ದಾವಣಗೆರೆ: ಜ. 31ರವರೆಗೆ ವೀಕೆಂಡ್ ಕರ್ಫ್ಯೂ ಮುಂದುವರಿಕೆ

ದಾವಣಗೆರೆ: ಕೋವಿಡ್ ಪ್ರಕರಣಗಳು ದಿಢೀರನೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸರ್ಕಾರ ಜ. 04 ರಂದು ಹೊರಡಿಸಿದ್ದ ಮಾರ್ಗಸೂಚಿ ಜ. 31 ರವರೆಗೂ ಮುಂದುವರೆಯಲಿದ್ದು, ವೀಕೆಂಡ್ ಕರ್ಫ್ಯೂ ಕೂಡ ಮುಂದುವರೆಯಲಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ವಾರಾಂತ್ಯ ಕಫ್ರ್ಯೂ, ಚಿತ್ರಮಂದಿರ, ಹೋಟೆಲ್, ರೆಸ್ಟೋರೆಂಟ್ ಮುಂತಾದೆಡೆ ಶೇ. 50 ಆಸನ ಸಾಮರ್ಥ್ಯದೊಂದಿಗೆ ಕೋವಿಡ್ ನಿಯಂತ್ರಣ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಸೇರಿದಂತೆ ಹಲವು ನಿರ್ಬಂಧಗಳನ್ನು ಜಾರಿಗೊಳಿಸಲಾಗಿದೆ. ಸಾರ್ವಜನಿಕರು ಮಾರ್ಗಸೂಚಿಯನ್ನು ತಪ್ಪದೆ ಪಾಲಿಸುವುದರ ಮೂಲಕ ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ … Read more

ಪಾದಯಾತ್ರೆ ಮೊಟಕುಗೊಳಿಸಿದ ಸಿದ್ಧರಾಮಯ್ಯ

ಹೆಗ್ಗನೂರು: ಕೊರೋನಾ ನಿಯಮ, ನಿರ್ಬಂಧಗಳ ನಡುವೆಯೇ ಮೇಕೆದಾಟು ಪಾದಯಾತ್ರೆಗೆ ಜ.09 ರಂದು ರಾಜ್ಯ ಕಾಂಗ್ರೆಸ್ ಚಾಲನೆ ನೀಡಿದೆ. ಪಾದಯಾತ್ರೆ ಕನಕಪುರದ ಹೆಗ್ಗನೂರು ತಲುಪಿದ್ದು, ಇದರಲ್ಲಿ ಭಾಗಿಯಾಗಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಜ್ವರ, ಸುಸ್ತು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಅವರು ಬೆಂಗಳೂರಿಗೆ ವಾಪಸ್ಸಾಗಿದ್ದಾರೆ. ಸಿದ್ದರಾಮಯ್ಯ ಅವರ ಆರೋಗ್ಯ ತಪಾಸಣೆ ನಡೆಸಿದ ವೈದ್ಯರು ವಿಶ್ರಾಂತಿ ತೆಗೆದುಕೊಳ್ಳುವಂತೆ ಸೂಚನೆ ನೀಡಿದ್ದಾರೆ. ಸಿದ್ದರಾಮಯ್ಯಗೆ ಆರೋಗ್ಯ ವ್ಯತ್ಯಯವಾಗಿರುವ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಸಚಿವ ಗೋವಿಂದ ಕಾರಜೋಳ “ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ವಿಪಕ್ಷ ನಾಯಕ ಸಿದ್ಧರಾಮಯ್ಯನವರಿಗೆ ಜ್ವರ ಕಾಣಿಸಿಕೊಂಡಿದ್ದು … Read more

ಮೇಕೆದಾಟು ಯೋಜನೆ ಪಾದಯಾತ್ರೆಗೆ ಚಾಲನೆ

ಕನಕಪುರ: ಕಾಂಗ್ರೆಸ್ ಪಕ್ಷದ ಮೇಕೆದಾಟು ಪಾದಯಾತ್ರೆ ನಡೆಯುತ್ತದೋ ಇಲ್ಲವೋ ಎಂಬ ಕುತೂಹಲಕ್ಕೆ ತೆರೆ ಬಿದ್ದಿದ್ದು, ವಾರಾಂತ್ಯ ಕರ್ಫ್ಯೂ ನಡುವೆಯೂ ಕನಕಪುರದ ಸಂಗಮದಲ್ಲಿ ಇಂದು (ಜ.9) ಬೆಳಿಗ್ಗೆ ಕಾಂಗ್ರೆಸ್ ನಾಯಕರೆಲ್ಲ ಒಗ್ಗಟ್ಟಾಗಿ ಮೇಕೆದಾಟು ಪಾದಯಾತ್ರೆಯ ರಣ ಕಹಳೆ ಮೊಳಗಿಸಿದರು. ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕಿನ ಮೇಕೆದಾಟು ಸಂಗಮದಲ್ಲಿ ಪಾದಯಾತ್ರೆ ಕಾರ್ಯಕ್ರಮ ಆರಂಭಗೊಂಡಿದ್ದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ,ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಕಾಂಗ್ರೆಸ್ ನ ಹಿರಿಯ ಹಲವು ಮುಖಂಡರು, … Read more

error: Content is protected !!