ಗಮನ ಸೆಳೆಯುವ ಉದ್ದೇಶದಿಂದ ರೈತರು ಇಂದು ರೈತ  ಉತ್ಪನ್ನಗಳೊಂದಿಗೆ ಮೆರವಣಿಗೆ ನಡೆಸಿ  ಉಪವಿಭಾಗಾಧಿಕಾರಿಗಳ ಮೂಲಕ ಪ್ರಧಾನಿಯವರಿಗೆ ಮನವಿ ಸಲ್ಲಿಸುತ್ತಿರುವುದಾಗಿ ರಾಜ್ಯ ಕಬ್ಬು ಬೆಳೆಗಾರರ ಸಂಘದ ಉಪಾಧ್ಯಕ್ಷ ತೇಜಸ್ವಿ ವಿ. ಪಟೇಲ್‍ ತಿಳಿಸಿದರು. ನಗರದಲ್ಲಿ ಸೋಮವಾರ ರಾಜ್ಯ ಕಬ್ಬು ಬೆಳೆಗಾರರ ಸಂಘ ಹಾಗೂ ಕರ್ನಾಟಕ ರಾಜ್ಯ ರೈತ ಸಂಘ ಕೃಷಿ ಉತ್ಪನ್ನಗಳನ್ನು ತಳ್ಳುವ … Read more

ಯೋಗಾಭ್ಯಾಸದಲ್ಲಿ ಹರಿಹರ ಶಾಸಕ ಎಸ್‍ ರಾಮಪ್ಪ

ಸುದ್ದಿ360 ಹರಿಹರ, ಜೂ.20: ಹರಿಹರದ ಹರಿಹರೇಶ್ವರ ದೇವಸ್ಥಾನದಲ್ಲಿ 8ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಪೂರ್ವಬಾವಿ ಯೋಗ ತರಬೇತಿ ನಡೆಯುತ್ತಿದ್ದು, ಹರಿಹರದ ಶಾಸಕ ಎಸ್ ರಾಮಪ್ಪ ಅವರು ಸೋಮವಾರ ಯೋಗ ಅಭ್ಯಾಸದಲ್ಲಿ ಪಾಲ್ಗೊಂಡರು.

ಮುಖ್ಯಮಂ‍ತ್ರಿಯಿಂದ ಪ್ರಧಾನಿ ಮೋದಿ ಭಾಗಿಯಾಗುವ ವೇದಿಕೆ ಪರಿಶೀಲನೆ

ಸುದ್ದಿ360 ಬೆಂಗಳೂರು, ಜೂ.19: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಲಿರುವ ಸಾರ್ವಜನಿಕ ಸಮಾರಂಭ ಸ್ಥಳ ಕೊಮ್ಮಘಟ್ಟ ಕ್ಕೆ ಭೇಟಿ ನೀಡಿ ಸಿದ್ಧತಾ ಕಾರ್ಯಗಳನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಎಸ್ ಟಿ ಸೋಮಶೇಖರ್, ಮುನಿರತ್ನ , ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.. ನಾಳೆ ಶಂಕು ಸ್ಥಾಪನೆಯಾಗಲಿರುವ ಬೆಂಗಳೂರು ಉಪನಗರ ರೈಲು ಯೋಜನೆ,  ರಾಷ್ಟ್ರೀಯ ಹೆದ್ದಾರಿ ಕುರಿತು ಮುಖ್ಯಮಂತ್ರಿಗಳಿಗೆ ಅಧಿಕಾರಿಗಳು ಪ್ರಾತ್ಯಕ್ಷಿಕೆ ನೀಡಿ ವಿವರಣೆ ನೀಡಿದರು. ಪ್ರಧಾನಿ ನರೇಂದ್ರ ಮೋದಿಯವರು ಜೂನ್ 20, … Read more

ಮಹಾತ್ಮರ ಮಾರ್ಗದಲ್ಲಿ ನಡೆದರೆ ಅದುವೇ ಗುರುವಂದನೆ: ಶಿವಲಿಂಗ ಶಿವಾಚಾರ್ಯ ಶ್ರೀ

ಸುದ್ದಿ360 ದಾವಣಗೆರೆ, ಜೂ.19: ಗುರುವಿನ ಅನುಪಸ್ಥಿತಿಯಲ್ಲಿ ಅವರ ಮೌಲ್ಯಗಳು, ಉಪದೇಶಗಳು ಅನುಷ್ಠಾನವಾಗುತ್ತಿದ್ದರೆ ಅವರು ಶ್ರೇಷ್ಠ ಗುರು ಎನಿಸಿಕೊಳ್ಳುತ್ತಾರೆ. ಸಿದ್ಧಗಂಗಾ ಶ್ರೀಗಳು ಅಂತಹ ಶ್ರೇಷ್ಠರಲ್ಲಿ ಒಬ್ಬರಾಗಿದ್ದಾರೆ ಎಂದು ಶ್ರೀ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ ಹೇಳಿದರು. ನಗರದ ಎವಿಕೆ ರಸ್ತೆಯ ಜಿಲ್ಲಾ ಗುರುಭವನದಲ್ಲಿ ಭಾನುವಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಚುಟುಕು ಸಾಹಿತ್ಯ ಪರಿಷತ್, ವಚನ ಸಾಹಿತ್ಯ ಪರಿಷತ್, ರಾಜ್ಯ ಸಮಾನ ಮನಸ್ಕರ ಕಲೆ, ಸಾಹಿತ್ಯ, ಸಂಗೀತ, ಕ್ರೀಡಾ ಸೇವಾ ಒಕ್ಕೂಟ, ತೆಲಿಗಿ ಸ್ಫೂರ್ತಿ ಪ್ರಕಾಶನ, ಯೋಗಾನಂದ ಯೋಗಕೇಂದ್ರ, ಬಜ್ಜಿ … Read more

error: Content is protected !!